Tag: ಆಂಜನೇಯ ಸ್ವಾಮಿ

  • ಅಂಜನಾದ್ರಿಯಲ್ಲಿ ಮತ್ತೆ ವಿವಾದ – ಹೊರಗಿನ ಅರ್ಚಕರಿಂದ ಪೂಜೆ ಮಾಡಿಸಿದ ನೂತನ ಡಿಸಿ ಸುರೇಶ್

    ಅಂಜನಾದ್ರಿಯಲ್ಲಿ ಮತ್ತೆ ವಿವಾದ – ಹೊರಗಿನ ಅರ್ಚಕರಿಂದ ಪೂಜೆ ಮಾಡಿಸಿದ ನೂತನ ಡಿಸಿ ಸುರೇಶ್

    ಕೊಪ್ಪಳ: ಜಿಲ್ಲೆಯ ಅಂಜನಾದ್ರಿಯಲ್ಲಿ (Anjanadri) ಮತ್ತೆ ಪೂಜೆ ವಿವಾದ ಶುರುವಾಗಿದೆ. ಆಂಜನೇಯ ಸ್ವಾಮಿ (Anjaneya Swamy) ದರ್ಶನಕ್ಕೆ ಬಂದ ನೂತನ ಡಿಸಿ ಸುರೇಶ್ (DC Suresh) ಅವರು ಹೊರಗಿನ ಅರ್ಚಕನಿಂದ ಪೂಜೆ ಮಾಡಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

    ಕೊಪ್ಪಳ ನೂತನ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರು ಮೊದಲ ಬಾರಿಗೆ ಅಂಜನಾದ್ರಿಗೆ ಭೇಟಿ ನೀಡಿದ್ದು, ಈ ವೇಳೆ ಆಂಜನೇಯ ಸ್ವಾಮಿ ದರ್ಶನ ಮಾಡುವಾಗ ಹೊರಗಿನಿಂದ ಅರ್ಚಕನನ್ನು ಕರೆತಂದು ಪೂಜೆ ನೆರವೇರಿಸಿದ್ದಾರೆ. ಸೌಜನ್ಯಕ್ಕಾದರೂ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾರನ್ನು ಮಾತನಾಡಿಸಬೇಕಿತ್ತು. ಆದರೆ ಮಾತಾಡಿಸದೇ ಹಾಗೇ ಹೋಗಿದ್ದಾರೆ. ಜಿಲ್ಲಾಧಿಕಾರಿಯ ಈ ನಡೆ ಆಂಜನೇಯಸ್ವಾಮಿ ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.ಇದನ್ನೂ ಓದಿ: ಯಾರ ಕೈಗೂ ಸಿಗದೇ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

    ಸುಪ್ರೀಂ ಕೋರ್ಟ್ ವಿದ್ಯಾದಾಸ ಬಾಬಾ ಅವರಿಗೆ ಪೂಜೆಯ ಹಕ್ಕು ನೀಡಿದೆ. ಆದರೆ, ಕಳೆದ ಹಲವು ತಿಂಗಳಿನಿಂದ ಅಧಿಕಾರಿಗಳು ಬಾಬಾಗೆ ಕಿರುಕುಳ ನೀಡುತ್ತಾ ಧಾರ್ಮಿಕ ಕಾರ್ಯಗಳಿಗೆ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈಗ ಡಿಸಿ ಕೂಡ ಇದೇ ವರ್ತನೆ ತೋರಿದ್ದಾರೆ.

    ಪೂಜಾ ಕಾರ್ಯಗಳ ಚಿತ್ರೀಕರಣದ ವೇಳೆಯೂ ಆಡಳಿತ ಅಧಿಕಾರಿ ಎಂ.ಹೆಚ್.ಪ್ರಕಾಶರಾವ್ ವಿದ್ಯಾದಾಸ ಬಾಬಾರನ್ನು ತಡೆದಿದ್ದಾರೆ. ಇಷ್ಟೆಲ್ಲಾ ಆದರೂ ಡಿಸಿ ಸುರೇಶ್ ಮಾತ್ರ ನನಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ದೇವರ ದರ್ಶನ ಪಡೆದು ಹೋಗಿದ್ದಾರೆ. ಭಕ್ತರಿಗೆ ಮಂಗಳಾರತಿ ನಿಷೇಧಿಸಿರುವ ಜಿಲ್ಲಾಡಳಿತ ಅಧಿಕಾರಿಗಳಿಗೆ ಮಾತ್ರ ಮಂಗಳಾರತಿ, ವಿಶೇಷ ಅರ್ಚಕರ ಸೌಲಭ್ಯ ಕಲ್ಪಿಸುತ್ತಿದೆ. ಇದು ಸರ್ವಾಧಿಕಾರಿ ಧೋರಣೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

  • ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಯಿತು ಲಕ್ಷ್ಮೀನಾರಾಯಣ, ಆಂಜನೇಯ ಸ್ವಾಮಿ ರಥೋತ್ಸವ

    ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಯಿತು ಲಕ್ಷ್ಮೀನಾರಾಯಣ, ಆಂಜನೇಯ ಸ್ವಾಮಿ ರಥೋತ್ಸವ

    ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ (Mariyammanahalli Town) ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ (Lakshminarayana Swamy) ಮತ್ತು ಶ್ರೀ ಆಂಜನೇಯ ಸ್ವಾಮಿ (Anjaneya Swamy) ಜೋಡಿ ರಥೋತ್ಸವ ಅದ್ದೂರಿಯಾಗಿ ಅತ್ಯಂತ ಸಂಭ್ರಮ, ಸಡಗರದಿಂದ ನಡೆಯಿತು.

    ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ್ ನಾಯ್ಕ್ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಜೋಡಿ ರಥೋತ್ಸವ ಎಳೆದು ಚಾಲನೆ ನೀಡಿದರು. ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವ ಎಳೆಯುವ ಸಂಪ್ರದಾಯಕ್ಕೆ 650-700 ವರ್ಷಗಳ ಇತಿಹಾಸ ಇದೆ. ಇದನ್ನೂ ಓದಿ: ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

    ಈ ವರ್ಷ ಹೊಸ ಜೋಡಿ ರಥೋತ್ಸವಗಳನ್ನ ಮಾಡಿಸಲಾಗಿತ್ತು. ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ, ಲಕ್ಷ್ಮೀನಾರಾಯಣ ಹಾಗೂ ಆಂಜನೇಯನ ಕೃಪೆಗೆ ಪಾತ್ರರಾದರು. ಇದನ್ನೂ ಓದಿ: ಕಾಶಿಯಲ್ಲಿ ಮುಸ್ಲಿಂ ಮಹಿಳೆಯರಿಂದ ʻಶ್ರೀರಾಮ ಆರತಿʼ – ಏಕತೆ ಸಂದೇಶ ಸಾರಿದ ರಾಮನವಮಿ ಆಚರಣೆ

    ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿಯ ಫೋಟ 8 ಲಕ್ಷ ರೂ.ಗೆ ಹರಾಜು ಆದರೆ ಶ್ರೀ ಆಂಜನೇಯ ಸ್ವಾಮಿಯ ಫೋಟೋ 12.10 ಲಕ್ಷ ರೂ.ಗೆ ಹರಾಜಾಯ್ತು.

  • ಅಂಜನಾದ್ರಿಯಲ್ಲಿ ಹುಂಡಿ ಎಣಿಕೆ – 26.60 ಲಕ್ಷ ಸಂಗ್ರಹ

    ಅಂಜನಾದ್ರಿಯಲ್ಲಿ ಹುಂಡಿ ಎಣಿಕೆ – 26.60 ಲಕ್ಷ ಸಂಗ್ರಹ

    -3 ಅಮೆರಿಕ ನಾಣ್ಯಗಳು ಸೇರಿದಂತೆ 9 ವಿದೇಶಿ ನಾಣ್ಯಗಳ ಸಂಗ್ರಹ

    ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಅಂಜನಾದಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, 9 ವಿದೇಶಿ ನಾಣ್ಯಗಳು ಕಾಣಿಕೆ ರೂಪದಲ್ಲಿ ಸಂಗ್ರಹಗೊಂಡಿವೆ.

    ಗಂಗಾವತಿ (Gangavathi) ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಒಟ್ಟು 40 ದಿನಗಳಲ್ಲಿ 26 ಲಕ್ಷದ 60 ಸಾವಿರ ರೂ. ಕಾಣಿಕೆ ಸಂಗ್ರಹವಾಗಿದೆ.ಇದನ್ನೂ ಓದಿ: ಜಾನಪದ ವಿವಿ ಘಟಿಕೋತ್ಸವಕ್ಕೆ ಆಹ್ವಾನಿಸದ್ದಕ್ಕೆ ಶಿಗ್ಗಾಂವಿಯ ನೂತನ ಕೈ ಶಾಸಕ, ಬೆಂಬಲಿಗರಿಂದ ದರ್ಪ

    ಜೊತೆಗೆ ವಿದೇಶಿ ನಾಣ್ಯಗಳು ಸಂಗ್ರಹವಾಗಿದ್ದು, 3 ಯುಎಸ್‌ಎ, 1 ಯುಎಇ, 1 ನೇಪಾಳ, 1 ಸೌದಿ ಅರೇಬಿಯಾ, 1 ಹಾಂಕಾಂಗ್, 1 ಸಿಂಗಾಪುರ್, 1 ರಷ್ಯಾ ಸೇರಿ ಒಟ್ಟು 9 ನಾಣ್ಯಗಳು ಕಾಣಿಕೆ ರೂಪದಲ್ಲಿ ಬಂದಿವೆ. ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಮಾಡಲಾಯಿತು.

    ಕಳೆದ ವರ್ಷ ಡಿ.14 ರಿಂದ 2024ರ ಜ.05 ರವರೆಗೆ ಹುಂಡಿಯಲ್ಲಿ ಒಟ್ಟು 27,27,761 ರೂ. ಕಾಣಿಕೆ ಸಂಗ್ರಹವಾಗಿತ್ತು. ಆಗ ನೇಪಾಳದ 2 ನೋಟು, 3 ನಾಣ್ಯಗಳು ಸಂಗ್ರಹಗೊಂಡಿದ್ದವು.ಇದನ್ನೂ ಓದಿ: ಮರಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಕಾರು – ತಂದೆ, ಮಗ ದಾರುಣ ಸಾವು

  • ಸಚಿವರಾಗಿ ಒಂದು ವರ್ಷ – ಆಂಜನೇಯನ ದರ್ಶನ ಪಡೆದ ಆರಗ

    ಸಚಿವರಾಗಿ ಒಂದು ವರ್ಷ – ಆಂಜನೇಯನ ದರ್ಶನ ಪಡೆದ ಆರಗ

    ಬೆಂಗಳೂರು: ಸಚಿವರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಆಂಜನೇಯ ಸ್ವಾಮೀಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ಸನ್ನಿಧಾನಕ್ಕೆ ಅರಗ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇಂದಿಗೆ ಆರಗ ಅವರು ಪ್ರಮಾಣ ವಚನ ಸ್ವೀಕಾರ ಮಾಡಿ 1 ವರ್ಷ ಪೂರೈಕೆಯಾಗಿದೆ. ಈ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಮ್ ಕಾರ್ಡ್ ಇಲ್ಲದ ಮೊಬೈಲ್, ಖಾಲಿ ಹಾಳೆ ಕೈಗಿತ್ತು ಹೆತ್ತಮ್ಮನನ್ನೇ ಬಿಟ್ಟು ಹೋದ 

    ನಂತರ ಮಾಧ್ಯಮಗಳೊಂದಿಗೆ ಪಿಎಸ್‍ಐ ನೇಮಕಾತಿ ಪ್ರಕರಣ ಕುರಿತು ಮಾತನಾಡಿದ ಅವರು, ಸಿಐಡಿ ತನಿಖೆ ಮುಗಿದ ಕೂಡಲೇ ಪರೀಕ್ಷೆ ದಿನಾಂಕ ಪ್ರಕಟ ಮಾಡ್ತೀವಿ. ಪ್ರಕರಣದಲ್ಲಿ ಯಾರು ಇದ್ದಾರೋ ಅವ್ರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕೊಡೋದಿಲ್ಲ. 545 ಪೋಸ್ಟ್ ನೇಮಕಾತಿ ಅಧಿಸೂಚನೆ ರದ್ದು ಆಗೋದಿಲ್ಲ. ಆದ್ರೆ ಹೊಸದಾಗಿ ಪರೀಕ್ಷೆ ಮಾಡ್ತೀವಿ. ಅಭ್ಯರ್ಥಿಗಳು ವಯಸ್ಸಿನ ಬಗ್ಗೆ ಭಯ ಬೀಳೋ ಅವಕಾಶ ಇಲ್ಲ ಎಂದು ಭರವಸೆ ಕೊಟ್ಟರು.

    545 ಪೋಸ್ಟ್ ನೇಮಕಾತಿ ಅಧಿಸೂಚನೆ ಅವ್ರಿಗೆ ವಯಸ್ಸಿನ ಸಡಿಲಿಕೆ ಕೊಡಲಾಗುತ್ತದೆ. ಹೀಗಾಗಿ ಯಾರು ಆತಂಕ ಪಡುವ ಅವಶ್ಯತೆ ಇರೋದಿಲ್ಲ. ಹೊಸದಾಗಿ ಮತ್ತೆ 5 ಸಾವಿರ ಪೋಸ್ಟ್ ಕಾನ್ಸ್‍ಸ್ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳ್ತೀವಿ. 545 ಹುದ್ದೆ ಬಿಟ್ಟು 450 PSI ಗಳ ನೇಮಕಾತಿ ಹೊಸದಾಗಿ ಪ್ರಕ್ರಿಯೆ ಪ್ರಾರಂಭ ಮಾಡ್ತೀವಿ. ನಮ್ಮ ಅವಧಿಯಲ್ಲಿ ಹೇಗೆ ಎಕ್ಸಾಂ ಮಾಡೋದು ಅಂತ ತೋರಿಸಿಕೊಡ್ತೀವಿ ಎಂದು ಸವಾಲು ಹಾಕಿದರು. ಇದನ್ನೂ ಓದಿ:  ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ 

    ಹರ್ಷ ಕೊಲೆ ಆರೋಪಿಗಳು ವೀಡಿಯೋ ನೋಡಿ ನನಗೆ ತುಂಬಾ ನೋವಾಯ್ತು. ಕೂಡಲೇ ಕ್ರಮ ತೆಗೆದುಕೊಂಡು ಜೈಲಿನ 15 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ಎತ್ತಂಗಡಿ ಮಾಡಲಾಗಿದೆ. ಈಗ ಜೈಲಿನಲ್ಲಿ ಹೊಸ ಸಿಬ್ಬಂದಿ ಇದ್ದಾರೆ. ಜೈಲಿನ ವ್ಯವಸ್ಥೆ ಸಂಪೂರ್ಣವಾಗಿ ಬದಲಾವಣೆ ಮಾಡ್ತಿದ್ದೇವೆ. ಪರಪ್ಪನ ಅಗ್ರಹಾರ ಜೈಲಿಗೆ ಜಾಮರ್ ಅಳವಡಿಕೆ ಮಾಡೇ ಮಾಡ್ತೀವಿ. 2-3 ತಿಂಗಳ ಒಳಗೆ ಜಾಮರ್ ಹಾಕುವ ಪ್ರಕ್ರಿಯೆ ಮುಗಿಯುತ್ತದೆ. ಯಾರಿಗೂ ಕಾಲ್ ಮಾಡೊದಕ್ಕೂ ಆಗಬಾರದು. ಅಕ್ರಮ ಚಟುವಟಿಕೆಗಳಿಗೆ ನಿಯಂತ್ರಣ ಹಾಕೋ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ತಿದ್ದೇವೆ ಎಂದು ಶಪತ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ರದ್ದು ಮಾಡಬೇಕು: ಮುತಾಲಿಕ್

    ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ರದ್ದು ಮಾಡಬೇಕು: ಮುತಾಲಿಕ್

    ಧಾರವಾಡ: ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ಅನ್ನು ರದ್ದು ಮಾಡಬೇಕು. ಮೊದಲು ಮದರಸಾಗಳಲ್ಲಿ ಓದುತ್ತಿರುವವರನ್ನು ಹೊರಗಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

    ಜಾಮಿಯಾ ಮಸೀದಿಯಲ್ಲಿ ಪುಸ್ತಕ ಪತ್ತೆಯಾಗಿರುವ ಸಂಬಂಧ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ಅನ್ನು ರದ್ದು ಮಾಡಿ, ಮಸೀದಿಯನ್ನ ತೆರವುಗೊಳಿಸಬೇಕು. ಪ್ರತಿ ಶನಿವಾರ ಅಲ್ಲಿ ಆಂಜನೇಯ ದೇವರ ಪೂಜೆಗೆ ಅವಕಾಶ ಕೊಡಬೇಕು. ದಾಖಲೆ ಸಮೇತ ಅವರನ್ನ ಹೊರಗೆ ಹಾಕಬೇಕು ಅನ್ನೋದೇ ನಮ್ಮ ಬೇಡಿಕೆ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

    ಅಲ್ಲದೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ದೇವಸ್ಥಾನ ಅನ್ನೋ ದಾಖಲೆ ಹೊರಬಿದ್ದಿದೆ. ಅದು ದೇವಸ್ಥಾನ ಅನ್ನೋದಕ್ಕೆ ಸಾಕ್ಷಿಯಾಗಿ ದಾಖಲೆ ದೊರೆತಿದೆ. ಅಲ್ಲಿ ನಾಗರ ಚಿಹ್ನೆ, ಕಲ್ಯಾಣಿ, ಗರುಡ ಚಿಹ್ನೆಯೂ ಇದೆ. ಅದರ ಜೊತೆಗೆ ಟಿಪ್ಪು ಸುಲ್ತಾನನೇ ಕೆಡವಿದ್ದು ಅನ್ನೋದಕ್ಕೆ ಮತ್ತೊಂದು ಪೂರಕ ದಾಖಲೆ ಸಿಕ್ಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಮೂಡಲ ಆಂಜನೇಯ ದೇವಸ್ಥಾನದ `ಸುಪ್ರಭಾತ’ ಅನ್ನೋ ಪುಸ್ತಕ ಈಗ ಪತ್ತೆಯಾಗಿದೆ. ಅದರಲ್ಲಿ ಎಲ್ಲ ಮಾಹಿತಿಯೂ ದಾಖಲಾಗಿದೆ. 70 ವರ್ಷಗಳ ಹಿಂದೆ ಪ್ರಕಟವಾದ ಈ ಪುಸ್ತಕದಲ್ಲಿ ಆಂಜನೇಯ ದೇವಸ್ಥಾನದ ಚಿತ್ರ ಇದೆ. ಅಲ್ಲದೆ ದೇವಸ್ಥಾನದಿಂದ ನಾರಾಯಣ ಮೂರ್ತಿ ಎನ್ನುವವರ ಕೈ ಕತ್ತರಿಸಿ, ಅಲ್ಲಿದ್ದ ಮೂರ್ತಿಯನ್ನ ನೀರಿನ ಗುಂಡಿಯಲ್ಲಿ ಎಸೆದಿದ್ದಾರೆ. ಇದೆಲ್ಲವೂ ದಾಖಲೆಯಾಗಿದೆ ಮತ್ತೇನು ಬೇಕು. ಈ ದಾಖಲೆಗಳನ್ನೇ ಆಧಾರವಾಗಿಟ್ಟುಕೊಂಡು ಪರಿಶೀಲನೆ ಮಾಡಬೇಕು ಎಂದು ಮುತಾಲಿಕ್ ಒತ್ತಾಯಿಸಿದ್ದಾರೆ.

    ಟಿಪ್ಪು ಸುಲ್ತಾನ್ 7 ಕೊಪ್ಪರಿಗೆ ಚಿನ್ನಾಭರಣ ಕದ್ದು ಅದರಿಂದಲೇ ಮಸೀದಿ ಕಟ್ಟಿದ್ದಾನೆ. ವಿಜಯನಗರದ ತಿಮ್ಮಣ್ಣ ನಾಯಕ ಅದನ್ನ ಕಟ್ಟಿದ ಅನ್ನೋ ಉಲ್ಲೇಖ ಇದೆ ಎಂದು ಹೇಳಿದ್ದಾರೆ.

  • ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯಲ್ಲಿ ಆಂಜನೇಯಸ್ವಾಮಿ ಪ್ರಾರ್ಥನೆ- ವೀಡಿಯೋ ವೈರಲ್

    ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯಲ್ಲಿ ಆಂಜನೇಯಸ್ವಾಮಿ ಪ್ರಾರ್ಥನೆ- ವೀಡಿಯೋ ವೈರಲ್

    ಮಂಡ್ಯ: ಜಾಮಿಯಾ ಮಸೀದಿಯಲ್ಲಿ ಇಬ್ಬರು ಹನುಮ ಭಕ್ತರು ಆಂಜನೇಯಸ್ವಾಮಿ ಪ್ರಾರ್ಥನೆ ಮಾಡಿರುವ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.

    ಶನಿವಾರ ಶ್ರೀರಂಗಪಟ್ಟಣ ಚಲೋಗೆ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಟ್ಟೆಚ್ಚರ ವಹಿಸಿದ್ದರು. ಆದರೂ ನೂರಾರು ಹಿಂದೂ ಕಾರ್ಯಕರ್ತರು ಬೈಕ್ ಮೂಲಕ ಶ್ರೀರಾಮ ಘೋಷಣೆ ಕೂಗುತ್ತಾ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದರು. ಆದರೆ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಕಿರಂಗೂರು ಬಳಿ ತಡೆದಿದ್ದರು.

    ಆದರೂ ಅಲ್ಲೇ ಇರುವ ಬನ್ನಿಮಂಟಪದಲ್ಲಿ ಆಂಜನೇಯಸ್ವಾಮಿ ಪೂಜೆ ಸಲ್ಲಿಸಿ, ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು. ಜೈ ಶ್ರೀರಾಮ್, ಜೈ ಆಂಜನೇಯ ಎಂದು ಘೋಷಣೆ ಕೂಗಿಕೊಂಡು ಹಿಂದೂ ಕಾರ್ಯಕರ್ತರು ಕುಣಿದು, ಮಂಗಳಾರತಿ ಮಾಡಿ ಪೂಜೆ ಮಾಡಿದರು. ಆದರೆ ಇಬ್ಬರು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಪ್ರಾರ್ಥನೆ ಮಾಡಿರುವ ವೀಡಿಯೋವನ್ನು ಹಿಂದೂ ಮುಖಂಡರು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಹಿಂದೂ ಸಂಘಟನೆ ಮುಖಂಡರು ಮಾತನಾಡಿ, ಮೂಡಲಬಾಗಿಲು ಆಂಜನೇಯ ದೇವಾಲಯದಲ್ಲಿ ಹನುಮಾನ್ ಚಾಲೀಸಾವನ್ನು ನಾವು ಪಠಿಸಿದ್ದೇವೆ. ಇಬ್ಬರು ಹಿಂದೂ ಸಂಘಟನೆ ಮುಖಂಡರು ದೇವಾಲಯದ ಒಳಗೆ ಕೂತು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ನಾವು ಈ ಹೋರಾಟದಲ್ಲಿ ಮೊದಲು ಗೆಲವು ಸಾಧಿಸಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಸೀದಿಯೋ, ಮಂದಿರವೋ ಕೋರ್ಟ್‍ನಲ್ಲಿ ನೋಡುತ್ತೇವೆ – ಮೊದಲು ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ

    ಶ್ರೀರಂಗಪಟ್ಟಣ ಚಲೋ ಇಂದಿಗೆ ಅಂತ್ಯವಲ್ಲ. ದೇವಾಲಯ ನಮ್ಮ ವಶಕ್ಕೆ ಪಡೆಯುವವರೆಗೂ ಹೋರಾಟ ಇರುತ್ತೆ. ಮೂಡಲಬಾಗಿಲುನಲ್ಲಿ ಆಂಜನೇಯ ದೇವಸ್ಥಾನ ನಿರ್ಮಾಣ ಮಾಡುತ್ತೇವೆ ಎಂದು ಹಿಂದೂ ಮುಖಂಡರು ಘೋಷಣೆ ಕೂಗಿದರು.

    ಜೂನ್ ತಿಂಗಳ ಅಂತ್ಯಕ್ಕೆ ನಮ್ಮ ಬೇಡಿಕೆ ಈಡೇರದಿದ್ದರೆ ನಾಡಿನಾದ್ಯಂತ ಎಲ್ಲಾ ಕಡೆಯಿಂದ ಹನುಮ ಭಕ್ತರು ದೇವಸ್ಥಾನಕ್ಕೆ ಬರಲಿದ್ದಾರೆ. ಮದರಸಾ ಬಂದ್ ಆಗಲೇಬೇಕು. ಇಲ್ಲದೆ ಇದ್ದರೆ ಯಾವುದೇ ಸೂಚನೆ ಕೊಡದೇ ದೇವಸ್ಥಾನಕ್ಕೆ ಬಂದು ಮದರಸಾ ಖಾಲಿ ಮಾಡಿಸುತ್ತೇವೆ. ಅವತ್ತು ನಡೆಯುವ ಎಲ್ಲಾ ಘಟನೆಗಳಿಗೂ ಮಂಡ್ಯ ಜಿಲ್ಲಾಡಳಿತ ಹೊಣೆ ಎಂದು ಹಿಂದೂ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಶ್ರೀರಂಗಪಟ್ಟಣ ಮಂದಿರ ಚಲೋ ಕರೆ ಹಿನ್ನೆಲೆಯಲ್ಲಿ ಜಾಮಿಯಾ ಮಸೀದಿಗೆ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು. ಈ ಇತಿಹಾಸ ಪ್ರಸಿದ್ಧ ಮಸೀದಿಯನ್ನು ವೀಕ್ಷಿಸಲು ರಾಜ್ಯವಲ್ಲದೆ ಹೊರ ರಾಜ್ಯದಿಂದಲೂ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದರು. ಆದರೆ ಇಂದಿನಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೂ ಮಸೀದಿಗೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ.