Tag: ಅವಿಶ್ವಾಸ ನಿರ್ಣಯ

  • 6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: ಬಿಎಸ್‍ವೈ

    6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: ಬಿಎಸ್‍ವೈ

    ಬೆಂಗಳೂರು: ವಿರೋಧ ಪಕ್ಷಗಳು ಪ್ರತಿ ಆರು ತಿಂಗಳಿಗೆ ಒಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲಿ. ಅದರಿಂದ ನನಗೂ ವಿಶ್ವಾಸ ಬರುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿಎಸ್ ವೈ, ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೆ ಮಾಡುತ್ತಾ ಇರಲಿ. ಹೀಗೆ ಮಾಡುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

    ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿದೆ. ಇದಕ್ಕೆ ಕಾಂಗ್ರೆಸ್‍ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದ್ದು, ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದ ಸ್ಪೀಕರ್ ಕಾಗೇರಿ, ಇಂದು ಅಥವಾ ನಾಳೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಯಾವುದೇ ಬಿಲ್ ಪಾಸ್ ಮಾಡದಂತೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

    ಇದೇ ವೇಳೆ ರೈತ ಸಂಘಟದ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಮಧ್ಯಾಹ್ನ ರೈತ ಸಂಘದ ಮುಖಂಡರನ್ನು ಭೇಟಿಯಾಗುವಂತೆ ಹೇಳಿದ್ದೇನೆ. ಈ ವರೆಗೆ ಕೈಗಾರಿಕೆಗೆ ಶೇ.2 ರಷ್ಟು ಭೂಮಿಯನ್ನು ಮಾತ್ರ ಬಳಸಲಾಗುತ್ತಿದೆ. ಆದರೆ ನೀರಾವರಿಯ ಭೂಮಿಯನ್ನು ಯಾರೇ ಖರೀದಿ ಮಾಡಿದರೂ ರೈತರಿಗೆ ಯಾವುದೇ ತೊಂದರೆ ಆಗಲ್ಲ. ಆ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

  • ಗ್ರಾಮ ಪಂಚಾಯತ್ ಅಧ್ಯಕ್ಷನ ಬೆಂಬಲಿಗರಿಂದ ಸದಸ್ಯನ ಬರ್ಬರ ಹತ್ಯೆ!

    ಗ್ರಾಮ ಪಂಚಾಯತ್ ಅಧ್ಯಕ್ಷನ ಬೆಂಬಲಿಗರಿಂದ ಸದಸ್ಯನ ಬರ್ಬರ ಹತ್ಯೆ!

    – ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ಕೊಲೆ

    ಬೆಳಗಾವಿ: ಗ್ರಾಮ ಪಂಚಾಯತ್ ನಲ್ಲಿ ಅವಿಶ್ವಾಸ ನಿರ್ಣಯ ಮಾಡಿದಕ್ಕೆ ಸದಸ್ಯರೊಬ್ಬರನ್ನು ಅಧ್ಯಕ್ಷನ ಬೆಂಬಲಿಗರು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

    ಹೊಸ ವಂಟಮೂರಿ ಗ್ರಾಮ ಪಂಚಾಯತ್ ಸದಸ್ಯ ಬನ್ನೆಪ್ಪ ಪಾಟೀಲ್ ಕೊಲೆಯಾದ ಸದಸ್ಯ. ಹೊಸ ವಂಟಮೂರಿ ಗ್ರಾಮ ಪಂಚಾಯತಿಯಲ್ಲಿ ಕಳೆದ ಮೂರು ವರ್ಷಗಳಿಂದ ಶಿವಾಜಿ ವಣ್ಣೂರ ಎಂಬವರು ಅಧ್ಯಕ್ಷನಾಗಿದ್ದನು. ಆದರೆ ಶಿವಾಜಿ ವಣ್ಣೂರನ ಕಾರ್ಯವೈಖರಿ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಲವು ದಿನಗಳಿಂದ ಅಧ್ಯಕ್ಷನ ವಿರುದ್ಧ ಗ್ರಾಮ ಪಂಚಾಯ್ತಿ ಸದಸ್ಯರ ಗುಂಪೊಂದು ಅವಿಶ್ವಾಸ ನಿರ್ಣಯ ಹೊರಡಿಸಲು ಯತ್ನಿಸಿತ್ತು ಆದರೇ ಸಫಲಗೊಂಡಿರಲಿಲ್ಲ. ಆದರೆ ಡಿಸೆಂಬರ್ 7ಕ್ಕೆ ಹತ್ಯೆಯಾದ ಬನ್ನೆಪ್ಪ ಪಾಟೀಲ್ ನೇತೃತ್ವದಲ್ಲಿ ಸದಸ್ಯರು ಮತ್ತೊಮ್ಮೆ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ ಮಾಡಿದ್ದರು. ಇದು ಶಿವಾಜಿ ವಣ್ಣೂರನ ಹತಾಶೆಗೆ ಕಾರಣವಾಗಿತ್ತು.

    ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ನಡು ಊರಿನಲ್ಲೇ ಸದಸ್ಯ ಬನ್ನಪ್ಪೆ ಪಾಟೀಲ್‍ನನ್ನು ಶಿವಾಜಿ ವಣ್ಣೂರ ಹಾಗೂ ಬೆಂಬಲಿಗರು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಗ್ರಾಮ ಪಂಚಾಯತಿಯಲ್ಲಿ ತನ್ನ ವಿರುದ್ಧ ಕೈಗೊಂಡ ಅವಿಶ್ವಾಸ ನಿರ್ಣಯ ಪ್ರಶ್ನಿಸಿ ಶಿವಾಜಿ ವಣ್ಣೂರ ಹೈಕೋರ್ಟ್ ಮೆಟ್ಟಿಲು ಏರಿದ್ದನು. ಹೈಕೋರ್ಟ್ ತೀರ್ಪು ಪ್ರಕಟವಾಗುವ ಮೊದಲೇ ಈ ಭೀಕರ ಹತ್ಯೆ ನಡೆದಿದೆ. ಕೊಲೆಯಾದ ಬನ್ನೆಪ್ಪ ಪಾಟೀಲ್ ಹಾಗೂ ಪತ್ನಿ ಸವಿತಾ ಪಾಟೀಲ್ ಇಬ್ಬರು ಸಹ ಪಂಚಾಯತ್ ಸದಸ್ಯರಾಗಿದ್ದಾರೆ. ಈ ಘಟನೆ ಇಡೀ ಹೊಸ ವಂಟಮೂರಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಾಕಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ.

    ಹೊಸ ವಂಟೂರಿ ಗ್ರಾಮವು ಶಾಸಕ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಬಹತೇಕ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷದ ಬೆಂಬಲಿಗರೇ ಆಗಿದ್ದಾರೆ. ಈಗ ಪಂಚಾಯತ್ ಚುನಾವಣೆ ದ್ವೇಷಕ್ಕೆ ಸದಸ್ಯರೊಬ್ಬರು ಬಲಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನನ್ನು ಕಂಡ್ರೆ ಬಿಜೆಪಿಯವರು ಓಡಿ ಹೋಗ್ತಿದ್ದಾರೆ- ರಾಹುಲ್ ಗಾಂಧಿ

    ನನ್ನನ್ನು ಕಂಡ್ರೆ ಬಿಜೆಪಿಯವರು ಓಡಿ ಹೋಗ್ತಿದ್ದಾರೆ- ರಾಹುಲ್ ಗಾಂಧಿ

    ನವದೆಹಲಿ: ನನ್ನನ್ನು ಕಂಡರೆ ಎಲ್ಲಿ ಅಪ್ಪಿಕೊಳ್ಳುತ್ತಾರೋ ಅಂತಾ ಬಿಜೆಪಿಯವರು ದೂರ ಸರಿಯುತ್ತಿದ್ದಾರೆ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ.

    ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರದ ಬಗ್ಗೆ ಈಗಲೂ ಪರ-ವಿರೋಧ ಚರ್ಚೆ ನಡೆಯುತ್ತಿದ್ದು, ಇದೀಗ ಮೋದಿ ಆಲಿಂಗನವನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.

    ಕರಣ್ ಥಾಪರ್ ಅವರ ಡೆವಿಲ್ಸ್ ಅಡ್ವೋಕೇಟ್ ಅನ್ ಟೋಲ್ಡ್ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿಯೇ ಉಪಸ್ಥಿತರಿದ್ದ ಅಡ್ವಾಣಿ ಅವರನ್ನು ಉದ್ದೇಶಿಸಿ ರಾಜಕೀಯವಾಗಿ ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇರಬಹುದು. ಹಾಗಂತ ದ್ವೇಷ ಸಾಧಿಸಲ್ಲ. ಅವರನ್ನ ಅಪ್ಪಿಕೊಂಡು ಪ್ರೀತಿ ತೋರುತ್ತೇನೆ ಅಂತ ಹೇಳುವ ಮೂಲಕ ತಾನು ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡ ವಿಚಾರವನ್ನು ಸಮರ್ಥಿಸಿಕೊಂಡರು.

    ಇದೇ ವೇಳೆ ನಾನು ಮೋದಿಯವರನ್ನು ಅಪ್ಪಿಕೊಂಡ ಬಳಿಕ ಇದೀಗ ಬಿಜೆಪಿಯವರು ನನ್ನ ಕಂಡ್ರೆ ಎಲ್ಲಿ ಅಪ್ಪಿಕೊಳ್ಳುತ್ತಾನೋ ಅಂತ ದೂರ ಸರಿಯುತ್ತಾರೆ ಅಂತ ರಾಹುಲ್ ತಮಾಷೆಯ ಮಾತುಗಳನ್ನಾಡಿದ್ರು.

    ಕಳೆದ ಶುಕ್ರವಾರ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರ್ ಎಸ್‍ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದ್ದರು.

  • 50 ರಿಂದ 100 ಕೋಟಿ ಕೊಟ್ಟು ಕರ್ನಾಟಕದಲ್ಲಿ ನಮ್ಮ ಶಾಸಕರ ಖರೀದಿಗೆ ಯತ್ನಿಸಿದ್ರಿ – ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಖರ್ಗೆ ಕಿಡಿ

    50 ರಿಂದ 100 ಕೋಟಿ ಕೊಟ್ಟು ಕರ್ನಾಟಕದಲ್ಲಿ ನಮ್ಮ ಶಾಸಕರ ಖರೀದಿಗೆ ಯತ್ನಿಸಿದ್ರಿ – ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಖರ್ಗೆ ಕಿಡಿ

    ನವದೆಹಲಿ: ಕರ್ನಾಟಕ ವಿಧಾನಸಭೆ ಬಳಿಕ ಬಹುಮತ ಸಾಬೀತು ಪಡಿಸಲು ಬಿಜೆಪಿಯವರು ಶಾಸಕರ ಖರೀದಿಗೆ ಮುಂದಾಗಿದ್ದರು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

    ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ವೇಳೆ ಮಾತನಾಡಿದ ಅವರು, ಬಿಜೆಪಿ ನಾಯಕರು ದೂರವಾಣಿ ಕರೆ ಮಾಡಿ ಆಪರೇಷನ್ ಕಮಲಕ್ಕೆ ಮುಂದಾಗಿದ್ದರು. ನಮ್ಮ ಹತ್ತಿರ ಅವರು ನಡೆಸಿದ ಸಂಭಾಷಣೆಯ ಧ್ವನಿಯ ಮುದ್ರಣವಿದೆ ಎಂದು ದೂರಿದರು. ಆದರೆ ಈ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ನಿಮ್ಮ ಸಮಯ ಮುಗಿದಿದೆ. ನೀವು ಹೊರಗೆ ಈ ಆರೋಪ ಮಾಡಿ, ಲೋಕಸಭೆಯಲ್ಲಿ ಆರೋಪ ಸಲ್ಲದು ಎಂದು ಸೂಚಿಸಿದ್ದರು. ಆದರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಹಿಂದಿನ ಸಾಲಿನಲ್ಲಿ ಕುಳಿತಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ, ನಮ್ಮ ಬಳಿ ಸೂಕ್ತ ದಾಖಲೆಗಳಿವೆ. ಹೀಗಾಗಿ ಆರೋಪ ಮಾಡುತ್ತಿದ್ದೇವೆ ಎಂದು ಗರಂ ಆದರು.

    ಕಾಂಗ್ರೆಸ್ ರಾಷ್ಟ್ರದ ಬಹು ದೊಡ್ಡ ಪಕ್ಷ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಉಳಿದ ಪಕ್ಷಗಳಿಗೆ 30 ನಿಮಿಷ ಕಾಲಾವಕಾಶ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೂ ಅಷ್ಟೇ ಸಮಯ ನಿಗಧಿಯಾಗಿದೆ. ಹೀಗಾಗಿ 130 ಕೋಟಿ ಜನರಿಗೆ ಬಿಜೆಪಿಯ ಭ್ರಷ್ಟಾಚಾರ ಸಾಬೀತು ಪಡಿಸಲು ಇಷ್ಟು ಸಮಯ ಸಾಲುವುದಿಲ್ಲ ಎಂದು ಹೇಳಿದರು.

    ತಮ್ಮ ಭಾಷಣದ ವೇಳೆ ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ಮಾಡಲು ಹಲವು ಕ್ರಮಗಳನ್ನು ಎದುರಿಸಿದೆ ಎಂದು ಆರೋಪಿಸಿದರು. ಅಲ್ಲದೇ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ಬಿಜೆಪಿ ಮರೆತಿದೆ ಎಂದು ತಮ್ಮ ಮಾತಿನ ಮೂಲಕ ತಿವಿದರು.

    ನಮ್ಮ ಆಡಳಿತ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಬಗೆ ಹರಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ರೈತರ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ ಹೆಚ್ಚಳವಾಗಿದೆ. ಆದರೆ ಅವರು ಅಂದಾನಿ, ಅಂಬಾನಿ ಬಗ್ಗೆ ಮಾತನಾಡುತ್ತಿದ್ದು, ರೈತರ ಪರ ಮಾತನಾಡಿಲ್ಲ. ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಿಜೆಪಿ ಅವರು ಅಂಗೀಕರಿಸಿಲ್ಲ ಎಂದು ಆರೋಪಿಸಿದರು.

  • ಅವಿಶ್ವಾಸ ಮಂಡನೆ ವಿರುದ್ಧ ಶಿವಸೇನೆ ಮತ – ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ

    ಅವಿಶ್ವಾಸ ಮಂಡನೆ ವಿರುದ್ಧ ಶಿವಸೇನೆ ಮತ – ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ

    ನವದೆಹಲಿ: ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಡಸಲಿಚ್ಚಿಸಿರುವ ಅವಿಶ್ವಾಸ ಮಂಡನೆ ವಿರುದ್ಧ ಮತ ನೀಡಿ, ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಮುಂದಾಗಿದೆ.

    ಶಿವಸೇನೆ ಪಕ್ಷ ತನ್ನ ಸಂಸದರಿಗೆ ಈ ಕುರಿತು ವಿಪ್ ಜಾರಿ ಮಾಡಿದ್ದು, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಲು ಸೂಚಿಸಿದೆ.

    ಇದಕ್ಕೂ ಮುನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರಿಗೆ ಕರೆ ಮಾಡಿ ಬೆಂಬಲ ನೀಡಲು ಮನವಿ ಮಾಡಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿತ್ತು, ಇದರ ಬೆನ್ನಲ್ಲೇ ಸದ್ಯ ಶಿವಸೇನೆ ವಿಪ್ ಜಾರಿ ಮಾಡಿದೆ.

    ಶಿವಸೇನೆ ಪಕ್ಷದ ನಿರ್ಣಯಕ್ಕೂ ಮುನ್ನ ತಮಿಳುನಾಡು ಸಿಎಂ ಕೆ ಪಳಣಿಸ್ವಾಮಿ ಅವರು ಎಐಎಂಡಿಕೆ ಪಕ್ಷ ಅವಿಶ್ವಾಸ ನಿರ್ಣಯ ವಿರುದ್ಧ ಮತ ಚಲಾಯಿಸುವುದಾಗಿ ಪರೋಕ್ಷವಾಗಿ ತಿಳಿಸಿದ್ದರು.

    ಅಂದಹಾಗೇ ತೆಲುಗುದೇಶಂ ಪಕ್ಷವೂ ಆಂಧ್ರ ಪ್ರದೇಶದ ವಿಶೇಷ ಸ್ಥಾನಮಾನ ಆಗ್ರಹಿಸಿ ಸಂಸತ್ ನಲ್ಲಿ ಕೇಂದ್ರ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕಲ್ಪಿಸಿವಂತೆ ಮನವಿ ಮಾಡಿತ್ತು. ಇದರಂತೆ ಮನ್ಸೂನ್ ಅಧಿವೇಶನದ ಮೊದಲ ದಿನವಾದ ಬುಧವಾರದಂದು ಸ್ಪೀಕರ್ ಸುಮಿತ್ರಾ ಮಹಾಜನ್ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಶುಕ್ರವಾರ ಅವಕಾಶ ನೀಡಿದ್ದರು.

    ಈ ಹಿಂದೆ ಹಲವು ಬಾರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 2019ರ ಲೋಕಸಭಾ ಚುನಾವಣೆಯ ವೇಳೆ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದರು. ಅಲ್ಲದೇ ಮಹಾರಾಷ್ಟ್ರ ಚುನಾವಣೆಯ ವೇಳೆಯೂ ಏಕಾಂಗಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ಶಿವಸೇನೆ ಪಕ್ಷ ಘೋಷಿಸಿತ್ತು.