Tag: ಅಲ್ಫೋನ್ಸ್ ಕಣ್ಣಂತಾನಂ

  • ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚಾಗುತ್ತಿದೆ. ಇಲ್ಲಿನ ಕೆಲ ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿದ್ದು, ದೇಶ ವಿರೋಧಿ ಚಿಂತನೆಗಳು ವ್ಯಾಪಕವಾಗಿ ಹರಡುತ್ತಿವೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಬಿಜೆಪಿ ರಾಜ್ಯಸಭಾ ಸಂಸದ ಕೆ.ಜೆ. ಅಲ್ಫೋನ್ಸ್ ಕಣ್ಣಂತಾನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೇರಳದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚುತ್ತಿದೆ. ಇದು ಅತ್ಯಂತ ದುಃಖಕರ ಸಂಗತಿ. ನೀವು ಕೇರಳದ ಕೆಲವು ಜಿಲ್ಲೆಗಳಿಗೆ ಹೋಗಿ ನೋಡಿದರೆ, ಸೌದಿ ಅರೇಬಿಯಾದಲ್ಲಿದ್ದಂತೆ ಭಾಸವಾಗುತ್ತದೆ. ಜನರ ವರ್ತನೆಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ಅವರು ಧರಿಸುವ ಉಡುಪು ದೇಶ ವಿರೋಧಿ ಚಿಂತನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

    ಇದೇ ವೇಳೆ ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಉತ್ತಮ ಬೆಳವಣಿಗೆ ಎಂದು ಅಲ್ಫೋನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

    ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರ ಮತಗಳ ಮೇಲೆ ಅವಲಂಬಿತವಾಗಿವೆ. ಈ ನಡುವೆ ಕೇರಳದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ಅಲ್ಪಸಂಖ್ಯಾತರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

  • ಯೋಧನ ಪಾರ್ಥಿವ ಶರೀರದ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕೇಂದ್ರ ಸಚಿವ

    ಯೋಧನ ಪಾರ್ಥಿವ ಶರೀರದ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕೇಂದ್ರ ಸಚಿವ

    ತಿರುವನಂತಪುರಂ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧ ವಸಂತ್ ಕುಮಾರ್ ಅವರ ಮೃತದೇಹದ ಮುಂದೆ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಕ್ಕೆ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧ ವಸಂತ್ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ಶನಿವಾರ ರಾತ್ರಿ ಅವರ ಹುಟ್ಟೂರಾದ ಕೇರಳದ ವೈಯನಾಡುವಿನ ತ್ರಿಕ್ಕೈಪೆಟ್ಟ ಗ್ರಾಮದಲ್ಲಿ ನಡೆಸಲಾಯಿತು. ಈ ವೇಳೆ ವೀರ ಯೋಧನ ಅಂತಿಮ ದರ್ಶನ ಪಡೆಯಲು ಬಂದಿದ್ದ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ ಅವರು ಯೋಧನ ಮೃತದೇಹದ ಮುಂದೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಅಲ್ಲದೆ ಆ ಸೆಲ್ಫಿಯನ್ನು ತಮ್ಮ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

    https://twitter.com/ShanShakir1/status/1096879068174315525?ref_src=twsrc%5Etfw%7Ctwcamp%5Etweetembed%7Ctwterm%5E1096879068174315525&ref_url=https%3A%2F%2Fwww.thenewsminute.com%2Farticle%2Fwhat-shame-union-mos-alphons-lambasted-posting-selfie-martyr-s-coffin-96872

    ಹುತಾತ್ಮ ವಸಂತ್ ಕುಮಾರ್ ಗೆ ನಮನ, ನಿಮ್ಮಂತ ವೀರರ ತ್ಯಾಗ ಬಿಲಿದಾನದಿಂದಾಗಿ ನಾವು ಇಲ್ಲಿ ಸುಖವಾಗಿ ಬದುಕಲು ಸಾಧ್ಯವಾಗಿರುವುದು ಎಂದು ಬರೆದು ಸೆಲ್ಫಿ ಫೋಟೋವನ್ನು ಫೇಸ್‍ಬುಕ್ ಸ್ಟೇಟಸ್‍ಗೆ ಹಾಕಿದ್ದರು. ಇದನ್ನ ಕಂಡ ನೆಟ್ಟಿಗರು ಸಾವಿನ ಮನೆಯಲ್ಲೂ ನಿಮ್ಮ ರಾಜಕೀಯ ಬುದ್ದಿ ತೋರಿಸುತ್ತೀರ. ನಿಮಗೆ ನಾಚಿಕೆಯಾಗಬೇಕು ಅಂತ ಕಮೆಂಟ್ ಮಾಡಿದ್ದಾರೆ. ಅಲ್ಲದೆ ಈ ರೀತಿ ಸಾವಿನ ಮನೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿದಲ್ಲದೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಕ್ಕೆ ನೆಟ್ಟಿಗರು ಕಣ್ಣಂತಾನಂ ಮೇಲೆ ಗರಂ ಆಗಿದ್ದಾರೆ. ಹಾಗೆಯೇ ಅವರ ಪೋಸ್ಟ್ ಗೆ ಬೈದು ಕಮೆಂಟ್‍ಗಳ ಸುರಿಮಳೆಯನ್ನೇ ಹರಿಸಿ ಕೇಂದ್ರ ಸಚಿವರ ಬೆವರಿಳಿಸಿದ್ದಾರೆ.

    https://twitter.com/balusunil2/status/1096808758309675009?ref_src=twsrc%5Etfw%7Ctwcamp%5Etweetembed%7Ctwterm%5E1096808758309675009&ref_url=https%3A%2F%2Fwww.thenewsminute.com%2Farticle%2Fwhat-shame-union-mos-alphons-lambasted-posting-selfie-martyr-s-coffin-96872

    ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಂತಾನಂ ಅವರ ಸೆಲ್ಫಿ ಪೋಸ್ಟ್ ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಅವರು ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಆದರೂ ಕೂಡ ಸಿಟ್ಟಿಗೆದ್ದಿರುವ ನೆಟ್ಟಿಗರು ಮಾತ್ರ ಕಣ್ಣಂತಾನಂ ಅವರ ಇತರೇ ಪೋಸ್ಟ್ ಗಳಿಗೂ ಕಮೆಂಟ್ ಮಾಡಿ ಬೈಯ್ಯುತ್ತಿದ್ದಾರೆ.

    https://twitter.com/hi_paresh/status/1096826435988262913?ref_src=twsrc%5Etfw%7Ctwcamp%5Etweetembed%7Ctwterm%5E1096826435988262913&ref_url=https%3A%2F%2Fwww.thenewsminute.com%2Farticle%2Fwhat-shame-union-mos-alphons-lambasted-posting-selfie-martyr-s-coffin-96872

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv