Tag: ಅಲೋಕ್ ವರ್ಮಾ

  • ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ವಜಾ

    ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ವಜಾ

    ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯ ಮಹತ್ವದ ನಿರ್ಧಾರ ಕೈಗೊಂಡಿದೆ.

    ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಕಿ. ಸಿಕ್ರಿ., ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇರುವ ಉನ್ನತಾಧಿಕಾರ ಸಮಿತಿ ಗುರುವಾರ ರಾತ್ರಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ.

    ಅಲೋಕ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಸಂಬಂಧ ತನಿಖೆ ನಡೆಸಿದ್ದ ಸಿವಿಸಿ ವರದಿಯ ಆಧಾರದ ಮೇಲೆ ವಜಾ ಮಾಡಲಾಗಿದೆ. 2 ಗಂಟೆಗಳ ಚರ್ಚೆಯಲ್ಲಿ ಅಲೋಕ್ ವಜಾಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕಾರಣಗಳನ್ನು ಕೇಳಿದ್ದಾಗಿಯೂ, ಅವರಿಗೆ ಜಸ್ಟೀಸ್ ಎ.ಕೆ. ಸಿಕ್ರಿ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿದೆ.

    ಅಲೋಕ್ ವರ್ಮಾ ಅವರನ್ನು ದೆಹಲಿ ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಲೋಕ್ ವರ್ಮಾ ಮತ್ತು ರಾಕೇಶ್ ಅಸ್ಥಾನ ನಡುವಿನ ವೈಮನಸ್ಸು ಬೀದಿಗೆ ಬಂದ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆ ನೀಡಿ ಕಳುಹಿಸಿತ್ತು.

    ಸುಪ್ರೀಂ ಆದೇಶದಿಂದ ಬುಧವಾರ ಮರು ನೇಮಕವಾಗಿದ್ದ ಅಲೋಕ್ ಕುಮಾರ್, ಹಂಗಾಮಿ ಮುಖ್ಯಸ್ಥರಾಗಿದ್ದ ನಾಗೇಶ್ವರ ರಾವ್ ನೇಮಕಾತಿಯನ್ನು ರದ್ದುಗೊಳಿಸಿ, ಆಯಕಟ್ಟಿನ ಸ್ಥಳಕ್ಕೆ ತಮ್ಮ ಆಪ್ತರನ್ನು ನೇಮಿಸಿಕೊಂಡಿದ್ದರು. ಈಗ ಮತ್ತೆ ನಾಗೇಶ್ವರ ರಾವ್ ಹಂಗಾಮಿ ಮುಖ್ಯಸ್ಥರಾಗಿದ್ದಾರೆ. ಇದೇ 31ಕ್ಕೆ ವರ್ಮಾ ಅವರ ಅಧಿಕಾರವಧಿ ಅಂತ್ಯವಾಗಲಿದ್ದು, ಭ್ರಷ್ಟಾಚಾರ ಆರೋಪದಲ್ಲಿ ವಜಾಗೊಂಡ ಮೊದಲಿಗರಾಗಿದ್ದಾರೆ. ಇದನ್ನು ಓದಿ : ಸಿಬಿಐ ಅಧಿಕಾರಿಗಳಿಗೆ ಕಡ್ಡಾಯ ರಜೆ: ಕಿತ್ತಾಟ ಆರಂಭವಾಗಿದ್ದು ಹೇಗೆ? ಇಬ್ಬರ ಮೇಲಿರುವ ಆರೋಪ ಏನು?

    ಏನಿದು ಪ್ರಕರಣ?:
    ಅಲೋಕ್ ವರ್ಮಾ ಮತ್ತು ಸಿಬಿಐನ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ನಡುವಿನ ಆಂತರಿಕ ಕಲಹ ಉಂಟಾಗಿ, ಇಬ್ಬರ ಜಗಳ ಭಾರೀ ಚರ್ಚೆಗೆ ಕಾರಣವಾಗಿತ್ತು. ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಇದರಿಂದಾಗಿ ಅವರನ್ನ 2018ರ ಅಕ್ಟೋಬರ್ 23 ರಂದು ಕಡ್ಡಾಯ ರಜೆಯ ಮೇಲೆ ಕೇಂದ್ರ ಸರ್ಕಾರ ಕಳುಹಿಸಿತ್ತು. ಇದನ್ನು ವಿರೋಧಿಸಿ ಅಲೋಕ್ ವರ್ಮಾ ಕಾನೂನು ಹೋರಾಟ ನಡೆಸಿದ್ದರು.

    ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಲೋಕ್ ವರ್ಮಾ ವಿರುದ್ಧದ ಆರೋಪಗಳ ಕುರಿತು ಕೇಂದ್ರ ಜಾಗೃತ ಆಯೋಗ (ಸಿವಿಸಿ) ನಡೆಸುತ್ತಿರುವ ತನಿಖೆ ಪೂರ್ಣಗೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ನಿರ್ಬಂಧ ಹೇರಿತ್ತು. ಈ ತೀರ್ಪಿನಿಂದಾಗಿ ಅಲೋಕ್ ವರ್ಮಾ 77 ದಿನಗಳ ಬಳಿಕ ಮತ್ತೆ ಸಿಬಿಐ ನಿರ್ದೇಶಕರಾಗಿ ನಿನ್ನೆ ಅಧಿಕಾರ ವಹಿಸಿಕೊಂಡು ಕಚೇರಿಗೆ ಮರಳಿದ್ದರು.

    ಅಲೋಕ್ ವರ್ಮಾ ರಜೆಯ ಮೇಲಿದ್ದ ವೇಳೆಯೇ ಮಧ್ಯಂತರ ನಿರ್ದೇಶಕರನ್ನಾಗಿ ಎಂ.ನಾಗೇಶ್ವರ ರಾವ್ ಅವರನ್ನು ನೇಮಿಸಲಾಗಿತ್ತು. ಈ ವೇಳೆ ವರ್ಮಾ ಆಪ್ತರಾದ 10 ಅಧಿಕಾರಿಗಳ ವರ್ಗಾವಣೆ ಆದೇಶಕ್ಕೆ ನಾಗೇಶ್ವರ ರಾವ್ ಸಹಿ ಹಾಕಿದ್ದರು. ಕಾನೂನು ಸಮರದ ಬಳಿಕ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ವರ್ಮಾ ಅವರು ಬಹುತೇಕ ವರ್ಗಾವಣೆಗಳನ್ನು ರದ್ದು ಮಾಡಿದ್ದರು. ಸುಪ್ರೀಂ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ಸೂಚಿಸಿದ್ದರು ಆದೇಶಗಳನ್ನು ರದ್ದು ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಂದ್ರಕ್ಕೆ ಮುಖಭಂಗ: ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರಿಕೆ

    ಕೇಂದ್ರಕ್ಕೆ ಮುಖಭಂಗ: ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರಿಕೆ

    ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

    ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟವಾದ ಕೂಡಲೇ ವಿರೋಧ ಪಕ್ಷಗಳು ಆದೇಶವನ್ನು ಸ್ವಾಗತಿಸಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಪ್ರತಿಕ್ರಿಯಿಸಿವೆ.

     

    ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ಪೀಠ ಅರ್ಜಿಗಳನ್ನು ವಿಚಾರಣೆ ನಡೆಸಿತ್ತು. ರಂಜನ್ ಗೊಗೋಯ್ ಗೈರಾಗಿದ್ದ ಹಿನ್ನೆಲೆಯಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್ ಆದೇಶವನ್ನು ಓದಿದರು.

    ಕೇಂದ್ರದ ಆದೇಶವನ್ನು ರದ್ದುಗೊಳಿಸಿದ್ದ ಕೋರ್ಟ್ ಅಲೋಕ್ ವರ್ಮಾ ಅವರನ್ನು ಮತ್ತೆ ಸಿಬಿಐ ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಆದೇಶಿಸಿದೆ. ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ಕೆಳಗಡೆ ಇಳಿಸುವ ಮುನ್ನ ಸಿಬಿಐ ನಿರ್ದೇಶಕರನ್ನು ನೇಮಕ ಮಾಡಲೆಂದೇ ಇರುವ ದೆಹಲಿ ವಿಶೇಷ ಪೊಲೀಸ್ ಕಾಯ್ದೆ(ಡಿಎಸ್‍ಪಿಇ) ಅಡಿ ರೂಪಿತವಾಗಿರುವ ಉನ್ನತ ಸಮಿತಿಯಲ್ಲಿ ಚರ್ಚೆಯಾಗಬೇಕಿತ್ತು. ಯಾವುದೇ ಚರ್ಚೆ ನಡೆಸದೇ ಸರ್ಕಾರ ಹೊರಡಿಸಿದ ಕ್ರಮ ಸರಿಯಲ್ಲ. ಅಲೋಕ್ ವರ್ಮಾ ಹುದ್ದೆಯಲ್ಲಿ ಮುಂದುವರಿಯಬಹುದು. ಆದರೆ ಯಾವುದೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವಂತಿಲ್ಲ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

    ತನ್ನನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವ ಸಂಬಂಧ ಕೇಂದ್ರ ಜಾಗೃತ ಆಯೋಗ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗಳು ಕಳೆದ ಅ.23ರಂದು ಹೊರಡಿಸಿದ್ದ ಮೂರು ಆದೇಶಗಳನ್ನು ರದ್ದುಪಡಿಸಬೇಕು ಎಂದು ಕೋರಿ ಅಲೋಕ್ ವರ್ಮಾ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರಕಾರದ ಕ್ರಮದ ವಿರುದ್ಧ ಕಾಮನ್ ಕಾಸ್ ಎಂಬ ಸರ್ಕಾರೇತರ  ಸಂಸ್ಥೆಯೂ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಅವರ ಅವಧಿ ಜನವರಿ 31ಕ್ಕೆ ಮುಕ್ತಾಯವಾಗಲಿದೆ.

    ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಕಿತ್ತಾಟ ಬಹಿರಂಗವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಬ್ಬರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಸಿಬಿಐನ ಹಂಗಾಮಿ ನಿರ್ದೇಶಕರನ್ನಾಗಿ ಎಂ ನಾಗೇಶ್ವರ್ ರಾವ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ನೇಮಕ ಮಾಡಿತ್ತು.

    ಇಬ್ಬರು ಹಿರಿಯ ಅಧಿಕಾರಿಗಳಾಗಿದ್ದು ಹೀಗೆ ಕಿತ್ತಾಟ ನಡೆಸಿದ ಪರಿಣಾಮ ಮುಜುಗರಕ್ಕೆ ಒಳಗಾದ ಕೇಂದ್ರ ಸರ್ಕಾರ ಇಬ್ಬರನ್ನು ಅಕ್ಟೋಬರ್ 23 ರಂದು ಕಡ್ಡಾಯ ರಜೆ ಮೇಲೆ ಕಳುಹಿಸಿತ್ತು.

    ಕಿತ್ತಾಟ ಆರಂಭಗೊಂಡಿದ್ದು ಹೇಗೆ?
    1979ರ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ವರ್ಮಾ 2017ರ ಫೆಬ್ರವರಿಯಲ್ಲಿ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. 2016ರಲ್ಲಿ ಸಿಬಿಐಗೆ ನೇಮಕವಾಗಿದ್ದ ರಾಕೇಶ್ ಆಸ್ಥಾನಾ 2017ರಲ್ಲಿ ಸಿಬಿಐ ವಿಶೇಷ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ಭಡ್ತಿ ನೀಡಿತು. ಸಿಬಿಐಗೆ ವಿಶೇಷ ನಿರ್ದೇಶಕರನ್ನಾಗಿ ನೇಮಕವಾಗಿದ್ದು ಇದೇ ಮೊದಲು. ಭ್ರಷ್ಟಾಚಾರ ಆರೋಪವಿರುವ ರಾಕೇಶ್ ಆಸ್ಥಾನಾ ನೇಮಕಕ್ಕೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿದರು. ಆಸ್ಥಾನಾ ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದ ದಿನದಿಂದಲೂ ಶುರುವಾದ ಈ ಒಳ ಜಗಳ ಈಗ ಇಲ್ಲಿಯವರೆಗೆ ತಲುಪಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

    ರಾಕೇಶ್ ಆಸ್ಥಾನಾ ಮೇಲಿರುವ ಆರೋಪ ಏನು?
    ಅಕ್ರಮ ಹಣ ವರ್ಗಾವಣೆ ಪ್ರಕರಣ ಎಸಗಿದ ಆರೋಪದ ಅಡಿ ಸ್ಟರ್ಲಿಂಗ್ ಬಯೋಟಿಕ್ ಕಂಪನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ದಾಳಿ ವೇಳೆ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ರಾಕೇಶ್ ಆಸ್ಥಾನಾ ಹೆಸರಿದೆ. ಈ ಪ್ರಕರಣದಲ್ಲಿ ಆಸ್ಥಾನಾ 3 ಕೋಟಿ ರೂ. ಲಂಚ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸಿಬಿಐ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದು, ಈ ಎಫ್‍ಐಆರ್ ನಲ್ಲಿ ಆಸ್ಥಾನಾ ಹೆಸರು ಇಲ್ಲ.

    ಕಿತ್ತಾಟ ಜಾಸ್ತಿಯಾಗಿದ್ದು ಹೇಗೆ?
    ಭ್ರಷ್ಟಾಚಾರ ಆರೋಪವಿರುವ ರಾಕೇಶ್ ಆಸ್ಥಾನಾ ನೇಮಕಕ್ಕೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿದ್ದರು. ಸ್ಟರ್ಲಿಂಗ್ ಬಯೋಟಿಕ್ ಕಂಪನಿಯ ತನಿಖೆ ವೇಳೆ ಮೂಗು ತೂರಿಸದಂತೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ, ರಾಕೇಶ್ ಆಸ್ಥಾನಾಗೆ ಸೂಚಿಸಿದ್ದರು. ವರ್ಮಾ ಮಾತನ್ನೇ ಪರಿಗಣಿಸದೇ ಆಸ್ಥಾನಾ ಸಿಬಿಐ ಕಚೇರಿಯಲ್ಲಿ ಪೂರ್ಣ ಪ್ರಮಾಣದ ಮುಖ್ಯಸ್ಥರಂತೆ ವರ್ತಿಸಲು ಆರಂಭಿಸಿದ್ದರು. ಸಿಬಿಐನಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಕುರಿತು ಸಭೆ ಕರೆಯುವುದು, ಅಧಿಕಾರಗಳ ಜೊತೆ ಚರ್ಚೆ ನಡೆಸಲು ಆರಂಭಿಸಿದ್ದರು. ಅಸ್ಥಾನ ಅಲೋಕ್ ವರ್ಮಾ ಅವರನ್ನ ಟಾರ್ಗೆಟ್ ಮಾಡಲು ಶುರು ಮಾಡಿದ್ದು ಸಿಬಿಐ ಕಚೇರಿಯೋಳಗೆ ಪರಿಸ್ಥಿತಿ ಕೆಟ್ಟು ಈ ಹಂತಕ್ಕೆ ಬಂದು ನಿಲ್ಲಲು ಬಹುದೊಡ್ಡ ಕಾರಣ ಎಂದು ವರದಿಯಾಗಿದೆ.

    ರಾಕೇಶ್ ಆಸ್ಥಾನಾ ಯಾರು?
    ಅಸ್ಥಾನ 1984 ರ ಗುಜರಾತ್ ಕೇಡರ್ನ ಐಪಿಎಸ್ ಅಧಿಕಾರಿ. ಆರ್‍ಜೆಡೆ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಅವರ ಬಹುಕೋಟಿ ಮೇವು ಹಗರಣ, ಗುಜರಾತ್ ನ ಗೋದ್ರಾ ಹತ್ಯಾಕಾಂಡ, ಹಾಗೂ 2008 ರಲ್ಲಿ ನಡೆದ ಅಹ್ಮದಾಬಾದ್ ಬಾಂಬ್ ಬ್ಲಾಸ್ಟ್ ಪ್ರಕರಣಗಳ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಹಗರಣ ಎಂದು ಕರೆಯಲಾಗುವ ಅಗಸ್ತವೆಸ್ಟ್‍ಲ್ಯಾಂಡ್, ಕಲ್ಲಿದ್ದಲು ಹಗರಣ ಹಾಗೂ ಬ್ಯಾಂಕುಗಳಿಗೆ ವಂಚಿಸಿ ವಿದೇಶ ಸೇರಿರುವ ಉದ್ಯಮಿ ವಿಜಯ ಮಲ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿದ್ದಾರೆ. ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಅಧಿಕಾರಿಯೂ ಆಗಿದ್ದರು. ಜಾರಿ ನಿರ್ದೇಶನಾಲಯ(ಇಡಿ)ಯಲ್ಲೂ ಆಸ್ಥಾನಾ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದರು.

    ಅಲೋಕ್ ವರ್ಮಾ ಯಾರು?
    ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೂಡಾ ಪ್ರಧಾನಿ ಆಪ್ತ ವಲಯದ ಅಧಿಕಾರಿ. 2016 ರಲ್ಲಿ ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿದ್ದ ಆರ್.ಕೆ ದತ್ತಾ ಅವರನ್ನ ಕೇಂದ್ರ ಗೃಹ ಇಲಾಖೆಗೆ ತುರ್ತು ವರ್ಗಾವಣೆ ಮಾಡಲಾಗಿತ್ತು. ಆಗ ನಿರ್ದೇಶಕರಾಗಿದ್ದ ಅನಿಲ್ ಸಿನ್ಹಾ ಅವಧಿ ಬಳಿಕ ದತ್ತಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನಕ್ಕೆ ಬಡ್ತಿ ನೀಡಲು ಪ್ಲಾನ್ ಮಾಡಲಾಗಿತ್ತು ಆದರೆ ಗೃಹ ಇಲಾಖೆಗೆ ದತ್ತಾ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಸಿಬಿಐ ನಿರ್ದೇಶಕ ಹುದ್ದೆಗೆ 2017ರ ಜನವರಿಯಲ್ಲಿ ವರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು. ಅಲೋಕ್ ವರ್ಮಾ ಕೂಡಾ ಪ್ರಭಾವಿ ಅಧಿಕಾರಿಯಾಗಿದ್ದು ರಾಷ್ಟ್ರೀಯ ಭದ್ರತಾ ಸಲಹೆಗಾರ ಹಾಗೂ ಮೋದಿ ಆಪ್ತ ಎಂದು ಕರೆಯಲ್ಪಡುವ ಅಜಿತ್ ದೊವೇಲ್ ಅವರ ಆಪ್ತ.

    ಕಿತ್ತಾಟ ಬಯಲಾಗಿದ್ದು ಹೇಗೆ?
    ಸಿಬಿಐ ಕಚೇರಿ ಒಳಗೆ ಆಂತರಿಕವಾಗಿ ನಡೆಯುತ್ತಿದ್ದ ಈ ಜಗಳ ಮೊದಲು ಹೊರ ಬಂದಿದ್ದು ಈ ವರ್ಷದ ಜುಲೈನಲ್ಲಿ. ಕೇಂದ್ರ ವಿಚಕ್ಷಣ ದಳ(ಸಿವಿಸಿ) ಜುಲೈ 12 ರಂದು ಸಿಬಿಐ ನೇಮಕಾತಿ ಸಂಬಂಧಿಸಿದ ಸಭೆಗೆ ಭಾಗವಹಿಸುವಂತೆ ಸಿಬಿಐ ನಿರ್ದೇಶಕರಿಗೆ ಪತ್ರ ಬರೆದಿತ್ತು. ಈ ವೇಳೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ರಜೆ ಮೇಲಿದ್ದ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಜುಲೈ 19ಕ್ಕೆ ಸಭೆ ನಿಗದಿಪಡಿಸುವಂತೆ ಸಿವಿಸಿಗೆ ಮರು ಪತ್ರ ಬರೆದಿದ್ದರು. ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಆಸ್ಥಾನಾ ಅವರ ಹೆಸರು ಭ್ರಷ್ಟಾಚಾರ ಪ್ರಕರಣದಲ್ಲಿ ಕೇಳಿ ಬಂದ ಹಿನ್ನೆಲೆ ಅವರು ಸಭೆಯಲ್ಲಿ ಪಾಲ್ಗೊಳ್ಳುವ ಅಧಿಕಾರವಿಲ್ಲ ಎಂದು ವರ್ಮಾ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದರಿಂದ ಆಕ್ರೋಶಗೊಂಡ ಆಸ್ಥಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಅಲೋಕ್ ವರ್ಮಾ ಸಹ ಭಾಗಿಯಾಗಿದ್ದಾರೆ ಎಂದು ಪ್ರತ್ಯಾರೋಪ ಮಾಡಿ ಕ್ಯಾಬಿನೆಟ್ ಕಾರ್ಯದರ್ಶಿ ಪತ್ರ ಬರೆದಿದ್ದರು ಈ ಮೂಲಕ ನಾಲ್ಕು ಗೋಡೆ ಮಧ್ಯೆ ನಡೆಯುತ್ತಿದ್ದ ಇಬ್ಬರು ಉನ್ನತ ಅಧಿಕಾರಿಗಳ ಬಯಲಿಗೆ ಬಂದಿತ್ತು.

    ಅಲೋಕ್ ವರ್ಮಾ ಮೇಲಿರುವ ಆರೋಪ ಏನು?
    ಕ್ಯಾಬಿನೆಟ್ ಕಾರ್ಯದರ್ಶಿ ಬರೆದ ಪತ್ರದಲ್ಲಿ, ದೇಶದ ಬಹುದೊಡ್ಡ ಮಾಂಸ ರಫ್ತುದಾರ, ಹವಾಲಾ ದಂಗೆಕೋರ, ಉದ್ಯಮಿ ಮೋಯಿನ್ ಖುರೇಷಿ ಪ್ರಕರಣ ತನಿಖೆ ನಡೆಸಲು ಹೈದರಾಬಾದ್ ಮೂಲದ ಉದ್ಯಮಿ ಸತೀಶ್ ಸಾನಾ ಅವರಿಂದ ಎರಡು ಕೋಟಿ ಲಂಚ ಪಡೆದಿದ್ದಾರೆ ಎಂದು ಅಸ್ತಾನಾ ಆರೋಪಿಸಿದ್ದರು. ಖರೇಷಿ ಪ್ರಕರಣದಲ್ಲಿ ಸಾನಾ ಭಾಗಿಯಾಗಿದ್ದು ಪ್ರಕರಣದಿಂದ ಕೈ ಬಿಡಲು ವರ್ಮಾ ಲಂಚ ಪಡೆದಿದ್ದಾರೆ. ಈ ಪ್ರಕರಣದ ಆರೋಪಿಯಾದ ಸತೀಶ್ ಸಾನಾ ಬಂಧಿಸಲು ಹೋದಾಗ ಪ್ರಕ್ರಿಯೆ ನಡೆಸದಂತೆ ಅಲೋಕ್ ವರ್ಮಾ ಸೂಚಿಸಿದ್ದರು ಎಂದು ಅಸ್ಥಾನಾ ಕ್ಯಾಬಿನೆಟ್ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದರು.

    ಪ್ರಕರಣ ದಿಢೀರ್ ತಿರುವು ಪಡೆದಿದ್ದು ಹೇಗೆ?
    ಬಂಧಿಸಿ ವಿಚಾರಣೆ ವೇಳೆ ಸತೀಶ್ ಸಾನಾ ನಾನು ಆಸ್ಥಾನಗೆ ಪ್ರಕರಣದಿಂದ ಕೈ ಬಿಡುವಂತೆ 3 ಕೋಟಿ ರೂ. ಹಣದ ಡೀಲ್ ನಡೆದಿದೆ ಎಂದು ಬಾಯಿಬಿಟ್ಟಿದ್ದ. ಈ ಪ್ರಕರಣ ಸಂಬಂಧ ದುಬೈ ಮೂಲದ ಮಧ್ಯವರ್ತಿ ಮನೋಜ್ ಪ್ರಸಾದ್ ಎಂಬಾತನನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆತನ ವಿಚಾರಣೆ ವೇಳೆ 1.75 ಕೋಟಿ ಲಂಚದ ಹಣವನ್ನು ಸಂಗ್ರಹಿಸಲು ದೆಹಲಿಗೆ ಬಂದಿರುವುದಾಗಿ ಮನೋಜ್ ಪ್ರಸಾದ್ ತಿಳಿಸಿದ್ದ. ಅಷ್ಟೇ ಅಲ್ಲದೇ ಕಳೆದ ವರ್ಷ ಅಸ್ಥಾನಾ ಲಂಡನ್ ಗೆ ಬಂದಿದ್ದಾಗ ಮನೋಜ್ ಜೊತೆ ನನ್ನ ನಿವಾಸದಲ್ಲಿ ತಂಗಿದ್ದರು ಎಂಸು ಸತೀಶ್ ಸಾನಾ ಹೇಳಿದ್ದ ಎನ್ನಲಾಗಿದೆ. ಈ ಹೇಳಿಕೆಯನ್ನು ಆಧಾರಿಸಿ ಸಿಬಿಐ ರಾಕೇಶ್ ಅಸ್ಥಾನಾ ವಿರುದ್ಧ ಎಫ್‍ಐಆರ್ ದಾಖಲಿಸುತ್ತದೆ. ಪ್ರಕರಣದಲ್ಲಿ ಅಸ್ಥಾನಾಗೆ ಸಹಾಯ ಮಾಡಿದ ಆರೋಪದ ಮೇಲೆ ಸಿಬಿಐ ಅಧಿಕಾರಿ ಡಿಎಸ್ಪಿ ದೇವೇಂದ್ರ ಕುಮಾರ್ ಅವರ ದೆಹಲಿಯ ಸಿಬಿಐ ಪ್ರಧಾನ ಕಚೇರಿ ಮೇಲೆ ಸಿಬಿಐ ಸೋಮವಾರ ದಾಳಿ ನಡೆಸಿ ಬಂಧಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಬಿಐ ಅಧಿಕಾರಿಗಳಿಗೆ ಕಡ್ಡಾಯ ರಜೆ: ಕಿತ್ತಾಟ ಆರಂಭವಾಗಿದ್ದು ಹೇಗೆ? ಇಬ್ಬರ ಮೇಲಿರುವ ಆರೋಪ ಏನು?

    ಸಿಬಿಐ ಅಧಿಕಾರಿಗಳಿಗೆ ಕಡ್ಡಾಯ ರಜೆ: ಕಿತ್ತಾಟ ಆರಂಭವಾಗಿದ್ದು ಹೇಗೆ? ಇಬ್ಬರ ಮೇಲಿರುವ ಆರೋಪ ಏನು?

    ನವದೆಹಲಿ: ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸಿಬಿಐ ಅಧಿಕಾರಿಗಳು ಕಿತ್ತಾಟ ನಡೆಸಿದ್ದು, ಇಬ್ಬರನ್ನು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

    ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ, ಸಿಬಿಐನ ಹಂಗಾಮಿ ನಿರ್ದೇಶಕರನ್ನಾಗಿ ಎಂ ನಾಗೇಶ್ವರ್ ರಾವ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ನೇಮಕ ಮಾಡಿದೆ.

    ಕಿತ್ತಾಟ ಆರಂಭಗೊಂಡಿದ್ದು ಹೇಗೆ?
    1979ರ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ವರ್ಮಾ 2017ರ ಫೆಬ್ರವರಿಯಲ್ಲಿ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. 2016ರಲ್ಲಿ ಸಿಬಿಐಗೆ ನೇಮಕವಾಗಿದ್ದ ರಾಕೇಶ್ ಆಸ್ಥಾನಾ 2017ರಲ್ಲಿ ಸಿಬಿಐ ವಿಶೇಷ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ಭಡ್ತಿ ನೀಡಿತು. ಸಿಬಿಐಗೆ ವಿಶೇಷ ನಿರ್ದೇಶಕರನ್ನಾಗಿ ನೇಮಕವಾಗಿದ್ದು ಇದೇ ಮೊದಲು. ಭ್ರಷ್ಟಾಚಾರ ಆರೋಪವಿರುವ ರಾಕೇಶ್ ಆಸ್ಥಾನಾ ನೇಮಕಕ್ಕೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿದರು. ಆಸ್ಥಾನಾ ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದ ದಿನದಿಂದಲೂ ಶುರುವಾದ ಈ ಒಳ ಜಗಳ ಈಗ ಇಲ್ಲಿಯವರೆಗೆ ತಲುಪಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

    ರಾಕೇಶ್ ಆಸ್ಥಾನಾ ಮೇಲಿರುವ ಆರೋಪ ಏನು?
    ಅಕ್ರಮ ಹಣ ವರ್ಗಾವಣೆ ಪ್ರಕರಣ ಎಸಗಿದ ಆರೋಪದ ಅಡಿ ಸ್ಟರ್ಲಿಂಗ್ ಬಯೋಟಿಕ್ ಕಂಪನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ದಾಳಿ ವೇಳೆ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ರಾಕೇಶ್ ಆಸ್ಥಾನಾ ಹೆಸರಿದೆ. ಈ ಪ್ರಕರಣದಲ್ಲಿ ಆಸ್ಥಾನಾ 3 ಕೋಟಿ ರೂ. ಲಂಚ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸಿಬಿಐ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದು, ಈ ಎಫ್‍ಐಆರ್ ನಲ್ಲಿ ಆಸ್ಥಾನಾ ಹೆಸರು ಇಲ್ಲ.

    ಕಿತ್ತಾಟ ಜಾಸ್ತಿಯಾಗಿದ್ದು ಹೇಗೆ?
    ಭ್ರಷ್ಟಾಚಾರ ಆರೋಪವಿರುವ ರಾಕೇಶ್ ಆಸ್ಥಾನಾ ನೇಮಕಕ್ಕೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿದ್ದರು. ಸ್ಟರ್ಲಿಂಗ್ ಬಯೋಟಿಕ್ ಕಂಪನಿಯ ತನಿಖೆ ವೇಳೆ ಮೂಗು ತೂರಿಸದಂತೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ, ರಾಕೇಶ್ ಆಸ್ಥಾನಾಗೆ ಸೂಚಿಸಿದ್ದರು. ವರ್ಮಾ ಮಾತನ್ನೇ ಪರಿಗಣಿಸದೇ ಆಸ್ಥಾನಾ ಸಿಬಿಐ ಕಚೇರಿಯಲ್ಲಿ ಪೂರ್ಣ ಪ್ರಮಾಣದ ಮುಖ್ಯಸ್ಥರಂತೆ ವರ್ತಿಸಲು ಆರಂಭಿಸಿದ್ದರು. ಸಿಬಿಐನಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಕುರಿತು ಸಭೆ ಕರೆಯುವುದು, ಅಧಿಕಾರಗಳ ಜೊತೆ ಚರ್ಚೆ ನಡೆಸಲು ಆರಂಭಿಸಿದ್ದರು. ಅಸ್ಥಾನ ಅಲೋಕ್ ವರ್ಮಾ ಅವರನ್ನ ಟಾರ್ಗೆಟ್ ಮಾಡಲು ಶುರು ಮಾಡಿದ್ದು ಸಿಬಿಐ ಕಚೇರಿಯೋಳಗೆ ಪರಿಸ್ಥಿತಿ ಕೆಟ್ಟು ಈ ಹಂತಕ್ಕೆ ಬಂದು ನಿಲ್ಲಲು ಬಹುದೊಡ್ಡ ಕಾರಣ ಎಂದು ವರದಿಯಾಗಿದೆ.

    ರಾಕೇಶ್ ಆಸ್ಥಾನಾ ಯಾರು?
    ಅಸ್ಥಾನ 1984 ರ ಗುಜರಾತ್ ಕೇಡರ್ನ ಐಪಿಎಸ್ ಅಧಿಕಾರಿ. ಆರ್‍ಜೆಡೆ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಅವರ ಬಹುಕೋಟಿ ಮೇವು ಹಗರಣ, ಗುಜರಾತ್ ನ ಗೋದ್ರಾ ಹತ್ಯಾಕಾಂಡ, ಹಾಗೂ 2008 ರಲ್ಲಿ ನಡೆದ ಅಹ್ಮದಾಬಾದ್ ಬಾಂಬ್ ಬ್ಲಾಸ್ಟ್ ಪ್ರಕರಣಗಳ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಹಗರಣ ಎಂದು ಕರೆಯಲಾಗುವ ಅಗಸ್ತವೆಸ್ಟ್‍ಲ್ಯಾಂಡ್, ಕಲ್ಲಿದ್ದಲು ಹಗರಣ ಹಾಗೂ ಬ್ಯಾಂಕುಗಳಿಗೆ ವಂಚಿಸಿ ವಿದೇಶ ಸೇರಿರುವ ಉದ್ಯಮಿ ವಿಜಯ ಮಲ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿದ್ದಾರೆ. ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಅಧಿಕಾರಿಯೂ ಆಗಿದ್ದರು. ಜಾರಿ ನಿರ್ದೇಶನಾಲಯ(ಇಡಿ)ಯಲ್ಲೂ ಆಸ್ಥಾನಾ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದರು.

    ಅಲೋಕ್ ವರ್ಮಾ ಯಾರು?
    ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೂಡಾ ಪ್ರಧಾನಿ ಆಪ್ತ ವಲಯದ ಅಧಿಕಾರಿ. 2016 ರಲ್ಲಿ ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿದ್ದ ಆರ್.ಕೆ ದತ್ತಾ ಅವರನ್ನ ಕೇಂದ್ರ ಗೃಹ ಇಲಾಖೆಗೆ ತುರ್ತು ವರ್ಗಾವಣೆ ಮಾಡಲಾಗಿತ್ತು. ಆಗ ನಿರ್ದೇಶಕರಾಗಿದ್ದ ಅನಿಲ್ ಸಿನ್ಹಾ ಅವಧಿ ಬಳಿಕ ದತ್ತಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನಕ್ಕೆ ಬಡ್ತಿ ನೀಡಲು ಪ್ಲಾನ್ ಮಾಡಲಾಗಿತ್ತು ಆದರೆ ಗೃಹ ಇಲಾಖೆಗೆ ದತ್ತಾ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಸಿಬಿಐ ನಿರ್ದೇಶಕ ಹುದ್ದೆಗೆ 2017ರ ಜನವರಿಯಲ್ಲಿ ವರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು. ಅಲೋಕ್ ವರ್ಮಾ ಕೂಡಾ ಪ್ರಭಾವಿ ಅಧಿಕಾರಿಯಾಗಿದ್ದು ರಾಷ್ಟ್ರೀಯ ಭದ್ರತಾ ಸಲಹೆಗಾರ ಹಾಗೂ ಮೋದಿ ಆಪ್ತ ಎಂದು ಕರೆಯಲ್ಪಡುವ ಅಜಿತ್ ದೊವೇಲ್ ಅವರ ಆಪ್ತ.

    ಕಿತ್ತಾಟ ಬಯಲಾಗಿದ್ದು ಹೇಗೆ?
    ಸಿಬಿಐ ಕಚೇರಿ ಒಳಗೆ ಆತಂರಿಕವಾಗಿ ನಡೆಯುತ್ತಿದ್ದ ಈ ಜಗಳ ಮೊದಲು ಹೊರ ಬಂದಿದ್ದು ಈ ವರ್ಷದ ಜುಲೈನಲ್ಲಿ. ಕೇಂದ್ರ ವಿಚಕ್ಷಣ ದಳ(ಸಿವಿಸಿ) ಜುಲೈ 12 ರಂದು ಸಿಬಿಐ ನೇಮಕಾತಿ ಸಂಬಂಧಿಸಿದ ಸಭೆಗೆ ಭಾಗವಹಿಸುವಂತೆ ಸಿಬಿಐ ನಿರ್ದೇಶಕರಿಗೆ ಪತ್ರ ಬರೆದಿತ್ತು. ಈ ವೇಳೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ರಜೆ ಮೇಲಿದ್ದ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಜುಲೈ 19ಕ್ಕೆ ಸಭೆ ನಿಗದಿಪಡಿಸುವಂತೆ ಸಿವಿಸಿಗೆ ಮರು ಪತ್ರ ಬರೆದಿದ್ದರು. ವಿಶೇಷ ನಿರ್ದೇಶಕರಾಗಿದ್ದ ರಾಕೇಶ್ ಆಸ್ಥಾನಾ ಅವರ ಹೆಸರು ಭ್ರಷ್ಟಾಚಾರ ಪ್ರಕರಣದಲ್ಲಿ ಕೇಳಿ ಬಂದ ಹಿನ್ನೆಲೆ ಅವರು ಸಭೆಯಲ್ಲಿ ಪಾಲ್ಗೊಳ್ಳುವ ಅಧಿಕಾರವಿಲ್ಲ ಎಂದು ವರ್ಮಾ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದರಿಂದ ಆಕ್ರೋಶಗೊಂಡ ಆಸ್ಥಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಅಲೋಕ್ ವರ್ಮಾ ಸಹ ಭಾಗಿಯಾಗಿದ್ದಾರೆ ಎಂದು ಪ್ರತ್ಯಾರೋಪ ಮಾಡಿ ಕ್ಯಾಬಿನೆಟ್ ಕಾರ್ಯದರ್ಶಿ ಪತ್ರ ಬರೆದಿದ್ದರು ಈ ಮೂಲಕ ನಾಲ್ಕು ಗೋಡೆ ಮಧ್ಯೆ ನಡೆಯುತ್ತಿದ್ದ ಇಬ್ಬರು ಉನ್ನತ ಅಧಿಕಾರಿಗಳ ಬಯಲಿಗೆ ಬಂದಿತ್ತು.

    ಅಲೋಕ್ ವರ್ಮಾ ಮೇಲಿರುವ ಆರೋಪ ಏನು?
    ಕ್ಯಾಬಿನೆಟ್ ಕಾರ್ಯದರ್ಶಿ ಬರೆದ ಪತ್ರದಲ್ಲಿ, ದೇಶದ ಬಹುದೊಡ್ಡ ಮಾಂಸ ರಫ್ತುದಾರ, ಹವಾಲಾ ದಂಗೆಕೋರ, ಉದ್ಯಮಿ ಮೋಯಿನ್ ಖುರೇಷಿ ಪ್ರಕರಣ ತನಿಖೆ ನಡೆಸಲು ಹೈದರಾಬಾದ್ ಮೂಲದ ಉದ್ಯಮಿ ಸತೀಶ್ ಸಾನಾ ಅವರಿಂದ ಎರಡು ಕೋಟಿ ಲಂಚ ಪಡೆದಿದ್ದಾರೆ ಎಂದು ಅಸ್ತಾನಾ ಆರೋಪಿಸಿದ್ದರು. ಖರೇಷಿ ಪ್ರಕರಣದಲ್ಲಿ ಸಾನಾ ಭಾಗಿಯಾಗಿದ್ದು ಪ್ರಕರಣದಿಂದ ಕೈ ಬಿಡಲು ವರ್ಮಾ ಲಂಚ ಪಡೆದಿದ್ದಾರೆ. ಈ ಪ್ರಕರಣದ ಆರೋಪಿಯಾದ ಸತೀಶ್ ಸಾನಾ ಬಂಧಿಸಲು ಹೋದಾಗ ಪ್ರಕ್ರಿಯೆ ನಡೆಸದಂತೆ ಅಲೋಕ್ ವರ್ಮಾ ಸೂಚಿಸಿದ್ದರು ಎಂದು ಅಸ್ಥಾನಾ ಕ್ಯಾಬಿನೆಟ್ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದರು.

    ಪ್ರಕರಣ ದಿಢೀರ್ ತಿರುವು ಪಡೆದಿದ್ದು ಹೇಗೆ?
    ಬಂಧಿಸಿ ವಿಚಾರಣೆ ವೇಳೆ ಸತೀಶ್ ಸಾನಾ ನಾನು ಆಸ್ಥಾನಗೆ ಪ್ರಕರಣದಿಂದ ಕೈ ಬಿಡುವಂತೆ 3 ಕೋಟಿ ರೂ. ಹಣದ ಡೀಲ್ ನಡೆದಿದೆ ಎಂದು ಬಾಯಿಬಿಟ್ಟಿದ್ದ. ಈ ಪ್ರಕರಣ ಸಂಬಂಧ ದುಬೈ ಮೂಲದ ಮಧ್ಯವರ್ತಿ ಮನೋಜ್ ಪ್ರಸಾದ್ ಎಂಬಾತನನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಆತನ ವಿಚಾರಣೆ ವೇಳೆ 1.75 ಕೋಟಿ ಲಂಚದ ಹಣವನ್ನು ಸಂಗ್ರಹಿಸಲು ದೆಹಲಿಗೆ ಬಂದಿರುವುದಾಗಿ ಮನೋಜ್ ಪ್ರಸಾದ್ ತಿಳಿಸಿದ್ದ. ಅಷ್ಟೇ ಅಲ್ಲದೇ ಕಳೆದ ವರ್ಷ ಅಸ್ಥಾನಾ ಲಂಡನ್ ಗೆ ಬಂದಿದ್ದಾಗ ಮನೋಜ್ ಜೊತೆ ನನ್ನ ನಿವಾಸದಲ್ಲಿ ತಂಗಿದ್ದರು ಎಂಸು ಸತೀಶ್ ಸಾನಾ ಹೇಳಿದ್ದ ಎನ್ನಲಾಗಿದೆ. ಈ ಹೇಳಿಕೆಯನ್ನು ಆಧಾರಿಸಿ ಸಿಬಿಐ ರಾಕೇಶ್ ಅಸ್ಥಾನಾ ವಿರುದ್ಧ ಎಫ್‍ಐಆರ್ ದಾಖಲಿಸುತ್ತದೆ. ಪ್ರಕರಣದಲ್ಲಿ ಅಸ್ಥಾನಾಗೆ ಸಹಾಯ ಮಾಡಿದ ಆರೋಪದ ಮೇಲೆ ಸಿಬಿಐ ಅಧಿಕಾರಿ ಡಿಎಸ್ಪಿ ದೇವೇಂದ್ರ ಕುಮಾರ್ ಅವರ ದೆಹಲಿಯ ಸಿಬಿಐ ಪ್ರಧಾನ ಕಚೇರಿ ಮೇಲೆ ಸಿಬಿಐ ಸೋಮವಾರ ದಾಳಿ ನಡೆಸಿ ಬಂಧಿಸಲಾಗಿದೆ.
    – ಶಬ್ಬೀರ್ ನಿಡಗುಂದಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv