Tag: ಅಶ್ವಿನಿ ಗೌಡ

  • ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

    ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

    ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ (Bigg Boss) ಸ್ಪರ್ಧಿ ಅಶ್ವಿನಿ ಗೌಡ (Ashwini Gowda) ವಿರುದ್ಧ ದೂರು ದಾಖಲಾಗಿದೆ.

    ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಸಹ ಸ್ಪರ್ಧಿ ರಕ್ಷಿತಾ (Rakshita Shetty) ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ, ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ , ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧ ದೂರು ನೀಡಿದ್ದರು.  ಬಿಡದಿ ಪೊಲೀಸರು ದೂರು ಸ್ವೀಕರಿಸಿ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಬಿಗ್‌ಬಾಸ್ 12 ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ ರಕ್ಷಿತ ರವರಿಗೆ ‘She is S, ಆ Category  ನ  ಎಂದು  ಸ್ಪರ್ಧಿಯಾದ ಅಶ್ವಿನಿ ಗೌಡ ಅವರು ಪದ ಬಳಕೆಯನ್ನು ಮಾಡಿರುತ್ತಾರೆ.

    ಇದು ಜಾತಿ ನಿಂದನೆ ಮತ್ತು ವ್ಯಕ್ತಿತ್ವದ ನಿಂದನೆ ಮಾಡುವಂತಹ ವಿಷಯ. ಈ ಸಮಾಜದಲ್ಲಿ ಎಲ್ಲರೂ ಒಂದೇ ಯಾವ ಜಾತಿ ಅಥವಾ ಭೇದವನ್ನು ಹರಡುವಂತಿಲ್ಲ. ಅಶ್ವಿನಿ ಗೌಡ  ಹೇಳಿದ ಮಾತನ್ನು ತೆಗೆಯದೇ ತಮ್ಮ ಟಿಆರ್‌ಪಿ ಹೆಚ್ಚಾಗಲು ಇದನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದ ಸಮಾಜಕ್ಕೆ ಒಂದು ಕೆಟ್ಟ ಸಂದೇಶವನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

    ಬಿಗ್‌ಬಾಸ್‌ ಮನೆಯಲ್ಲಿ ಆಗಿದ್ದೇನು?
    ರಕ್ಷಿತಾ ರಾತ್ರಿ ಕ್ಯಾಮೆರಾ ಮುಂದೆ ಮಾತನಾಡುತ್ತಿರುವುದನ್ನು ನೋಡಿ ಮನೆಯವರಿಗೆಲ್ಲ ಫನ್‌ ಮಾಡಲು ರಾತ್ರಿ ಮಲಗಿದ್ದಾಗ ಜಾಹ್ನವಿ ಮತ್ತು ಅಶ್ವಿನಿ ಗೌಡ ಗೆಜ್ಜೆಯನ್ನು ಹಿಡಿದು ಅಲ್ಲಾಡಿಸಿದ್ದರು. ಮನೆಯವರು ಗೆಜ್ಜೆ ಧ್ವನಿ ಮಾಡಿದವರು ಯಾರು ಎಂದು ಕೇಳಿದಾಗ ಅದು ರಕ್ಷಿತಾಳ ಕೆಲಸ ಎಂದು ಸುಳ್ಳು ಹೇಳಿದ್ದರು.

    ಈ ವಿಚಾರದ ಬಗ್ಗೆ ರಕ್ಷಿತಾ ಪ್ರಶ್ನೆ ಮಾಡಿದಾಗ ಜಾಹ್ನವಿ ಮತ್ತು ಅಶ್ವಿನಿ ಗೌಡ ಜೋರು ಧ್ವನಿಯಲ್ಲಿ ಮಾತನಾಡಿ ಗಲಾಟೆ ಮಾಡಿದ್ದರು. ಗಲಾಟೆ ವಿಕೋಪಕ್ಕೆ ಹೋದಾಗಲೂ ಅಶ್ವಿನಿ ಮತ್ತು ಜಾಹ್ನವಿ ತಮ್ಮ ತಪ್ಪನ್ನು ಒಪ್ಪಿರಲಿಲ್ಲ.

    ಮರುದಿನ ಮನೆಯ ವರಾಂಡದಲ್ಲಿ ಜಾಹ್ನವಿ ಜೊತೆ ಅಶ್ವಿನಿ ಕುಳಿತು ರಾತ್ರಿ ನಡೆದ ಗಲಾಟೆಯ ವಿಚಾರದ ಬಗ್ಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರಕ್ಷಿತಾ ಉದ್ದೇಶಿಸಿ ಅವಳು ʼಎಸ್‌ ಕೆಟಗೆರಿʼ ಎಂದು ಹೇಳಿದ್ದರು.

  • BBK 12 | ಈ ಅವಮಾನ ಯಾವತ್ತೂ ಮರೆಯೋಕಾಗಲ್ಲ; ದೊಡ್ಮನೆಯಲ್ಲಿ ಗಳಗಳನೆ ಅತ್ತ ಅಶ್ವಿನಿ ಗೌಡ

    BBK 12 | ಈ ಅವಮಾನ ಯಾವತ್ತೂ ಮರೆಯೋಕಾಗಲ್ಲ; ದೊಡ್ಮನೆಯಲ್ಲಿ ಗಳಗಳನೆ ಅತ್ತ ಅಶ್ವಿನಿ ಗೌಡ

    ಬಿಗ್‌ಬಾಸ್ ಮನೆಯ ರೆಬೆಲ್ ಕಂಟೆಸ್ಟೆಂಟ್‌ ಅಶ್ವಿನಿ ಗೌಡ (Ashwini Gowda) ಗಳಗಳನೆ ಅತ್ತಿದ್ದಾರೆ. ಬಿಗ್‌ ಬಾಸ್ ಮನೆಯಲ್ಲಿ ಅವಮಾನ ಆಗ್ತಿದೆ. ಅದನ್ನ ಮರೆಯೋಕೆ ಸಾಧ್ಯವಿಲ್ಲ, ಮರೆತು ಮುಂದೆ ಹೋಗೋಕೂ ಸಾಧ್ಯವಿಲ್ಲ ಎಂದು ಬಿಕ್ಕಿದ್ದಾರೆ.

    ಸ್ಟ್ರಾಂಗ್‌ ಕಂಟೆಸ್ಟೆಂಟ್‌ ಎಂದೇ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ತಿರಸ್ಕಾರ ಭಾವನೆ ಅನುಭವಿಸಿದ್ದಕ್ಕೆ ಬೇಸರದಿಂದ ಅತ್ತು ಕರೆದು ಗೋಳಾಡಿದ್ದಾರೆ.

    ಬಿಗ್‌ ಬಾಸ್ ಕನ್ನಡ (Bigg Boss Kannada) ಸೀಸನ್ 12ರ ಮೊದಲ ಕ್ಯಾಪ್ಟನ್ಸಿ ಟಾಸ್ಕ್ ನಡೆಯೋದಕ್ಕೆ ಘೋಷಣೆಯಾಗಿತ್ತು. ಆದರೆ ಈ ಟಾಸ್ಕ್‌ನಿಂದ ಒಬ್ಬ ಕಂಟೆಸ್ಟೆಂಟ್‌ನ್ನು ಕೈಬಿಡಲು ಸೂಚಿಸುವ ಅಧಿಕಾರವನ್ನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಗೆ ಬಂದಿರೋ ಕಂಟೆಸ್ಟೆಂಟ್‌ಗಳಿಗೆ ನೀಡಲಾಗಿತ್ತು. ರಿಶಾ ಗೌಡ, ಸೂರಜ್ ಸಿಂಗ್ ಹಾಗೂ ಮ್ಯೂಟಂಟ್ ರಘು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಅಶ್ವಿನಿ ಗೌಡರನ್ನ ಟಾರ್ಗೆಟ್ ಮಾಡಿದ್ದಾರೆ.

    ʻಈಗಲೇ ಸರ್ವಾಧಿಕಾರಿ ಧೋರಣೆ ತೋರಿಸುತ್ತಿರುವ ಅಶ್ವಿನಿ ಗೌಡ ಕ್ಯಾಪ್ಟನ್ ಆಗ್ಬಿಟ್ರೆ ಉಳಿದ ಕಂಟೆಸ್ಟೆಂಟ್‌ಗಳಿಗೆ ಕಷ್ಟ ಆಗಬಹುದುʼ ಎಂಬ ಕಾರಣ ಕೊಟ್ಟು ಕ್ಯಾಪ್ಟೆನ್ಸಿ ಟಾಸ್ಕ್‌ನಕಿಂದ ಹೊರಗಿಟ್ಟಿದ್ದಾರೆ. ಈ ವಿರೋಧದಿಂದ ತೀವ್ರವಾಗಿ ಅಸಮಾಧಾನಗೊಂಡ ಅಶ್ವಿನಿ ನೊಂದು ಬಿಕ್ಕಿದ್ದಾರೆ. ಕ್ಯಾಪ್ಟೆನ್ಸಿ ಟಾಸ್ಕ್‌ನಿಂದ ದೂರ ಉಳಿಯುವಂತೆ ಮಾಡಿದ್ದಕ್ಕೆ ʻಬಿಗ್‌ಬಾಸ್ ಮನೆಯಲ್ಲಿ ತಮಗೆ ಅವಮಾನ ಆಗುತ್ತಿದೆ. ಇದನ್ನ ಯಾವತ್ತೂ ಮರೆಯೋಕಾಗಲ್ಲ. ರೇಸ್‌ಗೆ ಬಿಡದಿದ್ದರೆ ಯಾವ್ ಕುದುರೆ ಸ್ಟ್ರಾಂಗ್‌ ಅಂತ ಹೇಗೆ ಡಿಸೈಡ್ ಮಾಡೋದುʼ ಎಂದು ಹೇಳುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಶ್ವಿನಿ.

    ಇದು ಮೊದಲ ವಾರದ ಕ್ಯಾಪ್ಟೆನ್ಸಿ ಟಾಸ್ಕ್ ಆಗಿದ್ದು ಇಲ್ಲಿ ಸ್ಪರ್ಧೆ ಮಾಡ್ಬೇಕು ಅನ್ನೋದು ಅಶ್ವಿನಿ ಆಸೆಯಾಗಿತ್ತು. ಇದ್ರಿಂದ ಬೇಸರವಾಗಿ ತಿರಸ್ಕಾರವನ್ನ ಮನಸ್ಸಿಗೆ ತೆಗೆದುಕೊಂಡು ಅಶ್ವಿನಿ ಗೌಡ ಗಳಗಳನೆ ಅತ್ತಿದ್ದಾರೆ.

  • ರಕ್ಷಿತಾ ಅನಿರೀಕ್ಷಿತ ಉತ್ತರಕ್ಕೆ ಅಶ್ವಿನಿ ಶಾಕ್‌ – ಜನರ ಮೆಚ್ಚುಗೆಯ ಚಪ್ಪಾಳೆ

    ರಕ್ಷಿತಾ ಅನಿರೀಕ್ಷಿತ ಉತ್ತರಕ್ಕೆ ಅಶ್ವಿನಿ ಶಾಕ್‌ – ಜನರ ಮೆಚ್ಚುಗೆಯ ಚಪ್ಪಾಳೆ

    ಬಿಗ್‌ ಬಾಸ್‌ (Bigg Boss) ಮೊದಲ ಫಿನಾಲೆ ಕಾರ್ಯಕ್ರಮದಲ್ಲಿ ರಕ್ಷಿತಾ ಶೆಟ್ಟಿ (Rakshita hshetty) ನೀಡಿದ ಉತ್ತರಕ್ಕೆ ಅಶ್ವಿನಿ ಗೌಡ ಶಾಕ್‌ ಆದರೆ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ್ದಾರೆ.

    ನಿರೂಪಣೆ ಮತ್ತು ಅಡುಗೆ ಟಾಸ್ಕ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಜಾಹ್ನವಿ ಅವರನ್ನು ಫೈನಲ್‌ಗೆ ಆಯ್ಕೆ ಮಾಡಿದ ವಿಚಾರದ ಬಗ್ಗೆ ಸುದೀಪ್‌ ಅವರು ಮನೆಯವರಲ್ಲಿ ಪ್ರಶ್ನೆ ಕೇಳುತ್ತಾರೆ.

    ಈ ವೇಳೆ ರಕ್ಷಿತಾ ಮಾತನಾಡಿ, ಅಶ್ವಿನಿ ಅವರು ನ್ಯಾಯವಾಗಿ ಆಟ ಆಡುತ್ತಿಲ್ಲ.  ಒಂಟಿ ಟಾಸ್ಕ್‌ನಲ್ಲಿದ್ದಾಗ ನಾನು ಧನುಶ್‌ ಅವರ ಆಟವನ್ನು ನೋಡಿದ್ದೇನೆ. ಅವರು ಫೈನಲ್‌ ಆಗಬೇಕಿತ್ತು. ಆದರೆ ಎಲ್ಲರೂ ಅಶ್ವಿನಿ ಅವರ ಮಾತಿಗೆ ಧ್ವನಿಗೂಡಿಸಿದ್ದರಿಂದ ನಾನು ಹೇಳಲು ಹೋಗಿಲ್ಲ. ನಂತರ ಫೈನಲ್‌ ಪ್ರವೇಶಕ್ಕೆ ಇರುವ ಟಾಸ್ಕ್‌ನಲ್ಲಿ ಧನುಶ್‌ 70% ಪ್ರಯತ್ನ ಇದ್ದರೆ ಅಶ್ವಿನಿ ಅವರದ್ದು 30% ಪ್ರಯತ್ನ ಇತ್ತು. ಜಯಗಳಿಸಿದ ನಂತರ ಮೆಡಲ್‌ ಹಾಕುವಾಗ ಧನುಶ್‌ ಅವರನ್ನು ಕರೆಯಬೇಕಿತ್ತು. ಆದರೆ ಅವರು ಜಾಹ್ನವಿ ಅವರನ್ನು ಕರೆದು ಮೆಡಲ್‌ ಹಾಕಿಸಿಕೊಂಡಿದ್ದಾರೆ. ಇದು ನ್ಯಾಯವಾದ ಆಟ ಅಲ್ಲ ಎಂದು ಖಡಕ್‌ ಆಗಿಯೇ ಹೇಳಿದರು.

     

    ರಕ್ಷಿತಾ ನೀಡಿದ ಪ್ರತಿಕ್ರಿಯೆಗೆ ಅಶ್ವಿನಿ ಒಮ್ಮೆ ಶಾಕ್‌ ಆದರು. ನಂತರ ಸುದೀಪ್‌ ಅಶ್ವಿನಿ ಗೌಡ ಮನೆಯಲ್ಲಿ ʼUnstoppable Leaderʼ ಹೌದೇ ಎಂಬ ಪ್ರಶ್ನೆಗೆ ರಕ್ಷಿತಾ ಅವರು ‘Unfair Leader’ ಎಂದು ಉತ್ತರ ನೀಡುವ ಮೂಲಕ ಮತ್ತೊಮ್ಮೆ  ಅಶ್ವಿನಿಗೆ ಶಾಕ್‌ ಕೊಟ್ಟರು.

    ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಜಾಹ್ನವಿ ಉತ್ತಮ ಸ್ನೇಹಿತರಾಗಿದ್ದಾರೆ. ಅಷ್ಟೇ ಅಲ್ಲದೇ ರಾತ್ರಿ ಗೆಜ್ಜೆ ಧ್ವನಿಯನ್ನು ಮಾಡಿ ರಕ್ಷಿತಾ ಮಾಡುತ್ತಿದ್ದಾಳೆ ಎಂದು ಮನೆಯವರಿಗೆ ಬಿಂಬಿಸಿದ್ದರು. ಆದರೆ ಗಿಲ್ಲಿ ಮಾತ್ರ ರಕ್ಷಿತಾ ಪರವಾಗಿ ನಿಂತಿದ್ದು ಬಿಟ್ಟರೆ ಬೇರೆ ಯಾರು ನಿಂತಿರಲಿಲ್ಲ.

    ಕಾವ್ಯ ಶೈವ ಅವರಿಗೆ ಅನುಮಾನ ಬಂದು ಅಶ್ವಿನಿ ಮತ್ತು ಜಾಹ್ನವಿ ಜೊತೆ ಪ್ರಶ್ನೆ ಕೇಳಿದ್ದರು. ಈ ಸಂದರ್ಭದಲ್ಲಿ ನಾವು ಮಾಡಿಲ್ಲ ಎಂದು ಉತ್ತರಿಸಿದ್ದರು. ಈ ವೇಳೆ ಕಾವ್ಯ ಶೈವ ಈ ವಾರದ ಅಂತ್ಯದಲ್ಲಿ ಸುದೀಪ್‌ ಸರ್‌ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೇಳಿದ್ದರು.  ಗೆಜ್ಜೆ ವಿಚಾರದಲ್ಲಿ ರಕ್ಷಿತಾ ಪರವಾಗಿ ಗಟ್ಟಿ ನಿಂತು ಆಕೆಯನ್ನು ಬೆಂಬಲಿಸಿದ್ದಕ್ಕೆ ಗಿಲ್ಲಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

  • ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!

    ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!

    ವಿವಾದಾತ್ಮಕವಾಗಿ ಗುರುತಿಸಿಕೊಂಡವರಿಗೆ ಬಿಗ್‌ಬಾಸ್‌ನಲ್ಲಿ (Bigg Boss) ಮಣೆ ಹಾಕಲಾಗುತ್ತದೆ ಅನ್ನೋದು ಬಿಗ್‌ಬಾಸ್ ಕಾರ್ಯಕ್ರಮದ ವಿರುದ್ಧ ಜನರ ಒಂದು ಅಸಮಾಧಾನ. ಅದರಂತೆ ಈ ಬಾರಿಯೂ ವಿವಾದವನ್ನ ಬೆನ್ನಿಗೆ ಕಟ್ಟಿಕೊಂಡ ಅನೇಕರು ಬಿಗ್ ಮನೆಯೊಳಗೆ ಎಂಟ್ರಿ ಪಡೆದಿರುವುದು ಚರ್ಚೆಗೆ ಕಾರಣವಾಗಿದೆ.

    ಧ್ರುವಂತ್

    ಧ್ರುವಂತ್
    ಮುದ್ದುಲಕ್ಷ್ಮಿ ಧಾರಾವಾಹಿ ನಟ ಧ್ರುವಂತ್ ನಟನಾಗಷ್ಟೇ ಅಲ್ಲ, ಲೈಂಗಿಕ ಕಿರುಕುಳ ಆರೋಪಿ ಕೂಡ. ವರ್ಷದ ಹಿಂದೆ ಧ್ರುವಂತ್ (Dhruvanth) ಮೇಲೆ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಬಿಗ್‌ಬಾಸ್ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:  ಒಂಟಿಯಾಗಿ ಬಿಗ್‌ಬಾಸ್ ಮನೆಗೆ ಕಾಲಿಟ್ಟ ನಿರೂಪಕಿ ಜಾನ್ಹವಿ, ಗೀತಾ ಧಾರಾವಾಹಿಯ ಧನುಷ್

     ಸತೀಶ್

     ಸತೀಶ್
    50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದು ಬಿಲ್ಡಪ್ ಕೊಟ್ಟಿದ್ದ ಬೆಂಗಳೂರಿನ ಉದ್ಯಮಿ ಸತೀಶ್ (Satish) ಕೂಡ ಬಿಗ್‌ಬಾಸ್ ಹೌಸ್‌ಗೆ ಆಶ್ಚರ್ಯಕರ ಎಂಟ್ರಿ ಪಡೆದುಕೊಂಡಿದ್ದಾರೆ. ಬಿಲ್ಡಪ್ ಕೊಟ್ಟಿದ್ದಕ್ಕೆ ಇಡಿ ಶಾಕ್ ಕೊಟ್ಟಿತ್ತು. ಸತೀಶ್ ಮೇಲೆ ಇಡಿ ರೇಡ್ ನಡೆದಿತ್ತು. ವುಲ್ಫ್ ಡಾಗ್ ನಾಯಿಗೆ 50 ಕೋಟಿ ಕೊಟ್ಟು ಖರೀದಿಸಿದ್ದೇನೆ ಎಂದು ಬಿಲ್ಡಪ್ ಶೋ ಕೊಟ್ಟಿದ್ದ ವ್ಯಕ್ತಿಯ ಸುಳ್ಳನ್ನ ಇಡಿ ಬಯಲುಮಾಡಿತ್ತು.

    ಚಂದ್ರಪ್ರಭ

    ಚಂದ್ರಪ್ರಭ
    ಹಾಸ್ಯನಟ ಚಂದ್ರಪ್ರಭ (Chandra Prabha) ಜನಪ್ರಿಯತೆ ಗಳಿಸಿದ್ದು ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಮೂಲಕವೇ ಆಗಿದ್ದರೂ ಇವರ ಮೇಲೆ ಆಕ್ಸಿಡೆಂಟ್ ಮಾಡಿರೋ ಆರೋಪವಿದೆ. ಚಿಕ್ಕಮಗಳೂರಿನಲ್ಲಿ ಕಾರನ್ನು ಓಡಿಸುವಾಗ ಬೈಕ್‌ಗೆ ಕಾರು ಗುದ್ದಿದ್ದಲ್ಲವೇ ಹಿಟ್ & ರನ್ ಮಾಡಿರುವ ಆರೋಪ ಹೊತ್ತಿದ್ದವರು. ಬಳಿಕ ಸ್ಟೇಷನ್‌ಗೂ ತೆರಳಿದ್ದ ಚಂದ್ರಪ್ರಭ ಬೇಲ್ ಪಡೆದುಕೊಂಡಿದ್ರು. ತಮ್ಮ ಹಾಸ್ಯಪ್ರಜ್ಞೆ ಹಾಗೂ ಅಭಿನಯದ ಜೊತೆಗೆ ಕ್ರೈಂಸ್ಟೋರಿಯಲ್ಲೂ ಹೆಡ್‌ಲೈನ್‌ನಲ್ಲಿ ಬಂದವ್ರು ಹಾಸ್ಯನಟ ಚಂದ್ರಪ್ರಭ. ಇದನ್ನೂ ಓದಿ:  ಬಿಗ್‌ಬಾಸ್‌ನಲ್ಲಿ ʻಮಾತಿನ ಮಲ್ಲಿ ಮಲ್ಲಮ್ಮನ’ ಪವಾಡ!

     ಅಶ್ವಿನಿ ಗೌಡ

     ಅಶ್ವಿನಿ ಗೌಡ
    ನಟಿ ಅಶ್ವಿನಿ ಗೌಡ (Ashwini Gowda) ಅನೇಕ ಸಿನಿಮಾಗಳಲ್ಲಿ ಪ್ರತಿಭೆ ತೋರಿಸಿರುವ ನಟಿ. ಅನೇಕ ಧಾರಾವಾಹಿಗಳನ್ನ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಗೆದ್ದ ನಟಿ. ಜೊತೆಗೆ ರಾಜಕೀಯವಾಗಿಯೂ ಸಮಾಜದಲ್ಲಿ ಗುರುತಿಸಿಕೊಂಡ ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ. ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾಗಿ ಇವರ ಮೇಲೆ ಅನೇಕ ಆರೋಪಗಳಿವೆ. ಅನೇಕ ಕೇಸ್‌ಗಳ ವಿಚಾರವಾಗಿ ಅಶ್ವಿನಿ ಗೌಡ ಕೋರ್ಟು, ಕಛೇರಿ, ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

    ಹೀಗೆ ವಿವಾದದಿಂದ ಗುರುತಿಸಿಕೊಂಡು ದೊಡ್ಮನೆಗೆ ಹೋದವರು ತಮ್ಮ ಮೇಲಿನ ಆರೋಪದಿಂದ ಇತರರಿಂದ ಸಪರೇಷನ್ ಭಯವನ್ನೂ ಅನುಭವಿಸಿಸಬಹುದು ಅಥವಾ ಸಿಂಪತಿಯನ್ನೂ ಗಿಟ್ಟಿಸಿಕೊಳ್ಳುವ ಚಾನ್ಸ್ ಇರುತ್ತೆ. ಇಷ್ಟೇ ಅಲ್ಲ ಮೈಗೆ ಅಂಟಿಕೊಂಡಿರುವ ವಿವಾದ ಶಮನ ಮಾಡಿಕೊಳ್ಳುವ ಅಥವಾ ವಿವಾದ ಹೆಚ್ಚಿಸಿಕೊಳ್ಳುವ ಅವಕಾಶವೂ ಅವರ ವರ್ತನೆಯಲ್ಲಿ ಸಾಧ್ಯವಾಗುವ ಸಂಭವ ಇರುತ್ತೆ.

  • ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಗಾಗಲೇ ಕನ್ನಡದಲ್ಲಿ ಸಾಕಷ್ಟು ಬಯೋಪಿಕ್ ಚಿತ್ರಗಳು ಬಂದಿವೆ. ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಲಿದೆ. ಇದು ಪೂರ್ಣ ಪ್ರಮಾಣದಲ್ಲಿ ಬಯೋಪಿಕ್ ಅಲ್ಲದೇ, ಇದ್ದರೂ, ಮಾಜಿ ರೌಡಿ, ಹಾಲಿ ಕನ್ನಡಪರ ಹೋರಾಟಗಾರನೊಬ್ಬನ ಕಥೆಯನ್ನು ಚಿತ್ರ ಮಾಡಲಾಗುತ್ತಿದೆ. ಆದರೆ, ಆ ಡಾನ್ ಯಾರು? ಏನು ಕಥೆ ಎನ್ನುವ ವಿಚಾರ ಮಾತ್ರ ಚಿತ್ರತಂಡ ಗುಟ್ಟಾಗಿ ಇಟ್ಟಿದೆ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಭೂಗತ ಜಗತ್ತಿನ ಚಟುವಟಿಕೆಯಲ್ಲಿದ್ದ ಕೆಲವರು ಕನ್ನಡ ಪರ ಸಂಘಟನೆ ಕಟ್ಟಿಕೊಂಡು, ಹೋರಾಟ ಮಾಡುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ. ಆದರೆ, ಈ ಸಿನಿಮಾ ಯಾರ ಕುರಿತಾದದ್ದು ಎನ್ನುವುದೇ ಸಸ್ಪೆನ್ಸ್.  ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಪೆಂಟಗನ್ ಸಿನಿಮಾ ಮೂಡಿ ಬರುತ್ತಿದೆ. ಐದು ಜನ ನಿರ್ದೇಶಕರು, ಐದು ಕಥೆಗಳನ್ನು ಈ ಸಿನಿಮಾದಲ್ಲಿ  ಹೇಳುತ್ತಿದ್ದಾರೆ. ಆ ಐದು ಕಥೆಗಳಲ್ಲಿ ಒಂದು ಕನ್ನಡ ಪರ ಹೋರಾಟಗಾರನ ಕುರಿತಾದದ್ದುಆಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಚೂರಿಕಟ್ಟೆ ಖ್ಯಾತಿಯ ರಾಘು ಶಿವಮೊಗ್ಗ, ಆಕಾಶ್ ‍ಶ್ರೀವತ್ಸ, ಚಂದ್ರ  ಮೋಹನ್, ಕಿರಣ್ ಕುಮಾರ್ ತಲಾ ಒಂದೊಂದು ಕಥೆಗೆ ನಿರ್ದೇಶನ ಮಾಡಿದ್ದರೆ, ಕನ್ನಡ ಪರ ಹೋರಾಟಗಾರನ ಕಥೆಗೆ ಗುರು ದೇಶಪಾಂಡೆ ನಿರ್ದೇಶಕರು. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಈಗಾಗಲೇ ನಾಲ್ಕೂ ಕಥೆಗಳ ಚಿತ್ರೀಕರಣ ಮುಗಿದಿದ್ದು, ಐದನೇ ಕಥೆಯಾದ ಕನ್ನಡ ಪರ ಹೋರಾಟಗಾರನ ಕಥೆಯ ಚಿತ್ರೀಕರಣ ಕೂಡ ಕೊನೆಯ ಹಂತದಲ್ಲಿದೆ. ಈ ಪಾತ್ರವನ್ನು ಖ್ಯಾತ ನಟ ಕಿಶೋರ್ ಮಾಡುತ್ತಿದ್ದಾರೆ. ಅಲ್ಲದೇ, ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಗುರುತಿಸಿಕೊಂಡಿರುವ, ನಟಿ ಅಶ್ವಿನಿ ಗೌಡ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

  • ಪೊಲೀಸರಿಗೆ ಶರಣಾದ ನಟಿ – ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಯಾರು?

    ಪೊಲೀಸರಿಗೆ ಶರಣಾದ ನಟಿ – ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಯಾರು?

    ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಶರಣಾಗಿದ್ದು ಪೊಲೀಸರು ಬಂಧಿಸಿದ್ದಾರೆ.

    ಈಗ ಸುದ್ದಿಯಲ್ಲಿರುವ ಅಶ್ವಿನಿ ಗೌಡ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿದ್ದರೂ ಈ ಹಿಂದೆ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದಾರೆ.

    ಮೊದಲು ನಟಿಯಾಗಿ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಶ್ವಿನಿ ಈಗ ಪೋಷಕ ನಟಿ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಅಭಿನಯಿಸಿದ ‘ರಾಜಾಹುಲಿ’ ಚಿತ್ರದಲ್ಲಿ ಅಶ್ವಿನಿ ಯಶ್ ಅವರ ಅತ್ತೆ ಮಗಳ ಪಾತ್ರದಲ್ಲಿ ಬಣ್ಣ ಹಚ್ಚಿದ್ದರು.

    ಅಶ್ವಿನಿ ‘ವಾರಸ್ದಾರ’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅಶ್ವಿನಿ ನಕ್ಷತ್ರ’ ಧಾರಾವಾಹಿಯಲ್ಲಿ ಅಶ್ವಿನಿ ನಟ ಜೆಕೆ ಅವರ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಅಶ್ವಿನಿ ಅವರು ಟಿ.ಎನ್ ಸೀತಾರಾಂ ಅವರ ‘ಮಹಾಪರ್ವ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

    ಇದುವರೆಗೂ ಅಶ್ವಿನಿ ಗೌಡ 45 ಚಿತ್ರಗಳಲ್ಲಿ ಹಾಗೂ 15 ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇಷ್ಟು ದಿನ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಶ್ವಿನಿ ಈಗ ಕರವೇ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಏನಿದು ಪ್ರಕರಣ?
    ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕರವೇ ಕಾರ್ಯಕರ್ತರು ಶರಣಾಗಿದ್ದು ವಿವಿ ಪುರಂ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಈ ವಿಚಾರವಾಗಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಒಪಿಡಿಗಳನ್ನು ಬಂದ್ ಮಾಡಿ ವೈದ್ಯರು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಅಶ್ವಿನಿ ಗೌಡ ಸೇರಿದಂತೆ 12 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನ ಮಾಡಿದ್ದರು.

    ಅದರಂತೆ ಇಂದು ಬೆಳಗ್ಗೆ ವಿವಿಪುರಂ ಪೊಲೀಸ್ ಠಾಣೆಗೆ ಬಂದ ಅಶ್ವಿನಿ ಗೌಡ ಮಧುಸೂದನ್ ಯಾದವ್, ಮನು, ಗಾಯಿತ್ರಿ, ಸಂಗೀತಾ ಶೆಟ್ಟಿ ಸೇರಿದಂತೆ 12 ಕಾರ್ಯಕರ್ತರು ಶರಣಾಗಿದ್ದಾರೆ. ಈ ಬಗ್ಗೆ ಬೆಳಗ್ಗೆ ಮಾತನಾಡಿದ್ದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

     

  • ಅಶ್ವಿನಿಗೌಡ ಸೇರಿ 12 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್

    ಅಶ್ವಿನಿಗೌಡ ಸೇರಿ 12 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್

    ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಸೇರಿದಂತೆ 12 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕರವೇ ಕಾರ್ಯಕರ್ತರು ಶರಣಾಗಿದ್ದು ವಿವಿ ಪುರಂ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಈ ವಿಚಾರವಾಗಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಒಪಿಡಿಗಳನ್ನು ಬಂದ್ ಮಾಡಿ ವೈದ್ಯರು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನ ಮಾಡಿದ್ದರು.

    ಅದರಂತೆ ಇಂದು ಬೆಳಗ್ಗೆ ವಿವಿಪುರಂ ಪೊಲೀಸ್ ಠಾಣೆಗೆ ಬಂದ ಅಶ್ವಿನಿ ಗೌಡ ಮಧುಸೂದನ್ ಯಾದವ್, ಮನು, ಗಾಯಿತ್ರಿ, ಸಂಗೀತಾ ಶೆಟ್ಟಿ ಸೇರಿದಂತೆ 12 ಕಾರ್ಯಕರ್ತರು ಶರಣಾಗಿದ್ದಾರೆ. ಈ 12 ಜನರನ್ನು ಬಂಧಿಸಿರುವ ಪೊಲೀಸರು ಮೊದಲಿಗೆ ವೈದ್ಯಕೀಯ ಪರಿಕ್ಷೇ ಮಾಡಿಸಿ ನಂತರ ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಈ ಬಗ್ಗೆ ಬೆಳಗ್ಗೆ ಮಾತನಾಡಿದ್ದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

  • ವೈದ್ಯರ ಪ್ರತಿಭಟನೆ- ಕರವೇ ಅಶ್ವಿನಿಗೌಡ ಸೇರಿ 15ಕ್ಕೂ ಹೆಚ್ಚು ಜನ ಶರಣಾಗಲು ನಿರ್ಧಾರ

    ವೈದ್ಯರ ಪ್ರತಿಭಟನೆ- ಕರವೇ ಅಶ್ವಿನಿಗೌಡ ಸೇರಿ 15ಕ್ಕೂ ಹೆಚ್ಚು ಜನ ಶರಣಾಗಲು ನಿರ್ಧಾರ

    ಬೆಂಗಳೂರು: ಕರವೇ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ.

    ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕಳೆದ ಒಂದು ವಾರದಿಂದ ನಡೆಯುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಪ್ರತಿಭಟನೆಗೆ ಐಎಂಎ ಕೈ ಜೋಡಿಸಿದೆ. ವೈದ್ಯರ ಮೇಲೆ ಹಲ್ಲೆ ಮಾಡಿರುವ ಕರವೇ ಕಾರ್ಯಕರ್ತರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯಲ್ಲಿ ವೈದ್ಯರು ಭಾಗಿಯಾಗಲಿದ್ದಾರೆ. ಸರ್ಕಾರಿ ಆಸ್ಪತ್ರೆಯ ಜೊತೆಗೆ ಇಂದು ರಾಜ್ಯದ ಖಾಸಗಿ ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನ 24 ಗಂಟೆಗಳ ಸಂಪೂರ್ಣ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧರಾಗಿದ್ದಾರೆ.

    ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6 ರವರೆಗೆ ಖಾಸಗಿ ಆಸ್ಪತ್ರೆಯ ಓಪಿಡಿ ಸೇರಿದಂತೆ ಬಹುತೇಕ ಕ್ಲಿನಿಕ್ ಗಳು ಸಹ ಬಂದ್ ಆಗಲಿದ್ದು, ರೋಗಿಗಳಿಗೆ ಚಿಕಿತ್ಸೆ ದೊರೆಯುವುದು ಅನುಮಾನವಾಗಿದೆ. ಇದರಿಂದ ರೋಗಿಗಳಿಗೆ ತೊಂದರೆ ಆಗಲಿದೆ.  ಇತ್ತ ಕರವೇ ಕಾರ್ಯಕರ್ತರು ಶರಣಾಗಲು ಒಪ್ಪಿಕೊಂಡಿದ್ದರಿಂದ ವೈದ್ಯರು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

  • ಅಶ್ವಿನಿಗೌಡ ಅಭಿನಯದ ‘ತ್ರಿಪುರ’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

    ಅಶ್ವಿನಿಗೌಡ ಅಭಿನಯದ ‘ತ್ರಿಪುರ’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

    ಬೆಂಗಳೂರು: ರಂಗಭೂಮಿ ಚಿತ್ರರಂಗಕ್ಕೆ ಮೂಲಪ್ರೇರಣೆ. ಡಾ. ರಾಜ್‍ಕುಮಾರ್, ನರಸಿಂಹರಾಜು ಅವರಂಥ ದಿಗ್ಗಜರೆಲ್ಲ ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದವರು. ಇದೀಗ ಅದೇ ರಂಗಭೂಮಿ, ತಬಲಾ ವಿದ್ವಾಂಸರು, ಸಂಗೀತಗಾರರ ಫ್ಯಾಮಿಲಿಯಿಂದ ಬಂದ ಎಲ್.ಮಂಜುನಾಥ್ ‘ತ್ರಿಪುರ’ ಎಂಬ ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಲವ್ ಸ್ಟೋರಿಯನ್ನು ನಿರ್ಮಿಸಿ ತೆರೆಯ ಮೇಲೆ ತರುತ್ತಿದ್ದಾರೆ. ಒಂದು ಹೆಣ್ಣಿನ ಹಿಂದೆ ಬಿದ್ದಾಗ ಏನೆಲ್ಲಾ ಆಗುತ್ತದೆ ಎಂದು ಕುತೂಹಲಕರ ಕಥೆಯೊಂದಿಗೆ ಈ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ.

    ವಿಶೇಷವಾಗಿ ಈ ಚಿತ್ರದಲ್ಲಿ ಐದು ನಿಮಿಷಗಳ ಹಿಸ್ಟಾರಿಕಲ್ ಕಥೆ ಕೂಡ ಇದೆ. ಈಗಿನ ಕಾಲದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಇಷ್ಟವಾಗುವಂತ ಕಥೆ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲಾ ಮುಗಿದಿದ್ದು ಕಳೆದ ವಾರ ಸೆನ್ಸಾರ್ ಮಂಡಳಿ ವೀಕ್ಷಿಸಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಚಿತ್ರವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

    ಶ್ರೀ ಅಂಕುರ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಈ ಹಿಂದೆ ಮುಕ್ತಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕೆ.ಶಂಕರ್ ಚಿತ್ರಕಥೆ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಗೌರಿ ವೆಂಕಟೇಶ್ ಛಾಯಾಗ್ರಹಣ, ಡಿ.ಆರ್.ಹೇಮಂತಕುಮಾರ್ ಸಂಗೀತ, ಕೆ.ಶಂಕರ್ ಸಂಭಾಷಣೆ ಮತ್ತು ಸಾಹಿತ್ಯ, ಹರಿಕೃಷ್ಣ ನೃತ್ಯ ನಿರ್ದೇಶನ, ರಾಜಶೇಖರರೆಡ್ಡಿ ಸಂಕಲನವಿದೆ. ಅಶ್ವಿನಿಗೌಡ, ಶ್ರೀಧರ್, ಧರ್ಮ, ಟೆನ್ನಿಸ್ ಕೃಷ್ಣ, ಲಕ್ಷ್ಮಣ್ ರಾವ್, ಕಿಲ್ಲರ್ ವೆಂಕಟೇಶ್, ರಮಾನಂದ್, ಸುಂದರಶ್ರೀ, ಡಿಂಗ್ರಿ ನಾಗರಾಜ್, ಬೇಬಿ ಆದ್ಯ, ಪವಿತ್ರ, ಮಂಜುನಾಥ್ ಮುಂತಾದವರ ತಾರಾಬಳಗವಿದೆ.