Tag: ಆಂದೋಲನ

  • ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಂದೋಲನ, ರಾಹುಲ್ ವಿದೇಶಕ್ಕೆ ಪ್ರಯಾಣ

    ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಂದೋಲನ, ರಾಹುಲ್ ವಿದೇಶಕ್ಕೆ ಪ್ರಯಾಣ

    ನವದೆಹಲಿ: ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದೆ. ಆದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹಾರಲಿದ್ದಾರೆ ಎಂದು ವರದಿಯಾಗಿದೆ.

    ನವೆಂಬರ್ 1ರಿಂದ 8ರ ವರೆಗೆ ದೇಶಾದ್ಯಂತ ಸುಮಾರು 35 ಸುದ್ದಿಗೋಷ್ಠಿಗಳನ್ನು ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಎನ್‍ಡಿಎ ಅಧಿಕಾರಾವಧಿಯಲ್ಲಿ ಆರ್ಥಿಕತೆಯ ಕಳಪೆ ಸ್ಥಿತಿಯ ಕುರಿತು ರಾಷ್ಟ್ರವ್ಯಾಪಿ ಆಂದೋಲನ ನಡೆಸಲಾಗುತ್ತಿದೆ. ಇದರ ಭಾಗವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನವೆಂಬರ್ 5ರಿಂದ 15ರ ವರೆಗೆ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ.

    ಇದೇ ಸಂದರ್ಭದಲ್ಲಿ ಆದರೆ ಕೋರ್ಸ್‍ಗೆ ಹಾಜರಾಗಲು ರಾಹುಲ್ ಗಾಂಧಿ ವಿದೇಶಕ್ಕೆ ಹಾರುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಡೆಸುತ್ತಿರುವ ರಾಷ್ಟ್ರವ್ಯಾಪಿ ಅಂದೋಲನದ ಸಮಯಕ್ಕೆ ಹಾಜರಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿಯವರು ಇಂಡೋನೇಷ್ಯಾಕ್ಕೆ ತೆರಳಬಹುದು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಕುರಿತು ಖಚಿತಪಡಿಸಲು ಕಾಂಗ್ರೆಸ್ ಮುಖಂಡರು ಹಾಗೂ ಸಿಬ್ಬಂದಿ ನಿರಾಕರಿಸಿದ್ದಾರೆ.

    ಅಕ್ಟೋಬರ್ 21ರಂದು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಹುಲ್ ಗಾಂಧಿಯವರು ಕಾಂಬೋಡಿಯಾಕ್ಕೆ ಭೇಟಿ ನೀಡಿದ್ದರು. ಅದಾಗ್ಯೂ ಕೊನೆಯ ಹಂತದ ಪ್ರಚಾರದ ಸಂದರ್ಭದಲ್ಲಿ ಮರಳಿದ್ದರು.

    2014ರ ಚುನಾವಣೆಗೆ ಹೋಲಿಸಿದರೆ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ. ಆದರೆ ಈ ಕುರಿತು ರಾಹುಲ್ ಗಾಂಧಿ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಹೆಚ್ಚು ಬಲದಿಂದ ರಾಹುಲ್ ಗಾಂಧಿ ಅವರು ಮತ್ತೆ ರಾಜಕೀಯಕ್ಕೆ ಮರಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎ.ಕೆ.ಆ್ಯಂಟನಿ ಇತ್ತೀಚೆಗೆ ತಿಳಿಸಿದ್ದರು.

  • ವಿದ್ಯಾರ್ಥಿಗಳಿಂದ ಪ್ರತಿ ಭಾನುವಾರ ಸ್ವಚ್ಛತಾ ಆಂದೋಲನ

    ವಿದ್ಯಾರ್ಥಿಗಳಿಂದ ಪ್ರತಿ ಭಾನುವಾರ ಸ್ವಚ್ಛತಾ ಆಂದೋಲನ

    ಗದಗ: ಜಿಲ್ಲೆಯ ಸ್ವಚ್ಛತಾ ಯುವಸೇನೆ ತಂಡದ ಯುವಕರು ಪ್ರತಿ ರವಿವಾರ ಸ್ವಚ್ಛತಾ ಆಂದೋಲನಕ್ಕೆ ಮುಂದಾಗಿದ್ದಾರೆ.

    ಬೇರೆ ಬೇರೆ ಕಾಲೇಜಿನ ಸ್ನೇಹಿತರೆಲ್ಲ ಸೇರಿಕೊಂಡು ಈ ಒಂದು ಟೀಮ್ ಮಾಡಿಕೊಂಡಿದ್ದಾರೆ. ಗದಗ ಬೆಟಗೇರಿ ಅವಳಿ ನಗರದ ಸ್ವಚ್ಛ ಹಾಗೂ ಸೌಂದರ್ಯಕ್ಕಾಗಿ ಈ ಯುವಪಡೆ ಸುಂದರ ಕನಸು ಕಟ್ಟಿದ್ದಾರೆ. ಈ ನಿಟ್ಟಿನಲ್ಲಿ ಕಳೆದ ನಾಲ್ಕೈದು ವಾರಗಳಿಂದ ನಗರದ ಪ್ರಮುಖ ಬೀದಿಗಳು, ಗಾರ್ಡ್‍ಗಳು ಮತ್ತು ದೇವಸ್ಥಾನವನ್ನು ಸ್ವಚ್ಛಗೊಳಿಸಲಾಗುತ್ತಿದೆ.

    ಸುಮಾರು 30 ವಿದ್ಯಾರ್ಥಿಗಳು ನಿಸರ್ಗ ಯುವಪಡೆಯಲ್ಲಿ ಇದ್ದಾರೆ. ಪ್ರತಿ ರವಿವಾರ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಸ್ವಚ್ಛತೆಯ ಶ್ರಮದಾನ ಮಾಡುತ್ತಿದ್ದಾರೆ. ಸಲಿಕೆ, ಬುಟ್ಟೆ, ಗುದ್ದಲಿ ಹಾಗೂ ಇತರೆ ಸಲಕರಣೆಗಳನ್ನು ಹಿಡಿದು ಕ್ಲೀನ್ ಮಾಡುವ ಮೂಲಕ ಕಸ ವಿಲೇವಾರಿ ಬಗ್ಗೆ ಸ್ಥಳೀಯರಲ್ಲಿ ಜನ ಜಾಗೃತಿ ಮೂಡಿಸುತ್ತಿದ್ದಾರೆ.

    ಜನರು ಸ್ವಚ್ಛವಾಗಿ ಆರೋಗ್ಯವಾಗಿರಬೇಕು, ರೋಗರುಜಿನಗಳಿಂದ ದೂರವಿರಬೇಕು, ನಗರ ಸೌಂದರ್ಯ ಹೆಚ್ಚಿಸಬೇಕೆಂಬ ಉದ್ದೇಶ ನಮ್ಮದಾಗಿದೆ. ನಮ್ಮ ಜೊತೆ ಸ್ಥಳೀಯರು ಕೈಜೋಡಿಸಿ ಪ್ರೋತ್ಸಾಹಿಸಬೇಕು ಎಂದು ಸ್ವಚ್ಛತಾ ಯುವಪಡೆಯ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ.