Tag: ಅಲ್ಪೇಶ್ ಠಾಕೂರ್

  • ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಲ್ಪೇಶ್ ಠಾಕೂರ್

    ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಲ್ಪೇಶ್ ಠಾಕೂರ್

    ನವದೆಹಲಿ: ಗುಜರಾತ್ ಕಾಂಗ್ರೆಸ್ ಮಾಜಿ ಶಾಸಕ ಅಲ್ಪೇಶ್ ಠಾಕೂರ್ ಇದೀಗ ಬಿಜೆಪಿಗೆ ಜಂಪ್ ಆಗಿದ್ದಾರೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಸಿಡಿದೆದ್ದಿದ್ದ ಹಿಂದುಳಿದ ವರ್ಗದ ಪ್ರಭಾವಿ ನಾಯಕ ಅಲ್ಪೇಶ್ ಠಾಕೂರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

    ಜುಲೈ 5 ರಂದು ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಮತ ಹಾಕಿದ್ದ ಅಲ್ಪೇಶ್ ಠಾಕೂರ್ ಬಳಿಕ ಕಾಂಗ್ರೆಸ್ ಶಾಸಕ ಸ್ಥಾನವನ್ನೂ ತ್ಯಜಿಸಿದ್ದರು. 2017ರಲ್ಲಿ ಕಾಂಗ್ರೆಸ್ ಸೇರಿದ್ದ ಅಲ್ಪೇಶ್, ರಾಧಾನ್ಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಪ್ರಚಾರದ ವೇಳೆ ಮೋದಿ, ಅಮಿತ್ ಶಾ ವಿರುದ್ಧ ಖಂಡಾತುಂಡವಾಗಿ ಟೀಕಿಸಿದ್ದರು. ಆದರೆ ಆ ಬಳಿಕ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದರು.

    ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಯುವ ತ್ರಿವಳಿ ನಾಯಕರಾದ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಾಟೇಲ್, ಜಿಗ್ನೇಶ್ ಮೇವಾನಿ ಬಿಜೆಪಿಗೆ ತಲೆನೋವಾಗಿದ್ದರು. 2011 ರಲ್ಲಿ ಗುಜರಾತ್ ಕ್ಷತ್ರಿಯ ಠಾಕೂರ್ ಸೇನಾ ಸಂಘಟನೆ ನಿರ್ಮಿಸಿದ್ದ ಠಾಕೂರ್ ತಮ್ಮ ಜನಾಂಗದ ಪರ ಹೋರಾಟಕ್ಕೆ ಇಳಿದಿದ್ದರು. ಅಲ್ಲದೇ ಓಬಿಸಿ, ಎಸ್‍ಟಿ ಎಸ್‍ಸಿ ಏಕತಾ ವೇದಿಕೆ ನಿರ್ಮಿಸಿ ಶೋಷಿತ ಸಮುದಾಯಗಳ ಪರ ಆಂದೋಲಗಳನ್ನು ರೂಪಿಸಿದ್ದರು.

    ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2 ವರ್ಷಕ್ಕೆ ರಾಹುಲ್ ಗಾಂಧಿಗೆ ಕೈ ಕೊಟ್ಟಿದ ಅಲ್ಪೇಶ್ ಠಾಕೂರ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಶಾಕ್ ನೀಡಿದ್ದರು. ಪರಿಣಾಮ ಬಿಜೆಪಿ ಗುಜರಾತ್ ನಲ್ಲಿ ಎಲ್ಲಾ 26 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವಿಪ್ ಮಾಡಲು ಸಹಕಾರಿ ಆಗಿತ್ತು. ಕಾಂಗ್ರೆಸ್ ಪಕ್ಷ ಠಾಕೂರ್ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಅಲ್ಪೇಶ್ ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ಸೇರ್ಪಡೆ ವಿಚಾರವನ್ನು ಸ್ಪಷ್ಟಪಡಿಸಿರಲಿಲ್ಲ. ಇಂದು ಗುಜರಾತ್ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸೇರ್ಪಡೆ ಆಗುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

  • ರಾಹುಲ್ ನಮಗೆ ಏನನ್ನೂ ಮಾಡಿಲ್ಲ: ಇಬ್ಬರು `ಕೈ’ ರೆಬೆಲ್ ಶಾಸಕರು ರಾಜೀನಾಮೆ

    ರಾಹುಲ್ ನಮಗೆ ಏನನ್ನೂ ಮಾಡಿಲ್ಲ: ಇಬ್ಬರು `ಕೈ’ ರೆಬೆಲ್ ಶಾಸಕರು ರಾಜೀನಾಮೆ

    ಗಾಂಧಿನಗರ: ಗುಜರಾತ್ ಕಾಂಗ್ರೆಸ್‍ನ ರೆಬೆಲ್ ಶಾಸಕರಾದ ಅಲ್ಪೇಶ್ ಠಾಕೂರ್ ಹಾಗೂ ಧವಲ್ ಸಿನ್ಹಾ ಜಾಲಾ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

    ರಾಜ್ಯಸಭೆ ಎರಡು ಸ್ಥಾನಗಳ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದ ಅಲ್ಪೇಶ್ ಠಾಕೂರ್ ಹಾಗೂ ಧವಲ್ ಸಿನ್ಹಾ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೇ ಮತ ಹಾಕಿದ್ದಾರೆ ಎನ್ನಲಾಗುತ್ತಿದೆ.

    ರಾಜೀನಾಮೆ ಬಳಿಕ ಮಾತನಾಡಿದ ಅಲ್ಪೇಶ್ ಠಾಕೂರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನಂಬಿಕೆ, ವಿಶ್ವಾಸವಿಟ್ಟು ನಾನು ಪಕ್ಷಕ್ಕೆ ಸೇರಿಕೊಂಡೆ. ದುರಾದೃಷ್ಟವಶಾತ್ ಅವರು ನಮಗೆ ಏನನ್ನೂ ಮಾಡಲಿಲ್ಲ. ನಾವು ಪದೇ ಪದೇ ಅವಮಾನಕ್ಕೆ ಒಳಗಾದೆವು. ಹೀಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.

    ಕಾಂಗ್ರೆಸ್ಸಿಗರು ನಮ್ಮನ್ನು ಅವಮಾನಿಸಿದ್ದಾರೆ. ಅಷ್ಟೇ ಅಲ್ಲದೆ ಪಕ್ಷದ ನಾಯಕರು ಕಾರ್ಯಕರ್ತರ ಮಾತುಗಳನ್ನು ಆಲಿಸುವುದಿಲ್ಲ ಎಂದು ಧವಲ್ ಸಿನ್ಹಾ ದೂರಿದ್ದಾರೆ.

    ಅಲ್ಪೇಶ್ ಠಾಕೂರ್ ಗುಜರಾತ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಸವಾಲು ಹಾಕಿ ಸದ್ದು ಮಾಡಿದ್ದರು. ಕೆಲ ದಿನಗಳ ಹಿಂದೆ ಅಲ್ಪೇಶ್ ಠಾಕೂರ್ ಬಿಜೆಪಿ ಸೇರುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿದ್ದ ಅವರು, ಇಂತಹ ವದಂತಿಗಳನ್ನು ಯಾರು ಹಬ್ಬಿಸುತ್ತಿದ್ದಾರೆ ನನಗೆ ತಿಳಿದಿಲ್ಲ. ಆದರೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ. ಕಾಂಗ್ರೆಸ್ ಜೊತೆಗಿದ್ದೇನೆ ಹಾಗೂ ಕಾಂಗ್ರೆಸ್ ಜೊತೆಯಲ್ಲೇ ಇರುತ್ತೇನೆ. 20,000 ಅನುಯಾಯಿಗಳ ಅಭಿಪ್ರಾಯ ಪಡೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವೆ. ಬಿಹಾರವೂ ಸೇರಿದಂತೆ ನಾನು ರಾಷ್ಟ್ರೀಯ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ತಿಳಿಸಿದ್ದರು.

    ಗುಜರಾತ್ ಚುನಾವಣೆ ವೇಳೆ ಯುವ ತ್ರಿವಳಿ ನಾಯಕರಾದ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಾಟೇಲ್, ಜಿಗ್ನೇಶ್ ಮೇವಾನಿ ಬಿಜೆಪಿಗೆ ತಲೆನೋವಾಗಿದ್ದರು. 2011 ರಲ್ಲಿ ಗುಜರಾತ್ ಕ್ಷತ್ರಿಯ ಠಾಕೂರ್ ಸೇನಾ ಸಂಘಟನೆ ನಿರ್ಮಿಸಿದ್ದ ಠಾಕೂರ್ ತಮ್ಮ ಜನಾಂಗದ ಪರ ಹೋರಾಟಕ್ಕೆ ಇಳಿದಿದ್ದರು. ಅಲ್ಲದೆ ಓಬಿಸಿ, ಎಸ್‍ಟಿ ಎಸ್‍ಸಿ ಏಕತಾ ವೇದಿಕೆ ನಿರ್ಮಿಸಿ ಶೋಷಿತ ಸಮುದಾಯಗಳ ಪರ ಆಂದೋಲಗಳನ್ನು ರೂಪಿಸಿದ್ದರು.

  • ರಾಹುಲ್‍ಗೆ ಶಾಕ್ – ಕೈ ಸೇರಿದ 2 ವರ್ಷಕ್ಕೆ ಹೊರನಡೆದ ಅಲ್ಪೇಶ್ ಠಾಕೂರ್

    ರಾಹುಲ್‍ಗೆ ಶಾಕ್ – ಕೈ ಸೇರಿದ 2 ವರ್ಷಕ್ಕೆ ಹೊರನಡೆದ ಅಲ್ಪೇಶ್ ಠಾಕೂರ್

    ಗಾಂಧಿನಗರ: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೇ ವೇಳೆ ಎರಡು ವರ್ಷದ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಕೈ ಹಿಡಿದು ಬಿಜೆಪಿಗೆ ತಲೆ ನೋವಾಗಿದ್ದ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಪಕ್ಷದಿಂದ ಹೊರ ನಡೆದಿದ್ದಾರೆ.

    ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷದಲ್ಲಿನ ಗೊಂದಲಗಳಿಂದ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವರದಿಯನ್ನ ಅಲ್ಪೇಶ್ ಅಲ್ಲಗೆಳೆದಿದ್ದರು. ಆದರೆ ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನ ಬಾಕಿ ಇರುವ ವೇಳೆ ಪಕ್ಷದಿಂದ ಹೊರ ನಡೆದಿದ್ದಾರೆ.

    ಕಾಂಗ್ರೆಸ್ ಪಕ್ಷ ಠಾಕೂರ್ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸತ್ತ ಅವರು ಇತರೇ ಇಬ್ಬರು ಶಾಸಕರೊಂದಿಗೆ ಪಕ್ಷ ತೊರೆದಿದ್ದಾರೆ. ನನ್ನ ಜನರ ಹಕ್ಕುಗಳ ರಕ್ಷಣೆಗಾಗಿ ತಾವು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

    ಗುಜರಾತ್ ಚುನಾವಣೆ ವೇಳೆ ಯುವ ತ್ರಿವಳಿ ನಾಯಕರಾದ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಾಟೇಲ್, ಜಿಗ್ನೇಶ್ ಮೇವಾನಿ ಬಿಜೆಪಿಗೆ ತಲೆನೋವಾಗಿದ್ದರು. 2011 ರಲ್ಲಿ ಗುಜರಾತ್ ಕ್ಷತ್ರಿಯ ಠಾಕೂರ್ ಸೇನಾ ಸಂಘಟನೆ ನಿರ್ಮಿಸಿದ್ದ ಠಾಕೂರ್ ತಮ್ಮ ಜನಾಂಗದ ಪರ ಹೋರಾಟಕ್ಕೆ ಇಳಿದಿದ್ದರು. ಅಲ್ಲದೇ ಓಬಿಸಿ, ಎಸ್‍ಟಿ ಎಸ್‍ಸಿ ಏಕತಾ ವೇದಿಕೆ ನಿರ್ಮಿಸಿ ಶೋಷಿತ ಸಮುದಾಯಗಳ ಪರ ಆಂದೋಲಗಳನ್ನು ರೂಪಿಸಿದ್ದರು.

    ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‍ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಇದೇ ವೇಳೆ ಅಲ್ಪೇಶ್ ಠಾಕೂರ್ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗಿದೆ. ಇತ್ತ ಲೋಕಸಭಾ ಚುನಾವಣೆಯ ಸಮಯದಲ್ಲೇ ಪಕ್ಷ ತೊರೆದಿರುವ ಅಲ್ಪೇಶ್ ಠಾಕೂರ್ ಅವರ ನಡೆ ಕಾಂಗ್ರೆಸ್ ಪಕ್ಷದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದೆ.

  • ಮೊದಲ ಪ್ರಯತ್ನದಲ್ಲಿ ಬಿಜೆಪಿಗೆ ಸೋಲುಣಿಸಿದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ

    ಮೊದಲ ಪ್ರಯತ್ನದಲ್ಲಿ ಬಿಜೆಪಿಗೆ ಸೋಲುಣಿಸಿದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ

    ಗಾಂಧಿನಗರ: ಗುಜರಾತ್ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಯುವ ನಾಯಕರಾದ ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೇವಾನಿ ಜಯಗಳಿಸಿದ್ದಾರೆ.

    ರಾಧನ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ಅಲ್ಪೇಶ್ ಠಾಕೂರ್ ಮತ್ತು ವಡಗಾಮ್ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಗ್ನೇಶ್ ಮೇವಾನಿ ಅವರು ನಿರೀಕ್ಷೆಗೂ ಮೀರಿ ಅಭೂತಪೂರ್ವ ಜಯವನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಜಿಗ್ನೇಶ್ ಮೇವಾನಿ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 19,696 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜಿಗ್ನೇಶ್ ಮೇವಾನಿ 95,497 ಮತಗಳನ್ನು ಪಡೆದರೆ, ಬಿಜೆಪಿಯ ಚಕ್ರವರ್ತಿ ವಿಜಯ್ ಕುಮಾರ್ ಹರ್ಖಾಭಾಯ್ ಅವರು 75,801 ಮತಗಳನ್ನು ಪಡೆದಿದ್ದಾರೆ.

    ಮೋದಿ ತೈವಾನ್ ಹಣಬೆ ತಿಂದು ಬೆಳ್ಳಗಾಗಿದ್ದಾರೆ ಅಂತ ಹೇಳಿಕೆ ಕೋಡೋ ಮೂಲಕ ಸುದ್ದಿಯಾಗಿದ್ದ ಅಲ್ಪೇಶ್ ಅವರು ರಾಧನ್ ಪುರ್ ಕ್ಷೇತ್ರದಲ್ಲಿ 14,857 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅಲ್ಪೇಶ್ ಠಾಕೂರ್ 85,777 ಮತ ಹಾಗೂ ಬಿಜೆಪಿಯ ಸೋಲಂಕಿ ಲಾವಿಂಗ್ಜಿ ಮುಲ್ವಿಜಿ ಠಾಕೂರ್ ಅವರು ಅವರನ್ನು 70,920 ಮತಗಳನ್ನು ಪಡೆದಿದ್ದಾರೆ.

  • ಮೋದಿ ತೈವಾನ್ ಅಣಬೆ ತಿಂದು ಬೆಳ್ಳಗಾಗಿದ್ದಾರೆ- ಅದಕ್ಕಾಗೇ ತಿಂಗಳಿಗೆ ಇಷ್ಟು ಕೋಟಿ ರೂಪಾಯಿ ಖರ್ಚು!

    ಮೋದಿ ತೈವಾನ್ ಅಣಬೆ ತಿಂದು ಬೆಳ್ಳಗಾಗಿದ್ದಾರೆ- ಅದಕ್ಕಾಗೇ ತಿಂಗಳಿಗೆ ಇಷ್ಟು ಕೋಟಿ ರೂಪಾಯಿ ಖರ್ಚು!

    ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಸಮಾವೇಶವೊಂದರಲ್ಲಿ, ನನ್ನ ಹಾಗೆ ಕಪ್ಪಗಿದ್ದ ಪ್ರಧಾನಿ ನರೇಂದ್ರ ಮೋದಿ ತೈವಾನ್ ನಿಂದ ಆಮದಾಗುವ ಅಣಬೆ ತಿಂದು ಬೆಳ್ಳಗಾಗಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಲ್ಪೇಶ್ ಠಾಕೂರ್ ವ್ಯಂಗ್ಯ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ತೈವಾನ್ ದೇಶದ ಒಂದು ಅಣಬೆ 80 ಸಾವಿರ ರೂ. ಬೆಲೆಯನ್ನು ಹೊಂದಿದೆ. ಪ್ರಧಾನಿ ಮೋದಿ ಒಂದು ದಿನಕ್ಕೆ 5 ಅಣಬೆಗಳನ್ನು ತಿನ್ನುತ್ತಾರೆ. ಮೋದಿ ಅವರು ಸೇವಿಸುವಂತಹ ಆಹಾರ ನಮ್ಮಿಂದ ಸೇವನೆ ಮಾಡಲಾಗುವುದಿಲ್ಲ. ಕಾರಣ ನಾವು ಬಡವರು ನಮ್ಮಲ್ಲಿ ಅಷ್ಟು ಹಣವಿಲ್ಲ ಅಂತಾ ಪರೋಕ್ಷವಾಗಿ ಮೋದಿ ಅವರನ್ನು ಟೀಕಿಸಿದ್ದಾರೆ.

    ಪಿಎಂ ಅಣಬೆಗಾಗಿ ಒಂದು ತಿಂಗಳಿಗೆ 1 ಕೋಟಿ 20 ಲಕ್ಷ ರೂ. ಹಣವನ್ನು ಖರ್ಚು ಮಾಡುತ್ತಾರೆ. ಅವರು ನಮ್ಮ ಹಾಗೆ ರೋಟಿ, ಅನ್ನ ತಿನ್ನುವುದಿಲ್ಲ. ಕೇವಲ ನಾನು ಸಾಮನ್ಯ ವ್ಯಕ್ತಿಯೆಂದು ನಾಟಕ ಮಾಡುತ್ತಾರೆ. ಹಾಗಾದ್ರೆ ಮೋದಿ ಹಿಂಬಾಲಕರು ಎಷ್ಟು ಕೋಟಿ ಮೌಲ್ಯದ ಅಣಬೆಗಳನ್ನು ತಿನ್ನುತ್ತಾರೆ ಎಂದು ಮೂದಲಿಸಿದ್ದಾರೆ.

    ಗುಜರಾತ್ ಸಿಎಂ ಆದ ನಂತರ ಮೋದಿ ತೈವಾನ್ ಅಣಬೆಗಳನ್ನು ತಿನ್ನಲು ಆರಂಭಿಸಿದ್ದಾರೆ ಎಂದು ಅಲ್ಪೇಶ್ ಹೇಳಿದ್ದಾರೆ.