Tag: ಆಕ್ರೋಶ

  • ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

    ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

    ದಾವಣಗೆರೆ: 7 ವರ್ಷದ ಬಾಲಕಿ ಪ್ರಾರ್ಥನಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ನಂದಿನಿ ಸೀರಿಯಲ್ ನೋಡಿ ಅದೇ ರೀತಿ ನಟನೆ ಮಾಡಲು ಹೋಗಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ನೊಂದ ಪೋಷಕರು ಟಿವಿಯನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 11 ನೇ ತಾರೀಖಿನಂದು ನಡೆದ ಘಟನೆಯಿಂದ ಅಘಾತ ಉಂಟಾಗಿರುವ ಮಗುವಿನ ಪೋಷಕರು ಟಿವಿಯ ಮೇಲೆ ತಮ್ಮ ಆಕ್ರೋಶ ತೋರಿಸಿದ್ದಾರೆ. ನಗು ನಗುತ್ತಾ ಮನೆಯ ತುಂಬಾ ಓಡಾಡುತ್ತಿದ್ದ ಮಗು ಈಗ ಕಾಣದ ಲೋಕಕ್ಕೆ ಹೋಗಿದೆ. ಇದೆಕ್ಕೆಲ್ಲ ಕಾರಣ ಈ ಟಿವಿ, ಇದರಿಂದಲೇ ನಮ್ಮ ಮಗು ಸಾವನ್ನಪ್ಪಿದೆ ಎಂದು ಪ್ರಾರ್ಥನಾ ತಂದೆ ಮಂಜುನಾಥ್ ಕಲ್ಲಿನಿಂದ ಒಡೆದು ಹಾಕಿದ್ದಾರೆ.

    ಅಲ್ಲದೇ ಧಾರಾವಾಹಿಯ ನಿರ್ದೇಶಕರ ಮೇಲೆ ಹಾಗೂ ಸಂಬಂಧಪಟ್ಟವರ ಮೇಲೆ ದೂರು ನೀಡಲು ಹಲವು ಮುಖಂಡರು ಹೇಳಿದ್ದರು. ಆದ್ರೆ ಮಗುವಿನ ಪೋಷಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಕೂಲಿ ಮಾಡಿ ಜೀವನ ಮಾಡುವ ನಮಗೆ ಕೋರ್ಟು ಕಚೇರಿ ಎಂದು ಓಡಾಡಲು ಆಗುವುದಿಲ್ಲ. ಇರೋ ಇಬ್ಬರು ಮಕ್ಕಳನ್ನು ಹುಷಾರಾಗಿ ಸಾಕುತ್ತೇವೆ ಎಂದು ಪೋಷಕರು ಹೇಳುತ್ತಿದ್ದಾರೆ.

    https://youtu.be/ukbXoVNhqR8

  • ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

    ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

    ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಪ್ರಾರಂಭವಾಗಲಿದ್ದು ರಾಂಚಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದಲ್ಲಿ 15 ಜನ ಆಟಗಾರರ ಆಯ್ಕೆ ನಡೆದಿದೆ.

    ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಯುವರಾಜ್ ಸ್ಥಾನ ಸಿಗದೇ ಇದ್ದರೂ ಟಿ20ಗೆ ಆಯ್ಕೆಯಾಗುವ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಬಿಸಿಸಿಐ ಆಯ್ಕೆ ಸಮಿತಿ ಯುವಿ ಯನ್ನು ಕೈಬಿಟ್ಟದ್ದಕ್ಕೆ ಅಭಿಮಾನಿಗಳಿಗೆ ನಿರಾಸೆಯಾಗಿದೆ.

     

    http://twitter.com/anuragd123/status/914709755158962176

    ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ನ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯುವರಾಜ್ ಸಿಂಗ್ ಮತ್ತೆ ಕಮ್ ಬ್ಯಾಕ್ ಮಾಡಲು ಬಿಸಿಸಿಐ ಅವಕಾಶ ನೀಡಬೇಕಿತ್ತು. ಆದರೆ ಯುವರಾಜ್ ಆಯ್ಕೆಯಲ್ಲಿ ಬಿಸಿಸಿಐ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಉತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರನಾಗಿದ್ದು, ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗದಲ್ಲೂ ಸಹ ಆಸ್ಟ್ರೇಲಿಯಾ ತಂಡವನ್ನು ಕಾಡಬಲ್ಲ ಸಾಮಥ್ರ್ಯ ಹೊಂದಿದ್ದಾರೆ. ಅಲ್ಲದೇ ಭಾರತ ಆಡಿದ ಹಲವು ಟಿ20 ಪಂದ್ಯಗಳಲ್ಲಿ ಯುವಿ ಗೆಲುವಿಗೆ ಮುಖ್ಯ ಪಾತ್ರವಾಹಿಸುತ್ತಿದ್ದರು.

    ಸುರೇಶ್ ರೈನಾ ಕೂಡ ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಜೊತೆಗೆ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಜಿಂಕ್ಯಾ ರಹಾನೆಯನ್ನು ಕೂಡ ಕೈ ಬಿಡಲಾಗಿದೆ. ಆದರೆ ವೇಗದ ಬೌಲರ್ 38 ವರ್ಷದ ಆಶಿಶ್ ನೆಹ್ರಾ ಅವರನ್ನು ಸರಣಿಗೆ ಆಯ್ಕೆ ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

    ಟಿ20 ಸ್ಟ್ರೈಕ್ ರೇಟ್:
    ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 10 2013ರಲ್ಲಿ ರಾಜ್‍ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ 57 ಬಾಲ್‍ಗಳಲ್ಲಿ 5 ಸಿಕ್ಸ್ 8 ಬೌಂಡರಿ ಸಹಿತ 77 ರನ್‍ಗಳನ್ನು ಬಾರಿಸಿದ್ದರು. ಜೊತೆಗೆ 2007ರ ಟಿ 20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 38 ಬಾಲ್‍ಗೆ 70 ರನ್ ಬಾರಿಸಿ ಭಾರತ ವಿಶ್ವ ಕಪ್ ಫೈನಲ್ ಪ್ರವೇಶ ಮಾಡಲು ಪ್ರಮುಖ ಪಾತ್ರ ವಹಿಸಿದ್ದರು. 2017 ಫೆ.1ರಂದು ಬೆಂಗಳೂರಿನಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಪಂದ್ಯವೇ ಯುವಿ ಕೊನೆಯ ಟಿ 20 ಪಂದ್ಯವಾಗಿದ್ದು, ಈ ಪಂದ್ಯದಲ್ಲಿ 27 ರನ್ ಹೊಡೆದಿದ್ದರು.

    https://youtu.be/MHFgWsfZBk4

  • ತಮಿಳುನಾಡಿಗೆ ಹರಿಯುತ್ತಿದ್ದ ನೀರಿನ ಪ್ರಮಾಣ ಹೆಚ್ಚಳ: ನಿನ್ನೆ ಎಷ್ಟಿತ್ತು? ಇಂದು ಎಷ್ಟು ಹೆಚ್ಚಾಗಿದೆ?

    ತಮಿಳುನಾಡಿಗೆ ಹರಿಯುತ್ತಿದ್ದ ನೀರಿನ ಪ್ರಮಾಣ ಹೆಚ್ಚಳ: ನಿನ್ನೆ ಎಷ್ಟಿತ್ತು? ಇಂದು ಎಷ್ಟು ಹೆಚ್ಚಾಗಿದೆ?

    ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯದಿಂದ(ಕೆಆರ್‍ಎಸ್) ತಮಿಳುನಾಡಿಗೆ ಹರಿಯುತ್ತಿದ್ದ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಭಾನುವಾರ 4067 ಕ್ಯೂಸೆಕ್ ನೀರನ್ನು ಬಿಟ್ಟಿದ್ದರೆ, ಸೋಮವಾರ 6067 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ.

    ಆಗಸ್ಟ್ 4ರಂದು 4787 ಕ್ಯೂಸೆಕ್ ಒಳ ಹರಿವು ಇದ್ದರೆ, ಸೋಮವಾರ 13509 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೇಮಾವತಿ ಜಲಾಶಯದಿಂದ ನೀರನ್ನು ಬಿಟ್ಟ ಕಾರಣ ಜಲಾಶದ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.

    124.80 ಅಡಿ ಗರಿಷ್ಟ ಸಾಮರ್ಥ್ಯವಿರುವ ಅಣೆಕಟ್ಟೆಯಲ್ಲಿ  ಇಂದು 92.30 ಅಡಿ ನೀರು ಸಂಗ್ರಹವಾಗಿದೆ. 49.45 ಟಿಎಂಸಿ ಸಾಮರ್ಥ್ಯವಿರುವ ಜಲಾಶಯದಲ್ಲಿ ಇಂದು 17.35 ಟಿಎಂಸಿ ನೀರು ಸಂಗ್ರಹವಾಗಿದೆ.

    ಜಿಲ್ಲೆಯ ನಾಲೆಗೆ ನೀರು ಹರಿಸುವಂತೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಕ್ಯಾರೆ ಎನ್ನದೇ ತಮಿಳುನಾಡಿಗೆ ನೀರು ಬಿಡುತ್ತಿರುವುದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ. ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಹರಿಸುತ್ತಿರೋ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶವನ್ನ ಹೊರಹಾಕಿದರು.

    ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಮತ್ತಿತರರು, ತಮ್ಮ ಮೈ ಮೇಲೆ ಸೆಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರ ಕಾವೇರಿ ಕೊಳ್ಳದ ರೈತರನ್ನ ಕಡೆಗಣಿಸುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

    ನಾಲೆಗಳಿಗೆ ನೀರು ಹರಿಸಿ ಕೆರೆ-ಕಟ್ಟೆಗಳನ್ನ ಭರ್ತಿ ಮಾಡಿ ಅಂತಾ ಸಾಕಷ್ಟು ಸಲ ಮನವಿ ಮಾಡಿದರೂ ಕ್ಯಾರೆ ಎನ್ನುತ್ತಿಲ್ಲ. ಇನ್ನು ಮಾಜಿ ಪ್ರಧಾನಿ ದೇವೇಗೌಡರು ಸಹ ಹೇಮಾವತಿ ಭಾಗಕ್ಕೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿ ನೀರು ಬಿಡಿಸುತ್ತಾರೆ. ಆದರೆ ಕಾವೇರಿ ಭಾಗದವರು ನಾವೇನು ಮಾಡಿದ್ದೀವಿ ಅಂತಾ ಪ್ರತಿಭಟನಾಕಾರರು ಪ್ರಶ್ನೆ ಮಾಡಿದ್ದಾರೆ.

    ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲವಾದರೆ ಬರುವ ಸ್ವಾತಂತ್ರ್ಯ ದಿನಾಚರಣೆದಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಧ್ವಜಾರೋಹಣಕ್ಕೆ ಅಡ್ಡಿಪಡಿಸುತ್ತೇವೆ ಎಂದು ಕಾರ್ಯಕರ್ತರು ಎಚ್ಚರಿಕೆಯನ್ನು ನೀಡಿದ್ದಾರೆ.