Tag: ಅಶೋಕ್ ಮನಗೂಳಿ

  • ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ವಿಜಯಪುರ: ಜಿಲ್ಲೆಯ ಸಿಂದಗಿ (Sindagi) ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ.

    ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿರುವ ಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಇದನ್ನೂ ಓದಿ: ಲಾಡ್ಜ್‌ನಲ್ಲಿ ಯುವಕ ಅನುಮಾನಾಸ್ಪದ ಸಾವು ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ಫೇಲ್ಯೂರ್ ಪತ್ತೆ

    ಕಲಬುಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

  • ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

    ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

    – ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿದ್ದೇವೆ

    ವಿಜಯಪುರ: ಬಿಜೆಪಿಯವರ ಬ್ರಹ್ಮಾಂಡಗಲನ್ನು ಹೇಳಲು ಹೊರಟರೆ ತುಂಬಾ ಸಮಯ ಹಿಡಿಯುತ್ತೆ ಎಂದು ಹೇಳುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಅವರು ಕಮಲ ಪಕ್ಷ ವಿರುದ್ಧ ಸಿಡಿದೆದ್ದಿದ್ದಾರೆ.

    ಸಿಂದಗಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಹೆಚ್.ಡಿ ಕುಮಾರಸ್ವಾಮಿ ದ್ಚಿಪತ್ನಿತ್ವದ ಬಗ್ಗೆ ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯಿಸಿ ಎಚ್ಚರಿಕೆ ನೀಡಿದರು. ಭಾರತೀಯ ಜನತಾ ಪಕ್ಷದವರು ಯಾರು ಯಾರ ಜೊತೆಗಿದ್ದರು. ಯಾರ ಜೊತೆಯಿದ್ದು ಎದ್ದು ಬಂದ್ರು ಅನ್ನೋದನ್ನು ಹೇಳ ಹೊರಟರೇ ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ವಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಕೆಲಸದ ಮೇಲೆ ಬಿಜೆಪಿ ಮತ ಕೇಳಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನು ಅಧಿಕಾರದ ಮದದಿಂದ ಮಾತನಾಡಿಲ್ಲ: ಕೆ. ಸುಧಾಕರ್

    ಎರಡು ಪಕ್ಷದವರು ಯಾವುದೇ ಯೋಜನೆ ಇಲ್ಲದೆ ಹಣ ಮತ್ತು ಜಾತಿ ಬಲದ ಮೇಲೆ ಗೆಲ್ಲಲು ಮುಂದಾಗಿದ್ದಾರೆ. ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಬಿಜೆಪಿಗೆ ಬೈದ್ರೆ ನಾವು ದೇಶ ವಿರೋಧಿಗಳು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ನಾವು ಕೋಮುವಾದಿಗಳು. ಸಿಂದಗಿಯಲ್ಲಿ ಮಸೀದಿ ಕೆಡವಿಸಿದ್ದೇ ಇದೇ ಅಶೋಕ್ ಮನಗೂಳಿ. ಅವರ ವರ್ಚಸ್ಸೇ ಮುಂದೆ ಅವರ ಸೋಲಿಗೆ ಕಾರಣವಾಗಲಿದೆ ಎಂದರು ಕಿಡಿಕಾರಿದರು.

    ಅಶೋಕ ಮನಗೂಳಿ ಆರ್‍ಎಸ್‍ಎಸ್ ಮನಸ್ಥಿತಿಯುಳ್ಳವರು. ಹೀಗಾಗಿ ಬಿಜೆಪಿಯವರಿಗೆ ಬಿಜೆಪಿಗೆ ವೋಟು ಹಾಕಬೇಕಾ..? ಅಶೋಕ್ ಮನಗೂಳಿಗೆ ವೋಟು ಹಾಕಬೇಕಾ ಅನ್ನೋ ಗೊಂದಲದಲ್ಲಿದ್ದಾರೆ ಎಂದರು. ಹೇಳಿದರು. ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

  • ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ವಿಜಯಪುರ: ಜಿಲ್ಲೆಯ ಸಿಂದಗಿ ಉಪಚುನಾವಣಾ ಕಣ ರಂಗೇರಿದೆ. ದಿ.ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಉಪಚುನಾವಣೆಯ ದಿನಾಂಕ ಘೋಷಣೆಯ ಮುನ್ನವೇ ರಾಜಕೀಯ ಚಟುವಟಿಕೆ ಗರಿಗೆದರಿವೆ.

    ಜೆಡಿಎಸ್ ದಿ. ಶಾಸಕ ಎಂ ಸಿ ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳುವುದಾಗಿ ಅಶೋಕ್ ಮನಗೂಳಿ ಘೋಷಣೆ ಮಾಡಿದ್ದಾರೆ.

    ಒಂದು ವಾರದ ಬಳಿಕ ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರ ಜೊತೆಗೆ ಚರ್ಚಿಸುತ್ತೇನೆ. ತದನಂತರ ಸಿಂದಗಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ನಾನು ಕಾಂಗ್ರೆಸ್ ಟಿಕೆಟ್ ಕೇಳಿಲ್ಲ. ಟಿಕೆಟ್ ಯಾರಿಗೇ ಕೊಟ್ರೂ ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ. ನಾನು ಮೊದಲು ಕಾಂಗ್ರೆಸ್ ಸದಸ್ಯತ್ವ ತೆಗೆದುಕೊಳ್ಳುತ್ತೇನೆ. ನಂತರ ಸಿಂದಗಿ ಕಾಂಗ್ರೆಸ್ ಟಿಕೆಟ್ ಕೇಳುತ್ತೇನೆ ಎಂದು ಅಶೋಕ್ ಮನಗೂಳಿ ಹೇಳಿದ್ದಾರೆ.