Tag: ಆಂಧ್ರ ಪ್ರದೇಶ

  • 31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    ಅಮರಾವತಿ: ಬರೋಬ್ಬರಿ 31 ತಿಂಗಳ ನಂತರ ಟಿಡಿಪಿಯ (TDP) ಚಂದ್ರಬಾಬು ನಾಯ್ಡು (Chandrababu Naidu) ಮುಖ್ಯಮಂತ್ರಿಯಾಗಿಯೇ ವಿಧಾನಸಭೆ (Vidhana Sabha) ಪ್ರವೇಶಿಸುವ ಮೂಲಕ ಪ್ರತಿಜ್ಞೆ ಈಡೇರಿಸಿದ್ದಾರೆ.

    ವೈಎಸ್‌ಆರ್ ಪಕ್ಷದ ಮುಖಂಡರ ತೀವ್ರ ನಿಂದನೆಯಿಂದ ನೊಂದು ಕಣ್ಣೀರಿಟ್ಟಿದ್ದ ಚಂದ್ರಬಾಬು ನಾಯ್ಡು ಸಿಎಂ ಆಗಿಯೇ ಮತ್ತೆ ಆಂಧ್ರ ಪ್ರದೇಶ (Andhra Pradesh) ವಿಧಾನಸಭೆಗೆ ಕಾಲಿಡುವುದಾಗಿ 2021ರ ನವೆಂಬರ್‌ನಲ್ಲಿ ಶಪಥ ಮಾಡಿದ್ದರು. ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

    ಇಂದು ಅಧಿವೇಶನ ಆರಂಭಕ್ಕೆ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ಸಿಎಂ ಚಂದ್ರಬಾಬು ನಮಸ್ಕಾರ ಮಾಡಿದರು. ಸದನ ಪ್ರವೇಶಿಸುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಎದ್ದು ನಿಂತು ಚಂದ್ರಬಾಬು ನಾಯ್ಡು ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸತ್ಯ ಗೆದ್ದಿದೆ. ಪ್ರಜಾಪ್ರಭುತ್ವ ಉಳಿದಿದೆ ಎಂದು ಟಿಡಿಪಿ ಶಾಸಕರು ಭಿತ್ತಿಪತ್ರ ಪ್ರದರ್ಶಿಸಿ ಸಂಭ್ರಮಿಸಿದರು.

    ಇನ್ನೊಂದು ಕಡೆ ಮಾಜಿ ಸಿಎಂ ವೈಎಸ್ ಜಗನ್‌ಮೋಹನ್‌ರೆಡ್ಡಿ (Jagan Mohan Reddy) ಹಿಂಬಾಗಿಲ ಮೂಲಕ ವಿಧಾನಸಭೆಗೆ ಕಾಲಿಟ್ಟದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು

    2021ರಲ್ಲಿ ಆಗಿದ್ದು ಏನು?
    ನವೆಂಬರ್ 19 ರಂದು ಆಗಿನ ಆಡಳಿತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಸದಸ್ಯರು ತಮ್ಮ ಪತ್ನಿಯ ಬಗ್ಗೆ ಮಾಡಿದ ನಿಂದನೆಯ  ಹೇಳಿಕೆಯಿಂದ ಬೇಸರಗೊಂಡು ಸದನವನ್ನು ತೊರೆದಿದ್ದರು. ಮಹಿಳಾ ಸಬಲೀಕರಣದ ಚರ್ಚೆಯ ವೇಳೆ ವಿಧಾನಸಭೆಯಿಂದ ಹೊರನಡೆಯುವ ಮುನ್ನ ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದರು.

    ಇದು ಮಹಾಭಾರತದಲ್ಲಿ ದ್ರೌಪದಿಯನ್ನು ಅವಮಾನಿಸಿದ ಕೌರವರ ಸಭೆ ಎಂದು ಕಣ್ಣೀರು ಹಾಕಿದ್ದ ಚಂದ್ರಬಾಬು ನಾಯ್ಡು ಇನ್ನು ಮುಂದೆ ನಾನು ಈ ಸಭೆಗೆ ಹಾಜರಾಗುವುದಿಲ್ಲ. ನಾನು ಮುಖ್ಯಮಂತ್ರಿಯಾದ ನಂತರವೇ ಸದನಕ್ಕೆ ಮರಳುತ್ತೇನೆ ಪ್ರತಿಜ್ಞೆ ಮಾಡಿದ್ದರು.

    ಈ ಬಾರಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಟಿಡಿಪಿ, ಜನಾಸೇನಾ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಈ ಬಾರಿ ಒಟ್ಟು 175 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಬಹಳಷ್ಟು ಸೊಷಿಯಲಿಸ್ಟ್‌, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದ ಪರಿಣಾಮ ಜಗನ್‌ ನೇತೃತ್ವದ ವೈಎಸ್‌ಅರ್‌ಸಿಪಿ ಕಾಂಗ್ರೆಸ್‌ 151, ಟಿಡಿಪಿ 23, ಜನಸೇನಾ 1 ಸ್ಥಾನವನ್ನು ಗೆದ್ದುಕೊಂಡಿತ್ತು.

     

  • ಆಂಧ್ರ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ ಲೋಕಸಭೆಯ ಸ್ಪೀಕರ್‌?

    ಆಂಧ್ರ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ ಲೋಕಸಭೆಯ ಸ್ಪೀಕರ್‌?

    ನವದೆಹಲಿ: ಸಚಿವರಿಗೆ ಖಾತೆ ಹಂಚಿಕೆ ಅಂತಿಮವಾಗುತ್ತಿದ್ದಂತೆ 18ನೇ ಲೋಕಸಭೆಯ ಸ್ಪೀಕರ್‌ (Lok Sabha Speaker) ಹುದ್ದೆಗೆ ಆಂಧ್ರಪ್ರದೇಶ (Andhra Pradesh) ಬಿಜೆಪಿ ಅಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ (Purandeswari) ಹೆಸರು ಬಂದಿದೆ.

    ಬಿಜೆಪಿ (BJP) ಬಹುಮತ ಹೊಂದಿದ್ದ ಎರಡು ಅವಧಿಯಲ್ಲಿ ಕ್ರಮವಾಗಿ ಸುಮಿತ್ರಾ ಮಹಾಜನ್ ಮತ್ತು ಓಂ ಬಿರ್ಲಾ ಅವರು ಸ್ಪೀಕರ್ ಆಗಿದ್ದರು. ಆದರೆ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದೇ ಇದ್ದಾಗ ಸ್ಪೀಕರ್‌ ಯಾರಾಗುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

    ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಸ್ಪೀಕರ್‌ ಹುದ್ದೆ ನೀಡುವಂತೆ ಟಿಡಿಪಿ (TDP) ಬೇಡಿಕೆ ಇಟ್ಟಿತ್ತು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಸ್ಪೀಕರ್‌ ಹುದ್ದೆಗೆ ಭಾರೀ ಮಹತ್ವ ಇರುವ ಕಾರಣ ಬಿಜೆಪಿ ಬಿಟ್ಟು ಕೊಟ್ಟಿಲ್ಲ. ಈ ಕಾರಣಕ್ಕೆ ಟಿಡಿಪಿ ಮತ್ತು ಬಿಜೆಪಿಗೆ ಆಪ್ತವಾಗಿರುವ ಪುರಂದೇಶ್ವರಿ ಹೆಸರು ಈಗ ಕೇಳಿ ಬಂದಿದೆ. ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ – ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಮೋದಿ ಸಹಿ

    ಪುರಂದರೇಶ್ವರಿ ಯಾರು?
    ದಿವಂಗತ ಎನ್‌.ಟಿ.ರಾಮರಾವ್‌ ಅವರ ಪುತ್ರಿ ಆಗಿರುವ ಪುರಂದರೇಶ್ವರಿ ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಸದಸ್ಯೆಯಾಗಿದ್ದಾರೆ. ಟಿಡಿಪಿ ನಾಯಕ ಚಂದ್ರಬಾಬು (Chandrababu Naidu) ಅವರ ಪತ್ನಿಯ ಸಹೋದರಿಯಾಗಿದ್ದಾರೆ. ಪುರಂದರೇಶ್ವರಿ ಅವರ ಸಹೋದರ ಬಾಲಕೃಷ್ಣ ಹಿಂದೂಪುರ ವಿಧಾನಸಭಾ ಕ್ಷೇತ್ರದ ಟಿಡಿಪಿ ಶಾಸಕರಾಗಿದ್ದಾರೆ. ಆಂಧ್ರದಲ್ಲಿ ಬಿಜೆಪಿ ಮತ್ತು ಟಿಡಿಪಿ, ಜನಸೇನಾ ಮೈತ್ರಿಯಾಗಲು ಪುರಂದೇಶ್ವರಿ ಪಾತ್ರ ದೊಡ್ಡದು. ಈ ಕಾರಣಕ್ಕೆ ಪುರಂದೇಶ್ವರಿ ಹೆಸರು ಈಗ ಮುನ್ನೆಲೆಗೆ ಬಂದಿದೆ.

    ಪುರಂದರೇಶ್ವರಿ ಅವರನ್ನು ಸ್ಪೀಕರ್‌ ಸ್ಥಾನಕ್ಕೆ ಕೂರಿಸಿದರೆ ಸರ್ಕಾರ ಮಹಿಳೆಯರ ಪರವಾಗಿ ಇದೆ ಎಂಬ ಸಂದೇಶವನ್ನು ರವಾನಿಸದಂತಾಗುತ್ತದೆ. ಅಷ್ಟೇ ಅಲ್ಲದೇ ಮಿತ್ರ ಪಕ್ಷವಾದ ಟಿಡಿಪಿ, ಜನಸೇನಾ ಸೇರಿದಂತೆ ಯಾವುದೇ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇಲ್ಲ ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

     

  • ನಟಿ ರೋಜಾ ಸೋತ ಬೆನ್ನಲ್ಲೇ ಬಂಡ್ಲ ಗಣೇಶ್ ಪೋಸ್ಟ್ ವೈರಲ್

    ನಟಿ ರೋಜಾ ಸೋತ ಬೆನ್ನಲ್ಲೇ ಬಂಡ್ಲ ಗಣೇಶ್ ಪೋಸ್ಟ್ ವೈರಲ್

    ಆಂಧ್ರ ಪ್ರದೇಶದ (Andhra Pradesh) ವಿಧಾನಸಭೆ ಚುನಾವಣೆಯಲ್ಲಿ ನಟಿ ರೋಜಾ (Roja) ಸೋತಿದ್ದಾರೆ. ವೈಸಿಪಿ ಪಕ್ಷದಿಂದ ಸ್ಪರ್ಧಿಸಿದ್ದ ರೋಜಾ ಹೀನಾಯ ಸೋಲು ಕಂಡಿದ್ದಾರೆ. ಸಚಿವೆಯೂ ಆಗಿದ್ದ ನಟಿಯ ಈ ಸೋಲಿಗೆ ನಿರ್ಮಾಪಕ, ಉದ್ಯಮಿ ಬಂಡ್ಲ ಗಣೇಶ್ (Bandla Ganesh) ಸಖತ್ ಪ್ರತಿಕ್ರಿಯೆ ನೀಡಿದ್ದಾರೆ. ರೋಜಾ ಅವರನ್ನು ನಯವಾಗಿ ಕಾಲೆಳೆದಿದ್ದಾರೆ.

    ರೋಜಾ ಸೋಲಿನ ಬೆನ್ನಲ್ಲೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಬಂಡ್ಲ ಗಣೇಶ್, ‘ಜಬರ್ದಸ್ತ್ ಕಾಯ್ತಿದೆ.. ಬೇಗ ಬಾ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಜಬರ್ದಸ್ತ್ ಅನ್ನೋದು ರೋಜಾ ನಡೆಸಿಕೊಡುತ್ತಿದ್ದ ಶೋ. ಈಗ ರೋಜಾ ಸೋತಿದ್ದರಿಂದ ಯಾವುದೇ ಕೆಲಸ ಇರುವುದಿಲ್ಲ. ಹಾಗಾಗಿ ಈ ಶೋ ನಡೆಸಿಕೊಂಡು ಹೋಗು ಎನ್ನುವ ಅರ್ಥದಲ್ಲಿ ಕಾಲೆಳೆದಿದ್ದಾರೆ.

    ಪವನ್ ಕಲ್ಯಾಣ್ (Pawan Kalyan) ಅವರ ಆಪ್ತ ಬಂಡ್ಲೆ ಗಣೇಶ್, ಹಾಗಾಗಿ ರೋಜಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪವನ್ ಕಲ್ಯಾಣ್ ವಿರುದ್ಧ ರೋಜಾ ಸಿಡಿದೆದ್ದಾಗೆಲ್ಲ ಪವನ್ ಪರ ಬ್ಯಾಟ್ ಬೀಸಿದವರು ಗಣೇಶ್, ಪವನ್ ಗೆಲುವಿಗಾಗಿ ಸಾಕಷ್ಟು ಶ್ರಮ ವಹಿಸಿದವರು. ಈಗ ಪವನ್ ಗೆದ್ದಿದ್ದಾರೆ. ಅಧಿಕಾರ ಚುಕ್ಕಾಣೆಯನ್ನೂ ಹಿಡಿಯಲಿದ್ದಾರೆ. ಈ ವೇಳೆಯಲ್ಲಿ ಬಂಡ್ಲ ಬರೆದಿರೊ ಪೋಸ್ಟ್ ವೈರಲ್ ಆಗಿದೆ.

  • ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ವೈಎಸ್‍ಆರ್ ಶಾಸಕನಿಂದ ಕಪಾಳಮೋಕ್ಷ!

    ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ವೈಎಸ್‍ಆರ್ ಶಾಸಕನಿಂದ ಕಪಾಳಮೋಕ್ಷ!

    ಹೈದರಾಬಾದ್: ಕ್ಯೂನಲ್ಲಿ ಬಂದು ಮತ ಹಾಕಲು ಹೇಳಿದ್ದಕ್ಕೆ ವೈಎಸ್‍ಆರ್ ಕಾಂಗ್ರೆಸ್‍ನ (YSR Congress) ಶಾಸಕ ಅನ್ನಾಬತ್ತುನಿ ಶಿವಕುಮಾರ್ (Annabathuni Sivakumar) ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಆಂಧ್ರ ಪ್ರದೇಶದ (Andhra Pradesh) ತೆನಾಲಿ ಮತಗಟ್ಟೆಯಲ್ಲಿ ನಡೆದಿದೆ.

    ಈ ವೇಳೆ ಮತದಾರ ಸಹ ಶಾಸಕರ ಕೆನ್ನೆಗೆ ಭಾರಿಸಿದ್ದಾರೆ. ಇದರಿಂದ ಶಾಸಕರ ಬೆಂಬಲಿಗರು ಮತದಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲಿಸರು ಮತದಾರನನ್ನು ರಕ್ಷಿಸಿದ್ದಾರೆ. ತೆನಾಲಿಯ ಶಾಸಕ, ಸದ್ಯ ಅಭ್ಯರ್ಥಿಯಾಗಿ ಅನ್ನಾಬತ್ತುನಿ ಶಿವಕುಮಾರ್ ಸ್ಪರ್ಧೆ ಮಾಡಿದ್ದಾರೆ. ಇಂದು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ಗುರುದ್ವಾರಕ್ಕೆ ಭೇಟಿ ನೀಡಿ ಭಕ್ತರಿಗೆ ಪ್ರಸಾದ ಬಡಿಸಿದ ಪ್ರಧಾನಿ ಮೋದಿ

    ಶಾಸಕರು ಹಲ್ಲೆ ನಡೆಸಿರುವ ವೀಡಿಯೋವನ್ನು ತೆಲುಗುದೇಶಂ ಪಾರ್ಟಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮತದಾರನ ಮೇಲೆ ಹಲ್ಲೆ ಮಾಡಿದ ವೈಸಿಪಿ ಶಾಸಕನಿಗೆ ತಿರುಗಿ ಹೊಡೆದ ಸಾಮಾನ್ಯ ಮತದಾರ. ಪ್ರಜೆಗಳ ಆಕ್ರೋಶದಲ್ಲಿ ವೈಎಸ್‍ಆರ್ ಪಕ್ಷ ಕೊಚ್ಚಿ ಹೋಗುತ್ತಿದೆ ಎಂದು ಪೋಸ್ಟ್ ಮಾಡಿದೆ.

    ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Exclusive: ಕರ್ನಾಟಕದಲ್ಲಿ ‘ಆಪರೇಷನ್ ನಾಥ’ ಸುಳಿವು ಕೊಟ್ಟ ಏಕನಾಥ ಶಿಂಧೆ!

  • ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ

    ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ

    ಚಿಕ್ಕೋಡಿ: ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋವಾದಿಂದ‌ (Goa) ಆಂಧ್ರಕ್ಕೆ (Andhra Pradesh) ಅಕ್ರಮ ಸಾಗಾಟ ಮಾಡುತ್ತಿದ್ದ ಮದ್ಯವನ್ನು (Alcohol) ವಶಕ್ಕೆ ಪಡೆದಿದ್ದಾರೆ.

    16,848 ಲೀಟರ್ ಅಕ್ರಮ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾರ್ಡ್‌ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಹಾರ್ಡ್‌ವೇರ್ ಬದಲಿಗೆ ಗೋವಾದ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

    ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ

  • ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್

    ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್

    ತೆಲುಗಿನ ಖ್ಯಾತ ನಟ, ಜನಸೇನಾ ಪಾರ್ಟಿ ಮುಖ್ಯಸ್ಥ ಪವನ್ ಕಲ್ಯಾಣ್ ಬೆಂಬಲಕ್ಕೆ ತೆಲುಗಿನ ಮತ್ತೋರ್ವ ಹೆಸರಾಂತ ನಟ ಅಲ್ಲು ಅರ್ಜುನ್ (Allu Arjun) ಬೆಂಬಲಕ್ಕೆ ನಿಂತಿದ್ದಾರೆ. ಪವನ್ ಕಲ್ಯಾಣ್ ಗೆಲುವಿಗೆ ಶ್ರಮಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಪವನ್ ಅವರ ಸಮಾಜಸೇವೆಯನ್ನೂ ಅವರು ಶ್ಲ್ಯಾಘಿಸಿದ್ದಾರೆ.

    ಆಂಧ್ರಪ್ರದೇಶದಲ್ಲಿ ಚುನಾವಣೆ ಕಾವು ಜೋರಾಗಿದೆ. ದಿನಕ್ಕೊಂದು ತಿರುವನ್ನೂ ಅದು ಪಡೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಲಿಗಾಗಿ ಸರ್ವ ಪಕ್ಷಗಳು ಒಂದಾಗಿವೆ. ಮೈತ್ರಿ ಪಕ್ಷಗಳನ್ನು ಬಲ ಪಡಿಸೋಕೆ ಏನೆಲ್ಲ ಕಸರತ್ತುಗಳನ್ನು ಮಾಡಲಾಗುತ್ತಿದೆ. ಜಗನ್ ಮೋಹನ್ ರೆಡ್ಡಿ ಪಕ್ಷವನ್ನು ಸೋಲಿಸಲು ಒಂದು ಕಡೆ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ (Jana Sena) ಟೊಂಕ ಕಟ್ಟಿ ನಿಂತಿದ್ದರೆ, ಅದರ ಬೆಂಬಲಕ್ಕೆ ಹೆಸರಾಂತ ನಟ ಚಿರಂಜೀವಿ ಕೂಡ ಇರುವುದಾಗಿ ಘೋಷಣೆ ಮಾಡಿದ್ದಾರೆ.

    ಪವನ್ ಕಲ್ಯಾಣ್ ಬೆಂಬಲ ಕುರಿತಂತೆ ವಿಡಿಯೋವೊಂದನ್ನು ಮಾಡಿರುವ ಚಿರಂಜೀವಿ (Chiranjeevi), ಒಳ್ಳೆಯ ಆಡಳಿತಕ್ಕಾಗಿ ಜನಸೇನಾ ಮತ್ತು ಮೈತ್ರಿಕೂಟವನ್ನು ಬೆಂಬಲಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅಗತ್ಯವಿದ್ದರೆ ಪವನ್ ಕಲ್ಯಾಣ್ (Pawan Kalyan) ಮತ್ತು ಅವರ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಬರುವುದಾಗಿ ಅವರು ಹೇಳಿಕೊಂಡಿದ್ದಾರೆ.

     

    ಮೇ 13ರಂದು ಆಂಧ್ರಪ್ರದೇಶದ (Andhra Pradesh) ಚುನಾವಣೆ ನಡೆಯುತ್ತಿದೆ. ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈಗಾಗಲೇ ಮತದಾರನ ಒಲವು ಪವನ್ ಕಲ್ಯಾಣ್ ಕಡೆ ಇದೆ ಎಂದು ಹೇಳಲಾಗುತ್ತಿದೆ. ನಟ ನಾನಿ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಪವನ್ ಕಲ್ಯಾಣ್ ಪರ ಮತಯಾಚನೆ ಮಾಡುವ ಇಂಗಿತವನ್ನೂ ವ್ಯಕ್ತ ಪಡಿಸಿದ್ದಾರೆ. ಈ ಚುನಾವಣೆ ನಿಜಕ್ಕೂ ರಂಗೇರಿದೆ.

  • ಪವನ್ ಕಲ್ಯಾಣ್ ಗಾಗಿ ಕೊನೆಗೂ ಅಖಾಡಕ್ಕೆ ಇಳಿದ ನಟ ಚಿರಂಜೀವಿ

    ಪವನ್ ಕಲ್ಯಾಣ್ ಗಾಗಿ ಕೊನೆಗೂ ಅಖಾಡಕ್ಕೆ ಇಳಿದ ನಟ ಚಿರಂಜೀವಿ

    ಆಂಧ್ರಪ್ರದೇಶದಲ್ಲಿ ಚುನಾವಣೆ ಕಾವು ಜೋರಾಗಿದೆ. ದಿನಕ್ಕೊಂದು ತಿರುವನ್ನೂ ಅದು ಪಡೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಲಿಗಾಗಿ ಸರ್ವ ಪಕ್ಷಗಳು ಒಂದಾಗಿವೆ. ಮೈತ್ರಿ ಪಕ್ಷಗಳನ್ನು ಬಲ ಪಡಿಸೋಕೆ ಏನೆಲ್ಲ ಕಸರತ್ತುಗಳನ್ನು ಮಾಡಲಾಗುತ್ತಿದೆ. ಜಗನ್ ಮೋಹನ್ ರೆಡ್ಡಿ ಪಕ್ಷವನ್ನು ಸೋಲಿಸಲು ಒಂದು ಕಡೆ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ (Jana Sena) ಟೊಂಕ ಕಟ್ಟಿ ನಿಂತಿದ್ದರೆ, ಅದರ ಬೆಂಬಲಕ್ಕೆ ಹೆಸರಾಂತ ನಟ ಚಿರಂಜೀವಿ ಇರುವುದಾಗಿ ಘೋಷಣೆ ಮಾಡಿದ್ದಾರೆ.

    ಪವನ್ ಕಲ್ಯಾಣ್ ಬೆಂಬಲ ಕುರಿತಂತೆ ವಿಡಿಯೋವೊಂದನ್ನು ಮಾಡಿರುವ ಚಿರಂಜೀವಿ (Chiranjeevi), ಒಳ್ಳೆಯ ಆಡಳಿತಕ್ಕಾಗಿ ಜನಸೇನಾ ಮತ್ತು ಮೈತ್ರಿಕೂಟವನ್ನು ಬೆಂಬಲಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅಗತ್ಯವಿದ್ದರೆ ಪವನ್ ಕಲ್ಯಾಣ್ (Pawan Kalyan) ಮತ್ತು ಅವರ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಬರುವುದಾಗಿ ಅವರು ಹೇಳಿಕೊಂಡಿದ್ದಾರೆ.

     

    ಮೇ 13ರಂದು ಆಂಧ್ರಪ್ರದೇಶದ (Andhra Pradesh) ಚುನಾವಣೆ ನಡೆಯುತ್ತಿದೆ. ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈಗಾಗಲೇ ಮತದಾರನ ಒಲವು ಪವನ್ ಕಲ್ಯಾಣ್ ಕಡೆ ಇದೆ ಎಂದು ಹೇಳಲಾಗುತ್ತಿದೆ. ನಟ ನಾನಿ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಪವನ್ ಕಲ್ಯಾಣ್ ಪರ ಮತಯಾಚನೆ ಮಾಡುವ ಇಂಗಿತವನ್ನೂ ವ್ಯಕ್ತ ಪಡಿಸಿದ್ದಾರೆ. ಈ ಚುನಾವಣೆ ನಿಜಕ್ಕೂ ರಂಗೇರಿದೆ.

  • ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ –  ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಪಾರು

    ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ – ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಪಾರು

    ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಅವರು ಕಾರು ಅಪಘಾತದಿಂದ ಪಾರಾಗಿದ್ದಾರೆ.

    ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು (Accident) ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಅಪಘಾತ ಸಂಭವಿಸಿದ್ದು ಇಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಘಟನೆ ವಿವರಿಸಿದ್ದಾರೆ. ಅಷ್ಟೇ ಅಲ್ಲದೇ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿಗೆ ಮನವಿ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಏಪ್ರಿಲ್ 23 ರಂದು ಟಯೋಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್‌ನಲ್ಲಿ ಅನಂತಪುರ ಮತ್ತು ಕದ್ರಿ (ಆಂಧ್ರಪ್ರದೇಶ) ನಡುವೆ ಚಾಲನೆ ಮಾಡುವಾಗ ರಸ್ತೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಹೆದ್ದಾರಿಯಲ್ಲಿ ಯಾವುದೇ ಎಚ್ಚರಿಕೆ ಫಲಕಗಳಿಲ್ಲದ ಕಾರಣ ಟಿಪ್ಪರಿಗೆ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

    ನಮ್ಮ ಕಾರು ಮೂರು ಬಾರಿ ಪಲ್ಟಿಯಾಗಿದ್ದು ನಾವೆಲ್ಲರೂ ಅಪಾಯದಿಂದ ಪಾರಾಗಿದ್ದೇವೆ. ವೆಂಕಿ ತೀವ್ರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ನನ್ನ ಪಕ್ಕೆಲುಬುಗಳು ಮುರಿದಿದ್ದು, ಸೀಟ್‌ಬೆಲ್ಟ್ ಮತ್ತು ಏರ್‌ಬ್ಯಾಗ್‌ಗಳು ನಮ್ಮನ್ನು ಉಳಿಸಿದೆ. ಅಪಘಾತವಾದ ನಂತರ ನಮ್ಮನ್ನು ಕಾರಿನಿಂದ ಹೊರಗೆ ಎಳೆದು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆಂಧ್ರಪ್ರದೇಶ ಸರ್ಕಾರದ ಆರೋಗ್ಯ ಕೇಂದ್ರವನ್ನು ಮೆಚ್ಚಲೇಬೇಕು. ಅಂಬುಲೆನ್ಸ್‌ ಮೂಲಕ ನನ್ನನ್ನು ಅನಂತಪುರಕ್ಕೆ ದಾಖಲಿಸಲಾಯಿತು. ಉತ್ತಮ ಕೆಲಸ ಮಾಡಿದ್ದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ.

    40 ವರ್ಷಗಳಿಂದ ನಾನು ವಾಹನ ಚಲಾಯಿಸುತ್ತಿದ್ದರೂ ಅಪಘಾತ ಸಂಭವಿಸಿದೆ. ಅತ್ಯುತ್ತಮ ಹೆದ್ದಾರಿಗಳ ಜೊತೆಗೆ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಈ ಅಪಘಾತದ ತನಿಖೆ ನಡೆಸುವಂತೆ ಟಯೋಟಾ ಕಂಪನಿಗೆ ವಿನಂತಿಸಿದ್ದಾರೆ.

     

  • ಪವನ್ ಕಲ್ಯಾಣ್ ಆಸ್ತಿ ಇಷ್ಟೇನಾ?: ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರ

    ಪವನ್ ಕಲ್ಯಾಣ್ ಆಸ್ತಿ ಇಷ್ಟೇನಾ?: ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರ

    ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan), ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ (Election) ಸ್ಪರ್ಧಿಸಿದ್ದಾರೆ. ಈಗಾಗಲೇ ಅವರು ಕಾಕಿನಾಡು ಜಿಲ್ಲೆಯ ಪೀಟಾಪುರಮ್ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈ ಬೆನ್ನಲ್ಲೇ ನಾಮಿನೇಷನ್ ಸಲ್ಲಿಸಿ, ಆಸ್ತಿಯನ್ನು (Property Details) ಘೋಷಣೆ ಮಾಡಿದ್ದಾರೆ.

    ಚರಾಸ್ತಿ, ಸ್ಥಿರಾಸ್ತಿಗಳನ್ನು ಸೇರಿಸಿ ತಮ್ಮ ಬಳಿ ಒಟ್ಟಾರೆ ಎಷ್ಟು ಆಸ್ತಿ ಇದೆ ಎನ್ನುವುದನ್ನು ಅವರು ಅಫಿಡೆವಿಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸಿನಿಮಾವೊಂದಕ್ಕೆ ಕೋಟಿ ಕೋಟಿ ಸಂಭಾವನೆ ಪಡೆಯುವ ನೂರಾರು ಕೋಟಿ ಬಜೆಟ್ ಸಿನಿಮಾಗಳಲ್ಲಿ ನಟಿಸುವ ಪವನ್ ಕಲ್ಯಾಣ್ ಬಳಿ ಇರೋ ಆಸ್ತಿ ಇಷ್ಟೇನಾ ಎಂದು ಅಭಿಮಾನಿಗಳು ಬೆರಗುಗಣ್ಣಿನಿಂದ ನೋಡಿದ್ದಾರೆ.

    ಚುನಾವಣೆ ಆಯೋಗಕ್ಕೆ ಪವನ್ ಕಲ್ಯಾಣ್ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ, 136 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅವರು ಹೊಂದಿದ್ದಾರೆ. 18 ಕೋಟಿ ರೂಪಾಯಿ ಮೌಲ್ಯದ ಕೃಷಿ ಭೂಮಿ ಹಾಗೂ 52.85 ಕೋಟಿ ರೂಪಾಯಿ ಬೆಲೆಯ ಕೃಷಿಯೇತರ ಜಮೀನನನ್ನು ಅವರು ಹೊಂದಿದ್ದಾರೆ. 2019ರಲ್ಲಿ ಅವರು 52.85 ಕೋಟಿ ರೂಪಾಯಿ ಆಸ್ತಿ ತೋರಿಸಿದ್ದರು.

     

    ಪವನ್ ಕಲ್ಯಾಣ್ ಈ ಹಿಂದೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಾಗ ಇವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳು ಇರಲಿಲ್ಲ. ಆದರೆ, ಈಗ 8 ಪ್ರಕರಣಗಳು ಇವರ ಮೇಲಿವೆ.

  • ಜ್ವರದಿಂದ ಬಳಲುತ್ತಿದ್ದಾರೆ ನಟ ಪವನ್ ಕಲ್ಯಾಣ್

    ಜ್ವರದಿಂದ ಬಳಲುತ್ತಿದ್ದಾರೆ ನಟ ಪವನ್ ಕಲ್ಯಾಣ್

    ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯ ಸುತ್ತುತ್ತಿದ್ದಾರೆ ನಟ ಪವನ್ ಕಲ್ಯಾಣ್ (Pawan Kalyan). ಲೋಕಸಭೆ ಮತ್ತು ಮುಂದಿನ ಆಂಧ್ರದ ವಿಧಾನಸಭೆ ಚುನಾವಣೆಗಾಗಿ ಅವರು ಭರ್ಜರಿ ಸಿದ್ದತೆ ನಡೆಸಿದ್ದಾರೆ. ಹಗಲು ರಾತ್ರಿ ಪ್ರಚಾರದಲ್ಲಿ ತೊಡಗಿದ್ದರಿಂದ ಪವನ್ ಕಲ್ಯಾಣ್ ಆಯಾಸಗೊಂಡಿದ್ದಾರಂತೆ.

    ಪಿಠಾಪುರಂ ಕ್ಷೇತ್ರದಿಂದ ಪವನ್ ಕಲ್ಯಾಣ್ ಚುನಾವಣೆಗೆ ಸ್ಪರ್ಧಿಸುವುದರಿಂದ ಅಲ್ಲಿ ಹೆಚ್ಚೆಚ್ಚು ಸಭೆಗಳನ್ನು ನಡೆಸಿದ್ದಾರೆ. ನಿನ್ನೆ ನಡೆದ ಸಭೆಯ ನಂತರ ಪವನ್ ಅಸ್ವಸ್ಥರಾದರು ಎನ್ನಲಾಗುತ್ತಿದೆ. ಜೊತೆಗೆ ಅವರಿಗೆ ಜ್ವರ ಕೂಡ ಬಾಧಿಸುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

     

    ಜ್ವರ ಮತ್ತು ಕೆಮ್ಮಿನಿಂದ ವಿಪರೀತ ಬಳಲುತ್ತಿರುವ ಪವನ್ ಕಲ್ಯಾಣ್, ಈಗಾಗಲೇ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಮತ್ತೆ ಅವರು ತಮ್ಮ ರಾಜಕೀಯ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದಾರೆ.