ನಾಳೆ (ಏ.12) ಈ ದೇವಸ್ಥಾನದಲ್ಲಿ ಹನುಮಜಯಂತಿ ಕಾರ್ಯಕ್ರಮ ನಡೆಯಬೇಕಿತ್ತು. ಹನುಮಜಯಂತಿ ಮುನ್ನಾ ದಿನವೇ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ಬಿದ್ದಿದ್ದರಿಂದ ದೇವಸ್ಥಾನದ ಹಿಂಭಾಗ ಮಾತ್ರ ಸ್ವಲ್ಪ ಡ್ಯಾಮೇಜ್ ಆಗಿದೆ. ಸದ್ಯ ಮರ ತೆರವುಗೊಳಿಸಿ ಶನಿವಾರ ಪೂಜೆಗೆ ದೇವಸ್ಥಾನವನ್ನು ಸಿದ್ಧಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್ಗೆ ನಮ್ಮ ಗ್ರಾಮ ರಿಜಿಸ್ಟರ್ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ
ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ (Anjanadri Hill) ಇಂದು ಐತಿಹಾಸಿಕ ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.
ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದಲ್ಲಿ (Anjaneyaswamy Temple) ಇಂದು (ಡಿ.13) ಹನುಮಮಾಲಾ ವಿಸರ್ಜನೆ ನಡೆಯಲಿದೆ. ಬೆಳಗಿನ ಜಾವ ಏಕಕಾಲಕ್ಕೆ ಮಾಲಾಧಾರಿಗಳು ಆಗಮಿಸಿದ್ದು, 575 ಮೆಟ್ಟಿಲು ಹತ್ತಿ ಆಂಜನೇಯ ಸ್ವಾಮಿ ದರ್ಶನದ ಬಳಿಕ ಹನುಮಮಾಲೆಯನ್ನು ವಿಸರ್ಜನೆ ಮಾಡಲಿದ್ದಾರೆ. ಬೆಟ್ಟದ ಮುಂಭಾಗದಲ್ಲಿ ಭಕ್ತರ ಆಗಮನದಿಂದ ನೂಕು ನುಗ್ಗಲು ಉಂಟಾಗುತ್ತಿದ್ದು, ನಿಯಂತ್ರಣಕ್ಕಾಗಿ ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ – ಹರಿಯಾಣ ಸಿಎಂ ಖಡಕ್ ವಾರ್ನಿಂಗ್
ವಿಸರ್ಜನೆಗೆ ಸಿಂಗಾರಗೊಂಡ ಅಂಜನಾದ್ರಿ:
ರಾಮಾಯಣ ಕಾಲದ ಪೌರಾಣಿಕ ಇತಿಹಾಸವನ್ನು ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟವು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಳಿರು, ತೋರಣ, ವಿದ್ಯುತ್ ದೀಪಾಲಂಕಾರದಿಂದ, ಕೇಸರಿ ಧ್ವಜಗಳಿಂದ ಸಿಂಗಾರಗೊಂಡು ಮಾಲಾಧಾರಿಗಳನ್ನು ಸ್ವಾಗತಿಸುತ್ತಿದೆ.
ಪ್ರತಿ ವರ್ಷದಂತೆ ಈ ಬಾರಿಯು ಸಹ ಚತುರ್ಮಾಸದಲ್ಲಿ ಹನುಮಮಾಲೆಯನ್ನು ಧಾರಣೆ ಮಾಡಿದ ಹನುಮನ ಭಕ್ತರು ಕಠಿಣ ವ್ರತವನ್ನು ಕೈಕೊಂಡು ಹನುಮಮಾಲಾ ವಿಸರ್ಜನೆಗಾಗಿ ಇಂದು (ಡಿ.13) ಅಂಜನಾದ್ರಿಗೆ ಆಗಮಿಸಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಮಾಲಾಧಾರಿಗಳು ಬರುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಈಗಾಗಲೇ ಸಕಲ ತಯಾರಿ ಮಾಡಿಕೊಂಡಿದೆ. ಅಂಜನಾದ್ರಿ ಬೆಟ್ಟವನ್ನು ದೀಪಗಳಿಂದ, ಬೆಟ್ಟದ ಕೆಳಗಡೆ ಇರುವ ಪಾದಗಟ್ಟಿಯನ್ನು ಬಾಳೆಕಂಬ, ತೆಂಗಿನಗರಿ, ಹೂವಿನಿಂದ ಸಿಂಗಾರಗೊಳಿಸಲಾಗಿದೆ. ಇನ್ನೂ ಬೆಟ್ಟದ ಮೇಲಿರುವ ಹನುಮನ ದೇವಸ್ಥಾನದ ಗರ್ಭಗುಡಿಯಲ್ಲಿ ಹೂವಿನ ಅಲಂಕಾರ, ಕೇಸರಿ ಧ್ವಜಗಳನ್ನು ಕಟ್ಟುವ ಮೂಲಕ ದೇವಸ್ಥಾನವನ್ನು ಸಿಂಗಾರ ಗೊಳಿಸಲಾಗಿದೆ.
ರಸ್ತೆಯುದ್ದಕ್ಕೂ ಕೇಸರಿಮಯ:
ಹನುಮಮಾಲಾ ವಿಸರ್ಜನೆಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಬರುವುದರಿಂದ ಅವರ ಸ್ವಾಗತಕ್ಕಾಗಿ ಜಿಲ್ಲಾಡಳಿತ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೇಸರಿ ಧ್ವಜ, ರಸ್ತೆ ಉದ್ದಕ್ಕೂ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಇನ್ನೂ ಧ್ವನಿವರ್ಧಕದ ಮೂಲಕ ದಿನದ 24 ಗಂಟೆಗಳ ಕಾಲ ರಾಮ ನಾಮಜಪದ ಆಡಿಯೋ ಹಾಕಲಾಗುತ್ತಿದೆ. ಪಾದಯಾತ್ರೆ ಬರುವ ಭಕ್ತರು ರಾಮನ ಜಪ ಮಾಡಿಕೊಂಡು ಬರಲು ಅನುಕೂಲವಾಗಲು ರಸ್ತೆಯುದ್ದಕ್ಕೂ ದೀಪ ಹಾಕಲಾಗಿದೆ.
ಪಾದಯಾತ್ರೆ ಬಂದಿರುವ ಭಕ್ತರು:
ಡಿ.13 ರಂದು ಹನುಮಮಾಲಾ ವಿಸರ್ಜನೆಗಾಗಿ ಕೊಪ್ಪಳ, ಹುಲಗಿ, ಕಂಪ್ಲಿ, ಕಮಲಾಪೂರ, ಬಳ್ಳಾರಿ, ಸಿಂಧನೂರ, ಹೊಸಪೇಟೆ, ಕನಕಗಿರಿ, ಕಾರಟಗಿ ಸೇರಿದಂತೆ ಸಮೀಪದ ತಾಲೂಕುಗಳ ಮಾಲಾಧಾರಿಗಳು ಪಾದಯಾತ್ರೆಯ ಮೂಲಕ ಅಂಜನಾದ್ರಿಗೆ ಆಗಮಿಸಿದ್ದಾರೆ.ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ
ಹನುಮಂತ ದೇವಸ್ಥಾನದ ಬಾಗಿಲು ಬಳಿಯೇ ಮಂಗ ಮೃತಪಟ್ಟಿದೆ. ಇದು ಆಂಜನೇಯನ ಶಕ್ತಿ, ಆಂಜನೇಯನ ಮಹಿಮೆ. ಬಾಡಗಿ ಪುನರ್ವಸತಿ ಕೇಂದ್ರ, ನಮ್ಮ ಊರು ಈಗ ನಿರ್ಮಾಣವಾಗುತ್ತಿದೆ. ನಮ್ಮ ಊರ ಮೇಲೆ ಆಂಜನೇಯನ ಕೃಪೆ ಇದೆ. ಹನುಮಂತ ದೇವರ ದೇವಸ್ಥಾನ ಕಟ್ಟಿಸುತ್ತಿದ್ದೇವೆ. ಆದರೆ ಇದೀಗ ಸಾಕ್ಷಾತ್ ಆಂಜನೇಯನೆ ಇಲ್ಲಿ ಐಕ್ಯವಾಗಿದ್ದಾನೆ. ನಾವು ಆರು ತಿಂಗಳ ನಂತರ ಮೂರ್ತಿ ಪ್ರತಿಷ್ಟಾಪನೆ ಮಾಡುವವರಿದ್ದೆವು. ಆದರೆ ಇದೀಗ ಸಾಕ್ಷಾತ್ ಆಂಜನೇಯನೇ ಮಂಗನ ರೂಪದಲ್ಲಿ ಬಂದಿದ್ದಾನೆ ಎಂದು ಗ್ರಾಮಸ್ಥರು ನಂಬಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾವೇರಿ: ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
– ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ – ಆರ್ಕಿಯಾಲಜಿ ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಉಲ್ಲೇಖ – ದಾಖಲೆಯೊಂದಿಗೆ ಕಾನೂನು ಹೋರಾಟಕ್ಕೆ ಮುಂದಾದ ಹಿಂದೂ ಸಂಘಟನೆಗಳು
ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದಕ್ಕೆ ದಿನಕ್ಕೊಂದು ತಿರುವು ದೊರೆಯುತ್ತಿದೆ. ಮೊನ್ನೆ ಈ ವಿವಾದದ ಸಂಬಂಧ ದಶಕಗಳ ಹಿಂದಿನ ಪುಸ್ತಕವೊಂದು ಪತ್ತೆಯಾಗಿತ್ತು. ಇದೀಗ ಈ ವಿಚಾರ ಸಂಬಂಧ ಪುರಾತ್ವ ಇಲಾಖೆಗೆ ಸಂಬಂಧಿಸಿದ ದಾಖಲೆಯೊಂದು ಲಭ್ಯವಾಗಿದ್ದು ಹಿಂದೂ ಸಂಘಟನೆಗಳಿಗೆ ಪ್ರಮುಖ ಅಸ್ತ್ರ ಸಿಕ್ಕಿದಂತಾಗಿದೆ.
ಈ ಪುಸ್ತಕ ದೊರೆತ ನಂತರ ಇದೀಗ ಪ್ರಧಾನಿ ಮೋದಿ ಮಂಚ್ ವಿಚಾರ ವೇದಿಕೆ ಇನ್ನೊಂದು ಅಧಿಕೃತ ದಾಖಲೆಯನ್ನು ಬಿಡುಗಡೆ ಮಾಡಿದೆ. 1912ರಲ್ಲಿ ಪ್ರಕಟವಾದ ಆರ್ಕಿಯಾಲಜಿ(ಪುರಾತತ್ತ್ವ ಶಾಸ್ತ್ರ) ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಜಾಮಿಯಾ ಮಸೀದಿ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಲಾಗಿದೆ.
ಪುಸ್ತಕದಲ್ಲಿ ಏನಿದೆ?
ಟಿಪ್ಪು ಸುಲ್ತಾನ್ ಮಸೀದಿ ಮತ್ತು ಮಿನಾರ್ ನಿರ್ಮಾಣದ ಉದ್ದೇಶದಿಂದ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶಪಡಿಸಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಇಲ್ಲಿದ್ದ ಮೂಡಲ ಬಾಗಿಲು ಆಂಜನೇಯಸ್ವಾಮಿ ವಿಗ್ರಹವನ್ನು ಕಾವೇರಿ ನದಿಯ ಗೌರಿಘಡ ಎಂಬಲ್ಲಿ ಎಸೆಯಲಾಗಿತ್ತು. ಟಿಪ್ಪು ಸುಲ್ತಾನ್ ನಿಧನದ ನಂತರ ದಳವಾಯಿ ದೊಡ್ಡಯ್ಯ ದೇಣಿಗೆ ಸಂಗ್ರಹಿಸಿ ಶ್ರೀರಂಗಪಟ್ಟಣದ ಪೇಟೆ ಬೀದಿಯಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಮರುಸ್ಥಾಪನೆ ಮಾಡಿದ್ದಾನೆ ಎಂಬ ಅಂಶವಿದೆ.
ಪಠ್ಯದಿಂದ ಕೈಬಿಡಿ:
ಈ ಪುಸ್ತಕದಿಂದ ಟಿಪ್ಪು ಸುಲ್ತಾನ್ ವಿಗ್ರಹ ಭಂಜಕ ಎಂದು ರುಜುವಾತು ಮಾಡುತ್ತದೆ. ಹೀಗಾಗಿ ಟಿಪ್ಪು ಸುಲ್ತಾನ್ ಬಗ್ಗೆ ಪಠ್ಯ ಪುಸ್ತಕದ ವಿಚಾರಗಳನ್ನು ಕೈ ಬಿಡಬೇಕೆಂದು ಮೋದಿ ವಿಚಾರ ಮಂಚ್ ವೇದಿಕೆಯ ಪದಾಧಿಕಾರಿಗಳು ಈಗ ಸರ್ಕಾರವನ್ನು ಆಗ್ರಹ ಮಾಡುತ್ತಿದ್ದಾರೆ.
ಕಾನೂನು ಹೋರಾಟ:
ಆರ್ಕಿಯಾಲಜಿ ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಇರುವ ದಾಖಲೆಯನ್ನು ಇಟ್ಟುಕೊಂಡು ಕಾನೂನು ಹೋರಾಟ ಮಾಡಲು ಈಗ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ.
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬಾಣಸವಾಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಚಾಲನೆ ವೇಳೆ ಕಾರು ನಿಯಂತ್ರಣ ತಪ್ಪಿ ಆಂಜನೇಯ ಸ್ವಾಮಿ ದೇಗುಲಕ್ಕೆ ಡಿಕ್ಕಿಯಾಗಿದೆ. ಈ ಕಾರಿನಲ್ಲಿ ಡ್ರೈವರ್ ಸೇರಿ ಒಟ್ಟು 4 ಜನ ಇದ್ದು, ಘಟನೆಯಲ್ಲಿ ಡ್ರೈವರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಕೊಪ್ಪಳ: ದಲಿತರ ಮಗು ಪ್ರವೇಶಿಸಿ ಅಪವಿತ್ರ ಆಗಿದೆ ಎಂದು ಹೇಳಿ ದೇವಸ್ಥಾನ ಶುದ್ಧೀಕರಿಸಿದ್ದಲ್ಲದೇ ಮಗುವಿನ ಪೋಷಕರಿಗೆ ದೇವಸ್ಥಾನದ ಶುದ್ಧೀಕರಣ ಹೆಸರಲ್ಲಿ 10 ಸಾವಿರ ರೂಪಾಯಿ ದಂಡ ಹಾಕಲಾಗಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಚನ್ನದಾಸರ ಸಮುದಾಯದ ಮಗು ಗ್ರಾಮದ ಆಂಜನೇಯ ದೇವಸ್ಥಾನ ಪ್ರವೇಶಿಸಿದೆ. ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಅಪವಿತ್ರವಾಗಿದೆ ಎಂದು ಸವರ್ಣಿಯರು ದೇವಸ್ಥಾನ ಶುದ್ದಿಕರಿಸಿದ್ದರು. ಜೊತೆಗೆ ದೇವಸ್ಥಾನ ಶುದ್ಧೀಕರಣದ ಖರ್ಚಿಗಾಗಿ 11 ಸಾವಿರ ರೂಪಾಯಿ ದಂಡ ವಿಧಿಸಿದ್ದರು. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್
ಗ್ರಾಮದ ಸವರ್ಣಿಯರು ಸಭೆ ನಡೆಸಿ ದಂಡ ವಿಧಿಸಿದ್ದರು. ಇದನ್ನು ವಿರೋಧಿಸಿ ಚನ್ನದಾಸರ ಸಮುದಾಯ ಪ್ರತಿಭಟನೆ ಮಾಡಿತ್ತು. ದೇವಸ್ಥಾನ ಪ್ರವೇಶ ಮಾಡಿರೋ ದಲಿತ ಮಗುವಿನ ಕುಟುಂಬಕ್ಕೆ ದಂಡ ವಿಧಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಜೀವಂತ ಇರಿಸಿದ್ದು ತಡವಾಗಿ ಬೆಳಕಿಗೆ ಬಂದು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಸಭೆ ಮಾಡಿದ್ದಾರೆ. ಗ್ರಾಮಕ್ಕೆ ಕುಷ್ಟಗಿ ತಹಶೀಲ್ದಾರ ಸಿದ್ದೇಶ, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಭೇಟಿ ನೀಡಿ ಸಭೆ ನಡೆಸಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಲವು ದೇವಾಲಯಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆ ಇಂದು ನೆಲಮಂಗಲ ಕಂದಾಯ ಅಧಿಕಾರಿಗಳು ಪಟ್ಟಿ ಮಾಡಿಕೊಂಡಿರುವ ದೇವಾಲಯಗಳ ತೆರವಿಗೆ ಮುಂದಾಗಿದ್ದಾರೆ.
ಈಗಾಗಲೇ ನೆಲಮಂಗಲ ತಾಲೂಕಿನ ಸಿಎ, ಪಾರ್ಕ್, ರಸ್ತೆ ಬದಿಯ 15ಕ್ಕೂ ಹೆಚ್ಚು ದೇವಾಲಯಗಳನ್ನು ತೆರವು ಮಾಡಲು ಅಧಿಕಾರಿಗಳು ಮುಂದಾಗಿದ್ದು, ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಪುರಾತನ ಮಣ್ಣೆಯ ಶ್ರೀ ಅಭಯಾಂಜನೇಯಸ್ವಾಮಿ ದೇವಾಲಯ ತೆರವಿಗೆ ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ವಿರೋಧ ಮಾಡಿದ್ದು, ತಾಲೂಕಿನ ಮಣ್ಣೆ ಗ್ರಾಮದ ಕೆರೆ ಏರಿ ಮೇಲೆ ಇರುವ ದೇವಾಲಯ ತೆರವಿಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ತಡೆಯೊಡ್ಡಿದ್ದಾರೆ.
ಈ ದೇವಾಲಯದಿಂದ ಕೆರೆ ಏರಿಯ ಮೇಲೆ ಅಪಘಾತ ತಪ್ಪಿದೆ, ಸಾಕಷ್ಟು ವರ್ಷದಿಂದ ಪೂಜೆ ಪುರಸ್ಕಾರವನ್ನ ಮಾಡಿಕೊಂಡು ಭಕ್ತಿಯನ್ನು ಸ್ಥಳೀಯ ಜನರು ಮೆರೆದಿದ್ದಾರೆ ಎಂದು ಗ್ರಾಮಸ್ಥರು ಮನವಿ ಮಾಡಿದರು. ಈ ವೇಳೆ ಅಧಿಕಾರಿಗಳು ಹಾಗೂ ಸ್ಥಳೀಯ ಜನರ ನಡುವೆ ಮಾತಿನ ಚಕಮಕಿ ನಡೆದಿದ್ದು, ತ್ಯಾಮಗೊಂಡ್ಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಬೆಂಗಳೂರು: ಆಂಜನೇಯನ ದೇಗುಲದ ಜೀರ್ಣೋದ್ದಾರಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬರು ಸುಮಾರು 1 ಕೋಟಿ ಬೆಲೆಬಾಳುವ ತನ್ನ ಭೂಮಿಯನ್ನು ದಾನ ಮಾಡಿದ್ದಾರೆ. ಸದ್ಯ ಇದರ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು. ನಗರದ ಕಾಡುಗೋಡಿ ಬೆಳತೂರು ಕಾಲನಿ ನಿವಾಸಿಯಾಗಿರುವ ಎಚ್.ಎಂ.ಜಿ ಬಾಷಾ ಅವರು ಈ ಮಹಾನ್ ಕಾರ್ಯ ಮಾಡಿದವರು. ಲಾರಿ ಉದ್ಯಮಿಯಾಗಿರುವ ಬಾಷಾ ಬೆಂಗಳೂರಿನಿಂದ 35 ಕಿ.ಮೀ ದೂರದಲ್ಲಿರುವ ಹೊಸಕೋಟೆ ತಾಲೂಕಿನ ವಾಲಗೇರಪುರದಲ್ಲಿರುವ ತಮ್ಮ 3 ಎಕರೆ ಭೂಮಿಯಲ್ಲಿ 1.5 ಗುಂಟೆ ಜಾಗವನ್ನು ಉಚಿತವಾಗಿಯೇ ಆಂಜನೇಯನ ದೇಗುಲಕ್ಕೆ ದಾನ ಮಾಡಿ ಸುದ್ದಿಯಾಗಿದ್ದಾರೆ.
ಈ ಸಂಬಂಧ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಬಾಷಾ, ಅಲ್ಲಿ ಒಂದು ಸಣ್ಣ ಹನುಮಾನ್ ದೇವಾಲಯವಿತ್ತು. ಹೀಗಾಗಿ ದೊಡ್ಡ ದೇಗುಲವನ್ನು ನಿರ್ಮಿಸಲು ಬಯಸಿದರೆ ನಾನು ಅವರಿಗೆ ಭೂಮಿಯನ್ನು ನೀಡಬಹುದು ಎಂದು ಕೆಲವರಲ್ಲಿ ಹೇಳಿದೆ. ಇತ್ತೀಚೆಗೆ ಟ್ರಸ್ಟ್ ಅವರು 1 ಗುಂಟೆ ಭೂಮಿಯನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲು ನನ್ನ ಬಳಿಗೆ ಬಂದರು. ಆಗ ನಾನು ಭೂಮಿ ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದೆ. ಅಲ್ಲದೆ 1.5 ಗುಂಟೆ ಭೂಮಿಯ ಮಾಲಕತ್ವವನ್ನು ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಸೇವಾ ಟ್ರಸ್ಟ್ ಗೆ ವರ್ಗಾವಣೆ ಮಾಡಿರುವುದಾಗಿ ತಿಳಿಸಿದರು.
ಪೂಜಾ ಕಾರ್ಯಕ್ರಮಗಳು ಇದ್ದಂತಹ ಸಮಯದಲ್ಲಿ ದೇಗುಲದ ಆವರಣದಲ್ಲಿ ಜಾಗವಿಲ್ಲದೆ ಭಕ್ತರು ಪರದಾಡುತ್ತಿರುವುದನ್ನು ಬಾಷಾ ಗಮನಿಸಿದ್ದಾರೆ. ಈ ವಿಚಾರ ಅವರಿಗೆ ಭೂಮಿ ನೀಡಲು ಪ್ರೇರೇಪಿಸಿರುವುದಾಗಿ ಬಾಷಾ ಹೇಳಿದ್ದಾರೆ. ಸದ್ಯ ಸುಮಾರು 80 ಲಕ್ಷದಿಂದ 1 ಕೋಟಿವರೆಗೂ ಬೆಲೆಬಾಳುವ ಜಾಗವನ್ನು ಬಾಷಾ ಹಿಂದೂಗಳಿಗೆ ಹಸ್ತಾಂತರಿಸಿದ್ದಾರೆ.
ಬಾಷಾ ಅವರ ಈ ದಿಟ್ಟ ನಿರ್ಧಾರದಿಂದ ವಾಲಗೇರಪುರದ ಜನರಿಗೆ ಮೊದಲು ಶಾಕ್ ಜೊತೆ ಸಪ್ರೈಸ್ ಕೂಡ ಉಂಟುಮಾಡಿದೆ. ಈತ ಏನು ಮಾಡುತ್ತಿದ್ದಾನೆ ಎಂದು ಗ್ರಾಮದ ಜನ ಅನುಮಾನಪಟ್ಟರು. ಆದರೆ ಇಲ್ಲಿ ನಿರ್ಮಾಣವಾಗುವ ಹನುಮಾನ್ ದೇವಾಲಯವನ್ನು ನೋಡಲು ನಾನು ಕೂಡ ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಬಾಷಾ ತಿಳಿಸಿದ್ದಾರೆ.
ಗ್ರಾಮದ ಜನರು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ವ್ಯತ್ಯಾಸವನ್ನು ನೋಡುವವರಲ್ಲ ಎಂದು ನಾನು ಭಾವಿಸುತ್ತೇನೆ. ನಾವೆಲ್ಲ ಒಂದೇ ಎಂಬುದನ್ನು ಅವರು ಪರಿಗಣಿಸುತ್ತಾರೆ. ಕೆಲ ರಾಜಕೀಯ ಮುಖಂಡರು ತಮ್ಮ ಸ್ವಂತ ಲಾಭಕ್ಕಾಗಿ ಮಾತನಾಡುವಾಗ ಜನರ ಧರ್ಮವನ್ನು ಎತ್ತಿ ತೋರಿಸುತ್ತಾರೆ. ಪ್ರಸ್ತುತ ಪೀಳಿಗೆ ಕೋಮುವಾದಿ ಮಾರ್ಗಗಳಲ್ಲಿ ಹೆಚ್ಚು ಯೋಚಿಸುತ್ತಿದೆ. ‘ಲವ್ ಜಿಹಾದ್’, ‘ಗೋಹತ್ಯಾ’ ಮುಂತಾದ ವಿಷಯಗಳ ಬಗ್ಗೆ ನಾವು ದಿನನಿತ್ಯ ಕೇಳುತ್ತೇವೆ. ದೇಶವು ಈ ರೀತಿಯಾದರೆ ಪ್ರಗತಿ ಹೊಂದುತ್ತದೆಯೇ? ನಾವು ಒಗ್ಗಟ್ಟಾಗಬೇಕು ಮತ್ತು ನಮ್ಮ ದೇಶದ ಬಗ್ಗೆ ನಮಗೆ ಪ್ರೀತಿ ಇರಬೇಕು ಎಂದು ಅವರು ವಿವರಿಸಿದ್ದಾರೆ.
ನನ್ನ ಈ ನಿರ್ಧಾರಕ್ಕೆ ಕುಟುಂಬ ಕೂಡ ಸಂಪೂರ್ಣ ಒಪ್ಪಿಗೆ ನೀಡಿದೆ. ಟ್ರಸ್ಟ್ ಸದ್ಯ ಸುಮಾರು 1 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಿದೆ ಎಂದರು. ಈ ಜಮೀನು ಓಲ್ಡ್ ಮದ್ರಾಸ್ ರಸ್ತೆಯ ಪಕ್ಕದಲ್ಲಿಯೇ ಹಾದುಹೋಗುವ ಹೆದ್ದಾರಿಯ ಸಮೀಪದಲ್ಲಿದೆ. ಬಾಷಾ ಅವರ ದೇಣಿಗೆಯನ್ನು ಶ್ಲಾಘಿಸುವ ಪೋಸ್ಟರ್ ಅನ್ನು ಸ್ಥಾಪಿಸಲಾಗಿದೆ. ಸದ್ಯ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಅಲ್ಲದೆ ಬಾಷಾ ಈ ದೃಢ ನಿರ್ಧಾರಕ್ಕೆ ಜನ ಬೇಷ್ ಎನ್ನುತ್ತಿದ್ದಾರೆ.
ಬೆಂಗಳೂರು: ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದ ಮೆಟ್ರೋ ಕಾಮಗಾರಿ ನಡೆಸಲು ಆಂಜನೇಯ ದೇವಸ್ಥಾನವನ್ನು ತೆರವುಗೊಳಿಸಲು ನಿರ್ಧರಿಸಿದ್ದಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ.
ಸುಮಾರು 150 ವರ್ಷಗಳಿಂದ ಈ ಆಂಜನೇಯನನ್ನು ಭಕ್ತರು ಆರಾಧಿಸಿಕೊಂಡು ಬರುತ್ತಿದ್ದಾರೆ. ಆದರೆ ಈಗ ಈ ಹನುಮಂತನಿಗೆ ಮೆಟ್ರೋ ಬೂತ ಎದುರಾಗಿದೆ. ಆರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ.
ಆದಷ್ಟು ಬೇಗ ಮೆಟ್ರೋ ರೈಲನ್ನು ಹಳಿ ಮೇಲೆ ಓಡಿಸುವ ಧಾವಂತದಲ್ಲಿ ನಮ್ಮ ಮೆಟ್ರೋ ನಿಗಮ ಇದ್ದು, ಆಂಜನೇಯನ ಗುಡಿಯನ್ನು ಒಡೆಯಲು ತಯಾರಿ ನಡೆಸಿದೆ. ಗಾರೆಬಾವಿ ಪಾಳ್ಯ, ಬೊಮ್ಮನಹಳ್ಳಿ ಹಾಗೂ ರೂಪೇನ ಅಗ್ರಹಾರದಲ್ಲಿ ಮೂರು ಆಂಜನೇಯನ ಸನ್ನಿಧಿಗಳಿದೆ. ಈ ಮೂರು ಆಂಜನೇಯನ ಗುಡಿಗಳನ್ನು ಕೆಡವಲು ಬಿಎಂಆರ್ಸಿಎಲ್ ಯೋಜನೆ ರೂಪಿಸಿದೆ.
ಈ ಮಾರ್ಗದಲ್ಲಿ ಈಗಾಗಲೇ ಮೆಟ್ರೋ ಪಿಲ್ಲರ್ ಸಿದ್ಧವಾಗಿದ್ದು ಗಾರ್ಡರ್ ಗಳನ್ನು ಮೇಲೇರಿಸಲಾಗಿದೆ. ಶೇ.50 ರಷ್ಟು ಕೆಲಸ ಮುಗಿದಿದೆ. ಆದರೆ ಮೆಟ್ರೋಗೆ ಸರ್ವಿಸ್ ರಸ್ತೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿಂದೆ ಮೆಟ್ರೋ ಕಾಮಗಾರಿಗಾಗಿ ಹೈವೇ ಪ್ರಾಧಿಕಾರದಿಂದ ಸರ್ವಿಸ್ ರಸ್ತೆ ಜಾಗವನ್ನು ಮೆಟ್ರೋ ಪಡೆದಿತ್ತು. ಕಾಮಗಾರಿ ಮುಗಿಯುತ್ತಿದ್ದಂತೆ ಬದಲಿ ಸರ್ವಿಸ್ ರಸ್ತೆಯನ್ನು ಹೈವೇ ಪ್ರಾಧಿಕಾರಕ್ಕೆ ಬಿಟ್ಟುಕೊಡಬೇಕಿದೆ. ಹೀಗಾಗಿ ಗಾರೆಬಾವಿ ಪಾಳ್ಯ, ಬೊಮ್ಮನಹಳ್ಳಿ, ಹಾಗೂ ರೂಪೇನ ಅಗ್ರಹಾರದ ಆಂಜನೇಯ ದೇವಸ್ಥಾನಗಳನ್ನು ತೆರವುಮಾಡಲು ಬಿಎಂಆರ್ ಸಿಎಲ್ ಮುಂದಾಗಿದೆ.
ಗಾರೆಬಾವಿ ಪಾಳ್ಯದಲ್ಲಿರುವ ಆಂಜನೇಯನ ಗುಡಿ ಅತ್ಯಂತ ಪುರಾತನವಾಗಿದ್ದು, ಸುಮಾರು 150 ವರ್ಷದಷ್ಟು ಹಳೆಯದು ಎನ್ನಲಾಗುತ್ತಿದೆ. ಅಲ್ಲದೆ ಈ ಹಿಂದಿನ ಪ್ಲಾನ್ ಪ್ರಕಾರ ಗುಡಿ ತೆರವು ಮಾಡುವುದಿಲ್ಲ ಎಂದು ಮೆಟ್ರೋ ಭರವಸೆ ನೀಡಿತ್ತು. ಆದರೆ ಈಗ ಏಕಾಏಕಿ ದೇವಸ್ಥಾನ ತೆರವಿಗೆ ಮುಂದಾಗಿರುವ ಮೆಟ್ರೋ ಕ್ರಮವನ್ನು ಭಕ್ತರು ಸೇರಿ ದೇವಸ್ಥಾನ ಆಡಳಿತ ಮಂಡಳಿ ಖಂಡಿಸಿದೆ. ಯಾವುದೇ ಕಾರಣಕ್ಕೂ ದೇವಸ್ಥಾನ ತೆರವಿಗೆ ಬಿಡುವುದಿಲ್ಲ ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ. ಅದೇ ರೀತಿ ಬೊಮ್ಮನಹಳ್ಳಿ, ರೂಪೇನ ಅಗ್ರಹಾರದ ಆಂಜನೇಯ ಸನ್ನಿಧಿಯನ್ನೂ ತೆರವು ಮಾಡುವುದಕ್ಕೆ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಮಾರ್ಗದ ಟ್ರಾಫಿಕ್ ಹತೋಟಿಗೆ ಮೆಟ್ರೋ ಅನಿವಾರ್ಯ. ಆದರೆ ಈಗ ಅನಾದಿಕಾಲದಿಂದಲೂ ಜನರು ಪೂಜಿಸಿಕೊಂಡು ಬಂದ ಗುಡಿ ತೆರವು ಮಾಡಲು ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ.