Tag: ಅಲಿಯಾ ಭಟ್

  • ‘ಬ್ರಹ್ಮಾಸ್ತ್ರ’ ಟ್ರೈಲರ್ ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ: ರಣಬೀರ್ ಕಪೂರ್ ಮೇಲೆ ನೆಟ್ಟಿಗರ ಕೋಪ

    ‘ಬ್ರಹ್ಮಾಸ್ತ್ರ’ ಟ್ರೈಲರ್ ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ: ರಣಬೀರ್ ಕಪೂರ್ ಮೇಲೆ ನೆಟ್ಟಿಗರ ಕೋಪ

    ಣಬೀರ್ ಕಪೂರ್ ಮತ್ತು ಅಲಿಯಾ ಭಟ್  ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ರಣಬೀರ್ ಮತ್ತು ಅಲಿಯಾ ಅಭಿಮಾನಿಗಳು ಇಬ್ಬರ ನಟನೆಗೆ ಜೈ ಹೋ ಅಂದಿದ್ದಾರೆ. ಆದರೆ, ಈ ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಅನ್ನುವಂತಹ ದೃಶ್ಯವೊಂದು ಇದೆ ಎನ್ನುವ ಕಾರಣಕ್ಕಾಗಿ ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ರಣಬೀರ್ ಕಪೂರ್ ಸ್ಪೀಡ್ ಆಗಿ ಬಂದು ದೇವಸ್ಥಾನದ ಒಳಗೆ ನುಗ್ಗುತ್ತಾರೆ. ಅಲ್ಲಿರುವ ಘಂಟೆ ಬಾರಿಸುತ್ತಾರೆ. ಜಿಗಿದು ಗಂಟೆ ಬಾರಿಸುವಾಗ, ಅವರು ಧರಿಸಿರುವ ಶೂ ಕಾಣುತ್ತದೆ. ಶೂ ಧರಿಸಿ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ನೆಟ್ಟಿಗರು ಸಿಕ್ಕಾಪಟ್ಟೆ ಆಕ್ರೋಶಗೊಂಡಿದ್ದಾರೆ. ಶೂ ಇರುವಂತಹ ಕಾಲ್ ಗಳು ಫೋಟೋವನ್ನೂ ವೈರಲ್ ಕೂಡ ಮಾಡಿದ್ದಾರೆ. ದೇವರಿಗೆ ಅಪಮಾನ ಮಾಡಿದ್ದಕ್ಕೆ ಸಿನಿಮಾ ಸೋಲಲಿ ಎಂದು ಕಾಮೆಂಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಇದೊಂದು ಭಾರತ ಪುರಾಣದ ಆಧಾರದಲ್ಲಿ ಮೂಡಿ ಬಂದಿರುವ ಸಿನಿಮಾವಾಗಿದ್ದರಿಂದ, ರಣಬೀರ್ ತುಂಬಾ ಮುತುವರ್ಜಿ ತಗೆದುಕೊಂಡು ನಟಿಸಬೇಕಿತ್ತು. ಈ ದೃಶ್ಯವನ್ನು ಅವರ ಅಭಿಮಾನಿಗಳು ಕೂಡ ಇಷ್ಟ ಪಡಲಾರರು ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ರಣಬೀರ್ ಮತ್ತು ಅಲಿಯಾ ಭಟ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾ ಶುರುವಾಗಿ ಐದಾರು ವರ್ಷಗಳೇ ಆಗಿದ್ದವು. ಇದೀಗ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ತೆರೆಗೆ ಬರಲು ಸಜ್ಜಾಗಿದೆ ಸಿನಿಮಾ. ಈ ಹೊತ್ತಿನಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

    Live Tv

  • ಆಲಿಯಾ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

    ಆಲಿಯಾ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

    ಮುಂಬೈ: ಬಾಲಿವುಡ್ ನಟ ಶಂತನು ಮಹೇಶ್ವರಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಆಲಿಯಾ ಭಟ್ ಜೊತೆಗಿನ ನಟನಾ ಅನುಭವವನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.

    ಶುಕ್ರವಾರ ರಿಲೀಸ್ ಆದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ನಟನೆಗೆ ಅಲಿಯಾ ಮತ್ತು ತಂಡಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಗಂಗೂಬಾಯಿ ಜೊತೆ ಟೈಲರ್ ಆಗಿ ಪ್ರೇಕ್ಷಕರ ಗಮನ ಸೆಳೆದ ಶಂತನು ಮಹೇಶ್ವರಿ ಮಾಧ್ಯಮಗಳಿಗೆ ತಮ್ಮ ಸಿನಿಮಾಗೆ ಪ್ರೇಕ್ಷಕರ ಪ್ರತಿಕ್ರಿಯೆ ನೋಡಿ ಸಂತೋಷವಾಗಿದೆ ಎಂದು ತಿಳಿಸಿದರು.

    ಶಂತನು ಅವರು ಮೂಲತಃ ನೃತ್ಯಪಟುವಾಗಿದ್ದು, ಸಿನಿಮಾದಲ್ಲಿ ಎಲ್ಲಿಯೂ ಅವರು ಡ್ಯಾನ್ಸ್ ಮಾಡಿಲ್ಲ. ಈ ಕುರಿತು ಮಾತನಾಡಿದ ಅವರು, ನಾನು ಸಿನಿಮಾದಲ್ಲಿ ಡ್ಯಾನ್ಸ್ ಮಾಡಿಲ್ಲ ಎಂದು ನನಗೆ ಯಾವುದೇ ರೀತಿ ಅಸಮಾಧಾನವಿಲ್ಲ. ಏಕೆಂದರೆ ಬನ್ಸಾಲಿ ಅವರು ನಾನು ನೃತ್ಯ ಮಾಡುವುದನ್ನು ನೋಡುವುದಕ್ಕಿಂತ ಹೆಚ್ಚು ನಟನೆ ಮಾಡಿಸುವುದರಲ್ಲಿ ಆಸಕ್ತಿಯನ್ನು ಹೊಂದಿದ್ದರು. ಅಲ್ಲದೆ ಅವರು ನನ್ನಲ್ಲಿ ನಟನಾ ಕೌಶಲ್ಯ ಇದೆ ಎಂದು ನಂಬಿದ್ದಕ್ಕೆ ಹೆಚ್ಚು ಸಂತೋಷವಾಗಿದೆ ಎಂದು ಖುಷಿಪಟ್ಟರು. ಇದನ್ನೂ ಓದಿ:  ಸೋದರಸಂಬಂಧಿ ಮದುವೆಯಲ್ಲಿ ಯಶ್ ಫ್ಯಾಮಿಲಿ ಫುಲ್ ಮಿಂಚಿಂಗ್!

    ‘ಗಂಗೂಬಾಯಿ ಕಾಠಿಯಾವಾಡಿ’ ಆಲಿಯಾ ಭಟ್ ಜೊತೆಗಿನ ನಟನೆ ಕುರಿತು ಮಾತನಾಡಿದ ಅವರು, ‘ಮೇರಿ ಜಾನ್’ ಹಾಡಿನ ಸಮಯದಲ್ಲಿ ಅಲಿಯಾ ನನಗೆ ಕಪಾಳಮೋಕ್ಷ ಮಾಡಬೇಕಿತ್ತು. ಆದರೆ ಅಲಿಯಾ ಅವರಿಗೆ ನನಗೆ ತುಂಬಾ ಬಲವಾಗಿ ಕಪಾಳಮೋಕ್ಷ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ನಾವು ಆ ಸೀನ್ ಗೆ ಸುಮಾರು 20 ಟೇಕ್‍ಗಳನ್ನು ತೆಗದುಕೊಂಡಿದ್ದೆವು. ನಾನು ಅವರಿಗೆ ಏನು ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದೆ. ನಂತರ ಅವರು ಕೂಲ್ ಆಗಿದ್ದರು ಎಂದು ವಿವರಿಸಿದರು.

    Shantanu Maheshwari interview: On Gangubai Kathiawadi, meeting Alia Bhatt on Jhalak and more | Bollywood - Hindustan Times

    ಈ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರು ನನ್ನ ಮತ್ತು ಅಲಿಯಾ ಅವರ ಕೆಮಿಸ್ಟ್ರಿ ನೋಡಿ ಒಪ್ಪಿಕೊಂಡಿದ್ದಾರೆ. ಈ ಪ್ರತಿಕ್ರಿಯೆಯನ್ನು ನಾನು ನಿರೀಕ್ಷಿಸಿರಲಿಲ್ಲ. ಈ ಸಿನಿಮಾ ನೋಡಿದ ಮೇಲೆ ಜನರು ನನ್ನನ್ನು ಮಾತನಾಡಿಸುವ ರೀತಿ ಪೂರ್ತಿ ಬದಲಾಗಿದೆ. ನನ್ನ ಪೋಷಕರು ಈ ಪ್ರತಿಕ್ರಿಯೆ ನೋಡಿ ನನ್ನ ಮೇಲೆ ಹೆಮ್ಮೆಪಡುತ್ತಿದ್ದಾರೆ. ಇದನ್ನು ನೋಡಿ ನನಗೆ ಸಂತೋಷವಾಗಿಗೆ ಎಂದರು.

    ಈ ಸಿನಿಮಾ ನೋಡಿದ ಮೇಲೆ ಮನೆಯವರಿಗೆ ಸಂತೋಷವಾಗಿದೆ. ಆದರೆ ನಾನು ಮೊದಲು ಮನೆಯಲ್ಲಿ ಹೇಗೆ ಇದ್ದೆ ಅದೇ ರೀತಿ ಈಗಲೂ ಇದ್ದೇನೆ. ನಾನು ಅವಿಭಕ್ತ ಕುಟುಂಬದಲ್ಲಿದ್ದು, ಮನೆಯಲ್ಲಿ ನಾನೇ ಚಿಕ್ಕವನು. ನನ್ನನ್ನು ಮೊದಲು ಮನೆಯಲ್ಲಿ ಯಾವ ರೀತಿ ನೋಡುತ್ತಿದ್ರೂ ಅದೇ ರೀತಿ ಈಗಲೂ ನೋಡುತ್ತಾರೆ. ಇದು ಒಳ್ಳೆಯ ವಿಷಯ ಎಂದು ತಿಳಿಸಿದರು. ಇದನ್ನೂ ಓದಿ: ನಾಳೆ ಬಿಡುಗಡೆ ಆಗಲಿರುವ ಗಂಗೂಬಾಯಿ ಕಾಠಿಯಾವಾಡಿ ಟೈಟಲ್ ಬದಲಾಗತ್ತಾ? ಕೋರ್ಟ್ ಕೊಟ್ಟ ಸಲಹೆ ಏನು?

    Gangubai Kathiawadi: Who is Shantanu Maheshwari, who is fighting love with Alia Bhatt? are very popular on social media - The India Print : theindiaprint.com, The Print

    ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಕಥೆಯನ್ನು ಹುಸೇನ್ ಜೈದಿ ಅವರ ಪುಸ್ತಕ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ನಿಂದ ತೆಗೆದುಕೊಳ್ಳಲಾಗಿದೆ. ಆಲಿಯಾ ಭಟ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಶುಕ್ರವಾರ ರಿಲೀಸ್ ಆದ ಈ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

  • ನಾಳೆ ಬಿಡುಗಡೆ ಆಗಲಿರುವ ಗಂಗೂಬಾಯಿ ಕಾಠಿಯಾವಾಡಿ ಟೈಟಲ್ ಬದಲಾಗತ್ತಾ? ಕೋರ್ಟ್ ಕೊಟ್ಟ ಸಲಹೆ ಏನು?

    ನಾಳೆ ಬಿಡುಗಡೆ ಆಗಲಿರುವ ಗಂಗೂಬಾಯಿ ಕಾಠಿಯಾವಾಡಿ ಟೈಟಲ್ ಬದಲಾಗತ್ತಾ? ಕೋರ್ಟ್ ಕೊಟ್ಟ ಸಲಹೆ ಏನು?

    ಮುಂಬೈ: ಬಾಲಿವುಡ್ ಬಹುನಿರೀಕ್ಷಿತ ಚಿತ್ರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಬಿಡುಗಡೆಗೆ ಒಂದೇ ದಿನ ಬಾಕಿ. ಜಗತ್ತಿನಾದ್ಯಂತ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಬ್ಯುಸಿಯಾಗಿದ್ದರೆ, ಇತ್ತ ಕಡೆ ಸುಪ್ರೀಂ ಕೋರ್ಟ್ ಸಲಹೆಯೊಂದನ್ನು ನೀಡಿ ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸಿನಿಮಾದ ಕುರಿತಾಗಿ ಸಾಕಷ್ಟು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಸಿನಿಮಾ ಹೆಸರನ್ನು ಬದಲಾಯಿಸಿಕೊಳ್ಳುವಂತೆ ಚಿತ್ರತಂಡಕ್ಕೆ ಸಲಹೆ ನೀಡಿದೆ.

    ಹೆಸರು ಬದಲಾಯಿಸುವುದರ ಜತೆಗೆ ಸಿನಿಮಾದ ಕಥೆಯೇ ಬಗ್ಗೆಯೇ ಆಕ್ಷೇಪ ವ್ಯಕ್ತ ಪಡಿಸಿ, ಗಂಗೂಬಾಯಿ ಅವರ ದತ್ತು ಪುತ್ರ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಅಲ್ಲದೇ, ಸಿನಿಮಾ ಬಿಡುಗಡೆಯನ್ನು ತಡೆಹಿಡಿಯಲು ಕೋರಿ ನ್ಯಾಯಾಲಯಗಳ ಮುಂದೆ ಹಲವಾರು ಅರ್ಜಿಗಳು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ. ಬನ್ಸಾಲಿ ಪ್ರೊಡಕ್ಷನ್ಸ್‍ನ ವಕೀಲ ಸಿದ್ಧಾರ್ಥ ದವೆ ಅವರು ಸಲಹೆಯ ಬಗ್ಗೆ ತಮ್ಮ ಕಕ್ಷಿದಾರ ಜೊತೆ ಮಾತನಾಡಿ ಸೂಚನೆಗಳನ್ನು ಪಡೆಯುವುದಾಗಿ ಇಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು. ಈ ವಿಚಾರವಾಗಿ ನಾಳೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ವಿವಾದ ಇಲ್ಲದೇ ಸಿನಿಮಾ ರಿಲೀಸ್ ಮಾಡಲ್ಲವಾ ಸಂಜಯ್ ಲೀಲಾ ಬನ್ಸಾಲಿ? : ಗಂಗೂಬಾಯಿ ಮೇಲೆ ಮತ್ತೊಂದು ಕೇಸ್

    ‘ಗಂಗೂಬಾಯಿ ಕಾಠಿಯಾವಾಡಿ’ ಮುಂಬೈನ ಕಾಮಾಠಿಪುರ ಲೈಂಗಿಕ ಕಾರ್ಯಕರ್ತೆಯಾಗಿ ನಂತರ ರಾಜಕೀಯ ಪ್ರವೇಶ ಮಾಡಿದ್ದರು. ಉತ್ತಮ ಜೀವನ ನಡೆಸುತ್ತಿದ್ದರು. ಈ ನಿಜವಾದ ಘಟನೆಯನ್ನು ತೆಗದುಕೊಂಡು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾವನ್ನು ಮಾಡಲಾಗಿದೆ. ಈ ಹಿನ್ನೆಲೆ ಗಂಗೂಬಾಯಿಯ ದತ್ತುಪುತ್ರ ಬಾಬು ರಾವ್ಜಿ ಶಾ ಸಹ ಸಿನಿಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನಲ್ಲಿ ಅವರು, ನನ್ನ ತಾಯಿಯನ್ನು ಈ ಸಿನಿಮಾದಲ್ಲಿ ಮಾನಹಾನಿ ಮಾಡಲಾಗಿದೆ. ಅದಕ್ಕೆ ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದರು.

    ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ವಿರುದ್ಧ ಇದೀಗ ಮಹಾರಾಷ್ಟ್ರದ ಶಾಸಕ ಅಮೀನ್ ಪಟೇಲ್ ಕೂಡ ಮತ್ತೊಂದು ದೂರು ಕೊಟ್ಟಿದ್ದಾರೆ. ಕಾಠಿಯಾವಾಡಿ ಎನ್ನುವುದು ಪ್ರದೇಶದ ಹೆಸರು. ಈ ಹೆಸರನ್ನು ಚಿತ್ರದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: ‘ಡ್ಯಾಡಿಸ್ ಏಂಜೆಲ್’ – ಆಲಿಯಾ ವಿರುದ್ಧ ಸಿಡಿದೆದ್ದ ತಲೈವಿ

    ‘ಗಂಗೂಬಾಯಿ ಕಾಠಿಯಾವಾಡಿ’ ಕಥೆಯನ್ನು ಹುಸೇನ್ ಜೈದಿ ಅವರ ಪುಸ್ತಕ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ನಿಂದ ತೆಗೆದುಕೊಳ್ಳಲಾಗಿದೆ. ಅಲಿಯಾ ಭಟ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ.

  • ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಮುಂಬೈ: ಬಾಲಿವುಡ್ ಪ್ರಣಯ ಪಕ್ಷಿಗಳು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಗೆ ಸ್ಥಳ ಹುಡುಕಲು ಜೈಪುರಕ್ಕೆ ಬಂದಿದ್ದಾರೆ.

    ಆಲಿಯಾ ಮತ್ತು ರಣಬೀರ್ ಈ ವಾರಾಂತ್ಯದಲ್ಲಿ ಜೈಪುರದ ಏರ್‌ರ್ಪೋಟ್ ನಲ್ಲಿ ಕಾಣಿಸಿಕೊಂಡಿದ್ದು, ಅವರ ಫ್ಯಾನ್ ಕ್ಲಬ್ ನಲ್ಲಿ ಈ ಪ್ರಣಯ ಪಕ್ಷಿಗಳ ಫೊಟೋವನ್ನು ಅಭಿಮಾನಿಗಳು ಹಂಚಿಕೊಂಡಿದ್ದಾರೆ. ಇವರಿಬ್ಬರು ಜೈಪುರದ ಜವಾಯ್ ಬಂದ್ ಗೆ ತಮ್ಮ ಮದುವೆಯ ಸ್ಥಳವನ್ನು ಹುಡುಕಿಕೊಂಡು ಬಂದಿದ್ದರು ಎಂದು ಅಭಿಮಾನಿಗಳು ಬರೆದು ಪೋಸ್ಟ್ ಮಾಡಿದ್ದಾರೆ. ಆದರೆ ಈ ಕುರಿತು ಪ್ರಣಯ ಪಕ್ಷಿಗಳು ಮಾತ್ರ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಇದನ್ನೂ ಓದಿ:  ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

     

    View this post on Instagram

     

    A post shared by ©pmd (@padharo_mahre_desh)

    ಆಲಿಯಾ ಮತ್ತು ರಣಬೀರ್ ಕ್ಯಾಶುಯಲ್ ಆಗಿ ಡ್ರೆಸ್ ಮಾಡಿಕೊಂಡಿದ್ದರು. ಆಲಿಯಾ ಕ್ಲಾಸಿಕ್ ಡೆನಿಮ್ ಮತ್ತು ವೈಟ್ ಟೀ ಶರ್ಟ್ ಹಾಕಿಕೊಂಡಿದ್ದು, ರಣಬೀರ್ ಲೌಂಜ್ ಸೆಟ್ ಧರಿಸಿದ್ದರು.

    2018ರಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ 2019ರ ಫಿಲ್ಮ್‍ಫೇರ್ ಪ್ರಶಸ್ತಿ ಸಮಾರಂಭದಲ್ಲಿ, ಆಲಿಯಾ ವೇದಿಕೆಯಲ್ಲಿ ರಣಬೀರ್ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವುದರ ಮೂಲಕ ಅವರಿಬ್ಬರ ಪ್ರೀತಿಯ ವಿಷಯವನ್ನು ದೃಢಪಡಿಸಿದ್ದರು. ಅದು ಅಲ್ಲದೇ ರಣಬೀರ್ ಅವರ ತಾಯಿ ನೀತು ಕಪೂರ್ ಸಹ ಈ ಕುರಿತು ದೃಢಪಡಿಸಿದ್ದರು. ಅಂದಿನಿಂದ ಈ ಜೋಡಿಗಳ ಮದುವೆ ಯಾವಾಗ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: 2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

     

    View this post on Instagram

     

    A post shared by neetu Kapoor. Fightingfyt (@neetu54)

    ಆಲಿಯಾ ಮತ್ತು ರಣಬೀರ್ ನಟನೆಯ ಬಹುನಿರೀಕ್ಷಿತ ‘ಬ್ರಹ್ಮಾಸ್ತ್ರ’ ಸಿನಿಮಾ ಬಿಡುಗಡೆಯ ನಂತರ ಮದುವೆಯಾಗಲು ಈ ಜೋಡಿ ನಿರ್ಧರಿಸಿದ್ದರೆ ಎಂದು ಕೆಲವು ಮೂಲಗಳ ಪ್ರಕಾರ ತಿಳಿದುಬರುತ್ತಿದೆ.

  • ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ ಅಲಿಯಾ

    ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ ಅಲಿಯಾ

    ಮುಂಬೈ: ಬಾಲಿವುಡ್ ಬೆಡಗಿ ಅಲಿಯಾ ಭಟ್ ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದು, ಇದೀಗ ಆ ಫೋಟೋಗಳು ವೈರಲ್ ಆಗುತ್ತಿದೆ.

    ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

    ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ.

    ಇತ್ತೀಚೆಗೆ ರಣ್‍ಬೀರ್ ಹಾಗೂ ಅಲಿಯಾ ನವೆಂಬರ್‌ನಲ್ಲಿ  ಫ್ರಾನ್ಸ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್‍ಸೈಟ್‍ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿತ್ತು.

    ಕೆಲವು ದಿನಗಳ ಹಿಂದೆ ರಣ್‍ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್‌ನ  ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

    ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್‌ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

  • ಹೃದಯ ಸಂಬಂಧಿ ಕಾಯಿಲೆಯಿರುವ ಮಕ್ಕಳ ನೆರವಿಗೆ ನಿಂತ ಅಲಿಯಾ

    ಹೃದಯ ಸಂಬಂಧಿ ಕಾಯಿಲೆಯಿರುವ ಮಕ್ಕಳ ನೆರವಿಗೆ ನಿಂತ ಅಲಿಯಾ

    ಮುಂಬೈ: ಬಾಲಿವುಡ್ ನಟಿ ಅಲಿಯಾ ಭಟ್ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ನೆರವಿಗೆ ಮುಂದಾಗಿದ್ದಾರೆ.

    ಅಲಿಯಾ ಪೇಟಿಂಗ್ ಪ್ರದರ್ಶನ(ಎಕ್ಸಿಬಿಷನ್)ನಲ್ಲಿ ಭಾಗವಹಿಸುವ ಮೂಲಕ ಹೃದಯ ಸಂಬಂಧಿ ಕಾಯಿಲೆಯಿರುವ ಮಕ್ಕಳಿಗೆ ಸಹಾಯ ಮಾಡಲಿದ್ದಾರೆ. ಈ ಎಕ್ಸಿಬಿಷನ್‍ನಿಂದ ಬಂದ ಹಣವನ್ನು ಮಕ್ಕಳ ಚಿಕಿತ್ಸೆಗೆ ಉಪಯೋಗಿಸಲಾಗುತ್ತದೆ.

    ಬುಧವಾರ ಅಲಿಯಾ ಅವರು ಮುಂಬೈನ ಬಾಯಿ ಜರ್ಬಾಯಿ ವಾಡಿಯಾ ಆಸ್ಪತ್ರೆಯಲ್ಲಿ ‘ಆರ್ಟ್ ಫಾರ್ ದಿ ಹಾರ್ಟ್’ ಎಕ್ಸಿಬಿಷನ್ ಉದ್ಘಾಟಿಸಿದ್ದರು. ಅಲ್ಲದೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸಹಾಯ ಮಾಡುವ ಸಲುವಾಗಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ಈ ಬಗ್ಗೆ ಪ್ರತಿಕ್ರಿಯಿಸಿದ ಅಲಿಯಾ, “ಮಕ್ಕಳು ದೊಡ್ಡವರಿಗಿಂತ ಹೆಚ್ಚು ಪಾಸಿಟಿವ್ ಆಗಿರುತ್ತಾರೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ಏಕೆಂದರೆ ಅವರ ಮನಸ್ಸಿನಲ್ಲಿ ನಕಾರಾತ್ಮಕ ಯೋಚನೆಗಳು ಇರುವುದಿಲ್ಲ. ಇದೇ ಕಾರಣಕ್ಕೆ ಅವರು ಬೇಗ ಗುಣಮುಖರಾಗುತ್ತಾರೆ” ಎಂದು ಹೇಳಿದ್ದಾರೆ.

    ನಾನು ಆಸ್ಪತ್ರೆಯ ನವಜಾತ ತೀವ್ರ ನಿಗಾ ಘಟಕ(ಎನ್‍ಐಸಿಯು)ಗೆ ಹೋಗಿದ್ದೆ. ಇಡೀ ಏಷಿಯಾದಲ್ಲಿ ಇದು ಅತಿದೊಡ್ಡ ಘಟಕ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಗೆ ಎಕ್ಸಿಬಿಷನ್ ಆಯೋಜಿಸಲಾಗಿದೆ. ಇದರಿಂದ ಸಂಗ್ರಹಿಸಲಾದ ಹಣವನ್ನು ಮಕ್ಕಳ ಸರ್ಜರಿಗೆ ಉಪಯೋಗಿಸಲಾಗುತ್ತದೆ ಎಂದು ಅಲಿಯಾ ಭಟ್ ತಿಳಿಸಿದ್ದಾರೆ.

     

    View this post on Instagram

     

    #aliabhatt today at wadia hospital

    A post shared by Viral Bhayani (@viralbhayani) on

  • ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಆಗಿ ಆಲಿಯಾ ಆಯ್ಕೆ- ನೆಟ್ಟಿಗರಿಂದ ತರಾಟೆ

    ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಆಗಿ ಆಲಿಯಾ ಆಯ್ಕೆ- ನೆಟ್ಟಿಗರಿಂದ ತರಾಟೆ

    ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರು ದಿ ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಎಂದು ನಾಮಿನೇಟ್ ಆಗಿದ್ದು, ಇದಕ್ಕೆ ನೆಟ್ಟಿಗರು ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇತ್ತೀಚೆಗೆ 2019ರ ಅತ್ಯಂತ ಸ್ಫೂರ್ತಿದಾಯಿಕ ಮಹಿಳೆ ವಿಭಾಗದಲ್ಲಿ ಆಲಿಯಾ ಅವರು ಪೀಪಲ್ಸ್ ಚಾಯ್ಸ್ ಪ್ರಶಸ್ತಿಗೆ ನಾಮಿನೇಟ್ ಆಗಿದ್ದರು. ಈ ನಾಮಿನೇಟ್ ನಿಜಕ್ಕೂ ದೊಡ್ಡ ಸಾಧನೆಯಾಗಿದೆ. ಆಲಿಯಾ ಅವರ ಈ ಸಾಧನೆಯನ್ನು ಜನರು ಇಷ್ಟಪಡಲಿಲ್ಲ. ಹಾಗಾಗಿ ಅವರು ಆಲಿಯಾ ಅವರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

    ದೇಶದಲ್ಲಿ ಚಂದ್ರಯಾನ -2 ಮಿಷನ್ ಡೈರೆಕ್ಟರ್ ರಿತು ಕರಿಧಾಲ್ ಅಂತಹ ಮಹಿಳೆಯರು ಇದ್ದಾರೆ. ಅಲ್ಲದೆ ದೇಶವನ್ನು ಚಂದ್ರನತ್ತ ತಲುಪಿಸುವಲ್ಲಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಅಂತಹವರಿಗೆ ದಿ ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಎಂದು ನಾಮಿನೇಟ್ ಮಾಡುವ ಬದಲು ಆಲಿಯಾ ಅವರಿಗೆ ಯಾಕೆ ನೀಡುತ್ತಿದ್ದೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ.

    ಅಲ್ಲದೆ ಮತ್ತೆ ಕೆಲವರು ಆಲಿಯಾ ಭಟ್ ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಹಲವು ಮಹಿಳೆಯರು ಇದ್ದಾರೆ. ಅವರನ್ನು ಎಣಿಸುತ್ತಾ ಹೋದರೆ ನೀವು ಸುಸ್ತಾಗುತ್ತೀರಿ ಎಂದು ಕಮೆಂಟ್ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

    ಹಿಮಾ ದಾಸ್ ಅವರು ಒಂದೇ ತಿಂಗಳಿನಲ್ಲಿ 5 ಚಿನ್ನದ ಪದಕ ಗೆದ್ದಿದ್ದಾರೆ. ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಗೆಲುವು ಸಾಧಿಸಿದ ಮೊದಲ ಮಹಿಳೆ. ಅವರಿಗೆ ಈ ಪ್ರಶಸ್ತಿ ಯಾಕೆ ನೀಡಿಲ್ಲ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

    ಟ್ರೋಲ್ ಆಗುತ್ತಿದ್ದಂತೆ ಆಲಿಯಾ ಭಟ್ ಅವರ ಅಭಿಮಾನಿಗಳು ನಟಿಯನ್ನು ಸಮರ್ಥಿಸಿಕೊಂಡಿದ್ದಾರೆ. ಕೆಲವರು ಆಲಿಯಾ ಅವರಿಗೆ ಎಂಟರ್ ಟೈನ್‍ಮೆಂಟ್ ಕ್ಯಾಟಗೇರಿಯಲ್ಲಿ ದಿ ಮೋಸ್ಟ್ ಇನ್‍ಸ್ಪೈರಿಂಗ್ ವುಮೆನ್ ಎಂದು ನಾಮಿನೇಟ್ ಆಗಿದ್ದಾರೆ ಎಂದು ಹೇಳುತ್ತಿದ್ದಾರೆ.

  • ಮುಂದಿನ ವರ್ಷ ಮದ್ವೆಗೆ ಈಗ್ಲೇ ಲೆಹೆಂಗಾ ಆರ್ಡರ್ ಮಾಡಿದ ಆಲಿಯಾ

    ಮುಂದಿನ ವರ್ಷ ಮದ್ವೆಗೆ ಈಗ್ಲೇ ಲೆಹೆಂಗಾ ಆರ್ಡರ್ ಮಾಡಿದ ಆಲಿಯಾ

    ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರು ಮುಂದಿನ ವರ್ಷದಲ್ಲಿ ಮದುವೆಯಾಗುತ್ತಿದ್ದು, ಈಗಲೇ ಅವರು ಸಬ್ಯಸಾಚಿ ವಿನ್ಯಾಸದ ಲೆಹೆಂಗಾವನ್ನು ಆರ್ಡರ್ ಮಾಡಿದ್ದಾರೆ ಎಂಬ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ.

    ನಟ ರಣ್‍ಬೀರ್ ಕಪೂರ್ ಹಾಗೂ ಅಲಿಯಾ ಭಟ್ 2018ರಿಂದ ಒಬ್ಬರಿಗೊಬ್ಬರು ಡೇಟಿಂಗ್ ನಡೆಸುತ್ತಿದ್ದರು. ಈಗ ಅವರು 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಹಾಗಾಗಿ ಅವರು ಈಗಲೇ ಲೆಹೆಂಗಾ ಬುಕ್ ಮಾಡಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ.

    ಆಲಿಯಾ ವಸ್ತ್ರವಿನ್ಯಾಸಕ ಸಬ್ಯಸಾಚಿ ಅವರನ್ನು ಏಪ್ರಿಲ್ ತಿಂಗಳಲ್ಲಿ ಭೇಟಿ ಮಾಡಿ ಮದುವೆಯ ಲೆಹೆಂಗಾ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈಗ ಆ ಲೆಹೆಂಗಾ ತಯಾರಿಸುವ ಕೆಲಸ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಈ ಮೊದಲು ಸಬ್ಯಸಾಚಿ ಅವರು ಅನುಷ್ಕಾ ಶರ್ಮಾ, ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ಮದುವೆಯ ಲೆಹೆಂಗಾವನ್ನು ವಿನ್ಯಾಸ ಮಾಡಿದ್ದಾರೆ.

    ರಣ್‍ಬೀರ್ ಹಾಗೂ ಅಲಿಯಾ ಈಗ ‘ಬ್ರಹ್ಮಾಸ್ತ್ರ’ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ವರದಿಗಳ ಪ್ರಕಾರ ರಣ್‍ಬೀರ್ ಅವರ ತಂದೆ, ಹಿರಿಯ ನಟ ರಿಷಿ ಕಪೂರ್ ಅವರು ಭಾರತಕ್ಕೆ ಮರಳಿದ ನಂತರ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ರಿಷಿ ಕಪೂರ್ ಅವರು ಸೆಪ್ಟೆಂಬರ್ ತಿಂಗಳಿನಿಂದ ಅಮೆರಿಕದಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರು ಗುಣಮುಖರಾಗಿದ್ದು, ಮುಂಬೈಗೆ ಯಾವಾಗ ಹಿಂತಿರುಗುತ್ತಾರೆ ಎಂಬ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿಲ್ಲ.

  • ಎಲ್ಲರ ಸಮ್ಮುಖದಲ್ಲಿ ನಟನಿಗೆ ಐ ಲವ್ ಯೂ ಎಂದ ಅಲಿಯಾ: ವಿಡಿಯೋ ನೋಡಿ

    ಎಲ್ಲರ ಸಮ್ಮುಖದಲ್ಲಿ ನಟನಿಗೆ ಐ ಲವ್ ಯೂ ಎಂದ ಅಲಿಯಾ: ವಿಡಿಯೋ ನೋಡಿ

    ಮುಂಬೈ: ಬಾಲಿವುಡ್ ನಟಿ ಅಲಿಯಾ ಭಟ್ ಮುಂಬೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ನಟ ರಣ್‍ಬೀರ್ ಕಪೂರ್ ಗೆ ಐ ಲವ್ ಯೂ ಎಂದು ಹೇಳಿದ್ದಾರೆ. ಅಲಿಯಾ ಐ ಲವ್ ಯೂ ಎಂದು ಹೇಳುತ್ತಿದ್ದಂತೆ ರಣ್‍ಬೀರ್ ನಾಚಿ ನೀರಾಗಿದ್ದಾರೆ.

    ಇತ್ತೀಚೆಗೆ ರಣ್‍ಬೀರ್ ಕಪೂರ್ ಹಾಗೂ ಅಲಿಯಾ ಭಟ್ 64ನೇ ಫಿಲ್ಮ ಫೇರ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲಿಯಾಗೆ ‘ರಾಝಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿತ್ತು. ಅವಾರ್ಡ್ ಪಡೆದ ನಂತರ ಅಲಿಯಾ ವೇದಿಕೆಯಲ್ಲೇ ರಣ್‍ಬೀರ್ ಅವರನ್ನು ಸ್ಪೆಶಲ್ ಎಂದು ಹೇಳಿದ್ದಾರೆ.

    ವಿಡಿಯೋದಲ್ಲಿ ಅಲಿಯಾ, ರಣ್‍ಬೀರ್ ಗೆ ಐ ಲವ್ ಯೂ ಎಂದು ಹೇಳಿದ್ದಾರೆ. ಅಲಿಯಾ ಐ ಲವ್ ಯೂ ಎಂದು ಹೇಳುತ್ತಿದ್ದಂತೆ ರಣ್‍ಬೀರ್ ಕಪೂರ್ ನಾಚಿ ನೀರಾಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ‘ಸಂಜು’ ಚಿತ್ರಕ್ಕಾಗಿ ನಟ ರಣ್‍ಬೀರ್ ಕಪೂರ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿತ್ತು. ವೇದಿಕೆಯಲ್ಲಿ ಅವರ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ ಪಕ್ಕದಲ್ಲೇ ಕೂತಿದ್ದ ಅಲಿಯಾ ರಣ್‍ಬೀರ್ ಅವರನ್ನು ಸೈಡಿನಿಂದ ತಪ್ಪಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಾರೆ.

    ಸದ್ಯ ಅಲಿಯಾ ಭಟ್ ಹಾಗೂ ರಣ್‍ಬೀರ್ ಕಪೂರ್ ಈಗ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

  • ಗೆಳತಿಗೆ ಬ್ರೇಕಪ್ ಧಮ್ಕಿ ಹಾಕಿದ ರಣ್‍ಬೀರ್ ಕಪೂರ್

    ಗೆಳತಿಗೆ ಬ್ರೇಕಪ್ ಧಮ್ಕಿ ಹಾಕಿದ ರಣ್‍ಬೀರ್ ಕಪೂರ್

    ಮುಂಬೈ: ಬಾಲಿವುಡ್ ನಟ ರಣ್‍ಬೀರ್ ಕಪೂರ್ ಬ್ರೇಕಪ್ ಮಾಡುವುದಾಗಿ ತನ್ನ ಗೆಳತಿ ಅಲಿಯಾ ಭಟ್‍ಗೆ ಧಮ್ಕಿ ಹಾಕಿದ್ದಾರೆ ಎಂಬ ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿವೆ.

    ರಣ್‍ಬೀರ್ ಹಾಗೂ ಅಲಿಯಾ ಭಟ್ ಬಾಲಿವುಡ್‍ನ ಕ್ಯೂಟ್ ಕಪಲ್ ಆಗಿದ್ದು, ‘ಬ್ರಹ್ಮಾಸ್ತ್ರ’ ಚಿತ್ರದ ವೇಳೆ ಇವರಿಬ್ಬರ ನಡುವೆ ಪ್ರೀತಿ ಶುರುವಾಗಿದೆ. ಇವರಿಬ್ಬರ ಪ್ರೀತಿಗೆ ಎರಡು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಈಗ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಅಲ್ಲದೇ ರಣ್‍ಬೀರ್ ತನ್ನ ಗೆಳತಿ ಅಲಿಯಾಗೆ ಬ್ರೇಕಪ್ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ವರದಿಗಳ ಪ್ರಕಾರ, ರಣ್‍ಬೀರ್ ಹಾಗೂ ಅಲಿಯಾ ನಡುವೆ ಯಾವುದು ಸರಿಯಾಗಿ ನಡೆಯುತ್ತಿಲ್ಲ. ಅಲಿಯಾ ತನ್ನ ಗೆಳೆಯ ರಣ್‍ಬೀರ್ ಕಪೂರ್ ಗೆ ಕರೆ ಮಾಡಿದರೆ ಅವರು ಬೇಗ ಸ್ವೀಕರಿಸುತ್ತಿಲ್ಲ. ಅಲ್ಲದೇ ಅಲಿಯಾ ಪದೇ ಪದೇ ಕರೆ ಮಾಡಿ, ಮೆಸೇಜ್ ಮಾಡುವುದು ರಣ್‍ಬೀರ್ ಕಪೂರ್ ಗೆ ಇಷ್ಟವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಅಲಿಯಾ ತನ್ನ ಗೆಳೆಯ ರಣ್‍ಬೀರ್ ಕಪೂರ್ ಜೊತೆ ಸಮಯ ಕಳೆಯಲು ಇಷ್ಟಪಡುತ್ತಾರೆ. ಆದರೆ ರಣ್‍ಬೀರ್ ತಮ್ಮ ಚಿತ್ರಗಳತ್ತ ಗಮನ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

    ರಣ್‍ಬೀರ್ ಕಪೂರ್ ತನ್ನ ಹತ್ತಿರ ಇಲ್ಲ ಎಂದರೆ ಅಲಿಯಾ ಅವರಿಗೆ ನಿರಂತರ ಕರೆ ಹಾಗೂ ಮೆಸೇಜ್ ಮಾಡುತ್ತಾರೆ. ಇದು ರಣ್‍ಬೀರ್ ಕಪೂರ್ ಅವರಿಗೆ ಇಷ್ಟವಿಲ್ಲ. ಹಾಗಾಗಿ ರಣ್‍ಬೀರ್ ಈ ಹಿಂದೆ ಯಾವಾಗಲೂ ನಿನ್ನ ಜೊತೆ ಮಾತನಾಡಲು ಇರುವುದಕ್ಕೆ ಆಗುವುದಿಲ್ಲ. ನನ್ನ ಜೀವನದಲ್ಲಿ ನನಗೂ ಸ್ವಲ್ಪ ಸಮಯ ಕೊಡು ಎಂದು ಅಲಿಯಾಗೆ ಹೇಳಿದ್ದರು. ಆದರೆ ಅಲಿಯಾ ರಣ್‍ಬೀರ್ ಅವರ ಮಾತನ್ನು ಒಪ್ಪುತ್ತಿಲ್ಲ ಎಂದು ಹೇಳಲಾಗಿದೆ.

    ರಣ್‍ಬೀರ್ ತಮ್ಮ ಪ್ರೀತಿಯನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಅಲಿಯಾ ಚಿಂತಿಸುತ್ತಿದ್ದಾರೆ. ಅಲ್ಲದೇ ರಣ್‍ಬೀರ್ ಕೂಡ ಬ್ರೇಕಪ್ ಮಾಡಿಕೊಳ್ಳುವುದಾಗಿ ಅಲಿಯಾಗೆ ಬೆದರಿಕೆ ಹಾಕಿದ್ದಾರೆ. ರಣ್‍ಬೀರ್ ಅವರ ಈ ವರ್ತನೆಯಿಂದ ಅಲಿಯಾ ತುಂಬಾ ನೋವು ಪಡುತ್ತಿದ್ದಾರೆ. ಅಲಿಯಾ ತನ್ನ ಗೆಳೆಯ ರಣ್‍ಬೀರ್ ನನ್ನು ಪ್ರೀತಿಸುತ್ತಿದ್ದು, ಅವರನ್ನೇ ಮದುವೆ ಆಗುವ ಆಸೆಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

    ರಣ್‍ಬೀರ್ ಕಪೂರ್ ಅವರ ತಂದೆ ರಿಷಿ ಕಪೂರ್ ಅನಾರೋಗ್ಯದಿಂದ ಬಳಲುತ್ತಿದ್ದು, ತಾಯಿ ನೀತೂ ಕಪೂರ್ ತನ್ನ ಮಗನ ಮದುವೆಯನ್ನು ಬೇಗ ಮಾಡುವುದಾಗಿ ನಿರ್ಧರಿಸಿದ್ದಾರೆ. ಅಲಿಯಾ, ರಣ್‍ಬೀರ್ ಕಪೂರ್ ಜೊತೆ ಅವರ ತಂದೆಯನ್ನು ಭೇಟಿ ಮಾಡಲು ಎರಡು ಬಾರಿ ನ್ಯೂಯಾರ್ಕ್ ಗೆ ಭೇಟಿ ನೀಡಿದ್ದಾರೆ. ಬ್ರಹ್ಮಾಸ್ತ್ರ ಚಿತ್ರ ಬಿಡುಗಡೆ ನಂತರ ಇಬ್ಬರ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ. ಜೂನ್ ತಿಂಗಳಿನಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv