Tag: ಆಂಟಿ ಲವ್‌

  • 55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

    55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

    ಚಿಕ್ಕಮಗಳೂರು: 33ರ ಯುವಕನಿಗೆ 55ರ ಆಂಟಿ (Aunty) ಜೊತೆಗಿದ್ದ ಅಕ್ರಮ ಸಂಬಂಧದ ಹಿನ್ನೆಲೆ ಆಕೆ ಗಂಡನನ್ನ ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ಪ್ರೇಮಿ ಸೇರಿ ಮೂವರನ್ನ ಪೊಲೀಸರು (Chikkamagaluru Police) ಹೆಡೆಮುರಿ ಕಟ್ಟಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ನಡೆದಿದೆ.

    ಮೃತನನ್ನ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದ ಹಿಂದೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಅನಾಮಧೇಯ ವ್ಯಕ್ತಿಯ ಸುಟ್ಟು ಕರಕಲಾಗಿದ್ದ ದೇಹದ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ನಾಪತ್ತೆ ಪ್ರಕರಣ. ಅನಾಮಧೇಯ ವ್ಯಕ್ತಿಯ ಮೃತದೇಹದ ಪ್ರಕರಣದ ಬೆನ್ನೆತ್ತಿದ್ದ ಕಡೂರು ಪೊಲೀಸರಿಗೆ ರೋಚಕ ತಿರುವು ಸಿಕ್ಕಿತ್ತು. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್‌ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್‌

    33ರ ಯುವಕನಿಗೆ 55ರ ಆಂಟಿ ಜೊತೆಗಿದ್ದ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಯುವಕ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ. ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್‌ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 3 ಜನ ಆರೋಪಿಗಳು ಕಡೂರು ಪೊಲೀಸರ ಅತಿಥಿಯಾಗಿದ್ದಾರೆ. ಇದನ್ನೂ ಓದಿ: ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು

    ಕಡೂರು ಪಟ್ಟಣದ ನಿವಾಸಿ ಮೀನಾಕ್ಷಮ್ಮ ಎಂಬುವರು ಠಾಣೆಗೆ ಹಾಜರಾಗಿ ತನ್ನ ಗಂಡ ಸುಬ್ರಹ್ಮಣ್ಯ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಪೊಲೀಸರು ತನಿಖೆಯನ್ನ ತೀವ್ರ ಗೊಳಿಸಿದ್ದರು. ಕೊಲೆಯಾದ ವ್ಯಕ್ತಿಯ ಗುರುತು ಹಾಗೂ ಕೊಲೆ ಆರೋಪಿಗಳ ಪತ್ತೆ ಹಾಗೂ ಕಾಣೆಯಾದ ಸುಬ್ರಹ್ಮಣ್ಯರವರ ಪತ್ತೆ ಸಂಬಂಧ ಕಡೂರು ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಯನ್ನೊಳಗೊಂಡ 2 ಪ್ರತ್ಯೇಕ ತಂಡ ನೇಮಕ ಮಾಡಲಾಗಿತ್ತು. ಇದನ್ನೂ ಓದಿ:  ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

    ಎರಡೂ ಪ್ರಕರಣಗಳ ಸಂಬಂಧ ತನಿಖೆ ವೇಳೆ ತಾಂತ್ರಿಕ ಹಾಗೂ ವಿವಿಧ ಆಯಾಮಗಳ ತನಿಖೆಯಲ್ಲಿ ಕಾಣೆ ಹಾಗೂ ಕೊಲೆಯಾದ ವ್ಯಕ್ತಿ ಒಬ್ಬನೇ ಅನ್ನೋದು ಪೊಲೀಸರಿಗೆ ಖಚಿತವಾಗಿತ್ತು. ತನಿಖೆ ಮುಂದುವರಿದು ಕಡೂರು ಪಟ್ಟಣದ ಪ್ಲೇಗಿನಮ್ಮ ದೇವಸ್ಥಾನದ ಹತ್ತಿರದ ವಾಸಿ ಪ್ರದೀಪ್ ಆಚಾರ್, ಸಿದ್ದೇಶ್ ಹಾಗೂ ವಿಶ್ವಾಸ್ ರನ್ನು ವಶಕ್ಕೆ ಪಡೆದು ಕೂಲಂಕಶವಾಗಿ ವಿಚಾರಣೆಗೊಳಪಡಿಸಿದಾಗ ಕೊಲೆಗೆ ಖಚಿತ ಕಾರಣ ತಿಳಿದು ಬಂದಿದೆ.

    ಮೊದಲನೇ ಆರೋಪಿ ಪ್ರದೀಪ್‌ಗೂ ಕೊಲೆಯಾದ ವ್ಯಕ್ತಿಯ ಹೆಂಡತಿಗೂ ಅಕ್ರಮ ಸಂಬಂಧವಿತ್ತು. ಈ ವಿಚಾರದಲ್ಲಿ ಕೊಲೆಯಾದ ವ್ಯಕ್ತಿ ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಎಂದು ಪ್ರದೀಪ್ ಸ್ನೇಹಿತರಿಗೆ ಹಣದ ಆಮೀಷವೊಡ್ಡಿ ಅವರ ಸಹಾಯ ಪಡೆದು ಕಂಸಾಗರ ಗೇಟ್ ಬಳಿ ಮಾರುತಿ ಓಮಿನಿ ಕಾರಿನಲ್ಲಿ ಸುಬ್ರಹ್ಮಣ್ಯ ಅವರನ್ನ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ಶವವನ್ನು ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟುಹಾಕಿದ್ದಾಗಿ ತನಿಖೆಯಿಂದ ತಿಳಿದುಬಂದಿದೆ. 3 ಜನ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

  • ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ – ಪ್ರಜ್ವಲ್‌ ವಿರುದ್ಧ ದೂರು

    ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ – ಪ್ರಜ್ವಲ್‌ ವಿರುದ್ಧ ದೂರು

    – 2 ಮಕ್ಕಳ ತಾಯಿಯೊಂದಿಗೆ ಯುವಕನ ಪ್ರೇಮ್‌ ಕಹಾನಿ

    ಬೆಂಗಳೂರು: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನು ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗುವುದಿಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ ಅನ್ನೋ ಆತಂಕ. ಆದರೀಗ ಅದೆಲ್ಲದಕ್ಕೂ ಆನ್‌ಲೈನ್ ತಂತ್ರಜ್ಞಾನ ದಾರಿಮಾಡಿಕೊಟ್ಟಿದೆ. ಆದ್ರೆ ಇದರಿಂದ ಅನುಕೂಲ ಆಗುವುದಕ್ಕಿಂತ ಅನಾನುಕೂಲಕ್ಕೆ ದಾರಿ ಮಾಡಿಕೊಳ್ಳುತ್ತಿರುವುದೇ ಹೆಚ್ಚು ಅನ್ನೋದಕ್ಕೆ ಬೆಂಗಳೂರಿನಲ್ಲಿ (Bengaluru) ನಡೆದಿರುವ ಆಂಟಿ ಲವ್‌ ಪ್ರಕರಣವೊಂದು ಸಾಕ್ಷಿಯಾಗಿದೆ.

    ಈ ಆಷಾಢ ಕಳೆದು ಶ್ರಾವಣ ಬಂದ್ರೆ ಮದುವೆ ಆಗೇ ಆಗ್ತೀನಿ, ಶ್ರಾವಣ ಬರಲಿ ನಿನಗೆ ಬಾಳು ಕೊಡ್ತಿನಿ ಎಂದು ರೀಲ್ಸ್ ರಾಣಿಯನ್ನ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ 2 ಮಕ್ಕಳ ತಾಯಿಯನ್ನ ನಂಬಿಸಿ ಮೋಸ ಮಾಡಿರುವ ಘಟನೆ ನಡೆದಿದ್ದು, ಆರೋಪಿ ಪ್ರಜ್ವಲ್‌ ಎಂಬಾತನ ವಿರುದ್ಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ (Kengeri Police Station) ದೂರು ದಾಖಲಾಗಿದೆ. ಇದನ್ನೂ ಓದಿ: ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ: ವಿಜಯೇಂದ್ರ

    ಆಂಟಿಯೊಂದಿಗೆ ಪ್ರೇಮ್‌ ಕಹಾನಿಯೇ ಥ್ರಿಲ್ಲಿಂಗ್‌!
    ತನ್ನ ಗಂಡ ಹಲ್ಲೆ ಮಾಡುತ್ತಿದ್ದ ಅಂತ 13 ವರ್ಷಗಳ ಹಿಂದೆಯೇ ಗಂಡನನ್ನು ಬಿಟ್ಟಿದ್ದ ಮಹಿಳೆ ತವರು ಮನೆಯಿಂದಲೂ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. 8 ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು, ಜೀವನೋಪಾಯಕ್ಕಾಗಿ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಹೇಗೋ ಜೀವನ ನಡೆಯುತ್ತಿತ್ತು. ಇದಾದ ಸ್ವಲ್ಪ ದಿನಗಳಲ್ಲೇ ಬೇಸರ ಕಳೆಯಲು ರೀಲ್ಸ್‌ ಮಾಡುತ್ತಿದ್ದಳು. ಈ ವೇಳೆ ವಂಚಕ ಪ್ರಜ್ವಲ್‌ನ ಪರಿಚಯವಾಗಿದೆ. ಇದನ್ನೂ ಓದಿ: ವಿನೇಶ್ ಫೋಗಟ್‌ಗೆ ಮಧ್ಯಸ್ಥ ಮಂಡಳಿ ರಿಲೀಫ್ ನೀಡುತ್ತಾ? – ಒಲಿಂಪಿಕ್ಸ್ ಮುಗಿಯೋ ಮುನ್ನ ಸಿಎಎಸ್‌ನಿಂದ ತೀರ್ಪು

    ಮಹಿಳೆ ಮಾಡ್ತಿದ್ದ ಪ್ರತಿ ರೀಲ್ಸ್‌ಗೂ ಪ್ರಜ್ವಲ್‌ ಹಾರ್ಟ್‌ ಎಮೋಜಿಯೊಂದಿಗೆ ಕಾಮೆಂಟ್‌ ಮಾಡ್ತಿದ್ದ. ಇದೇ ವೇಳೆ ಇಬ್ಬರಿಗೂ ಪರಿಚಯವಾಗಿ ಕೊನೆಗೆ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಆಕೆಗೆ ಮದ್ವೆ ಆಗಿರುವುದು ಗೊತ್ತಿದ್ದರೂ ತಾನು ಬಾಳು ಕೊಡ್ತೀನಿ ಎಂದಿದ್ದ ಯುವಕ, ತನ್ನ ತಾಯಿ ಬಳಿಯೂ ಮದುವೆ ವಿಚಾರ ಪ್ರಸ್ತಾಪ ಮಾಡಿದ್ದನಂತೆ. ಮಹಿಳೆಗೆ ನಾನು ನೋಡಲು ಚೆನ್ನಾಗಿಲ್ಲ ನಿಂಗೆ ಮದ್ವೆಯಾಗಿದ್ದರೂ ಪರ್ವಾಗಿಲ್ಲ ನಾನು ಬಾಳು ಕೊಡ್ತಿನಿ ಎಂದು ಸಹ ಹೇಳಿದ್ದಾನೆ. ಶ್ರಾವಣ ಮಾಸದ ಬಳಿಕ ಮದ್ವೆಯಾಗ್ತೀನಿ ಅಂತ ಹೇಳಿದ್ದಾನೆ. ಅಲ್ಲದೇ ಆಕೆಯೊಂದಿಗೆ 3 ತಿಂಗಳು ಗುಟ್ಟಾಗಿ ಸಂಸಾರ ಕೂಡ ಮಾದಿದ್ದಾನೆ. ಮಕ್ಕಳನ್ನೂ ಚೆನ್ನಾಗಿ ನೋಡಿಕೊಂಡಿದ್ದಾನೆ. ಎಲ್ಲವೂ ಚೆನ್ನಾಗಿಯೇ ಇತ್ತು ಎನ್ನುವಾಗ ಪ್ರಜ್ವಲ್‌ ಆಕೆಯಿಂದ ದೂರವಾಗಲು ಬಯಸಿದ್ದಾನೆ.

    ನೀನು ನನಗೆ ಬೇಡ, ಹೋಗಿ ನಿನ್ನ ಹಳೇ ಗಂಡನ್ನ ಕರ್ಕೊಂಡು ಬಾ, ನಿನ್ನ ಮೇಲೆ ಅನುಮಾನ ಇದೆ ಅಂತ ಹೇಳಿದ್ದಾನೆ. ಸದ್ಯ ಪ್ರಜ್ವಲ್‌ ಬೇಕೇ ಬೇಕು ಅಂತ ಪಟ್ಟು ಹಿಡಿರುವ ಮಹಿಳೆ ಆತ ಮದುವೆಯಾಗಲಿಲ್ಲ ಅಂದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ದತ್ತಪೀಠಕ್ಕೆ ಡ್ರೆಸ್ ಕೋಡ್ ತನ್ನಿ- ಜಿಲ್ಲಾಡಳಿತಕ್ಕೆ ಶಾಖಾದ್ರಿ ಕುಟುಂಬ ಮನವಿ