Tag: ಆಂಬ್ಯುಲೆನ್ಸ್

  • ಆಂಬ್ಯುಲೆನ್ಸ್ ನಲ್ಲೇ ಅರೆಪ್ರಜ್ಞಾವಸ್ಥೆಯಲ್ಲಿದ್ದ ಗಾಯಾಳುವಿಗೆ ವ್ಯಕ್ತಿಗಳಿಬ್ಬರು ಮನಬಂದಂತೆ ಥಳಿಸಿದ ವೀಡಿಯೋ ವೈರಲ್

    ಆಂಬ್ಯುಲೆನ್ಸ್ ನಲ್ಲೇ ಅರೆಪ್ರಜ್ಞಾವಸ್ಥೆಯಲ್ಲಿದ್ದ ಗಾಯಾಳುವಿಗೆ ವ್ಯಕ್ತಿಗಳಿಬ್ಬರು ಮನಬಂದಂತೆ ಥಳಿಸಿದ ವೀಡಿಯೋ ವೈರಲ್

    ಬಾಗಲಕೋಟೆ: ಗಲಾಟೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಗಾಯಾಳು ವ್ಯಕ್ತಿಗೆ ಆಂಬುಲೆನ್ಸ್ ಒಳಗಡೆಯೇ ಇಬ್ಬರು ಮನಬಂದಂತೆ ಥಳಿಸುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಏಪ್ರಿಲ್ 8ರಂದು ನಡೆದಿದೆ ಎಂದು ಹೇಳಲಾಗುತ್ತಿದೆ.

    ನಡೆದಿದ್ದೇನು?: ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಹೊರವಲಯದ ಬಾರ್‍ನಲ್ಲಿ ನಾಲ್ವರು ಪಾರ್ಟಿ ಮಾಡ್ತಾರೆ. ಕಂಠಪೂರ್ತಿ ಕುಡಿದ ಮೇಲೆ ಅವರ ಮಧ್ಯ ಗಲಾಟೆ ನಡೆದು ಕೈಕೈ ಮಿಲಾಯಿಸಿದ್ದಾರೆ. ಪರಿಣಾಮ ಓರ್ವನಿಗೆ ಗಂಭೀರ ಗಾಯಗಳಾಗಿದೆ. ಆ ಸಂದರ್ಭದಲ್ಲಿ ಅದ್ಯಾರೋ 108 ಗೆ ಕರೆ ಮಾಡಿದ್ದು, ಕಲಾದಗಿ ಗ್ರಾಮದ 108 ವಾಹನದಲ್ಲಿ ಆಗಮಿಸಿದ ಸಿಬ್ಬಂದಿ ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ಗಾಯಾಳು ವ್ಯಕ್ತಿಯ ಜೊತೆ ಇಬ್ಬರು ವ್ಯಕ್ತಿಗಳು ಕೂತಿದ್ದು, ಕುಡಿದ ಮತ್ತಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಗಾಯಾಳುವಿಗೆ ಹಿಗ್ಗಾಮುಗ್ಗಾವಾಗಿ ಥಳಿಸಿದ್ದಾರೆ.

    ಎದ್ದೇಳಲು ಸಾಧ್ಯವಾಗದೇ ಗಾಯಾಳು ನರಳುತ್ತಿದ್ದರೂ ಅದನ್ನು ಲೆಕ್ಕಿಸದೇ ಮನಬಂದಂತೆ ಥಳಿಸುತ್ತಾರೆ. ಹಲ್ಲೆ ಮಾಡಬೇಡಿ ಎಂದು 108 ಸಿಬ್ಬಂದಿ ಮನವಿ ಮಾಡಿದ್ರು ಅದನ್ನು ಕಿವಿಗೆ ಹಾಕಿಕೊಳ್ಳುವ ಸ್ಥಿತಿಯಲ್ಲಿ ಅವರು ಇರಲಿಲ್ಲ. ಏನಾದರೂ ಹೆಚ್ಚು ಕಡಿಮೆ ಆದರೆ ಇರಲಿ ಎಂದು 108 ಸಿಬ್ಬಂದಿಯೇ ಹಲ್ಲೆ ನಡೆಸಿರುವುದನ್ನು ವಿಡಿಯೋ ಮಾಡಿದ್ರು ಎಂದು ಹೇಳಲಾಗುತ್ತಿದೆ.

    ಈ ನಡುವೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ತಮಗೆ ಯಾರೂ ಏನು ಮಾಡಲ್ಲ ಅಂಥ ಹೇಳುತ್ತಲೇ ಸಿದ್ದರಾಮಯ್ಯ, ಚಿಮ್ಮನಕಟ್ಟಿ ಅಂಥೆಲ್ಲ ಮಾತಾಡ್ತಾರೆ. ಕೊನೆಗೆ ಗಾಯಾಳುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಒಂದು ವಾರ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ನಂತರ ಬಿಡುಗಡೆ ಆಗಿದ್ದಾರೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದ ಲಂಕೆಪ್ಪ ಮಾಯಪ್ಪ ಸಿರಿಕಾರ(50) ಎಂದು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯ ವಿಜಯಕುಮಾರ ತಿಳಿಸಿದ್ದಾರೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    https://www.youtube.com/watch?v=_pDzYRBwaos&feature=youtu.be

  • ಅಡ್ಡದಾರಿ ಮೂಲಕ ಸರ್ಕಾರದ ದುಡ್ಡು ಹೊಡೆಯುತ್ತಿದೆ ಜಿವಿಕೆ

    ಅಡ್ಡದಾರಿ ಮೂಲಕ ಸರ್ಕಾರದ ದುಡ್ಡು ಹೊಡೆಯುತ್ತಿದೆ ಜಿವಿಕೆ

    – ನಡುರೋಡಲ್ಲಿ ರೋಗಿಗಳ ಶಿಫ್ಟಿಂಗ್
    – ಪಬ್ಲಿಕ್ ಟಿವಿಯಲ್ಲಿ 108 ಆಂಬ್ಯುಲೆನ್ಸ್ ಕರ್ಮಕಾಂಡ

    * ರಕ್ಷಾ ಕಟ್ಟೆಬೆಳಗುಳಿ

    ಬೆಂಗಳೂರು: ಪ್ರಾಣ ರಕ್ಷಣೆಗಾಗಿ ಮೀಸಲಿರೋ 108 ಅಂಬುಲೆನ್ಸ್‍ಗಳು ಪ್ರಾಣ ಭಕ್ಷಕನ ರೀತಿ ಕೆಲಸ ಮಾಡ್ತಾ ಇವೆ. ಸರ್ಕಾರಕ್ಕೆ ಹೆಚ್ಚೆಚ್ಚು ಟ್ರಿಪ್‍ಗಳನ್ನು ತೋರಿಸೋ ನಿಟ್ಟಿನಲ್ಲಿ ರಸ್ತೆ ಮಧ್ಯದಲ್ಲೇ ರೋಗಿಗಳ ಶಿಫ್ಟಿಂಗ್ ನಡೆಯುತ್ತಿದೆ.

    ಹೌದು. ಜನರ ಜೀವ ರಕ್ಷಣೆಕಾಗಿ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸೋ 108 ಆಂಬ್ಯುಲೆನ್ಸ್ ಗಳಲ್ಲಿ ಇತ್ತೀಚೆಗೆ ಶುರುವಾಗಿರೋ ಮತ್ತೊಂದು ಕರ್ಮಕಾಂಡ ಇದು. ರಾಜ್ಯದಲ್ಲಿ ಒಟ್ಟು 717 108 ಆಂಬ್ಯುಲೆನ್ಸ್‍ಗಳು ಕಾರ್ಯನಿರ್ವಹಿಸುತ್ತಿವೆ. ಈ ವಾಹನಗಳ ಮೇಲುಸ್ತುವಾರಿ ವಹಿಸಿರೋ ಜಿವಿಕೆ ಸಂಸ್ಥೆ ಸರ್ಕಾರಕ್ಕೆ ಹೆಚ್ಚು ಶೆಡ್ಯೂಲ್‍ಗಳನ್ನು ತೋರಿಸೋಕೆ ಒಂದು ಪೇಷೆಂಟ್‍ನ ಎರಡು 108 ಆಂಬ್ಯುಲೆನ್ಸ್ ಆಸ್ಪತ್ರೆಗೆ ಸಾಗಿಸೋ ಕೆಲಸ ಮಾಡ್ತಿದ್ದು, ರೋಗಿಗಳ ಜೀವದೊಂದಿಗೆ ಆಟವಾಡ್ತಿದ್ದಾರೆ. ಇತ್ತ ಇದೇ ಶಿಫ್ಟಿಂಗ್ ವಿಚಾರದಿಂದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಸ್ಥಳೀಯರಿಂದ ಥಳಿತಕೊಳಗಾದ ಘಟನೆಗೆಳು ಸಹ ನಡೆದಿವೆ.

    ಶವ ಸಾಗಿಸೋಕ್ಕೆ ತಯಾರಿ: ಈಗಾಗ್ಲೇ 717, 108 ಆಂಬ್ಯುಲೆನ್ಸ್ ಗಳನ್ನು ಮೇಲುಸ್ತುವಾರಿ ಹೊತ್ತಿರೋ ಪರರಾಜ್ಯದ ಜಿವಿಕೆ, ಭ್ರಷ್ಟಾಚಾರ, ಹಾಗೂ ರೊಗಿಗಳ ಬಗೆಗಿನ ನಿರ್ಲಕ್ಷ್ಯಕ್ಕೆ ಹೆಸರಾಗಿರೋ ಜೆವಿಕೆಗೆ ರಾಜ್ಯದ ತಾಲೂಕು ಆಸ್ಪತ್ರೆಗಳ 800 ಆಂಬ್ಯುಲೆನ್ಸ್ ಗಳು ಹಾಗೂ ಮುಕ್ತಿ ವಾಹನದ ಉಸ್ತುವಾರಿಯನ್ನು ನೀಡೋಕೆ ಸರ್ಕಾರ ಚಿಂತನೆ ನಡೆಸಿದೆ. ಹಾಗಾಗಿ ಶವವನ್ನು ಸಹ 108 ಆಂಬ್ಯುಲೆನ್ಸ್ ಗಳಲ್ಲಿ ಸಾಗಿಸುವಂತೆ ಸೂಚನೆ ನೀಡಿದ್ದಾರಂತೆ.

    108 ಆಂಬ್ಯುಲೆನ್ಸ್ ನಲ್ಲಿ ಜಿವಿಕೆ ನಡೆಸುತ್ತಿರೋ ಕರ್ಮಕಾಂಡ ಇಷ್ಟಕ್ಕೆ ಮುಗಿಯೋದಿಲ್ಲ, ದುರಸ್ಥಿತಿಯಲ್ಲಿರೋ, ವಾಹನಗಳ ಬಗ್ಗೆ ಕಂಪ್ಲೇಟ್ ಮಾಡಿದ್ರೂ ಕೇಳೋರಿಲ್ಲ. ಕೆಲವೊಂದು ಬಾರಿ 108 ಆಂಬ್ಯುಲೆನ್ಸ್‍ಗಳಲ್ಲಿ ರೋಗಿಗಳಿದ್ದಾಗ ಕೆಟ್ಟು ನಿಂತು ಪರದಾಡೋ ಪರಿಸ್ಥಿತಿ ಸಿಬ್ಬಂದಿಯದ್ದು.

    https://www.youtube.com/watch?v=x_qQg8Ybbqs

  • ಕಮಿಷನರ್ ಭೇಟಿಗೆ ಆಂಬುಲೆನ್ಸ್ ಬಳಕೆ ಮಾಡಿದ ಬಿಬಿಎಂಪಿ ಅಧಿಕಾರಿಗಳು!

    ಕಮಿಷನರ್ ಭೇಟಿಗೆ ಆಂಬುಲೆನ್ಸ್ ಬಳಕೆ ಮಾಡಿದ ಬಿಬಿಎಂಪಿ ಅಧಿಕಾರಿಗಳು!

    ಬೆಂಗಳೂರು: ರಸ್ತೆಯಲ್ಲಿ ಆಂಬುಲೆನ್ಸ್ ಬಂದ್ರೆ ದಾರಿ ಬಿಟ್ಟು ಜೀವ ಉಳಿಸಿ ಅನ್ನೋ ಜಾಹಿರಾತುಗಳನ್ನ ಹಲವು ಕಡೆ ನೋಡಿರ್ತೀವಿ. ಜೊತೆಗೆ ನಮಗೆ ಎಷ್ಟೇ ಅರ್ಜೆಂಟ್ ಇದ್ರೂ ಆಂಬುಲೆನ್ಸ್ ಸದ್ದು ಕೇಳಿದ ತಕ್ಷಣ ದಾರಿ ಬಿಟ್ಟು ಕೊಡ್ತೀವಿ. ಆದ್ರೆ ಅದ್ರಲ್ಲಿ ನಿಜವಾಗ್ಲೂ ಪೇಷೆಂಟ್‍ಗಳೇ ಹೊಗ್ತಿರ್ತಾರಾ ಎಂಬ ಪ್ರಶ್ನೆಗೆ ಉತ್ತರ ದೊರೆತಿದೆ.

    ಇದೀಗ ಆಂಬುಲೆನ್ಸ್ ನಲ್ಲಿ ಬಿಬಿಎಂಪಿ ಅಧಿಕಾರಿಗಳು ಓಡಾಡುತ್ತಾರೆ. ಅದರಲ್ಲೂ ಕಮಿಷಿನರ್ ಮೀಟ್ ಮಾಡೋಕೆ ಆಂಬುಲೆನ್ಸ್ ಬಳಕೆ ಮಾಡ್ತಿದ್ದಾರೆ ಅಂದ್ರೆ ನಂಬಲೇಬೇಕು. ಹೌದು. ಬಿಬಿಎಂಪಿ ದಾಸಪ್ಪ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ನಲ್ಲಿ ತುರ್ತು ಪರಿಸ್ಥಿತಿಯ ವೇಳೆ ರೋಗಿಗಳ ಸಹಾಯಕ್ಕೆ ಮೀಸಲಿರೋ ಆಂಬುಲೆನ್ಸ್ ನನ್ನು ಅಧಿಕಾರಿಗಳು ದುರುಪಯೋಗ ಮಾಡಿಕೊಳ್ತಿದ್ದಾರೆ.

    ಫೆ. 21ರಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಭೇಟಿಗಾಗಿ ಬಿಬಿಎಂಪಿ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡ್ತಿರೋ ಮ್ಯಾನೇಜರ್ ಶೋಭಾ ಲಕ್ಷ್ಮಿ ಹಾಗೂ ಕ್ಲರ್ಕ್ ಭಾಗ್ಯಮ್ಮ ದಾಸಪ್ಪ ಆಸ್ಪತ್ರೆಯಿಂದ ಮಲ್ಲೇಶ್ವರಂ ಐಪಿಪಿ ಸೆಂಟರ್‍ಗೆ ಬರೋದಕ್ಕೆ ಬಿಬಿಎಂಪಿ ಆಂಬುಲೆನ್ಸ್ ಬಳಸಿದ್ದಾರೆ. ಇನ್ನು ಈ ಬಗ್ಗೆ ಯಾಕ್ರೀ ಮೇಡಂ ಆಂಬುಲೆನ್ಸ್ ನ ಹೀಗೆ ಮಿಸ್ ಯೂಸ್ ಮಾಡಿದ್ದು ತಪ್ಪಲ್ವಾ ಅಂತಾ ಮ್ಯಾನೇಜರ್ ಶೋಭಾ ಲಕ್ಷ್ಮಿ ಅವರನ್ನು ಕೇಳಿದ್ರೆ, ಕಮಿಷಿನರ್ ಸಹಿಗಾಗಿ ಐಪಿಪಿಗೆ ಹೋಗ್ಬೇಕಿತ್ತು ಹಾಗಾಗಿ ಬಳಕೆ ಮಾಡಿದ್ದು, ಮೇಲಾಧಿಕಾರಿ ಕಲಾವತಿ ಹೇಳಿದ್ರು ಅಂತಾರೆ.

    ಈ ಬಗ್ಗೆ ಆಂಬುಲೆನ್ಸ್ ನಲ್ಲಿ ಹೋಗಿ ಸೈನ್ ಮಾಡಿಸಿಕೊಂಡು ಬರೋಕೆ ಹೇಳಿದ ಆರೋಗ್ಯಾಧಿಕಾರಿ ಕಲಾವತಿ ಅವರನ್ನ ಮಾತಾಡಿಸಿದ್ರೆ, `ಸೈನ್ ಮಾಡಿಸ್ಕೋಬೇಕು ಅಂದ್ರು. ಆದ್ರೆ ನಾನು ಆಂಬುಲೆನ್ಸ್ ನಲ್ಲಿ ಬನ್ನಿ ಅಂದಿಲ್ಲ. ಹೀಗಾಗಿ ಅವರು ಆಂಬುಲೆನ್ಸ್ ನಲ್ಲಿ ಬಂದಿರೋದು ನನಗೆ ಗೊತ್ತಿಲ್ಲ. ಒಂದು ವೇಳೆ ಅವರು ಆಂಬುಲೆನ್ಸ್ ನಲ್ಲಿ ಬಂದಿದ್ದೇ ಆದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಂತಾ ಹಾರಿಕೆಯ ಉತ್ತರ ನೀಡಿದ್ದಾರೆ.

    ಒಟ್ಟಿನಲ್ಲಿ ಎಲ್ಲಾ ತಿಳಿದವರೇ ಈ ರೀತಿ ತುರ್ತು ಸಂದರ್ಭಕ್ಕೆ ಬಳಕೆಯಾಗಬೇಕಿದ್ದ ಆಂಬುಲೆನ್ಸ್ ನ ಇವ್ರ ವೈಯಕ್ತಿಕ ಕೆಲಸಕ್ಕೆ ಬಳಸಿದ ಇವ್ರಿಗೆ ಏನನ್ನಬೇಕೋ ಗೊತ್ತಿಲ್ಲ. ಇನ್ನು ಇವರ ವಿರುದ್ಧ ಕಮಿಷನರ್ ಮಂಜುನಾಥ್ ಪ್ರಸಾದ್ ಅವ್ರೇ ಕ್ರಮ ತೆಗೆದುಕೊಳ್ತಾರಾ ಎಂಬುವುದನ್ನ ಕಾದು ನೋಡಬೇಕು.

  • ಆಂಬುಲೆನ್ಸ್ ಇಲ್ಲದೆ ಟಿವಿಎಸ್‍ನಲ್ಲೇ ಮಗಳ ಶವ ಸಾಗಿಸಿದ್ರು!

    ಆಂಬುಲೆನ್ಸ್ ಇಲ್ಲದೆ ಟಿವಿಎಸ್‍ನಲ್ಲೇ ಮಗಳ ಶವ ಸಾಗಿಸಿದ್ರು!

    ತುಮಕೂರು: ಒಡಿಸ್ಸಾದಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಶವವನ್ನು ಹೆಗಲ ಮೇಲೆ ಸಾಗಿಸಿದ್ದಂತೆ ನಮ್ಮ ರಾಜ್ಯದಲ್ಲಿಯೂ ಅಂತದ್ದೇ ದುರಂತವೊಂದು ನಡೆದಿದೆ. ಅದೂ ಇಬ್ಬರು ಪ್ರಭಾವಿ ಸಚಿವರ ತವರು ಜಿಲ್ಲೆ, ದಕ್ಷ ಹಾಗೂ ಅಭಿವೃದ್ಧಿ ಪರ ಶಾಸಕ ಎಂಬ ಹೆಸರು ಪಡೆದಿರುವ ಕೆ.ಎನ್ ರಾಜಣ್ಣ ಅವರ ಕ್ಷೇತ್ರದಲ್ಲಿಯೇ ಈ ಘಟನೆ ನಡೆದಿರುವುದು ವಿಪರ್ಯಾಸ.

    ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. ತಿಮ್ಮಪ್ಪ ಎಂಬ ಬಡ ಕೂಲಿ ಕಾರ್ಮಿಕರ ಮಗಳು 20 ವರ್ಷದ ರತ್ನಮ್ಮ ತೀವ್ರ ಜ್ವರದಿಂದ ಬಳಲುತ್ತಿದ್ದರು. ಈ ಮಧ್ಯೆ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಇತ್ತು. ಹೀಗಾಗಿ ಆಕೆಯನ್ನು ಮಧುಗಿರಿ ತಾಲೂಕಿನ ಕೊಡುಗೇನಹಳ್ಳಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ರತ್ನಮ್ಮ ಪೋಷಕರು ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ್ರು. ಆದ್ರೆ ಅಷ್ಟರಲ್ಲಾಗಲೇ ರತ್ನಮ್ಮ ಸಾವನ್ನಪ್ಪಿದ್ದರು. ಮಗಳ ಶವವನ್ನು ತನ್ನ ಗ್ರಾಮ ವೀರಾಪುರಕ್ಕೆ ಸಾಗಿಸಲು ಹೋಬಳಿ ಕೇಂದ್ರದ ಈ ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಕೂಡ ಇರಲಿಲ್ಲ.

    ಇದರಿಂದ ತಿಮ್ಮಪ್ಪ ಪರಿಚಯಸ್ಥರೊಬ್ಬರ ಸಹಾಯ ಪಡೆದು ಟಿವಿಎಸ್ ಬೈಕ್‍ನಲ್ಲಿಯೇ ಶವವನ್ನು ಸಾಗಿಸಿದ್ದಾರೆ. ಖಾಸಗಿ ಕಾರ್ ಬಾಡಿಗೆಗೆ ಪಡೆದು ಶವವನ್ನು ತೆಗೆದುಕೊಂಡು ಹೋಗುವಂತೆ ಸ್ಥಳೀಯರು ಸಲಹೆ ನೀಡಿದರಾದ್ರೂ ರತ್ನಮ್ಮ ಪೋಷಕರ ಬಳಿ ಹಣವಿಲ್ಲದ ಕಾರಣ ಟಿವಿಎಸ್ ಹಿಂಭಾಗ ಶವವನ್ನು ಕೂರಿಸಿ ಅದನ್ನು ಮತ್ತೊಬ್ಬರು ಹಿಡಿದುಕೊಂಡು ಸಾಗಿಸಿದ್ದಾರೆ. ಈ ಹೃದಯವಿದ್ರಾವಕ ದೃಶ್ಯವನ್ನ ಪ್ರತ್ಯಕ್ಷದರ್ಶಿಯೊಬ್ಬರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ.