Tag: ಅಲಹಾಬಾದ್

  • ಅಲಹಾಬಾದ್‍ನಲ್ಲಿ ಮೂರು ತಿಂಗಳ ಕಾಲ ಮದುವೆಗೆ ನಿರ್ಬಂಧ!

    ಅಲಹಾಬಾದ್‍ನಲ್ಲಿ ಮೂರು ತಿಂಗಳ ಕಾಲ ಮದುವೆಗೆ ನಿರ್ಬಂಧ!

    ಲಕ್ನೋ: ಕುಂಭಮೇಳದ ಹಿನ್ನೆಲೆಯಲ್ಲಿ ಅಲಹಾಬಾದ್‍ನಲ್ಲಿ 3 ತಿಂಗಳ ಕಾಲ ಕಲ್ಯಾಣ ಮಂಟಪದಲ್ಲಿ ಮದುವೆಯನ್ನು ನಿರ್ಬಂಧಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

    ಉತ್ತರ ಪ್ರದೇಶದ ಅಲಹಬಾದ್‍ನಲ್ಲಿ 2019ರ ಜನವರಿ 15ರಿಂದ ಮಾರ್ಚ್ 4ರವರೆಗೆ ಕುಂಭಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಭಕ್ತರಿಗೆ ವಸತಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಲ್ಯಾಣ ಮಂಟಪ, ಸಭಾಭವನ ಹಾಗೂ ಛತ್ರಗಳಲ್ಲಿ ಯಾವುದೇ ಕಾರ್ಯಕ್ರಮ, ಮದುವೆ ನಡೆಸುವಂತಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ.

    ಕುಂಭಮೇಳದ ವೇಳೆ ಕಲ್ಯಾಣ ಮಂಟಪಗಳಲ್ಲಿ ಯಾವುದೇ ವಿವಾಹ ಹಾಗೂ ಕಾರ್ಯಕ್ರಮ ನಡೆಸಲು ಅವಕಾಶ ನೀಡಿಲ್ಲ. ಈಗಾಗಲೇ ಮದುವೆ ನಿಶ್ಚಯವಾಗಿದ್ದರೆ ದಿನಾಂಕವನ್ನು ಮುಂದೂಡಬೇಕು. ಇಲ್ಲವೇ ಬೇರೆ ಪ್ರದೇಶದಲ್ಲಿ ವಿವಾಹವಾಗಬಹುದು ಎಂದು ತಿಳಿಸಲಾಗಿದೆ.

    ಸರ್ಕಾರದ ಈ ನಿರ್ಧಾರದಿಂದಾಗಿ ಅಂದಾಜು 300 ವಿವಾಹಗಳಿಗೆ ತಡೆ ಬೀಳಲಿದೆ. ಅಲಹಾಬಾದ್‍ನಲ್ಲಿ 106 ಗೆಸ್ಟ್ ಹೌಸ್, ಕಲ್ಯಾಣ ಮಂಟಪ, ಸಭಾಭವನಗಳಿದ್ದು ಎಲ್ಲವನ್ನೂ ಸರ್ಕಾರ ಕಾಯ್ದಿರಿಸಿಕೊಂಡಿದೆ. ಹೀಗಾಗಿ ಮದುವೆ ನಿಶ್ಚಯ ಮಾಡಿಕೊಂಡಿದ್ದವರು ಪರದಾಡುವಂತಾಗಿದೆ.

    ನಮಗೆ ಯಾವುದೇ ಆಯ್ಕೆಯನ್ನು ಸರ್ಕಾರ ನೀಡಿಲ್ಲ. ಈಗಾಗಲೇ ಕಾಯ್ದಿರಿಸಿದ್ದ ಕಲ್ಯಾಣ ಮಂಟಪವನ್ನು ರದ್ದು ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಸಾಮಾನ್ಯವಾಗಿ ವಿವಾಹ ನಡೆಯುವ ತಿಂಗಳಿನಲ್ಲಿಯೇ ಕುಂಭಮೇಳ ನಡೆಯುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ನಾವು ಬೇರೆ ಕಡೆಗೆ ಹೋಗಿ ಮದುವೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದೇವೆ ಎಂದು ಕಲ್ಯಾಣ ಮಂಟಪ ಕಾಯ್ದಿರಿಸಿದ್ದ ರವಿಕುಮಾರ್ ಕೆಸರ್ವಾನಿ ಎಂಬವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಶೀಘ್ರವೇ ಅಲಹಾಬಾದ್ ಹೆಸರು ಪ್ರಯಾಗ್‍ರಾಜ್ ಆಗುತ್ತೆ: ಯೋಗಿ

    ಲಕ್ನೋ: ಅಲಹಾಬಾದ್ ಜಿಲ್ಲೆಯ ಹೆಸರನ್ನ ಶೀಘ್ರವೇ ಪ್ರಯಾಗ್‍ರಾಜ್ ಎಂದು ಬದಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಮುಂದಿನ ವರ್ಷ ನಡೆಯಲಿರುವ ಮಹಾ ಕುಂಭ ಮೇಳದ ಚರ್ಚೆಯಲ್ಲಿ ಮಾತನಾಡಿದ ಯೋಗಿ ಅವರು, ನನಗೆ ಅಖಾಡ ಪರಿಷದ್ ಮತ್ತು ಇತರೆ ಕೆಲವರು ಅಲಹಾಬಾದ್ ಜಿಲ್ಲೆಯಲ್ಲಿ ಪ್ರಯಾಗ್‍ರಾಜ್ ಎಂದು ಬದಲಿಸುವಂತೆ ಪ್ರಸ್ತಾವನೆ ನೀಡಿದ್ದಾರೆ. ರಾಜ್ಯಪಾಲರದ ರಾಮ್ ನಾಯಕ್ ಸಹ ಈ ನಿರ್ಧಾರಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರವೇ ಸರ್ಕಾರ ಅಲಹಾಬಾದ್ ಹೆಸರನ್ನು ಪ್ರಯಾಗ್‍ರಾಜ್ ಎಂದು ಬದಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

    ಕುಂಭ ಮೇಳದ ತಯಾರಿಯ ಬಗ್ಗೆ ಮಾತನಾಡಿದ ಮುಖ್ಯ ಮಂತ್ರಿಯವರು, ಜಗತ್ತಿನ ಮೂಲೆ ಮೂಲೆಯಿಂದ ಭಕ್ತರು ಈ ಕುಂಭ ಮೇಳದಲ್ಲಿ ಭಾಗವಹಿಸಲಿದ್ದಾರೆ. ದೇಶದ 6 ಲಕ್ಷ ಹಳ್ಳಿಗಳಿಂದ ಭಕ್ತರು ಭಾಗವಹಿಸಲಿದ್ದು, ಡಿಸೆಂಬರ್ ತಿಂಗಳಿನೊಳಗೆ ಎಲ್ಲಾ ಉಳಿದ ಕೆಲಸಗಳನ್ನ ಮುಗಿಸಲಿದ್ದೇವೆ ಎಂದು ತಿಳಿಸಿದರು.

    ಕುಂಭ ಮೇಳಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲು ಹಾಲಿನ ಬೂತ್ ಗಳು, ಎಟಿಎಂ ಮೆಷಿನ್‍ಗಳು, ನೀರಿನ ಟ್ಯಾಂಕರ್ ಗಳು, ಬ್ಯಾಂಕ್ ಗಳು, ಮೊಬೈಲ್ ಟವರ್‍ಗಳನ್ನ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಪ್ರಯಾಗ್ ಎನ್ನುವುದು ಕುಂಭಮೇಳ ನಡೆಯುವ ಪವಿತ್ರ ಪ್ರದೇಶವಾಗಿದೆ. ಇದು ಗಂಗೆ, ಯಮುನೆ ಮತ್ತು ಸರಸ್ವತಿ ನದಿಗಳ ಸಂಗಮಸ್ಥಳ. ಈ ಕಾರಣಕ್ಕಾಗಿ ಅಲಹಾಬಾದ್ ಅನ್ನು `ಪ್ರಯಾಗ್‍ರಾಜ್’ ಎಂದು ನಾಮಕರಣ ಮಾಡುತ್ತಿದ್ದೇವೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಈಗಾಗಲೇ ಕುಂಭ ಮೇಳದ ಬ್ಯಾನ ರ್‍ಗಳಲ್ಲಿ ಅಲಹಾಬಾದ್ ಬದಲು ಪ್ರಯಾಗ್‍ರಾಜ್ ಎಂದು ಬರೆಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮಿತ್ ಶಾ ಮಾರ್ಗಕ್ಕೆ ಅಡ್ಡಿಪಡಿಸಿದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಹಿಡಿದು ಎಳೆದಾಡಿದ ಪೊಲೀಸರು

    ಅಮಿತ್ ಶಾ ಮಾರ್ಗಕ್ಕೆ ಅಡ್ಡಿಪಡಿಸಿದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಹಿಡಿದು ಎಳೆದಾಡಿದ ಪೊಲೀಸರು

    – ಶಾ ಮಾರ್ಗ ಮಧ್ಯೆ ಕಪ್ಪು ಬಾವುಟ ಬೀಸಲು ಸಿದ್ಧರಾಗಿದ್ದ ವಿದ್ಯಾರ್ಥಿನಿಯರು

    ಅಲಹಾಬಾದ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾರ್ಗ ಮಧ್ಯೆ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ಧರಾಗಿದ್ದ ವಿದ್ಯಾರ್ಥಿನಿಯರ ಜೊತೆ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಶುಕ್ರವಾರ ಅಲಹಾಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಅಮಾನವೀಯ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

    ವಿಡಿಯೋದಲ್ಲಿ ಏನಿದೆ?
    ಶುಕ್ರವಾರ ಅಮಿತ್ ಶಾ ಅಲಹಾಬಾದ್‍ಗೆ ಭೇಟಿ ನೀಡಿದ್ದರು. ಆ ವೇಳೆ ಅಲಹಾಬಾದ್ ವಿಶ್ವವಿದ್ಯಾಲಯದ ಒರ್ವ ವಿದ್ಯಾರ್ಥಿ ಮತ್ತು ಇಬ್ಬರು ವಿದ್ಯಾರ್ಥಿನಿಯರು ಮಾರ್ಗ ಮಧ್ಯೆ ಅಮಿತ್ ಶಾ ಅವರಿಗೆ ಕಪ್ಪು ಧ್ವಜವನ್ನು ತೋರಿಸಿ ಅಡ್ಡಗಟ್ಟಲು ಪ್ರಯತ್ನಿಸಿದ್ದರು. ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ತಡೆದು, ಕೂದಲು ಹಿಡಿದು ಎಳೆದಾಡಿ, ಲಾಠಿಯಿಂದ ಹೊಡೆದಿದ್ದಾರೆ. ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ನೇಹಾ ಯಾದವ್(25), ರಮಾ ಯಾದವ್(24) ಮತ್ತು ಕಿಶನ್ ಮೌರ್ಯ ಪೊಲೀಸರಿಂದ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಈ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಸಮಾಜವಾದಿ ಪಕ್ಷದ ಸಮಾಜವಾದಿ ಚಿತ್ರ ಸಭಾಗೆ ಸೇರಿದವರು ಎಂದು ಹೇಳಲಾಗಿದೆ. ನೇಹಾ ಯಾದವ್ ಪಿಎಚ್‍ಡಿ ಓದುತ್ತಿದ್ದು, ರಮಾ ಯಾದವ್ ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

  • ಅಕ್ರಮ ಕಟ್ಟಡ ನಿರ್ಮಾಣ: ಪ್ರಧಾನಿ ಮೋದಿ ಸಹೋದರನಿಗೆ ನೋಟಿಸ್!

    ಅಕ್ರಮ ಕಟ್ಟಡ ನಿರ್ಮಾಣ: ಪ್ರಧಾನಿ ಮೋದಿ ಸಹೋದರನಿಗೆ ನೋಟಿಸ್!

    ಅಹಮದಾಬಾದ್: ಅಕ್ರಮ ಕಟ್ಟಡ ನಿರ್ಮಾಣ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರಿಗೆ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ನೋಟಿಸ್ ಜಾರಿ ಮಾಡಿದೆ.

    ಪ್ರಹ್ಲಾದ್ ಮೋದಿಯವರು ಗುಜರಾತ್‍ನ ಸಿಮೇಎಣ್ಣೆ ಹಾಗೂ ಪಡಿತರ ವಿತರಕ ಮಾಲೀಕ ಸಂಘದ ಹಾಲಿ ಅಧ್ಯಕ್ಷರಾಗಿದ್ದು, ತಮ್ಮ ರಾಬರೀ ಕಾಲೋನಿಯ ಪಡಿತರ ಅಂಗಡಿಯ ಬಳಿ ನಿರ್ಮಿಸುತ್ತಿದ್ದ ಕಟ್ಟಡಕ್ಕೆ ಅಹಮದಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

    ಈ ಸಂಬಂಧ ಹೇಳಿಕೆ ನೀಡಿದ ಪಾಲಿಕೆ ಅಧಿಕಾರಿಗಳು, ಪ್ರಹ್ಲಾದ್ ಮೋದಿಯವರು ನಿರ್ಮಿಸುತ್ತಿರುವ ಕಟ್ಟಡ ಅಕ್ರಮವಾಗಿದ್ದು, ನಿಲ್ಲಿಸುವಂತೆ ಹಲವು ಬಾರಿ ಸೂಚನೆ ನೀಡಿದ್ದೆವು. ಆದರೆ ಅವರು ಕಾಮಗಾರಿಯನ್ನು ನಿಲ್ಲಿಸಲಿಲ್ಲ. ಹೀಗಾಗಿ ನೋಟಿಸ್ ಜಾರಿಗೊಳಿಸಿದ್ದಾಗಿ ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಮೋದಿಯವರು, ಅಧಿಕಾರಿಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಮೊದಲು ಅದೇ ಸ್ಥಳದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದನ್ನು ತೆರವುಗೊಳಿಸಲು ಹಲವು ಬಾರಿ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದೆ. ಅಲ್ಲದೆ ಲಿಖಿತ ರೂಪದಲ್ಲಿಯೂ ಅರ್ಜಿ ಸಲ್ಲಿಸಿದ್ದೆ. ಈ ಕುರಿತು ಯಾವುದೇ ಅಧಿಕಾರಿಗಳು ನನ್ನ ಮನವಿಗೆ ಸ್ಪಂಧಿಸಲಿಲ್ಲ ಎಂದು ತಿಳಿಸಿದ್ದಾರೆ.

    ಕಟ್ಟಡ ಹಳೆಯದಾಗಿದ್ದರಿಂದ ಇತ್ತೀಚೆಗೆ ಕುಸಿದು ಬಿದ್ದಿತ್ತು. ಅದೃಷ್ಟಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಒಂದು ವೇಳೆ ಪ್ರಾಣ ಹಾನಿ ಆಗುತ್ತಿದ್ದರೆ ಅವರು ದೊಡ್ಡ ವಿವಾದವನ್ನೇ ಸೃಷ್ಟಿಸುತ್ತಿದ್ದರು. ಆದ್ದರಿಂದ ಈಗ ನೂತನ ಕಟ್ಟಡ ನಿರ್ಮಾಣಕ್ಕೆ ಕೈ ಹಾಕಿದ್ದೇನೆ. ಕಟ್ಟಡ ನಿರ್ಮಾಣಕ್ಕೆ ಬೇಕಾಗುವ ಎಲ್ಲಾ ನಿಯಮಗಳನ್ನು ಪಾಲಿಸಿದ್ದು ಜಾಗವನ್ನು ಸಕ್ರಮ ಮಾಡಿಕೊಂಡಿದ್ದೇವೆ. ಈ ಕುರಿತು ಪಾಲಿಕೆಗೆ ಶುಲ್ಕ ಸಹ ಪಾವತಿಸಿದ್ದೇನೆ. ಈ ಹಿಂದೆ ನಾನು ಸಾಕಷ್ಟು ಬಾರಿ ಮನವಿ ಮಾಡಿದಾಗ ಅಧಿಕಾರಿಗಳು ಸ್ಪಂದನೆ ನೀಡಿರಲಿಲ್ಲ. ಆದರೆ ಈಗ ಇದ್ದಕ್ಕಿದ್ದಂತೆ ಎಚ್ಚೆತ್ತ ಅಧಿಕಾರಿಗಳು ನೋಟಿಸ್ ಜಾರಿಮಾಡಿದ್ದಾರೆ ಎಂದು ಪ್ರಹ್ಲಾದ್ ಮೋದಿ ಪ್ರತಿಕ್ರಿಯಿಸಿದರು.

  • ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಾಹನಗಳಿಗೆ ಬೆಂಕಿ! ಪರಿಸ್ಥಿತಿ ಉದ್ವಿಗ್ನ

    ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಾಹನಗಳಿಗೆ ಬೆಂಕಿ! ಪರಿಸ್ಥಿತಿ ಉದ್ವಿಗ್ನ

    ಲಕ್ನೋ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಲಯ ಖಾಲಿ ಮಾಡುವಂತೆ ಹೇಳಿದ್ದಕ್ಕೆ, ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಹಾಬಾದ್‍ನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಿದೆ.

    sಅಲಹಾಬಾದ್ ವಿಶ್ವವಿದ್ಯಾನಿಲಯದ ಅಧಿಕಾರಿ ರಾಮ್ ಸೇವಕ್ ಸುಬೇರವರು ಹಾಸ್ಟೆಲ್‍ನ ವಿದ್ಯಾರ್ಥಿಗಳಿಗೆ ತಮ್ಮ ಕೊಠಡಿಗಳನ್ನು ಖಾಲಿ ಮಾಡುವಂತೆ ಸೋಮವಾರ ತಿಳಿಸಿದ್ದರು. ಒಂದು ವಾರದೊಳಗೆ ತಮ್ಮ ಎಲ್ಲಾ ವಸ್ತುಗಳ ಸಮೇತ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಪೊಲೀಸರ ಸಹಾಯದಿಂದ ಜೂನ್ 12ರಂದು ಹೊರಹಾಕಲಾಗುತ್ತದೆ ಎಂದು ಹೇಳಿದ್ದರು.

    ಈ ಹೇಳಿಕೆಗೆ ಹಾಸ್ಟೆಲ್‍ನ ವಿದ್ಯಾರ್ಥಿಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳವಾರ ಮಧ್ಯಾಹ್ನ ಯೂನಿಯನ್ ಆವರಣದ ಬಳಿ ವಿಶ್ವವಿದ್ಯಾನಿಲಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾರೂಪಕ್ಕೆ ತೆರಳಿದೆ. ಆವರಣದಿಂದ ಹೊರಗಡೆ ಬಂದ ಪ್ರತಿಭಟನಾಕಾರರು ಏಕಾಏಕಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

    ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಶಸ್ತ್ರ ಮೀಸಲು ಪಡೆ ತಂಡ ಮತ್ತು ಹೆಚ್ಚಿನ ಸಂಖ್ಯೆಯ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳಕ್ಕೆ ಬಂದ ಇವರು ಪ್ರತಿಭಟನಾಕಾರನ್ನು ಬೆನ್ನಟ್ಟಿ ಚದುರಿಹೋಗುವಂತೆ ಮಾಡಿದ್ದಾರೆ. ಅಲ್ಲದೇ ಹಾಸ್ಟೆಲ್‍ನಲ್ಲಿ ಹುಡುಕಾಟ ಮುಂದುವರಿಸಿದ್ದಾರೆ. ಪ್ರತಿಭಟನೆ ನಡೆಸಿದ ಎಲ್ಲಾ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ಈ ವೇಳೆ ಮಾತನಾಡಿದ ಅಲಹಾಬಾದ್ ಎಸ್ಪಿ ಬ್ರಿಜೇಶ್ ಶ್ರೀವತ್ಸವ್‍ರವರು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಶೀಘ್ರವೇ ಬಂಧಿಸಲಾಗುವುದೆಂದು ತಿಳಿಸಿದ್ದಾರೆ. ಈ ಗಲಭೆಯಲ್ಲಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಸಂಪೂರ್ಣ ಜಖಂಗೊಂಡಿದ್ದು, ಪೊಲೀಸ್ ಜೀಪ್ ಮತ್ತು ಬೈಕ್‍ಗಳು ಸುಟ್ಟು ಕರಕಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

    ಕಳೆದ ವರ್ಷ ವಿಶ್ವವಿದ್ಯಾನಿಲಯವು ಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ಹಲವು ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಹೊರಹಾಕಿತ್ತು. ಈ ವೇಳೆ ವಿದ್ಯಾರ್ಥಿಗಳು ಹಾಸ್ಟೆಲ್ ಸೇರಿದ ವಸ್ತುಗಳಿಗೆ ಹಾನಿಮಾಡಿ ಹೋಗಿದ್ದರು. ಈ ವರ್ಷ ಪುನಃ ಅದೇ ರೀತಿ ತೊಂದರೆ ಆದರೆ ಕ್ರಮ ಕೈಗೊಳ್ಳಲಾಗುತ್ತದೆ ವಿವಿ ತಿಳಿಸಿತ್ತು ಎಂದು ತಿಳಿದು ಬಂದಿದೆ.

  • ವಿಡಿಯೋ: ಕಾಲೇಜಿಗೆ ಸರ್ಪ್ರೈಸ್ ವಿಸಿಟ್ ಕೊಟ್ಟ 40 ಕೆಜಿ ತೂಕದ ಹೆಬ್ಬಾವು- ಬರಿಗೈಯಲ್ಲೇ ಹಿಡಿದ ಪ್ರೊಫೆಸರ್!

    ವಿಡಿಯೋ: ಕಾಲೇಜಿಗೆ ಸರ್ಪ್ರೈಸ್ ವಿಸಿಟ್ ಕೊಟ್ಟ 40 ಕೆಜಿ ತೂಕದ ಹೆಬ್ಬಾವು- ಬರಿಗೈಯಲ್ಲೇ ಹಿಡಿದ ಪ್ರೊಫೆಸರ್!

    ಅಲಹಾಬಾದ್: 12 ಅಡಿ ಉದ್ದದ ಹೆಬ್ಬಾವೊಂದು ಕಾಲೇಜು ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಬುಧವಾರದಂದು ಉತ್ತರಪ್ರದೇಶದ ಅಲಹಾಬಾದ್‍ನಲ್ಲಿ ನಡೆದಿದೆ.

    ಇಲ್ಲಿನ ಶ್ಯಾಮ ಪ್ರಸಾದ್ ಮುಖರ್ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಾವು ಕಾಣಿಸಿಕೊಂಡಿತ್ತು. ಆಶ್ಚರ್ಯವೆಂಬಂತೆ ಕಾಲೇಜಿನ ಪ್ರಾಧ್ಯಾಪಕರೇ ಈ 40 ಕೆಜಿ ತೂಕದ ಹಾವನ್ನ ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

    ಹಾವನ್ನ ರಕ್ಷಿಸಿದ ಪ್ರಾಧ್ಯಾಪಕರಾದ ಎನ್‍ಬಿ ಸಿಂಗ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಬಾಗದ ಪ್ರಾಧ್ಯಾಪಕರಾಗಿದ್ದಾರೆ. ವಿದ್ಯಾರ್ಥಿಯೊಬ್ಬರಿಂದ ಕರೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಎನ್‍ಬಿ ಸಿಂಗ್ ಸ್ಥಳಕ್ಕೆ ಹೋಗಿ ಹಾವನ್ನ ಬರಿಗೈಯಲ್ಲೇ ಹಿಡಿದು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಸದ್ಯ ವೈರಲ್ ಆಗಿದೆ.

    ಈವರೆಗೆ ಸಿಂಗ್ ಅವರು ಒಂದು ಡಜನ್‍ಗೂ ಹೆಚ್ಚು ಹಾವುಗಳನ್ನ ರಕ್ಷಣೆ ಮಾಡಿದ್ದಾರೆ. ಅವರ ಪ್ರಕಾರ ಹೆಬ್ಬಾವುಗಳನ್ನ ಕೆಣಕದಿದ್ದರೆ ಅವು ಯಾವುದೇ ಅಪಾಯ ಮಾಡುವುದಿಲ್ಲ. ಹಾವುಗಳು ಸುರಕ್ಷಿತ ಜಾಗವನ್ನು ಹುಡುಕಿಕೊಳ್ಳಲು ನೆರವಾಗುವ ಸಲುವಾಗಿ ಅವುಗಳನ್ನ ರಕ್ಷಣೆ ಮಾಡೋದಾಗಿ ಹೇಳಿದ್ದಾರೆ.

  • ರಾಹುಲ್ ಗಾಂಧಿ ಧರ್ಮ ಯಾವುದು? ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ ದೇವಾಲಯ ಭೇಟಿ

    ರಾಹುಲ್ ಗಾಂಧಿ ಧರ್ಮ ಯಾವುದು? ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ ದೇವಾಲಯ ಭೇಟಿ

    ಅಲಹಾಬಾದ್: ಗುಜರಾತ್ ಸೋಮನಾಥ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ರಾಹುಲ್ ಗಾಂಧಿ ಹಿಂದೂಯೇತರ ಕಾಲಂನಲ್ಲಿ ತಮ್ಮ ಹೆಸರನ್ನು ನಮೂದಿಸಿದ್ದಾರೆ ಎನ್ನಲಾದ ಸುದ್ದಿ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಈ ವಿಚಾರ ಬಿಜೆಪಿಗೆ ದೊಡ್ಡ ಅಸ್ತ್ರವೇ ಸಿಕ್ಕಿದಂತಾಗಿದ್ದು, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ರಾಹುಲ್ ಮೊದಲು ತನ್ನ ಧರ್ಮ ಯಾವುದು ಅಂತಾ ಘೋಷಿಸಿಕೊಳ್ಳಲಿ. ನನ್ನ ಪ್ರಕಾರ ಅವರು ಕ್ರಿಶ್ಚಿಯನ್ ಅವರು ಪ್ರತಿ ಭಾನುವಾರ ಚರ್ಚ್‍ಗೆ ಭೇಟಿ ನೀಡುತ್ತಾರೆ ಆರೋಪಿಸಿದ್ದಾರೆ.

    ಈ ಬೆನ್ನಲ್ಲೇ, ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯವರು ಸುಳ್ಳು ದಾಖಲೆ ತೋರಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕೆ ಮಾಡಿದೆ.

    ಆಗಿದ್ದು ಏನು?
    ಸೋಮನಾಥ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಬಳಿಕ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಮನೋಜ್ ತ್ಯಾಗಿ ಪುಸ್ತಕ ನೀಡಿದ್ದಾರೆ. ಈ ಪುಸ್ತಕದಲ್ಲಿ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯ ಹಾಗೂ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಆಗಿರುವ ಅಹ್ಮದ್ ಪಟೇಲ್ ಸಹಿ ಹಾಕಿದ್ದಾರೆ.

    ರಾಹುಲ್ ಗಾಂಧಿ ಯಾರು?
    ಭಾರತದ ಮೊದಲ ಪ್ರಧಾನಿ ನೆಹರೂ ಅವರ ತಂದೆ ಮೋತಿಲಾಲ್ ನೆಹರೂ ಅವರು ಮೂಲತಃ ಕಾಶ್ಮೀರಿ ಬ್ರಾಹ್ಮಣರು. ಜವಾಹರ್ ಲಾಲ್ ನೆಹರೂ ಅವರ ಪುತ್ರಿ ಭಾರತದ ಮಾಜಿ ಪ್ರಧಾನಿ ಇಂದಿರಾ ಪ್ರಿಯದರ್ಶಿನಿ ಅವರು ಫಿರೋಜ್ ಅವರನ್ನು ಮದುವೆಯಾದರು. ಫಿರೋಜ್ ಮೂಲತಃ ಪಾರ್ಸಿ ಧರ್ಮಕ್ಕೆ ಸೇರಿದವರಾಗಿದ್ದು ಮದುವೆಯ ಬಳಿಕ ಗಾಂಧಿ ಹೆಸರನ್ನು ತಮ್ಮ ಹೆಸರಿನೊಂದಿಗೆ ಸೇರಿಸಿಕೊಂಡರು. ನಂತರದ ಅವಧಿಯಲ್ಲಿ ಇಂದಿರಾ ಹೆಸರಿನ ಜೊತೆ ಗಾಂಧಿ ಸೇರಿಕೊಂಡಿತು. ಇಂದಿರಾ ಗಾಂಧಿ ಪುತ್ರ ರಾಜೀವ್ ಗಾಂಧಿ ಅವರು ಇಟಲಿ ಮೂಲದ ಸೋನಿಯಾ ಗಾಂಧಿ ಅವರನ್ನು ಪ್ರೀತಿಸಿ ಮದುವೆಯಾದರು. ಸೋನಿಯಾ ಗಾಂಧಿ ಮೂಲತಃ ಕ್ರೈಸ್ತ ಸಮುದಾಯಕ್ಕೆ ಸೇರಿದವರು. ರಾಜೀವ್ ಗಾಂಧಿ ಹಾಗೂ ಸೋನಿಯಾ ಪುತ್ರ ರಾಹುಲ್ ಗಾಂಧಿ.