Tag: ಆಂಧ್ರ ಸಿಎಂ

  • ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    – ವೃದ್ಧರ ಸಂಖ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು

    ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು (Chandrababu Naidu) ಕರೆ ನೀಡಿದ್ದಾರೆ.

    ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

    2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

    ನಾವು 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೆಚ್ಚಿನ ವಯಸ್ಸಾದ ಜನಸಂಖ್ಯೆಯನ್ನು ಹೊಂದಿವೆ. ದಕ್ಷಿಣದಲ್ಲಿ ಭಾರತದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.

  • ಆಂಧ್ರ ಸಿಎಂ ಪರಿಹಾರ ನಿಧಿಯ 117 ಕೋಟಿಗೆ ಕನ್ನಕ್ಕೆ ಯತ್ನ- ದಕ್ಷಿಣ ಕನ್ನಡದ 6 ಮಂದಿ ಅರೆಸ್ಟ್

    ಆಂಧ್ರ ಸಿಎಂ ಪರಿಹಾರ ನಿಧಿಯ 117 ಕೋಟಿಗೆ ಕನ್ನಕ್ಕೆ ಯತ್ನ- ದಕ್ಷಿಣ ಕನ್ನಡದ 6 ಮಂದಿ ಅರೆಸ್ಟ್

    – ತುಳು ಚಿತ್ರದ ನಿರ್ಮಾಪಕ ಪ್ರಕರಣದ ಪ್ರಮುಖ ಆರೋಪಿ

    ಮಂಗಳೂರು: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪರಿಹಾರ ನಿಧಿಗೆ ಕನ್ನ ಹಾಕಲು ಪ್ರಯತ್ನ ಮಾಡಿದ ಕರಾವಳಿಯ ಆರು ಮಂದಿ ಖದೀಮರು ಪೊಲೀಸ್ ಬಲೆಗೆ ಬಿದ್ದಿದ್ದಾರೆ.

    ಆಂಧ್ರದ ಎಸಿಬಿ ಟೀಂ ಮಂಗಳೂರಿನಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಆಂಧ್ರ ಸಿಎಂ ಪರಿಹಾರ ನಿಧಿಯಲ್ಲಿ ಒಟ್ಟು 117 ಕೋಟಿ ರೂಪಾಯಿ ವಂಚನೆಗೆ ಆರೋಪಿಗಳು ಪ್ಲಾನ್ ಮಾಡಿದ್ದು, ಚೆಕ್ ಡ್ರಾ ಮಾಡುವ ವೇಳೆ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಆಂಧ್ರ ಪ್ರದೇಶದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರದಲ್ಲಿ ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಪ್ರಕರಣವನ್ನು ಜಾಲಾಡಿದ್ದಾರೆ.

    ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ಕೋಸ್ಟಲ್ ವುಡ್ ಚಿತ್ರ ನಿರ್ಮಾಪಕ ಉದಯ್ ಶೆಟ್ಟಿ, ಮಂಗಳೂರಿನ ಬ್ರಿಜೇಶ್ ರೈ, ಬೆಳ್ತಂಗಡಿಯ ಗಂಗಾಧರ್ ಸುವರ್ಣ ಹಾಗೂ ಕಬೀರ್ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳ ಪೈಕಿ ಮೂಡಬಿದಿರೆಯ ನಿವಾಸಿ ಯೋಗೀಶ್ ಆಚಾರ್ಯ, ಮೂಡಬಿದಿರೆಯ ಎಸ್‍ಬಿಐ ಬ್ಯಾಂಕಿಗೆ 52 ಕೋಟಿ ರೂಪಾಯಿ ಚೆಕ್ ನಗದೀಕರಣಕ್ಕೆ ಹಾಕಿದ್ದು, ನಗದು ವರ್ಗಾವಣೆ ಮಾಡುವಾಗ ಬ್ಯಾಂಕ್ ಮ್ಯಾನೇಜರ್ ರಿಲೀಫ್ ಫಂಡಿಗೆ ಕನ್ಫರ್ಮೇಶನ್ ಕೇಳಿದ್ದು, ಈ ವೇಳೆ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

    ಕೂಡಲೇ ಮಂಗಳೂರಿಗೆ ಆಗಮಿಸಿದ ಆಂಧ್ರ ಎಸಿಬಿ ಟೀಂ ಯೋಗೀಶ್ ಆಚಾರ್ಯರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಆರೋಪಿಗಳ ಕುರಿತು ಮಾಹಿತಿ ಕೊಟ್ಟಿದ್ದು, ಪೊಲೀಸರು ಸದ್ಯ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಜಾಲ ಇತರ ರಾಜ್ಯಗಳಲ್ಲೂ ವ್ಯಾಪಕವಾಗಿ ಬೆಳೆದಿರುವ ಶಂಕೆಯಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೇವಲ ಆಂಧ್ರಪ್ರದೇಶ ಸಿಎಂ ಮಾತ್ರವಲ್ಲದೆ ಮಿಜೋರಾಂ, ಬಿಹಾರ, ಉತ್ತರ ಪ್ರದೇಶದ ಸಿಎಂ ಪರಿಹಾರ ನಿಧಿಗೂ ಕನ್ನ ಹಾಕಿರುವ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ.

    ಈ ಆರೋಪಿಗಳು ಮುದ್ರಿತ ಚೆಕ್‍ನ್ನು ವಿಶಿಷ್ಟ ರಾಸಾಯನಿಕ ಬಳಸಿ ತಮಗೆ ಬೇಕಾದಂತೆ ಬರೆದುಕೊಳ್ಳುತ್ತಿದ್ದರು. ವಂಚನಾ ಜಾಲದಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬ ಕಿಂಗ್ ಪಿನ್ ಅಂತಾ ತಿಳಿದು ಬಂದಿದೆ. ಒಟ್ಟಿನಲ್ಲಿ ಅತೀ ದೊಡ್ಡ ವಂಚನಾ ಜಾಲವೊಂದು ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಮತ್ತಷ್ಟು ಅವ್ಯವಹಾರಗಳು ಮುನ್ನಲೆಗೆ ಬರಲಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.