Tag: ಅಹ್ಮದ್ ಪಟೇಲ್

  • ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಗುರುಗ್ರಾಮ: ಗುಜರಾತ್‍ನ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ವಿರುದ್ಧ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಸೂಚನೆ ಮೇರೆಗೆ ತೀಸ್ತಾ ಸೆಟಲ್ವಾಡ್ ಸಂಚು ಮಾಡಿದ್ದರು ಎಂದು ತನಿಖಾ ತಂಡ ತಿಳಿಸಿದೆ.

    ಗುಜರಾತ್ ಪೊಲೀಸರು ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ತೀಸ್ತಾ ಸೆಟಲ್ವಾಡ್ ಅವರು ನರೇಂದ್ರ ಮೋದಿ ಅವರ ವಿರುದ್ಧ ಅಹ್ಮದ್ ಪಟೇಲ್ ಅವರ ಇಚ್ಛೆಯ ಮೇರೆಗೆ ದೊಡ್ಡ ಪಿತೂರಿ ನಡೆಸಿದ್ದರು ಎಂಬ ವಿಷಯ ಈ ಮೂಲಕ ಬಯಲಿಗೆ ಬಂದಿದೆ. ಇದನ್ನೂ ಓದಿ: ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್ 

    2002 ರ ಗಲಭೆಯ ನಂತರ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಅಹ್ಮದ್ ಪಟೇಲ್ ಅವರ ಆಜ್ಞೆಯ ಮೇರೆಗೆ ಸೆಟಲ್ವಾಡ್ ಒಂದು ಯೋಜನೆಯನ್ನು ರೂಪಿಸಿದ್ದರು ಎಂದು ಸೆಷನ್ಸ್ ನ್ಯಾಯಾಲಯಕ್ಕೆ ಪೊಲೀಸರ ವಿಶೇಷ ತನಿಖಾ ತಂಡ ಸಲ್ಲಿಸಿದ ಅಫಿಡವಿಟ್ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ.ಡಿ.ಠಕ್ಕರ್ ಅವರು ಎಸ್‍ಐಟಿಯ ಉತ್ತರವನ್ನು ದಾಖಲಿಸಿಕೊಂಡು ಸೋಮವಾರ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದರು.

    ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದೆ. ಈ ದೊಡ್ಡ ಪಿತೂರಿಯನ್ನು ಮಾಡುವಾಗ ಅರ್ಜಿದಾರರ(ಸೆಟಲ್ವಾಡ್) ರಾಜಕೀಯ ಉದ್ದೇಶವೆಂದರೆ ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಅಥವಾ ಅಸ್ಥಿರಗೊಳಿಸುವುದು ಎಂದು ಎಸ್‍ಐಟಿ ಅಫಿಡವಿಟ್‌ನಲ್ಲಿ ಹೇಳಿದೆ.

    ಈ ಕುರಿತು ತನಿಖಾ ತಂಡ ಮಾಹಿತಿ ಕೊಟ್ಟಿದ್ದು, ದಿ.ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಈ ಸಂಚು ನಡೆಸಲಾಗಿದೆ ಎಂದು ಸಾಕ್ಷಿಗಳನ್ನು ಉಲ್ಲೇಖಿಸಿ ಆರೋಪಿಸಾಗಿದೆ. 2002 ರಲ್ಲಿ ಗೋಧ್ರಾ ಗಲಭೆ ನಂತರ ಪಟೇಲ್ ಅವರ ಆದೇಶದ ಮೇರೆಗೆ ಸೆಟಲ್ವಾಡ್ 30 ಲಕ್ಷ ರೂ. ಕೊಡಲಾಗಿತ್ತು ಎಂಬುದು ತಿಳಿದುಬಂದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು 2ನೇ ಮದುವೆಯಾಗಲು ಬೇಕು ಇಲಾಖೆ ಅನುಮತಿ – ಇಲ್ಲವಾದ್ರೆ ಸರ್ಕಾರಿ ಸೌಲಭ್ಯವಿಲ್ಲ

    2002 ರಲ್ಲಿ ಗಲಭೆ ಪ್ರಕರಣಗಳಲ್ಲಿ ಬಿಜೆಪಿ ಸರ್ಕಾರದ ಹಿರಿಯ ನಾಯಕರ ಹೆಸರನ್ನು ಸಿಲುಕಿಸಲು ದೆಹಲಿಯ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಸೆಟಲ್ವಾಡ್ ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅಹ್ಮದ್ ಪಟೇಲ್ ‘ಕೈ’ ಹಿಡಿದಿದ್ದ ಕರ್ನಾಟಕ – ಗೆಲುವಿನಲ್ಲಿತ್ತು ಡಿಕೆಶಿ ಪಾತ್ರ

    ಅಹ್ಮದ್ ಪಟೇಲ್ ‘ಕೈ’ ಹಿಡಿದಿದ್ದ ಕರ್ನಾಟಕ – ಗೆಲುವಿನಲ್ಲಿತ್ತು ಡಿಕೆಶಿ ಪಾತ್ರ

    ನವದೆಹಲಿ: ಅದು 2017ರ ಅಗಸ್ಟ್ ತಿಂಗಳು, ಗುಜರಾತ್‍ನಲ್ಲಿ ನಡೆಯುತ್ತಿದ್ದ ರಾಜ್ಯಸಭೆ ಚುನಾವಣೆಯೊಂದು ಕರ್ನಾಟಕದಲ್ಲಿ ಹೆಚ್ಚು ಸದ್ದು ಮಾಡುತ್ತಿತ್ತು. ಅದಕ್ಕೆ ಕಾರಣ ಆಪರೇಷನ್ ಕಮಲದ ಭೀತಿ.

    2017ರಲ್ಲಿ ರಾಜ್ಯಸಭೆಯ ಮೂರು ಸ್ಥಾನಗಳಿಗೆ ನಡೆದ ಚುನಾವಣೆ ಇಡೀ ದೇಶದಲ್ಲಿ ದೊಡ್ಡ ಹೈಪ್ ಕ್ರಿಯೇಟ್ ಮಾಡಿತ್ತು. ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನ ಖಚಿತ ಅಂತಾ ಲೆಕ್ಕಚಾರವೂ ನಡೆದಿತ್ತು. ಆದರೆ ಹೀಗೆ ಲೆಕ್ಕಚಾರ ಹಾಕಿಕೊಂಡವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಬಿಗ್ ಶಾಕ್ ನೀಡಿದ್ದರು.

    ಈ ಚುನಾವಣೆಗೆ ಕಾಂಗ್ರೆಸ್ ನಿಂದ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್, ಬಿಜೆಪಿಯಿಂದ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಸ್ಪರ್ಧಿಸಿದ್ದರು. ಅಹ್ಮದ್ ಪಟೇಲ್ ಸ್ಪರ್ಧೆ ಬಳಿಕ ಅವರನ್ನು ಸೋಲಿಸುವ ಜಿದ್ದಿಗೆ ಬಿದ್ದಿದ್ದ ಅಮಿತ್ ಶಾ ಬಿಜೆಪಿಯಿಂದ ಮೂರನೇ ಅಭ್ಯರ್ಥಿಯಾಗಿ ಕಾಂಗ್ರೆಸ್ ಬಂಡಾಯ ಶಾಸಕ ಬಲ್ವಂತ್ ಸಿಂಗ್ ರಜಪೂತ್ ಅವರನ್ನ ಕಣಕ್ಕಿಳಿಸಿದ್ದರು.

    ಆಗಲೇ ಗುಜರಾತ್ ನಲ್ಲಿ ಆಪರೇಷನ್ ಕಮಲದ ಭೀತಿ ಸೃಷ್ಟಿಯಾಗಿದ್ದು. ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಶಂಕರ್ ಸಿನ್ಹಾ ವಘೇಲಾ ತಂಡದ ಏಳು ಮಂದಿ ಶಾಸಕರ ರಾಜೀನಾಮೆಯಿಂದ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಸೃಷ್ಟಿಯಾಗಿ ರಾಜ್ಯಸಭೆ ಚುನಾವಣೆ ಅಹ್ಮದ್ ಪಟೇಲ್ ವರ್ಸಸ್ ಅಮಿತ್ ಶಾ ಎನ್ನುವಂತೆ ಬಿಂಬಿತವಾಗಿತ್ತು.

    ಬಿಜೆಪಿ ವಿಧಾನಸಭೆಯಲ್ಲಿ 121 ಶಾಸಕರನ್ನು ಹೊಂದಿದ್ದ ಹಿನ್ನೆಲೆ ಅಮಿತ್ ಶಾ, ಸ್ಮೃತಿ ಇರಾನಿ ಗೆಲುವು ಖಚಿತವಾಗಿತ್ತು. ಮತ್ತೊರ್ವ ಅಭ್ಯರ್ಥಿ ಬಲ್ವಂತ್ ಸಿಂಗ್ ರಜಪೂತ್ ಗೆ 31 ಮತಗಳು ಮಾತ್ರ ಇದ್ದವು. ಮೂರನೇ ಅಭ್ಯರ್ಥಿ ಗೆಲವುಗೆ ಒಟ್ಟು 45 ಮತಗಳ ಅವಶ್ಯಕತೆ ಇತ್ತು.

    ಅಹ್ಮದ್ ಪಟೇಲ್ ಪರ ಕಾಂಗ್ರೆಸ್ ಶಾಸಕರು 44 ಮಂದಿ ಇದ್ದರು ಎನ್‍ಸಿಪಿ ಆಗ ಬೆಂಬಲ ನೀಡಿತ್ತು. ಆದರೆ ನಿರ್ಣಾಯಕ ಚುನಾವಣೆಯಲ್ಲಿ ಶಾಸಕರನ್ನು ಆಪರೇಷನ್ ಕಮಲದ ಆಮಿಷ್ಯಕ್ಕೆ ಒಳಪಡಿಸುವ ಭೀತಿ ಹಿನ್ನೆಲೆ ಈ ಎಲ್ಲ ಶಾಸಕರನ್ನು ಕರ್ನಾಟಕಕ್ಕೆ ಶಿಫ್ಟ್ ಮಾಡಲಾಗಿತ್ತು.

    ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ತಮ್ಮ ಗುರುವಿನ ಗೆಲುವಿಗಾಗಿ ಅಮಿತ್ ಶಾ ಎದುರು ಹಾಕಿಕೊಂಡು ಕಾಂಗ್ರೆಸ್ ನ 44 ಶಾಸಕರನ್ನ ಖಾಸಗಿ ರೆಸಾರ್ಟ್ ನಲ್ಲಿ ಇಟ್ಟು ಭದ್ರತೆ ನೀಡಿದ್ದರು. ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕರು ತಂಗಿದ್ದರು. ಸ್ವತಃ ಅಮಿತ್ ಶಾ ಕರೆ ಮಾಡಿ ಡಿ.ಕೆ ಶಿವಕುಮಾರ್ ಗೆ ಕೆಲ ಶಾಸಕರನ್ನ ಕಳುಹಿಸುವಂತೆ ಕೇಳಿದ್ದರಂತೆ. ಆದರೆ ಪಟ್ಟು ಬಿಡದ ಡಿಕೆಶಿ ಶಾಸಕರನ್ನು ಮತ್ತೆ ಭದ್ರತೆಯಲ್ಲಿ ಗುಜರಾತ್ ಗೆ ಕಳುಹಿಸಿ ಅಹ್ಮದ್ ಪಟೇಲ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು.

    ಹೀಗಾಗಿ ಅಹ್ಮದ್ ಪಟೇಲ್ ಕೊನೆ ಚುನಾವಣೆ ಗೆಲುವಿನಲ್ಲಿ ಕರ್ನಾಟಕ ಅದರಲ್ಲೂ ಡಿ.ಕೆ ಶಿವಕುಮಾರ್ ಮಹತ್ವ ಪಡೆದುಕೊಂಡಿದ್ದರು. ರಾಜ್ಯಸಭೆ ಚುನಾವಣೆ ಬಳಿಕ ಪಬ್ಲಿಕ್ ಟಿವಿಗೆ ಎಕ್ಸಕ್ಲೂಸಿವ್ ಆಗಿ ಅಹ್ಮದ್ ಪಟೇಲ್ ಮಾತನಾಡಿದ್ದರು. ಈ ಚುನಾವಣೆಯಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ. ಈ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮುಖವಾಡ ಕಳಚಿದೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಲಾಭವಾಗಲಿದೆ. ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುವ ಪ್ರಯತ್ನ ಮಾಡಿತ್ತು ಎಂದಿದ್ದರು.

  • ಅಹ್ಮದ್ ಪಟೇಲ್ ವಿಧಿವಶ – ಮೋದಿ, ರಾಹುಲ್ ಗಾಂಧಿ ಸಂತಾಪ

    ಅಹ್ಮದ್ ಪಟೇಲ್ ವಿಧಿವಶ – ಮೋದಿ, ರಾಹುಲ್ ಗಾಂಧಿ ಸಂತಾಪ

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದು, ಪ್ರಧಾನಿ ಮೋದಿ, ಸಂಸದ ರಾಹುಲ್ ಗಾಂಧಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಹ್ಮದ್ ಪಟೇಲ್ ಇಂದು ಬೆಳಗಿನ ಜಾವ 3.30ಕ್ಕೆ ನಿಧನ ಹೊಂದಿದ್ದಾರೆ. ಸೋನಿಯಾ ಗಾಂಧಿ ಆಪ್ತರಲ್ಲಿ ಅಹ್ಮದ್ ಪಟೇಲ್ ಒಬ್ಬರಾಗಿದ್ದರು.

    ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದೆ. ತಮ್ಮ ಬಹುತೇಕ ಜೀವನವನ್ನ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅಹ್ಮದ್ ಪಟೇಲ್ ಅವರ ಪಾತ್ರ ಪ್ರಮುಖವಾದದ್ದು. ತಮ್ಮ ಅಗಾಧ ನೆನಪಿನ ಶಕ್ತಿಗೆ ಪಟೇಲರು ಹೆಸರುವಾಸಿಯಾಗಿದ್ದರು. ಪಟೇಲ್ ಅವರ ಪುತ್ರ ಫೈಸಲ್ ಜೊತೆ ಮಾತನಾಡಿದ್ದು, ಅಹ್ಮದ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

    ಇಂದು ಅತ್ಯಂತ ದುಃಖದಾಯ ದಿನ. ಅಹ್ಮದ್ ಪಟೇಲ್ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿದ್ದರು. ಎಂತಹ ಕಠಿಣ ಸಂದರ್ಭಗಳಲ್ಲಿಯೂ ಕಾಂಗ್ರೆಸ್ ಪರವಾಗಿ ನಿಂತ ನಾಯಕ. ಅಹ್ಮದ್ ಪಟೇಲ್ ನಮ್ಮ ದೊಡ್ಡ ಶಕ್ತಿಯಾಗಿದ್ದರು. ನಾವು ಪಟೇಲರು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ರಾಹುಲ್ ಗಾಂಧಿ ಸಂತಾಪ ಸೂಚಿಸಿ ಪಟೇಲರ ಕುಟುಂಬದ ಜೊತೆ ನಾವು ಇರುತ್ತೇವೆ ಎಂದಿದ್ದಾರೆ.

    ಇಂದು ಬೆಳಗ್ಗೆ 3.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ತಂದೆ ನಿಧನರಾಗಿದ್ದಾರೆ ಎಂದು ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದರು. ಕಳೆದ ಒಂದು ತಿಂಗಳಿನಿಂದಲೂ ತಂದೆ ಕೊರೊನಾ ಸೋಂಕಿನ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ವೇಳೆ ಅವರ ದೇಹದ ಅಂಗಗಳು ನಿಷ್ಕ್ರಿಯಗೊಂಡಿದ್ದವು. ಬಹು ಅಂಗಾಂಗ ವೈಫಲ್ಯದಿಂದಾಗಿ ತಂದೆಯ ನಿಧನರಾಗಿದ್ದಾರೆ ಎಂದು ಫೈಸಲ್ ತಿಳಿಸಿದ್ದರು.

  • ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

    ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

    ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ.

    ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

    ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ 1ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಖಚಿತಪಡಿಸಿದ್ದರು. ಅಲ್ಲದೆ ಹೋಮ್ ಐಸೋಲೇಟ್ ಆಗುತ್ತಿರುವುದಾಗಿ ಮಾಹಿತಿ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಫರಿದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು.

    71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಖಜಾಂಚಿಯಾಗಿದ್ದ ಅವರು , ಕಾಂಗ್ರೆಸ್‍ನ ಹಿರಿಯ ನಾಯಕರು ಮತ್ತು ಸೋನಿಯಾ ಗಾಂಧಿ ಕುಟುಂಬದ ಆಪ್ತರು. ಆಸ್ಪತ್ರೆಗೆ ದಾಖಲಾದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದರು.

    ಅಹ್ಮದ್ ಪಟೇಲ್ ಮಗ ಫೈಸಲ್ ಅವರು ತಂದೆಯ ಆರೋಗ್ಯ ಸ್ಥಿತಿಗತಿ ಕುರಿತು ಭಾನುವಾರ ಹೇಳಿಕೆ ನೀಡಿದ್ದು, ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಆದರೆ ವೈದ್ಯಕೀಯ ನಿಗಾದಲ್ಲಿ ಮುಂದುವರಿಯಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಅವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಫೈಸಲ್ ಮನವಿ ಮಾಡಿಕೊಂಡಿದ್ದರು.

  • ಮಣಿಪುರ ಸಿಎಂ ಬಿರೆನ್ ಸಿಂಗ್, ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್‍ಗೆ ಕೊರೊನಾ ಸೋಂಕು ದೃಢ

    ಮಣಿಪುರ ಸಿಎಂ ಬಿರೆನ್ ಸಿಂಗ್, ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್‍ಗೆ ಕೊರೊನಾ ಸೋಂಕು ದೃಢ

    – ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಪಟೇಲ್

    ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್.ಬಿರೆನ್ ಸಿಂಗ್(59) ಹಾಗೂ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಬಿರೆನ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಬರೆದಿರುವ ಅವರು, ನನ್ನ ಕೊರೊನಾ ವರದಿಯು ಪಾಸಿಟಿವ್ ಬಂದಿದ್ದು, ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸೆಲ್ಫ್ ಐಸೋಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಬಿಜೆಪಿ ನಾಯಕ ಬಿರೆನ್ ಸಿಂಗ್ ಅವರು ಸದ್ಯ ಹೋಮ್ ಐಸೋಲೇಶನ್‍ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಹ್ಮದ್ ಪಟೇಲ್ ಅವರು ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ವಾರಗಳ ಹಿಂದಷ್ಟೇ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

    ಅಹ್ಮದ್ ಪಟೇಲ್ ಮಗ ಫೈಸಲ್ ಅವರು ತಂದೆಯ ಆರೋಗ್ಯ ಸ್ಥಿತಿಗತಿ ಕುರಿತು ಹೇಳಿಕೆ ನೀಡಿದ್ದು, ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಆದರೆ ವೈದ್ಯಕೀಯ ನಿಗಾದಲ್ಲಿ ಮುಂದುವರಿಯಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಅವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಫೈಸಲ್ ಅವರು ಸ್ಪಷ್ಟಪಡಿಸಿದ್ದಾರೆ.

  • ಡಿಕೆಶಿ ಭೇಟಿ ಮಾಡಿದ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್

    ಡಿಕೆಶಿ ಭೇಟಿ ಮಾಡಿದ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್

    ನವದೆಹಲಿ: ದೆಹಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಭೇಟಿ ಮಾಡಿದ್ದಾರೆ.

    ತಿಹಾರ್ ಜೈಲಿಗೆ ಭೇಟಿ ನೀಡಿದ್ದ ಅಹ್ಮದ್ ಪಟೇಲ್ ಅವರು ಡಿಕೆ ಶಿವಕುಮಾರ್ ಅವರಿಗೆ ಧೈರ್ಯ ತುಂಬಿದ್ದು, ಮುಂದಿನ ಕಾನೂನು ಹೋರಾಟದಲ್ಲಿ ಪಕ್ಷ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಆಶ್ವಾಸನೆ ನೀಡಿರುವುದಾಗಿ ಮಾಹಿತಿ ಲಭಿಸಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ, ರಾಜ್ಯಸಭಾ ಸಂಸದ ಆನಂದ್ ಶರ್ಮಾ, ಸಹೋದರ ಡಿಕೆ ಸುರೇಶ್ ಕೂಡ ಹಾಜರಿದ್ದರು.

    ಗುಜರಾತ್‍ನಲ್ಲಿ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವಿಗೆ ಡಿಕೆ ಶಿವಕುಮಾರ್ ಕಾರಣರಾಗಿದ್ದರು. ಆ ವೇಳೆ ಆಪರೇಷನ್ ಕಮಲ ಭೀತಿಯಲ್ಲಿದ್ದ ಕಾಂಗ್ರೆಸ್ ತನ್ನ ಶಾಸಕರನ್ನ ಗುಜರಾತ್‍ನಿಂದ ಬೆಂಗಳೂರಿನ ಈಗಲ್‍ಟನ್ ರೆಸಾರ್ಟಿಗೆ ಶಿಫ್ಟ್ ಮಾಡಿತ್ತು. ಈ ವೇಳೆ ಶಾಸಕರಿಗೆ ರಕ್ಷಣೆ ನೀಡಿ ಪಕ್ಷದ ಬೆನ್ನಿಗೆ ಡಿಕೆಶಿ ನಿಂತಿದ್ದರು. ಈ ಸಂದರ್ಭದಲ್ಲಿ ಡಿಕೆಶಿ ನಿವಾಸ ಸೇರಿದಂತೆ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿತ್ತು. ಇದೇ ಪ್ರಕರಣದಲ್ಲಿ ಸದ್ಯ ಡಿಕೆಶಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡಿಕೆಶಿ ತಂತ್ರಗಾರಿಕೆಯಿಂದ ಅಹ್ಮದ್ ಪಟೇಲ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಇಳಿಸಿದ್ದ ಅಭ್ಯರ್ಥಿಯನ್ನು ಸೋಲಿಸಿದ್ದರು. ಈ ಹಿನ್ನೆಲೆಯಲ್ಲಿಯೇ ಅವರ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದರು.

    ಇತ್ತ ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಭೇಟಿ ವೇಳೆ ಒಬ್ಬರ ಭೇಟಿಗಷ್ಟೇ ಅವಕಾಶವಿದ್ದ ಕಾರಣ ತಿಹಾರ್ ಜೈಲಿನಲ್ಲೇ ಇರುವ ಕಾಂಗ್ರೆಸ್ ನಾಯಕ ಚಿದಂಬರಂ ಅವರನ್ನು ಭೇಟಿ ಮಾಡಿ ವಾಪಸ್ಸಾಗಿದ್ದರು.

  • ಹೈಕಮಾಂಡ್ ಕರೆದರೂ I am Sorry, ನಾನು ಗುಜರಾತ್‍ ಗೆ ಬರಲ್ಲ ಅಂದಿದ್ದೇಕೆ ಡಿಕೆಶಿ?

    ಹೈಕಮಾಂಡ್ ಕರೆದರೂ I am Sorry, ನಾನು ಗುಜರಾತ್‍ ಗೆ ಬರಲ್ಲ ಅಂದಿದ್ದೇಕೆ ಡಿಕೆಶಿ?

    ಬೆಂಗಳೂರು: ಗುಜರಾತ್ ಚುನಾವಣಾ ಪ್ರಚಾರಕ್ಕೆ ಕರೆದ ಹೈಕಮಾಂಡ್ ನಾಯಕರಿಗೆ ಸಚಿವ ಡಿ.ಕೆ.ಶಿವಕುಮಾರ್ ಶಾಕ್ ನೀಡಿದ್ದಾರೆ.

    ಸೋನಿಯಾಗಾಂಧಿ ಅವರ ರಾಜಕೀಯ ಸಲಹೆಗಾರರಾದ ಅಹ್ಮದ್ ಪಟೇಲ್ ಅವರನ್ನ ರಾಜ್ಯಸಭೆಯಲ್ಲಿ ಗೆಲ್ಲಿಸಿದ ಕೀರ್ತಿ ರಾಜ್ಯದ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಅವರದ್ದು. ಗುಜರಾತ್ ಶಾಸಕರನ್ನು ರಾಜ್ಯಕ್ಕೆ ಕರೆತಂದಿದ್ದ ಸಚಿವ ಡಿ.ಕೆ.ಶಿವಕುಮಾರ್, ಐಟಿ ದಾಳಿಯನ್ನ ಎದುರಿಸಬೇಕಾಯ್ತು. ಎಲ್ಲವನ್ನು ಸಮರ್ಥವಾಗಿ ಎದುರಿಸಿ ಶಾಸಕರನ್ನು ಗುಜರಾತ್ ತಲುಪಿಸಿ ಅಹ್ಮದ್ ಪಟೇಲ್‍ರನ್ನು ರಾಜ್ಯಸಭೆಯ ಮೆಟ್ಟಿಲು ಹತ್ತಿಸಿದ್ರು. ಇದೇ ಜೋಶ್‍ನಲ್ಲಿ ಗುಜರಾತ್ ಚುನಾವಣಾ ಪ್ರಚಾರಕ್ಕೆ ಡಿಕೆಶಿಯನ್ನು ಕರೆದ ಹೈಕಮಾಂಡ್‍ಗೆ ಸಚಿವ ಡಿಕೆಶಿ ಶಾಕ್ ನೀಡಿದ್ದಾರೆ.

    ಐ ಆ್ಯಮ್ ಸಾರಿ, ಈಗ ನಾನು ಪ್ರಚಾರಕ್ಕೆ ಬರೋಕೆ ಆಗಲ್ಲ ಎಂದು ನೇರವಾಗಿ ಹೇಳಿದ್ದಾರೆ ಎನ್ನಲಾಗಿದೆ. ಶಾಸಕರನ್ನು ಕರೆತಂದ ನಂತರ ಐಟಿ ದಾಳಿ ನಡೆದು ಇನ್ನೂ ಸಂಕಷ್ಟದಲ್ಲೆ ಇದ್ದಾರೆ ಸಚಿವ ಡಿಕೆಶಿ. ಮೋದಿ-ಶಾ ಜೋಡಿಯನ್ನು ಎದುರು ಹಾಕಿಕೊಂಡು ಗುಜರಾತ್ ಗೆ ಹೋಗಿ ತೊಡೆ ತಟ್ಟಿದ್ರೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಬಹುದು ಎಂಬ ಆತಂಕ ಡಿಕೆ ಶಿವಕುಮಾರ್ ಅವರದ್ದು ಎಂದು ಹೇಳಲಾಗ್ತಿದೆ.

    ಗುಜರಾತ್ ಶಾಸಕರಿಂದ ಪ್ರಚಾರಕ್ಕೆ ಆಹ್ವಾನ ಬಂದರೂ ಗುಜರಾತ್ ಗೆ ಹೋಗಲು ಡಿಕೆಶಿ ಹಿಂದೇಟು ಹಾಕ್ತಿದ್ದಾರೆ. ದೇಶದ ಬೇರೆ ಬೇರೆ ರಾಜ್ಯದ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ತಮ್ಮದೇ ನೆರವು ಪಡೆದ ಗುಜರಾತ್ ಶಾಸಕರು ಕರೆದರೂ ಪ್ರಚಾರಕ್ಕೆ ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ.

    ಐಟಿ ದಾಳಿ ನಡೆದ ನಂತರವು ಏನು ಆಗಿಲ್ಲ ಎಂಬಂತೆ ನಡೆದುಕೊಂಡಿದ್ದ ಡಿಕೆಶಿಗೆ ಒಳಗೊಳಗೆ ಮೋದಿ-ಶಾ ಭಯ ಕಾಡುತ್ತಿದೆ. ರಿಸ್ಕ್ ಯಾಕೆ ಅಂತ ಗುಜರಾತ್ ಕಡೆಗೆ ತಲೆ ಹಾಕದೆ ಸೈಲೆಂಟಾಗಿದ್ದಾರೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ.

  • ತವರಲ್ಲೇ ಮೋದಿ-ಶಾ ಜೋಡಿಗೆ ಮುಖಭಂಗ-ಸೋನಿಯಾ ಬಂಟನಿಗೆ ರಾಜಕೀಯ ಜೀವದಾನ

    ತವರಲ್ಲೇ ಮೋದಿ-ಶಾ ಜೋಡಿಗೆ ಮುಖಭಂಗ-ಸೋನಿಯಾ ಬಂಟನಿಗೆ ರಾಜಕೀಯ ಜೀವದಾನ

    ಅಹಮದಾಬಾದ್: ಜಿದ್ದಾಜಿದ್ದಿ, ಪ್ರತಿಷ್ಠೆ, ತಂತ್ರ-ಪ್ರತಿತಂತ್ರಗಳ ನಡುವೆ ಸಾಕಷ್ಟು ನಾಟಕ, ತಿರುವುಗಳಿಗೆ ಸಾಕ್ಷಿಯಾದ ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಮುಖಭಂಗ ಅನುಭವಿಸಿದ್ದಾರೆ.

    ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ರಾಜಕೀಯ ಜೀವನಕ್ಕೆ ಕೊನೆಯಾಡುವ ತಂತ್ರ ಫಲಿಸಲೇ ಇಲ್ಲ. ಬರೋಬ್ಬರಿ ಸುಮಾರು ಏಳೂವರೆ ಗಂಟೆ ವಿಳಂಬವಾಗಿ ಪ್ರಕಟವಾದ ಫಲಿತಾಂಶದಲ್ಲಿ ಗಾಂಧಿ ಕುಟುಂಬದ ಪರಮಾಪ್ತ ರಾಜಕೀಯ ಜೀವದಾನ ಪಡೆದಿದ್ದಾರೆ. ಈ ಮೂಲಕ 44 ಶಾಸಕರ ಬೆಂಬಲದೊಂದಿಗೆ ಸತತ ಐದನೇ ಬಾರಿಗೆ ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ಮತ್ತೆ ಕಾಲಿಟ್ಟರು.

    46 ಶಾಸಕರ ಮತ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾದರು. ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ತಮ್ಮ ಸ್ಥಾನವನ್ನು ಮತ್ತೆ ಉಳಿಸಿಕೊಂಡರು. ಅಹ್ಮದ್ ಪಟೇಲ್ ವಿರುದ್ಧ ಕಣಕ್ಕಿಳಿದು ಕಾಂಗ್ರೆಸ್ ದಂಡನ್ನೇ ಕಕ್ಕಾಬಿಕ್ಕಿಯಾಗಿಸಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ಬಿಜೆಪಿ ಮೂರನೇ ಅಭ್ಯರ್ಥಿ ಬಲವಂತ್ ಸಿಂಗ್ ರಜಪೂತ್‍ಗೆ 38 ಶಾಸಕರ ಬೆಂಬಲವಷ್ಟೇ ಸಿಕ್ಕಿದೆ. ಇತ್ತ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿರುವ ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಜೊತೆಗೆ ಶಾ ರಾಷ್ಟ್ರೀಯ ಅಧ್ಯಕ್ಷರಾದ ಮೂರು ವರ್ಷಗಳಲ್ಲಿ ಪಕ್ಷ ತನ್ನ ನೆಲೆಯನ್ನು ವಿಸ್ತರಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

    ರಾಜಕೀಯ ಜೀವದಾನ: ಅಹ್ಮದ್ ಪಟೇಲ್‍ಗೆ ಇದು ರಾಜಕೀಯ ಜೀವದಾನ ಎಂದರೆ ತಪ್ಪಲ್ಲ. ಮತದಾನಕ್ಕೂ ಮೊದಲೇ 6 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ರಿಂದ ಮತ್ತೆ ರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಕಾಣಿಸಿಕೊಳ್ತಿನೋ ಅನ್ನೋ ಆತಂಕ ಎದುರಾಗಿತ್ತು. ಆದ್ರೆ ಕೊನೆಯ ಕ್ಷಣದಲ್ಲಿ ಅಮಿತ್ ಶಾ-ಮೋದಿಯಿಂದ ಜಯವನ್ನು ಕಸಿದುಕೊಂಡು ಬೀಗಿದ್ದಾರೆ. ತಮ್ಮ ಗೆಲುವಿನ ಬೆನ್ನಲ್ಲೇ ಟ್ವೀಟ್ ಮಾಡಿದ ಅಹ್ಮದ್ ಪಟೇಲ್ ಇದು ಸತ್ಯಕ್ಕೆ ಸಂದ ಜಯ ಅಂದ್ರು. ಹಣ ಬಲ, ತೋಳ್ಬಲ, ಬೆದರಿಕೆ ತಂತ್ರಗಳ ವಿರುದ್ಧದ ಜಯ ಎಂದು ಬಣ್ಣಿಸಿದ್ದಾರೆ. ಇನ್ನು ಗೆಲುವಿನ ಬಳಿಕ ಗುಜರಾತ್ ವಿಧಾನಸಭೆ ಮುಂದೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ಬಿಗ್ ಹೈಡ್ರಾಮಾ: ಮಂಗಳವಾರ ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಗೆ ಫಲಿತಾಂಶ ಹೊರಬರಬೇಕಿತ್ತು. ಆದ್ರೆ ಸಂಜೆ 5 ಗಂಟೆ ವೇಳೆ ಗಾಂಧಿನಗರದಲ್ಲಿ ಕಾಂಗ್ರೆಸ್‍ನ ಅನಿರೀಕ್ಷಿತ ನಡೆ ಇಡೀ ಚಿತ್ರಣವನ್ನೇ ಬದಲಾಯಿಸಿತು. ಕೆಲವೇ ಹೊತ್ತಲ್ಲೇ ಆ ನಾಟಕ ದೆಹಲಿಗೆ ವರ್ಗವಾಯಿತು. ಪಿ ಚಿದಂಬರಂ ಸೇರಿದಂತೆ ಕಾಂಗ್ರೆಸ್ ಘಟಾನುಘಟಿಗಳ ನಿಯೋಗ ಒಂದೆಡೆಯಾದ್ರೆ, ಕೇಂದ್ರ ಕಾನೂನು ಸಚಿವ ರವಿಶಂಕರ್‍ಪ್ರಸಾದ್ ಸೇರಿದಂತೆ ಬಿಜೆಪಿ ನಿಯೋಗ ಮೂರು ಬಾರಿ ಆಯೋಗವನ್ನು ಸಂಧಿಸಿ ವಾದ-ಪ್ರತಿವಾದವನ್ನು ಮಂಡಿಸಿದ್ರು.

    ಪಕ್ಷದ ಅಧಿಕೃತ ಏಜೆಂಟ್‍ಗೆ ಬ್ಯಾಲೆಟ್ ಪೇಪರ್ ತೋರಿಸದೇ ಬಿಜೆಪಿಯ ಏಜೆಂಟ್‍ಗೆ ಮತಪತ್ರ ತೋರಿಸಿದ್ದಾರೆ. ಹೀಗಾಗಿ ಶಾಸಕರಾದ ರಾಘವ್ ಜೀ ಮತ್ತು ಭೋಲಾಭಾಯ್ ಮತವನ್ನು ಅಸಿಂಧುಗೊಳಿಸುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಆಯೋಗ ಎರಡೂ ಮತಗಳನ್ನು ಅಸಿಂಧುಗೊಳಿಸಿ ಮತ ಎಣಿಕೆಗೆ ಸೂಚಿಸಿತು. ಆದ್ರೆ ವಿಡಿಯೋದ ಸತ್ಯಾಸತ್ಯತೆಯನ್ನ ಬಿಜೆಪಿ ಪ್ರಶ್ನಿಸಿದೆ. ಈ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಮತ ಎಣಿಕೆಗೆ ಅಡ್ಡಿಪಡಿಸ್ತು ಕೂಡಾ. ಮೂಲಗಳ ಪ್ರಕಾರ ಬಿಜೆಪಿ ಇವತ್ತು ಸುಪ್ರೀಂಕೋರ್ಟ್ ಕದ ತಟ್ಟುವ ಸಾಧ್ಯತೆ ಕೂಡಾ ಇದೆ.