Tag: ಅಶೋಕ ಚಕ್ರ

  • ರಾಷ್ಟ್ರ ಲಾಂಛನಕ್ಕೆ ಅಗೌರವ – ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ಅಶೋಕ ಚಕ್ರ

    ರಾಷ್ಟ್ರ ಲಾಂಛನಕ್ಕೆ ಅಗೌರವ – ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ಅಶೋಕ ಚಕ್ರ

    ಯಾದಗಿರಿ: 1950ರಲ್ಲಿ ಅಶೋಕ ಚಕ್ರವನ್ನು (Ashoka Chakra) ರಾಷ್ಟ್ರ ಲಾಂಛನವನ್ನಾಗಿ ಮಾಡಲಾಗಿದೆ. ರಾಷ್ಟ್ರ ಲಾಂಛನಕ್ಕೆ ಗೌರವ ಕೊಡಬೇಕಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಕರ್ತವ್ಯವೂ ಕೂಡಾ. ಆದರೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.

    1996ರಲ್ಲಿ ಗ್ರಾಮದಲ್ಲಿ 50-60 ಸಾವಿರ ರೂ. ಖರ್ಚು ಮಾಡಿ ವಡಗೇರಾದ ಮುಖ್ಯದ್ವಾರಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರ ಲಾಂಛನವನ್ನು ಅಳವಡಿಸಲಾಗಿತ್ತು. ಆದರೆ ಕಳೆದ 4-5 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ವೇಳೆ ರಾಷ್ಟ್ರ ಲಾಂಛನ ತೆಗೆದು ಆಂಜನೇಯ ದೇವಸ್ಥಾನದ ಪಕ್ಕದಲ್ಲಿ ಕೊಳಚೆ ಪ್ರದೇಶದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ಗರಂ- ಕಾಂಗ್ರೆಸ್ ಜೊತೆ ಸಭೆ ಮಾಡಿದ್ರಾ?

    ಅಂದಿನಿಂದ ಇಂದಿನವರೆಗೂ ರಾಷ್ಟ್ರ ಲಾಂಛನ ಅನಾಥವಾಗಿ ಬಿದ್ದಿರೋದು ಅಧಿಕಾರಿಗಳ ಅವಿವೇಕತನವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ರಾಷ್ಟ್ರ ಲಾಂಛನವನ್ನ ಸೂಕ್ತ ಸ್ಥಳದಲ್ಲಿರಿಸಿ, ಗೌರವ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಲಿಗೆ ಪೆಟ್ಟಾಗಿದ್ರೂ ಜೈಲಿನ ಗೋಡೆ ಹಾರಿ ಅತ್ಯಾಚಾರಿ ಪರಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೆ ಉಗ್ರನಾಗಿದ್ದ ಹುತಾತ್ಮ ಸೇನಾನಿ ವಾನಿಗೆ ಅಶೋಕ ಚಕ್ರ

    ಹಿಂದೆ ಉಗ್ರನಾಗಿದ್ದ ಹುತಾತ್ಮ ಸೇನಾನಿ ವಾನಿಗೆ ಅಶೋಕ ಚಕ್ರ

    ನವದೆಹಲಿ: ಭಯೋತ್ಪಾದಕನಾಗಿದ್ದ ಆತ ಮನಪರಿವರ್ತನೆಗೊಂಡು ಸೇನೆ ಸೇರಿ ಹುತಾತ್ಮನಾಗಿ ಋಣ ತೀರಿಸಿದ್ದ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾಸಿ ಅವರಿಗೆ ಭಾರತ ಸರ್ಕಾರ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಘೋಷಿಸಿದೆ.

    ಮೊದಲು ಉಗ್ರನಾಗಿದ್ದ ದಕ್ಷಿಣ ಕಾಶ್ಮೀರದ ಲ್ಯಾನ್ಸ್ ನಾಯಕ್ ನಝೀರ್ ಅಹ್ಮದ್ ವಾನಿ ಮನಃ ಪರಿವರ್ತನೆ ಬಳಿಕ 2004ರಲ್ಲಿ ಸೇನೆ ಸೇರಿದ್ದರು. ಇವರ ಕರ್ತವ್ಯ ನಿಷ್ಠೆಗೆ 2007ರಲ್ಲಿ ಶೌರ್ಯ ಪ್ರಶಸ್ತಿಯನ್ನೂ ಪಡೆದಿದ್ದರು. ಆದರೆ ಕಳೆದ ವರ್ಷ ನವೆಂಬರ್ ನಲ್ಲಿ ಶೋಫಿಯಾನ್ ಜಿಲ್ಲೆಯಲ್ಲಿ ಉಗ್ರರ ಜೊತೆ ಹೋರಾಡುತ್ತಾ ತನ್ನ ಪ್ರಾಣವನ್ನು ದೇಶಕ್ಕೆ ಅರ್ಪಿಸಿದ್ದರು.

    ಗಣರಾಜ್ಯೋತ್ಸವದಂದು ಲ್ಯಾನ್ಸ್ ನಾಯಕ್ ನಝೀರ್ ಅಹಮದ್ ವಾನಿ ಕುಟುಂಬದವರು ಅಶೋಕ ಚಕ್ರ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿ ಸೇನೆಯ ಶಾಂತಿ ಕಾಲದಲ್ಲಿ ನೀಡುವ ಅತ್ಯುನ್ನತ ಸೇನಾ ಪ್ರಶಸ್ತಿಯಾಗಿದೆ. 38 ವರ್ಷದ ವಾನಿ ಅವರು ಜಮ್ಮು ಕಾಶ್ಮೀರದ ಕುಲ್ಗಾಂನ ಅಶ್‍ಮುಜಿ ಪ್ರದೇಶದವರು. ವಾನಿ ಹುತಾತ್ಮರಾಗುವ ಮುನ್ನ ಅವರ ಅಸಾಧಾರಣ ಹೋರಾಟಕ್ಕೆ ಸೇನಾ ಮೆಡಲ್ ಕೂಡ ನೀಡಿ ಗೌರವಿಸಲಾಗಿತ್ತು. ಅಲ್ಲದೇ ಅಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ಜಮ್ಮು ಕಾಶ್ಮೀರಿಗರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv