Tag: ಅಶೋಕ್ ಪೂಜಾರಿ

  • ರಮೇಶ್ ಜಾರಕಿಹೊಳಿ ಸೋಲಿಸೋದೇ ನಮ್ಮ ಅಜೆಂಡಾ: ಕೈ ಟಿಕೆಟ್ ವಂಚಿತ ಪ್ರಕಾಶ್ ಬಾಗೋಜಿ

    ರಮೇಶ್ ಜಾರಕಿಹೊಳಿ ಸೋಲಿಸೋದೇ ನಮ್ಮ ಅಜೆಂಡಾ: ಕೈ ಟಿಕೆಟ್ ವಂಚಿತ ಪ್ರಕಾಶ್ ಬಾಗೋಜಿ

    ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarakiholi) ಸೋಲಿಸೋದೇ ನಮ್ಮ ಒನ್ ಪಾಯಿಂಟ್ ಅಜೆಂಡಾ ಎಂದು ಗೋಕಾಕ್ ಕಾಂಗ್ರೆಸ್ ಟಿಕೆಟ್ ವಂಚಿತ ಪ್ರಕಾಶ್ ಬಾಗೋಜಿ (Prakash Bagoji) ಹೇಳಿದರು.

    ಬೆಳಗಾವಿ (Belagavi) ಜಿಲ್ಲೆ ಗೋಕಾಕ್‌ನ (Gokak) ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಕೊಣ್ಣೂರ್ ಹಾಗೂ ಬಸನಗೌಡ ಹೊಳೆಯಾಚಿಯವರಿಗೆ ಬೆಂಬಲ ವ್ಯಕ್ತಪಡಿಸಿದರು. ಟಿಕೆಟ್ ವಂಚಿತ ಆಕಾಂಕ್ಷಿಗಳಿಂದ ಗೋಕಾಕ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿಗೆ (Dr.Mahantesh Kadadi) ಬೆಂಬಲ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅಶೋಕ್ ಪೂಜಾರಿಯವರಿಗೂ (Ashok Poojari) ಬೆಂಬಲ ನೀಡುವಂತೆ ಎಲ್ಲರೂ ಸೇರಿ ಒಕ್ಕೊರಲ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೇವದುರ್ಗ ‘ಕೈ’ ಟಿಕೆಟ್ ಗೊಂದಲ- ಅಣ್ಣ ಬಿ.ವಿ.ನಾಯಕ್ ವಿರುದ್ಧ ತಮ್ಮ ರಾಜಶೇಖರ್ ನಾಯಕ್ ಬಂಡಾಯ 

    2008ರಿಂದ ಅಶೋಕ್ ಅಣ್ಣನವರನ್ನು ಬೆಂಬಲಿಸಿ ಗೆಲ್ಲಿಸಲು ಪ್ರಯತ್ನ ಮಾಡಿದ್ದೇವೆ. ಗೋಕಾಕ್‌ನಲ್ಲಿ ದುಷ್ಟ ಶಕ್ತಿ ಹೊಡೆಯಬೇಕು ಎಂಬ ಗುರಿ ಇದೆ. ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಕೊಡುವ ದಿನಾಂಕ ಮುಗಿದ ಬಳಿಕ ಡಾ.ಮಹಾಂತೇಶ್ ಕಡಾಡಿ ಅರ್ಜಿ ಸಲ್ಲಿಸಿದ್ದರು. ಲೇಟ್ ಅಪ್ಲಿಕೇಶನ್ ಕೊಟ್ಟವರಿಗೆ ಪಕ್ಷ ಟಿಕೆಟ್ ನೀಡಿದ್ದಾರೆ. ಅಶೋಕ್ ಪೂಜಾರಿಯವರಿಗೆ ಇಡೀ ತಾಲೂಕಿನ ಜನ 4 ಬಾರಿ ಅವಕಾಶ ನೀಡಿದೆ. ಮೊಟ್ಟ ಮೊದಲ ಬಾರಿಗೆ ಪಂಚಮಸಾಲಿ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅಶೋಕ್ ಪೂಜಾರಿಯವರು ಈ ಚುನಾವಣೆಯಲ್ಲಿ (Election) ಕಿಂಗ್ ಮೇಕರ್ ಆಗಬೇಕು. ಲಿಂಗಾಯತ ಸಮುದಾಯ ಅಷ್ಟೇ ಅಲ್ಲ ಇಡೀ ತಾಲೂಕಿನ ಜನ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದರು. ಇದನ್ನೂ ಓದಿ: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ, ಅವರ ಆದೇಶ ಪಾಲಿಸುತ್ತೇವೆ: ಡಿ.ಕೆ.ಸುರೇಶ್ 

    ನಮ್ಮ ಗುರಿ ರಮೇಶ್ ಜಾರಕಿಹೊಳಿಯವರನ್ನು ಸೋಲಿಸುವುದು ಒಂದೇ. ನಾವು ಅಶೋಕ್ ಪೂಜಾರಿಯವರಿಗೆ ಮನವಿ ಮಾಡುತ್ತೇವೆ. ಅಶೋಕ್ ಪೂಜಾರಿಯವರ ಕಾಲಿಗೆ ಬಿದ್ದು ಕರೆದುಕೊಂಡು ಬರುತ್ತೇವೆ. ಇಡೀ ರಾಜ್ಯಾದ್ಯಂತ ಪಂಚಮಸಾಲಿಗಳ ಹವಾ ಇದೆ. ಗೋಕಾಕ್‌ನಲ್ಲಿ ಪಂಚಮಸಾಲಿಯವರ ಒಳ್ಳೆಯ ಸಂಘಟನೆ ಇದೆ. ನೀವು ಒಗ್ಗೂಡಿ ನಾವು ವೋಟ್ ಹಾಕುತ್ತೇವೆ ಎಂದು ಬೇರೆ ಸಮಾಜದವರು ಹೇಳುತ್ತಿದ್ದಾರೆ. ಒಂದು ವ್ಯವಸ್ಥೆ ಸೋಲಿಸಲು ನಾವು ಒಂದಾಗಬೇಕು. ಇದಕ್ಕೆ ಅಶೋಕ್ ಪೂಜಾರಿಯವರದ್ದೇ ನೇತೃತ್ವ. ಅವರೇ ಕಿಂಗ್ ಮೇಕರ್ ಎಂದು ಹೇಳಿದರು. ಇದನ್ನೂ ಓದಿ: ನನಗೆ ಟಿಕೆಟ್ ಸಿಗೋ ವಿಶ್ವಾಸವಿದೆ, ಯಾರಿಗೆ ಸಿಕ್ಕಿದ್ರೂ ಒಟ್ಟಾಗಿ ಕೆಲಸ ಮಾಡ್ತೀವಿ: ಸ್ವರೂಪ್

  • ಉರುಳಾಟ, ಹೊರಳಾಟ, ಕಣ್ಣೀರು, ಘೋಷಣೆ-ಅಶೋಕ್ ಪೂಜಾರಿ ಆಪರೇಷನ್ ಫೇಲ್

    ಉರುಳಾಟ, ಹೊರಳಾಟ, ಕಣ್ಣೀರು, ಘೋಷಣೆ-ಅಶೋಕ್ ಪೂಜಾರಿ ಆಪರೇಷನ್ ಫೇಲ್

    -ಗೋಕಾಕ್‍ನಲ್ಲಿ ತ್ರಿಕೋನ ಸ್ಪರ್ಧೆ

    ಬೆಳಗಾವಿ: ನಾಮಪತತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದರಿಂದ ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅಶೋಕ್ ಪೂಜಾರಿ ಮನವೊಲಿಸುವಲ್ಲಿ ಬಿಜೆಪಿ ವಿಫಲವಾಯ್ತು.

    ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿಯವರ ಧ್ಯಾನ ಮಂದಿರ ಇಂದು ರಣರಂಗವಾಗಿತ್ತು. ಬಿಜೆಪಿಯವರು ನಾಮಪತ್ರ ಹಿಂದೆ ಪಡೆಯುವಂತೆ ನಡೆಸಿದ ಕಡೆ ಕಸರತ್ತು ವಿಫಲಗೊಂಡಿತು. ಜೆಡಿಎಸ್ ಕಾರ್ಯಕರ್ತರು ಕೆಲಕಾಲ ಅಪರೇಷನ್ ಮಾಡಲು ಬಂದ ಬಿಜೆಪಿ ಮುಖಂಡರನ್ನು ಘೇರಾವ್ ಹಾಕಿದರು. ಕಾರ್ಯಕರ್ತರನ್ನು ಕಡೆಗಣಿಸಿ ಅಶೋಕ್ ಪೂಜಾರಿ ಬಿಜೆಪಿಗೆ ಹೋದರೆ ನಾವು ವಿಷ ಕುಡಿಯುತ್ತೇವೆ. ನಮ್ಮ ಹೆಣದ ಮೇಲೆ ದಾಟಿ ಹೋಗಿ ರಾಜಕಾರಣ ಮಾಡಿ ಎಂದು ಜೆಡಿಎಸ್ ಅಭ್ಯರ್ಥಿಗೂ ಬೆವರಿಳಿಸಿದರು.

    ಕೆಲ ಕಾರ್ಯಕರ್ತರು ಭಾವುಕರಾಗಿ ಅಳಲಾರಂಭಿಸುತ್ತಿದ್ದಂತೆ ಅಶೋಕ್ ಪೂಜಾರಿ ಅವರು ಮತ್ತೊಮ್ಮೆ ಕಣ್ಣೀರು ಹಾಕಿದರು. ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬಂದಿದ್ದ ಬಿಜೆಪಿ ಮುಖಂಡರು ಮರಳಿದರು. ಒಂದೆಡೆ ಕಾರ್ಯಕರ್ತರು ಎಂ.ಎಲ್.ಸಿ ಮಹಾಂತೇಶ್ ಕವಟಗಿಮಠ ಗೆ ಘೇರಾವ್ ಹಾಕಿ ಘೋಷಣೆ ಕೂಗುತ್ತಿದ್ದರೆ, ಇನ್ನೊಂದೆಡೆ ಸಿಎಂ, ಮಾಜಿ ಸಿಎಂ ದೂರವಾಣಿಯಲ್ಲಿ ಮಾತನಾಡಲು ಭಾರೀ ಯತ್ನ ನಡೆಸಿದರು. ಇದಾವುದಕ್ಕೂ ಜಗ್ಗದ ಬಗ್ಗದ ಕಾರ್ಯಕರ್ತರು ಅಭ್ಯರ್ಥಿ ಕೈಗೆ ಮೊಬೈಲ್ ತಲುಪಿಸಲೇ ಇಲ್ಲ. ಗೊಂದಲ ಗದ್ದಲದ ನಡುವೆ ಕಾರ್ಯಕರ್ತರು ರಸ್ತೆಯಲ್ಲಿ ಬಿದ್ದು ಉರುಳಾಟ ಮಾಡುತ್ತಿದ್ದಂತೆ ಅಶೋಕ್ ಪೂಜಾರಿ ತಾಳ್ಮೆಯಿಂದ ಇರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ನಾಮಪತ್ರ ವಾಪಸ್ ಪಡೆದ ಅಥಣಿ, ಹಿರೇಕೆರೂರು ಜೆಡಿಎಸ್ ಅಭ್ಯರ್ಥಿಗಳು

    ಗೊಕಾಕ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯ ನಾಮಪತ್ರವನ್ನು ಹಿಂದಕ್ಕೆ ಪಡೆಯುವ ಬಿಜೆಪಿ ಕಸರತ್ತು ವ್ಯರ್ಥವಾಯ್ತು. ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಿಂದ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ನಿಂದ ಅಶೋಕ್ ಪೂಜಾರಿ ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಹೈ ವೊಲ್ಟೇಜ್ ಕ್ಷೇತ್ರದಲ್ಲಿ ಜೆಡಿಎಸ್ ಭಾರೀ ಕಸರತ್ತು ನಡೆಸಿ ಅಭ್ಯರ್ಥಿಯನ್ನು ಉಳಿಸಿಕೊಂಡಿದೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ  ಪ್ರಕಾಶ್ ಬಾಗೋಜಿ ಅಸಮಾಧಾನ ಹೊರಹಾಕದೇ ಅಶೋಕ್ ಪೂಜಾರಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದು ದಿನದಿಂದ ದಿನಕ್ಕೆ ಗೋಕಾಕ್ ಉಪಕದನ ಕುತೂಹಲಕ್ಕೆ ಕಾರಣವಾಗಿದೆ.

  • ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ: ಹೆಚ್‍ಡಿಕೆ

    ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ: ಹೆಚ್‍ಡಿಕೆ

    ಬೆಳಗಾವಿ: ಕೆ.ಆರ್ ಪೇಟೆ ಕ್ಷೇತ್ರದಲ್ಲಿ ನಡೆದ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿಯವರು, ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ ಎಂದು ಖಡಕ್ ಹೇಳಿಕೆ ಕೊಟ್ಟಿದ್ದಾರೆ.

    ಗೋಕಾಕ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ನಾಮಪತ್ರ ಸಲ್ಲಿಕೆ ಹಿನ್ನೆಲೆ ಹೊರಗಡೆ ಇರುವುದರಿಂದ ನನ್ನ ಗಮನಕ್ಕೆ ಈ ವಿಚಾರ ಬಂದಿಲ್ಲ. ಅವರ ಆಪಾದನೆಗಳಿಗೆ ನಾನ್ಯಾಕೆ ಉತ್ತರ ಕೊಡಲಿ, ಅದರ ಅವಶ್ಯಕತೆ ನಮಗಿಲ್ಲ ಎಂದು ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಆರೋಪಕ್ಕೆ ತಿರುಗೇಟು ಕೊಟ್ಟರು. ಇದನ್ನೂ ಓದಿ:ನಾರಾಯಣಗೌಡರು ಸಿಂಪತಿ ಗಿಟ್ಟಿಸಿಕೊಳ್ಳಲು ಚಪ್ಪಲಿಯಲ್ಲಿ ಹೊಡೆದ್ರು ಅಂತಿದ್ದಾರೆ: ದೇವರಾಜು ಕಿಡಿ

    ಇದೇ ವೇಳೆ ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಅವರ ಬಗ್ಗೆ ಮಾತನಾಡಿ, ನಮ್ಮ ಕೆಲ ಲೋಪದೋಷಗಳಿಂದ 2008ರಲ್ಲಿ ಅಶೋಕ್ ಪೂಜಾರಿ ಚುನಾವಣೆ ಸೋತಿದ್ದರು. ಅಶೋಕ್ ನಾನು ಹಳೆ ಸ್ನೇಹಿತರು. ಅಶೋಕ್ ಮತ್ತೆ ತನ್ನ ಮನೆಗೆ ವಾಪಸ್ ಬಂದಿದ್ದಾರೆ. ಈ ಬಾರಿ ಅವರು ಗೆಲುವು ಸಾಧಿಸ್ತಾರೆ. ಚುನಾವಣೆಯಲ್ಲಿ ಸೋಲು, ಗೆಲುವು ಒಂದು ಪ್ರಕ್ರಿಯೆ, ನಮ್ಮ ಕುಟುಂಬ ಹಲವರು ಚುನಾವಣೆ ಸೋತಿದ್ದಾರೆ. ಇಷ್ಟು ದಿನ ರಮೇಶ್ ಜಾರಕಿಹೋಳಿ ಈ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾರೆ. ಈ ಬಾರಿ ಜನರು ಅವರಿಗೆ ಸೋಲಿನ ರುಚಿ ತೋರಿಸ್ತಾರೆ, ಸ್ವಲ್ಪ ಕಾದು ನೋಡಲಿ ಎಂದು ಬಿಜೆಪಿ ಅಭ್ಯರ್ಥಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ:ಎಕ್ಕಡದಲ್ಲಿ ಹೊಡೆದ್ರು, ದೇವರಾಜು ಅದನ್ನ ಅನುಭವಿಸಲೇ ಬೇಕು: ನಾರಾಯಣಗೌಡ ಆಕ್ರೋಶ

    ಇವತ್ತು ಚುನಾವಣೆ ಅವಶ್ಯಕತೆ ಇರಲಿಲ್ಲ. ಯಾಕೆಂದರೆ ಜನರು ಸಂಕಷ್ಟದಲ್ಲಿದ್ದಾರೆ, ಆದರೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೊಡಗು ಮಾದರಿಯಲ್ಲಿ ಇಲ್ಲಿ ಕೂಡಾ ಅಭಿವೃದ್ಧಿ ಆಗಬೇಕಿದೆ. ಪ್ರವಾಹಕ್ಕೆ ಬೆಳೆ ನಾಶವಾಗಿದೆ. ಅದಕ್ಕೆ ನೆರವು ಕೊಡಿಸುವ ಕಲ್ಪನೆ ಇಟ್ಟುಕೊಂಡಿದ್ದು, ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

  • ಗೋಕಾಕ್‍ನಲ್ಲಿ ತ್ರಿಕೋನ ಹಣಾಹಣಿ ಫಿಕ್ಸ್- ಜೆಡಿಎಸ್‍ನಿಂದ ಅಶೋಕ್ ಪೂಜಾರಿಗೆ ಟಿಕೆಟ್

    ಗೋಕಾಕ್‍ನಲ್ಲಿ ತ್ರಿಕೋನ ಹಣಾಹಣಿ ಫಿಕ್ಸ್- ಜೆಡಿಎಸ್‍ನಿಂದ ಅಶೋಕ್ ಪೂಜಾರಿಗೆ ಟಿಕೆಟ್

    ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ್ ಪೂಜಾರಿ ಅವರಿಗೆ ಪಕ್ಷ ಟಿಕೆಟ್ ಘೋಷಿಸುವ ಮೂಲಕ ಜೆಡಿಎಸ್ ಗೋಕಾಕ್ ಉಪ ಚುನಾವಣಾ ಕಣಕ್ಕೆ ಕಾಲಿಟ್ಟಿದೆ.

    ನಾಮ ಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾದ ಹಿನ್ನೆಯಲ್ಲಿ ಇಂದು ರಾತ್ರಿ ಅಭ್ಯರ್ಥಿಯ ಹೆಸರನ್ನು ಜೆಡಿಎಸ್ ಘೋಷಣೆ ಮಾಡಿದೆ. ಈ ಮೂಲಕ ಅಶೋಕ್ ಪೂಜಾರಿ ಅವರು ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಅಶೋಕ್ ಪೂಜಾರಿ ಅವರ ಸ್ಪರ್ಧೆಯಿಂದ ಗೋಕಾಕ್ ಉಪ ಚುನಾವಣಾ ಕಣದಲ್ಲಿ ತ್ರಿಕೋನ ಹಣಾಹಣಿ ಏರ್ಪಡಲಿದೆ. ನಾಳೆ ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಹೊಸಕೋಟೆ ಕ್ಷೇತ್ರದ ಬೆನ್ನಲ್ಲೇ ಗೋಕಾಕ್‍ನಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.

    ಬಿಜೆಪಿಯು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಗೋಕಾಕ್ ಕ್ಷೇತ್ರದ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಅವರು ಅಸಮಾಧಾನ ಹೊರ ಹಾಕಿದ್ದರು. ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದ ಅವರಿಗೆ ಮಣೆ ಹಾಕಿದ ಜೆಡಿಎಸ್ ಉತ್ತರ ಕರ್ನಾಟಕದಲ್ಲಿ ಜಯ ಸಾಧಿಸುವ ಪ್ಲ್ಯಾನ್ ರೂಪಿಸಿದೆ.

    2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಶೋಕ್ ಪೂಜಾರಿ ಅವರು ರಮೇಶ್ ಜಾರಕಿಹೊಳಿ ವಿರುದ್ಧ 14,280 ಮತಗಳಿಂದ ಸೋತಿದ್ದರು. ಈ ವೇಳೆ ಅಶೋಕ್ ಪೂಜಾರಿ 75,969 ಮತ ಗಳಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಕೇವಲ 1,553 ಪಡೆದಿದ್ದರು. 2008 ಹಾಗೂ 2013 ಚುನಾವಣೆಯಲ್ಲಿ ಅಶೋಕ್ ಪೂಜಾರಿ ಜೆಡಿಎಸ್‍ನಿಂದ ಸ್ಪರ್ಧಿಸಿ ಸೋತಿದ್ದರು.

  • ಗೋಕಾಕ್ ರಾಜಕೀಯಕ್ಕೆ ಎಚ್‍ಡಿಕೆ ಎಂಟ್ರಿ- ಅಶೋಕ್ ಪೂಜಾರಿಗೆ ನೇರ ಬೆಂಬಲಕ್ಕೆ ಪ್ಲ್ಯಾನ್

    ಗೋಕಾಕ್ ರಾಜಕೀಯಕ್ಕೆ ಎಚ್‍ಡಿಕೆ ಎಂಟ್ರಿ- ಅಶೋಕ್ ಪೂಜಾರಿಗೆ ನೇರ ಬೆಂಬಲಕ್ಕೆ ಪ್ಲ್ಯಾನ್

    ಬೆಳಗಾವಿ: ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿವೆ. ಮೈತ್ರಿ ಸರ್ಕಾರ ಪತನಗೊಳಿಸಿದ ಸೇಡನ್ನು ತೀರಿಸಿಕೊಳ್ಳಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗೋಕಾಕ್ ಉಪ ಚುನಾವಣೆಗೆ ಎಂಟ್ರಿ ಕೊಟ್ಟಿದ್ದಾರೆ.

    ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಷ್ಟೊಂದು ಪ್ರಭಲವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಸಮಾಧಾನಿತರಿಗೆ ಬಲೆ ಬೀಸಿದೆ. ಬಿಜೆಪಿಯು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಗೋಕಾಕ್ ಕ್ಷೇತ್ರದ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಅವರು ಅಸಮಾಧಾನ ಹೊರ ಹಾಕಿದ್ದು, ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದಾರೆ.

    ಈ ನಡುವೆ ಅಶೋಕ್ ಪೂಜಾರಿ ಅವರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ಪ್ರಯತ್ನ ನಡೆಸುತ್ತಿದೆ. ಒಂದು ವೇಳೆ ಅಶೋಕ್ ಪೂಜಾರಿ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ ಸ್ಪರ್ಧೆಗೆ ನಿಲ್ಲಲು ಮುಂದಾದರೂ ನೆರ ಬೆಂಬಲ ನೀಡಲು ಜೆಡಿಎಸ್ ಪ್ಲ್ಯಾನ್ ರೂಪಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

    ಗೋಕಾಕ್ ಕ್ಷೇತ್ರ ಉಪಚುನಾವಣೆ ತೀವ್ರ ರಂಗೇರಿದ್ದು, ಸೋಮವಾರ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಡುವೆ ಜೆಡಿಎಸ್ ಅಶೋಕ್ ಪೂಜಾರಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಬಹುದು. ಹೀಗಾಗಿ ಗೋಕಾಕ್‍ನಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಅವರು ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜೊತೆ ಸೇರಿ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸೋಮವಾರ ಬೆಳಗ್ಗೆ 9ಕ್ಕೆ ಗೋಕಾಕ್ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಬಸ್ ನಿಲ್ದಾಣದ ಮಾರ್ಗವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

    ಇತ್ತ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಬೆಳಗ್ಗೆ 10ಕ್ಕೆ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಮೆರವಣಿಗೆ ಮೂಲಕ ಕೊಳವಿ ಹಣುಮಂತ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಸಹೋದರ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾಥ್ ನೀಡಲಿದ್ದಾರೆ.

    ಜೆಡಿಎಸ್ ಅಭ್ಯರ್ಥಿಯಾಗಿ ಅಶೋಕ್ ಪೂಜಾರಿ ಸೋಮವಾರವೇ ಅಖಾಡ್ ಪ್ರವೇಶ ಮಾಡಲಿದ್ದಾರೆ. ಬಿಜೆಪಿ ನಡೆಸಿದ ಸಂಧಾನ ಎಲ್ಲಾ ವಿಫಲಗೊಂಡಿದ್ದು, ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅಶೋಕ್ ಪೂಜಾರಿಗೆ ಸ್ವತಃ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

  • ಗೋಕಾಕ್‍ನಲ್ಲಿ ರಂಗೇರಿದ ಮಿನಿ ಕದನ-ಇಂದು ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

    ಗೋಕಾಕ್‍ನಲ್ಲಿ ರಂಗೇರಿದ ಮಿನಿ ಕದನ-ಇಂದು ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

    ಬೆಳಗಾವಿ: ಕುಂದಾ ನಗರಿಯ ಗೋಕಾಕ್ ಉಪ ಸಮರ ಕಾವೇರಿದೆ. ಬಿಜೆಪಿ ಸೇರಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇವತ್ತು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಗೊಂದಲ ಮುಂದುವರಿದಿದೆ. ರಮೇಶ್ ವಿರುದ್ಧ ಅಖಾಡ ಸಿದ್ಧಗೊಳಿಸಿಕೊಂಡಿರುವ ಲಖನ್ ಮತ್ತು ಕಾಂಗ್ರೆಸ್ ಟಿಕೆಟ್‍ಗಾಗಿ ಕಾದಿರೋ ಬಿಜೆಪಿಯ ಅಶೋಕ್ ಪೂಜಾರಿಗೆ ಇಲ್ಲೂ ಟಿಕೆಟ್ ತಪ್ಪಿದ ಟೆನ್ಷನ್. ಹಾಗಾಗಿ ಇಬ್ಬರು ನಾಯಕರು ಸಭೆಗಳನ್ನು ನಡೆಸುತ್ತಿದ್ದಾರೆ.

    ಇಂದು ಗೋಕಾಕ್‍ನ ಕೇಸರಿ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಮನೆ ಮುಂಭಾಗ ಮೈದಾನದಲ್ಲಿ ಸಂಕಲ್ಪ ಸಮಾವೇಶ ಆಯೋಜಿಸಿದ್ದಾರೆ. ಇದಕ್ಕಾಗಿ ಎಲ್ಲಾ ಗ್ರಾಮದ ಪಂಚಾಯಿತಿ ಸದಸ್ಯರು ತಲಾ 10ರಿಂದ 15 ಸಾವಿರ ಕಾರ್ಯಕರ್ತರನ್ನು ಸೇರಿಸುವ ಹೊಣೆ ಒಪ್ಪಿಸಿದ್ದಾರೆ.

    ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆಯಾದ್ರೆ, ಕಾಂಗ್ರೆಸ್‍ನಲ್ಲಿ ಇನ್ನೂ ಟಿಕೆಟ್ ಗೊಂದಲ ಮಾತ್ರ ಬಗೆ ಹರಿಯುತ್ತಿಲ್ಲ. ಅಶೋಕ್ ಪೂಜಾರಿಗೆ ಟಿಕೆಟ್ ಕೈತಪ್ಪಿದ್ದು ಈ ಕಾರಣಕ್ಕಾಗಿ ದಿಢೀರನೇ ಶನಿವಾರ ಕಾರ್ಯಕರ್ತರ ಸಭೆ ಕರೆದಿದ್ದಾರೆ.

    ಅಶೋಕ್ ಪೂಜಾರಿಗೆ ಟಿಕೆಟ್ ಕೊಡದಂತೆ ಈಗಾಗಲೇ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ವರಿಷ್ಠರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ,, ಲಖನ್ ಜಾರಕಿಹೊಳಿಗೆ ಟಿಕೆಟ್ ಕೊಡೋದು ಬೇಡ ಡಿಕೆಶಿ-ಲಕ್ಷ್ಮಿ ಹೆಬ್ಬಾಳ್ಕರ್ ಅಂಡ್ ಟೀಮ್ ವಿರೋಧ ಮಾಡುತ್ತಿದೆದೆ. ಸಿದ್ದರಾಮಯ್ಯರನ್ನು ಭೇಟಿಯಾಗಿರೋ ಸತೀಶ್‍ ಸಹೋದರ ಲಖನ್‍ಗೆ ಟಿಕೆಟ್ ಕನ್ಫರ್ಮ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.