Tag: ಅಹಮಾದಾಬಾದ್

  • ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಶಾಲೆಯಲ್ಲೇ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

    ಅಹಮದಾಬಾದ್‌: ಶಾಲೆಯಲ್ಲಿ (School) ಜಗಳ ನಡೆಯುವ ವೇಳೆ ಸಹಪಾಠಿಯಿಂದ ಚೂರಿ ಇರಿತಕ್ಕೆ ಒಳಗಾದ ವಿದ್ಯಾರ್ಥಿ (Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ (Ahmedabad School Stabbing) ಮಂಗಳವಾರ 8ನೇ ತರಗತಿಯ ವಿದ್ಯಾರ್ಥಿ ಜೊತೆ 10ನೇ ತರಗತಿಯ ವಿದ್ಯಾರ್ಥಿಗೆ ಜಗಳ ನಡೆದಿತ್ತು. ಈ ವೇಳೆ 8ನೇ ತರಗತಿ ವಿದ್ಯಾರ್ಥಿ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದ.

    ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಮಕ್ಕಳ ಪೋಷಕರು ಶಾಲೆಗೆ ನುಗ್ಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.  ಇದನ್ನೂ ಓದಿ: 12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

    ಬಾಲಕ ಕುಟುಂಬಸ್ಥರು, ಸಿಂಧಿ ಸಮುದಾಯದ ಸದಸ್ಯರು ಮತ್ತು ಇತರ ಪೋಷಕರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೊಲೆ ಮಾಡಿದ ಬಾಲಕ ಮುಸ್ಲಿಮ್‌ ಧರ್ಮಕ್ಕೆ ಸೇರಿದ್ದರೆ ಕೊಲೆಯಾದ ವಿದ್ಯಾರ್ಥಿ ಹಿಂದೂ ಧರ್ಮಕ್ಕೆ ಸೇರಿದ್ದರಿಂದ ಪ್ರತಿಭಟನೆ ಜೋರಾಗಿದೆ. ಪ್ರತಿಭಟನಾಕಾರರು ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈಗ ಪೋಷಕರ ಜೊತೆ ಹಿಂದೂ ಸಂಘಟನೆಗಳು ಶಾಲೆಯ ಪ್ರಿನ್ಸಿಪಾಲ್‌ ಮತ್ತು ಆಡಳಿತ ಮಂಡಳಿಯ ವಿರುದ್ಧ ದೂರು ನೀಡಿವೆ.

    ಜಂಟಿ ಪೊಲೀಸ್ ಆಯುಕ್ತ ಜೈಪಾಲ್ ಸಿಂಗ್ ರಾಥೋಡ್ ಪ್ರತಿಕ್ರಿಯಿಸಿ, ಪೊಲೀಸರು ನಿನ್ನೆಯೇ ಎಫ್‌ಐಆರ್ ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ, ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ನಂತರ ಮೃತನ ಕುಟುಂಬ, ಇತರ ವಿದ್ಯಾಳ ಪೋಷಕರು ಮತ್ತು ಸಿಂಧಿ ಸಮುದಾಯದ ಸದಸ್ಯರು ಒಟ್ಟುಗೂಡಿದ್ದಾರೆ. ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

  • ಐಷರಾಮಿ ಬಸ್ಸಿಗೆ ಹಿಂದಿನಿಂದ ಕಂಟೈನರ್ ಡಿಕ್ಕಿ- ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ

    ಐಷರಾಮಿ ಬಸ್ಸಿಗೆ ಹಿಂದಿನಿಂದ ಕಂಟೈನರ್ ಡಿಕ್ಕಿ- ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ

    ಮುಂಬೈ: ಕಂಟೈನರ್ ಮತ್ತು ಲಕ್ಸುರಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

    ಮುಂಬೈ-ಅಹಮಾದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಧಾನು ಎಂಬ ಪ್ರದೇಶದಲ್ಲಿ ಈ ಘಟನೆ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ.

    ಹೆದ್ದಾರಿಯ ಮೊದಲ ಓಣಿಯಲ್ಲಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಬಸ್ಸಿನ ಚಕ್ರದಲ್ಲಿ ವ್ಯತ್ಯಾಸವಾಗುತ್ತಿರುವುದು ಚಾಲಕನ ಗಮನಕ್ಕೆ ಬಂದಿದೆ. ಹೀಗಾಗಿ ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾನೆ. ಈ ವೇಳೆ ವೇಗವಾಗಿ ಬರುತ್ತಿದ್ದ ಕಂಟೈನರ್ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಅಂತ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಘಟನೆಯಿಂದಾಗಿ ಬಸ್ ಕ್ಲೀನರ್ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಂಟೈನರ್ ನಲ್ಲಿದ್ದವರು ಸೇರಿ ಒಟ್ಟು ನಾಲ್ವರಿಗೆ ಗಾಯಗಳಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅಂತ ವರದಿಯಾಗಿದೆ.

    ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇನ್ನು ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂಬುದಾಗಿ ವರದಿಯಾಗಿದೆ.