Tag: ಅವ್ಯವಸ್ಥೆ

  • ‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ನಿನ್ನೆಯಷ್ಟೇ ನಡೆದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಸಮಾರಂಭ ಅವ್ಯವಸ್ಥೆ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಆ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರಕ್ಕೆ ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ  ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ.

    ‘ವೆರಿ ಸಾರಿ ಫಾರ್ ಸ್ಟೇಜ್ ಆರ್ಗನೈಸೆಷನ್. ನಿನ್ನೆ ಆದ ಅವ್ಯವಸ್ಥೆ ಬಗ್ಗೆ ನೀವೇ ವಿಶ್ಲೇಷಣೆ ಮಾಡಿ, ಬಳಿಕ ನಾವು ಮಾತಾಡ್ತೇವೆ’ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ‘ಕರ್ನಾಟಕ ರತ್ನ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕಾಲದಲ್ಲಿ ನಾನೂ ಇದ್ದೆ. ಎಂತಹ ಕಾರ್ಯಕ್ರಮ ಅದ’ ಎಂದು ಡಾ.ರಾಜ್ ಕುಮಾರ್ ಅವರಿಗೆ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ಡಿ.ಕೆ. ಶಿವಕುಮಾರ್ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಅನುಪಮಾ ಗೌಡ ವಿರುದ್ಧ ಸಿಡಿದೆದ್ದ ರೂಪೇಶ್‌ ರಾಜಣ್ಣ

    ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ನಿನ್ನೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರವನ್ನು ಕರ್ನಾಟಕ ಸರಕಾರ ಬೆಂಗಳೂರಿನ ವಿಧಾನ ಸೌಧದ ಮುಂದೆ ಆಯೋಜಿಸಲಾಗಿತ್ತು. ಮಳೆಯ ಕಾರಣದಿಂದಾಗಿ ತರಾತುರಿಯಲ್ಲೇ ಕಾರ್ಯಕ್ರಮವನ್ನು ಮುಗಿಸಲಾಯಿತು. ಈ ಭಾವನಾತ್ಮಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿಗಳು ಆಗಮಿಸಿದ್ದರು. ಆದರೆ, ಅವರು ಮಳೆಯಲ್ಲಿ ನೆನೆಯುವಂತಾಯಿತು. ಪುನೀತ್ ಕುಟುಂಬಕ್ಕೆ ಮತ್ತು ಗಣ್ಯರು ಕುಳಿತುಕೊಳ್ಳುವ ಜಾಗದಲ್ಲೂ ಸರಿಯಾದ ವ್ಯವಸ್ಥೆ ಇರಲಿಲ್ಲ. ಹಾಗಾಗಿ ತರಾತುರಿಯಲ್ಲೇ ಕಾರ್ಯಕ್ರಮ ಮುಗಿಸಬೇಕಾಗಿ ಬಂತು.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆ ವಿರುದ್ಧ ಸೋಂಕಿತರ ಆಕ್ರೋಶ

    ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆ ವಿರುದ್ಧ ಸೋಂಕಿತರ ಆಕ್ರೋಶ

    ತುಮಕೂರು/ಚಾಮರಾಜನಗರ: ಸಂತೇಮರಹಳ್ಳಿ ಕೋವಿಡ್ ಕೇರ್ ಹಾಗೂ ಪಾವಗಡ ತಾಲೂಕಿನ ಕುರುಬರಹಳ್ಳಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಮೂಲಸೌಲಭ್ಯವಿಲ್ಲದೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೊರೊನಾ ಸೆಂಟರ್‌ನಲ್ಲಿ ಅವ್ಯವಸ್ಥೆ ಮುಂದುವರಿದಿದ್ದು, ಆಕ್ರೋಶಗೊಂಡ ಸೋಂಕಿತರು ಕೇರ್ ಸೆಂಟರ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಲ್ಲಿನ ಕೊರೊನಾ ಕೇರ್ ಸೆಂಟರ್‌ನಲ್ಲಿ ಹಳಸಿದ ಅನ್ನ, ಒಣಗಿದ ಚಪಾತಿ, ಅರ್ಧಂಬರ್ಧ ಬೆಂದ ದೋಸೆ, ಬಿಸಿನೀರಿನಂತಿರುವ ಟೀ ನೀಡಲಾಗುತ್ತಿದೆ. ಇದನ್ನೂ ಓದಿ: ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ

    5 ಬಾತ್ ರೂಮ್‍ಗೆ ಒಂದೇ ಬಕೆಟ್ ಇಡಲಾಗಿದೆ. 7-8 ದಿನಗಳಾದರೂ ಕಸ ಹೊಡೆದಿಲ್ಲ. ಶೌಚಾಲಯ ವಾರದವಾದರು ಸ್ವಚ್ಛ ಮಾಡಿಲ್ಲ, ಕೇಳಿದರೆ ನೀವೆ ಮಾಡಿಕೊಳ್ಳಿ ಎನ್ನುತ್ತಾರೆ. ಸರಿಯಾಗಿ ಔಷಧಿಯನ್ನು ನೀಡುವುದಿಲ್ಲ. ಹೀಗೆ ಮುಂದುವರಿದರೆ ಬೇರೆ ಬೇರೆ ಕಾಯಿಲೆಗಳು ಬರುತ್ತವೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮನ್ನ ಪ್ಲೀಸ್ ಮನೆಗೆ ಕಳಿಸಿ- ಕೋವಿಡ್ ಸೋಂಕಿತರ ಅಳಲು

    ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಸ್ಯಾನಿಟೈಸ್ ಮಾಡದೆ ಇರುವುದರಿಂದ ಹೊಸದಾಗಿ ರೋಗಿಗಳನ್ನು ತಂದು ಇಲ್ಲಿ ಬಿಡುತ್ತಿದ್ದಾರೆ. ಗುಣಮುಖರಾದವರು ಕೂಡ ಪುನಃ ಸೋಂಕಿಗೆ ಒಳಗಾಗುವಂತಹ ಸ್ಥಿತಿ ಇದೆ. ಬೆಳಗ್ಗೆ 7 ಗಂಟೆ ಆದರೂ ಬಿಸಿನೀರಿನ ವ್ಯವಸ್ಥೆ ಇರುವುದಿಲ್ಲ. ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಅಡುಗೆ ಮನೆಯಲ್ಲಿಯೂ ಸ್ವಚ್ಛತೆ ಕಾಪಾಡಿಲ್ಲ. ಇದರಿಂದಾಗಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದಂತಾಗಿದೆ. ಹೀಗಾಗಿ, ಹೋಂ ಕ್ವಾರಂಟೈನ್‍ಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಸೋಂಕಿತರು ಒತ್ತಾಯಿಸಿದ್ದಾರೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್- ನಿತಿನ್ ರಾಜ್ ಯಾರು..?

  • ರಾಜ್ಯದಲ್ಲಿ ವ್ಯಾಕ್ಸಿನ್ ಅವ್ಯವಸ್ಥೆಯನ್ನ ಒಪ್ಪಿಕೊಂಡ ಲಿಂಬಾವಳಿ

    ರಾಜ್ಯದಲ್ಲಿ ವ್ಯಾಕ್ಸಿನ್ ಅವ್ಯವಸ್ಥೆಯನ್ನ ಒಪ್ಪಿಕೊಂಡ ಲಿಂಬಾವಳಿ

    ಕೋಲಾರ: ವ್ಯಾಕ್ಸಿನ್ ಹಾಕಿಸಿಕೊಳ್ಳುವ ಕ್ರೇಜ್ ಹಾಗೂ ಕೊರೊನಾ ಹೆದರಿಕೆ ಶುರುವಾಗಿದೆ. ಹಾಗಾಗಿ ವ್ಯಾಕ್ಸಿನ್‍ಗೆ ಬೇಡಿಕೆ ಸೃಷ್ಟಿಯಾಗಿರುವ ಕಾರಣ ರಾಜ್ಯದಲ್ಲಿ ಅವ್ಯವಸ್ಥೆ ಆಗಿದೆ ಎಂದು ಕೋಲಾರದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ವ್ಯಾಕ್ಸಿನ್ ಅವ್ಯವಸ್ಥೆಯನ್ನ ಒಪ್ಪಿಕೊಂಡಿದ್ದಾರೆ.

    ಕೋಲಾರದ ಜಿಲ್ಲಾ ಎಸ್‍ಎನ್‍ಆರ್ ಆಸ್ಪತ್ರೆಗೆ ಭೇಟಿ ನೀಡಿ ಬೆಡ್, ಆಕ್ಸಿಜನ್, ವ್ಯಾಕ್ಸಿನ್ ಸೇರಿದಂತೆ ಕೋವಿಡ್ ಸೆಂಟರ್‌ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಕುರಿತು ಸಿಎಂ ಕೂಡ ಹೇಳಿದ್ದಾರೆ. ರಾಜ್ಯದಲ್ಲಿ ಜನರು ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯಕ್ಕೆ ಬೇಕಾದ ವ್ಯಾಕ್ಸಿನ್ ನಮಗೆ ಸಿಗುತ್ತೆ ಎಂದಿದ್ದಾರೆ.

    ಕೋವಿಶೀಲ್ಡ್ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಆದರೆ ಕೊವ್ಯಾಕ್ಸಿನ್ ಸಿಗುತ್ತಿಲ್ಲ. ರಾಜ್ಯದಲ್ಲಿ ವ್ಯಾಕ್ಸಿನ್ ಸಿಗುತ್ತಿಲ್ಲ ಎನ್ನುವುದನ್ನು ನಾನು ಒಪ್ಪಿಕೊಳ್ಳಲೇ ಬೇಕು ಎಂದು ರಾಜ್ಯದಲ್ಲಿರುವ ವ್ಯಾಕ್ಸಿನ್ ಅವ್ಯವಸ್ಥೆ ಒಪ್ಪಿಕೊಂಡಿದ್ದಾರೆ. ಕೋವ್ಯಾಕ್ಸಿನ್ ಉತ್ಪಾದನೆ ಕಡಿಮೆಯಾಗಿದ್ದು, ನಮಗಿಂತ ಬೇರೆ ರಾಜ್ಯದಲ್ಲಿ ಹೆಚ್ಚು ಆರ್ಡರ್ ಮಾಡಿದ್ದಾರೆ. ಹಾಗಾಗಿ ಇರುವುದರಲ್ಲಿ ಅಡ್ಜಸ್ಟ್ ಮಾಡಿ ಕೊಡುತ್ತಿದ್ದಾರೆ ಎಂದರು.

    ಸೋಂಕಿನ ಪ್ರಮಾಣ ಹೆಚ್ಚಾದಂತೆ ಜನರಲ್ಲಿ ಅರಿವು ಹೆಚ್ಚಾಗಿದೆ. ಶೇ.30 ರಷ್ಟು ಸೋಂಕಿತ ಜನರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ ಸೋಂಕು ಹರಡಲು ಮತ್ತಷ್ಟು ಕಾರಣವಾಗಿದೆ. ಲಾಕ್‍ಡೌನ್ ಅನಿವಾರ್ಯತೆಯನ್ನು ಜನರೇ ನಿರ್ಮಾಣ ಮಾಡುತ್ತಿದ್ದಾರೆ.

    ರಾಜ್ಯದಲ್ಲಿ ಕೇಸ್‍ಗಳು ಹೆಚ್ಚಾದರೆ ತಪ್ಪೇನಿಲ್ಲ, ಯಾಕೆಂದರೆ ನಮ್ಮಲ್ಲಿ ಟೆಸ್ಟಿಂಗ್‍ಗಳು ಹೆಚ್ಚಾಗುತ್ತಿದೆ. ಎರಡನೇ ಅಲೆಯಲ್ಲಿ ಏನಾಗುತ್ತದೆ ಅಂತ ಗೊತ್ತಾಗುತ್ತಿಲ್ಲ ಎಂದು ತಮ್ಮ ಅಸಾಹಯಕತೆಯನ್ನ ಹೇಳಿಕೊಂಡಿದ್ದಾರೆ. ಬೆಳಿಗ್ಗೆ ಒಂದು ರೀತಿ ಇದ್ದರೆ ಸಂಜೆಗೆ ಮತ್ತೊಂದು ಥರ ದೇಹದಲ್ಲಿ ಬದಲಾಗುತ್ತದೆ. ರೋಗ ಲಕ್ಷಣ ಇದ್ದರೆ ಕೋವಿಡ್ ಕೇರ್ ಸೆಂಟರ್‌ಗೆ ಕೂಡಲೇ ಕಳುಹಿಸಬೇಕು ಎಂದು ಆಶಾ ಕಾರ್ಯಕರ್ತರಿಗೆ, ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅವ್ಯವಸ್ಥೆ ಸರಿಪಡಿಸಿದ ಜಿಲ್ಲಾ ಕೋವಿಡ್ ಆಸ್ಪತ್ರೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅವ್ಯವಸ್ಥೆ ಸರಿಪಡಿಸಿದ ಜಿಲ್ಲಾ ಕೋವಿಡ್ ಆಸ್ಪತ್ರೆ

    ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿದ್ದ ಅವ್ಯವಸ್ಥೆ ಕುರಿತು ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ರೋಗಿಯೊಬ್ಬರು ವಿಡಿಯೋ ಮಾಡಿ ಅಳಲನ್ನು ತೋಡಿಕೊಂಡಿದ್ದರು.

    ಇದನ್ನು ಶುಕ್ರವಾರ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಈ ಸುದ್ದಿಯ ನಂತರ ಜಿಲ್ಲಾಡಳಿತ ಕೊನೆಗೂ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಶುಚಿತ್ವದ ಕಡೆ ಗಮನಹರಿಸಿದೆ. ಇದಕ್ಕೆಲ್ಲ ಸಹಾಯ ಮಾಡಿದ ಪಬ್ಲಿಕ್ ಟಿಗೆ ಕೊರೊನಾ ಒಳರೋಗಿಗಳು ಧನ್ಯವಾದ ಹೇಳಿದ್ದಾರೆ.

    ಅಸಮಾಧಾನ ವ್ಯಕ್ತಪಡಿಸಿದ್ದ ಸೋಂಕಿತ:
    ಆಸ್ಪತ್ರೆಯಲ್ಲಿ 20 ರೋಗಿಗಳಿಗೆ ಒಂದೇ ಟಾಯ್ಲೆಟ್ ಇದ್ದು, ಕುಡಿಯಲು ಬಿಸಿ ನೀರಿಗೂ ಪರದಾಡಬೇಕಿದೆ. ದಿನಕ್ಕೆ ಎರಡು ಬಾರಿ ಮಾತ್ರ ಬಿಸಿ ನೀರನ್ನು ಕೊಡುತ್ತಿದ್ದಾರೆ. ಸ್ಯಾನಿಟೈಸರ್ ವಿತರಣೆಯಲ್ಲೂ ವ್ಯತ್ಯಾಸ ಮಾಡಲಾಗಿದೆ. ಎರಡು ಮೂರು ದಿನಗಳಾದರೂ ಸ್ಯಾನಿಟೈಸರ್ ಕೊಡುತ್ತಿಲ್ಲ. ಆಸ್ಪತ್ರೆಯಲ್ಲಿ ಇರುವುದಕ್ಕಿಂತ ಮನೆಯಲ್ಲಿದ್ದರೆ ಚೆನ್ನಾಗಿರುತ್ತಿದ್ದೆವು ಎಂದು ಮಡಿಕೇರಿಯ ಕೋವಿಡ್ ವಾರ್ಡ್‍ನಲ್ಲಿರುವ ಕೊರೊನಾ ಸೋಂಕಿತ ಅಸಮಾಧಾನ ವ್ಯಕ್ತಪಡಿಸಿದ್ದರು.

  • ಅವ್ಯವಸ್ಥೆಯ ಆಗರವಾಗಿದೆ ಬೆಳಗಾವಿ ಉಪ ನೋಂದಣಿ ಕಚೇರಿ

    ಅವ್ಯವಸ್ಥೆಯ ಆಗರವಾಗಿದೆ ಬೆಳಗಾವಿ ಉಪ ನೋಂದಣಿ ಕಚೇರಿ

    ಬೆಳಗಾವಿ: ಪ್ರತಿ ನಿತ್ಯ ಸಾವಿರಾರು ಜನರು ವಿವಾಹ ನೋಂದಣಿ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಗೆ ಆಗಮಿಸುತ್ತಾರೆ. ಆದರೆ ಈ ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದೆ.

    ಸರ್ಕಾರಕ್ಕೆ ದಿನಕ್ಕೆ ಲಕ್ಷಾಂತರ ರೂ. ಆದಾಯ ಬರುವುದು ಈ ವಿವಾಹ ನೋಂದಣಿ ಕಚೇರಿಯಿಂದ. ಆದರೆ ಇಲ್ಲಿನ ಅಧಿಕಾರಿಗಳ ಒಣ ರಾಜಕಾರಣದಿಂದ ಇಲ್ಲಿ ಬರುವ ಜನರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡದಿರುವುದಕ್ಕೆ ಜನರು ಹಿಡಿಶಾಪ ಹಾಕಿಕೊಂಡು ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಬೆಳಗಾವಿ ಉಪ ನೋಂದಣಿ ಕಚೇರಿ ಬರೋಬ್ಬರಿ 140 ವರ್ಷ ಹಳೆಯದಾದ ಕಟ್ಟಡದಲ್ಲಿದೆ. ಅಮೂಲ್ಯ ದಾಖಲೆಗಳಿರುವ ಕಚೇರಿಯ ಮಾಡು ಸೋರುತ್ತಿದ್ದರೂ ಹೊಸ ಕಟ್ಟಡ ನಿರ್ಮಾಣವಾಗಿಲ್ಲ. ಕೇಂದ್ರದಲ್ಲಿ ಕುಳಿತುಕೊಳ್ಳಲು ಬೇಕಾದ ಆಸನದ ವ್ಯವಸ್ಥೆ ಇಲ್ಲ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ಬಂದರೆ ಕಟ್ಟಡದ ಬದಿಯಲ್ಲೇ ನಿಲ್ಲಬೇಕಿದೆ. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಕಂಪ್ಯೂಟರ್, ಸ್ಕ್ಯಾನರ್ ಇನ್ನಿತರ ಉಪಕರಣ ಮೇಲ್ದರ್ಜೆಗೇರಬೇಕಿದೆ ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

    ಒಟ್ಟಾರೆ ತಮ್ಮ ಕೆಲಸ ಬೇಗ ಇತ್ಯರ್ಥವಾಗಲು ವಿವಾಹ ನೋಂದಣಿ ಕಚೇರಿಗೆ ಬಂದರೆ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣ ನೀಡಿ ಜನರಿಗೆ ರಸ್ತೆಯ ಮಧ್ಯದಲ್ಲೇ ಕಾಯುವ ಸ್ಥಿತಿ ಬದಲಾಗಬೇಕು. ಶೀಘ್ರದಲ್ಲೇ ಇಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

  • ಬ್ರಿಮ್ಸ್​ನಲ್ಲಿ ಕೊಳಕು ಬೆಡ್, ಕೋಣೆಗಳು- ಅವ್ಯವಸ್ಥೆ ಕಂಡು ಸಚಿವರು ಕೆಂಡಾಮಂಡಲ

    ಬ್ರಿಮ್ಸ್​ನಲ್ಲಿ ಕೊಳಕು ಬೆಡ್, ಕೋಣೆಗಳು- ಅವ್ಯವಸ್ಥೆ ಕಂಡು ಸಚಿವರು ಕೆಂಡಾಮಂಡಲ

    ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿದ್ದ ಕೊಳಕು ಬೆಡ್, ಕೊಠಡಿಗಳು ಹಾಗೂ ಅವ್ಯವಸ್ಥೆಯನ್ನು ಕಂಡು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಇ. ತುಕಾರಾಂ ಅವರು ಸಿಟ್ಟಿಗೆದ್ದು ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

    ಇಂದು ಬ್ರಿಮ್ಸ್ ಆಸ್ಪತ್ರೆಯನ್ನು ಪರಿಶೀಲಿಸಲು ಮೂವರು ಸಚಿವರು ಹಾಗೂ ಎಂಪಿ ಭೇಟಿ ಕೊಟ್ಟಿದ್ದರು. ಆರೋಗ್ಯ ಸಚಿವ ಶಿವಾನಂದ ಪಾಟೀಲ್, ವೈದ್ಯಕೀಯ ಸಚಿವ ಇ ತುಕಾರಾಂ, ಕ್ರೀಡಾ ಸಚಿವ ರಹೀಂ ಖಾನ್ ಹಾಗೂ ಸಂಸದ ಭಗವಂತ್ ಖೂಬಾ ಅವರು ಆಸ್ಪತ್ರೆಗೆ ಭೇಟಿಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಕೆಂಡಾಮಂಡಲರಾದರು.

    ಆಸ್ಪತ್ರೆಯ ಅವ್ಯವಸ್ಥೆ, ರೋಗಿಗಳಿಗೆ ನೀಡುತ್ತಿರುವ ಕೊಳಕು ಬೆಡ್‍ಗಳು, ಸ್ವಚ್ಛವಿಲ್ಲದ ಕೊಠಡಿಗಳನ್ನು ಕಂಡು ಸಚಿವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಹಾಗೆಯೇ ಆಸ್ಪತ್ರೆಯ ಮುಚ್ಚಿದ ಕೋಣೆಯ ಬೀಗ ತೆಗೆಯಲು ಸಚಿವರು ತಾಕೀತು ಮಾಡಿದ್ದು, ಕೊಣೆಯನ್ನು ಸಿಬ್ಬಂದಿಗಳು ತೆರೆದ ನಂತರ ಅಲ್ಲಿನ ದುಸ್ಥಿತಿ ಕಂಡು ಕೆಂಡಾಮಂಡಲರಾದರು. ಏನಿದು ಬ್ರಿಮ್ಸ್ ಪರಿಸ್ಥಿತಿ ಎಂದು ಪ್ರಶ್ನಿಸಿ ಜಿಲ್ಲಾ ಸರ್ಜನ್ ಡಾ. ರತಿಕಾಂತ್‍ಸ್ವಾಮಿ ಮೇಲೆ ಸಚಿವರು ಗರಂ ಆದರು.

    ಬಳಿಕ ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ಶಿವಾನಂದ ಪಾಟೀಲ್ ಅವರಿಗೆ ವ್ಯಕ್ತಿಯೊಬ್ಬ ಹೇಳಿದ ಮಾತು ಮುಜುಗರಕ್ಕೆ ಒಳಗಾಗುವಂತೆ ಮಾಡಿತು. ಸಚಿವರನ್ನು ಕಂಡ ವ್ಯಕ್ತಿ, ಬ್ರಿಮ್ಸ್ ಗೆ ಬೀಗ ಹಾಕಿಕೊಂಡು ಹೋಗಿ ಎಂದು ಕೀಲಿಕೈ ನೀಡಿದ್ದಾನೆ. ಅಲ್ಲದೆ ಬ್ರಿಮ್ಸ್ ಅವ್ಯವಸ್ಥೆ ನೋಡಿ ಸಾಕಾಗಿದೆ ಎಂದು ಸಚಿವರ ಬಳಿ ದೂರಿದ್ದಾನೆ. ಇದನ್ನು ಕಂಡು ಕಕ್ಕಾಬಿಕ್ಕಿಯಾದ ಶಿವಾನಂದ ಪಾಟೀಲ್ ಅವರು, ಇಲ್ಲಾ ಸರಿಪಡಿಸುತ್ತೇವೆ ಎಂದು ವ್ಯಕ್ತಿಯನ್ನು ಸಮಾಧಾನ ಮಾಡಿ, ಮುಜುಗರದಿಂದಲೇ ಕಾರು ಹತ್ತಿ ಹೋದರು.

  • ವಿಮ್ಸ್ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ್ರು ವೈದ್ಯಕೀಯ ಸಚಿವ..!

    ವಿಮ್ಸ್ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ್ರು ವೈದ್ಯಕೀಯ ಸಚಿವ..!

    ಬಳ್ಳಾರಿ: ಸದಾ ವಿವಾದಗಳಿಂದಲೇ ಹೆಸರುವಾಸಿ ಆಗಿರುವ ಜಿಲ್ಲೆಯ ವಿಮ್ಸ್ ಆಸ್ಪತ್ರೆಗೆ ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಇಂದು ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆ ವ್ಯವಸ್ಥೆ ನೋಡಿ ಕೆಂಡಾಮಂಡಲರಾಗಿದ್ದಾರೆ.

    ಶುಕ್ರವಾರವಷ್ಟೆ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದ ಸಚಿವರು ಇಂದು ವಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ವಿರುದ್ಧ ಗರಂ ಆಗಿದ್ದಾರೆ. ರೋಗಿಗಳನ್ನು ಭೇಟಿ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ವೆಂಟಿಲೇಟರ್, ಡಯಾಲಿಸಿಸ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಆಸ್ಪತ್ರೆ ಅವ್ಯವಸ್ಥೆಯನ್ನು ಕಣ್ಣಾರೆ ಕಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

    ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ತುಕಾರಾಂ, ಆಸ್ಪತ್ರೆಯಲ್ಲಿರುವ ವೆಂಟಿಲೇಟರ್ ಹಾಗೂ 14 ಡಯಾಲಿಸಿಸ್‍ಗಳಲ್ಲಿ 7 ಕೆಟ್ಟು ಹೋಗಿದೆ. ಇವೆಲ್ಲವನ್ನೂ ರೆಡಿ ಮಾಡುವುದರ ಜೊತೆಗೆ 4 ಹೊಸ ವೆಂಟಿಲೇಟರ್ ಖರೀದಿ ಮಾಡಲು ಆಸ್ಪತ್ರೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿಗಾಗಿ ಅಲ್ಲಿಪುರ ಕೆರೆಯಿಂದ ನೇರವಾಗಿ ವಿಮ್ಸ್‍ಗೆ ಸಂಪರ್ಕ ಕಲ್ಪಿಸಲಾಗುವುದು. ವಿಮ್ಸ್ ಆಸ್ಪತ್ರೆಗೆ ಬೇಕಾಗುವ ವಿವಿಧ ಯಂತ್ರಗಳನ್ನು ಖರೀದಿ ಮಾಡಲು 4.50 ಕೋಟಿ, ಔಷಧಿಗಾಗಿ 3 ಕೋಟಿ ಮೀಸಲಿಡಲು ಸೂಚಿಸಿದ್ದೇನೆ. ಹೊರಗಡೆ ಔಷಧಿ ಚೀಟಿ ಬರೆದುಕೊಡದಂತೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಇಂದು ಬ್ರೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಬ್ರೀಮ್ಸ್ ನಿರ್ದೇಶಕ ಡಾ. ಚನ್ನಣ್ಣನವರ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.

    ಆಸ್ಪತ್ರೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಹಾಗೂ ಅವ್ಯವಸ್ಥಿತೆಯಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಸ್ಥಳೀಯರು ಸಚಿವರಿಗೆ ದೂರು ನೀಡಿದ್ದರು. ಹೀಗಾಗಿ ಇಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವಪ್ಪ ನೇತೃತ್ವದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬೆಡ್‍ಗಳ ಮೇಲೆ ದೂಳು ಇರುವುದು, ಸ್ವಚ್ಛತೆ ಇಲ್ಲದಿರುವುದು, ಬೆಳಕಿನ ಅಭಾವ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

    ನಿಮ್ಮ ಮನೆಯ ಕೆಲಸಗಾರರು ಸರಿಯಾಗಿ ಕೆಲಸ ಮಾಡದಿದ್ದರೆ ನೀವು ಸುಮ್ಮನೆ ಇರುತ್ತಿರಾ? ಆಸ್ಪತ್ರೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ನಿಮಗೇನು ತೊಂದರೆ? ನಿಮ್ಮ ನಿಷ್ಕಾಳಜಿ ರೋಗಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಿಮ್ಮ ಸಮಸ್ಯೆ ಏನು ಅಂತಾ ಹೇಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

    ಸ್ವಚ್ಛತೆ ಕಾಪಾಡಲು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ನಿಮಗೆ ಏನು ಸವಲತ್ತು ಬೇಕು ಹೇಳಿ, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನಿಮಗೆ ಅನುಕೂಲ ಮಾಡಿಕೊಡುತ್ತೇನೆ. ಸಹಾಯ ಮಾಡಲಾಗುತ್ತದೆ ಅಂತಾ ನಾನೇ ಪತ್ರದಲ್ಲಿ ಬರೆದುಕೊಡಬೇಕೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆ- ಗರ್ಭಿಣಿ, ಮಕ್ಕಳಿಂದ ಬಯಲಲ್ಲೇ ಊಟ!

    ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆ- ಗರ್ಭಿಣಿ, ಮಕ್ಕಳಿಂದ ಬಯಲಲ್ಲೇ ಊಟ!

    ಬೆಂಗಳೂರು: ಮಾತೃ ಪೂರ್ಣ ಯೋಜನೆಯ ಅವ್ಯವಸ್ಥೆಯಿಂದಾಗಿ ಗರ್ಭಿಣಿ ಮತ್ತು ಮಕ್ಕಳು ಬಯಲಲ್ಲೇ ಊಟ ಮಾಡುತ್ತಿರುವ ಶೋಚನಿಯ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪುಟ್ಟೇಗೌಡನಪಾಳ್ಯದಲ್ಲಿ ವರದಿಯಾಗಿದೆ.

    ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಪುಟ್ಟೇಗೌಡನಪಾಳ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಮಾತೃ ಪೂರ್ಣ ಯೋಜನೆ ಊಟ ವಿತರಣೆಯು ಅವ್ಯವಸ್ಥೆಯ ಆಗರವಾಗಿದೆ. ಅಂಗನವಾಡಿ ಕೇಂದ್ರದಲ್ಲಿ ನೀಡುವ ಮಾತೃಪೂರ್ಣ ಯೋಜನೆಯ ಊಟಕ್ಕಾಗಿ ಗರ್ಭಿಣಿ ಮತ್ತು ಮಕ್ಕಳು ಪರಿಪಾಟಲು ನಡೆಸುತ್ತಿದ್ದಾರೆ.

    ಗ್ರಾಮದಲ್ಲಿ ಸಾಕಷ್ಟು ವರ್ಷದಿಂದ ಸೂಕ್ತ ಸೂರಿಲ್ಲದೆ ಗರ್ಭಿಣಿ ಮತ್ತು ಮಕ್ಕಳು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಮೊದಲು ಗರ್ಭಿಣಿಯರಿಗೆ ಹಾಗೂ ಪುಟಾಣಿ ಮಕ್ಕಳಿಗೆ ನೇರವಾಗಿ ಮನೆಗೆ ಧವಸ-ಧಾನ್ಯ ನೀಡುತಿದ್ದರು. ಆದರೆ ಈಗ ಮಾತೃ ಪೂರ್ಣ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರದಲ್ಲಿ ಊಟ ನೀಡುವ ವ್ಯವಸ್ಥೆಯಿಂದಾಗಿ ಅವ್ಯವಸ್ಥೆಗೆ ಕಾರಣವಾಗಿದೆ.

    ಜೆಡಿಎಸ್ ಶಾಸಕ ಆಯ್ಕೆಯಾಗಿರುವ ಕ್ಷೇತ್ರದಲ್ಲಿ ಬಯಲಲ್ಲಿ ಊಟ ಮಾಡುವ ಪರಿಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನಿಮಗೆ ಮತ ನೀಡಿರುವ ಕ್ಷೇತ್ರದ ದುಸ್ಥಿತಿ ಹಾಗೂ ನೆಲಮಂಗಲ ಜೆಡಿಎಸ್ ಶಾಸಕ ಶ್ರೀನಿವಾಸ ಮೂರ್ತಿಯವರು ಇತ್ತ ಕಡೆ ಗಮನ ಹರಿಸಬೇಕೆಂದು ಗ್ರಾಮಸ್ಥರು ಮನವಿಮಾಡಿಕೊಂಡಿದ್ದಾರೆ.

  • ಬೆಡ್ ಖಾಲಿ ಇದ್ರೂ ನೆಲದಲ್ಲಿ ಚಿಕಿತ್ಸೆ: ಸ್ಮಾರ್ಟ್‍ಸಿಟಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದೆ ರೋಗ!

    ಬೆಡ್ ಖಾಲಿ ಇದ್ರೂ ನೆಲದಲ್ಲಿ ಚಿಕಿತ್ಸೆ: ಸ್ಮಾರ್ಟ್‍ಸಿಟಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದೆ ರೋಗ!

    ದಾವಣಗೆರೆ: ಸ್ಮಾರ್ಟ್ ಸಿಟಿಗೆ ನಗರ ಆಯ್ಕೆಯಾದಾಗ ದಾವಣೆಗೆರೆಯ ಜನ ಹೆಮ್ಮೆಪಟ್ಟುಕೊಂಡಿದ್ದರು. ಆದರೆ ಈಗ ನಗರದಲ್ಲಿರುವ ಜಿಲ್ಲಾಸ್ಪತ್ರೆಗೆ ರೋಗ ಬಂದಿದ್ದು, ದೂರದ ಊರಿನಿಂದ ಬರುವ ರೋಗಿಳನ್ನ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲಾಸ್ಪತ್ರೆಯ ಕೆಲ ವಾರ್ಡ್‍ಗಳಲ್ಲಿ ಬೆಡ್ ಗಳು ಖಾಲಿ ಇದ್ದರೂ ಕೂಡ ಮಹಿಳೆಯರನ್ನ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವು ವಾರ್ಡ್ ಗಳಲ್ಲಿ ಮಂಚದ ಕಾಲುಗಳಿಗೆ ಇಟ್ಟಿಗೆಗಳನ್ನು ಇಡಲಾಗಿದೆ.

    ಮಕ್ಕಳು, ಮಹಿಳೆಯರು, ವಿಕಲಚೇತನರು, ವೃದ್ಧರು ಹೀಗೆ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳನ್ನ ನೆಲದ ಮೇಲೆ ಮಲಗಿಸಲಾಗುತ್ತಿದೆ. ರೋಗಿಗಳು ಈ ಬಗ್ಗೆ ಜಿಲ್ಲಾಸ್ಪತ್ರೆ ಅಧೀಕ್ಷಕಿ ನೀಲಾಂಬಿಕೆ ಅವರನ್ನು ಪ್ರಶ್ನೆಮಾಡಿದರೆ, ನಾನೇನು ಮಾಡಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಯಾರಾದರೂ ಡಿಸ್ಚಾರ್ಜ್ ಆದರೆ ನಿಮಗೆ ಬೆಡ್ ನೀಡುತ್ತೇವೆ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದಾರೆ.

    ಕೆಲ ವಾರ್ಡ್ ಗಳಲ್ಲಿ 2, 3 ರೂಮ್ ಗಳಿದ್ದು, ಸಾಕಷ್ಟು ಬೆಡ್ ಗಳು ಖಾಲಿ ಇವೆ. ಆದರೂ ಕೂಡ ರೋಗಿಗಳಿಗೆ ಆಸ್ಪತ್ರೆಯ ಸಿಬ್ಬಂದಿ ಈ ರೀತಿ ಹಿಂಸೆ ನೀಡುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಗಳು ಆರೋಪಿಸಿದ್ದಾರೆ.

    ಆಸ್ಪತ್ರೆ ಅಧೀಕ್ಷಕರಾಗಲಿ, ಜಿಲ್ಲಾಡಳಿತ, ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳ್ಯಾರು ಕೂಡ ರೋಗಿಗಳ ಅಳಲನ್ನ ಕೇಳುತ್ತಿಲ್ಲ. ರೋಗ ಗುಣಪಡಿಸಿಕೊಳ್ಳಲು ಬರುವ ರೋಗಿಗಳು ನೆಲದ ಮೇಲೆ ಮಲಗಿ ಸೊಳ್ಳೆಗಳ ಕಾಟಕ್ಕೆ ಮತ್ತಷ್ಟು ರೋಗ ಉಲ್ಬಣಗೊಳಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸ್ಥಿತಿ ನಿರ್ಮಾಣವಾಗಿದೆ.