Tag: ಆಂಧ್ರ ಪ್ರದೇಶ

  • ಸಿ.ಕೆ.ನಾಯ್ಡು ಟ್ರೋಫಿ: ಆಂಧ್ರ ಬೌಲರ್‌ಗಳ ದಾಳಿಗೆ ತತ್ತರಿಸಿದ ಕರ್ನಾಟಕ ಆರಂಭಿಕರು

    ಸಿ.ಕೆ.ನಾಯ್ಡು ಟ್ರೋಫಿ: ಆಂಧ್ರ ಬೌಲರ್‌ಗಳ ದಾಳಿಗೆ ತತ್ತರಿಸಿದ ಕರ್ನಾಟಕ ಆರಂಭಿಕರು

    ಬೆಳಗಾವಿ: ಇಲ್ಲಿನ ಕೆಎಸ್‍ಸಿಎ ಸಂಸ್ಥೆಯ ಮೈದಾನದಲ್ಲಿ ಭಾನುವಾರದಿಂದ ಆರಂಭವಾಗಿರುವ ಕರ್ನಾಟಕ ಹಾಗೂ ಆಂಧ್ರಪ್ರದೇಶ ನಡುವಿನ ಸಿ.ಕೆ.ನಾಯ್ಡು ಟ್ರೋಫಿ 23 ವರ್ಷದೊಳಗಿನ ಕ್ರಿಕೆಟ್ ಟೂರ್ನಿಯ ‘ಎ’ ಗುಂಪಿನ ಪಂದ್ಯದ 2ನೇ ದಿನದಾಟದಲ್ಲಿ ರಾಜ್ಯ ತಂಡ 8 ವಿಕೆಟ್‍ಗಳನ್ನು ಕಳೆದುಕೊಂಡು 238 ರನ್‍ಗಳಿಸಿದೆ. 43 ರನ್‍ಗಳ ಹಿನ್ನಡೆಯೊಂದಿಗೆ ಮೂರನೇ ದಿನದಾಟ ಕಾಯ್ದುಕೊಂಡಿದೆ.

    ಕರ್ನಾಟಕ ತಂಡ 13 ರನ್‍ಗಳಿಂದ ಸೋಮವಾರ ತನ್ನ ಮೊದಲ ಇನಿಂಗ್ಸ್ ನ ಮುಂದುವರಿಸಿತು. 2ನೇ ದಿನದಾಟದ ಆರಂಭದಲ್ಲಿ 7 ರನ್‍ಗಳಿಸಿ ಕ್ರೀಸ್‍ನಲ್ಲಿದ್ದ ಆರಂಭಿಕ ಶಿವಕುಮಾರ ಬಿ.ಯು 4 ರನ್ ಗಳಿಸಿ ಎ.ಪ್ರಣಯಕುಮಾರಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬ್ಯಾಟಿಂಗ್‍ಗಿಳಿದ ಎನ್.ಜಯೇಶ್ ಖಾತೆ ತೆರೆಯುವ ಮುನ್ನವೇ ಪಿ.ಪಿ.ಮನೋಹರ್ ಅವರ ಎಸೆತದಲ್ಲಿ ಪೆವಿಲಿಯನ್ ಸೇರಿದರು.

    ಮಧ್ಯಾಹ್ನದ ಚಹಾ ವಿರಾಮಕ್ಕೂ ಮುನ್ನ ಪಿ.ಪಿ.ಮೋಹನ ಹಾಗೂ ಎ.ಪ್ರಣಯಕುಮಾರ ದಾಳಿಗೆ ತತ್ತರಿಸಿದ ರಾಜ್ಯ ತಂಡ 57 ಓವರ್ ಗಳಲ್ಲಿ 127 ರನ್‍ಗಳಿಗೆ ತನ್ನ ಪ್ರಮುಖ 6 ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಉಪನಾಯಕ, ವಿಕೆಟ್ ಕೀಪರ್ ಸುಜಯ ಸಾತೇರಿ (69 ರನ್) ಹಾಗೂ ಅಂಕಿತ ಉಡುಪ (40 ರನ್) ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾದರು. ವಿನಾಯಕ್ ವೈಶಾಖ್ ಜೊತೆಗೆ 9ನೇ ವಿಕೆಟ್‍ಗೆ ಜೊತೆಯಾದ ಅಬ್ದುಲ್ ಹಸನ್ ಖಾಲಿದ್ 63 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 32 ರನ್‍ಗಳಿಸಿ 55 ರನ್‍ಗಳ ಜೊತೆಯಾಟವಾಡಿ ತಂಡದ ಮೊತ್ತ 230 ರನ್ ತನಕ ಹಿಗ್ಗಿಸಿದರು.

    ರಾಜ್ಯ ತಂಡದ ಆರಂಭಿಕ ಆಟಗಾರರು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಜಯ ಸಾತೇರಿ  ತಾಳ್ಮೆಯ ಆಟ ಹಾಗೂ ವಿನಾಯಕ್ ವೈಶಾಖ್ ಬಿರುಸಿನ ಹೊಡೆತಗಳೊಂದಿಗೆ 68 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 40 ರನ್‍ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಆಂಧ್ರಪ್ರದೇಶ ತಂಡದ ಪಿ.ಪಿ.ಮೋಹನ 3 ವಿಕೆಟ್, ಎ.ಪ್ರಣಯಕುಮಾರ 2 ವಿಕೆಟ್ ಹಾಗೂ ಗಿರಿನಾಥ್ ರೆಡ್ಡಿ 2 ವಿಕೆಟ್‍ಗಳನ್ನು ಪಡೆದುಕೊಂಡು ರಾಜ್ಯ ತಂಡಕ್ಕೆ ಮಾರಕವಾದರು. ದಿನದಾಟದ ಅಂತ್ಯಕ್ಕೆ ವಿನಾಯಕ್ ವೈಶಾಖ್ 40 ರನ್ ಹಾಗೂ ಅಬ್ದುಲ್ ಹಸನ್ ಖಾಲಿದ 32 ರನ್‍ಗಳಿಸಿ ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

    ಸ್ಕೋರ್ ವಿವರ:

    ಆಂಧ್ರಪ್ರದೇಶ – ಮೊದಲ ಇನ್ನಿಂಗ್ಸ್ 281 ಆಲೌಟ್
    ಕರ್ನಾಟಕ – ಮೊದಲ ಇನಿಂಗ್ಸ್- 238/8
    ಅಂಕಿತ ಉಡುಪ- 40 ರನ್
    ಸುಜಯ ಸಾತೇರಿ- 69 ರನ್
    ವಿನಾಯಕ್ ವೈಶಾಖ್ ಅಜೇಯ- 40 ರನ್
    ಅಬ್ದುಲ್ ಹಸನ್ ಖಾಲಿದ ಅಜೇಯ- 32 ರನ್
    ಇತರೆ 21 ರನ್ (ಪಿ.ಪಿ.ಮನೋಹರ್ 47 ಕ್ಕೆ 3, ಎ.ಪ್ರಣಯಕುಮಾರ 39ಕ್ಕೆ 2, ಗಿರಿನಾಥ್ ರೆಡ್ಡಿ 47ಕ್ಕೆ 2 ವಿಕೆಟ್)

  • ಆಂಧ್ರದಲ್ಲಿಯೂ ಸಲಾಂ ರಾಖಿ ಭಾಯ್- ಸೆಲ್ಫಿಗಾಗಿ ಮುಗಿಬಿದ್ದ ಸಾವಿರಾರು ಫ್ಯಾನ್ಸ್

    ಆಂಧ್ರದಲ್ಲಿಯೂ ಸಲಾಂ ರಾಖಿ ಭಾಯ್- ಸೆಲ್ಫಿಗಾಗಿ ಮುಗಿಬಿದ್ದ ಸಾವಿರಾರು ಫ್ಯಾನ್ಸ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್’ ಸಿನಿಮಾದ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅಲ್ಲದೇ ವಿಶ್ವದ ಮೂಲೆ-ಮೂಲೆಯಲ್ಲಿ ಅವರಿಗಾಗಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಇದೀಗ ಯಶ್ ಅವರನ್ನು ನೋಡಲು ಸರತಿ ಸಾಲಿನಲ್ಲಿ ನಿಂತಿರುವುದನ್ನು ಆಂಧ್ರದಲ್ಲಿ ಕಾಣಬಹುದಾಗಿದೆ.

    ಆಂಧ್ರದ ರಾಯಲ ಸೀಮೆಯ ಕಡಪದಲ್ಲಿ ‘ಕೆಜಿಎಫ್ ಚಾಪ್ಟರ್-2’ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಿದ್ದು, ಶೂಟಿಂಗ್ ಸ್ಪಾಟ್‍ಗೆ ಸ್ಥಳೀಯರು ಭೇಟಿ ಕೊಟ್ಟಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಮಂದಿ ರಾಕಿಭಾಯ್ ಜೊತೆ ಸೆಲ್ಫಿಗೆ ಬೇಡಿಕೆ ಇಟ್ಟಿದ್ದಾರೆ. ಅಭಿಮಾನಿ ದೇವರುಗಳ ಒತ್ತಾಯಕ್ಕೆ ಮಣಿದ ಯಶ್, ಶೂಟಿಂಗ್‍ಗೆ ಕೊಂಚ ಬ್ರೇಕ್ ಹಾಕಿ ಪೊಲೀಸರ ನೆರವಿನೊಂದಿಗೆ ಪ್ರತಿಯೊಬ್ಬರಿಗೂ ಸೆಲ್ಫಿ ಕೊಟ್ಟಿದ್ದಾರೆ.

    ‘ಕೆಜಿಎಫ್ ಚಾಪ್ಟರ್-2’ ಗಾಗಿ ಎದುರು ನೋಡುತ್ತಿರುವ ಅಭಿಮಾನಿಗಳು ರಾಕಿಂಗ್ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಸೆಲಬ್ರೆಟ್ ಮಾಡುವುದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜನವರಿ 8 ರಂದು ಯಶ್ ಅವರ ಹುಟ್ಟುಹಬ್ಬವಿದೆ. ಈಗಾಗಲೇ ಅಭಿಮಾನಿಯೊಬ್ಬ 5000 ಕೆ.ಜಿ ತೂಗುವ ಕೇಕ್ ಅನ್ನು ರೆಡಿ ಮಾಡಿಸುತ್ತಿದ್ದಾರೆ. ಸದ್ಯಕ್ಕೆ ಯಶ್ ‘ಕೆಜಿಎಫ್ 2’ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಈ ಸಿನಿಮಾವನ್ನು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

  • ರಾಯಚೂರಿನಿಂದ ಹೊಸ ವರ್ಷಾಚರಣೆಗೆ ತೆರಳಿದ್ದವರು ಆಂಧ್ರದಲ್ಲಿ ನದಿಪಾಲು

    ರಾಯಚೂರಿನಿಂದ ಹೊಸ ವರ್ಷಾಚರಣೆಗೆ ತೆರಳಿದ್ದವರು ಆಂಧ್ರದಲ್ಲಿ ನದಿಪಾಲು

    – ಮೂವರು ಬಾಲಕಿಯರು ಸೇರಿ ನಾಲ್ವರು ಸಾವು

    ರಾಯಚೂರು: ಹೊಸ ವರ್ಷಾಚರಣೆಯನ್ನು ಸಂಭ್ರಮಿಸಲು ನದಿದಂಡೆಗೆ ತೆರಳಿದ್ದ ರಾಯಚೂರಿನ ಮೂವರು ಬಾಲಕಿಯರು ಸೇರಿದಂತೆ ಒಟ್ಟು ನಾಲ್ವರು ಆಂಧ್ರ ಪ್ರದೇಶದಲ್ಲಿ ನದಿ ಪಾಲಾಗಿದ್ದಾರೆ.

    ಮದಿಹಾ (12), ಫರಿಯಾ (10) ಮತ್ತು ಲೋದಾ (10) ಮೃತ ದುರ್ದೈವಿಗಳು. ನದಿಗೆ ಬಿದ್ದ ಅಕ್ಕನ ಮಕ್ಕಳನ್ನ ಕಾಪಾಡಲು ಹೋದ ನೂರ್ ಅಹ್ಮದ್ (35) ಸಹ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಸಿದ್ದವಟಂನಲ್ಲಿ ಈ ಘಟನೆ ನಡೆದಿದೆ.

    ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಆಂಧ್ರದ ಸಿದ್ದವಟಂನಲ್ಲಿನ ಅಜ್ಜಿಯ ಮನೆಗೆ ತೆರಳಿದ್ದರು. ಅಲ್ಲಿ ಮಾವ ನೂರ್ ಅಹ್ಮದ್ ಜೊತೆ ಪೆನ್ನಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನದಿಯಲ್ಲಿ ಮಕ್ಕಳು ಮುಳುಗಿದ್ದಾರೆ. ಮಕ್ಕಳನ್ನ ಕಾಪಾಡಲು ಹೋದ ನೂರ್ ಅಹ್ಮದ್ ಸಹ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ.

    ಮೃತ ಮಕ್ಕಳು ರಾಯಚೂರು ನಗರದ ಮೆಥೋಡಿಸ್ಟ್ ಚರ್ಚ್ ಪ್ರದೇಶದ ಇನಾಂದಾರ್ ಕಾಲೋನಿ ನಿವಾಸಿ ಗೌಸ್‍ಪೀರ್ ಎಂಬವರ ಮಕ್ಕಳು ಎಂದು ತಿಳಿದು ಬಂದಿದೆ. ಗೌಸ್‍ಪೀರ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

  • ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

    ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

    – ಆಂಧ್ರ ಪ್ರದೇಶದ ಕುರಿ ಸಂತೆಗೆ ಮಾಜಿ ಸ್ಪೀಕರ್ ಭೇಟಿ

    ಕೋಲಾರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಹಾಗೂ 17 ಶಾಸಕರನ್ನು ಅನರ್ಹಗೊಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರೈತನಾಗಿ ಹೊಸ ವ್ಯಾಪಾರ ಶುರು ಮಾಡಿದ್ದಾರೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಕೆ.ಆರ್.ರಮೇಶ್ ಕುಮಾರ್ ಅವರು ಕೊಂಚ ರಾಜಕೀಯದಿಂದ ರಿಲ್ಯಾಕ್ಸ್ ಆಗಿದ್ದಾರೆ. ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಅವರು ಕುರಿ ಸಾಕಾಣಿಕೆ ಸೇರಿದಂತೆ ವ್ಯವಸಾಯದ ಕಡೆ ಗಮನ ಕೊಡಲು ಮುಂದಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ಅಂಗಾಲ ಕುರಿ ಸಂತೆಯಲ್ಲಿ ವ್ಯಾಪಾರ ಮಾಡುವ ಮೂಲಕ ರೈತರಾಗಿದ್ದಾರೆ.

    ರಮೇಶ್ ಕುಮಾರ್ ಅವರು ಸಂತೆಯಲ್ಲಿನ ಓಡಾಟ, ವ್ಯಾಪರದ ದೃಶ್ಯವನ್ನು ಬೆರೆ ಬೆಂಬಲಿಗರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರೈತರ ಗೆಟಪ್‍ನಲ್ಲಿ ರಮೇಶ್ ಕುಮಾರ್ ಅವರು ತಲೆಗೆ ಟವೆಲ್ ಸುತ್ತಿಕೊಂಡು ಸಾಮಾನ್ಯರಂತೆ ಸಂತೆಯಲ್ಲಿ ಕುರಿ ಖರೀದಿಸುವಲ್ಲಿ ಬ್ಯುಸಿಯಾಗಿರುವ ವಿಡಿಯೋ ಹಾಗೂ ಫೋಟೊಗಳು ವೈರಲ್ ಆಗುತ್ತಿವೆ.

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಹಿಂದಿನಿಂದಲೂ ಕುರಿ, ಕೋಳಿ ಸಾಕಾಣಿಕೆ ಸೇರಿದಂತೆ ವ್ಯವಸಾಯದಲ್ಲಿ ಹೆಚ್ವು ಆಸಕ್ತಿ ತೋರುತ್ತಾ ಬಂದಿದ್ದಾರೆ. ಹೀಗಾಗಿ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲೂಕಿನ ಅಂಗಾಲ ಶನಿವಾರ ಸಂತೆಯಲ್ಲಿ ಕುರಿ ವ್ಯಾಪಾರದಲ್ಲಿ ಬಿಸಿಯಾಗಿದ್ದರು.

  • 21 ದಿನಗಳಲ್ಲಿ ತೀರ್ಪು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    21 ದಿನಗಳಲ್ಲಿ ತೀರ್ಪು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    – ಆಂಧ್ರ ವಿಧಾನಸಭೆಯಲ್ಲಿ ಮಸೂದೆ ಪಾಸ್
    – ಜಗನ್‍ಗೆ ರಾಖಿ ಕಟ್ಟಿದ ಮಹಿಳಾ ಶಾಸಕಿಯರು

    ಅಮರಾವತಿ: ಅತ್ಯಾಚಾರ ಎಸಗಿದ ಕಾಮುಕರಿಗೆ ಕೇವಲ 21 ದಿನಗಳಲ್ಲಿ ತೀರ್ಪು ನೀಡುವ ಹಾಗೂ ಗಲ್ಲು ಶಿಕ್ಷೆ ವಿಧಿಸುವ ಮಹತ್ವದ ಆಂಧ್ರಪ್ರದೇಶ ದಿಶಾ ಮಸೂದೆ ವಿಧಾನಸಭೆಯಲ್ಲಿ ಪಾಸ್ ಆಗಿದೆ.

    ಈ ಮಸೂದೆಗೆ ರಾಜ್ಯಪಾಲರು ಅಂಕತ ಬಿದ್ದ ಬಳಿಕ ಕಾನೂನಾಗಿ ರೂಪುಗೊಳ್ಳಲಿದ್ದು, ಅತ್ಯಾಚಾರ ಎಸಗಿರುವುದು ಸಾಬೀತಾದಲ್ಲಿ ಮರಣದಂಡನೆ ಶಿಕ್ಷೆ ವಿಧಿಸುವ ಅವಕಾಶವನ್ನು ಮಸೂದೆ ಒಳಗೊಂಡಿದೆ. ಇಂತಹ ಪ್ರಕರಣ ಸಂಭವಿಸಿದಾಗ ಕೇವಲ 21 ದಿನಗಳಲ್ಲಿ ತೀರ್ಪು ಪ್ರಕಟಿಸಿ, ಕಠಿಣ ಶಿಕ್ಷೆ ವಿಧಿಸುವ ಅವಕಾಶವನ್ನು ಕಲ್ಪಿಸಿದೆ.

    ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಚಿವ ಸಂಪುಟ ಈ ಮಸೂದೆಗೆ ಬುಧವಾರ ಒಪ್ಪಿಗೆ ನೀಡಿತ್ತು. ಮಹಿಳೆಯರ ಮೇಲೆ ಅತ್ಯಾಚಾರದಂತಹ ಘೋರ ಅಪರಾಧಗಳನ್ನು ಎಸಗುವವರಿಗೆ ಗಲ್ಲು ಅಥವಾ ಕಠಿಣ ಶಿಕ್ಷೆ ವಿಧಿಸುವುದು ಇದರ ಉದ್ದೇಶವಾಗಿದೆ.

    ತೆಲಂಗಾಣದ ಸೈಬರಾಬಾದ್‍ನಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ನಂತರ ಜೀವಂತವಾಗಿ ಸುಡಲಾಗಿತ್ತು. ಪ್ರಕರಣದ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸ್ಥಳ ಪರಿಶೀಲನೆಗಾಗಿ ಆರೋಪಿಗಳನ್ನು ಸ್ಥಳಕ್ಕೆ ಕೊಂಡೊಯ್ದಾಗ ಪೊಲೀಸರ ಮೇಲೆಯೇ ದಾಳಿ ನಡೆಸಿ, ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಆಗ ಪೊಲೀಸರು ಎನ್‍ಕೌಂಟರ್ ಮೂಲಕ ಆರೋಪಿಗಳನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕಾಮುಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸ ಕಾನೂನು ರಚನೆಗೆ ಮುಂದಾಗಿದೆ.

    ಇತ್ತೀಚೆಗೆ ಈ ಕುರಿತು ಸದನದಲ್ಲಿ ಮಾತನಾಡಿದ್ದ ಸಿಎಂ ಜಗನ್‍ಮೋಹನ ರೆಡ್ಡಿ, ಅತ್ಯಾಚಾರ ಹಾಗೂ ಆಸಿಡ್ ದಾಳಿಯಂತಹ ಪ್ರಕರಣಗಳು ನಡೆದಾಗ ನಿರ್ಣಾಯಕ ಸಾಕ್ಷ್ಯಾಧಾರಗಳಿದ್ದಲ್ಲಿ ಅಂತಹ ಪ್ರಕರಣಗಳನ್ನು 14 ದಿನಗಳಲ್ಲಿ ವಿಚಾರಣೆ ನಡೆಸಿ, 21 ದಿನಗಳಲ್ಲಿ ಶಿಕ್ಷೆ ನೀಡಬೇಕು ಎಂದು ಹೇಳಿದ್ದರು.

    ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, 2019ರ ಮಹಿಳಾ ಮತ್ತು ಮಕ್ಕಳ ಕಾಯ್ದೆಯಡಿ ಪ್ರತಿ ಜಿಲ್ಲೆಯಲ್ಲಿ ವಿಶೇಷ ನ್ಯಾಯಾಲಯಗಳನ್ನು ತೆರೆಯಲು ಮುಂದಾಗಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಗೆ ಅವಮಾನವಾಗುವಂತಹ ಪೋಸ್ಟ್ ಗಳನ್ನು ಹಾಕಿದಲ್ಲಿ ಸೆಕ್ಷನ್ 354(ಇ) ಅಡಿ ಪ್ರಕರಣ ದಾಖಲಾಗುತ್ತದೆ. ಇಂತಹವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ.

    ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳಿಗೆ 10 ರಿಂದ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ ಪ್ರಕರಣ ತೀವ್ರವಾಗಿದ್ದಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಪೊಕ್ಸೊ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೂ ಜೈಲು ಶಿಕ್ಷೆಯನ್ನು ವಿಸ್ತರಿಸುವ ಕುರಿತು ಆಂಧ್ರ ಪ್ರದೇಶ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಮಸೂದೆ ಪಾಸ್ ಆಗುತ್ತಿದ್ದಂತೆ ವೈಎಸ್‍ಆರ್ ಕಾಂಗ್ರೆಸ್ಸಿನ ಶಾಸಕಿಯರು ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಅವರಿಗೆ ರಾಖಿ ಕಟ್ಟಿ ಸಂಭ್ರಮಕಿಸಿದರು.

  • ನದಿಗೆ ಹಾರಿದ ಮಹಿಳೆ- ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಎಎಸ್‍ಐ

    ನದಿಗೆ ಹಾರಿದ ಮಹಿಳೆ- ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಎಎಸ್‍ಐ

    ಹೈದರಾಬಾದ್: ಸೈಬರಾಬಾದ್ ಎನ್‍ಕೌಂಟರ್ ಮೂಲಕ ಹೈದರಾಬಾದ್ ಪೊಲೀಸರು ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದರು. ಅದೇ ರೀತಿ ಇದೀಗ ಎಎಸ್‍ಐ ಮಹಿಳೆಯ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಕೆ.ಮಾಣಿಕ್ಯಲ ರಾವ್ ಅವರು ನದಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ. ಯುವತಿ ಹಾರಿದ ಸೇತುವೆಯಿಂದಲೇ ಜಿಗಿದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಮಹಿಳೆಯು ಆತ್ಮಹತ್ಯೆ ಮಾಡಿಕೊಳ್ಳಲು ಸೇತುವೆ ಮೇಲಿಂದ ಜಿಗಿದಿದ್ದಳು. ಆಗ 58 ವರ್ಷದ ಎಎಸ್‍ಐ ನದಿಗೆ ಹಾರಿ ಮಹಿಳೆಯನ್ನು ಕಾಪಾಡಿದ್ದಾರೆ.

    ಕೆ.ಮಾಣಿಕ್ಯಲ ರಾವ್ ಅವರು ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಅವನಿಗಡ್ಡ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ನೋ ಆಕ್ಸಿಡೆಂಟ್ ಡೇ’ ನಿಮಿತ್ತ ಮಾಣಿಕ್ಯಲ ಅವರು ಸೇತುವೆ ಬಳಿ ಕಾರ್ಯನಿರ್ವಹಿಸುತ್ತಿದ್ದರು. ಆಗ ಮಹಿಳೆ ಸೇತುವೆ ಮೇಲೆ ನಿಂತಿದ್ದಳು. ಸ್ಥಳೀಯರು ಮಹಿಳೆ ಸೇತುವೆ ಮೇಲೆ ನಿಂತಿರುವುದನ್ನು ಕಂಡು ನದಿಗೆ ಜಿಗಿಯುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಆಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಣಿಕ್ಯಲ ಹಾಗೂ ಇವರ ಸಹೋದ್ಯೋಗಿ ಗೋಪಿರಾಜು ಸಹ ಅನುಮಾನ ಪಟ್ಟಿದ್ದರು. ಹೀಗಾಗಿ ಸೇತುವೆ ಬಳಿಯೇ ನಿಂತಿದ್ದರು. ಆದರೆ ಪೊಲೀಸರು ಸ್ಥಳಕ್ಕಾಗಮಿಸುವ ಹೊತ್ತಿಗೆ ಮಹಿಳೆ ಆಗಲೇ ಸೇತುವೆ ಮೇಲಿಂದ ಜಿಗಿದೇ ಬಿಟ್ಟಿದ್ದಳು.

    ಇದನ್ನು ಮಾಣಿಕ್ಯಲ ಅವರು ಗಮನಿಸಿ, ತಕ್ಷಣ ನದಿಗೆ ಹಾರಿದ್ದಾರೆ. ಸುಮಾರು 500 ಮೀಟರ್ ಈಜಿ ನಂತರ ಮಹಿಳೆಯನ್ನು ರಕ್ಷಿಸಿದ್ದಾರೆ. ಆಗ ಗೋಪಿರಾಜು ಅವರು ಮೀನುಗಾರರ ಬಳಿ ತೆರಳಿದ್ದು, ಮೀನುಗಾರರು ಘಟನಾ ಸ್ಥಳಕ್ಕೆ ದೋಣಿಯನ್ನು ತಂದಿದ್ದಾರೆ.

    ಕೊನೆಗೂ ಮಾಣಿಕ್ಯಲ ಅವರು ಮಹಿಳೆಯನ್ನು ರಕ್ಷಿಸಿದ್ದು, ನಂತರ ಅವರನ್ನು ಅವನಿಗಡ್ಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಸ್ಥಿತಿ ಸಹಜವಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ಎಸ್‍ಪಿ ರವೀಂದ್ರನಾಥ ಬಾಬು ಮಾಣಿಕ್ಯಲ ಅವರ ಸಾಹಸವನ್ನು ಹಾಡಿಹೊಗಳಿದ್ದಾರೆ. ಅಲ್ಲದೆ ಮಹಿಳೆ ಯಾಕೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಳು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • 60 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು – ಅತ್ಯಾಚಾರ ಎಸಗಿ ಕೊಲೆ

    60 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು – ಅತ್ಯಾಚಾರ ಎಸಗಿ ಕೊಲೆ

    ಅಮರಾವತಿ: ತೆಲಂಗಾಣದ ಪಶುವೈದ್ಯೆ ಅತ್ಯಾಚಾರ, ಕೊಲೆ ನಂತರ ಇದೀಗ ಆಂಧ್ರ ಪ್ರದೇಶ ಮತ್ತೊಂದು ಅಸಹ್ಯಕರ ಘಟನೆಗೆ ಸಾಕ್ಷಿಯಾಗಿದೆ.

    ಕಾಮುಕರು 60 ವರ್ಷದ ವೃದ್ಧೆಯನ್ನೂ ಬಿಡದೆ ಅತ್ಯಾಚಾರ ಎಸಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದು, ಅಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಘಟನೆ ನಡೆದಿದೆ.

    ಎಸ್‍ಪಿ ನಯೀಮ್ ಅಸ್ಮಿ ಅವರು ಮನೆಯನ್ನು ಪರಿಶೀಲಿಸಿದ್ದು, ಈ ವೇಳೆ ಮನೆತುಂಬಾ ಖಾರದ ಪುಡಿ ಚೆಲ್ಲಿದ್ದನ್ನು ಕಂಡು ಗಾಬರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    ಎಸ್‍ಪಿ ನಯೀಮ್ ಅಸ್ಮಿ ಅವರ ಪ್ರಕಾರ, ಕಳೆದ ರಾತ್ರಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಮೂವರು ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದೇವೆ. ಕೆಲವು ಸುಳಿವುಗಳು ಸಿಕ್ಕಿದ್ದು, ಮುಂದಿನ ತನಿಖೆಯನ್ನು ನಡೆಸುತ್ತಿದ್ದು, 12 ಗಂಟೆಗಳಲ್ಲಿ ನಾವು ಪ್ರಕರಣವನ್ನು ಬೇಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ಭಾನುವಾರ 70 ವರ್ಷದ ವೃದ್ಧೆಯನ್ನು ಅತ್ಯಾಚಾರ ಮಾಡಿದ ಪ್ರಕರಣ ಉತ್ತರ ಪ್ರದೇಶದ ಸೋನ್‍ಭದ್ರಾ ಜಿಲ್ಲೆಯಲ್ಲಿ ನಡೆದಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ವೃದ್ಧೆಯು ಒಬ್ಬಳೆ ಇದ್ದ ವೇಳೆ 27 ವರ್ಷದ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಸರ್ಕಲ್ ಆಫೀಸರ್ ಜ್ಞಾನ್ ಪ್ರಕಾಶ್ ಅವರು ಮಾಹಿತಿ ನೀಡಿದ್ದರು.

    ಡಿಸೆಂಬರ್ 2ರಂದು ಆರೋಪಿಯನ್ನು ಬಂಧಿಸಿದ್ದೆವು. ಅತ್ಯಾಚಾರ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಲಾಗಿತ್ತು. ವ್ಯಕ್ತಿಯು ವೃತ್ತಿಯಲ್ಲಿ ಬಡಗಿಯಾಗಿದ್ದ ವೃದ್ಧೆಯು ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದಳು ಎಂದು ವಿವರಿಸಿದರು.

    ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ ನಡೆದು ಐದು ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು. ತೆಲಂಗಾಣ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಹೈದರಾಬಾದ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  • ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಚಂದ್ರಬಾಬುಗೆ ಜಗನ್ ಪ್ರಶ್ನೆ

    ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಚಂದ್ರಬಾಬುಗೆ ಜಗನ್ ಪ್ರಶ್ನೆ

    ವಿಜಯವಾಡ: ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮವನ್ನಾಗಿ ಪರಿವರ್ತಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

    ಎಲ್ಲ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮಗಳನ್ನಾಗಿ ಪರಿವರ್ತಿಸುವ ಕುರಿತು ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಚಿಂತನೆ ನಡೆಸಿದ್ದಾರೆ. ಆದರೆ ಇದಕ್ಕೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ, ರಾಜಕಾರಣಿ ಪವನ್ ಕಲ್ಯಾಣ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ವಿಜಯವಾಡದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ವೇಳೆ ಇದಕ್ಕೆ ತಿರುಗೇಟು ನೀಡಿರುವ ಸಿಎಂ ಜಗನ್, ನಿಮ್ಮ ಮಕ್ಕಳು ಎಲ್ಲಿ ಕಲಿಯುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರೇ ನಿಮ್ಮ ಮಗ ಯಾವ ಮಾಧ್ಯಮದಲ್ಲಿ ಅಧ್ಯಯನ ಮಾಡಿದ್ದಾರೆ? ನಾಳೆ ನಿಮ್ಮ ಮೊಮ್ಮಗ ಯಾವ ಮಾಧ್ಯಮದಲ್ಲಿ ಅಧ್ಯಯನ ಮಾಡುತ್ತಾನೆ ಎಂದು ಪ್ರಶ್ನಿಸಿದ್ದಾರೆ.

    ಮಾತ್ರವಲ್ಲದೆ ಸರ್, ವೆಂಕಯ್ಯ ನಾಯ್ಡು ಅವರೇ ನಿಮ್ಮ ಮಗ ಮತ್ತು ಮೊಮ್ಮಕ್ಕಳು ಯಾವ ಮಧ್ಯಮದಲ್ಲಿ ಅಧ್ಯಯನ ಮಾಡಿದ್ದಾರೆ ಎಂದು ಕೇಳಿದ್ದಾರೆ. ಅಲ್ಲದೆ ಪವನ್ ಕಲ್ಯಾಣ್ ಅವರಿಗೂ ಇದೇ ರೀತಿಯ ಪ್ರಶ್ನೆ ಕೇಳಿದ್ದು, ನಿಮಗೆ ಮೂವರು ಪತ್ನಿಯರು, ನಾಲ್ಕೈದು ಮಕ್ಕಳಿದ್ದಾರೆ. ಅವರು ಓದುತ್ತಿರುವ ಶಾಲೆಗಳಲ್ಲಿ ಬೋಧನಾ ಮಾಧ್ಯಮ ಯಾವುದು ಎಂದು ಕೇಳಿದ್ದಾರೆ.

    ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಹಲವು ನಾಯಕರು ವಿರೋಧಿಸುತ್ತಿದ್ದಾರೆ. ಆ ಎಲ್ಲ ನಾಯಕರು ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಓದುತ್ತಿದ್ದಾರೆ ಎಂದು ಎದೆ ಮೇಲೆ ಕೈ ಇಟ್ಟುಕೊಂಡು ಹೇಳಲಿ ಎಂದು ಸವಾಲು ಎಸೆದಿದ್ದಾರೆ.

    ಇಂದು ನಾವು ಪ್ರಪಂಚದೊಂದಿಗೆ ಸ್ಪರ್ಧಿಸಬೇಕಿದೆ. ಇಂಗ್ಲಿಷ್ ಇಲ್ಲದೆ ಸ್ಪರ್ಧಿಸಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ನಾನು ಈ ಪ್ರಯತ್ನಕ್ಕೆ ಮುಂದಾಗಿದ್ದೇನೆ. ನಮ್ಮ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಬೇಕು. ನಮ್ಮ ಎಲ್ಲ ಶಾಲೆಗಳು ಇಂಗ್ಲಿಷ್ ಮಾಧ್ಯಮದಲ್ಲಿರಬೇಕು ಎಂದು ಪ್ರತಿಪಾದಿಸಿದರು.

    1ರಿಂದ 6ನೇ ತರಗತಿಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ(2020-21) ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣದ ಮಾಧ್ಯಮವಾಗಲಿದೆ ಎಂದು ರೆಡ್ಡಿ ಇದೇ ವೇಳೆ ಘೋಷಿಸಿದರು. ಇದಾದ ಒಂದರಿಂದ ನಾಲ್ಕು ವರ್ಷಗಳಲ್ಲಿ 10ನೇ ತರಗತಿ ವರೆಗೆ ಇಂಗ್ಲಿಷ್ ಮಾಧ್ಯಮವನ್ನಾಗಿ ಮಾಡಲಾಗುವುದು. ಎಲ್ಲ ಶಾಲೆಗಳಲ್ಲಿ ತೆಲುಗು ಅಥವಾ ಉರ್ದು ಕಡ್ಡಾಯ ವಿಷಯವಾಗಲಿದೆ ಎಂದರು.

  • ಪ್ರಗತಿ ಸಭೆಯಲ್ಲಿ ಕರ್ನಾಟಕದ ಸಾಧನೆಯನ್ನು ಹೊಗಳಿದ ಮೋದಿ

    ಪ್ರಗತಿ ಸಭೆಯಲ್ಲಿ ಕರ್ನಾಟಕದ ಸಾಧನೆಯನ್ನು ಹೊಗಳಿದ ಮೋದಿ

    ನವದೆಹಲಿ: ಪ್ರಗತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರದ ಸಾಧನೆಯನ್ನು ಪ್ರಶಂಸಿದ್ದಾರೆ.

    ಬುಧವಾರ ನಡೆದ 31ನೇ ಪ್ರಗತಿ ಸಭೆಯಲ್ಲಿ ದೇಶದ ವಿವಿಧ ಯೋಜನೆಗಳ ಅಭಿವೃದ್ಧಿ ಕುರಿತಾಗಿ ನಡೆಯುತ್ತಿರುವ ಪ್ರಗತಿಯನ್ನು ಪರಿಶೀಲಿಸಿದರು. ಈ ವೇಳೆ ನವೀಕರೀಸಬಹುದಾದ ಇಂಧನ ಪ್ರಸರಣ ಸಂಬಂಧ ಗ್ರಿಡ್ ನಿರ್ಮಾಣ ಯೋಜನೆಯಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ನಿಗದಿತ ಸಮಯದ ಒಳಗಡೆ ಕೆಲಸವನ್ನು ಪೂರ್ಣಗೊಳಿಸಿದ್ದಕ್ಕೆ ಶ್ಲಾಘಿಸಿದರು.

    ಕರ್ನಾಟಕ, ತಮಿಳುನಾಡು, ರಾಜಸ್ಥಾನ, ಗುಜರಾತ್, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್, ಮಧ್ಯಪ್ರದೇಶದಲ್ಲಿ ನವೀಕರಿಸಬಹುದಾದ ಇಂಧನ ಸಂಪನ್ಮೂಲ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಈ 8 ರಾಜ್ಯಗಳ ನಡುವೆ ಕೇಂದ್ರ ಸರ್ಕಾರ ಗ್ರಿಡ್ ನಿರ್ಮಾಣ ಯೋಜನೆ ಆರಂಭಿಸಿದೆ.

    ಈ ಸಭೆಯಲ್ಲಿ ಸೋಲಾರ್ ಮತ್ತು ಗಾಳಿ ವಿದ್ಯುತ್ ಉತ್ಪಾದನೆ ಕಂಪನಿಗಳ ಸಮಸ್ಯೆ, ಭೂ ಸ್ವಾಧೀನ ವಿಚಾರದ ಬಗ್ಗೆ ಚರ್ಚೆ ನಡೆಯಿತು.

    ಹಲವು ವರ್ಷಗಳಿಂದ ಪೂರ್ಣವಾಗದೇ ಇರುವ ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಗಳು ಮುಂದಾಗಬೇಕು ಮತ್ತು ಆ ಯೋಜನೆಗಳ ಪ್ರಗತಿಯ ವಿವರಗಳು ನನ್ನ ಕಚೇರಿಗೆ ಕಳಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಈ ಸಭೆಯಲ್ಲಿ ಮೋದಿ ಸೂಚಿಸಿದ್ದಾರೆ.

  • ಒಂದೇ ದಿನಕ್ಕೆ 1.26 ಲಕ್ಷ ಮಂದಿಗೆ ಸರ್ಕಾರಿ ಕೆಲಸ – ದಾಖಲೆ ಬರೆದ ಆಂಧ್ರ ಸರ್ಕಾರ

    ಒಂದೇ ದಿನಕ್ಕೆ 1.26 ಲಕ್ಷ ಮಂದಿಗೆ ಸರ್ಕಾರಿ ಕೆಲಸ – ದಾಖಲೆ ಬರೆದ ಆಂಧ್ರ ಸರ್ಕಾರ

    ಹೈದರಾಬಾದ್: ಒಂದೇ ದಿನಕ್ಕೆ ಬರೋಬ್ಬರಿ 1.26 ಲಕ್ಷ ಮಂದಿಗೆ ಸರ್ಕಾರಿ ಕೆಲಸ ನೀಡುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ದಾಖಲೆ ನಿರ್ಮಿಸಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಕಾರ್ಯವೈಖರಿ ಎಲ್ಲರ ಮನ ಗೆದ್ದಿದೆ.

    ಭಾರತದಲ್ಲಿ ಹೀಗೆ ಭಾರೀ ಸಂಖ್ಯೆಯಲ್ಲಿ ಈ ಹಿಂದೆ ಒಂದೇ ದಿನಕ್ಕೆ ಯಾವ ಸರ್ಕಾರ ಕೂಡ ಉದ್ಯೋಗ ನೀಡಿರಲಿಲ್ಲ. ಆದರೆ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಈ ಸಾಧನೆ ಮಾಡಿದ್ದು, ಒಂದೇ ದಿನಕ್ಕೆ 1.26 ಲಕ್ಷ ಮಂದಿಗೆ ಉದ್ಯೋಗ ನೀಡಿ ಇತಿಹಾಸ ಬರೆದಿದೆ.

    ಸೋಮವಾರ ವಿಜಯವಾಡದಲ್ಲಿ ಖುದ್ದು ಸಿಎಂ ಜಗನ್ ಮೋಹನ್ ರೆಡ್ಡಿಯವರೇ, ಹೊಸದಾಗಿ ನೇಮಕಗೊಂಡವರಿಗೆ ಆದೇಶ ಪತ್ರ ವಿತರಿಸಿ ಅಭಿನಂದನೆ ತಿಳಿಸಿದರು. ಈ ವೇಳೆ ಮಾತಾಡಿದ ಸಿಎಂ, ವೈಎಸ್‍ಆರ್ ಕಾಂಗ್ರೆಸ್ ಸರ್ಕಾರ ನಿರುದ್ಯೋಗವನ್ನು ಹೋಗಲಾಡಿಸಿ, ಜನತೆಗೆ ಉದ್ಯೋಗ ಕಲ್ಪಿಸಿಕೊಡಲು ಪಣತೊಟ್ಟಿದೆ. ಆದ್ದರಿಂದ ಇನ್ಮುಂದೆ ಯುವ ಜನತೆಗೆ ಭಾರೀ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಿದ್ದೇವೆ. ಪ್ರತಿವರ್ಷ ಜನವರಿ ತಿಂಗಳಿನಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

    ಸುಮಾರು 500 ಸಾರ್ವಜನಿಕ ಸೇವೆಗಳಿಗೆ 21 ಲಕ್ಷಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 1 ರಿಂದ 8ರವರೆಗೆ ಒಟ್ಟು 19.50 ಲಕ್ಷ ಮಂದಿ ಸರ್ಕಾರಿ ಕೆಲಸಕ್ಕಾಗಿ ಲಿಖಿತ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ 1,98,164 ಅಭ್ಯರ್ಥಿಗಳಲ್ಲಿ ನಗರ ಪ್ರದೇಶಗಳಲ್ಲಿ 31,640 ಉದ್ಯೋಗ ನೀಡಿರುವುದನ್ನೂ ಸೇರಿಸಿ ಒಟ್ಟು 1,26,728 ಮಂದಿಗೆ ವಿವಿಧ ಹುದ್ದೆಗೆ ನೇಮಿಸಲಾಗಿದೆ.

    ಈ ಹಿಂದೆ ನೂತನವಾಗಿ ಸಿಎಂ ಪಟ್ಟ ಏರಿದಾಗಲೇ ಜಗನ್ ಅವರು ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದರು. ಅವರಿಗೆ ನೀಡುತ್ತಿದ್ದ ಗೌರವ ಧನವನ್ನು 3 ಸಾವಿರದಿಂದ ದಿಢೀರ್ 10 ಸಾವಿರಕ್ಕೇರಿಸಿ ಅಧಿಕೃತವಾಗಿ ಘೋಷಿಸಿ ಮೆಚ್ಚುಗೆ ಪಡೆದಿದ್ದರು. ಇದರಿಂದ ಕಡಿಮೆ ಸಂಬಳ ಪಡೆಯುತ್ತಿದ್ದವರು ಖುಷಿಯಿಂದ ಸಿಎಂ ಕಾರ್ಯವನ್ನು ಶ್ಲಾಘಿಸಿದ್ದರು.

    ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಸಿಎಂ ಜಗನ್ ಅವರು ಹೊಸ ಯೋಜನೆಗಳನ್ನು ಘೋಷಿಸುತ್ತಲೇ ಬಂದಿದ್ದು, ವೃದ್ಧಾಪ್ಯ ವೇತನ ಹೆಚ್ಚಳ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ, ಕಷ್ಟಪಟ್ಟು ದುಡಿಯುವ ಆಶಾ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸಿದ್ದರು. ಈಗ ನಿರುದ್ಯೋಗಿಗಳಿಗೆ 1 ಲಕ್ಷ 26 ಸಾವಿರ ಸರ್ಕಾರಿ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಭೇಷ್ ಎನಿಸಿಕೊಂಡಿದ್ದಾರೆ.