ನವದೆಹಲಿ: ಗುಜರಾತ್ ಮತ್ತು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಗುಜರಾತ್ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಮಹಾರಾಷ್ಟ್ರದಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಅಶೋಕ್ ಚವಾಣ್ ರಾಜ್ಯಸಭಾ (Rajyasabha Election) ಟಿಕೆಟ್ ಪಡೆದಿದ್ದಾರೆ.
ಪಕ್ಷ ಬಿಡುಗಡೆ ಮಾಡಿರುವ ಹೊಸ ಪಟ್ಟಿಯಲ್ಲಿ ಗುಜರಾತ್ನ ನಾಲ್ವರು ಅಭ್ಯರ್ಥಿಗಳ ಹೆಸರುಗಳಿವೆ. ಜೆಪಿ ನಡ್ಡಾ (JP Nadda) ಅವರಲ್ಲದೆ, ಗುಜರಾತ್ನಿಂದ ಗೋವಿಂದ್ ಭಾಯಿ ಧೋಲಾಕಿಯಾ, ಮಾಯಾಂಕ್ಭಾಯ್ ನಾಯಕ್ ಮತ್ತು ಡಾ. ಜಶ್ವಂತ್ ಸಿಂಗ್ ಸಲಾಂ ಸಿಂಗ್ ಪರ್ಮಾರ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಪಕ್ಷ ಘೋಷಿಸಿದೆ. ಇತ್ತ ಮಹಾರಾಷ್ಟ್ರದಿಂದ ಅಶೋಕ್ ಚವಾಣ್ (Ashok Chavan), ಮೇಧಾ ಕುಲಕರ್ಣಿ ಮತ್ತು ಡಾ. ಅಜಿತ್ ಗೋಪ್ಚಾಡೆ ಅವರಿಗೆ ಪಕ್ಷ ರಾಜ್ಯಸಭಾ ಟಿಕೆಟ್ ನೀಡಿದೆ.
ವಜ್ರದ ಉದ್ಯಮಿಗೆ ಟಿಕೆಟ್: ಗುಜರಾತ್ನ ವಜ್ರದ ವ್ಯಾಪಾರಿ ಗೋವಿಂದಭಾಯ್ ಧೋಲಾಕಿಯಾ ಅವರಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಗೋವಿಂದಭಾಯಿ ಧೋಲಾಕಿಯಾ ಅವರು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಇವರು RSSನೊಂದಿಗೆ ಬಹಳ ಹಿಂದಿನಿಂದಲೂ ಉತ್ತಮ ಸಂಬಂಧವನ್ನು ಹೊಂದಿದವರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನವ್ರು ಕೊಟ್ಟ ಕಾರ್ಡ್ ನೀಡಿದ್ರೆ ಮೈತ್ರಿ ಪಕ್ಷದಿಂದ ಗಿಫ್ಟ್
ಫೆ.27 ರಂದು ಮತದಾನ: ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನಾಂಕವಾಗಿದ್ದು, ಫೆ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಹೆಸರನ್ನು ಫೆ. 20 ರವರೆಗೆ ಹಿಂಪಡೆಯಲು ಅವಕಾಶ ಇದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ರಿಂದ ಮತ ಎಣಿಕೆ ನಡೆಯಲಿದೆ.
ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಮಂಗಳವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಅವರು ಪಕ್ಷಕ್ಕೆ ಸೇರಿದ್ದು, ಅವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಅಮರ್ ರಾಜುರ್ಕರ್ ಕೂಡಾ ಬಿಜೆಪಿ ಸೇರಿದ್ದಾರೆ.
ಚವಾಣ್ ಸೋಮವಾರ ತಮ್ಮ ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ನಿಂದ ಹೊರಬರುವುದು ಅವರ ವೈಯಕ್ತಿಕ ನಿರ್ಧಾರ ಎಂದಿದ್ದರು. ಎರಡು ದಿನಗಳಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು. ಇದೀಗ ಕಾಂಗ್ರೆಸ್ ತೊರೆದ ಒಂದೇ ದಿನದಲ್ಲಿ ಬಿಜೆಪಿಗೆ ಅವರು ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ದೆಹಲಿಯ ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ 1 ಸ್ಥಾನ- AAP ಪ್ರಸ್ತಾಪ
ಸೋಮವಾರ, ಕಾಂಗ್ರೆಸ್ ತೊರೆದ ಬಳಿಕ ಅವರು, ನಾನು ಪಕ್ಷವನ್ನು ತೊರೆದಿದ್ದೇನೆ, ಶಾಸಕ ಸ್ಥಾನ ಮತ್ತು ಇತರ ಎಲ್ಲಾ ಪಕ್ಷದ ಹುದ್ದೆಗಳಿಂದ ಹೊರ ಬಂದಿದ್ದೇನೆ. ನಾನು ಪಕ್ಷದೊಂದಿಗಿನ ನನ್ನ ಎಲ್ಲಾ ಸಂಬಂಧವನ್ನು ಕಡಿದುಕೊಂಡಿದ್ದೇನೆ. ನಾನು ಪಕ್ಷಕ್ಕೆ ಪ್ರಮಾಣಿಕವಾಗಿ ದುಡಿದಿದ್ದೇನೆ ಎಂದಿದ್ದರು.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಚವಾಣ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮುಂಬೈ ಬಿಜೆಪಿ ಕಚೇರಿಯಲ್ಲಿ ಅಧಿಕೃತ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ಡಿಕೆಶಿ ಮೇಲೆ ಲೋಕಾಯುಕ್ತದಿಂದ ಎಫ್ಐಆರ್ ದಾಖಲು
ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ (Ashok Chavan) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ನಾನಾ ಪಟೋಲೆ ಅವರಿಗೆ ಒಂದು ಸಾಲಿನ ರಾಜೀನಾಮೆ ಸಲ್ಲಿಸಿದ್ದು, ಇದೇ ವೇಳೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಅವರು ಪಕ್ಷವನ್ನು ತೊರೆದ ಕೆಲವು ದಿನಗಳಲ್ಲಿ ಈ ಬೆಳವಣಿಗೆಯಾಗಿದ್ದು ಲೋಕಸಭೆ ಹೊಸ್ತಿಲಲ್ಲಿರುವ ಕಾಂಗ್ರೆಸ್ಗೆ (Congress) ಮಹಾರಾಷ್ಟದಲ್ಲಿ ಇದು ಅತಿದೊಡ್ಡ ಹಿನ್ನಡೆಯಾಗಿದೆ. ಸದ್ಯ ಅವರು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಶಿಫಾರಸು
ಅಶೋಕ್ ಚವಾಣ್ ಜೊತೆಗೆ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಮರನಾಥ್ ರಾಜೂರ್ಕರ್ ಅವರು ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ಅವರೂ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, 10-12 ಶಾಸಕರು ಚವಾಣ್ ಜೊತೆಗಿದ್ದು ಸೂಕ್ತ ಸಮಯದಲ್ಲಿ ಅವರು ಪಕ್ಷವನ್ನು ಬದಲಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ತೆರಿಗೆ ತಾರತಮ್ಯ; ರಾಜ್ಯಪಾಲರ ಭಾಷಣ ಮೂಲಕ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಕಿಡಿ
ಡಿಸೆಂಬರ್ 2008 ರಿಂದ ನವೆಂಬರ್ 2010ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚವಾಣ್, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ. ಮುಂಬೈನಲ್ಲಿ ಆದರ್ಶ್ ವಸತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಅವರು 2010ರಲ್ಲಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ
ಪ್ರಸುತ್ತ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿರುವ ಡಿಸಿಎಂ ದೇವೇಂದ್ರ ಫಡ್ನವಿಸ್ ಮುಂದೇನಾಗಲಿದೆ ಕಾದು ನೋಡಿ ಎಂದು ಕುತೂಹಲ ಹೆಚ್ಚಿಸಿದ್ದಾರೆ. ಕಾಂಗ್ರೆಸ್ನ ಹಲವಾರು ಉತ್ತಮ ನಾಯಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಜನಸಾಮಾನ್ಯರೊಂದಿಗೆ ಸಂಪರ್ಕ ಹೊಂದಿರುವ ನಾಯಕರು ಕಾಂಗ್ರೆಸ್ನಲ್ಲಿ ಉಸಿರುಗಟ್ಟಿದ್ದಾರೆ. ನನಗೆ ವಿಶ್ವಾಸವಿದೆ, ಕೆಲವು ದೊಡ್ಡ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಾತೃ ಭಾಷೆಯಲ್ಲಿ CAPF ಪರೀಕ್ಷೆ ಬರೆಯಲು ಅನುಮತಿ
ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅಶೋಕ್ ಚವಾಣ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ನಿರ್ಗಮನವು ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಈ ದ್ರೋಹಿಗಳು ತಿಳಿದಿರುವುದಿಲ್ಲ. ಸ್ನೇಹಿತರು ಮತ್ತು ಸಹೋದ್ಯೋಗಿಗಳು ರಾಜಕೀಯ ಪಕ್ಷವನ್ನು ತೊರೆದಾಗ, ಬಹುಶಃ ಅವರು ಹೆಚ್ಚು ಅರ್ಹರು- ಇದು ಯಾವಾಗಲೂ ದುಃಖದ ವಿಷಯವಾಗಿದೆ. ಆದರೆ ದುರ್ಬಲರಾಗಿರುವವರಿಗೆ, ಆ ವಾಷಿಂಗ್ ಮೆಷಿನ್ ಯಾವಾಗಲೂ ಸೈದ್ಧಾಂತಿಕ ಬದ್ಧತೆ ಅಥವಾ ವೈಯಕ್ತಿಕ ನಿಷ್ಠೆಗಳಿಗಿಂತ ಹೆಚ್ಚು ಆಕರ್ಷಕವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Bihar Trust Vote: ʻವಿಶ್ವಾಸʼ ಗೆದ್ದ ಸಿಎಂ ನಿತೀಶ್ ಕುಮಾರ್
ಅಶೋಕ್ ಚವಾಣ್ ನಿರ್ಣಯ ನನಗೆ ಆಶ್ಚರ್ಯವಾಗಿದೆ ಅವರು ನಿನ್ನೆಯವರೆಗೆ ಸೀಟು ಹಂಚಿಕೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಅವರು ರಾಜ್ಯಸಭೆಗಾಗಿ ಬಿಜೆಪಿಗೆ ಹೋಗಿರಬಹುದು ಎಂದು ನಾನು ಭಾವಿಸುತ್ತೇನೆ. ಎಲ್ಲರೂ ತಮ್ಮ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದರು. ಇದನ್ನೂ ಓದಿ: ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ