Tag: ಅಲ್ತಾಫ್ ಖಾನ್

  • ಕೈ ನಾಯಕ ಅಲ್ತಾಫ್‌ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ

    ಕೈ ನಾಯಕ ಅಲ್ತಾಫ್‌ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ

    ಬೆಂಗಳೂರು: ಕಾಂಗ್ರೆಸ್ ಮುಖಂಡ ಅಲ್ತಾಫ್‌ ಖಾನ್(Congress Leader Altaf Khan) ಮೇಲೆ ದಾಳಿ ನಡೆಸಲು ಬಂದಿದ್ದಾರೆ ಎನ್ನಲಾದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಶನಿವಾರ ರಾತ್ರಿ 10 ಗಂಟೆಯ ವೇಳೆ ಗೋರಿಪಾಳ್ಯದಲ್ಲಿರುವ ಅಲ್ತಾಫ್‌ ಖಾನ್ ಮನೆ ಬಳಿ ಒಂದು ರಿಕ್ಷಾ ಬಂದಿತ್ತು. ರಿಕ್ಷಾದಲ್ಲಿದ್ದ ವ್ಯಕ್ತಿಗಳು ಬಹಳ ಹೊತ್ತು ಅಲ್ತಾಫ್‌ಗೆ ಕಾದಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

    ಅಲ್ತಾಫ್‌ ಅವರು ಮನೆಯಿಂದ ಹೊರ ಬಾರದ ಕಾರಣ ಬಚಾವ್ ಆದ ಎಂದು ಗುಂಪು ಮಾತನಾಡಿಕೊಂಡು ಹೋಗುತ್ತಿತ್ತು. ರಿಕ್ಷಾ ನಿಂತ ಕೂಡಲೇ ಅನುಮಾನದಿಂದ ನೋಡುತ್ತಿದ್ದ ಸ್ಥಳೀಯರು ಯುವಕರ ಮಾತುಗಳನ್ನು ಕೇಳಿ ಹಿಂಬಾಲಿಸಿದ್ದಾರೆ.

    ತಮ್ಮನ್ನು ಹಿಂಬಾಲಿಸುವುದನ್ನು ನೋಡಿ ಗುಂಪಿನಲ್ಲಿದ್ದ ಓರ್ವ ಪರಾರಿಯಾಗಿದ್ದು, ಮೂವರನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ರಿಕ್ಷಾವನ್ನು ಜಾಲಾಡಿದಾಗ ಮಾರಕಾಸ್ತ್ರ ಪತ್ತೆಯಾಗಿದೆ. ಜೆ.ಜೆ.ನಗರ ಪೊಲೀಸರು(JJ Nagar Police) ಈಗ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಚಿವ ಜಮೀರ್ ಅಹ್ಮದ್ ಒಬ್ಬ ಕಂತ್ರಿ, ರಾಬರ್: ಅಲ್ತಾಫ್ ಖಾನ್

    ಸಚಿವ ಜಮೀರ್ ಅಹ್ಮದ್ ಒಬ್ಬ ಕಂತ್ರಿ, ರಾಬರ್: ಅಲ್ತಾಫ್ ಖಾನ್

    ಬೆಂಗಳೂರು: ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಒಬ್ಬ ಕಂತ್ರಿ. ನನ್ನ ಬೆಳವಣಿಗೆ ಸಹಿಸದೇ ಪರೋಕ್ಷವಾಗಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಅಲ್ತಾಫ್ ಖಾನ್ ಕಿಡಿಕಾರಿದ್ದಾರೆ.

    ಪೊಲೀಸ್ ಬಂಧನದಿಂದ ಹೊರಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬಂಧನದ ಹಿಂದೆ ಸಚಿವ ಜಮೀರ್ ಅಹ್ಮದ್ ಕೈವಾಡವಿದೆ. ನನ್ನನ್ನು ಜೈಲಿಗೆ ಕಳಿಸಲು ಜಮೀರ್ ಅಹ್ಮದ್ ಪ್ರಯತ್ನ ಮಾಡುತ್ತಿದ್ದಾರೆ. ಸಚಿವರ ಬಣ್ಣವನ್ನು ಕೆಲವೇ ದಿನಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದು ಹರಿಹಾಯ್ದರು.

    ಸಚಿವ ಜಮೀರ್ ಅಹ್ಮದ್ ಅವರು ವಕೀಲ ಇಬ್ರಾಹಿಂ ಮೂಲಕ ನನ್ನ ಮೇಲೆ ದೂರು ಕೊಡಿಸಿದ್ದಾರೆ. ವಕೀಲ ಇಬ್ರಾಹಿಂ ಕಳೆದ ಐದು ವರ್ಷಗಳಿಂದ ನನ್ನ ಜೊತೆ ಇದ್ದ ಎಂದ ಅವರು, ಜಮೀರ್ ಅಹ್ಮದ್ ಒಬ್ಬ ರಾಬರ್, ರಾಮನಗರದಲ್ಲಿ ರಾಬರಿ ಮಾಡಿದ್ದ ಎಂದು ಆರೋಪಿಸಿದರು.

    ಏನಿದು ಪ್ರಕರಣ:
    ಅಲ್ತಾಫ್ ಖಾನ್ ಹೋಟೆಲ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸರಿಂದ ತಡರಾತ್ರಿ ಠಾಣೆಗೆ ಕರೆಸಿ ಅಲ್ತಾಫ್ ವಿಚಾರಣೆ ನಡೆಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ್ದು, ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲೇ ಬೇಲ್ ಪಡೆದು ಅಲ್ತಾಫ್ ಖಾನ್ ರಿಲೀಸ್ ಆಗಿದ್ದರು.

    ಅಲ್ತಾಫ್ ಖಾನ್ ಬಂಧನದ ಹಿಂದೆ ಮೈತ್ರಿ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದು ಆರೋಪಗಳು ಕೇಳಿ ಬಂದಿತ್ತು. ಈಗ ಅಲ್ತಾಫ್ ಖಾನ್ ಅವರೇ ಆ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾತ್ರೋರಾತ್ರಿ ಜೆಡಿಎಸ್ ಮುಖಂಡನ ಬಂಧನ, ಬಿಡುಗಡೆ

    ರಾತ್ರೋರಾತ್ರಿ ಜೆಡಿಎಸ್ ಮುಖಂಡನ ಬಂಧನ, ಬಿಡುಗಡೆ

    ಬೆಂಗಳೂರು: ಜೆಡಿಎಸ್ ಮುಖಂಡ ಅಲ್ತಾಫ್ ಖಾನ್ ರಾತ್ರೋರಾತ್ರಿ ಬಂಧನವಾಗಿ ಜಾಮೀನಿನ ಮೇಲೆ ರಿಲೀಸ್ ಆಗಿದ್ದಾರೆ.

    ಹೋಟೆಲ್‍ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಉಪ್ಪಾರಪೇಟೆ ಪೊಲೀಸರು ತಡರಾತ್ರಿ ಅಲ್ತಾಫ್ ಖಾನ್ ನನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಅಲ್ತಾಫ್ ಖಾನ್ ಜಾಮೀನು ಪಡೆದು ರಿಲೀಸ್ ಆಗಿದ್ದಾರೆ ಎಂದು ಅಲ್ತಾಫ್ ಖಾನ್ ಬೆಂಬಲಿಗರಿಂದ ಮಾಹಿತಿ ತಿಳಿದು ಬಂದಿದೆ.

    ಅಲ್ತಾಫ್ ಖಾನ್ ಹೋಟೆಲ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸರಿಂದ ತಡರಾತ್ರಿ ಠಾಣೆಗೆ ಕರೆಸಿ ಅಲ್ತಾಫ್ ವಿಚಾರಣೆ ನಡೆಸಿದ್ದಾರೆ. ಬಳಿಕ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ್ದು, ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲೇ ಬೇಲ್ ಪಡೆದು ಅಲ್ತಾಫ್ ಖಾನ್ ರಿಲೀಸ್ ಆಗಿದ್ದಾರೆ.

    ಅಲ್ತಾಫ್ ಖಾನ್ ಬಂಧನದ ಹಿಂದೆ ಮೈತ್ರಿ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದು ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಭಾವಿ ಸಚಿವರ ಕೈವಾಡದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಅಲ್ತಾಪ್ ಖಾನ್ ಬೆಂಬಲಿಗರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಿ: ಅಲ್ತಾಫ್ ಖಾನ್ ದೂರು

    ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಿ: ಅಲ್ತಾಫ್ ಖಾನ್ ದೂರು

    ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಖಾನ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

    ಈ ದೂರಿಗೆ ಚುನಾವಣಾ ಅಧಿಕಾರಿ ರೂಪಾ ಪ್ರತಿಕ್ರಿಯಿಸಿ, ಜಮೀರ್ ನಾಮಪತ್ರದಲ್ಲಿ ಸಣ್ಣ ಪುಟ್ಟ ಲೋಪ ದೋಷಗಳಿದ್ದವು. ನಾವು ನೋಟಿಸ್ ಕೊಟ್ಟಿದ್ದೆವು, ಸರಿ ಪಡಿಸಿದ್ದಾರೆ. ರಾಜಿನಾಮೆಗೆ ಸಂಬಂಧಿಸಿದಂತೆ ಸ್ಪೀಕರ್ ಬಳಿ ಪ್ರಕರಣ ಬಾಕಿ ಇದೆ. ಪ್ರಕರಣ ಇತ್ಯರ್ಥ ಆಗದ ಕಾರಣ ನಾವು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಏನಾದರು ಆಕ್ಷೇಪಣೆಗಳಿದ್ದರೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದು ಎಂದು ತಿಳಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಜಮೀರ್ ಶಾಸಕ ಸ್ಥಾನದ ಅನರ್ಹತೆ ವಿಚಾರಣೆ ಹೈ ಕೋರ್ಟ್ ನಲ್ಲಿ ನಡೆಯುತ್ತಿದೆ. ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದಾರೆ ಹೊರತು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಈ ವಿಚಾರವನ್ನ ಅಫಿಡವಿಟ್ ನಲ್ಲಿ ಚುನಾವಣಾಧಿಕಾರಿಗೆ ಸಲ್ಲಿಸಿಲ್ಲ. ಅಫಿಡವಿಟ್ ನ ಯಾವುದೇ ಕಲಂ ಗಳನ್ನ ಖಾಲಿ ಬಿಡುವಂತಿಲ್ಲ. ಆದರೆ ಅಫಿಡವಿಟ್ ನಲ್ಲಿ ಹೆಂಡತಿಯ ಆಸ್ತಿ ಕಲಂ ನಲ್ಲಿ ಏನನ್ನೂ ಬರೆದಿಲ್ಲ. ಹಾಗಾಗಿ ಜಮೀರ್ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಅಲ್ತಾಫ್ ಖಾನ್ ದೂರಿನಲ್ಲಿ ಮನವಿ ಮಾಡಿಕೊಂಡಿದ್ದರು.