Tag: ಆಕ್ಸಿಜನ್ ದುರಂತ

  • ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

    ಚಾಮರಾಜನಗರ: ಆಕ್ಸಿಜನ್ ದುರಂತ (Chamarajanagar Oxygen Tragedy) ಸಂತ್ರಸ್ತರಿಗೆ ಅತಿ ಶೀಘ್ರದಲ್ಲೇ ಖಾಯಂ ನೇಮಕಾತಿ ಮಾಡುತ್ತೇವೆ ಎಂದು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ವೆಂಕಟೇಶ್ (Venkatesh) ತಿಳಿಸಿದ್ದಾರೆ.

    ಸರ್ಕಾರದ ಪರಿಹಾರ ತಾರತಮ್ಯ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ಆಕ್ಸಿಜನ್ ದುರಂತ ನಡೆದಾಗ ಬಿಜೆಪಿ ಸರ್ಕಾರವಿತ್ತು, ಅವರು ಸರಿಯಾದ ರೀತಿ ಪರಿಹಾರ ಕೊಟ್ಟಿಲ್ಲ ಎಂದರು. ಈಗ ಕಾಲ್ತುಳಿತ ಪ್ರಕರಣದಲ್ಲಿ ಸತ್ತವರಿಗೆ ಕೊಟ್ಟ ರೀತಿಯಲ್ಲಿ ಅವರಿಗೆ ಪರಿಹಾರ ಕೊಡಲು ಆಗಲ್ಲ. ಅವರಿಗೆ ಸರ್ಕಾರಿ ಉದ್ಯೋಗ ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲಿ ಅವರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮೂವರು ಅಧಿಕಾರಿಗಳನ್ನು ವಜಾಗೊಳಿಸಿ, ಇಲ್ದೆ ಇದ್ರೆ ಲೈಸನ್ಸ್‌ ರದ್ದು ಆಗುತ್ತೆ: ಏರ್‌ ಇಂಡಿಯಾಗೆ ಡಿಜಿಸಿಎ ಎಚ್ಚರಿಕೆ

    ಮನೆ ಮಂಜೂರು ಮಾಡಲು ಲಂಚ ನೀಡಬೇಕು ಎಂಬ ಆಡಿಯೋ ವೈರಲ್ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಆರ್ ಪಾಟೀಲ್ ಆಪಾದನೆ ಎಷ್ಟರ ಮಟ್ಟಿಗೆ ನಿಜ ಎಂಬ ಬಗ್ಗೆ ತನಿಖೆಯಾಗಬೇಕು. ಈಗಾಗಲೇ ವಸತಿ ಸಚಿವರು ನಮ್ಮಲ್ಲಿ ಆ ರೀತಿ ನಡೆದಿಲ್ಲ ಎಂದು ಸಿಎಂ ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

    ತನಿಖೆ ಮಾಡಿಸಿ ಎಂದು ವಸತಿ ಸಚಿವರು ಸಿಎಂಗೆ ಹೇಳಿದ್ದಾರೆ. ಆ ರೀತಿ ಲಂಚ ನಡೆದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದ್ದಾರೆ. ಈಗ ಮನೆಗಳನ್ನೇ ಕೊಡ್ತಿಲ್ಲ, ಮನೆಗಳನ್ನು ಎಲ್ಲಿಯೂ ಮಂಜೂರು ಮಾಡುತ್ತಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮನೆ ಮಂಜೂರು ಮಾಡ್ತಿಲ್ಲ, ಹಳೇ ಸರ್ಕಾರದ ಬಾಕಿ ತೀರಿಸ್ತಾ ಇದ್ದೇವೆ ಎಂದರು. ಇನ್ನೂ ಅಕ್ರಮ ಗಣಿಗಾರಿಕೆ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಸಿಎಂಗೆ ಪತ್ರ ಬರೆದಿರುವ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು. ಇದನ್ನೂ ಓದಿ: ಯೋಗ ದಿನದಲ್ಲಿ 51 ಪುಷ್‌-ಅಪ್‌ ಸಲೀಸಾಗಿ ಪೂರ್ಣಗೊಳಿಸಿದ ತ.ನಾಡು ರಾಜ್ಯಪಾಲ ರವಿ

  • ಚಾಮರಾಜನಗರ ಆಕ್ಸಿಜನ್ ಸಂತ್ರಸ್ತ ಕುಟುಂಬಕ್ಕೆ ಗುಡ್ ನ್ಯೂಸ್ – 36 ಕುಟುಂಬಗಳಲ್ಲಿ 32 ಕುಟುಂಬಗಳಿಗೆ ಉದ್ಯೋಗ

    ಚಾಮರಾಜನಗರ ಆಕ್ಸಿಜನ್ ಸಂತ್ರಸ್ತ ಕುಟುಂಬಕ್ಕೆ ಗುಡ್ ನ್ಯೂಸ್ – 36 ಕುಟುಂಬಗಳಲ್ಲಿ 32 ಕುಟುಂಬಗಳಿಗೆ ಉದ್ಯೋಗ

    ಚಾಮರಾಜನಗರ: ಸರ್ಕಾರ ಆಕ್ಸಿಜನ್ ಸಂತ್ರಸ್ತ (Chamarajanagar Oxygen Tragedy) ಕುಟುಂಬಗಳಿಗೆ ಗುತ್ತಿಗೆ ನೌಕರಿ ಕೊಡುವ ಮೂಲಕ ಗುಡ್ ನ್ಯೂಸ್ ಕೊಟ್ಟಿದೆ. 32 ಕುಟುಂಬಗಳಿಗಷ್ಟೇ ಉದ್ಯೋಗ ದೊರಕಿಸಿಕೊಟ್ಟಿದ್ದು, ಇನ್ನೂ ನಾಲ್ಕು ಕುಟುಂಬಗಳು ನಮ್ಮ ಮನೆಯವರು ತೀರಿಕೊಂಡಿದ್ದಾರೆ. ನಾವೂ ಇಲ್ಲಿಯವರೆಗೂ ಹೋರಾಟ ನಡೆಸಿದ್ದೇವೆ. ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಮ್ಮ ಹೆಸರಿಲ್ಲ. ನಮಗೂ ಕೂಡ ಕೆಲಸ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಕಾಂಗ್ರೆಸ್ (Congress) ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಕಾಯಂ ಉದ್ಯೋಗದ ಬದಲು ಈಗ ಗುತ್ತಿಗೆ ಆಧಾರದ ಮೇಲೆ 32 ಮಂದಿಗೆ ಕೆಲಸ ನೀಡಲಾಗುತ್ತಿದೆ. ಮೊದಲಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಡುಗೆ ಕೆಲಸ ನೀಡುವುದಾಗಿ ಆಫರ್ ನೀಡಲಾಗಿತ್ತು. ಇದಕ್ಕೆ ಸಂತ್ರಸ್ತ ಕುಟುಂಬಸ್ಥರು ಒಪ್ಪಿರಲಿಲ್ಲ. ಇದೀಗ ಬೇರೆ ಬೇರೆ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗಿದ್ದು, ಫೆ.1 ರಿಂದ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂತ್ರಸ್ತರು ನಮಗೆ ಗುತ್ತಿಗೆ ಆಧಾರದ ಕೆಲಸ ಸ್ವಲ್ಪ ಸಮಾಧಾನ ತಂದಿದೆ, ವಿಧಿ ಇಲ್ಲದೆ ಒಪ್ಪಿಕೊಂಡಿದ್ದೇವೆ. ಅನಿವಾರ್ಯವಾಗಿ ಗುತ್ತಿಗೆ ಆಧಾರದ ಕೆಲಸ ಒಪ್ಪಿಕೊಂಡಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

    ಇನ್ನೂ ಅಧಿಕಾರಕ್ಕೆ ಬಂದರೆ ನಮಗೆಲ್ಲಾ ಸರ್ಕಾರಿ ಉದ್ಯೋಗ ನೀಡೋದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡಿತ್ತು. ಸರ್ಕಾರ ಭರವಸೆ ನೀಡಿರುವಂತೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಸಂತ್ರಸ್ತ ಕುಟುಂಬ ವರ್ಗದವರು ಆಗ್ರಹಿಸಿದ್ದಾರೆ.

    2021ರ ಮೇ.2 ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ರೋಗಿಗಳು ಸೇರಿದಂತೆ 36 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗ 32 ಕುಟುಂಬದ ಸದಸ್ಯರಿಗಷ್ಟೆ ಉದ್ಯೋಗ ಕೊಡಲೂ ಮುಂದಾಗಿದೆ. ಇನ್ನುಳಿದಿರುವ ನಾಲ್ಕು ಕುಟುಂಬಕ್ಕೂ ಕೆಲಸ ಕೊಡುವಂತೆ ಜಿಲ್ಲಾಡಳಿತ ಬಳಿ ಮನವಿ ಮಾಡಿಕೊಂಡಿದ್ದಾರೆ.

  • ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ

    ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ

    ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕ ಹಾಗೂ ಕಾನೂನಾತ್ಮಕವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಅಭಿಪ್ರಾಯಪಟ್ಟಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ, ಐಪಿಎಸ್ (IPS) ಅಧಿಕಾರಿ ಡಿ.ರೂಪಾ (D.Roopa) ಹಾಗೂ ಐಎಎಸ್ (IAS) ಆಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರ ನಡುವೆ ನಡೆಯುತ್ತಿರುವ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟರು. ಡಿ.ರೂಪಾ ಎತ್ತಿರುವ ಪ್ರಶ್ನೆಗಳಿಗೆ ಸತ್ಯಶೋಧನೆ ನಡೆಸುವುದು ಪತ್ರಕರ್ತರ ಜವಾಬ್ದಾರಿ. ಕಮಿಟಿ ರಚಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವಂತೆ ಸರ್ಕಾರಕ್ಕೆ ಹೇಳಬೇಕಾದವರು ಪತ್ರಕರ್ತರು ಎಂದರು.

    ಕೋವಿಡ್ ಸಮಯದಲ್ಲಿ ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಅಂದು ಮೈಸೂರಿನ ಮೇಲೆ ಆರೋಪ ಬಂತು. ಬಳಿಕ ಆಕ್ಸಿಜನ್ ಒದಗಿಸುವ ಜವಾಬ್ದಾರಿಯನ್ನು ಉಸ್ತುವಾರಿ ಸಚಿವರು ಹಾಗೂ ಸಂಸದನಾದ ನಾನು ವಹಿಸಿಕೊಂಡೆವು. ಜಿಲ್ಲೆಯಲ್ಲಿ ಕೋವಿಡ್‍ಗೆ ಅನೇಕರು ಮೃತಪಟ್ಟಿದ್ದರು. ಆಗ ಸುಮ್ಮನೆ ವೀಡಿಯೋ ಕಾನ್ಫರೆನ್ಸ್ ಮಾಡಿ ಕಾಲಹರಣ ಮಾಡುವ ಬದಲು ತಪಾಸಣೆ ಮಾಡಬೇಕು ಎಂದು ಹೇಳಿದಾಗ ನಮ್ಮ ಮೇಲೆಯೇ ಆರೋಪಗಳು ಕೇಳಿ ಬಂದ್ದಿದ್ದವು ಎಂದು ನೆನಪಿಸಿಕೊಂಡರು. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ

    ಅದೇ ಪ್ರಶ್ನೆಗಳನ್ನು ಇಂದು ಡಿ.ರೂಪಾ ಎತ್ತಿದ್ದಾರೆ. ಹಾಸನದಲ್ಲಿ ಅವರಿದ್ದಾಗ ಏನೇನು ನಡೆದಿದೆ ಎಂದು ತಿಳಿದುಕೊಂಡು ಪ್ರಶ್ನಿಸುವ ಜವಬ್ದಾರಿ ಪತ್ರಕರ್ತರದ್ದು ಎಂದು ಹೇಳಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಕ್ಸಿಜನ್ ನೀಡದೇ ಕೊಂದು ಹಾಕಿ, ಸಹಜ ಸಾವು ಅಂತಾ ಮರಣ ಪತ್ರ ನೀಡ್ತಿದ್ದಾರೆ: ಡಿ.ಕೆ.ಶಿವಕುಮಾರ್

    ಆಕ್ಸಿಜನ್ ನೀಡದೇ ಕೊಂದು ಹಾಕಿ, ಸಹಜ ಸಾವು ಅಂತಾ ಮರಣ ಪತ್ರ ನೀಡ್ತಿದ್ದಾರೆ: ಡಿ.ಕೆ.ಶಿವಕುಮಾರ್

    ಬೆಂಗಳೂರು: ಆಕ್ಸಿಜನ್ ನೀಡದೇ ಕೊಂದು ಹಾಕಿ, ಸಹಜ ಸಾವು ಅಂತಾ ಮರಣ ಪತ್ರ ನೀಡ್ತಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ ಪಕ್ಷ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ 36 ಮಂದಿಯ ಕುಟುಂಬಗಳನ್ನಾದರೂ ಭೇಟಿ ಮಾಡಿ, ಅವರ ಕಷ್ಟ ಕೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

    ನಮ್ಮ ಧ್ವನಿ ಸರ್ಕಾರಕ್ಕೆ ಕೇಳಿಸುತ್ತಿಲ್ಲ. ನಮ್ಮ ಜನರ ನೋವು ಅದಕ್ಕೆ ಕಾಣುತ್ತಿಲ್ಲ. ನಮಗೆ ಹಾಗೂ ನ್ಯಾಯಾಲಯಗಳಿಗೆ ಕಾಣುತ್ತಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯ ನಿರಂತರವಾಗಿ ಜನಪರ ಆದೇಶ ನೀಡುತ್ತಲೇ ಇದೆ. ನಿನ್ನೆ ಕೂಡ ಸುಪ್ರೀಂ ಕೋರ್ಟ್ ಪರಿಹಾರ ವಿಚಾರವಾಗಿ 6 ತಿಂಗಳ ಸಮಯಾವಕಾಶ ನೀಡಿದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕಾರಂಗದ ವರದಿಗಳನ್ನು ನ್ಯಾಯಾಂಗ ಗಂಭೀರವಾಗಿ ಪರಿಗಣಿಸಿ ಜನರ ಪರವಾಗಿ ನಿಂತಿದೆ. ಅದಕ್ಕಾಗಿ ರಾಜ್ಯದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.

    ಈ ಸರ್ಕಾರ ಯಾಕಿರಬೇಕು?:
    ಚಾಮರಾಜನಗರ ದುರಂತದಲ್ಲಿ 36 ಜನ ಸತ್ತಿದ್ದರೂ ಸರ್ಕಾರ 24 ಕುಟುಂಬಗಳಿಗೆ ಮಾತ್ರ ಪರಿಹಾರ ಕೊಟ್ಟಿದೆ. ಈ ಘಟನೆಗೆ ಇದುವರೆಗೂ ಯಾರನ್ನೂ ಹೊಣೆ ಮಾಡಿಲ್ಲ. ನೀವು ತಪ್ಪು ಮಾಡಿಲ್ಲ ಅಂದಮೇಲೆ ನೀವ್ಯಾಕೆ ಜನರ ಬಳಿ ಹೋಗಿ ಅವರನ್ನು ಮಾತನಾಡಿಸುತ್ತಿಲ್ಲ. ಅವರ ಗೋಳು ಕೇಳದಿದ್ದ ಮೇಲೆ ಈ ಸರ್ಕಾರ ಯಾಕಿರಬೇಕು? ಮುಖ್ಯಮಂತ್ರಿಗಳೇ ಹೋಗಬೇಕು ಅಂತಾ ಇಲ್ಲ, ಯಾರಾದರೂ ಮಂತ್ರಿ ಹೋಗಬಹುದಲ್ಲ. ಯಾಕೆ ಆ ಕೆಲಸ ಆಗಿಲ್ಲ?

    ನ್ಯಾಯಾಲಯವೇ ಈ ಸಾವುಗಳು ಆಕ್ಸಿಜನ್ ಕೊರತೆಯಿಂದ ಆಗಿವೆ ಎಂದ ಮೇಲೆ ಇವು ಸಹಜ ಸಾವೋ, ಕೊಲೆಯೋ ನೀವೇ ನಿರ್ಧರಿಸಿ. ಅಲ್ಲಿ ಆಕ್ಸಿಜನ್ ಕೊರತೆ ಇದೆ ಅಂತ ಅಧಿಕಾರಿಗಳಿಂದ ಮಂತ್ರಿಗಳವರೆಗೂ ಎಲ್ಲರಿಗೂ ಮೊದಲೇ ಗೊತ್ತಿತ್ತು. ಆದರೂ ಆಕ್ಸಿಜನ್ ಪೂರೈಸಲು ಕ್ರಮ ತೆಗೆದುಕೊಳ್ಳಲಿಲಿಲ್ಲ. ಕೊರತೆ ಇದ್ದ ಕಾರಣ ಒಂದೇ ಆಕ್ಸಿಜನ್ ಪೈಪ್ ಅನ್ನು ಒಬ್ಬರಾದ ಮೇಲೆ ಮತ್ತೊಬ್ಬರಿಗೆ ಐದೈದು ನಿಮಿಷದಂತೆ ನೀಡಲಾಗಿದೆ.

    ಪ್ರಾಣಿಗಳಂತೆ ನರಳಾಡಿ ಸತ್ತಿದ್ದಾರೆ:
    ನಾನು ಚಾಮರಾಜನಗರ ನಗರಕ್ಕೆ ಹೋದಾಗ ಅಲ್ಲಿನ ಜನ ತಮ್ಮ ಗೋಳು ತೋಡಿಕೊಂಡಾಗ ಮನಸಿಗೆ ಬಹಳ ಬೇಸರವಾಯಿತು. ರಾಷ್ಟ್ರೀಯ ಮಟ್ಟದ ಶೂಟರ್ ಮಡಿಲಿನಲ್ಲೇ ತಾಯಿ ವಿಲಿವಿಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾಳೆ. ಕೆಲವು ಕಡೆ ವೈದ್ಯರು, ನರ್ಸ್ ಗಳು ಇರಲಿಲ್ಲ. 36 ಜನರೂ ಪ್ರಾಣಿಗಳಂತೆ ನರಳಾಡಿ ಸತ್ತಿದ್ದಾರೆ. ಜನರಿಗೆ ಗೊತ್ತಾಗಬಾರದು ಎಂದು ಸತ್ತವರನ್ನು ಅಲ್ಲಿಂದ ಬೆರೆ ಕಡೆಗೆ ಸಾಗಿಸಿದ್ದಾರೆ.

    36 ಮೃತರ ಪೈಕಿ 80% ರಷ್ಟು ಜನ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಒಬ್ಬನಿಗೆ ಮದುವೆಯಾಗಿ 3 ತಿಂಗಳಾಗಿದೆ. ಮತ್ತೊಬ್ಬನಿಗೆ ಮದುವೆ ನಿಶ್ಚಯವಾಗಿತ್ತು. ಎಲ್ಲರೂ ಅವರವರ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದವರು. ಎಲ್ಲ ವಿಚಾರವನ್ನು ನಾನು ಇಲ್ಲಿ ಮಾತನಾಡುವುದಿಲ್ಲ, ಅಧಿವೇಶನದಲ್ಲಿ ಮಾತನಾಡುತ್ತೇನೆ. ಮೆಡಿಕಲ್ ಟೂರಿಸಂಗೆ ಹೆಸರುವಾಸಿಯಾಗಿರುವ ನಮ್ಮ ರಾಜ್ಯದಲ್ಲೇ, ವೈದ್ಯರು, ಡೀನ್ ಗಳು ಇರುವ ಆಸ್ಪತ್ರೆಯಲ್ಲೇ ಈ ಪರಿಸ್ಥಿತಿಯಾದರೆ ಇನ್ನು ಬೇರೆ ಕಡೆ ಹೇಗಿರಬೇಡ?

    ಒಬ್ಬ ಯುವಕನ ದೇಹವನ್ನು ಬೇರೆಯವರಿಗೆ ನಿಮ್ಮ ಕಡೆಯವರು ತೆಗೆದುಕೊಂಡು ಹೋಗಿ ಎಂದು ಬಲವಂತ ಮಾಡಿದ್ದಾರೆ. ಆಮೇಲೆ ಅವರು ನಮ್ಮವರಲ್ಲ ಎಂದು ಮತ್ತೆ ವಾಪಸ್ ತಂದುಕೊಟ್ಟಿದ್ದಾರೆ. ನಂತರ ಆತನನ್ನು ಅವನ ಸ್ನೇಹಿತರು ಗುರುತಿಸಿ, ಆತನ ತಾಯಿಗೆ ಶವ ಹಸ್ತಾಂತರ ಮಾಡಿದ್ದಾರೆ.

    ಸೋಂಕಿತನಿಗೆ ಅತ್ತೆ, ಮಗಳ ಸಾವಿನ ಸುದ್ದಿಯೇ ಗೊತ್ತಿಲ್ಲ:
    ನಾನು ಹೋಗುವ ದಿನದವರೆಗೂ ಸೋಂಕಿತನಾಗಿದ್ದ ವ್ಯಕ್ತಿಗೆ ತನ್ನ ಮಗಳು ಹಾಗೂ ಅತ್ತೆ ಸತ್ತಿದ್ದಾಳೆ ಎನ್ನುವ ವಿಷಯವೇ ಗೊತ್ತಿರಲಿಲ್ಲ. ಗಂಡನನ್ನು ಕಳೆದುಕೊಂಡ ಮತ್ತೊಂದು ಹೆಣ್ಣು ಮಗಳಿಗೆ ಚಿಕ್ಕ ಮಕ್ಕಳು ಹಾಗೂ ಅತ್ತೆ, ಮಾವನ ಜವಾಬ್ದಾರಿ ಇದೆ. ಆಕೆಗೆ ಗಂಡನ ಮರಣ ಪ್ರಮಾಣ ಪತ್ರವನ್ನೇ ನೀಡುತ್ತಿಲ್ಲ. ಹೀಗಾಗಿ ಪರಿಹಾರವೂ ಸಿಕ್ಕಿಲ್ಲ. ಆಕ್ಸಿಜನ್ ನೀಡದೇ ಕೊಂದು ಹಾಕಿ, ಸಹಜ ಸಾವು ಅಂತಾ ಮರಣ ಪತ್ರ ನೀಡುತ್ತಿದ್ದಾರೆ.

    ಸರ್ಕಾರ ಪರಿಹಾರ ನೀಡ್ತಿಲ್ಲ ಯಾಕೆ?:
    ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಸತ್ತವರಿಗೆ ಪರಿಹಾರ ನೀಡಬೇಕು ಅಂತಾ ಕೋರ್ಟ್ ಹಾಗೂ ನಾವು ಒತ್ತಾಯ ಮಾಡಿದ್ದೇವೆ. ನಾನು ಹಾಗೂ ನಮ್ಮ ನಾಯಕರು ಚಾಮರಾಜನಗರಕ್ಕೆ ಹೋಗಿ ಅವರಿಗೆ ತಲಾ 1 ಲಕ್ಷ ರುಪಾಯಿ ಪರಿಹಾರವನ್ನು ಪಕ್ಷದ ವತಿಯಿಂದ ಕೊಟ್ಟಿದ್ದೇವೆ. ಸಂತ್ರಸ್ತ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ ನೀಡುತ್ತಿಲ್ಲ. ಹಾಗಾದರೆ ಅವರು ಈಗ ಹೇಗೆ ಅರ್ಜಿ ಹಾಕಬೇಕು? ಅವರಿಗೆ ಪರಿಹಾರ ಹೇಗೆ ಸಿಗಬೇಕು? ಇಂತಹ ಸಮಯದಲ್ಲಿ ನಾನು ಚೆಕ್ ಬುಕ್ ತೆಗೆದುಕೊಂಡು ಹೋಗಿ, ಸಂಬಂಧಪಟ್ಟವರನ್ನು ಮಾತನಾಡಿಸಿ, ಕೋವಿಡ್ ನಿಂದ ಸತ್ತವರ ಕುಟುಂಬಗಳಿಗೆ ಪರಿಹಾರ ನೀಡಿದ್ದೇನೆ. ಅದೇ ರೀತಿ ಸರ್ಕಾರಕ್ಕೆ ಯಾಕೆ ನೀಡಲು ಆಗುತ್ತಿಲ್ಲ.

    ಸರ್ಕಾರಿ ವೆಬ್ಸೈಟ್ ನಲ್ಲಿ ಜೂನ್ 13 ರವರೆಗೂ 3,27,985 ಜನ ಕೋವಿಡ್ ನಿಂದ ಸತ್ತಿದ್ದಾರೆ. ಆದರೆ ಸರ್ಕಾರ ಹೇಳುತ್ತಿರೋದು 30 ಸಾವಿರ ಮಾತ್ರ. ಹಾಗಾದರೆ ಉಳಿದವರಿಗೆ ಪರಿಹಾರ ನೀಡುವವರು ಯಾರು? ಪರಿಹಾರದಿಂದ ಅವರು ಬದುಕುವುದಿಲ್ಲ ಎನ್ನುವುದು ಬೇರೆ ಮಾತು. ಆದರೆ ನಿಮ್ಮ ಜತೆ ಸರ್ಕಾರ ಇದೆ ಅಂತಾ ಧೈರ್ಯ ಹೇಳಬಹುದಲ್ಲವೇ?

    ಒಂದು ತಿಂಗಳ ಜನ ಸಂಪರ್ಕ ಅಭಿಯಾನ:
    ಆಸ್ಪತ್ರೆಗೆ ಸೇರುವಾಗಲೂ ಹಣ, ಸತ್ತ ಮೇಲೆ ಹೆಣ ಪಡೆಯಲು ಹಣ. ರಾಜ್ಯಕ್ಕೆ ಇದೇನು ಗ್ರಹಚಾರ ಬಂತು ಮುಖ್ಯಮಂತ್ರಿಗಳೇ? ಆರೋಗ್ಯ ಸಚಿವರೇ? ನಾನು ಮಂತ್ರಿಗಳನ್ನು ಕಳಿಸಿ ಎಂದು ಹೇಳಿದ ನಂತರ ಮಂತ್ರಿಗಳನ್ನು ಕಳಿಸುತ್ತೀರಿ. ಅಲ್ಲಿಯವರೆಗೂ ಯಾರೂ ಹೋಗುವುದಿಲ್ಲ? ದೊಡ್ಡವರು ಸತ್ತರೆ, ಅವರ ಮನೆಗೆ ಹೋಗಿ ನಿಮ್ಮ ಜತೆ ಇದ್ದೇವೆ ಎಂದು ಹೇಳುತ್ತೀರಿ. ಆದರೆ ಬಡವರು ಸತ್ತಾಗ, ಯಾರೂ ಹೋಗಿ ನೋಡುವುದಿಲ್ಲ. ಸರ್ಕಾರಕ್ಕೆ ಜವಾಬ್ದಾರಿ ಬೇಡವೇ? ಇದನ್ನು ಕೇಳುವುದು ತಪ್ಪಾ? ನಾವು ರಾಜಕೀಯ ಮಾಡುತ್ತಿಲ್ಲ, ಅದರ ಅಗತ್ಯವಿಲ್ಲ. ಹೀಗಾಗಿ ಕೋವಿಡ್ ಸಂತ್ರಸ್ತರು, ರೈತರು, ಕಾರ್ಮಿಕರನ್ನು ಭೇಟಿ ಮಾಡಿ, ಅವರಿಗೆ ಕಷ್ಟ ಆಲಿಸಿ, ಪರಿಹಾರ ದೊರಕಿಸಿಕೊಡಲು ನೆರವಾಗುವಂತೆ ನಮ್ಮ ನಾಯಕರು, ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ. ಕೋವಿಡ್ ಸಂತ್ರಸ್ತರ ಪರವಾಗಿ ನಾವು ಹೋರಾಟ ಮಾಡಬೇಕಿದೆ. ವಿರೋಧ ಪಕ್ಷದ ಜವಾಬ್ದಾರಿ ಅದು. ಇದಕ್ಕಾಗಿ ನಾವು ನಮ್ಮ ಮುಖಂಡರು ಸೇರಿ ಒಂದು ತಿಂಗಳ ಜನ ಸಂಪರ್ಕ ಅಭಿಯಾನ ಮಾಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಸೂಚನೆ, ದಾಖಲೆ ಕಳುಹಿಸಿಕೊಟ್ಟಿದ್ದೇನೆ.

    ಕೋವಿಡ್ ಡೆತ್ ಆಡಿಟ್ ಆಗಿಲ್ಲ. ಅದು ಆಗಬೇಕು. ಸತ್ತಿರುವ ಎಲ್ಲರಿಗೂ ಹೈಕೋರ್ಟ್ ಸೂಚನೆಯಂತೆ ಪರಿಹಾರ ಸಿಗಬೇಕು. ರಾಜ್ಯದಲ್ಲಿ ಕೋವಿಡ್ ನಿಂದ ಸತ್ತಿರುವ ಎಲ್ಲ 3 ಲಕ್ಷ ಜನರಿಗೂ ಕೋರ್ಟ್ ಆದೇಶದಂತೆ ಪರಿಹಾರ ಸಿಗಬೇಕು. ಇದು ಜನರ ಹಕ್ಕು, ಸರ್ಕಾರದ ಜವಾಬ್ದಾರಿ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕೋವಿಡ್ ವಾರಿಯರ್ ಗಳನ್ನು ನೇಮಕ ಮಾಡಿ, ಪ್ರತಿ ಮನೆ ಮನೆಗೂ ಹೋಗಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಸೂಚಿಸಲಾಗಿದೆ. ಅವರಿಗೆ ಸಹಾಯ ಹಸ್ತ ನೀಡಬೇಕು, ಅವರಿಂದ ಮಾಹಿತಿ ಪಡೆದು ನಮಗೆ ಕಳುಹಿಸಿಕೊಡಬೇಕು.

    ಇದು ಜನರ ಕಾರ್ಯಕ್ರಮ:
    ಇದರ ಮೇಲ್ವಿಚಾರಣೆಗೆ ಒಂದೊಂದು ಜಿಲ್ಲೆಗೂ ನಾಯಕರನ್ನು ನೇಮಿಸುತ್ತಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರನ್ನು ನೇಮಿಸುತ್ತಿದ್ದು, ಅವರು ಅಲ್ಲಿ ಹೋಗಿ ಸಭೆ ಮಾಡಬೇಕು. ಜುಲೈ 7 ರಂದು ಬೆಲೆ ಏರಿಕೆ ವಿರುದ್ಧ ಸೈಕಲ್ ಜಾಥಾ ಮಾಡಲಾಗುತ್ತದೆ. ನಂತರ ಕೋವಿಡ್ ವಿಚಾರವಾಗಿ ಸಭೆ ಮಾಡುತ್ತಾರೆ. ನಾನು ನಮ್ಮ ನಾಯಕರು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭೆ ಮಾಡುತ್ತೇವೆ. ಇದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕ್ರಮ ಅಲ್ಲ. ಇದು ಜನರ ಕಾರ್ಯಕ್ರಮ. ಜನರ ನೋವಿಗೆ ಸ್ಪಂದಿಸುವ ಕಾರ್ಯಕ್ರಮ. ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸದಿದ್ದಾಗ, ನಾವು ಈ ಕಾರ್ಯಕ್ರಮ ಮಾಡುತ್ತಿದ್ದೇವೆ.

    ಸುಮೋಟೋ ಕೇಸ್ ದಾಖಲಿಸಿ:
    ಚಾಮರಾಜನಗರ ದುರಂತದಲ್ಲಿ 36 ಮಂದಿ ಸತ್ತಿದ್ದರೂ ಇದರ ಹೊಣೆಯನ್ನು ಯಾರೂ ಹೊತ್ತಿಲ್ಲ. ಸುಮೋಟೋ ಕೇಸ್ ದಾಖಲಿಸಿ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಷ್ಟು ದೊಡ್ಡ ದುರಂತ ನಡೆದರೂ ಯಾರ ಮೇಲೂ ಕ್ರಮ ಇಲ್ಲ. ಇವರನ್ನು ರಕ್ಷಣೆ ಮಾಡಲು ಸರ್ಕಾರ ಮುಂದಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಆದರೂ ಸರ್ಕಾರ ಸುಳ್ಳು ಹೇಳುತ್ತಿದೆ.

    ಸತ್ತವರ ಜೇಬಿನಲ್ಲಿ ಇದ್ದ ವಸ್ತುಗಳನ್ನು ತೆಗೆದುಕೊಂಡಿದ್ದಾರೆ, ಎಷ್ಟೋ ಹೆಣ್ಣು ಮಕ್ಕಳ ತಾಳಿ ಎಳೆದುಕೊಂಡಿದ್ದಾರೆ. ಕಿವಿ ಒಲೆ, ಮೂಗು ಬೊಟ್ಟುಗಳನ್ನು ಚರ್ಮಸಮೇತ ಕಿತ್ತು ಹಾಕಿದ್ದಾರೆ ಎಂದು ಜನ ನಮ್ಮ ಬಳಿ ನೋವು ಹೇಳಿಕೊಂಡರು. ಆ 36 ಕುಟುಂಬದ ನೋವು ನೋಡಿದರೆ ಕರಳು ಕಿತ್ತು ಬರುತ್ತದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇದೆಯೋ, ಇಲ್ಲವೋ ಅನಿಸುತ್ತದೆ. ಮುಖ್ಯಮಂತ್ರಿಗಳೇ ಈಗಲಾದರೂ ನೀವು ಅಥವಾ ನಿಮ್ಮ ಮಂತ್ರಿಗಳು ರಾಜ್ಯ ಪ್ರವಾಸ ಮಾಡಬೇಕು. ರಾಜ್ಯ ಪ್ರವಾಸ ಮಾಡಲು ಆಗದಿದ್ದರೆ ಕನಿಷ್ಟ ಪಕ್ಷ ಆ 36 ಮಂದಿ ಅತ್ತವರ ಕುಟುಂಬಗಳನ್ನಾದರೂ ಭೇಟಿ ಮಾಡಿ, ಅವರ ನೋವು ಕೇಳಿ ಎಂದು ಕೇಳಿಕೊಳ್ಳುತ್ತೇನೆ. ಆಗಲಾದರು ನೀವು ಆ ಜನರ ಪರ ಕಾರ್ಯಕ್ರಮ ಹಾಕಿಕೊಳ್ಳಲು ಅವಕಾಶವಾಗುತ್ತದೆ.

    ಅರ್ಹರಿಗೆ ಪರಿಹಾರ ತಲುಪಿದೆಯಾ?
    ನೀವು ಕಾರ್ಮಿಕರಿಗೆ 2 ಸಾವಿರ ಕೊಟ್ಟ ಮಾತ್ರಕ್ಕೆ ಅವರ ಜೀವನ ಸುಧಾರಿಸುತ್ತದೆಯಾ? ಅರ್ಹರಿಗೆ ಪರಿಹಾರ ತಲುಪಿದೆಯಾ? ರೈತರಿಗೆ ಹೆಕ್ಟೇರ್ ಗೆ 10 ಸಾವಿರ ಎಂದರೆ ಅರ್ಧ ಎಕರೆ, ಸಣ್ಣ ಜಮೀನು ಇರುವವರು ಅದಕ್ಕೆ ಅರ್ಜಿ ಹಾಕುತ್ತಾರಾ? ಕೂಲಿ ಕಾರ್ಮಿಕ ಪರಿಹಾರ ಪಡೆಯಲು ಅಧಿಕಾರಿಯಿಂದ ಪ್ರಮಾಣ ಪತ್ರ ಬೇಕಂತೆ. ಅದನ್ನು ಪಡೆಯಲು ಕೂಲಿ ಕಾರ್ಮಿಕ ಲಂಚ ಕೊಡಬೇಕಾ? ಇಂದು ಸಂಜೆ ಒಳಗೆ ನಿಮ್ಮ ಸಚಿವರಿಗೆ ಹೇಳಿ, ಎಷ್ಟು ಜನ ಅರ್ಜಿ ಹಾಕಿದ್ದಾರೆ ಅಂತಾ ಹೇಳಿಸಿ. 2 ಸಾವಿರ ಭಿಕ್ಷೆ ಬೇಡಲು ಜನ ನಿಮ್ಮ ಬಳಿ ಬರುವುದಿಲ್ಲ. ಅವರ ಸ್ವಾಭಿಮಾನದ ಬದುಕಿಗೆ ಕೊಳ್ಳಿ ಇಡಬೇಡಿ. ಸರ್ಕಾರ ಅಧಿವೇಶನ ಕರೆಯಲಿ ಅಂತಾ ಕಾಯುತ್ತಿದ್ದೇವೆ. ಅವರು ಕರೆಯಲಿ, ನಾವು ನಮ್ಮ ಹೋರಾಟ ಮಾಡುತ್ತೇವೆ.’

    ಈಶ್ವರ್ ಖಂಡ್ರೆ ಮಾತು
    ಈ ವೇಳೆ ಮಾತನಾಡಿದ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು, ‘ಸರ್ಕಾರ ಸಾವಿನಲ್ಲಿ ಸುಳ್ಳು ಲೆಕ್ಕ ಕೊಡುತ್ತಿದೆ. ಬೀದರ್ ಜಿಲ್ಲಾ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ 557 ಜನ ಸತ್ತಿದ್ದಾರೆ. ಆ ಪಟ್ಟಿ ನನ್ನ ಬಳಿ ಇದೆ. ಆದರೆ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ 141 ಜನ ಸತ್ತಿದ್ದಾರೆ ಎಂದು ಸುಳ್ಳು ಲೆಕ್ಕ ಕೊಟ್ಟಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸತ್ತವರು ಹೊರತುಪಡಿಸಿ, ಖಾಸಗಿ ಆಸ್ಪತ್ರೆ ಹಾಗೂ ಮನೆಯಲ್ಲಿ ಒಂದು ತಿಂಗಳಲ್ಲಿ 2 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಇದು ಕೇವಲ ಬೀದರ್ ಜಿಲ್ಲೆಯ ಲೆಕ್ಕ. ಇಡೀ ರಾಜ್ಯದ ಲೆಕ್ಕ ಪರಿಗಣಿಸಿದರೆ, ನಮ್ಮ ಅಧ್ಯಕ್ಷರು ಹೇಳಿದಂತೆ 3 ಲಕ್ಷಕ್ಕೂ ಹೆಚ್ಚು ಮಂದಿ ಸತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ’ ಎಂದರು.

  • ಆಕ್ಸಿಜನ್ ದುರಂತ: 36 ಜನರ ಸಾವು, ಸರ್ಕಾರ ಮಾಡಿದ ಕೊಲೆ: ಡಿಕೆಶಿ

    ಆಕ್ಸಿಜನ್ ದುರಂತ: 36 ಜನರ ಸಾವು, ಸರ್ಕಾರ ಮಾಡಿದ ಕೊಲೆ: ಡಿಕೆಶಿ

    – ಮೃತ ಕುಟಂಬಸ್ಥರಿಗೆ ಕಾಂಗ್ರೆಸ್‍ನಿಂದ ಚೆಕ್ ವಿತರಣೆ

    ಚಾಮರಾಜನಗರ: ಮೇ ಎರಡರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ 36 ಕುಟುಂಬಗಳಿಗೂ ಕೆಪಿಸಿಸಿ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೃತರ ಪ್ರತಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿ ತಲಾ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.

    ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬಗಳನ್ನು ಅವರ ಗ್ರಾಮಗಳಿಗೇ ತೆರಳಿ ಭೇಟಿ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸಾಥ್ ನೀಡಿದರು. ಮೊದಲು ಹನೂರು ತಾಲೋಕು ಚನ್ನಿಪುರದದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ರಂಗಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್, ಇತ್ತೀಚೆಗೆ ಕೋವಿಡ್ ನಿಂದ ಮೃತಪಟ್ಟ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಪಯ್ಯ ಅವರ ಇಕ್ಕಡಹಳ್ಳಿಯ ನಿವಾಸಕ್ಕೂ ತೆರಳಿ ಮೃತರ ಪತ್ನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ಈ ಸಂದರ್ಭದಲ್ಲಿ ಆಕ್ಸಿಜನ್ ದುರಂತದ ಬಗ್ಗೆ ಮಾತನಾಡಿದ ಅವರು, ಇದು ಸರ್ಕಾರವೇ ಮಾಡಿದ ಕೊಲೆ ಎಂದು ವಾಗ್ದಾಳಿ ನಡೆಸಿದರು. 36 ಮಂದಿ ಸಾವಿಗೆ ಸರ್ಕಾರವೇ ನೇರ ಹೊಣೆಯಾಗಿದ್ದು, ಘಟನೆಗೆ ಕಾರಣರಾದವರ ಒಬ್ಬರ ಮೇಲೆಯೂ ಸರ್ಕಾರ ಇದುವರೆಗೂ ಕ್ರಮ ಕೈಗೊಂಡಿಲ್ಲ. ದುರಂತ ನಡೆದ ಸಂದರ್ಭದಲ್ಲಿ ಇಲ್ಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಬೇಕಿತ್ತು. ಆದರೆ ಇಲ್ಲಿಗೆ ಭೇಟಿ ನೀಡಲು ಅವರಿಗೆ ಭಯವಾಗಿದೆ. ಜನರು ಆಕ್ರೋಶಗೊಂಡಿದ್ದಾರೆ ಎಂದು ಗೊತ್ತಾಗಿದೆ, ರೊಚ್ಚಿಗೆದ್ದು ಹೊಡೆಯುತ್ತಾರೆ ಎಂದು ಅವರಿಗೆ ಗುಪ್ತಚರ ಇಲಾಖೆ ಮಾಹಿತಿ ಇದೆ. ಹಾಗಾಗಿಯೇ ಭೇಟಿ ನೀಡಿಲ್ಲ ಎಂದು ಕಿಡಿಕಾರಿದರು.

    ಮುಂದಿನ ಸಿಎಂ ಡಿಕೆಶಿ, ಕಾರ್ಯಕರ್ತರ ಘೋಷಣೆ:
    ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತು ಪರ ವಿರೋಧ ಹೇಳಿಕೆಗಳು ಬರುತ್ತಿರುವ ಈ ಸಂದರ್ಭದಲ್ಲೇ ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್

    ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಡಿಕೆಶಿಗೆ ಜಯಕಾರ ಹಾಕಿದ ಕೈ ಕಾರ್ಯಕರ್ತರು ಕನಕಪುರ ಬಂಡೆಗೆ ಜೈ, ಕರುನಾಡಿನ ಹುಲಿಗೆ ಜೈ ಎಂದು ಜಯಕಾರದ ಘೋಷಣೆ ಮೊಳಗಿಸಿದರು. ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದರೂ ಡಿಕೆ ಶಿವಕುಮಾರ್ ಮಾತ್ರ ಮರು ಮಾತನಾಡಲಿಲ್ಲ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ತಾಳಿ ಉಳಿಸಿಕೊಡಿ ಅಂತ ಅಂಗಲಾಚಿದ ನವ ವಧು– ನನ್ನಳಿಯ ನನಗೆ ಬೇಕು, ಮಗಳನ್ನ ಹೀಗೆ ನೋಡಲಾರೆ: ಕಣ್ಣೀರಿಟ್ಟ ಹೆತ್ತೊಡಲು

  • ಚಾಮರಾಜನಗರ ಆಮ್ಲಜನಕ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣನಾ?

    ಚಾಮರಾಜನಗರ ಆಮ್ಲಜನಕ ದುರಂತಕ್ಕೆ ರೋಹಿಣಿ ಸಿಂಧೂರಿ ಕಾರಣನಾ?

    ಮೈಸೂರು/ಚಾಮರಾಜನಗರ: ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಪೂರೈಕೆ ಮಾಡದಂತೆ ಅಂದಿನ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೌಖಿಕ ಆದೇಶ ನೀಡಿದ್ದರಾ ಅನ್ನೋ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಉಪ ಔಷಧ ನಿಯಂತ್ರಕ (ಡಿಡಿಸಿ) ಜೊತೆ ರೋಹಿಣಿ ಸಿಂಧೂರಿ ಮಾತನಾಡಿರುವ ಆಡಿಯೋ ಕ್ಲಿಪ್ ಲೀಕ್ ಆಗಿದೆ.

    ಆಡಿಯೋ ಕ್ಲಿಪ್‍ನಲ್ಲಿ ಏನಿದೆ?:
    ನಾಳೆ ಆಕ್ಸಿಜನ್ ರೀಫಿಲ್ಲಿಂಗ್ ಇಲ್ಲ ಅಂತ ಹೇಳುತ್ತಿದ್ದಾರೆ. ನನಗೆ ಮೈಸೂರಿನ 10 ಸಾವಿರ ಲೀಟರ್ ಆಕ್ಸಿಜನ್ ಫಿಲ್ ಆಗಬೇಕು. ಚಾಮರಾಜನಗರಕ್ಕೆ ಯಾಕಿಷ್ಟು ಆಕ್ಸಿಜನ್ ಪೂರೈಕೆ ಆಗುತ್ತಿದೆ ಎಂದು ರೋಹಿಣಿ ಸಿಂಧೂರಿ ಪ್ರಶ್ನೆ ಮಾಡುತ್ತಾರೆ. ಆಗ ಡಿಡಿಸಿ ಅರುಣ್, ಕೇವಲ ಸರ್ಕಾರಿ ಆಸ್ಪತ್ರೆಗೆ ನೀಡಲಾಗುತ್ತಿದೆ. ಪ್ರತಿ ಆಸ್ಪತ್ರೆಯ ಜೊತೆ ಮಾತನಾಡಿ ಮುಂದಿನ ಎರಡು ದಿನಕ್ಕೆ ಎಷ್ಟು ಆಕ್ಸಿಜನ್ ಬೇಕು? ಅನ್ನೋದರ ಮಾಹಿತಿ ತೆಗೆದುಕೊಂಡು ಕಚೇರಿಗೆ ಬರುವಂತೆ ಆದೇಶ ನೀಡಿದ್ದಾರೆ.

    ಈ ಮೌಖಿಕ ನಿರ್ದೇಶನದ ಹಿನ್ನೆಲೆಯಲ್ಲಿಯೇ ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಕೆ ಆಗಿಲ್ಲ ಎಂಬ ಆರೋಪಗಳು ಕೇಳಿ ಬಂದಿದೆ. ದುರಂತ ನಡೆದಾಗಲೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿಲ್ಲ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಆಕ್ಸಿಜನ್ ಇಲ್ಲದೆ ಮೂವರಷ್ಟೇ ಸಾವು ಅಂತ ಸಚಿವರಿಬ್ಬರ ಸಮರ್ಥನೆ

    ಅಂದು ಸಮರ್ಥನೆ, ಇಂದು ಆರೋಪ:
    ಅಂದು ದುರಂತ ಸಂಭವಿಸಿದಾಗ ರೋಹಿಣಿ ಸಿಂಧೂರಿ ಅವರನ್ನ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದರು. ಇದೀಗ ಪರೋಕ್ಷವಾಗಿಯೇ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆಕ್ಸಿಜನ್ ದುರಂತಕ್ಕೆ ರೋಹಿಣಿ ಸಿಂಧೂರಿ ಅವರ ಮೌಖಿಕ ನಿರ್ದೇಶನ ಅಂತ ಹೇಳಿದ್ದಾರೆ. ಇದನ್ನೂ ಓದಿ: ಆಕ್ಸಿಜನ್ ಇಲ್ಲದೇ ಸತ್ತಿಲ್ಲ ಅಂದ್ರು ಉಮೇಶ್ ಜಾಧವ್ – ಮತ್ತೆ ಸುಳ್ಳು ಹೇಳಲು ಇಳಿದ ಸರ್ಕಾರ!

    ಚಾಮರಾಜನಗರಕ್ಕೆ ಆಕ್ಸಿಜನ್ ಸಿಲಿಂಡರ್ ಗಳು ಯಾಕೆ ಹೋಗಲಿಲ್ಲಾ ಎಂಬುದು ಗೊತ್ತಿದೆ ಈಗ ಪ್ರಾಥಮಿಕ ವರದಿ ಬಂದಿದೆ. ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ನಡೆಯುತ್ತಿದ್ದು ಪೂರ್ಣ ತನಿಖೆಯ ನಂತರ ಸತ್ಯಾಸತ್ಯೆತೆ ಏನೆಂಬುದು ಗೊತ್ತಾಗಲಿದೆ. ಈಗ ತಾಂತ್ರಿಕ ಸಾಕ್ಷಿಗಳು ಸಿಗದೆ ಹೋದರೂ ಒಳಗೆ ಏನೇನು ನಡೆದಿದೆ ಎಂಬುದು ಗೊತ್ತಾಗಲಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಇದನ್ನೂ ಓದಿ: ದುರಂತದ ನಡುವೆ ವಿಚಿತ್ರ ಘಟನೆ – ಬದುಕಿದ್ರೂ ಸತ್ತಿದ್ದಾರೆ ಅಂತ ಸುಳ್ಳು ಮಾಹಿತಿ-ವೆಂಟಿಲೇಟರ್‌ನಲ್ಲಿದ್ದ ಅಮ್ಮನ ಕಂಡು ನಿಟ್ಟುಸಿರು ಬಿಟ್ಟ ಪುತ್ರ

    ಆಕ್ಸಿಜನ್ ಏಜೆನ್ಸಿಗೆ ಸೂಚನೆ ನೀಡಿದ್ರಾ?:
    ಮೈಸೂರಿನ ಪದಕಿ ಆಕ್ಸಿಜನ್ ಏಜೆನ್ಸಿಗೆ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದಂತೆ ರೋಹಿಣಿ ಸಿಂಧೂರಿ ಸೂಚನೆ ನೀಡಿದ್ದರು ಎನ್ನಲಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಖಾಲಿ ಆದ ಹಿನ್ನೆಲೆಯಲ್ಲಿ ಡಿಡಿಸಿ ಅರುಣ್ ದೂರವಾಣಿ ಕರೆ ಮಾಡಿದ್ದರು. ಆದರೆ ಡಿಸಿ ಆದೇಶವಾಗಿದ್ದು, ಆಕ್ಸಿಜನ್ ಪೂರೈಕೆಗೆ ಏಜೆನ್ಸಿ ಹಿಂದೇಟು ಹಾಕಿತ್ತು ಎಂಬ ಮಾತುಗಳು ಸಹ ಕೇಳಿ ಬಂದಿವೆ. ಇದನ್ನೂ ಓದಿ: ಸತ್ತಿರೋದು 24 ಅಲ್ಲ, 34 ರಿಂದ 35 – ಸುಳ್ಳು ಹೇಳ್ತಿದೆಯಾ ಸರ್ಕಾರ? – ಕಾಂಗ್ರೆಸ್ ಶಾಸಕರ ಸುದ್ದಿಗೋಷ್ಠಿ ತಡೆದ ಅಧಿಕಾರಿಗಳು

  • ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್

    ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್

    – ಸಮಿತಿ ಹೈಕೋರ್ಟಿಗೆ ಸಲ್ಲಿಸಿರುವ ವರದಿಯಲ್ಲೇನಿದೆ..?

    ಚಾಮರಾಜನಗರ: ಜಿಲ್ಲೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

    ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲ ಸಮಿತಿಯು ಹೈಕೋರ್ಟ್‍ಗೆ ವರಿ ನೀಡಿದೆ. ವರದಿಯಲ್ಲಿ ಮೈಸೂರು ಜಿಲ್ಲಾಧಿಕಾರಿಯವರದ್ದು ಈ ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದೆ.

    ವರದಿಯಲ್ಲಿ ಏನಿದೆ..?
    ದುರಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ತಪ್ಪಿಲ್ಲ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬ ಬಗ್ಗೆ ಸಾಕ್ಷ್ಯಗಳು ಇಲ್ಲ. ಪ್ರಕರಣಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಹೊಣೆಯಾಗಿದ್ದು, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ವಿಫಲವಾಗಿದೆ. ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ಎಚ್ಚರವಾಗಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಆಕ್ಸಿಜನ್ ಪ್ಲ್ಯಾಂಟ್ ಚಾಮರಾಜನಗರದಿಂದ 70 ಕಿಲೋ ಮೀಟರ್ ದೂರದಲ್ಲಿದೆ. ಮೈಸೂರಿನಿಂದ ಆಕ್ಸಿಜನ್ ತುಂಬಿಸಿಕೊಂಡು ಜಿಲ್ಲಾಸ್ಪತ್ರೆಗೆ ಸಾಗಾಟ ಮಾಡಬೇಕಿತ್ತು. ಜಿಲ್ಲಾಸ್ಪತ್ರೆ, ಜಿಲ್ಲಾಡಳಿತ ಮೊದಲೇ ಎಚ್ಚೆತ್ತುಕೊಂಡಿದ್ದರೆ ಈ ದುರಂತ ಆಗ್ತಿರಲಿಲ್ಲ ಎಮದು ತಿಳಿಸಿದೆ.

    ಅಲ್ಲದೆ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಕ್ಕಿರಲಿಲ್ಲ. ಹೀಗಾಗಿ ಸೋಂಕಿತರ ಮೆದುಳು, ದೇಹದ ಇತರೆ ಭಾಗಗಳಿಗೆ ಹಾನಿಯಾಗಿದೆ. ಆಕ್ಸಿಜನ್ ಕೊರತೆಯಿಂದ ಮೆದುಳು, ದೇಹದ ಇತರೆ ಭಾಗಗಳಿಗೆ ಹಾನಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೈಕೊರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್ ದೊರೆತಿದೆ.

    ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತಕ್ಕೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಮೇ 2ರ ರಾತ್ರಿ 11ರಿಂದ ಮೇ 3ರ ಬೆಳಗ್ಗಿನ ಜಾವದವರೆಗೆ ಆಕ್ಸಿಜನ್ ಇರಲಿಲ್ಲ. ಜಿಲ್ಲಾಸ್ಪತ್ರೆಯ ದಾಖಲೆಯ ಪ್ರಕಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇರಲಿಲ್ಲ. ಇತ್ತ ಮೂವರರಷ್ಟೇ ಆಕ್ಸಿಜನ್ ಇಲ್ಲದೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದರು. ಆದರೆ 36 ಮಂದಿ ಸಾವಿಗೂ ಆಕ್ಸಿಜನ್ ಕೊರತೆ ಕಾರಣ ಎನ್ನಲಾಗಿದೆ.

    ಮೈಸೂರು ಡಿಸಿ ವಿರುದ್ಧ ಚಾಮರಾಜನಗರ ಡಿಸಿ ರವಿ ಆರೋಪ ಮಾಡಿದ್ದರು. ಆದರೆ ತನಿಖೆ ವೇಳೆ ಮೈಸೂರು ಡಿಸಿ ವಿರುದ್ಧದ ಆರೋಪಕ್ಕೆ ಸಾಕ್ಷ್ಯಗಳೇ ಇಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಡಿಸಿ ರವಿ ವಿರುದ್ಧ ಏನ್ ಕ್ರಮಕೈಗೊಳ್ಳುತ್ತೆ ಸರ್ಕಾರ..?, ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಏನ್ ಉತ್ತರ ಕೊಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

  • ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮಡಿದ ಕುಟುಂಬಕ್ಕೆ ಕಿಚ್ಚ ನೆರವು

    ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮಡಿದ ಕುಟುಂಬಕ್ಕೆ ಕಿಚ್ಚ ನೆರವು

    – 12 ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೂ  ಸಹಾಯ

    ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ನಡೆದ ದುರಂತದಲ್ಲಿ ಮಡಿದ ಕುಟುಂಬಕ್ಕೆ ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನೆರವಾಗಲು ಮುಂದಾಗಿದ್ದಾರೆ.

    ಹೌದು. ಆಕ್ಸಿಜನ್ ಸಿಗದೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ವಿಚಾರ ರಾಷ್ಟ್ರವ್ಯಾಪಿ ಭಾರೀ ಸುದ್ದಿಯಾಗಿತ್ತು. ಇದೀಗ ಈ ಕುಟುಂಬಗಳ ಕಣ್ಣೀರೊರೆಸಲು ಸುದೀಪ್ ಮುಂದಾಗಿದ್ದಾರೆ.

    24 ಕುಟುಂಬಗಳಲ್ಲಿ ತುಂಬಾನೇ ಅವಶ್ಯಕತೆ ಇರುವ 12 ಫ್ಯಾಮಿಲಿಗಳ ಸಂಪೂರ್ಣ ಜವಾಬ್ದಾರಿಯನ್ನು ಕಿಚ್ಚನ ಚಾರಿಟೇಬಲ್ ಟ್ರಸ್ಟ್ ವಹಿಸಿಕೊಂಡಿದೆ. ಅವಶ್ಯಕ ವಸ್ತುಗಳನ್ನು ಪೂರೈಸಲು ಟ್ರಸ್ಟ್ ಮುಂದಾಗಿದೆ. ಅಲ್ಲದೆ ಈ 12 ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಕೂಡ ಟ್ರಸ್ಟ್ ಸಹಾಯ ಹಸ್ತ ಚಾಚಲಿದೆ.

    ಈ ಸಂಬಂಧ ಟ್ರಸ್ಟ್ ಸದಸ್ಯ ರಮೇಶ್ ಪ್ರತಿಕ್ರಿಯಿಸಿ, ದುರಂತ ನಡೆದ ಮರುದಿನವೇ ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇವೆ. ಸಾವನ್ನಪ್ಪಿರುವ 24 ಮಂದಿಯ ಮನೆಗಳಿಗೂ ಭೇಟಿ ಕೊಟ್ಟಿದ್ದೇವೆ. ಅವುಗಳಲ್ಲಿ 12 ಮನೆಯ ಪರಿಸ್ಥಿತಿ ಗಂಭೀರವಾಗಿರುವುದರಿಂದ ಆ ಕುಟುಂಬಗಳ ಜವಾಬ್ದಾರಿಯನ್ನು ಟ್ರಸ್ಟ್ ವಹಿಸಿಕೊಂಡಿದೆ. ಅಲ್ಲದೆ 12 ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೂ ಟ್ರಸ್ಟ್ ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.