Tag: ಅಹೋರಾತ್ರಿ ಧರಣಿ

  • ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರದಿಂದ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಹಲವು ಸ್ವಾರಸ್ಯಕರ ಚರ್ಚೆಗೂ ಸಾಕ್ಷಿಯಾಗುತ್ತಿದೆ. ಅಹೋರಾತ್ರಿ ಧರಣಿಗೆ ಇಬ್ಬರಿಗೆ ವಿನಾಯ್ತಿ ನೀಡಿದ್ದಾರಂತೆ. ಸ್ವತಃ ಸಿದ್ದರಾಮಯ್ಯ ಅವರೇ ಆ ಇಬ್ಬರ ಹೆಸರನ್ನ ಮೊಗಸಾಲೆಯಲ್ಲಿ ಹೇಳಿ ಹಾಸ್ಯ ಮಾಡಿದ್ದಾರೆ.

    ಶುಕ್ರವಾರ ಕಲಾಪ ಆರಂಭಕ್ಕೂ ಮುನ್ನ ವಿಧಾನಸಭೆಯ ವಿರೋಧ ಪಕ್ಷದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಕುಳಿತಿದ್ದರು. ಆ ಸ್ಥಳಕ್ಕೆ ಮಾಜಿ ಸಚಿವ ದೇಶಪಾಂಡೆ ಕೂಡ ಬಂದು ಸಿದ್ದರಾಮಯ್ಯ ಪಕ್ಕ ಕುಳಿತರು. ಆಗ ಸಿದ್ದರಾಮಯ್ಯ ದೇಶಪಾಂಡೆಯವರ ಕಾಲೆಳೆಯಲು ಪ್ರಾರಂಬಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಹೋರಾತ್ರಿ ಧರಣಿ – ಸಿಎಂ, ಬಿಎಸ್‍ವೈ ಸಂಧಾನ ಯತ್ನ ವಿಫಲ

    ಅಹೋರಾತ್ರಿ ಧರಣಿಗೆ ನಮ್ ಶಾಮನೂರು ಶಿವಶಂಕರಪ್ಪ, ಈ ದೇಶಪಾಂಡೆ ಇಬ್ಬರಿಗೂ ವಿನಾಯ್ತಿ ಕೊಟ್ಟಿದ್ದೇವೆ. ಇಬ್ಬರಿಗೂ ವಯಸ್ಸಾಗಿದೆ ಪಾಪ ಎಂದು ಸಿದ್ದರಾಮಯ್ಯ ಛೇಡಿಸಿದ್ದಾರೆ.

    ಇದಕ್ಕೆ ತಕ್ಷಣ ರಿಯಾಕ್ಟ್ ಮಾಡಿದ ದೇಶಪಾಂಡೆ. ನಾನೇನು ಮುದುಕ ಅಲ್ಲ, ನನಗೇನು ವಯಸ್ಸಾಗಿದೆ. ನಿನಗಿಂತ ನಾನು 6 ತಿಂಗಳು ದೊಡ್ಡವನು. ಹಾಗಾದ್ರೆ ನೀನು ಮುದುಕನಾ? ಎಂದು ಸಿದ್ದರಾಮಯ್ಯಗೆ ಕೇಳಿದ್ದಾರೆ. ಇದನ್ನೂ ಓದಿ: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ

    ನೋಡಪ್ಪಾ, ನನಗೆ ವಯಸ್ಸಾಗಿದ್ರೂ ನಾನು ಹಾಗೆ ಕಾಣಲ್ಲ. ನೀನು ಮಾಗಿ ಬಿಟ್ಟಿದ್ದೀಯಾ. ಅದಕ್ಕೆ ಹಂಗೆ ಹೇಳ್ದೆ ಎಂದು ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಆಗ ಅಕ್ಕ ಪಕ್ಕ ಇದ್ದ ಶಾಸಕರು ನಗೆಡಲಲ್ಲಿ ತೇಲಿದ್ದಾರೆ.

  • ಸಿಎಎ, ಎನ್‌ಆರ್‌ಸಿ ವಿರೋಧಿಸಿ ಅಹೋರಾತ್ರಿ ಧರಣಿ – ಮಗು ಹಿಡಿದು ಕುಳಿತ ಸೌಮ್ಯ ರೆಡ್ಡಿ

    ಸಿಎಎ, ಎನ್‌ಆರ್‌ಸಿ ವಿರೋಧಿಸಿ ಅಹೋರಾತ್ರಿ ಧರಣಿ – ಮಗು ಹಿಡಿದು ಕುಳಿತ ಸೌಮ್ಯ ರೆಡ್ಡಿ

    ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಅದರಲ್ಲೂ ದೆಹಲಿಯಲ್ಲಿ ಪೌರತ್ವ ಕಾಯ್ದೆಯ ವಿರುದ್ಧದ ಪ್ರತಿಭಟನೆಯೂ ಹಿಂಸಾತ್ಮಕ ರೂಪ ಪಡೆದು ಅನೇಕ ಮಂದಿಯನ್ನು ಬಲಿಪಡೆದಿದೆ.

    ರಾಷ್ಟ್ರ ರಾಜಧಾನಿ ಮಾತ್ರವಲ್ಲ, ರಾಜ್ಯ ರಾಜಧಾನಿಯಲ್ಲೂ ಒಂದಿಲ್ಲೊಂದು ಭಾಗದಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲೂ ಶಾಹಿನ್ ಬಾಗ್ ರೀತಿಯಲ್ಲಿ ಅಹೋರಾತ್ರಿ ಧರಣಿ, ಪ್ರತಿಭಟನೆ ಕಳೆದ 20 ದಿನಗಳಿಂದ ನಡೆಯುತ್ತಿದೆ.

    ಹೌದು ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರೋ ಬಿಲಾಲ್ ಮಸೀದಿಯ ಮುಂಭಾಗದಲ್ಲಿ ಪ್ರತಿದಿನ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಬಿಲಾಲ್ ಮಸೀದಿಯ ಮುಂಭಾಗದಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಮತ್ತೊಂದು ಶಾಹಿನ್ ಬಾಗ್ ಎಂದು ಹೆಸರು ಕೊಟ್ಟಿದ್ದು, ಬಿಲಾಲ್ ಬಾಗ್ ಬೆಂಗಳೂರು ಎಂಬ ಹೆಸರಿನಡಿಯಲ್ಲಿ ಸೇವ್ ಇಂಡಿಯಾ, ಸಂವಿಧಾನವನ್ನ ರಕ್ಷಸಿ ಎಂದು ಬ್ಯಾನರ್ ಹಾಕಿಕೊಂಡು ನೂರಾರು ಮಹಿಳೆಯರು ಮಕ್ಕಳ ಸಮೇತ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.

    ಇವರ ಅಹೋರಾತ್ರಿ ಧರಣಿಗೆ ಬಾಲಿವುಡ್ ನಟ ನಸೀರುದ್ದೀನ್ ಶಾ, ಶಾಸಕಿ ಸೌಮ್ಯ ರೆಡ್ಡಿ ಸಹ ಸಾಥ್ ನೀಡಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಯನ್ನ ಹಿಂಪಡೆಯುವವರೆಗೆ ಧರಣಿ ಮಾಡಲು ಇಲ್ಲಿನ ಮಹಿಳೆಯರು ಹಾಗೂ ಸಾರ್ವಜನಿಕರು ನಿರ್ಧಾರ ಮಾಡಿದ್ದಾರೆ.