Tag: ಆಂಧ್ರ ಪ್ರದೇಶ

  • ವಿಧಾನಸಭೆಯಿಂದ ಪೀಠೋಪಕರಣ ಮನೆಗೆ ಹೊತ್ತೊಯ್ದ ಮಾಜಿ ಸ್ಪೀಕರ್ ನೇಣಿಗೆ ಶರಣು

    ವಿಧಾನಸಭೆಯಿಂದ ಪೀಠೋಪಕರಣ ಮನೆಗೆ ಹೊತ್ತೊಯ್ದ ಮಾಜಿ ಸ್ಪೀಕರ್ ನೇಣಿಗೆ ಶರಣು

    ಹೈದರಾಬಾದ್: ವಿಧಾನಸಭೆಯಿಂದ ಪೀಠೋಪಕರಣ ಮನೆಗೆ ಹೊತ್ತೊಕೊಂಡು ಹೋಗಿದ್ದಾರೆ ಎಂಬ ಆರೋಪ ಹೊತ್ತಿದ್ದ ಆಂಧ್ರ ಪ್ರದೇಶದ ಮಾಜಿ ವಿಧಾನಸಭೆ ಸ್ಪೀಕರ್ ಕೊಡೆಲ ಶಿವಪ್ರಸಾದ್ ರಾವ್ ಅವರು ತಮ್ಮ ಹೈದರಾಬಾದ್‍ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    72 ವರ್ಷದ ಶಿವಪ್ರಸಾದ್ ಬೆಳಗ್ಗೆ ತಿಂಡಿ ತಿಂದು ತಮ್ಮ ರೂಮ್‍ಗೆ ಹೋಗಿದ್ದಾರೆ. ನಂತರ ಅವರ ರೂಮ್ ಬಿಟ್ಟು ಬಾರದೆ ಇರುವುದನ್ನು ಗಮನಿಸಿದ ಅವರ ಮನೆಯವರು ರೂಮ್ ಒಳಗೆ ಹೋಗಿ ನೋಡಿದಾಗ ಅವರು ಅವರ ರೂಮ್‍ನ ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಂಡಿದ್ದಾರೆ. ತಕ್ಷಣ ಅವರನ್ನು ಹೈದರಾಬಾದ್‍ನ ಬಸವತಾರಕಂ ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

    ವೈ.ಎಸ್‍.ಆರ್‍.ಪಿ ಪಕ್ಷದವರು ಶಿವಪ್ರಸಾದ್ ಅವರ ಕುಟುಂಬದ ಸದಸ್ಯರ ವಿರುದ್ಧ ದೂರು ನೀಡಿದ್ದ ಕಾರಣ ಅವರು ತುಂಬ ಅವಮಾನಕ್ಕೆ ಒಳಗಾಗಿದ್ದರು. ಅವರ ಕುಟುಂಬ ಸದಸ್ಯರಿಗೆ ಕೋರ್ಟ್ ಜಾಮೀನು ನೀಡಿದ್ದರೂ ಶಿವಪ್ರಸಾದ್ ಆ ವಿಚಾರದಲ್ಲಿ ತುಂಬಾ ಖಿನ್ನತೆಗೆ ಒಳಗಾಗಿದ್ದರು. ಈ ವಿಚಾರಕ್ಕೆ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ವಿಧಾನಸಭೆಯಲ್ಲಿನ ಕಂಪ್ಯೂಟರ್, ಎಸಿ, ಪೀಠೋಪಕರಣಗಳನ್ನು ಮನೆಗೆ ಹೊತ್ತೊಯ್ದ ಮಾಜಿ ಸ್ಪೀಕರ್

    1983 ರಲ್ಲಿ ಎನ್.ಟಿ ರಾಮರಾವ್ ಅವರು ತೆಲುಗು ದೇಶಂ ಪಕ್ಷ (ಟಿಡಿಪಿ) ಪಕ್ಷ ಸ್ಥಾಪನೆ ಮಾಡಿದಾಗ ಶಿವಪ್ರಸಾದ್ ರಾಜಕೀಯಕ್ಕೆ ಕಾಲಿಟ್ಟಿದ್ದರು ಮತ್ತು ಪಕ್ಷದಲ್ಲಿ ಹಿರಿಯ ನಾಯಕ ಎಂದು ಗುರುತಿಸಿಕೊಂಡಿದ್ದರು. ಆರು ಬಾರಿಯ ಶಾಸಕನಾಗಿ ಸೇವೆಸಲ್ಲಿಸಿರುವ ಅವರು ಐದು ಬಾರಿ ನರಸಾರೋಪೇಟೆ ಕ್ಷೇತ್ರದಿಂದ ಮತ್ತು 2014 ರಲ್ಲಿ ಒಂದು ಬಾರಿ ಸಟ್ಟೇನಪಳ್ಳಿಯಿಂದ ಗೆದ್ದಿದ್ದಾರೆ. ಅನೇಕ ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಶಿವಪ್ರಸಾದ್ 2014 ರ ಅವಧಿಯಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

    ಸ್ಪೀಕರ್ ಆಗಿ ತಮ್ಮ ಅವದಿ ಮುಗಿದ ನಂತರ ಅವರು ವಿಧಾನಸಭೆಯಲ್ಲಿರುವ ಕಂಪ್ಯೂಟರ್ ಮತ್ತು ಎಸಿ ಹಾಗೂ ಪೀಠೋಪಕರಣಗಳನ್ನು ಮನೆಗೆ ಹೊತ್ತೊಯ್ದಿದ್ದಾರೆ ಎಂಬ ಆರೋಪವು ಶಿವಪ್ರಸಾದ್ ರಾವ್ ವಿರುದ್ಧ ಕೇಳಿ ಬಂದಿತ್ತು.

  • 74ನೇ ವಯಸ್ಸಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ‘ಜಗತ್ತಿನ ಹಿರಿಯ ಪೋಷಕರು’ ಐಸಿಯುನಲ್ಲಿ

    74ನೇ ವಯಸ್ಸಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ‘ಜಗತ್ತಿನ ಹಿರಿಯ ಪೋಷಕರು’ ಐಸಿಯುನಲ್ಲಿ

    ಹೈದರಾಬಾದ್: 74ರ ವಯಸ್ಸಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ‘ಜಗತ್ತಿನ ಹಿರಿಯ ಪೋಷಕರು’ ಎಂದು ಖ್ಯಾತಿ ಪಡೆದ ಎರ್ರಮಟ್ಟಿ ಮಂಗಯಮ್ಮ ಹಾಗೂ ಅವರ ಪತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಭಾನುವಾರದಂದು ಮಂಗಯಮ್ಮ(74) ಹಾಗೂ ಎರ್ರಾಮಟಿ ರಾಜ ರಾವ್(80) ದಂಪತಿಯ ಅವಳಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅತ್ತ ರಾಜರಾವ್ ಅವರಿಗೆ ಹೃದಯಾಘಾತವಾದ ಕಾರಣಕ್ಕೆ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಮಂಗಯಮ್ಮ ಅವರಿಗೆ ಸಿಸೇರಿಯನ್ ಮಾಡಿರುವ ಕಾರಣಕ್ಕೆ ಯಾವುದೇ ಇನ್ಫೆಕ್ಷನ್ ಆಗದಿರಲಿ ಎಂದು ಇನ್ನೂ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಹೀಗಾಗಿ ಅವಳಿ ಮಕ್ಕಳನ್ನು ಅವರ ಸಂಬಂಧಿಗಳು ನೋಡಿಕೊಳ್ಳುತ್ತಿದ್ದಾರೆ.

    ಈ ಬಗ್ಗೆ ವೈದ್ಯರು ಪ್ರತಿಕ್ರಿಯಿಸಿ, ಶ್ವಾಸಕೋಶದ ಇನ್ಫೆಕ್ಷನ್ ಹಾಗೂ ಲಘು ಹೃದಯಾಘಾತವಾದ ಕಾರಣಕ್ಕೆ ರಾಜರಾವ್ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಇತ್ತ ಮಂಗಯಮ್ಮ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಈಗ ಅವರು ಸ್ಪಲ್ಪ ಸ್ವಲ್ಪ ಓಡಾಡುತ್ತಿದ್ದಾರೆ. ಅವಳಿ ಮಕ್ಕಳು ಕೂಡ ಆರೋಗ್ಯವಾಗಿವೆ ಎಂದು ತಿಳಿಸಿದ್ದಾರೆ.

    ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪಾರ್ತಿಪಾಡು ಗ್ರಾಮದ ನಿವಾಸಿಯಾದ ಎರ್ರಮಟ್ಟಿ ಮಂಗಯಮ್ಮ ಅವರು ಸೆ. 5 ರಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿ ಹೊಸ ದಾಖಲೆ ಬರೆದಿದ್ದರು. ಜಗತ್ತಿನ ಹಿರಿಯ ಪೋಷಕರು ಎಂಬ ಖ್ಯಾತಿಗೆ ಪಾತ್ರರಾದರು.

    ಸುಮಾರು 3 ದಶಕಗಳಿಂದ ಮಕ್ಕಳು ಪಡೆಯಲು ದಂಪತಿ ಸಾಕಷ್ಟು ವೈದ್ಯರ ಮೊರೆಹೋಗುತ್ತಲೇ ಇದ್ದರು. ಆದರೆ 2018ರ ನವೆಂಬರ್ ತಿಂಗಳಲ್ಲಿ ಅವರು ಗುಂಟೂರಿನ ಅಹಲ್ಯಾ ನರ್ಸಿಂಗ್ ಹೋಂಗೆ ತಮ್ಮ ಸಮಸ್ಯೆಗೆ ಪರಿಹಾರ ಪಡೆಯಲು ಹೋಗಿದ್ದರು. ಅಲ್ಲಿ ಡಾ. ಶಾನಕ್ಯಾಲ ಉಮಾಶಂಕರ್ ಅವರು ದಂಪತಿಯ ಸಮಸ್ಯೆಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸವಾಲಿನ ಪ್ರಕರಣವನ್ನು ತಮ್ಮ ಕೈಗೆ ತೆಗೆದುಕೊಂಡು ಯಶಸ್ವಿಯಾದರು.

    ಈ ಬಗ್ಗೆ ಮಾತನಾಡಿದ ಡಾ. ಶಾನಕ್ಯಾಲ ಉಮಾಶಂಕರ್ ಅವರು, ಮಂಗಯಮ್ಮ ಅವರಿಗೆ ಬಿಪಿ, ಸಕ್ಕರೆ ಕಾಯಿಲೆ ಅಥವಾ ಯಾವುದೇ ಆರೋಗ್ಯದ ತೊಂದರೆ ಇಲ್ಲ. ಅವರ ಆನುವಂಶಿಕ ರೇಖೆಯು ತುಂಬಾ ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ಹೃದ್ರೋಗ ತಜ್ಞರು, ಶ್ವಾಸಕೋಶ ಶಾಸ್ತ್ರಜ್ಞರು ಸೇರಿದಂತೆ ಇತರೆ ವಿಶೇಷ ವೈದ್ಯರೊಂದಿಗೆ ಚರ್ಚಿಸಿದ ಬಳಿಕ ಮಂಗಮ್ಮ ಅವರಿಗೆ ಎಲ್ಲಾ ರೀತಿಯ ಪರೀಕ್ಷೆ ನಡೆಸಿ, ನಂತರ ನಾವು ಅವರ ಸಮಸ್ಯೆಯನ್ನು ಬಗೆಹರಿಸಲು ನಿರ್ಧರಿಸಿದೆವು. ಬಹಳ ವರ್ಷಗಳ ಹಿಂದೆಯೇ ಅವರು ಋತುಬಂಧದ ಹಂತವನ್ನು ತಲುಪಿದ್ದರು. ಆದರೆ ಐವಿಎಫ್(ವಿಟ್ರೊ ಫಲೀಕರಣ ಅಥವಾ ವಿಟ್ರೋ ಫರ್ಟಿಲೈಸೇಷನ್) ಮೂಲಕ ನಾವು ಕೇವಲ ಒಂದು ತಿಂಗಳಲ್ಲಿ ಅವರು ಮತ್ತೆ ಋತುಮತಿಯಾಗುವಂತೆ ಚಿಕಿತ್ಸೆ ಕೊಟ್ಟೆವು ಎಂದು ತಿಳಿಸಿದ್ದರು.

    ನಂತರ ಐವಿಎಫ್ ವಿಧಾನದಿಂದ ಮಂಗಯಮ್ಮ ಅವರು ಗರ್ಭ ಧರಿಸುವಂತೆ ಚಿಕಿತ್ಸೆ ನೀಡಲಾಯಿತು. ಬಳಿಕ ಅವರನ್ನು ಜಾಗೃತೆಯಿಂದ ನೋಡಿಕೊಳ್ಳುವುದು ಅವಶ್ಯವಾಗಿದ್ದ ಕಾರಣಕ್ಕೆ ದಂಪತಿಯನ್ನು ಆಸ್ಪತ್ರೆಯಲ್ಲಿಯೇ ಉಳಿಯಲು ಸೂಚಿಸಿದೆವು. ಮಂಗಯಮ್ಮ ಅವರಿಗೆ ಅಗತ್ಯ ಪೋಷ್ಠಿಕಾಂಶ, ಆರೈಕೆ, ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿಯೇ ನೋಡಿಕೊಳ್ಳಲಾಗುತ್ತಿತ್ತು. ಅವರ ವಯಸ್ಸಿಗೆ ನಾರ್ಮಲ್ ಡೆಲಿವರಿ ಆಗುವುದು ಕಷ್ಟದ ವಿಚಾರವಾಗಿದ್ದ ಕಾರಣಕ್ಕೆ ಸಿಸೇರಿಯನ್ ಮಾಡಬೇಕಾಯಿತು. ಸದ್ಯ ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

  • ಗೋದಾವರಿಯಲ್ಲಿ ಮುಳುಗಿದ ಬೋಟ್ – 13 ಮಂದಿ ಸಾವು, 40 ಜನ ನಾಪತ್ತೆ

    ಗೋದಾವರಿಯಲ್ಲಿ ಮುಳುಗಿದ ಬೋಟ್ – 13 ಮಂದಿ ಸಾವು, 40 ಜನ ನಾಪತ್ತೆ

    ಹೈದರಾಬಾದ್: ಆಂಧ್ರ ಪ್ರದೇಶದ ಗೋದಾವರಿ ನದಿಯಲ್ಲಿ ಇಂದು ಮಧ್ಯಾಹ್ನ 63 ಪ್ರಯಾಣಿಕರಿದ್ದ ಪ್ರವಾಸಿ ಬೋಟ್ ಅಪಘಾತಕ್ಕೀಡಾಗಿ, 13 ಜನರು ಸಾವನ್ನಪ್ಪಿದ್ದು, 40 ಮಂದಿ ನಾಪತ್ತೆಯಾಗಿದ್ದಾರೆ.

    ಪೂರ್ವ ಗೋದಾವರಿ ಜಿಲ್ಲೆಯ ದೇವಿಪಟ್ನಂ ಮಂಡಲದ ಕಾಚುಲೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೋಟ್ ನಲ್ಲಿ ಒಟ್ಟು 63 ಜನರಿದ್ದು, ಅದರಲ್ಲಿ 50 ಪ್ರವಾಸಿಗರು ಮತ್ತು 13 ಮಂದಿ ಬೋಟ್ ಸಿಬ್ಬಂದಿ ಇದ್ದಾರೆ. ಗೋದಾವರಿ ನದಿಯ ಬಳಿಯಿರುವ ಪಾಪಿಕೊಂಡಲು ಬೆಟ್ಟಗಳನ್ನು ನೋಡಲು ಪ್ರವಾಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

    ಈ ಹಡಗಿನಲ್ಲಿದ್ದ 63 ಜನರ ಪೈಕಿ 13 ಮಂದಿಯ ಮೃತ ದೇಹ ಸಿಕ್ಕಿದ್ದು, ಇನ್ನೂ ಸುಮಾರು 40 ಮಂದಿ ನದಿಯಲ್ಲಿ ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ, ದೋಣಿಯಲ್ಲಿದ್ದ ಎಲ್ಲರಿಗೂ ಲೈಫ್ ಜಾಕೆಟ್‍ಗಳು ಇದ್ದು, ಅವರಲ್ಲಿ ಕೆಲವರು ಧರಿಸಿಲ್ಲ ಎಂದು ವರದಿಯಾಗಿದೆ. ವಿಶಾಖಪಟ್ಟಣಂ ಮತ್ತು ಗುಂಟೂರಿನಿಂದ ಎರಡು ಎನ್‍ಡಿಆರ್‍ಎಫ್ ತಂಡಗಳು ಬಂದಿದ್ದು, ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಚರಣೆ ಮಾಡುತ್ತಿದ್ದಾರೆ.

    ಗೋದಾವರಿ ನದಿಗೆ ಪ್ರವಾಹದ ಸಮಯದಲ್ಲಿ ಸುಮಾರು 5 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿತ್ತು. ಅದ್ದರಿಂದ ಅಲ್ಲಿನ ಪ್ರವಾಸೋದ್ಯಮ ಅಧಿಕಾರಿಗಳು ಶನಿವಾರದವರೆಗೆ ನದಿಯಲ್ಲಿ ಪ್ರವಾಸಿಗರ ಸೇವೆಯನ್ನು ನಿಲ್ಲಿಸಿತ್ತು. ಆದರೆ ಇತ್ತೀಚಿಗೆ ನೀರಿನ ಪ್ರಮಾಣ ಕಡಿಮೆಯಾದ ಕಾರಣ ಇಂದು ಬೋಟ್‍ನಲ್ಲಿ ಹೋಗಲು ಅನುಮತಿ ನೀಡಿದ್ದರು ಎಂದು ವರದಿಯಾಗಿದೆ.

    ಈ ವಿಚಾರದ ತಿಳಿದು ತಕ್ಷಣ ಅಧಿಕಾರಿಗಳೊಂದಿಗೆ ಮಾತನಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗಮೋಹನ್ ರೆಡ್ಡಿ, ತಕ್ಷಣವೇ ರಕ್ಷಣಾ ಕಾರ್ಯಚರಣೆ ಕೈಗೊಳ್ಳುವಂತೆ ಸೂಚಿಸಿ, ಮೃತವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ನೌಕಪಡೆ ಮತ್ತು ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆ ನಡೆಸುವಂತೆ ಆದೇಶ ನೀಡಿದ್ದಾರೆ.

  • 7ರ ಕಂದಮ್ಮನ ಮೇಲೆ 16 ವರ್ಷದ ಬಾಲಕ ಅತ್ಯಾಚಾರ

    7ರ ಕಂದಮ್ಮನ ಮೇಲೆ 16 ವರ್ಷದ ಬಾಲಕ ಅತ್ಯಾಚಾರ

    ಅಮರಾವತಿ: ಏಳು ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದ ವೆಪಗುಂಟ ಉಪನಗರದಲ್ಲಿ ನಡೆದಿದೆ.

    ಪ್ರಕರಣದ ನಂತರ ಬಾಲಕಿಯ ತಂದೆ ಪೆಂಡುರ್ಥಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೋ) ಕಾಯ್ದೆ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿದ್ಯಾರ್ಥಿನಿಯು ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಾಳೆ. ಐಟಿಐ ಓದುತ್ತಿರುವ 16 ವರ್ಷದ ಬಾಲಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣದ ನಂತರ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

    ಜುಲೈನಲ್ಲಿ ಇದೇ ರೀತಿಯ ಪ್ರಕರಣ ನಡೆದು, ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬುಡಕಟ್ಟು ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕರು ಸ್ನಾನ ಮಾಡಲು ನದಿಗೆ ತೆರಳುತ್ತಿ ಬಾಲಕಿಯನ್ನು ಅತ್ಯಾಚಾರಗೈದಿದ್ದರು.

  • ಅವಳಿ ಮಕ್ಕಳಿಗೆ ಜನ್ಮ ನೀಡಿ ದಾಖಲೆ ಬರೆದ 74ರ ವೃದ್ಧೆ

    ಅವಳಿ ಮಕ್ಕಳಿಗೆ ಜನ್ಮ ನೀಡಿ ದಾಖಲೆ ಬರೆದ 74ರ ವೃದ್ಧೆ

    ಹೈದರಾಬಾದ್: ಆಂಧ್ರಪ್ರದೇಶದ ಗುಂಟೂರು ನಗರದಲ್ಲಿ 74 ವರ್ಷದ ವೃದ್ಧೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿ ದಾಖಲೆ ನಿರ್ಮಿಸಿದ್ದಾರೆ. ಇಳಿ ವಯಸ್ಸಿನಲ್ಲಿ 2 ಮಕ್ಕಳಿಗೆ ಜನ್ಮನೀಡಿ ತಾವು ತಾಯಿಯಾಗುವ ಬಯಕೆಯನ್ನು ತೀರಿಸಿಕೊಂಡಿದ್ದಾರೆ.

    ಹೌದು, ಈ ವಯಸ್ಸಿನಲ್ಲೂ ಮಗುವಿಗೆ ಜನ್ಮ ನೀಡೋದಾ ಎಂದು ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪಾರ್ತಿಪಾಡು ಗ್ರಾಮದ ನಿವಾಸಿ ಎರ್ರಮಟ್ಟಿ ಮಂಗಯಮ್ಮ(74) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರ್ರಾಮಟಿ ರಾಜ ರಾವ್(80) ಹಾಗೂ ಮಂಗಯಮ್ಮ ಅವರು ಮಾರ್ಚ್ 22, 1962 ರಂದು ಮದುವೆಯಾಗಿದ್ದರು. ಆದರೆ ರಾಜ ರಾವ್ ಮತ್ತು ಮಂಗಯಮ್ಮ ದಂಪತಿಗೆ ಮಕ್ಕಳಿರಲಿಲ್ಲ. ಬಹುವರ್ಷದಿಂದ ಮಕ್ಕಳನ್ನು ಪಡೆಯುವ ಆಸೆ ಹೊತ್ತಿದ್ದ ದಂಪತಿಯ ಕನಸು ಈಗ ನನಸಾಗಿದೆ. ಈ ಮೂಲಕ ಮಂಗಯಮ್ಮ ಹೊಸ ದಾಖಲೆ ಬರೆದಿದ್ದಾರೆ.

    ಸುಮಾರು 30 ದಶಕಗಳಿಂದ ಮಕ್ಕಳು ಪಡೆಯಲು ದಂಪತಿ ಸಾಕಷ್ಟು ವೈದ್ಯರ ಮೊರೆಹೋಗುತ್ತಲೇ ಇದ್ದರು. ಆದರೆ 2018ರ ನವೆಂಬರ್ ತಿಂಗಳಲ್ಲಿ ಅವರು ಗುಂಟೂರಿನ ಅಹಲ್ಯಾ ನರ್ಸಿಂಗ್ ಹೋಂಗೆ ತಮ್ಮ ಸಮಸ್ಯೆಗೆ ಪರಿಹಾರ ಪಡೆಯಲು ಹೋಗಿದ್ದರು. ಅಲ್ಲಿ ಡಾ. ಶಾನಕ್ಯಾಲ ಉಮಾಶಂಕರ್ ಅವರು ದಂಪತಿಯ ಸಮಸ್ಯೆಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸವಾಲಿನ ಪ್ರಕರಣವನ್ನು ತಮ್ಮ ಕೈಗೆ ತೆಗೆದುಕೊಂಡು ಯಶಸ್ವಿಯಾಗಿದ್ದಾರೆ.

    ಈ ಬಗ್ಗೆ ಮಾತನಾಡಿದ ಡಾ. ಶಾನಕ್ಯಾಲ ಉಮಾಶಂಕರ್ ಅವರು, ಮಂಗಯಮ್ಮ ಅವರಿಗೆ ಬಿಪಿ, ಸಕ್ಕರೆ ಕಾಯಿಲೆ ಅಥವಾ ಯಾವುದೇ ಆರೋಗ್ಯದ ತೊಂದರೆ ಇಲ್ಲ. ಅವರ ಆನುವಂಶಿಕ ರೇಖೆಯು ತುಂಬಾ ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ಹೃದ್ರೋಗ ತಜ್ಞರು, ಶ್ವಾಸಕೋಶಶಾಸ್ತ್ರಜ್ಞರು ಸೇರಿದಂತೆ ಇತರೆ ವಿಶೇಷ ವೈದ್ಯರೊಂದಿಗೆ ಚರ್ಚಿಸಿದ ಬಳಿಕ ಮಂಗಮ್ಮ ಅವರಿಗೆ ಎಲ್ಲಾ ರೀತಿಯ ಪರೀಕ್ಷೆ ನಡೆಸಿ, ನಂತರ ನಾವು ಅವರ ಸಮಸ್ಯೆಯನ್ನು ಬಗೆಹರಿಸಲು ನಿರ್ಧರಿಸಿದೆವು. ಬಹಳ ವರ್ಷಗಳ ಹಿಂದೆಯೇ ಅವರು ಋತುಬಂಧದ ಹಂತವನ್ನು ತಲುಪಿದ್ದರು. ಆದರೆ ಐವಿಎಫ್(ವಿಟ್ರೊ ಫಲೀಕರಣ ಅಥವಾ ವಿಟ್ರೋ ಫರ್ಟಿಲೈಸೇಷನ್) ಮೂಲಕ ನಾವು ಕೇವಲ ಒಂದು ತಿಂಗಳಲ್ಲಿ ಅವರು ಮತ್ತೆ ಋತುಮತಿಯಾಗುವಂತೆ ಚಿಕಿತ್ಸೆ ಕೊಟ್ಟೆವು ಎಂದು ತಿಳಿಸಿದರು.

    ನಂತರ ಐವಿಎಫ್ ವಿಧಾನದಿಂದ ಮಂಗಯಮ್ಮ ಅವರು ಗರ್ಭ ಧರಿಸುವಂತೆ ಚಿಕಿತ್ಸೆ ನೀಡಲಾಯಿತು. ಬಳಿಕ ಅವರನ್ನು ಜಾಗೃತೆಯಿಂದ ನೋಡಿಕೊಳ್ಳುವುದು ಅವಶ್ಯವಾಗಿದ್ದ ಕಾರಣಕ್ಕೆ ದಂಪತಿಯನ್ನು ಆಸ್ಪತ್ರೆಯಲ್ಲಿಯೇ ಉಳಿಯಲು ಸೂಚಿಸಿದೆವು. ಮಂಗಯಮ್ಮ ಅವರಿಗೆ ಅಗತ್ಯ ಪೋಷ್ಠಿಕಾಂಶ, ಆರೈಕೆ, ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿಯೇ ನೋಡಿಕೊಳ್ಳಲಾಗುತ್ತಿತ್ತು. ಅವರ ವಯಸ್ಸಿಗೆ ನಾರ್ಮಲ್ ಡೆಲಿವರಿ ಆಗುವುದು ಕಷ್ಟದ ವಿಚಾರವಾಗಿದ್ದ ಕಾರಣಕ್ಕೆ ಸಿಸೇರಿಯನ್ ಮಾಡಬೇಕಾಯಿತು. ಸದ್ಯ ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

    ತಾಯಿಯಾದ ಖುಷಿಯನ್ನು ಮಂಗಯಮ್ಮ ಅವರು ಹಂಚಿಕೊಂಡು, ನಾವು ಮಕ್ಕಳಿಲ್ಲದೆ ಕೊನೆಯುಸಿರು ಎಳೆಯುತ್ತೇವೆ ಎಂದು ಅಂದುಕೊಂಡಿದ್ದೆ. ಆದರೆ ನಮ್ಮ ಮನೆಯ ಪಕ್ಕದಲ್ಲಿದ್ದ ಮಹಿಳೆಯೊಬ್ಬರು 55ರ ವಯಸ್ಸಿನಲ್ಲಿ ತಾಯಿಯಾಗಿದ್ದರು. ಅವರು ಐವಿಎಫ್ ತಂತ್ರಜ್ಞಾನದ ಮೂಲಕ ಮಕ್ಕಳು ಪಡೆಯುವ ವಯಸ್ಸು ಮೀರಿದ್ದರೂ ಮಕ್ಕಳು ಪಡೆಯಬಹುದು ಎಂದು ಹೇಳಿದ್ದರು. ಆಗ ನಾನು ಪತಿಗೆ ಈ ಬಗ್ಗೆ ತಿಳಿಸಿದೆ, ಅವರೂ ಕೂಡ ಇದಕ್ಕೆ ಒಪ್ಪಿಕೊಂಡರು. ನಾನು ಈಗ ಬಹಳ ಖುಷಿಯಾಗಿದ್ದೇನೆ ಎಂದು ಸಂತೋಷ ವ್ಯಕ್ತಪಡಿಸಿದರು.

    ಇತ್ತೀಚೆಗೆ ರಾಜಸ್ತಾನ ಮೂಲದ ದಲ್ಜಿಂಧರ್ ಕೌರ್ ಅವರು ತಮ್ಮ 70ರ ವಯಸ್ಸಿನಲ್ಲಿ ತಾಯಿಯಾಗಿ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಮಂಗಯಮ್ಮ ಅವರು ಮುರಿದು, ಹೊಸ ದಾಖಲೆ ಸೃಷ್ಟಿಸಿದ್ದಾರೆ.

  • ತಿರುಪತಿ ಬಸ್ ಟಿಕೆಟ್‍ನಲ್ಲಿ ಹಜ್, ಜೆರುಸಲೆಂ ತೀರ್ಥಯಾತ್ರೆ ಜಾಹೀರಾತು: ಜಗನ್ ವಿರುದ್ಧ ಬಿಜೆಪಿ ಕಿಡಿ

    ತಿರುಪತಿ ಬಸ್ ಟಿಕೆಟ್‍ನಲ್ಲಿ ಹಜ್, ಜೆರುಸಲೆಂ ತೀರ್ಥಯಾತ್ರೆ ಜಾಹೀರಾತು: ಜಗನ್ ವಿರುದ್ಧ ಬಿಜೆಪಿ ಕಿಡಿ

    ಹೈದರಾಬಾದ್: ತಿರುಪತಿ -ತಿರುಮಲ ನಗರದ ಮಧ್ಯೆ ಪ್ರಯಾಣಿಸುವ ಆಂಧ್ರಪ್ರದೇಶ ರಸ್ತೆ ಸಾರಿಗೆ ನಿಗಮದ ಬಸ್‍ನಲ್ಲಿ ನೀಡಿರುವ ಟಿಕೆಟ್‍ಗಳು ಭಾರೀ ವಿವಾದಕ್ಕೆ ಗುರಿಯಾಗಿವೆ.

    ತಿರುಪತಿ ಬಸ್‍ಗಳಲ್ಲಿ ನೀಡುವ ಟಿಕೆಟ್‍ಗಳ ಹಿಂಭಾಗದಲ್ಲಿ ಹಜ್ ಹಾಗೂ ಜೆರುಸಲೆಮ್ ತೀರ್ಥಯಾತ್ರೆಯ ಕುರಿತು ಸಿಎಂ ವೈ.ಎಸ್.ಜಗನ್‍ಮೋಹನ್ ರೆಡ್ಡಿ ಸರ್ಕಾರವು ಮುದ್ರಿಸಿದೆ. ಹೀಗಾಗಿ ಆಂಧ್ರ ಪ್ರದೇಶ ಬಿಜೆಪಿ ನಾಯಕರು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈ ವಿಚಾರವನ್ನು ಪ್ರಯಾಣಿಕರೊಬ್ಬರು ಬುಧವಾರ ಪ್ರಾದೇಶಿಕ ವ್ಯವಸ್ಥಾಪಕರ ಗಮನಕ್ಕೆ ತಂದಿದ್ದರು. ಆಗ ಅವರು ಹಿಂದೂಯೇತರ ಯಾತ್ರೆಗಳ ಬಗ್ಗೆ ಮುದ್ರಿತವಾಗಿರುವ ಟಿಕೆಟ್‍ಗಳ ಬಂಡಲ್ ತಪ್ಪಾಗಿ ತಿರುಪತಿಗೆ ಬಂದಿದೆ ಅಂತ ತಿಳಿಸಿದ್ದರು ಎಂದು ವರದಿಯಾಗಿದೆ.

    ತಿರುಪತಿ ಬಸ್‍ಗಳ ಟಿಕೆಟ್‍ನಲ್ಲಿ ಮುದ್ರಿಸಿದ ಜಾಹೀರಾತು ವಿಷಯವನ್ನು ನಮ್ಮ ಗಮನಕ್ಕೆ ತರಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ. ಜೊತೆಗೆ ಇದು ಅಲ್ಪಸಂಖ್ಯಾತ ಇಲಾಖೆ ಹೊರಡಿಸಿದ ಸರ್ಕಾರದ ಜಾಹೀರಾತು ಎಂದು ಸಾರಿಗೆ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದ್ದಾರೆ.

    ಹೈದರಾಬಾದ್‍ನ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಬಸ್ ಟಿಕೆಟ್ ವಿಚಾರವಾಗಿ ಈಗಾಗಲೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಹಿಂದೂ ಧರ್ಮದವರಲ್ಲ. ಅವರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆಯೂ ಇಲ್ಲ. ಹೀಗಾಗಿ ಅಲ್ಪಸಂಖ್ಯಾತ ಧರ್ಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

    ಜಗನ್ ಮೋಹನ್ ರೆಡ್ಡಿ ಅವರು ಅಮೆರಿಕದಲ್ಲಿ ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ದೀಪ ಹಚ್ಚಲು ನಿರಾಕರಿಸಿದ್ದರು. ದೀಪ ಹಚ್ಚದೇ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಹಿಂದೂ ಸಂಪ್ರದಾಯಕ್ಕೆ ಅಗೌರವ ತೋರಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ರಾಯಚೂರಿನಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಆಂಧ್ರದಲ್ಲಿ ಶವವಾಗಿ ಪತ್ತೆ -ಆಟೋ ಚಾಲಕ ಬಂಧನ

    ರಾಯಚೂರಿನಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಆಂಧ್ರದಲ್ಲಿ ಶವವಾಗಿ ಪತ್ತೆ -ಆಟೋ ಚಾಲಕ ಬಂಧನ

    ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣ ಮಾಸುವ ಮುನ್ನವೇ, ನಗರದ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ಅಪ್ರಾಪ್ತೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

    17 ವರ್ಷದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಐದು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾಳೆ. ಕಾಲೇಜು ತರಗತಿಗಳು ಆರಂಭವಾಗದಿದ್ದರೂ ಪ್ಯಾರಾ ಮಡಿಕಲ್ ವಿದ್ಯಾರ್ಥಿನಿ ಆಗಸ್ಟ್ 16 ರಂದು ಗಣಮೂರು ಗ್ರಾಮದಿಂದ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ.

    ರಾಯಚೂರು ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಳು. ಇದರಿಂದ ಗಾಬರಿಯಾದ ಪೋಷಕರು ಆಗಸ್ಟ್ 17 ರಂದು ರಾಯಚೂರು ಮಹಿಳಾ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಆದರೆ ಆಗಸ್ಟ್ 20 ರಂದು ಆಂಧ್ರದ ಕರ್ನೂಲ್‍ನ ಗುಡೂರು ಠಾಣಾ ವ್ಯಾಪ್ತಿಯ ಸುಂಕೇಶ್ವರ ಜಲಾಶಯ ಬಳಿ ತುಂಗಭದ್ರ ನದಿಯಲ್ಲಿ ಶವ ಪತ್ತೆಯಾಗಿದ್ದಾಳೆ.

    ಪೋಷಕರ ಆರೋಪದ ಹಿನ್ನೆಲೆಯಲ್ಲಿ ಗ್ರಾಮದ ಆಟೋ ಚಾಲಕ ವೀರೇಂದ್ರ ಎಂಬವನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನ ವಶಕ್ಕೆ ಪಡೆದಿರುವ ಪೊಲೀಸರು ವಿದ್ಯಾರ್ಥಿನಿ ಸಾವಿನ ತನಿಖೆಯನ್ನ ಮುಂದುವರಿಸಿದ್ದಾರೆ.

    ವಿದ್ಯಾರ್ಥಿನಿ ಪೋಷಕರು 17ರಂದು ನಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದರು. ಅನುಮಾನಾಸ್ಪದ ವ್ಯಕ್ತಿಗಳನ್ನು ಕರೆಸಿ ತನಿಖೆ ಮಾಡಿದ್ದೆವು. ಆದರೆ ದುರದೃಷ್ಟವಶಾತ್ ವಿದ್ಯಾರ್ಥಿನಿ ಶವ ಆಂಧ್ರ ಪ್ರದೇಶದ ಸುಂಕೇಶ್ವರ ಜಲಾಶಯ ಬಳಿ ಪತ್ತೆಯಾಗಿದೆ. ನಮ್ಮ ಇಲಾಖೆ ಪೊಲೀಸರನ್ನು ಅಲ್ಲಿಗೆ ಕಳುಹಿಸಿ ಪರಿಶೀಲನೆ ನಡೆಸಿದ್ದೇವೆ. ಸದ್ಯಕ್ಕೆ ಅವರ ಪೋಷಕರು ಅನುಮಾನ ವ್ಯಕ್ತಪಡಿಸಿರುವ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಆಂಧ್ರದಲ್ಲಿ ಖಾಸಗಿ ಕಂಪನಿ, ಕೈಗಾರಿಕೆಗಳಲ್ಲಿ ರಾಜ್ಯದ ಯುವಜನತೆಗೆ ಶೇ.75 ಮೀಸಲು

    ಆಂಧ್ರದಲ್ಲಿ ಖಾಸಗಿ ಕಂಪನಿ, ಕೈಗಾರಿಕೆಗಳಲ್ಲಿ ರಾಜ್ಯದ ಯುವಜನತೆಗೆ ಶೇ.75 ಮೀಸಲು

    ಅಮರಾವತಿ: ಖಾಸಗಿ ಸಂಸ್ಥೆಗಳು ಹಾಗೂ ಕೈಗಾರಿಕೆಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯ ಯುವಜನತೆಗೆ ನೀಡಲು ಆಂಧ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸ್ಥಳೀಯ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಿರಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಸೋಮವಾರ ನಡೆದ ಅಧಿವೇಶನದಲ್ಲಿ ಆಂಧ್ರ ಪ್ರದೇಶದ ಕೈಗಾರಿಕೆಗಳು, ಕಾರ್ಖಾನೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯ್ದೆ-2019 ಸಂಬಂಧಿಸಿದ ಮಸೂದೆ ಪಾಸ್ ಆಗಿದೆ.

    ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಕೈಗಾರಿಕೆಗಳು, ಫ್ಯಾಕ್ಟರಿಗಳು, ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವ ಜಂಟಿ ಉದ್ಯಮಗಳು ಹಾಗೂ ಯೋಜನೆಗಳಲ್ಲಿ ಸ್ಥಳೀಯ ಯುವಕರಿಗೆ ಶೇ.75 ರಷ್ಟು ಉದ್ಯೋಗ ಮೀಸಲಿಡಬೇಕು ಎನ್ನವ ಅಂಶ ಒಳಗೊಂಡಿದೆ. ಅಷ್ಟೇ ಅಲ್ಲದೇ ಖಾಸಗಿ ಸಂಸ್ಥೆಗಳು ಸ್ಥಳೀಯ ಯುವಜನತೆಯಲ್ಲಿ ಕೌಶಲ್ಯವಿಲ್ಲ ಎಂದು ದೂರುವಂತಿಲ್ಲ. ಸರ್ಕಾರದ ಸಹಭಾಗಿತ್ವದಲ್ಲಿ ಅವರಿಗೆ ತರಬೇತಿ ನೀಡಬೇಕಾಗುತ್ತದೆ.

    ಈ ಹಿಂದೆ ಜಗನ್ ಮೋಹನ್ ರೆಡ್ಡಿ ಅವರು ಪಾದಯಾತ್ರೆ ವೇಳೆ ಈ ಭರವಸೆಯನ್ನು ನೀಡಿದ್ದರು. ಚುನಾವಣೆಯ ವೇಳೆ ಜಗನ್ ಅವರ ಪ್ರಣಾಳಿಕೆಯ ಅಂಶ ಕೂಡ ಆಗಿತ್ತು.

    ಕಾಯ್ದೆ ಜಾರಿಯಾದ ಬಳಿಕ ಆಂಧ್ರ ಪ್ರದೇಶದ 1.33 ಲಕ್ಷ ಗ್ರಾಮಗಳಲ್ಲಿ ಯುವಜನತೆ ಉದ್ಯೋಗಿಗಳಾಗುತ್ತಾರೆ. ಖಾಸಗಿ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಯುವಜನತೆಗೆ ಉದ್ಯೋಗ ನೀಡುವ ಕೋಟಾವನ್ನು ಶೀಘ್ರ ಜಾರಿಗೆ ತರಬೇಕು ಎಂದು ತಿಳಿಸಿದರು.

    ಹಲವು ರಾಜ್ಯಗಳು ಖಾಸಗಿ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಸ್ಥಳೀಯ ಯುವಜನತೆಗೆ ಉದ್ಯೋಗ ಕಾಯ್ದಿರಿಸುವ ಕಲ್ಪನೆಯನ್ನು ಮುಂದಿಟ್ಟಿವೆ. ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‍ನಾಥ್ ಅವರು ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಮೀಸಲಿರಿಸುವ ಕಾನೂನು ರೂಪಿಸುವ ಭರವಸೆಯನ್ನು ನೀಡಿದ್ದಾರೆ.

  • ಅಮರಾವತಿ ಯೋಜನೆಗೆ 2.5 ಸಾವಿರ ಕೋಟಿ ಸಾಲ ನೀಡಲು ವಿಶ್ವಬ್ಯಾಂಕ್ ಹಿಂದೇಟು

    ಅಮರಾವತಿ ಯೋಜನೆಗೆ 2.5 ಸಾವಿರ ಕೋಟಿ ಸಾಲ ನೀಡಲು ವಿಶ್ವಬ್ಯಾಂಕ್ ಹಿಂದೇಟು

    ಅಮರಾವತಿ: ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಯನ್ನು ವಿಶ್ವಬ್ಯಾಂಕ್ ಕೈ ಬಿಟ್ಟಿದ್ದು, ಇದರಿಂದ ಆಂಧ್ರದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ಅಡ್ಡಿ ಎದುರಾಗಿದೆ.

    ಈ ಹಿಂದೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಗೆ ವಿಶ್ವಬ್ಯಾಂಕ್ ಸುಮಾರು 300 ಮಿಲಿಯನ್ ಡಾಲರ್(2.5 ಸಾವಿರ ಕೋಟಿ ರೂ.) ಸಾಲ ನೀಡಲು ಒಪ್ಪಿಕೊಂಡಿತ್ತು. ಆದರೆ ಈಗ ಈ ಯೋಜನೆಯನ್ನು ಕೈಬಿಡಲಾಗಿದೆ ಎಂದು ವಿಶ್ವಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ತೋರಿಸುತ್ತಿದೆ. ಅಲ್ಲದೆ ಯೋಜನೆಗೆ ಸಂಬಂಧಿಸಿದಂತೆ ವಿಶ್ವಬ್ಯಾಂಕ್ ಅಧಿಕಾರಿಗಳು ಕೂಡ ಯಾವುದೇ ಪ್ರತಿಕ್ರಿಯೆಯನ್ನು ನೀಡುತ್ತಿಲ್ಲ, ಜೊತೆಗೆ ಈ ಬಗ್ಗೆ ಯಾವುದೇ ಕಾರಣವನ್ನು ಸ್ಪಷ್ಟಪಡಿಸಿಲ್ಲ.

    ರಾಜಧಾನಿ ಅಭಿವೃದ್ಧಿಗಾಗಿ ಅಮರಾವತಿ ವಲಯದಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ರೈತರು ದೂರು ದಾಖಲಿಸಿದ್ದರು. ಈ ದೂರನ್ನು ವಿಶ್ವಬ್ಯಾಂಕ್ ಪರಿಗಣನೆಗೆ ತೆಗೆದುಕೊಂಡಿದ್ದು, ಸಾಲ ನೀಡುವ ಒಪ್ಪಂದ ಕೈ ಬಿಡುವ ಬಂದಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

    ಟಿಡಿಪಿ(ತೆಲುಗು ದೇಶಂ ಪಕ್ಷ) ಸರ್ಕಾರವಿದ್ದಾಗ ಕೃಷ್ಣ ನದಿಗೆ ಹತ್ತಿರವಾಗಿರುವ ಅಮರಾವತಿ ಪ್ರದೇಶ ಅಭಿವೃದ್ಧಿ ಯೋಜನೆಗಾಗಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇದನ್ನು ವಿರೋಧಿಸಿ ಅನೇಕ ಎನ್‍ಜಿಓಗಳು ಹಾಗೂ ಪರಿಸರವಾದಿಗಳು ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಸಿ, ವಿರೋಧ ವ್ಯಕ್ತಪಡಿಸಿದ್ದರು.

    ಚಂದ್ರಬಾಬು ನಾಯ್ಡು ಸರ್ಕಾರವು ಇದನ್ನು ನರೇಂದ್ರ ಮೋದಿ ಸರ್ಕಾರ 2016 ರಲ್ಲಿ ಘೋಷಿಸಿದ ವಿಶೇಷ ಸಹಾಯ ಕ್ರಮಗಳ ಅಡಿಯಲ್ಲಿ, ಬಾಹ್ಯ ನೆರವಿನ ಯೋಜನೆಗಳ ಅಡಿಯಲ್ಲಿ ಪಟ್ಟಿಮಾಡಿದೆ ಎಂದು ವರದಿಯಾಗಿದೆ, ಆದ್ದರಿಂದಾಗಿ ಸಾಲ ಮರುಪಾವತಿ ಹೊರೆಯನ್ನು ಕೇಂದ್ರವು ತೆಗೆದುಕೊಳ್ಳಬೇಕಿತ್ತು.

    ಬಾಹ್ಯ ನೆರವಿನ ಯೋಜನೆಯ ಪ್ರಸ್ತಾವನೆಯಂತೆ ಅಮರಾವತಿ ಯೋಜನೆಗೆ ವಿಶ್ವಬ್ಯಾಂಕ್ 300 ಮಿಲಿಯನ್ ಡಾಲರ್ (ಸುಮಾರು 2.5 ಸಾವಿರ ಕೋಟಿ) ಹಾಗೂ ಎಐಐಬಿ 200 ಮಿಲಿಯನ್ ಡಾಲರ್ ಸಾಲ ನೀಡಲು ಒಪ್ಪಿಗೆ ಸೂಚಿಸಿದ್ದವು. ಆದರೆ ಇತ್ತ ವಿಶ್ವಬ್ಯಾಂಕ್ ಈ ಯೋಜನೆ ಕೈ ಬಿಟ್ಟಿದೆ, ಅತ್ತ ಎಐಐಬಿ ಇನ್ನೂ ತನ್ನ ನಿರ್ಧರದ ಬಗ್ಗೆ ಸ್ಪಷ್ಟಪಡಿಸಿಲ್ಲ. ಹೀಗಾಗಿ ಅಮರಾವತಿ ಯೋಜನೆ ಕಾರ್ಯರೂಪಕ್ಕೆ ಬರುವುದು ಕೊಂಚ ಅನುಮಾನವಾಗಿದೆ.

  • ‘ಪ್ರಜಾ ವೇದಿಕಾ’ ಕಟ್ಟಡ ಒಡೆದು ಹಾಕಲು ಅಧಿಕೃತ ಆದೇಶ ನೀಡಿದ ಸಿಎಂ ಜಗನ್

    ‘ಪ್ರಜಾ ವೇದಿಕಾ’ ಕಟ್ಟಡ ಒಡೆದು ಹಾಕಲು ಅಧಿಕೃತ ಆದೇಶ ನೀಡಿದ ಸಿಎಂ ಜಗನ್

    ಅಮರಾವತಿ: ಆಂಧ್ರ ಪ್ರದೇಶದಲ್ಲಿ ಸಿಎಂ ಜಗನ್ ಹಾಗೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ನಡುವಿನ ರಾಜಕೀಯ ದ್ವೇಷ ಹೆಚ್ಚಾಗುತ್ತಿದ್ದು, ಕೃಷ್ಣಾ ನದಿ ತೀರದ ಸಮೀಪ ಸಭೆ ನಡೆಸುವ ಉದ್ದೇಶದಿಂದ ನಾಯ್ಡು ನಿರ್ಮಿಸಿದ್ದ `ಪ್ರಜಾ ವೇದಿಕೆ’ ಸರ್ಕಾರಿ ಕಟ್ಟಡವನ್ನು ಒಡೆದು ಹಾಕುವಂತೆ ಇಂದು ಅಧಿಕೃತ ಆದೇಶ ನೀಡಿದ್ದಾರೆ.

    2017ರಲ್ಲಿ ನಾಯ್ಡು ಮನೆ ಸಮೀಪದಲ್ಲೇ 5 ಕೋಟಿ ರೂ. ವೆಚ್ಚದಲ್ಲಿ ಈ ವೇದಿಕೆ ನಿರ್ಮಿಸಿದ್ದರು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನೂ ನಡೆಸಿದ್ದರು. ಈ ವೇಳೆ, ಇದೇ ಕೊನೇ ಸಭೆ. ಪಾರದರ್ಶಕತೆ ನಿಟ್ಟಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.

    ಕೆಲ ವಾರಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಲಾಗಿತ್ತು. ಇತ್ತ ಜೂನ್ 4 ರಂದು ಪ್ರಜಾ ವೇದಿಕಾ ಬಳಿ ಇರುವ ಮನೆಯಲ್ಲೇ ಇರಲು ಅವಕಾಶ ಕೊಡುವಂತೆ ನಾಯ್ಡು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅಲ್ಲದೇ ‘ಪ್ರಜಾ ವೇದಿಕಾ’ ಹಾಲ್ ಅನ್ನು ಪಕ್ಷದ ಕಾರ್ಯಗಳನ್ನು ನಡೆಸಲು ಬಳಕೆ ಮಾಡಲು ನೀಡಬೇಕೆಂದು ಪತ್ರದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರು.

    ಇತ್ತ ಜಗನ್ ಸರ್ಕಾರ ಕೃಷ್ಣ ನದಿಯ ತಟದಲ್ಲಿ ನಿರ್ಮಾಣ ಮಾಡಿರುವ ಈ ಮನೆಯೂ ಕೂಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದೆ. ಉಳಿದಂತೆ ಮೇ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಜಗನ್ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಮನವಿ ಮಾಡಿದ್ದರು. 2014ರಿಂದಲೂ ಆಂಧ್ರ ಪ್ರದೇಶ ಸರ್ಕಾರ ಕೇಂದ್ರ ಸರ್ಕಾರ ಬಳಿ ವಿಶೇಷ ಸ್ಥಾನಮಾನಕ್ಕಾಗಿ ಒತ್ತಡ ಹಾಕುತ್ತಲೇ ಇದೆ. ಇದೇ ವಿಚಾರವಾಗಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಎನ್‍ಡಿಎ ಒಕ್ಕೂಟವನ್ನು ತೊರೆದು ಬಂದಿದ್ದರು.