Tag: ಆಕ್ರೋಶ

  • ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

    ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

    ಬಾಗಲಕೋಟೆ: ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಕಾಂಗ್ರೆಸ್ ನಾಯಕರಾಗಿ ಬಿಜೆಪಿಯವರ ಜೊತೆ ಊಟ ಮಾಡಿ ಪಕ್ಷದ ಮರ್ಯಾದೆ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.

    ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ತಂಡವೊಂದು ಜಿಲ್ಲೆಗೆ ಬಂದಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ನಾಯಕರ ಜೊತೆ ಊಟ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿದ್ದರೂ ಎಲ್ಲರನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಜೊತೆ ಊಟ ಮಾಡಿದ್ದಾರೆ. ಇದು ಪಕ್ಷಕ್ಕೆ ಮಾಡಿದ ಅವಮಾನ. ಪಕ್ಷದ ಹಿರಿಯ ನಾಯಕನಾಗಿ ಬಿಜೆಪಿ ಜೊತೆ ಹೋಗಿದ್ದು ತಪ್ಪು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

    ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತು ಸಚಿವರು ಬರ ಅಧ್ಯಯನವನ್ನು ವೀಕ್ಷಿಸಿದ್ದಾರೆ. ಇದು ಕಾಟಾಚಾರದ ಬರ ಅಧ್ಯಯನ ಎಂದು ಜಿ.ಪಂ ಕಾಂಗ್ರೆಸ್ ಸದಸ್ಯ ಹಾಗೂ ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆರ್ ವಿ ದೇಶಪಾಂಡೆ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಗಣನೆಗೆ ತೆಗೆದುಕೊಂಡಿಲ್ಲ. ಜೊತೆಗೆ ಪ್ರತಿಪಕ್ಷ ಬಿಜೆಪಿ ಕಚೇರಿಯಲ್ಲಿ ಊಟ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆದಿದೆ: ಬಿಎಸ್‍ವೈ ಕಿಡಿ

    ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆದಿದೆ: ಬಿಎಸ್‍ವೈ ಕಿಡಿ

    ಧಾರವಾಡ: ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆದಿದೆ, ಭಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ತಾವು ಹೇಳಿದಂತೆ ನಡೆದುಕೊಂಡಿಲ್ಲ. ಪ್ರತಿಯೊಂದು ವಿಷಯದಲ್ಲೂ ಗೊಂದಲ ಉಂಟುಮಾಡಿಕೊಳ್ತಾರೆ. ರಾಜ್ಯದಲ್ಲಿ ಬಹುತೇಕ ತಾಲೂಕಿನಲ್ಲಿ ಜನ ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಸಾರ್ವಜನಿಕರ ಮೇಲೆ ಭಾರ ಬೀಳೋದಿಲ್ವ? ಈ ರೀತಿ ತೆರಿಗೆ ಹೆಚ್ಚಳ ಮಾಡಿ ಎಲ್ಲದಕ್ಕೂ ಸಾಲಮನ್ನಾ ಅಂತ ಕುಂಟು ನೆಪ ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಸಚಿವರೊಬ್ಬರ ಇಲಾಖೆಯಲ್ಲೇ ಸುಮರು 76 ಲಕ್ಷ ರೂ. ಸಿಕ್ಕಿದೆ, ಇದು ಎಷ್ಟರ ಮಟ್ಟಿಗೆ ಸರಿ. ಈ ವಿಚಾರವಾಗಿ ತಕ್ಷಣ ಕ್ರಮ ತೆಗೆದುಕೊಳ್ಳೋದನ್ನ ಬಿಟ್ಟು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಬೇರೆ ಉತ್ತರ ನೀಡುತ್ತಾರೆ. ಸರ್ಕಾರದಲ್ಲಿ ಭಷ್ಟಾಚಾರ ತುಂಬಿ ತುಳುಕುತ್ತಿದೆ, ಅಭಿವೃದ್ಧಿ ಕಾರ್ಯ ಸ್ಥಗಿತವಾಗ್ತಿದೆ. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ನಡೆದಿದ್ದು, ಇದನ್ನ ನಾನು ಖಂಡಿಸುತ್ತೇನೆ. ಬರಗಾಲದಿಂದ ಜನ ಉದ್ಯೋಗವಿಲ್ಲದೆ ವಲಸೆ ಹೋಗ್ತಿದ್ದಾರೆ. ಈ ಬಗ್ಗೆ ಅನುದಾನ ಬಿಡುಗಡೆ ಮಾಡುವ ಯಾವುದೇ ಕೆಲಸವನ್ನು ಸರ್ಕಾರ ಮಾಡ್ತಿಲ್ಲ ಎಂದು ಬಿಎಸ್‍ವೈ ಹರಿಹಾಯ್ದಿದ್ದಾರೆ.

    ಧಾರವಾಡದಲ್ಲಿ ಸಮ್ಮೇಳನ ಅದ್ಧೂರಿಯಾಗಿ ನಡೆಯುತ್ತಿದೆ. ಸನ್ಮಾನ ಕಾರ್ಯಕ್ರಮ ಇದೆ, ನನನ್ನು ಆಹ್ವಾನಿಸಿದ್ದಾರೆ ಅದಕ್ಕೆ ಬಂದಿದ್ದೇನೆ. ಮಾಧ್ಯಮದವರು ಕಳೆದ ಮೂರು ದಿನಗಳಿಂದ ಈ ಕಾರ್ಯಕ್ರಮಕ್ಕೆ ಸಹಕಾರ ಕೊಡುತ್ತಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಸ್ಯಾಂಡಲ್‍ವುಡ್ ಸ್ಟಾರ್ ನಟರ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತೆರಿಗೆ ಅಧಿಕಾರಿಗಳಿಗೆ ಯಾವುದು ಸೂಕ್ತ ಅನಿಸುತ್ತದೆಯೋ ಅದನ್ನ ಮಾಡ್ತಾರೆ. ಈ ಬಗ್ಗೆ ಕೇಂದ್ರವನ್ನು ಮಧ್ಯ ತರೋದು ಸರಿಯಲ್ಲ. ಈ ವಿಚಾರವಾಗಿ ತನಿಖೆ ಆಗುತ್ತಿದೆ. ಇದಕ್ಕೆ ಯಾವ ನಟರು ವಿರೋಧ ಮಾಡ್ತಿಲ್ಲ, ಅಧಿಕಾರಿಗಳಿಗೆ ಸಹಕರಿಸುತ್ತಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ವಿರುದ್ಧ ಸ್ಯಾಂಡಲ್‍ವುಡ್ ಅಭಿಮಾನಿಗಳು ಗರಂ

    ಪ್ರಧಾನಿ ಮೋದಿ ವಿರುದ್ಧ ಸ್ಯಾಂಡಲ್‍ವುಡ್ ಅಭಿಮಾನಿಗಳು ಗರಂ

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟರ ಮೇಲೆ ಐಟಿ ದಾಳಿ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇಂದು ಸ್ಯಾಂಡಲ್‍ವುಡ್ ಸ್ಟಾರ್ ನಟರು, ನಿರ್ಮಾಪಕರು ಮನೆ ಮೇಲೆ ಏಕಾಏಕಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನು ಖಂಡಿಸಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ನಟರ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ಹೌದು, ತಮ್ಮ ಮೆಚ್ಚಿನ ನಟರನ್ನ ಬೇಕಂತಲೇ ಪ್ರಧಾನಿ ಮೋದಿಯವರು ಟಾರ್ಗೆಟ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಅಷ್ಟೇ ಅಲ್ಲದೆ ಕರ್ನಾಟಕವನ್ನೇ ನೀವು ಹಾಟ್ ಸ್ಪಾಟ್ ಮಾಡಿಕೊಂಡಿದ್ದೀರಿ. ನೀವು ನಮ್ಮ ನೆಚ್ಚಿನ ನಟರನ್ನು ಟಾರ್ಗೆಟ್ ಮಾಡಿದ್ದೀರಿ. ಮುಂದಿನ ಚುನಾವಣೆಯಲ್ಲಿ ನಾವು ನಿಮ್ಮನ್ನು ಟಾರ್ಗೆಟ್ ಮಾಡ್ತೀವಿ. ನಿಮಗೆ ಬೆಂಬಲ ನೀಡೋದಿಲ್ಲ, ಚುನಾವಣೆಯಲ್ಲಿ ನಿಮ್ಮನ್ನ ವಿಚಾರಿಸಿಕೊಳ್ಳುತ್ತೀವಿ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ಕೊಪ್ಪಳ: ಜೆಡಿಎಸ್ ಮುಖಂಡರೊಬ್ಬರು ತಮ್ಮ ಹುಟ್ಟುಹಬ್ಬವನ್ನು ತಲ್ವಾರ್‌ನಿಂದ ಕೇಕ್ ಕತ್ತರಿಸಿ ಆಚರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಜೆಡಿಎಸ್ ಮುಖಂಡ ಮೆಹಮೂದ್ ಹುಸೇನ್ ಬಲ್ಲೆ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಕೊಪ್ಪಳದಲ್ಲಿ ಮಂಗಳವಾರ ಹುಟ್ಟುಹಬ್ಬ ಆಚರಿಕೊಂಡ ಹುಸೇನ್ ಅವರು ಸ್ನೇಹಿತರ ಜೊತೆಗೂಡಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಖುಷಿಪಟ್ಟ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಿಂದಲೇ ಪೋಸ್ಟ್ ಮಾಡಿದ್ದಾರೆ.

    ರಾಜಕೀಯಕ್ಕೆ ಸೇರುವ ಮೊದಲು ಹುಸೇನ್ ರೌಡಿ ಶೀಟರ್ ಸಹ ಆಗಿದ್ದರು. ಈಗ ರೌಡಿಸಂ ಬಿಟ್ಟು ರಾಜಕೀಯಕ್ಕೆ ಸೇರಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದರೆ ತಮ್ಮ ಸ್ಥಾನದ ಬೆಲೆ ಮರೆತು ವಿಕೃತವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರೋದಕ್ಕೆ ಸಾರ್ವಜನಿಕರು ಟೀಕೆ ವ್ಯಕ್ತಪಡಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸುವುದು ತಪ್ಪು. ಅದರಲ್ಲೂ ತಲ್ವಾರ್‌ನಿಂದ ಕೇಕ್ ಕಟ್ ಮಾಡ್ತಿರೋದನ್ನು ಫೇಸ್‍ಬುಕ್ ನಲ್ಲಿ ಹಾಕಿಕೊಂಡು ರೌಡಿ ಚಟುವಟಿಕೆಗೆ ಪ್ರೇರೇಪಿಸುತ್ತಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬರುತ್ತಿದೆ.

    ಈ ಹಿಂದೆ ಕೂಡ ಹಲವು ಮಂದಿ ಹೀಗೆ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಕೃತವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗೆ ಮಾಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಆರ್ ಪೇಟೆಯಲ್ಲಿ ಒಂದೇ ದಿನ ನಾಲ್ವರು ಮಕ್ಕಳಿಗೆ ಕಚ್ಚಿತು ನಾಯಿ- ತಾಯಿ ಜೊತೆ ಇದ್ದ ಮಕ್ಕಳನ್ನು ಬಿಡಲಿಲ್ಲ

    ಕೆಆರ್ ಪೇಟೆಯಲ್ಲಿ ಒಂದೇ ದಿನ ನಾಲ್ವರು ಮಕ್ಕಳಿಗೆ ಕಚ್ಚಿತು ನಾಯಿ- ತಾಯಿ ಜೊತೆ ಇದ್ದ ಮಕ್ಕಳನ್ನು ಬಿಡಲಿಲ್ಲ

    ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಹುಚ್ಚು ನಾಯಿ ಹಾವಳಿಯನ್ನು ನಿಯಂತ್ರಿಸದ್ದಕ್ಕೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ ಒಂದು ವಾರದಿಂದ ಐವರು ಮಕ್ಕಳು ಸೇರಿ ಒಟ್ಟು ಏಳು ಜನರಿಗೆ ನಾಯಿ ಕಚ್ಚಿವೆ. ಇಂದು ಒಂದೇ ದಿನದಲ್ಲಿ ಕೆಆರ್ ಪೇಟೆಯ ಸುಭಾಷ್‍ನಗರದಲ್ಲಿ ನಾಲ್ವರು ಮಕ್ಕಳು ಸೇರಿ ಓರ್ವ ಮಹಿಳೆ ಮೆಲೆ ನಾಯಿಯೊಂದು ಏಕಾಏಕಿ ದಾಳಿ ಮಾಡಿದೆ.

    ತಾಯಿ ಜೊತೆ ಇದ್ದ ಮಕ್ಕಳನ್ನೂ ಬಿಡದೇ ನಾಯಿ ಕಚ್ಚಿದೆ. ನಾಯಿ ಕಚ್ಚಿದ ಪರಿಣಾಮ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಾಳಿ ಮಾಡಿರುವ ನಾಯಿಗೆ ಬಹುಶಃ ಹುಚ್ಚು ಹಿಡಿದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

    ಜಿಲ್ಲೆಯಲ್ಲಿ ನಾಯಿ ಕಾಟ ಹೆಚ್ಚಾಗಿದ್ದು, ನಾಯಿ ದಾಳಿಗೆ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಹೊರಗೆ ಕಳುಹಿಸಲು ಹೆದರುತ್ತಿದ್ದಾರೆ. ನಗರದಲ್ಲಿ ನಾಯಿಗಳ ದಾಳಿ ನಿರಂತರವಾಗಿ ನಡೆಸುತ್ತಿದ್ದರೂ ಕ್ರಮ ಕೈಗೊಳ್ಳದೇ ಪುರಸಭೆ ಸದಸ್ಯರು, ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

    ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

    ಮಂಡ್ಯ: ನಟ, ಮಾಜಿ ಸಚಿವ ಅಂಬರೀಶ್ ಅಂತ್ಯಕ್ರಿಯೆಗೆ ನಟಿ, ಮಾಜಿ ಸಂಸದೆ ರಮ್ಯಾ ಬಾರದ ಹಿನ್ನೆಲೆಯಲ್ಲಿ ರಮ್ಯಾ ಕಟ್ಟಾ ಅಭಿಮಾನಿಯೇ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಸ್ಯಾಂಡಲ್ ವುಡ್ ಕ್ವೀನ್ ವಿರುದ್ಧ ಪೋಸ್ಟ್ ಮಾಡಿದ್ದಾರೆ.

    ಅಭಿಮಾನಿ ಗುಣಶೇಖರ್ ಎಂಬವರು ರಮ್ಯಾ ಅವರ ವಿರುದ್ಧ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದಾಗ ಅವರ ಅಭಿಮಾನಿಯಾಗಿ ಗುಣಶೇಖರ್ ಸಾಕಷ್ಟು ಶ್ರಮ ಪಟ್ಟಿದ್ದರು. ಆದರೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯುವುದಕ್ಕೆ ರಮ್ಯಾ ಅವರು ಬಂದಿಲ್ಲ ಎಂದು ಅಭಿಮಾನಿ ಕೋಪಗೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಭಿಮಾನಿ ಪೋಸ್ಟ್ ನಲ್ಲೇನಿದೆ..?
    ಗುಣಶೇಖರ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ, `ಇಲ್ಲಿ ಸಲ್ಲದ ನೀವು ಇನ್ನೆಲ್ಲೂ ಸಲ್ಲಲ್ಲ. ಇಂದು ನಿಮ್ಮ ಹುಟ್ಟು ಹಬ್ಬದ ದಿನ ಆದ್ರೆ ನಮಗೆ ಇಂದು ಬೇಸರದ ದಿನ. ಹೃದಯವಂತ ಅಂಬರೀಶ್ ಅವರ ಅಂತಿಮ ದರ್ಶನ ಮಾಡದ ನೀವು ಕನ್ನಡಿಗರ ದರ್ಶನ ಮಾಡಲು ಅನರ್ಹರು. ನಿಮ್ಮ ಮೇಲಿಟ್ಟಿದ್ದ ನಂಬಿಕೆಗಳೆಲ್ಲ ಸುಳ್ಳಾಗಿದೆ. ಅಂಬಿ ಎಲ್ಲಿದ್ದರೂ ಮಂಡ್ಯ ಮರೆತಿರಲಿಲ್ಲ. ಆದ್ದರಿಂದ ಅಂಬಿಗೆ ಮಂಡ್ಯದಿಂದ ಇಂಡಿಯಾವರೆಗೆ ಅಭಿಮಾನಿಗಳಿದ್ದಾರೆ. ರೈತನಾಯಕ ಪುಟ್ಟಣ್ಣಯ್ಯ ಅಂತ್ಯಕ್ರಿಯೆಗೆ ನೀವು ಬರಲಿಲ್ಲ. ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯಿತು. ಆದ್ರೆ ನೀವು ಸಾವಿನಲ್ಲೂ ರಾಜಕಾರಣ ಮಾಡುತ್ತೀದ್ದೀರಾ..’ ಎಂದು ನಟಿ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

    ಅಷ್ಟೆ ಅಲ್ಲದೆ `ನೀವು ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸುತ್ತಾ ಕಾಲಕಳೆಯುತ್ತಿದ್ದೀರಿ. ನಿಮ್ಮ ತಪ್ಪುಗಳ ಅರಿವು ನನಗಿದ್ದರೂ ನಿಮ್ಮ ಅಭಿಮಾನಿಯಾಗಿ ನಿಮ್ಮನ್ನ ಸಮರ್ಥಿಸಿಕೊಳ್ಳುತ್ತಿದ್ದೆ. ಯಾಕಂದ್ರೆ ತಿಳಿದೋ ತಿಳಿಯದೋ ತಪ್ಪು ಮಾಡಿರಬಹುದು ಅಂತಾ ಅಂದುಕೊಂಡಿದ್ದೆ. ಆದ್ರೆ ನಿಮ್ಮಲ್ಲಿರೋದು ವಿಷ ಅಂತಾ ಗೊತ್ತಿರಲಿಲ್ಲ. ಪ್ರತಿ ವರ್ಷ ನಿಮ್ಮ ಹುಟ್ಟುಹಬ್ಬದಂದು ಅನಾಥ ಮಕ್ಕಳಿಗೆ, ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಕೊಟ್ಟು ಆಚರಿಸುತ್ತಿದ್ವಿ, ನಿಮ್ಮನ್ನ ಸಮರ್ಥಿಸಿಕೊಂಡು ಸ್ವಪಕ್ಷೀಯರ ವಿರೋಧವೂ ಕಟ್ಟಿಕೊಂಡಿದ್ದೆ. ಇಂದು ಆ ಹೋರಾಟವೆಲ್ಲಾ ವ್ಯರ್ಥವಾಗಿದೆ. ಇಂದು ನಿಮ್ಮ ಜನ್ಮದಿನವಲ್ಲ ಕರಾಳ ದಿನ’ ಎಂದು ರಮ್ಯ ಅಭಿಮಾನಿ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಅವರಿಗೆ ಫುಲ್‍ಕ್ಲಾಸ್ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    – ಸಂಘಟಕರ ವಿರುದ್ಧ ಬಸವ ಭಕ್ತರ ಆಕ್ರೋಶ

    ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ಬಸವೇಶ್ವರ ಜಾತ್ರೆಯ ಸಮಾರಂಭದಲ್ಲಿ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶೀಲ ನೃತ್ಯ ಪ್ರದರ್ಶನ ಏರ್ಪಡಿಸಿದ್ದ ಸಂಘಟಕರ ವಿರುದ್ಧ ಬಸವ ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂಘಟಕರು ಆಗಸ್ಟ್ 28 ರಂದು ನಡೆದ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ ನಡೆಸಿದ್ದಾರೆ. ಯುವತಿಯರ ಅಶ್ಲೀಲ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿ, ಸಂಘಟಕರು ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ಸಚಿವರು ಏನು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಬಸವೇಶ್ವರ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಐತಿಹಾಸಿಕ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಆಗಸ್ಟ್ 27 ರಿಂದ 30 ರವರೆಗೆ ನಡೆಯುವ ನಾಲ್ಕು ದಿನಗಳ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜಾತ್ರಾ ಸಮಿತಿ ಸಂಘಟಕರು ಹಮ್ಮಿಕೊಂಡಿದ್ದರು. ಜಾತ್ರೆಯ ಉಸ್ತುವಾರಿಯನ್ನು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ವಹಿಸಿಕೊಂಡಿತ್ತು. ಆಗಸ್ಟ್ 27 ರಂದು ಆರೋಗ್ಯ ಸಚಿವ ಶಿವಾನಂದ ಪಾಟೀಲರು ಸ್ವತಃ ತಾವೇ ಬೆಳ್ಳಿ ಪಲ್ಲಕ್ಕಿ ಹೊರುವ ಮೂಲಕ ಜಾತ್ರೆಗೆ ವಿದ್ಯುಕ್ತ ಚಾಲನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗಳೂರಿನಲ್ಲಿ ದಿಢೀರ್ ಸ್ಥಗಿತಗೊಂಡ ನಮ್ಮ ಮೆಟ್ರೋ

    ಬೆಂಗಳೂರಿನಲ್ಲಿ ದಿಢೀರ್ ಸ್ಥಗಿತಗೊಂಡ ನಮ್ಮ ಮೆಟ್ರೋ

    ಬೆಂಗಳೂರು: ತರಬೇತಿ ನೌಕರರು ಮೆಟ್ರೋ ಚಾಲನೆ ನೀಡಿದ್ದ ಪರಿಣಾಮ ರೈಲು 30 ನಿಮಿಷ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡಿದರು.

    ಭಾನುವಾರ ಮಧ್ಯಾಹ್ನ ಉತ್ತರ ದಕ್ಷಿಣ ಮಾರ್ಗದಲ್ಲಿ ಹೊರಟಿದ್ದ ರೈಲು ರಾಜಾಜಿನಗರ ಮೆಟ್ರೋ ಸ್ಟೇಶನ್‍ನಲ್ಲಿ ದಿಢೀರ್ ನಿಂತಿತ್ತು. ಹೀಗಾಗಿ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಸ್ಥಳಕ್ಕೆ ಬಂದ ನುರಿತ ಚಾಲಕನಿಂದ ಸಂಚಾರ ಪ್ರಾರಂಭಿಸಲಾಯಿತು.

    ನಡೆದದ್ದು ಏನು?
    ರೈಲ್ವೆ ಬೋರ್ಡ್ ಅನುಮತಿ ನೀಡದಿದ್ದರೂ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಟ್ (ಬಿಎಂಆರ್‌ಸಿಎಲ್‌) ಅಧಿಕಾರಿಗಳು ಇಂದು ತರಬೇತಿ ನೌಕರರಿಗೆ ಮೆಟ್ರೋ ರೈಲು ಚಾಲನೆಗೆ ಕೊಟ್ಟಿದ್ದರು. ತರಬೇತಿ ನೌಕರ ಕಮಲೇಶ್ ರಾಯ್ ಸೇರಿದಂತೆ ಹಲವರು ರೈಲು ಸಂಚಾರ ನಡೆಸಿದ್ದರು. ರಾಜಾಜಿನಗರ ಮೆಟ್ರೋ ಸ್ಟೇಶನ್‍ನಲ್ಲಿ ರೈಲು ಬಂದು ನಿಲ್ಲುತ್ತಿದ್ದಂತೆ, ಕಮಲೇಶ್ ರಾಯ್‍ಗೆ ಆಪರೇಟ್ ಮಾಡಲು ತಿಳಿಯದೆ ದಿಢೀರ್ ಸ್ಥಗಿತವಾಗಿತ್ತು.

    30 ನಿಮಿಷ ರೈಲು ನಿಂತಿದ್ದರಿಂದ ಪ್ರಯಾಣಿಕರು ಸ್ಟೇಶನ್‍ನಲ್ಲಿ ಕಾಯುತ್ತ ನಿಲ್ಲುವಂತಾಯಿತು. ಬೇಜವಾಬ್ದಾರಿ ತೋರಿದ ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಭಾರೀ ಆಕ್ರೋಶ ಹೊರಹಾಕಿದರು. ಬಳಿಕ ನುರಿತ ಚಾಲಕನನ್ನು ಕರೆಸಿಕೊಂಡ ಅಧಿಕಾರಿಗಳು, ರೈಲು ಸಂಚಾರವನ್ನು ಯಥಾಸ್ಥಿತಿಗೆ ತಂದರು. ಇತ್ತ ಅಧಿಕಾರಿಗಳು ತರಬೇತಿ ನೌಕರರಿಗೆ ಮೆಟ್ರೋ ರೈಲು ಚಾಲನೆಗೆ ನೀಡಿದ್ದರಿಂದ ಬಿಎಂಆರ್‌ಸಿಎಲ್‌ ನೌಕರರ ಸಂಘವು ಕಿಡಿಕಾರಿದೆ.

  • ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು

    ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು

    ಕಲಬುರಗಿ: ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಪಕ್ಷಭೇದ ಮರೆತು ಎಲ್ಲಾ ಸದಸ್ಯರು ಸಿಇಓ ವಿರುದ್ಧ ಒಟ್ಟಾಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸಿಇಓ ಹೆಬ್ಸಿಬಾರಾಣಿ ಕೋರ್ಲಪಾಟಿ ಮಧ್ಯೆ ಮುಸುಕಿನ ಗುದ್ದಾಟ ಮುಗಿಯೋ ಲಕ್ಷಣ ಗೋಚರಿಸುತ್ತಿಲ್ಲ. ಕಳೆದ ಬಾರಿ 11 ನೇ ಜಿಲ್ಲಾ ಪಂಚಾಯತ್ ಸಭೆಯನ್ನ ಖುದ್ದು ಸಿಇಓ ಅವರೇ ಕರೆದು, ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಾರದೇ ಸಭೆಗೆ ಗೈರಾಗಿ ವಿದೇಶ ಪ್ರವಾಸ ಕೈಗೊಂಡಿದ್ದರು. ಆದರೆ ಇಂದು 12 ನೇ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಪಕ್ಷಬೇಧ ಮರೆತು ಸದಸ್ಯರೆಲ್ಲರು ಸಿಇಓ ವಿರುದ್ಧ ಮುಗಿಬಿದ್ದಿದ್ದಾರೆ.

    ಅರಳಗುಂಡಗಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ರೇವಣಸಿದ್ದಪ್ಪ ಸಂಕಾಲೆ ತಾಳ್ಮೆ ಕಳೆದುಕೊಂಡು ಸಿಇಓ ಹೆಬ್ಸಿಬಾರಾಣಿ ಕೋರ್ಲಪಾಟಿರನ್ನ ಏಕವಚನದಲ್ಲಿ ಕ್ಲಾಸ್ ತೆಗೆದುಕೊಂಡರು. ಸದಸ್ಯರಿಗೆ ಹಾಗೂ ಸಭೆಗೆ ಗೌರವ ಕೊಡಬೇಕು ಅನ್ನೊದು ನಿನಗೆ ಗೊತ್ತಿಲ್ವ, ಇಷ್ಟು ದಿನ ಏನಾಗಿತ್ತು, ಭ್ರಷ್ಟ ಅಧಿಕಾರಿಗಳ ವಿರುದ್ಧ ಯಾಕೆ ನೀನು ಕ್ರಮ ತೆಗೆದುಕೊಳ್ಳುತ್ತಿಲ್ಲ, ಮಾನ್ಯ ಅಧ್ಯಕ್ಷರೆ ನೀವು ಸಿಇಓ ಮಾತಿಗೆ ಮರಳಾಗಬೇಡಿ ಎಂದು ಗುಡುಗಿದರು.

    ಅಲ್ಲದೇ ಇತರ ಸದಸ್ಯರು ಕೂಡ ಸಿಇಓ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ನಿಮ್ಮ ಸೇವೆ ನಮಗೆ ಅವಶ್ಯಕತೆಯಿಲ್ಲ, ನೀವು ಇಲ್ಲಿಂದ ಹೊರಟುಹೋಗಿ ಅಂತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಸಭೆಗೂ ಮುನ್ನ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಒಟ್ಟಿಗೆ ಸಭೆ ನಡೆಸಿದ್ದರು. ಸಭೆಯ ಬಗ್ಗೆ ಹಾಗೂ ಸಿಇಓ ವಿರುದ್ಧ ಕೈಗೊಳ್ಳಬೇಕಾದ ನಿರ್ಣಯಗಳ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಲಬುರಗಿ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅಭಿವೃದ್ದಿ ವಿಷಯಗಳ ಬಗ್ಗೆ ಚರ್ಚಿಸದೇ, ಕೇವಲ ಸಿಇಓ ವಿರುದ್ದ ತಮ್ಮ ಆಕ್ರೋಶವನ್ನ ಹೊರಹಾಕಿದ್ದು, ಅಂತಿಮವಾಗಿ ಯಾರ ಕೈ ಮೇಲಾಗುತ್ತೆ ಅನ್ನೊದು ತೀವ್ರ ಕೂತುಹಲಕ್ಕೆ ಎಡೆ ಮಾಡಿಕೊಟ್ಟಿದೆ.

  • ಮಹಿಳಾ ದಿನಾಚರಣೆಯಂದೇ ಸಿಡಿದೆದ್ದ ವಿದ್ಯಾರ್ಥಿನಿಯರು – ಕಾಲೇಜಿನ ಮೇಲೆಯೇ ಕಲ್ಲೆಸೆದ್ರು!

    ಮಹಿಳಾ ದಿನಾಚರಣೆಯಂದೇ ಸಿಡಿದೆದ್ದ ವಿದ್ಯಾರ್ಥಿನಿಯರು – ಕಾಲೇಜಿನ ಮೇಲೆಯೇ ಕಲ್ಲೆಸೆದ್ರು!

    ಚಿಕ್ಕಬಳ್ಳಾಪುರ: ಯಾವುದೇ ಮಾಹಿತಿ ನೀಡದೇ ದಿಢೀರ್ ಆಗಿ ಕಾಲೇಜು ಕ್ಲೋಸ್ ಮಾಡಿದ ಆಡಳಿತ ಮಂಡಳಿ ವಿರುದ್ಧ ಮಹಿಳಾ ವಿದ್ಯಾರ್ಥಿಗಳು ಕಲ್ಲು ತೂರುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ಪಟ್ಟಣ ಹೊರವಲಯದ ಇಡಗೂರು ಬಳಿ ನಡೆದಿದೆ.

    ಪಟ್ಟಣದ ಖಾಸಗಿ ಹೈಟೆಕ್ ಪಾಲಿಟೆಕ್ನಿಕ್ ಸಂಸ್ಥೆಯ ಆಡಳಿತ ಮಂಡಳಿಯ ಭಿನ್ನಾಭಿಪ್ರಾಯ ಹಾಗೂ ಗಲಾಟೆಯಿಂದ ಏಕಾಏಕಿ ಡಿಪ್ಲೋಮಾ ಕಾಲೇಜು ಬಂದ್ ಆಗಿತ್ತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಇಂದು ಮಹಿಳಾ ದಿನಾಚರಣೆ ಬಿಟ್ಟು ತಾವು ಓದುತ್ತಿದ್ದ ಕಾಲೇಜಿನ ಮೇಲೆಯೇ ಕಲ್ಲು ತೂರಾಟ ನಡೆಸಿ ಕಾಲೇಜು ಕಟ್ಟಡದ ಕಿಟಕಿ ಗಾಜುಗಳು ಪುಡಿ-ಪುಡಿ ಮಾಡಿದ್ದಾರೆ.

    ಏನಿದು ಘಟನೆ: ಗೌರಿಬಿದನೂರು ಪಟ್ಟಣದ ಹೊರವಲಯದಲ್ಲಿ ಇರುವ ಹೈಟೆಕ್ ಪಾಲಿಟೆಕ್ನಿಕ್ ಕಾಲೇಜು 2009 ರಲ್ಲಿ ಆರಂಭವಾಗಿತ್ತು. ಅಂದಿನಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿತ್ತು. ಪ್ರಸಕ್ತ ವರ್ಷದಲ್ಲಿ ಕಾಲೇಜಿನಲ್ಲಿ 91 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಶಾಲೆಯ ಆಡಳಿತ ಮಂಡಳಿ ಸದಸ್ಯರ ನಡುವೆ ಹಣಕಾಸಿನ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದೆ. ಈ ಕಾರಣದಿಂದ ಕಾಲೇಜಿನ ಆಡಳಿತ ಮಂಡಳಿ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರವನ್ನು ಬರೆದು ಕಾಲೇಜು ನಡೆಸಲು ಸಾಧ್ಯವಾಗದ ಕಾರಣ ಮುಚ್ಚುವ ವಿಚಾರವನ್ನು ತಿಳಿಸಿದ್ದರು. ಪತ್ರವನ್ನು ಪಡೆದ ತಾಂತ್ರಿಕ ಶಿಕ್ಷಣ ಇಲಾಖೆ ಸಮಿತಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಲೇಜು ಮುಚ್ಚುವುದು ಸೂಕ್ತ ಎಂಬ ಅಭಿಪ್ರಾಯವನ್ನು ನೀಡಿತ್ತು.

    ಸಮಿತಿಯ ಅಭಿಪ್ರಾಯದಂತೆ ಆಡಳಿತ ಮಂಡಳಿ ಸದ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 91 ವಿದ್ಯಾರ್ಥಿಗಳಿಗೆ ಬೇರೆ ಕಾಲೇಜಿಗೆ ವರ್ಗಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿತ್ತು. ಆದರೆ ಪರೀಕ್ಷೆಗೆ ಕೇವಲ ಒಂದು ತಿಂಗಳು ಬಾಕಿ ಇರುವ ಸಮಯದಲ್ಲಿ ಕಾಲೇಜಿನ ಆಡಳಿತ ಮಂಡಳಿ ನಿರ್ಧಾರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲೆಯ ಬೇರೆ ಪಾಲಿಟೆಕ್ನಿಕ್ ಕಾಲೇಜುಗಳಿಗೆ ವರ್ಗಾವಣೆ ಮಾಡಿಕೊಳ್ಳುವ ವೇಳೆಗೆ ಪರೀಕ್ಷಾ ಅವಧಿ ಹತ್ತಿರ ಬರುವುದರಿಂದ ವಿದ್ಯಾರ್ಥಿಗಳ ಹೆಚ್ಚು ಕಷ್ಟವಾಗಲಿದೆ. ಪರೀಕ್ಷೆಗೆ ಸಿದ್ಧವಾಗಬೇಕಿದ್ದ ನಾವು ಭವಿಷ್ಯದ ಬಗ್ಗೆ ಯೋಚನೆ ಮಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=ZmxKMSJMBa4