Tag: ಅಶೋಕ್ ರೈ

  • ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗ್ಳೂರಲ್ಲಿ ನ. 25, 26ರಂದು ಕಂಬಳ

    ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗ್ಳೂರಲ್ಲಿ ನ. 25, 26ರಂದು ಕಂಬಳ

    – ಮುಖ್ಯ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರು
    – 8 ಕೋಟಿ ಖರ್ಚಿನಲ್ಲಿ ಕಂಬಳ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರಾವಳಿ ಕಂಬಳಕ್ಕೆ (Bengaluru Kambala) ಕೌಂಟ್ ಡೌನ್ ಆರಂಭವಾಗಿದೆ. ಇತಿಹಾದಲ್ಲೇ ಮೊದಲ ಬಾರಿಗೆ ನವೆಂಬರ್ 25, 26 ರಂದು ನಗರದ ಪ್ಯಾಲೆಸ್ ಗ್ರೌಂಡ್‍ನಲ್ಲಿ ಕಂಬಳ ನಡೆಯಲಿದೆ.

    ಈ ಸಂಬಂಧ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 200 ಜೋಡಿ ಕೋಣಗಳು ಕರಾವಳಿ ಕಂಬಳದಲ್ಲಿ ಕಮಾಲ್ ಮಾಡಲಿವೆ. ಹಾಸನದಿಂದ ದೊಡ್ಡ ಮೆರವಣಿಯ ಮೂಲಕ ಬೆಂಗಳೂರಿಗೆ ಕೋಣಗಳು ಬರಲಿದೆ. ಕಂಬಳದ ಮುಖ್ಯ ವೇದಿಕೆಗೆ ಪುನೀತ್ ರಾಜ್ ಕುಮಾರ್ (Puneeth Raj Kumar) ಅಂತಾ ಹೆಸರಿಟ್ಟು ನಾಮಕರಣ ಮಾಡಲಾಗಿದೆ ಎಂದರು.

    ಇದೇ ವೇಳೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ರೈ (Ashok Rai) ಮಾತನಾಡಿ, ಬೆಂಗಳೂರಿನ ಕಂಬಳ ರೆಕಾರ್ಡ್ ಬ್ರೇಕ್ ಆಗಲಿದೆ. ಕರಾವಳಿ ಭಾಗದಲ್ಲಿ 147 ಕೆರೆ ಇರಲಿದೆ. ಆದರೆ ಬೆಂಗಳೂರಿನ ಕೆರೆ 155 ಮೀಟರ್ ಉದ್ದ ಇರಲಿದೆ. ಕಂಬಳದ ಕೋಣಗಳಿಗೆ ನೀರು ಬೈಹುಲ್ಲು, ಹುರುಳಿ ಎಲ್ಲವೂ ಊರಿಂದ ತರಿಸಲಾಗಿದೆ ಎಂದರು.

    ನೀರು ಕೂಡ ಬದಲಾವಣೆ ಆದರೆ ಅವುಗಳಿಗೆ ಆರೋಗ್ಯ ಸಮಸ್ಯೆ ಆಗಲಿದೆ. ಹೀಗಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಗೆದ್ದ ಕಂಬಳದ ಕೋಣಗಳ ಮಾಲೀಕರಿಗೆ 16 ಗ್ರಾಂ. ಬಂಗಾರ ಮತ್ತು ಒಂದು ಲಕ್ಷ ರೂ. ಬಹುಮಾನ ಕೊಡಲಾಗುತ್ತೆ ಎಂದು ಹೇಳಿದರು.

    ಬ್ರಿಜ್ ಭೂಷಣ್ ಆಗಮನ ಗೊಂದಲ ಉಂಟಾಗಿತ್ತು. ಹೀಗಾಗಿ ಅವ್ರಿಗೆ ಖುದ್ದಾಗಿ ವಿರೋಧದ ಬಗ್ಗೆಯೂ ಅವರಿಗೆ ಹೇಳಿದ್ದೇವೆ. ಹೊಸ ಆಮಂತ್ರಣ ಪತ್ರಿಕೆಯನ್ನು ಕೂಡ ತಯಾರು ಮಾಡುತ್ತಿದ್ದೇವೆ. ಒಟ್ಟು ಎಂಟು ಕೋಟಿ ಖರ್ಚಿನಲ್ಲಿ ಕಂಬಳ ನಡೆಯಲಿದೆ. ಎರಡು ದಿನದ ಕಾರ್ಯಕ್ರಮಕ್ಕೆ ಒಟ್ಟು ಆರು ಲಕ್ಷ ಜನ ಬರುವ ನಿರೀಕ್ಷೆ ಇದೆ ಎಂದು ವಿವರಿಸಿದರು.

    ಐಶ್ವರ್ಯಾ ರೈ ಕಂಬಳಕ್ಕೆ ಬರೋದು ಅನುಮಾನ ಇದೆ. ಅವರ ತಾಯಿಗೆ ಆರೋಗ್ಯದ ಸಮಸ್ಯೆ ಇರೋದ್ರಿಂದ ಬರೋದು ಡೌಟು. ಆದರೆ ಬೇರೆ ಎಲ್ಲಾ ಗೆಸ್ಟ್ ಬರುತ್ತಿದ್ದಾರೆ ಎಂದು ಗುರುಕಿರಣ್ (Guru Kiran) ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇದೇ ಮೊತ್ತಮೊದಲ ಬಾರಿಗೆ ಕಂಬಳ (Kambala) ಆಯೋಜನೆಗೊಳ್ಳುತ್ತಿದೆ. ನವೆಂಬರ್ 25 ಮತ್ತು 26ರಂದು ನಡೆಯುವ ಕಂಬಳದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ 100ಕ್ಕೂ ಅಧಿಕ ಜೋಡಿ ಕೋಣಗಳು (Buffalo) ಮಂಗಳೂರಿನಿಂದ (Mangaluru) ಮೆರವಣಿಗೆ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಸಂಬಂಧಿಸಿದಂತೆ ಕಂಬಳ ಕೋಣಗಳ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನವೆಂಬರ್ 23ರಂದು ಮೆರವಣಿಗೆಯ ಮೂಲಕ ಕೋಣಗಳನ್ನು ಲಾರಿಯಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ಹಾಸನದಲ್ಲಿ ಎರಡು ಗಂಟೆಗಳ ಕಾಲ ಕೋಣಗಳಿಗೆ ವಿಶ್ರಾಂತಿ ಮತ್ತು ಆಹಾರ ನೀಡಲಾಗುತ್ತದೆ. ಬಳಿಕ ಚನ್ನರಾಯಪಟ್ಟಣ, ತುಮಕೂರಿನಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ಹೋಗಲಾಗುವುದು. ಹಾಸನ, ಚನ್ನರಾಯಪಟ್ಟಣ ಮತ್ತು ತುಮಕೂರಿನಲ್ಲಿ ಕರಾವಳಿಯ ಜನರು ಸೇರಿದಂತೆ ಸ್ಥಳೀಯರು ಕೋಣಗಳಿಗೆ ಸ್ವಾಗತಿಸಲಿದ್ದಾರೆ. ಈ ಕೋಣಗಳನ್ನು ಕೊಂಡೊಯ್ಯುವಾಗ ಪಶು ವೈದ್ಯಾಧಿಕಾರಿಗಳು ಮತ್ತು ಪಶು ಅಂಬುಲೆನ್ಸ್‌ಗಳು ಜೊತೆಗಿರಲಿದೆ ಎಂದರು. ಇದನ್ನೂ ಓದಿ: ಲಿಂಗಾಯತರ ವಿರುದ್ಧ ಸಿಎಂ ಪದೇ ಪದೇ ದ್ವೇಷ ಸಾಧಿಸುತ್ತಿದ್ದಾರೆ: ಬಿಜೆಪಿ ಟೀಕೆ

    125 ಜೋಡಿ ಕೋಣಗಳಿಗೆ ಬೆಂಗಳೂರಿನಲ್ಲಿ ಟೆಂಟ್ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳ ಮಾಲೀಕರಿಗೆ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಣಗಳಿಗೆ ನೀರಿನ ವ್ಯತ್ಯಾಸವಾಗಬಾರದೆಂಬ ನೆಲೆಯಲ್ಲಿ ಮಂಗಳೂರಿನಿಂದಲೇ 5 ಟ್ಯಾಂಕರ್ ನೀರನ್ನು ಅಲ್ಲಿಗೆ ಕೊಂಡೊಯ್ಯಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ಹುರುಳಿಯನ್ನು ಇಲ್ಲಿಂದಲೇ ಕೊಂಡೊಯ್ದು ಅಲ್ಲಿಯೇ ತಯಾರಿಸಿ ಕೊಡಲಾಗುತ್ತದೆ. ಈ ವರ್ಷ ಆರಂಭಿಸಲಾದ ಕಂಬಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದರೆ ಇದನ್ನು ಪ್ರತೀ ವರ್ಷ ಮುಂದುವರಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್‌: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?

    ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಸ್ಯಾಂಡಲ್‌ವುಡ್, ಬಾಲಿವುಡ್ ಸ್ಟಾರ್ ನಟ-ನಟಿಯರು ಕಂಬಳಕ್ಕೆ ಬರುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ 7 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ. 2,000 ಮಂದಿ ವಿಐಪಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. 15 ಸಾವಿರ ಮಂದಿಗೆ ಗ್ಯಾಲರಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಒಂದೆಡೆ ಕಂಬಳ ನಡೆಯುತ್ತಿದ್ದರೆ, ಮತ್ತೊಂದೆಡೆ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ನೂರಕ್ಕೂ ಅಧಿಕ ಮಳಿಗೆಗಳಲ್ಲಿ ಕರಾವಳಿಯ ಆಹಾರ ಮಳಿಗೆಗಳನ್ನು ಅಳವಡಿಸಲಾಗುತ್ತದೆ ಎಂದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

    ಕಂಬಳವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಬೆಂಗಳೂರು ಕಂಬಳವನ್ನು ಕರಾವಳಿಯಲ್ಲಿ ನಡೆಯುವ ಕಂಬಳದಂತೆ ಆಯೋಜಿಸಲಾಗುತ್ತದೆ. ಕಂಬಳಕ್ಕೆ ಸಂಬಂಧಿಸಿದಂತೆ ನೀತಿ ನಿಯಮಗಳನ್ನು, ಕಾನೂನುಗಳನ್ನು, ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಿಕೊಂಡು ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು 5ರಿಂದ 6 ಕೋಟಿ ರೂ. ವೆಚ್ಚದಲ್ಲಿ ಕಂಬಳ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಅ.7 ರವರೆಗೆ 2,000 ರೂ. ನೋಟು ಬದಲಿಸಿಕೊಳ್ಳಲು ದಿನ ವಿಸ್ತರಿಸಿದ RBI

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]