Tag: ಅಹ್ಲುವಾಲಿಯಾ

  • ಪದ್ಮಶ್ರೀ ಪುರಸ್ಕೃತ ಎಚ್‍ಪಿಎಸ್ ಅಹ್ಲುವಾಲಿಯಾ ನಿಧನ

    ಪದ್ಮಶ್ರೀ ಪುರಸ್ಕೃತ ಎಚ್‍ಪಿಎಸ್ ಅಹ್ಲುವಾಲಿಯಾ ನಿಧನ

    ನವದೆಹಲಿ: ಪದ್ಮಶ್ರೀ ಪುರಸ್ಕೃತ ಮತ್ತು ಭಾರತೀಯ ಬೆನ್ನುಮೂಳೆ ಗಾಯಗಳ ಕೇಂದ್ರದ ಮೇಜರ್ ಎಚ್‍ಪಿಎಸ್ ಅಹ್ಲುವಾಲಿಯಾ(85) ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

    ಎಚ್‍ಪಿಎಸ್ ಅಹ್ಲುವಾಲಿಯಾ ಅವರು ನಿವೃತ್ತ ಸೇನಾ ಅಧಿಕಾರಿಯಾಗಿದ್ದು, ತರಬೇತಿ ಪಡೆದ ಪರ್ವತಾರೋಹಿ, ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅಹ್ಲುವಾಲಿಯಾ ಅವರು ಸಾಹಸ, ಕ್ರೀಡೆ, ಪರಿಸರ, ಅಂಗವೈಕಲ್ಯ ಮತ್ತು ಸಾಮಾಜಿಕ ಕಾರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ

    HPS Ahluwalia

    ವೃತ್ತಿಪರ ಪರ್ವತಾರೋಹಿಯಾಗಿರುವ ಇವರು ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಭಾರತೀಯರಲ್ಲಿ ಒಬ್ಬರಾಗಿದ್ದಾರೆ. ಅವರು ತಮ್ಮ ಆತ್ಮಕಥೆ ಹೈಯರ್ ದ್ಯಾನ್ ಎವರೆಸ್ಟ್ ಸೇರಿದಂತೆ 13 ಪುಸ್ತಕಗಳನ್ನು ಬರೆದಿದ್ದಾರೆ. ಮೇಜರ್ ಅಹ್ಲುವಾಲಿಯಾ ಅವರು ಭಾರತೀಯ ಪರ್ವತಾರೋಹಣ ಪ್ರತಿಷ್ಠಾನ ಮತ್ತು ದೆಹಲಿ ಪರ್ವತಾರೋಹಣ ಸಂಘದ ಮಾಜಿ ಅಧ್ಯಕ್ಷರೂ ಸಹ ಆಗಿದ್ದಾರೆ.

    ಅಹ್ಲುವಾಲಿಯಾ ಅವರಿಗೆ ದೇಶದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರು ತೇನ್ಸಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಇದೀಗ ಪತ್ನಿ ಭೋಲಿ ಅಹ್ಲುವಾಲಿಯಾ ಮತ್ತು ಪುತ್ರಿ ಸುಗಂಧ್ ಅಹ್ಲುವಾಲಿಯಾ ಅವರನ್ನು ಅಗಲಿದ್ದಾರೆ. ಇದನ್ನೂ ಓದಿ: 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ

  • ಏರ್ ಸ್ಟ್ರೈಕ್‍ನಲ್ಲಿ ಹೆಚ್ಚಿನ ಹಾನಿ ಆಗಿಲ್ಲ: ಕೇಂದ್ರ ಸಚಿವ ಅಹ್ಲುವಾಲಿಯಾ

    ಏರ್ ಸ್ಟ್ರೈಕ್‍ನಲ್ಲಿ ಹೆಚ್ಚಿನ ಹಾನಿ ಆಗಿಲ್ಲ: ಕೇಂದ್ರ ಸಚಿವ ಅಹ್ಲುವಾಲಿಯಾ

    ನವದೆಹಲಿ: ಬಾಲಕೋಟ್‍ನಲ್ಲಿ ನಡೆದ ವಾಯುದಾಳಿಯಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಎಸ್.ಎಸ್ ಅಹ್ಲುವಾಲಿಯಾ ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

    ಕೇಂದ್ರ ಸರ್ಕಾರ ವಾಯುದಾಳಿಯಲ್ಲಿ ಯಾವುದೇ ಸಾವನ್ನು ಬಯಸಲಿಲ್ಲ. ವಿಮಾನಗಳ ಮೂಲಕ ಬಾಂಬ್ ದಾಳಿ ನಡೆಸಿ ಉಗ್ರರ ನೆಲಗಳನ್ನು ಧ್ವಂಸ ಮಾಡಲು ನಾವು ಸಮರ್ಥರಿದ್ದಾರೆ ಎಂದು ತೋರಿಸಿಕೊಡಲು ಏರ್ ಸ್ಟ್ರೈಕ್ ಮಾಡಿದ್ದೇವೆ ಎಂದು ಹೇಳಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.

    ನಮ್ಮ  ಶಕ್ತಿ, ಸಾಮರ್ಥ್ಯದ ಪ್ರದರ್ಶನಕ್ಕೆ ಈ ದಾಳಿ ಮಾಡಲಾಗಿದೆ. ನಾನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮವನ್ನು ನೋಡಿದ್ದೇನೆ. ಏರ್ ಸ್ಟ್ರೈಕ್ ನಡೆದ ಬಳಿಕ ನರೇಂದ್ರ ಮೋದಿ ಅವರು ರಾಜಸ್ಥಾನದ ಚುರುವಿನಲ್ಲಿ ಮಾಡಿದ ಭಾಷಣವನ್ನು ಕೇಳಿದ್ದೇನೆ. ಈ ವೇಳೆ 300 ಮಂದಿ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರಾ? ಯಾರಾದರೂ ವಕ್ತಾರರು ಹೇಳಿದ್ದಾರಾ? ಅಮಿತ್ ಶಾ ಹೇಳಿದ್ದಾರಾ ಎಂದು ಅಹ್ಲುವಾಲಿಯಾ ಪ್ರಶ್ನಿಸಿದರು.

    ಈ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್ ಸ್ಟ್ರೈಕ್  ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಆಗ್ರಹಿಸಿದ್ದರು.

    ಜೈಷ್ ಉಗ್ರರ ನೆಲೆಯಾದ ಬಾಲಕೋಟ್ ನಲ್ಲಿ ನಡೆದ ವಾಯು ದಾಳಿಯಲ್ಲಿ 300ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು ಎಂದು ವರದಿಯಾಗಿತ್ತು.