Tag: ಅವಹೇಳನಕಾರಿ ಪೋಸ್ಟ್

  • ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್  – ಆರೋಪಿ ಅರೆಸ್ಟ್

    ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿ ಅರೆಸ್ಟ್

    ಚಿಕ್ಕೋಡಿ: ಹಿಂದೂ ದೇವರಾದ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕೋಡಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಗ್ರಾಮದಲ್ಲಿ ರವೀಂದ್ರ ಹಾರೋಹಳ್ಳಿ ಅನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ಏನಿದು ಘಟನೆ?
    ಶ್ರೀ ಕೃಷ್ಣನ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ರವೀಂದ್ರ ಹಾಗೂ ಕರೋಶಿ ಗ್ರಾಮದ ಚೇತನ್ ಹೊನ್ನಗೋಳ ವಿರುದ್ಧ 2017 ಡಿಸೆಂಬರ್‌ನಲ್ಲಿ ಚಿಕ್ಕೋಡಿ  ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಮುಂಡೆ ದೂರು ದಾಖಲಿಸಿದ್ದರು. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

    ಈ ಹಿಂದೆ ಚೇತನ್ ಹೊನ್ನಗೋಳ ಕೋರ್ಟ್‍ಗೆ ಹಾಜರಾಗಿದ್ದನು. ಆದರೆ 2019ರಿಂದ ಇದುವರೆಗೂ ರವೀಂದ್ರ ಕೋರ್ಟ್‍ಗೆ ಹಾಜರಾಗಿರಲಿಲ್ಲ. 2019 ರಿಂದಲು ಚಿಕ್ಕೋಡಿ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‍ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಮೊನ್ನೆ ಜಿಗ್ನೇಶ್ ಮೇವಾನಿ ಇಂದು ಹಾರೋಹಳ್ಳಿ ರವೀಂದ್ರ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಕಾರಣಕ್ಕಾಗಿ ದಲಿತ ಪರ ಹೋರಾಟಗಾರರ ಬಂಧನ ಆಗಿದೆ. ಹೋರಾಟಗಾರರು ಬರಹಗಾರರನ್ನು ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ನಡೆಯನ್ನು ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರನನ್ನ ಬಿಡುಗಡೆ ಮಾಡಬೇಕು ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

  • ಹೆಚ್.ವೈ ಮೇಟಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಪೊಲೀಸರ ವಶಕ್ಕೆ

    ಹೆಚ್.ವೈ ಮೇಟಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಪೊಲೀಸರ ವಶಕ್ಕೆ

    ಬಾಗಲಕೋಟೆ: ಶಾಸಕ ಹೆಚ್ ವೈ ಮೇಟಿ ಬಗ್ಗೆ ಅವಹೇಳನಕಾರಿಯಾಗಿ ಬರೆದು ಭಾವಚಿತ್ರ ಸಮೇತ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಬಾಗಲಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಾಗಲಕೋಟೆಯ ನವನಗರ ಠಾಣೆ ಪೊಲೀಸರು ಡ್ಯಾನಿಯಲ್ ನ್ಯೂಟನ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ನೇಕ್ ಡ್ಯಾನಿಯಲ್ ಎಂದೇ ಹೆಸರುವಾಸಿಯಾಗಿರುವ ಡ್ಯಾನಿಯಲ್ ಮೂಲತಃ ಬಾಗಲಕೋಟೆಯ ಯುವಕ. ಹವ್ಯಾಸಿ ಹಾವು ಹಿಡಿಯುವ ವ್ಯಕ್ತಿಯಾಗಿದ್ದು, ತನ್ನ ಫೇಸ್‍ಬುಕ್ ಅಕೌಂಟ್‍ನಲ್ಲಿ ಶಾಸಕ ಮೇಟಿ ಅವರ ಬಗ್ಗೆ ಅವಹೇಳನಕಾರಿ ಭಾವಚಿತ್ರ ಹಾಕಿದ್ದಾನೆ. ಇಂತವರನ್ನು ಮಂದಿರ, ಮಸೀದಿ ಚರ್ಚ್‍ಗಳ ಧಾರ್ಮಿಕ ಕಾರ್ಯಕ್ಕೆ ಆಹ್ವಾನಿಸೋದು ಸರಿಯಲ್ಲ. ಹಾಗಂತ ನನಗೆ ಅವರ ಬಗ್ಗೆ ವ್ಯಯಕ್ತಿಕ ದ್ವೇಷವಿಲ್ಲ. ಸಮಾಜ ತಲೆತಗ್ಗಿಸುವಂತ ಕೃತ್ಯವೆಸಗಿದ ಇಂತವರನ್ನು ಧಾರ್ಮಿಕ ಸ್ಥಳಕ್ಕೆ ಆಹ್ವಾನಿಸಿ, ಪವಿತ್ರ ಸ್ಥಳವನ್ನು ಅಪವಿತ್ರ ಮಾಡಬೇಡಿ ಎಂಬ ಕಳಕಳಿ ಎಂದು ಪೋಸ್ಟ್ ಮಾಡಿದ್ದಾನೆ.

    ಹಿಂದು, ಮುಸ್ಲಿಮ್, ಕ್ರಿಶ್ಚಿಯನ್ ಸಹೋದರರೆ ಎಷ್ಟು ಜನ ಚಿತ್ರದಲ್ಲಿರುವ ವ್ಯಕ್ತಿಯನ್ನು ಪವಿತ್ರ ಸ್ಥಳಕ್ಕೆ ಆಹ್ವಾನಿಸುತ್ತೀರಿ? ಈ ಬಗ್ಗೆ ಪ್ರಾಮಾಣಿಕವಾಗಿ ಕಮೆಂಟ್ ಮಾಡಿ ಎಂದು ಉಲ್ಲೇಖ ಮಾಡಿದ್ದಾನೆ. ಇಂತವರನ್ನು ಆಹ್ವಾನಿಸಿದರೆ ಸಮಾಜಕ್ಕೆ ಅದರಲ್ಲೂ ಯುವಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ದೇಶಭಕ್ತ ನಾಗರಿಕರು ಇದನ್ನು ಅರ್ಥೈಸಿಕೊಂಡಿದ್ದೀರಿ ಎಂಬ ಭರವಸೆ ಇದೆ. ಇನ್‍ಕಿಲಾಬ್ ಜಿಂದಾಬಾದ್ ಎಂದು ಬರೆದಿದ್ದಾನೆ.

    ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ರೀತಿ ಬರೆದಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮೇಟಿ ಬೆಂಬಲಿಗರು ಪೊಲೀಸರಿಗೆ ತಿಳಿಸಿದ್ದಾರೆ. ಅಹಿತಕರ ಘಟನೆ ತಡೆಯುವ ಹಿನ್ನೆಲೆಯಲ್ಲಿ ಸ್ನೇಕ್ ಡ್ಯಾನಿಯಲ್ ನನ್ನು ನವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸ್ನೇಕ್ ಡ್ಯಾನಿಯಲ್ ಹಾವು ಹಿಡಿಯೋದಕ್ಕೆ ಹೆಸರುವಾಸಿಯಾಗಿದ್ದಾನೆ. ಹಾವಿನ ಬಗ್ಗೆ ಮಕ್ಕಳಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸೋದರ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾನೆ. ಈತನ ಸದ್ಯದ ಪೋಸ್ಟ್ ಜಿಲ್ಲಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.