Tag: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ

  • ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಜಮೀರ್ ಸೂಚನೆ

    ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಜಮೀರ್ ಸೂಚನೆ

    ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ (Education) ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ (Zameer Ahmed) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಸೋಮವಾರ ಬೆಂಗಳೂರಿನಲ್ಲಿ (Bengaluru) ಅವರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ (Minority Welfare Department) ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಯಾವುದೇ ಹಂತದಲ್ಲೂ ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಮುಖ್ಯವಾಗಿ ಉನ್ನತ ಶಿಕ್ಷಣದ ವೇಳೆ ಶಿಕ್ಷಣದಿಂದ ದೂರ ಸರಿಯದಂತೆ ನೋಡಿಕೊಳ್ಳಬೇಕು. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಾಲೆ, ಕಾಲೇಜ್, ವಸತಿ ಶಾಲೆ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

    ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕಳೆದ 5 ವರ್ಷಗಳ ಕಾಮಗಾರಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಿದ ಹಣದ ಮಾಹಿತಿಯನ್ನು ಕೇಳಿದ್ದಾರೆ. ಅಲ್ಲದೇ ಮುಂದೆ ಕಾಲೋನಿಗಳ ಅಭಿವೃದ್ಧಿ ಪ್ರಸ್ತಾವನೆಗಳು ಬಂದರೆ ಸ್ಥಳಕ್ಕೆ ಹೋಗಿ ಆ ಕಾಮಗಾರಿಯ ಅಗತ್ಯದ ಬಗ್ಗೆ ಪರಿಶೀಲಿಸಬೇಕು. ಅದರ ವರದಿ ನೀಡಲು ತಜ್ಞರ ತಂಡ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

    ಕಾಮಗಾರಿ ಪೂರ್ಣಗೊಂಡು ಬಿಲ್ ಪಾವತಿ ಹಂತದಲ್ಲೂ ಇದೇ ತಂಡ ಪರಿಶೀಲಿಸಿ ವರದಿ ನೀಡುವಂತಾಗಬೇಕು. ರಾಜ್ಯದಲ್ಲಿರುವ 126 ಅಲ್ಪಸಂಖ್ಯಾತ ವಸತಿ ಶಾಲಾ ಕಾಲೇಜುಗಳ ಪೈಕಿ 29 ಬಾಡಿಗೆ ಕಟ್ಟಡದಲ್ಲಿವೆ. ಮುಂದಿನ ಒಂದು ವರ್ಷದಲ್ಲಿ ಎಲ್ಲವೂ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಹೆಚ್ಚಿಸಬೇಕು. ನಿಗದಿತ ವಿದ್ಯಾರ್ಥಿಗಳಿಗಿಂತ ಬೇಡಿಕೆ ಹೆಚ್ಚಾಗಿದ್ದರೆ ಹೆಚ್ಚುವರಿ ಕಟ್ಟಡ ನಿರ್ಮಿಸಿ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.

    ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ವ್ಯವಸ್ಥೆ ಸಿಗದ 18.800 ವಿದ್ಯಾರ್ಥಿಗಳಿಗೆ ವಾರ್ಷಿಕ 27 ಕೋಟಿ ರೂ. ಪಾವತಿ ಆಗುತ್ತಿದೆ. ಅದನ್ನು ತಪ್ಪಿಸಲು ಅಗತ್ಯ ಇರುವ ಕಡೆ ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಜಾಗವನ್ನು ಗುರುತಿಸುವಂತೆ ನಿರ್ದೇಶನ ನೀಡಿದ್ದಾರೆ. ಮೌಲಾನ ಅಜಾದ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕೆಲವೆಡೆ ಎರಡು ಅಂಕಿ ದಾಟದಿದ್ದರೂ ಶಿಕ್ಷಕರು ಹಾಗೂ ಸಿಬ್ಬಂದಿ ಹೆಚ್ಚುವರಿ ಆಗಿ ಇರುವ ಬಗ್ಗೆ ಪರಿಶೀಲಿಸಿ ಅಗತ್ಯ ಇರುವ ಕಡೆಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುವಂತೆ ಸಲಹೆ ನೀಡಿದ್ದಾರೆ.

    ಕೊಳೆಗೇರಿಗಳಲ್ಲೂ ಮುಸ್ಲಿಂ (Muslim) ಕಾಲೋನಿಗಳ ಅಭಿವೃದ್ಧಿ ಹೆಸರಿನಲ್ಲಿ ಬಿಲ್ ಪಾವತಿ ಆಗಿರುವ ಬಗ್ಗೆ ಹಾಗೂ ಬೆಂಗಳೂರಿನಲ್ಲಿಯೇ ಹೆಚ್ಚು ಅನುದಾನ ಬಳಕೆ ಆಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜಿಲ್ಲಾ ಹಾಗೂ ತಾಲೂಕು ಪ್ರವಾಸದ ಸಂದರ್ಭದಲ್ಲಿ ಪ್ರತಿ ಕಾಮಗಾರಿಯ ಪರಿಶೀಲನೆ ನಡೆಸುತ್ತೇನೆ. ಈ ವೇಳೆ ಯಾವುದೇ ಕಾಮಾಗಾರಿಗಳಲ್ಲಿ ದುರುಪಯೋಗ ಅಥವಾ ಲೋಪ ಕಂಡು ಬಂದರೆ ಅಲ್ಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು?

  • ಭಾರತ ಪೌರತ್ವಕ್ಕೆ ಅರ್ಜಿ ಸಲ್ಲಿಸಿ – ದಾನಿಶ್ ಕನೇರಿಯಾಗೆ ಯುಪಿ ಸಚಿವ ಸಲಹೆ

    ಭಾರತ ಪೌರತ್ವಕ್ಕೆ ಅರ್ಜಿ ಸಲ್ಲಿಸಿ – ದಾನಿಶ್ ಕನೇರಿಯಾಗೆ ಯುಪಿ ಸಚಿವ ಸಲಹೆ

    ಲಕ್ನೋ: ಪಾಕಿಸ್ತಾನದ ಕ್ರಿಕೆಟ್ ತಂಡದಲ್ಲಿ ಹಿಂದೂ ಎಂಬ ಕಾರಣಕ್ಕೆ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದ ಮಾಜಿ ಆಟಗಾರ ದಾನಿಶ್ ಕನೇರಿಯಾ ಅವರಿಗೆ ಭಾರತದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವಂತೆ ಉತ್ತರ ಪ್ರದೇಶ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಸಚಿವ ಮೊಹ್ಸಿನ್ ರಾಜಾ ಸಲಹೆ ನೀಡಿದ್ದಾರೆ.

    ಪಾಕಿಸ್ತಾನ ಸೇರಿದಂತೆ ಇತರೆ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗುತ್ತಿರುವ ಮಂದಿ ಭಾರತದ ಪೌರತ್ವಕ್ಕೆ ಅರ್ಜಿಸಲ್ಲಿಸುವಂತೆ ಪ್ರತಿಕಾಗೋಷ್ಠಿಯಲ್ಲಿ ಮೊಹ್ಸಿನ್ ರಾಜಾ ತಿಳಿಸಿದರು. ಈ ವೇಳೆ ಪತ್ರಕರ್ತರಿಂದ ಕೇಳಿ ಬಂದ ದಾನಿಶ್ ಕನೇರಿಯಾ ಅವರ ವಿರುದ್ಧ ಟೀಕೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕನೇರಿಯಾ ಸೇರಿದಂತೆ ಧಾರ್ಮಿಕ ಅಸಮಾನತೆ, ಕಿರುಕುಳಕ್ಕೆ ಒಳಗಾಗಿರುವ ಜನರು ಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಉತ್ತರಿಸಿದರು.

    ದಾನಿಶ್ ಕನೇರಿಯಾ ಅವರನ್ನು ಡ್ಯಾನಿಶ್, ಯೂಸುಫ್ ಯೋಹಾನಾರನ್ನು ಮೊಹಮ್ಮದ್ ಯೂಸುಫ್ ಆಗಿ ಬದಲಾಯಿಸಲಾಯಿತು. ಈ ರೀತಿ ಪಾಕಿಸ್ತಾನದಲ್ಲಿ ಎಷ್ಟು ಸಾಮಾನ್ಯ ನಾಗರಿಕರು ತಾರತಮ್ಯ ಎದುರಿಸಿರಬಹುದು. ಅಲ್ಲಿ ಎಷ್ಟು ಕಿರುಕುಳ ನೀಡಲಾಗುತ್ತಿದೆ ಎಂಬುವುದು ಸುಲಭವಾಗಿ ಆರ್ಥೈಸಿಕೊಳ್ಳಬಹುದು ಎಂದು ಮೊಹ್ಸಿನ್ ರಾಜಾ ಟ್ವೀಟ್ ಮಾಡಿದ್ದಾರೆ.

    ಇತ್ತ ದಾನಿಶ್ ಕನೇರಿಯಾ ತಮ್ಮ ಹೇಳಿಕೆ ವಿರುದ್ಧ ಕೇಳಿ ಬಂದ ಟೀಕೆಗಳಿಗೆ ತಿರುಗೇಟು ಕೊಟ್ಟಿದ್ದು, ನಾನು ನಿಮ್ಮಂತೆ ಹಣಕ್ಕಾಗಿ ದೇಶವನ್ನು ಮಾರಾಟ ಮಾಡಿಲ್ಲ. ತಾರತಮ್ಯ ಎದುರಾದರೂ ನಾನು ಕ್ರಿಕೆಟ್‍ಗಾಗಿ ರಕ್ತವನ್ನು ಹರಿಸಿದ್ದೇನೆ ಎಂದು ಹೇಳಿದ್ದಾರೆ. ಕೆಲದಿನಗಳ ಹಿಂದೆಯಷ್ಟೇ ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್, ಪಾಕ್ ಕ್ರಿಕೆಟ್ ತಂಡದಲ್ಲಿದ್ದ ವೇಳೆ ದಾನಿಶ್ ಕನೇರಿಯಾ ಎಷ್ಟು ತಾರತಮ್ಯಕ್ಕೆ ಒಳಗಾಗಿದ್ದರು ಎಂದು ವಿವರಿಸಿದ್ದರು. ಅಖ್ತರ್ ಅವರ ಈ ಹೇಳಿಕೆಗಳು ಸತ್ಯ, ಶೀಘ್ರವೇ ತಮ್ಮನ್ನು ತಾರತಮ್ಯದಿಂದ ನಡೆಸಿಕೊಂಡ ಪ್ರಮುಖ ಆಟಗಾರರ ಹೆಸರುಗಳನ್ನು ರಿವೀಲ್ ಮಾಡುವುದಾಗಿಯೂ ದಾನಿಶ್ ಕನೇರಿಯಾ ತಿಳಿಸಿದ್ದರು. ಆದರೆ ದಾನಿಶ್‍ರ ಈ ಹೇಳಿಕೆಗೆ ಸಾಕಷ್ಟು ಮಂದಿ ಟೀಕೆ ಮಾಡಿದ್ದರು.

  • ಸಿದ್ದು ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಸಿಕ್ಕಿದ್ದು ಏನು?

    ಸಿದ್ದು ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಸಿಕ್ಕಿದ್ದು ಏನು?

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಅಲ್ಪಸಂಖ್ಯಾತ ಕಲ್ಯಾಣ ಮತ್ತು ಹಜ್ ಇಲಾಖೆಗೆ 2750 ಕೋಟಿ ರೂ. ಅನುದಾನವನ್ನು ನೀಡಿದ್ದಾರೆ. ಬಜೆಟ್‍ನಲ್ಲಿ ಘೋಷಣೆಯಾದ ಪ್ರಮುಖ ಅಂಶಗಳು

    – ಮೌಲಾನ ಅಬ್ದುಲ್ ಕಲಾಂ ಆಜಾದ್ ಭವನ, ಉರ್ದು ಕನ್ವೆಷನ್ ಹಾಲ್ ಮತ್ತು ಸಾಂಸ್ಕೃತಿಕ ಕೇಂದ್ರ ನಿರ್ಮಿಸಲು – 20 ಕೋಟಿ
    – ವಕ್ಫ್ ಸಂಸ್ಥೆ ನಿರ್ವಹಣೆ ಮತ್ತು ಸಿಬ್ಬಂದಿಗಳಿಗೆ ತರಬೇತಿ ಕೇಂದ್ರ
    – ಸರ್ಕಾರಿ ಉರ್ದು ಶಾಲೆ ಜಾಗದಲ್ಲಿ 200 ಮೌಲಾನ ಆಜಾದ್ ಶಾಲೆಗಳು
    – ಮಹಿಳೆಯರಿಗಾಗಿ 2 ಕೋಟಿ ವೆಚ್ಚದಲ್ಲಿ 10 ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್
    – ಐಐಎಂ, ಐಐಟಿ, ಐಐಎಸ್‍ಸಿ ಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹ ಧನ

    – ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 20 ಮೊರಾರ್ಜಿ ದೇಸಾಯಿ ವಸತಿ ಶಾಲೆ, 5 ಪದವಿಪೂರ್ವ ಕಾಲೇಜು, 2 ಮಾದರಿ ವಸತಿ ಶಾಲೆ, 25 ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪನೆ
    – ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 175 ಕೋಟಿ
    – ಪೇಷ್ ಇಮಾಮ್ ಅವರ ಗೌರವ ಧನ 3,100 ರೂ ಇಂದ 4,000ಕ್ಕೆ ಏರಿಕೆ
    – ಮೌಜಾನ್ ಅವರ ಗೌರವಧನ 2500 ರಿಂದ 3000ಕ್ಕೆ ಹೆಚ್ಚಳ
    – ಮಂಗಳೂರಲ್ಲಿ 10 ಕೋಟಿ ವೆಚ್ಚದಲ್ಲಿ ಹಜ್ ಭವನ ಸ್ಥಾಪನೆ

    – 500 ಮಂದಿ ಫಲಾನುಭವಿಗಳಿಗೆ ಟ್ಯಾಕ್ಸಿ ಖರೀದಿಸಲು ತಲಾ 3 ಲಕ್ಷ ರೂ. ಸಹಾಯ ಧನ ಹಾಗೂ ಉಳಿದ ಹಣಕ್ಕೆ ಬ್ಯಾಂಕ್ ಸಾಲ
    – ಕಾನೂನು ಪದವಿಧರರ ಮಾಸಿಕ ತರಬೇತಿ ಭತ್ಯೆ 2 ಸಾವಿರ ರೂ.ಗಳಿಂದ 4 ಸಾವಿರ ರೂ.ಗಳಿಗೆ ಹೆಚ್ಚಳ