Tag: ಅಹ್ಮದಾಬಾದ್

  • ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

    ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

    – ಕನ್ನಡದಲ್ಲೇ ಸಂತಸ ಹಂಚಿಕೊಂಡ ವೈಶಾಖ್

    ಅಹಮದಾಬಾದ್: ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಹೊಸ ಹೊಸ ಪ್ರತಿಭೆಗಳು ಗುರುತಿಸಿಕೊಳ್ಳುತ್ತಿವೆ. ಮಂಗಳವಾರ ನಡೆದ ಪಂಜಾಬ್ ಕಿಂಗ್ಸ್ (Punjab Kings), ಗುಜರಾತ್ ಟೈಟನ್ಸ್ ನಡುವಿನ ಜಿದ್ದಾಜಿದ್ದಿ ಕಣದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವೈಶಾಖ್ ವಿಜಯ್ ಕುಮಾರ್ (Vyshak Vijay Kumar) ತಮ್ಮ ಬೌಲಿಂಗ್‌ನಿಂದ ಗಮನ ಸೆಳೆದಿದ್ದಾರೆ.

    ಹೌದು. 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ್ದ ಪಂಜಾಬ್, ಟೈಟನ್ಸ್ (Gujarat Titans) ವಿರುದ್ಧ ಕೇವಲ 11 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು. ಆದ್ರೆ ಈ ರೋಚಕ ಗೆಲುವಿಗೆ ಕಾರಣವಾಗಿದ್ದು, ಕನ್ನಡಿಗ ವೈಶಾಖ್ ವಿಜಯ್ ಕುಮಾರ್. ಯಾವುದೇ ವಿಕೆಟ್ ಪಡೆಯದಿದ್ದರೂ ತಮ್ಮ ಬೌಲಿಂಗ್ ಸಾಮರ್ಥ್ಯದಿಂದ ಹೆಚ್ಚು ರನ್ ಬಿಟ್ಟುಕೊಡದೇ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. 3 ಓವರ್‌ಗಳಲ್ಲಿ 28 ರನ್ ಬಿಟ್ಟುಕೊಟ್ಟು ತಂಡವನ್ನು ಗೆಲುವಿನ ದಡ ಸೇರಿಸಿದರು.

    ಇನ್ನು ಪಂದ್ಯದ ಬಳಿಕ ಕನ್ನಡದಲ್ಲೇ ಮಾತನಾಡಿದ ವೈಶಾಖ್, ಫೀಲ್ಡ್ ಸೆಟ್ಟಿಂಗ್ ಮೊದಲೇ ಪ್ಲ್ಯಾನ್ ಮಾಡಿದ್ದೆವು. ಪ್ರಾಕ್ಟಿಸ್ ಪಂದ್ಯದಲ್ಲೇ ಈ ಬಗ್ಗೆ ಯೋಜನೆ ರೂಪಿಸಿದ್ದೆವು. ಅದೇ ರೀತಿ ಪಂದ್ಯದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದೆವು. ಅದು ಪಂದ್ಯ ಗೆಲ್ಲಲು ಸಹಾಯವಾಯಿತು. ಖಂಡಿತವಾಗಿಯೂ ನಾವು ಗೆಲ್ಲುತ್ತೇವೆ ಎಂದರು.

     

    ವೈಶಾಖ್ ವಿಜಯ್ ಕುಮಾರ್ ಯಾರು?
    ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರ ಹಲವು ಟೂರ್ನಿಗಳಲ್ಲಿ ಆಡಿರುವ ವೈಶಾಖ್ ವಿಜಯ್ ಕುಮಾರ್, 26 ವರ್ಷ ವಯಸ್ಸಿನ ಬಲಗೈ ವೇಗದ ಬೌಲರ್. ವೈಶಾಖ್ 1997ರ ಜನವರಿ 31ರಂದು ಬೆಂಗಳೂರಿನಲ್ಲಿ ಜನಿಸಿದರು.

    2021ರ ಫೆಬ್ರವರಿ 24ರಂದು ವಿಜಯ್ ಹಜಾರೆ ಟ್ರೋಫಿಯಲ್ಲಿ ಒಡಿಶಾ ವಿರುದ್ಧ ತಮ್ಮ ಚೊಚ್ಚಲ ಲಿಸ್ಟ್ ಎ ಪಂದ್ಯ ಆಡಿದರು. ಸರ್ವೀಸಸ್ ತಂಡದ ವಿರುದ್ಧ ಆಡಿದ ಮೊದಲ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ, 25 ರನ್ ಬಿಟ್ಟುಕೊಟ್ಟು ಮೂರು ವಿಕೆಟ್ ಪಡೆದು ಮಿಂಚಿದ್ದರು. 2022ರ ಫೆಬ್ರವರಿ 17ರಂದು ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.

    ಈಗಾಗಲೇ ವಿಜಯ್ ಹಜಾರೆ ಟ್ರೋಫಿ, ರಣಜಿ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕದ ಪರ ಆಡಿದ ಅನುಭವ ವೈಶಾಖ್ ವಿಜಯ್‌ಗಿದೆ. ಇದುವರೆಗ ಆಡಿದ 10 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅವರು 38 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಇದೇ ವೇಳೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 11 ವಿಕೆಟ್ ಕಬಳಿಸಿದ್ದಾರೆ. ದೇಶಿಯ ಮಟ್ಟದಲ್ಲಿ 14 ಟಿ20 ಪಂದ್ಯಗಳನ್ನು ಆಡಿದ ಅನುಭವವಿರುವ ಯುವ ವೇಗಿ, 22 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ.

    ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ವೈಶಾಖ್ 10 ಪಂದ್ಯಗಳಿಂದ 15 ವಿಕೆಟ್ ಕಬಳಿಸಿದ್ದರು. ಆ ಮೂಲಕ ಪಂದ್ಯಾವಳಿಯಲ್ಲಿ ಐದನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. 6.31ರ ಎಕಾನಮಿಯಲ್ಲಿ ಬೌಲಿಂಗ್ ಮಾಡಿ, ತಾವು ಹೆಚ್ಚು ರನ್ ಸೋರಿಕೆಯಾಗಲು ಅವಕಾಶ ಕೊಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದರು.

  • ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಗಾಂಧೀನಗರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ (Chief Justice Of India), ಹಿರಿಯ ಪೊಲೀಸ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಯೋವೃದ್ಧರೊಬ್ಬರಿಗೆ 1.26 ಕೋಟಿ ರೂ. ವಂಚನೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಅಹ್ಮದಾಬಾದ್ ಸೈಬರ್ ಕ್ರೈಂ ಪೊಲೀಸರು (Ahmedabad Crime Branch Police)  ಬಂಧಿಸಿದ್ದಾರೆ.

    ಬಂಧಿತರನ್ನು ಮೊಹಮ್ಮದ್ ಹುಸೇನ್ ಜಾವೇದ್ ಅಲಿ, ತರುಣ್ ಸಿಂಗ್ ವಘೇಲಾ, ಬ್ರಿಜೇಶ್ ಪರೇಖ್ ಮತ್ತು ಶುಭಂ ಠಾಕರ್ ಎಂದು ಗುರುತಿಸಲಾಗಿದೆ.

    ಸೈಬರ್ ಕ್ರೈಂ ಪ್ರಕರಣದಲ್ಲಿ ಶುಭಂ ಠಾಕರ್‌ನನ್ನು ಈ ಹಿಂದೆ ಹರಿಯಾಣ ಪೊಲೀಸರು (Hariyana Police) ಬಂಧಿಸಿದ್ದರು. ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಇದನ್ನೂ ಓದಿ: ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

    ಸಂತ್ರಸ್ತ ವೃದ್ಧ ವಿಡಿಯೋ ಕಾಲ್ ಸ್ವೀಕರಿಸಿದ ಕರೆಗಳು ಕಾಂಬೋಡಿಯಾದಲ್ಲಿ ಎಂದು ಪತ್ತೆಹಚ್ಚಲಾಗಿದೆ. ವರ್ಗಾವಣೆಯಾಗಿರುವ ಹಣದ ಹಲವು ಖಾತೆಗಳು ಗುಜರಾತ್‌ನಲ್ಲಿರುವುದು ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಅ.10 ರಂದು ವೃದ್ಧನಿಗೆ ಕರೆ ಮಾಡಿದ್ದ ವಂಚಕರು, ತಾನು ಹಿರಿಯ ಪೊಲೀಸ್ ಅಧಿಕಾರಿ, ಸಿಬಿಐ ಅಧಿಕಾರಿ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಂದು ಹೇಳಿಕೊಂಡಿದ್ದರು. ವೃದ್ಧನಿಗೆ ಕರೆ ಮಾಡಿ ಅವರ ಖಾತೆಯಿಂದ 2 ಕೋಟಿ ರೂ. ಹಣದ ವಹಿವಾಟು ನಡೆದಿದೆ. ಬ್ಯಾಂಕ್ ಖಾತೆಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದೆ ಮತ್ತು ನೀವು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ಬೆದರಿಕೆ ಹಾಕಿದ್ದಾರೆ.

    ತನಿಖೆಯ ನೆಪದಲ್ಲಿ ಸಂತ್ರಸ್ತನ ಸ್ಥಿರ ಠೇವಣಿಗಳನ್ನು ಕ್ಲೋಸ್ ಮಾಡಿ, ಹಣವನ್ನು ಪರಿಶೀಲನೆಗೆ ವರ್ಗಾಯಿಸುವಂತೆ ಒತ್ತಡ ಹಾಕಿದ್ದಾರೆ. ಹಣವನ್ನು 48 ಗಂಟೆಯೊಳಗೆ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದಾರೆ. ವೃದ್ಧಮನ್ನು ನಂಬಿಸಲು ನಕಲಿ ಸುಪ್ರೀಂಕೋರ್ಟ್ ಪ್ರಮಾಣಪತ್ರವನ್ನು ತೋರಿಸಿದ್ದಾರೆ. ತಮ್ಮ ಠೇವಣಿಗಳನ್ನು ತೆಗೆದು ಹಣ ವರ್ಗಾವಣೆ ಮಾಡಿದ ಬಳಿಕ ವೃದ್ಧನಿಂದ ಆರೋಪಿಗಳು ಸಂಪರ್ಕ ಕಟ್ ಮಾಡಿಕೊಂಡಿದ್ದರು.ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ : 5 ಕೋಟಿ ಬೇಡಿಕೆಯಿಟ್ಟಿದ್ದ ತರಕಾರಿ ಮಾರಾಟಗಾರ ಅರೆಸ್ಟ್‌

  • ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

    ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

    ಅಹ್ಮದಾಬಾದ್ : ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣ ದಂಡನೆ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಗೊತ್ತುಪಡಿಸಿದ ವಿಶೇಷ ನ್ಯಾಯಲಯ ಇಂದು ಈ ಆದೇಶ ನೀಡಿದೆ.

    ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕಾಯಿದೆ ( UAPA ) ಮತ್ತು ಭಾರತೀಯ ದಂಡ ಸಂಹಿತೆ 302ರ ಅಡಿಯಲ್ಲಿ ತೀರ್ಪು ಪ್ರಕಟಿಸಿದ ನ್ಯಾ. ಎ.ಆರ್ ಪಟೇಲ್, ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದರು. ಇನ್ನು ಸ್ಫೋಟದಲ್ಲಿ ಮೃತಪಟ್ಟವರಿಗೆ 1 ಲಕ್ಷ ರೂ. ಗಂಭೀರ ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ಅಪ್ರಾಪ್ತರಿಗೆ 25,000 ರೂಪಾಯಿ ಪರಿಹಾರವನ್ನು ನೀಡುವಂತೆ ಸೂಚಿಸಿದ್ದಾರೆ.

    ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಅಪರಾಧಿ ಮತ್ತು ಮರಣದಂಡನೆ ಶಿಕ್ಷೆಗೆ ಒಳಗಾದವರ ಪೈಕಿ ಉಸ್ಮಾನ್ ಅಗರಬತ್ತಿವಾಲಾನಿಗೆ ಹೆಚ್ಚುವರಿಯಾಗಿ ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಶಿಕ್ಷೆಗಾಗಿ ಒಂದು ವರ್ಷ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ

    ಐಪಿಸಿ, ಯುಎಪಿಎ, ಸ್ಫೋಟಕ ವಸ್ತುಗಳ ಕಾಯಿದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಪ್ರತಿ ಸೆಕ್ಷನ್ ಅಡಿಯಲ್ಲಿ 49 ಅಪರಾಧಿಗಳಲ್ಲಿ ಪ್ರತಿಯೊಬ್ಬರಿಗೂ ನೀಡಲಾದ ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ, ನ್ಯಾಯಾಲಯವು 48 ಅಪರಾಧಿಗಳಿಗೆ ತಲಾ 2.85 ಲಕ್ಷ ರೂ. ಅಗರಬತ್ತಿವಾಲಾಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಹೆಚ್ಚುವರಿ ಶಿಕ್ಷೆಯೊಂದಿಗೆ 2.88 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

    ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದನ್ನೂ ಓದಿ: ಹಿಜಬ್ ಬಳಿಕ ಸಿಂಧೂರ ವಿವಾದ – ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

  • ಮನುಷ್ಯರ ಮುಖಗಳನ್ನು ಇನ್ನೆಂದೂ ತೋರಿಸ್ಬೇಡ ಅಲ್ಲಾ- ನಗುತ್ತಲೇ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

    ಮನುಷ್ಯರ ಮುಖಗಳನ್ನು ಇನ್ನೆಂದೂ ತೋರಿಸ್ಬೇಡ ಅಲ್ಲಾ- ನಗುತ್ತಲೇ ನದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

    ಅಹ್ಮದಾಬಾದ್: ಬಹುತೇಕರು ಸಪ್ಪೆ ಮುಖದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಮುಖದ ತುಂಬ ನಗುವಿನೊಂದಿಗೆ ತೆರಳಿ, ಸಿಕ್ಕಾಪಟ್ಟೆ ನಗುತ್ತಲೇ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಗುಜರಾತ್‍ನ ಅಹ್ಮದಾಬಾದ್‍ನಲ್ಲಿರುವ ಶಬರಮತಿ ನದಿಗೆ ಜಿಗಿದು ಆಯೇಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರುವುದಕ್ಕೂ ಮುನ್ನ ಮಹಿಳೆ ವೀಡಿಯೋ ಮೂಲಕ ಜಗತ್ತಿಗೆ ಕಡೆಯ ಸಂದೇಶ ನೀಡಿದ್ದು, ನಾನು ಒತ್ತಡದಿಂದಾಗಿ ಈ ರೀತಿ ಮಾಡುತ್ತಿಲ್ಲ, ಅಲ್ಲಾನೆಡೆಗೆ ತೆರಳಲು ಸಂತೋಷದಿಂದ ತೆರಳುತ್ತಿದ್ದೇನೆ ಎಂದು ಹೇಳಿದ್ದಾರೆ. ರೆಕಾರ್ಡ್ ಮಾಡಿದ ವೀಡಿಯೋವನ್ನು ಅವರ ಕುಟುಂಬಸ್ಥರಿಗೆ ಕಳುಹಿಸಿದ್ದಾಳೆ. ಬಳಿಕ ಸೇತುವೆ ಮೇಲಿಂದ ನದಿಗೆ ಜಿಗಿದಿದ್ದಾಳೆ.

    ತಕ್ಷಣವೇ ಈ ವಿಡಿಯೋವನ್ನು ಕುಟುಂಬಸ್ಥರು ಗಮನಿಸಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟೊತ್ತಿಗಾಗಲೇ ಮಹಿಳೆ ನದಿಗೆ ಹಾರಿದ್ದಳು. ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಆಯೇಶಾಳ ದೇಹವನ್ನು ನದಿಯಿಂದ ತೆಗೆದಿದ್ದಾರೆ.

    ವೀಡಿಯೋದಲ್ಲಿ ಏನು ಹೇಳಿದ್ದಾಳೆ?
    ನಮಸ್ಕಾರ, ನನ್ನ ಹೆಸರು ಆಯೇಶಾ ಆರಿಫ್ ಖಾನ್, ನಾನೂ ಸ್ವ ಇಚ್ಛೆಯಿಂದಲೇ ಈ ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಈಗ ನಾನು ಏನು ಹೇಳುತ್ತಿದ್ದೇನೆ ಎಂದರೆ, ಅಲ್ಲಾ ನೀಡಿದ ಜೀವನವು ದೀರ್ಘಾವಧಿಯದ್ದಾಗಿದೆ. ಈ ಸಣ್ಣ ಜೀವವನ್ನು ನಾನು ತುಂಬಾ ಶಾಂತಿಯುತವಾಗಿ ಕಳೆದಿದ್ದೇನೆ ಎಂದು ತಿಳಿಯಿರಿ. ಅಪ್ಪಾ ನೀವು ಎಲ್ಲಿಯವರೆಗೆ ಹೋರಾಡುತ್ತೀರಿ, ಪ್ರಕರಣವನ್ನು ಹಿಂಪಡೆಯಿರಿ ಎಂದು ಕೇಳಿಕೊಂಡಿದ್ದಾಳೆ.

    ನಾನು ಇದನ್ನು ಮತ್ತೆಂದೂ ಮಾಡಲ್ಲ, ಆಯೇಶಾ ಯುದ್ಧಗಳನ್ನು ಮಾಡಿಲ್ಲ, ನಾನು ಆರಿಫ್‍ನನ್ನು ಪ್ರೀತಿಸುತ್ತೇನೆ. ಹೀಗಾಗಿ ಯಾಕೆ ತೊಂದರೆ ನೀಡಲಿ, ಅವನು ಸ್ವಾತಂತ್ರ್ಯ ಬಯಸಿದ್ದಾನೆ, ಸ್ವತಂತ್ರನಾಗಿರಬೇಕು. ಹೇಗೂ ನನ್ನ ಜೀವನ ಇಲ್ಲಿ ಕೊನೆಗೊಳ್ಳುತ್ತಿದೆ. ನಾನು ಅಲ್ಲಾನನ್ನು ಭೇಟಿಯಾಗುತ್ತಿರುವುದಕ್ಕೆ ಸಂತೋಷವಿದೆ. ನಾನು ಎಲ್ಲಿ ತಪ್ಪು ಮಾಡಿದ್ದೇನೆ ಎಂದು ಅವನನ್ನು ಕೇಳುತ್ತೇನೆ. ನನ್ನ ತಪ್ಪಾದರೂ ಏನು? ನನ್ನ ಹೆತ್ತವರು ತುಂಬಾ ಒಳ್ಳೆಯವರು, ಸ್ನೇಹಿತರು ತುಂಬಾ ಒಳ್ಳೆಯವರು. ಆದರೆ ನನ್ನಲ್ಲೇ ಏನೋ ಕೊರತೆ ಇದೆ, ಅದೃಷ್ಟ ಸರಿ ಇಲ್ಲ. ನಾನು ಸಂತೋಷವಾಗಿದ್ದೇನೆ. ಶಾಂತಿಯುತವಾಗಿ ಹೋಗುತ್ತೇನೆ. ಮನುಷ್ಯರ ಮುಖಗಳನ್ನು ಇನ್ನೆಂದೂ ನನಗೆ ತೋರಿಸದಂತೆ ಅಲ್ಲಾನನ್ನು ಪ್ರಾರ್ಥಿಸುತ್ತೇನೆ ಎಂದು ಹೇಳಿ ಜಿಗಿದ್ದಾಳೆ.

  • ಯಾವ ಹೋಟೆಲ್‍ಗೆ ಹೋಗಿದ್ದೆ ಎಂದ ಪತಿಯ ಮೇಲೆ ಹಲ್ಲೆ

    ಯಾವ ಹೋಟೆಲ್‍ಗೆ ಹೋಗಿದ್ದೆ ಎಂದ ಪತಿಯ ಮೇಲೆ ಹಲ್ಲೆ

    – ಬೆರಳು ಕಚ್ಚಿ, ಇಕ್ಕಳದಿಂದ ತಲೆಗೆ ಹೊಡೆದ ಮಡದಿ

    ಅಹಮದಾಬಾದ್: ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಇಕ್ಕಳ ಹಾಗೂ ಅಡುಗೆ ಸಾಮಾಗ್ರಿಯಿಂದ ಹಲ್ಲೆ ನಡೆಸಿದ ಪತ್ನಿ ವಿರುದ್ಧ ನೊಂದ ಪತಿ ದೂರು ದಾಖಲಿಸಿದ್ದಾರೆ.

    ಅಹಮದಾಬಾದ್‍ನ ನರೋಡಾದಲ್ಲಿ ಘಟನೆ ನಡೆದಿದ್ದು, ರಿಯಲ್ ಎಸ್ಟೇಟ್ ಮಧ್ಯವರ್ತಿಯಾಗಿರುವ 34 ವರ್ಷದ ಅಭಯ್‍ಗೆ 26 ವರ್ಷದ ಪತ್ನಿ ಹಿಗ್ಗಾಮುಗ್ಗಾ ಥಳಿಸಿ, ಮನಬಂದಂತೆ ಹಲ್ಲೆ ಮಾಡಿದ್ದಾಳೆ. ಈ ವೇಳೆ ಇಕ್ಕಳಿನಿಂದ ತಲೆಗೆ ಬಲವಾಗಿ ಹೊಡೆದಿದ್ದಲ್ಲದೆ, ಕೋಪದಿಂದ ಪತಿಯ ಹೆಬ್ಬೆರಳನ್ನೇ ಕಚ್ಚಿದ್ದಾಳೆ.

    ಘಟನೆಗೆ ಕಾರಣವೇನು?
    ವ್ಯಕ್ತಿ ಪತ್ನಿ ಹಾಗೂ ಮೂರು ವರ್ಷದ ಮಗಳೊಂದಿಗೆ ವಾಸವಿದ್ದು, ಬುಧವಾರ ರಾತ್ರಿ 11ರ ಸುಮಾರಿಗೆ ಊಟ ಮಾಡುತ್ತಿದ್ದಾಗ ಜಗಳ ನಡೆದಿದೆ. ಊಟಕ್ಕೆ ಕುಳಿತಾಗ ಪತಿ ಸಂಜೆ ಸ್ನ್ಯಾಕ್ಸ್ ತಿನ್ನಲು ಯಾವ ಹೋಟೆಲ್‍ಗೆ ಹೋಗಿದ್ದೆ ಎಂದು ಪತ್ನಿಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಕೋಪಕೊಂಡ ಪತ್ನಿ ಪ್ರಿಯಾಂಕಾ ಪತಿ ಅಭಯ್ ಮೇಲೆ ರೇಗಾಡಿ, ರಾದ್ಧಾಂತ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಪತಿ ಪೊಲೀಸರಿಗೆ ದೂರು ನೀಡಿದ್ದು, ನನ್ನ ಪತ್ನಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಡೆದು ಹಲ್ಲೆ ಮಾಡಿದ್ದಾಳೆ ಎಂದು ಅಭಯ್ ಆರೋಪಿಸಿದ್ದಾರೆ.

    ಕೇವಲ ಹಲ್ಲೆ ಮಾಡಿದ್ದು ಮಾತ್ರವಲ್ಲ, ವಾಗ್ವಾದ ನಡೆಯುವ ವೇಳೆ ಪ್ರಿಯಾಂಕಾ ನನ್ನ ಎಡಗೈ ಹಿಡಿದುಕೊಂಡಿದ್ದು, ಸಿಟ್ಟಿಗೆದ್ದು ಬೆರಳನ್ನೇ ಕಡಿದಿದ್ದಾಳೆ. ಕಚ್ಚುತ್ತಿದ್ದಂತೆ ತೀವ್ರ ನೋವುಂಟಾಗಿದ್ದು, ತಕ್ಷಣ ಅವಳನ್ನು ಹಿಂದಕ್ಕೆ ತಳ್ಳಿದೆ. ಇದರಿಂದ ಪ್ರಿಯಾಂಕಾ ಕೋಪಗೊಂಡು ಅಡುಗೆ ಮನೆಯಲ್ಲಿದ್ದ ಇಕ್ಕಳ ತಂದು ತೆಲೆಗೆ ಜೋರಾಗಿ ಹೊಡೆದಳು. ಇದರಿಂದ ತೀವ್ರ ರಕ್ತಸ್ರಾವವಾಯಿತು ಎಂದು ಅಭಯ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

    ರಕ್ತಸ್ರಾವದಿಂದ ತೀವ್ರ ಗಾಯಗೊಂಡಿದ್ದ ಅಭಯ್‍ನನ್ನು ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದ ನಂತರ ಅಭಯ್ ನರೋಡಾ ಪೆÇಲೀಸ್ ಠಾಣೆಗೆ ತೆರಳಿ ತನ್ನ ಪತ್ನಿ ವಿರುದ್ಧವೇ ದೂರು ದಾಖಲಿಸಿದ್ದಾರೆ. ಅಭಯ್ ಗುಜರಾತ್ ಮೂಲದವನಾಗಿದ್ದು ಪ್ರಿಯಾಂಕಾ ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದೆ.

  • ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ

    ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ

    ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್‍ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ ಕ್ವಾರಂಟೈನ್ ಆಗುವ ಸಾಧ್ಯತೆಗಳಿವೆ.

    ಅಹ್ಮದಾಬಾದ್‍ನ ಜಮಾಲ್‍ಪುರ ಪ್ರದೇಶವೂ ಕೊರೊನಾ ಪೀಡಿತವಾಗಿದ್ದು, ಸೋಂಕಿತ ಶಾಸಕ ಇತ್ತೀಚೆಗೆ ತಮ್ಮ ಕ್ಷೇತ್ರದಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದರು. ಈ ವೇಳೆಯೂ ಅವರು ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ. ಕೆಲವು ಪ್ರದೇಶಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆ ಸಿಎಂ ವಿಜಯ್ ರೂಪಾನಿ ಶಾಸಕರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸೋಂಕಿತ ಶಾಸಕ ಕೂಡಾ ಭಾಗಿಯಾಗಿದ್ದರು.

  • ಪೊಲೀಸರೇ ಮಕ್ಕಳಿಗೆ ಆಶ್ಲೀಲ ವಿಡಿಯೋ ತೋರಿಸಿದ್ರು: ನಿತ್ಯಾನಂದನ ಶಿಷ್ಯ

    ಪೊಲೀಸರೇ ಮಕ್ಕಳಿಗೆ ಆಶ್ಲೀಲ ವಿಡಿಯೋ ತೋರಿಸಿದ್ರು: ನಿತ್ಯಾನಂದನ ಶಿಷ್ಯ

    – ತನಿಖಾಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲು

    ಅಹಮದಾಬಾದ್: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಅಹಮದಾಬಾದ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಆಶ್ರಮದಲ್ಲಿನ ಮಕ್ಕಳನ್ನೂ ವಿಚಾರಣೆಗೊಳಪಡಿಸಿದ್ದರು. ಆದರೆ ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ನಿತ್ಯಾನಂದನ ಶಿಷ್ಯ, ತನಿಖಾಧಿಕಾರಿಗಳು ಆಶ್ರಮದ ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ಭಾವನಾತ್ಮಕವಾಗಿ ಬೆದರಿಸಿ ತಮಗೆ ಬೇಕಾದಂತೆ ಹೇಳಿಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾನೆ.

    ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್ 6ರಂದು ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯುಸಿ)ಯ ಸದಸ್ಯರೂ ಸೇರಿದಂತೆ 14 ಜನ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಹಮದಾಬಾದ್‍ನ ಹೊರವಲಯದಲ್ಲಿರುವ ಗುರುಕುಲ ಹಾಗೂ ಆಶ್ರಮದಲ್ಲಿ ನಿತ್ಯಾನಂದನ ಅನುಯಾಯಿಗಿದ್ದ ಗಿರೀಶ್ ತುರ್ಲಪತಿ ಸಲ್ಲಿಸಿದ್ದ ದೂರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅಧಿಕಾರಿಗಳ ವಿರುದ್ಧ ಪೊಕ್ಸೊ ಕಾಯ್ದೆ, ಐಪಿಸಿ ಸೆಕ್ಷನ್ಸ್ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಅದರಂತೆ ಅಹಮದಾಬಾದ್ ಜಿಲ್ಲೆಯ ವಿವೇಕಾನಂದ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಈ ಮೂಲಕ ಇನ್‍ಸ್ಪೆಕ್ಟರ್ ಆರ್.ಬಿ.ರಾಣಾ, ಡಿಎಸ್‍ಪಿ ಕೆ.ಟಿ.ಕರಿಮಾರಿಯಾ, ರಿಯಾಜ್ ಸರ್ವಾಯಿಯಾ, ಎಸ್.ಎಚ್.ಶಾರದಾ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದಿಲೀಪ್ ಮೇರ್, ಸಿಡಬ್ಲ್ಯುಸಿ ಅಧ್ಯಕ್ಷರು ಹಾಗೂ ಸದಸ್ಯರ ಆರೋಪಿ ಸ್ಥಾನದಲ್ಲಿದ್ದಾರೆ.

    ವಿಚಾರಣೆ ನಡೆಸಿದ್ದಕ್ಕಾಗಿ ನಿತ್ಯಾನಂದನ ಶಿಷ್ಯ ತುರ್ಲಪತಿ ಪೊಲೀಸರು ಹಾಗೂ ಸಿಡಬ್ಲ್ಯುಸಿ ಸದಸ್ಯರ ವಿರುದ್ಧವೇ ಕೇಸ್ ಹಾಕಿದ್ದಾರೆ. ವಿವೇಕಾನಂದ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಆರ್.ಬಿ.ರಾಣಾ ಹಾಗೂ ಸಿಡಬ್ಲ್ಯುಸಿ ಸದಸ್ಯರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಶ್ರಮದ ಅಪ್ರಾಪ್ತರಿಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ ತನಿಖಾಧಿಕಾರಿಗಳು ಮಕ್ಕಳಿಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪೊಲೀಸ್ ಅಧಿಕಾರಿಗಳು ಹಾಗೂ ಸಿಡಬ್ಲ್ಯುಸಿ ಸದಸ್ಯರು ಮಕ್ಕಳಿಂದ ಅನುಕೂಲಕರ ಹೇಳಿಕೆ ಪಡೆಯಲು ಮಕ್ಕಳನ್ನು ಭಾವನಾತ್ಮಕವಾಗಿ ಬ್ಲ್ಯಾಕ್‍ಮೇಲ್ ಮಾಡಲು ಪ್ರಯತ್ನಿಸಿದರು. ಅಲ್ಲದೆ ಅವರಿಗೆ ಪೋರ್ನ್ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿದ್ದಾರೆ. ಈ ಮೂಲಕ ಮಕ್ಕಳಿಗೆ ಮಾನಸಿಕ ಹಿಮಸೆ ನಿಡಿದ್ದಾರೆ ಎಂದು ತುರ್ಲಪತಿ ಆರೋಪಿಸಿದ್ದಾರೆ.

    ಕೋರ್ಟ್ ಆದೇಶದ ಮೇರೆಗೆ ಮಾರ್ಚ್ 6ರಂದು ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 14 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಈವರೆಗೆ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಮುಂದಿನ ತನಿಖೆಯನ್ನು ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಕಳೆದ ವರ್ಷ ನವೆಂಬರ್‍ನಲ್ಲಿ ಇದೇ ಪೊಲೀಸ್ ಠಾಣೆಯಲ್ಲಿ ಮೂವರು ಮಕ್ಕಳನ್ನು ಅಪಹರಿಸಿ ಬಂಧಿಸಿರುವ ಕುರಿತು ನಿತ್ಯಾನಂದನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಹುಡುಗನನ್ನು ಅಪಹರಿಸಲಾಗಿದೆ ಎಂದು ದೂರು ದಾಖಲಾಗಿತ್ತು. ಅಲ್ಲದೆ ಇತ್ತೀಚೆಗೆ ಮಕ್ಕಳನ್ನು ಒತ್ತಾಯಪೂರ್ವಕವಾಗಿ ಬಂಧನದಲ್ಲಿಟ್ಟುಕೊಂಡಿದ್ದ ನಿತ್ಯಾನಂದ ದೇಶದಿಂದ ಪರಾರಿಯಾಗಿದ್ದಾನೆ. ಹೀಗಾಗಿ ನಿತ್ಯಾನಂದನ ಕುರಿತು ಮಾಹಿತಿ ಕೋರಿ ಇಂಟರ್‍ಪೋಲ್ ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

  • ನಿತ್ಯನಿಗಾಗಿ ಶೋಧ ಕಾರ್ಯ ಪ್ರಾರಂಭಿಸಿದ ಪೊಲೀಸರು

    ಗಾಂಧಿನಗರ: ಯುವತಿಯರಿಗೆ ಚಿತ್ರ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನಿಗಾಗಿ ಗುಜರಾತ್ ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

    ಬೆಂಗಳೂರಿನ ದಂಪತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಿತ್ಯಾನಂದನಿಗಾಗಿ ಶೋಧ ಕಾರ್ಯ ಪ್ರಾರಂಭಿಸಿದ್ದು, ನಿತ್ಯಾನಂದನ ಆಶ್ರಮದ ಅಹಮದಾಬಾದ್ ಶಾಖೆಯಲ್ಲಿದ್ದ ಹೆಣ್ಣುಮಕ್ಕಳನ್ನು ಹಿಂಸಿಸುತ್ತಿದ್ದ ಎಂದು ದಂಪತಿ ದೂರು ನೀಡಿದ್ದಾರೆ. ಇದನ್ನೂ ಓದಿ: ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ, ಇದು ನನ್ನ ಬದುಕು – ತಂದೆಗೆ ಮಗಳ ಖಡಕ್ ಉತ್ತರ

    ಅಹ್ಮದಾಬಾದ್ ಜಿಲ್ಲೆಯ ಹಿರಾಪುರ ಗ್ರಾಮದಲ್ಲಿರುವ ಶಾಲೆಯೊಂದರ ಆವರಣದಲ್ಲಿ ನಿತ್ಯಾನಂದನ ಆಶ್ರಮವಿದೆ. ಅಲ್ಲದೆ ಬೆಂಗಳೂರಿನ ಬಿಡದಿಯಲ್ಲಿ ಧ್ಯಾನಪೀಠಂ ಎಂಬ ಹೆಸರಿನ ವಿಶಾಲವಾದ ಆಶ್ರಮವನ್ನು ಸಹ ನಡೆಸುತ್ತಿದ್ದಾರೆ. 5 ವರ್ಷಗಳ ಅವಧಿಯಲ್ಲಿ ಶಿಷ್ಯೆ ಮೇಲೆಯೇ ಅತ್ಯಾಚಾರ ಎಸಗಿರುವ ಎಂಬ ಪ್ರಕರಣದಲ್ಲಿ ಆರೋಪಿಯಾಗಿರುವ ನಿತ್ಯಾನಂದ ಒಂದು ವರ್ಷದಿಂದಲೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ.

    ಸೆಪ್ಟೆಂಬರ್ 2018ರಲ್ಲಿ ನಿತ್ಯಾನಂದನ ಪಾಸ್‍ಪೋರ್ಟ್ ಅವಧಿ ಮುಗಿದ ಕಾರಣ ಅವರು ಅಕ್ರಮವಾಗಿ ದೇಶವನ್ನು ತೊರೆದಿರಬಹುದು ಎಂದು ಗುಜರಾತ್ ಪೊಲೀಸರು ಶಂಕಿಸಿದ್ದಾರೆ. ಸ್ವಯಂ ಘೋಷಿತ ದೇವ ಮಾನವನ ವಿರುದ್ಧ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಪಾಸ್‍ಪೋರ್ಟ್ ನವೀಕರಿಸುವ ಕುರಿತ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇದನ್ನೂ ಓದಿ: ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?

    ಪ್ರಕರಣದ ವಿಚಾರಣೆಗಾಗಿ ಡಿಸೆಂಬರ್ 9ರಂದು ನಿತ್ಯಾನಂದ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಕೋರ್ಟ್‍ನ ವಿಚಾರಣೆಯಿಂದ ಈಗಾಗಲೇ ನಿತ್ಯಾನಂದ ಹಲವು ಬಾರಿ ತಪ್ಪಿಸಿಕೊಂಡಿದ್ದು, ಇದೀಗ ಮತ್ತೆ ವಿವಾದ ಎದ್ದಿರುವುದರಿಂದಾಗಿ ಎಂದಿನಂತೆ ಈ ಬಾರಿಯೂ ಸಹ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ.

    ಈತ ತನ್ನ ಅನುಯಾಯಿಗಳಿಂದ ದೇಣಿಗೆ ಸಂಗ್ರಹಿಸಲು ಹಾಗೂ ಗುಜರಾತ್‍ನ ಅಹಮದಾಬಾದ್‍ನಲ್ಲಿ ಆಶ್ರಮ ನಡೆಸಲು ಮಕ್ಕಳನ್ನು ಅಪಹರಿಸಿ ಬಂಧಿಸಿದ್ದಾನೆ ಎಂಬ ಆರೋಪದ ಮೇಲೆ ನವೆಂಬರ್ 19ರಂದು ನಿತ್ಯಾನಂದನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಪಹರಣ, ಹಲ್ಲೆ, ಅಕ್ರಮ ಬಂಧನ ಆರೋಪದ ಮೇಲೆ ಈತನ ಇಬ್ಬರು ಶಿಷ್ಯೆಯರಾದ ಪ್ರಾಣಪ್ರಿಯ, ಪ್ರಿಯತತ್ವ ಅವರನ್ನು ಒಂದೇ ದಿನ ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಿತ್ಯಾನಂದನ ಆಶ್ರಮಕ್ಕೆ ಶಾಲೆಯ ಜಾಗವನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದರ ಕುರಿತು ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಟ್ರಾಫಿಕ್ ನಿಯಮ ಉಲ್ಲಂಘಿಸಿದ ಯುವಕ – ಮದ್ವೆ ಮಾಡಿಸಿದ ಪೋಷಕರು

    ಟ್ರಾಫಿಕ್ ನಿಯಮ ಉಲ್ಲಂಘಿಸಿದ ಯುವಕ – ಮದ್ವೆ ಮಾಡಿಸಿದ ಪೋಷಕರು

    ಅಹಮಾದಾಬಾದ್: ಯುವಕನೊಬ್ಬ ಟ್ರಾಫಿಕ್ ನಿಯಮ ಉಲ್ಲಂಘಿಸಿರುವುದು, ಆತ ಪ್ರೀತಿಸುವ ಯುವತಿ ಜೊತೆಗೆ ಮದುವೆ ಆಗಲು ದಾರಿ ಮಾಡಿ ಕೊಟ್ಟಂತಾಗಿದೆ.

    ವತ್ಸಲ್ ಪಾರೇಕ್ ನಿಯಮ ಉಲ್ಲಂಘಿಸಿ ಮದುವೆಯಾದ ಯುವಕ. ವತ್ಸಲ್ ತನ್ನ ಪ್ರೇಯಸಿ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಆತ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ್ದಾನೆ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಶನಿವಾರ ವತ್ಸಲ್ ಮನೆಗೆ ಚಲನ್ ಜೊತೆ ಬಂದಿದ್ದಾರೆ. ಅಲ್ಲದೆ ಟ್ರಾಫಿಕ್ ಉಲ್ಲಂಘಿಸಿದ ಫೋಟೋ ಕೂಡ ಕಳುಹಿಸಿದ್ದಾರೆ.

    https://twitter.com/VatsalParekh14/status/1122154769764814848?ref_src=twsrc%5Etfw%7Ctwcamp%5Etweetembed%7Ctwterm%5E1122154769764814848&ref_url=https%3A%2F%2Fzeenews.india.com%2Fhindi%2Foff-beat%2Ftraffic-police-e-challan-haled-couple-to-get-married-to-his-girl-friend%2F521784

    ಈ ಫೋಟೋ ನೋಡಿದ ವತ್ಸಲ್ ಪೋಷಕರು ಈ ಯುವತಿ ಯಾರು ಎಂದು ಪ್ರಶ್ನಿಸಿದ್ದಾರೆ. ಆಗ ವತ್ಸಲ್ ತನ್ನ ಪ್ರೀತಿಯ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾನೆ. ಇವಳು ನನ್ನ ಪ್ರೇಯಸಿ. ನಾನು ಈಕೆಯನ್ನು ತುಂಬಾ ಇಷ್ಟಪಡುತ್ತೇನೆ ಹಾಗೂ ನಾನು ಇವಳನ್ನೇ ಮದುವೆ ಆಗುತ್ತೇನೆ ಎಂದು ಹೇಳಿದ್ದಾನೆ. ಮಗನ ಮಾತು ಕೇಳಿದ ಪೋಷಕರು ಯುವತಿ ಮನೆಯವರನ್ನು ಕರೆಸಿ ಮದುವೆ ಮಾತುಕತೆ ನಡೆಸಿದ್ದಾರೆ.

    ಇಬ್ಬರ ಕುಟುಂಬದವರು ಇವರ ಪ್ರೀತಿಯನ್ನು ಒಪ್ಪಿ ಮದುವೆ ಮಾಡಿಸಲು ನಿರ್ಧರಿಸಿದ್ದರು. ಈಗ ಇಬ್ಬರ ಮದುವೆಯಾಗಿದೆ. ಮದುವೆಯಾದ ನಂತರ ವತ್ಸಲ್ ಅಹಮಾದಾಬಾದ್ ಟ್ರಾಫಿಕ್ ಪೊಲೀಸರಿಗೆ ಟ್ವಿಟ್ಟರಿನಲ್ಲಿ ಅವರಿಗೆ ಟ್ಯಾಗ್ ಮಾಡಿ ಧನ್ಯವಾದ ತಿಳಿಸಿದ್ದಾನೆ.

    ವತ್ಸಲ್ ತನ್ನ ಟ್ವಿಟ್ಟರಿನಲ್ಲಿ, “ನನಗೆ ಮೇಲ್ ಮೂಲಕ ಮೆಮೋ ಸಿಕ್ತು. ಇದರಿಂದ ಒಂದು ಹಾಸ್ಯಾಸ್ಪದ ವಿಷಯ ನಡೆದಿದೆ. ಏನೆಂದರೆ ಮೆಮೋ ಜೊತೆಯಲ್ಲಿ ನನ್ನ ಹಾಗೂ ನನ್ನ ಪ್ರೇಯಸಿಯ ಫೋಟೋ ಇತ್ತು. ನನ್ನ ಪೋಷಕರಿಗೆ ಆಕೆಯ ಬಗ್ಗೆ ತಿಳಿದಿರಲಿಲ್ಲ. ಈ ಮೆಮೋ ಮೂಲಕ ಅವರಿಗೆ ಗೊತ್ತಾಗಿದೆ” ಎಂದು ಟ್ವೀಟ್ ಮಾಡಿದ್ದಾನೆ.

  • ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ತಾತನ ಮೃತದೇಹ ಸಾಬರಮತಿ ನದಿಯಲ್ಲಿ ಪತ್ತೆ

    ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ತಾತನ ಮೃತದೇಹ ಸಾಬರಮತಿ ನದಿಯಲ್ಲಿ ಪತ್ತೆ

    ಅಹ್ಮದಾಬಾದ್: ಕಳೆದ 48 ಗಂಟೆಗಳಿಂದ ನಾಪತ್ತೆಯಾಗಿದ್ದ ಟೀಂ ಇಂಡಿಯಾ ಆಟಗಾರ ಜಸ್ಪ್ರೀತ್ ಬುಮ್ರಾ ಅವರ ತಾತನ ಮೃತದೇಹ ಗುಜರಾತ್ ನ ಸಾಬರಮತಿ ನದಿಯಲ್ಲಿ ಪತ್ತೆಯಾಗಿದೆ.

    ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಬುಮ್ರಾ ಅವರ ತಾತ ಸಂತೋಕ್ ಸಿಂಗ್ ಅವರ ಮೃತದೇಹ ಅನುಮಾನಸ್ಪದಾಗಿ ದೊರೆತ್ತಿದ್ದು. ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮೇಲೆತ್ತಿದ್ದಾರೆ.

    84 ವರ್ಷದ ಸಂತೋಕ್ ಸಿಂಗ್ ಉತ್ತರಾಖಂಡದ ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಡಿಸೆಂಬರ್ 6 ರಂದು ಬುಮ್ರಾರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಅಹ್ಮದಾಬಾದ್ ಗೆ ತೆರಳಿದ್ದರು. ಆದರೆ ಬುಮ್ರಾರನ್ನು ಭೇಟಿಯಾಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸಂತೋಕ್ ಸಿಂಗ್ ನಾಪತ್ತೆಯಾಗಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ.

    ಸಂತೋಕ್ ಸಿಂಗ್ ಕಾಣೆಯಾದ ಬಗ್ಗೆ ಅವರ ಪುತ್ರಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದರು. ಬುಮ್ರಾರನ್ನು ಭೇಟಿ ಮಾಡಲು ಅವರ ತಾಯಿ ದಲ್ಜಿತ್ ಕೌರ್ ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ. ಬುಮ್ರಾ ಅವರ ತಂದೆ ಮರಣದ ನಂತರ 17 ವರ್ಷಗಳ ಕಾಲ ಇವರ ಕುಟುಂಬವನ್ನು ಒಮ್ಮೆಯು ಭೇಟಿ ಮಾಡಿ ವಿಚಾರಿಸದ ಕಾರಣವಾಗಿ ಅವರು ಭೇಟಿಯಾಗಲು ನಿರಾಕರಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಘಟನೆ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಬುಮ್ರಾ ಅವರ ತಾತ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತಪಡಿಸಿದ್ದು, ಆದರೆ ಅವರ ಮೃತ ದೇಹದ ಬಳಿ ಯಾವುದೇ ಪತ್ರ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ಮೃತರ ಬಳಿ ಚುನಾವಣೆ ಗುರುತಿನ ಚೀಟಿ, ಮೊಬೈಲ್ ಫೋನ್ ವಸ್ತುಗಳು ಪತ್ತೆಯಾಗಿದ್ದು, ವಿವರಗಳನ್ನು ಪಡೆದು ಮೃತರ ಪುತ್ರಿಗೆ ಮಾಹಿತಿ ನೀಡಲಾಗಿದೆ.

    ಕೊನೆಯ ಬಾರಿಗೆ ತಮ್ಮ ಪುತ್ರಿಗೆ ಫೋನ್ ಮಾಡಿದ್ದ ಅವರು ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ಹೊರಡುವುದಾಗಿ ಹೇಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.