Tag: ಆಗಸ್ಟ್ 15

  • 1,929 ಗಂಟೆಗಳ ಬಳಿಕ ನಿವೃತ್ತಿ ಹೊಂದಿದ್ದೇನೆ – 2 ವರ್ಷಗಳ ಹಿಂದೆ  ಶಾಕಿಂಗ್ ನ್ಯೂಸ್ ಕೊಟ್ಟಿದ್ದ ಧೋನಿ

    1,929 ಗಂಟೆಗಳ ಬಳಿಕ ನಿವೃತ್ತಿ ಹೊಂದಿದ್ದೇನೆ – 2 ವರ್ಷಗಳ ಹಿಂದೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದ ಧೋನಿ

    ಮುಂಬೈ: ಎರಡು ವರ್ಷಗಳ ಹಿಂದೆ 2020ರಲ್ಲಿ ಟೀಂ ಇಂಡಿಯಾದ ವಿಶ್ವಕಪ್ ಗೆದ್ದ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಇದೇ ದಿನ ಆಗಸ್ಟ್ 15 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು.

    2022ರ ಆಗಸ್ಟ್ 15 ರಂದು ರಾತ್ರಿ 7:29 ಗಂಟೆಗೆ ಇನ್‍ಸ್ಟಾಗ್ರಾಮ್‍ನಲ್ಲಿ, ನಿಮ್ಮೆಲ್ಲರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು 1,929 ಗಂಟೆಗಳ ಬಳಿಕ ನನ್ನನ್ನು ನಿವೃತ್ತಿ ಹೊಂದಿದ ಆಟಗಾರ ಎಂದು ಸ್ವೀಕರಿಸಿ ಎಂದು ಧೋನಿ ನಿವೃತ್ತಿಯ ಬಗ್ಗೆ ಘೋಷಿಸಿದ್ದರು. ಇದು ಧೋನಿ ಅಭಿಮಾನಿಗಳಲ್ಲಿ ಬೇಸರ ತರಿಸಿತ್ತು. ಇದನ್ನೂ ಓದಿ: ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    2004ರಲ್ಲಿ ಟೀಂ ಇಂಡಿಯಾಗೆ ಕಾಲಿಟ್ಟ ಧೋನಿ ಆ ಬಳಿಕ ತನ್ನ ಆಟದ ಮೂಲಕ ಎದುರಾಳಿಗಳಿಗೆ ನಡುಕ ಹುಟ್ಟಿಸಿ, ತಂಡದ ನಾಯಕತ್ವದ ಚುಕ್ಕಾಣಿ ಹಿಡಿದು ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಐಸಿಸಿಯ ಮೂರು ಮಾದರಿ ಟ್ರೋಫಿ ಗೆದ್ದ ಭಾರತದ ನಾಯಕ ಎಂಬ ಹೆಗ್ಗಳಿಗೆ ಹೊಂದಿದರು. ಹಿರಿಯ ಆಟಗಾರರಿಗೆ ಕೊಕ್ ನೀಡಿ ಯುವ ಆಟಗಾರರಿಗೆ ಅವಕಾಶ ನೀಡಿ ತಂಡವನ್ನು ಬಲಿಷ್ಠವಾಗಿ ಕಟ್ಟಿ ಸ್ಟಾರ್ ಆಟಗಾರರ ಬೆಳವಣಿಗೆ ಧೋನಿ ಶ್ರಮಿಸಿದರು. ಧೋನಿ ನಾಯಕರಾಗಿ, ಆಟಗಾರನಾಗಿ ಮತ್ತು ಮಿಂಚಿನ ವಿಕೆಟ್ ಕೀಪಿಂಗ್ ಮೂಲಕ ಎಲ್ಲರ ಮನಗೆದ್ದಿದ್ದರು.

    2019ರ ಏಕದಿನ ವಿಶ್ವಕಪ್ ಸೈಮಿಫೈನಲ್ ಪಂದ್ಯದ ನಂತರ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಧೋನಿ, ವಿದಾಯ ಘೋಷಿಸುವ ಯಾವುದೇ ಸುಳಿವನ್ನು ನೀಡಿರಲಿಲ್ಲ. ಆದರೆ 2020 ಆಗಸ್ಟ್ 15 ರಂದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಸುದ್ದಿ ನೀಡಿದ್ದರು. ಈ ಮೂಲಕ ಧೋನಿಯನ್ನು ಮತ್ತೆ ನೀಲಿ ಜೆರ್ಸಿಯಲ್ಲಿ ನೋಡ ಬಯಸಿದ್ದ ಅವರ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಆದರೆ ಐಪಿಎಲ್‍ನಲ್ಲಿ ಮಾತ್ರ ಧೋನಿ ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ 15ನೇ ಆವೃತ್ತಿ ಆರಂಭದಲ್ಲಿ ನಾಯಕತ್ವಕ್ಕೆ ಗುಡ್‍ಬೈ ಹೇಳಿದ್ದರು. ಆ ಬಳಿಕ ಜಡೇಜಾ ನಾಯಕರಾಗಿದ್ದರು. ನಂತರ ಟೂರ್ನಿಯ ಅರ್ಧದಲ್ಲಿ ಜಡೇಜಾ ಗಾಯಗೊಂಡು ಹೊರನಡೆದಾಗ ಮತ್ತೆ ನಾಯಕತ್ವ ವಹಿಸಿಕೊಂಡಿದ್ದರು. ಇದನ್ನೂ ಓದಿ: ಟೀಂ ಇಂಡಿಯಾದ ಕ್ಯಾಪ್ಟನ್, ಕೋಚ್ ಪದೇ ಪದೇ ಬದಲಾವಣೆ – ಬಿಸಿಸಿಐಗೆ ನೆಟ್ಟಿಗರಿಂದ ಫುಲ್ ಕ್ಲಾಸ್

    ಧೋನಿ ಈವರೆಗೆ 350 ಏಕದಿನ ಹಾಗೂ 98 ಟಿ-20 ಪಂದ್ಯಗಳನ್ನು ಆಡಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ ಧೋನಿ 10 ಶತಕ, 73 ಅರ್ಧಶತಕ ಸಹಿತ 10,773 ರನ್‍ಗಳನ್ನು ಕಲೆ ಹಾಕಿದ್ದಾರೆ. 98 ಟಿ-20 ಪಂದ್ಯಗಳಿಂದ 2 ಅರ್ಧಶತಕ ಸಹಿತ 1,617 ರನ್ ಕಲೆಹಾಕಿ ಭಾರತ ತಂಡಕ್ಕೆ ಹೊಸ ಹುಮ್ಮಸ್ಸು ತುಂಬಿದ್ದರು.

    Live Tv
    [brid partner=56869869 player=32851 video=960834 autoplay=true]

  • ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

    ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

    ಬಾರಿಯ 212 ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಕ್ಷಾಂತರ ಜನರು ಆಗಮಿಸುವ ಫಲಪುಷ್ಪ ಪ್ರದರ್ಶನದಲ್ಲಿ  ಕರ್ನಾಟಕ ರತ್ನ ಡಾ. ರಾಜಕುಮಾರ್  ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯ ಆಧಾರಿತ  ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

    ಆಗಸ್ಟ್ 5ರಂದು ಫಲಪುಷ್ಪ  ಪ್ರದರ್ಶನವು  ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ  ರಾಘವೇಂದ್ರ ರಾಜಕುಮಾರ್ ಹಾಗೂ ನಟ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು  ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ  ಆಹ್ವಾನಿಸಲಾಗಿದೆ. ಇದನ್ನೂ ಓದಿ: `ಪುಷ್ಪ 2’ನಲ್ಲಿ ಅಲ್ಲು ಅರ್ಜುನ್‌ಗೆ ಟಕ್ಕರ್ ಕೊಡಲಿದ್ದಾರೆ ಈ ಬಾಲಿವುಡ್ ಸ್ಟಾರ್

    ಈ ಸಂದರ್ಭದಲ್ಲಿ ಉದ್ಯಾನ  ಕಲಾಸಂಘದ  ಉಪಾಧ್ಯಕ್ಷರಾದ ಶ್ರೀ ವಾಸುದೇವ್. ತೋಟಗಾರಿಕೆ  ಜಂಟಿ ನಿರ್ದೇಶಕರಾದ  ಡಾ. ಎಂ ಜಗದೀಶ್ ಹಾಗೂ  ಲಾಲ್ ಬಾಗ್  ತೋಟಗಾರಿಕೆ ಉಪನಿರ್ದೇಶಕರಾದ  ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ನ್ನಡ ಸಿನಿಮಾ ರಂಗದ ಹಲವು ತಾರೆಯರಿಗೆ ಸಿಂಹಸ್ವಪ್ನವಾಗಿರುವ, ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಇದೀಗ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಆಗಸ್ಟ್ 15ರ ಹಿನ್ನೆಲೆಯಾಗಿಟ್ಟುಕೊಂಡು ಅವರು ಸಿನಿಮಾ ಮಾಡುತ್ತಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ  ಅವರು, ‘ಇದೊಂದು ದೇಶಬಿಟ್ಟು ಹೋದವರ ಕಥೆಯನ್ನು ಹೇಳಲು ಹೊರಟಿದ್ದೇವೆ. ಸ್ವಾತಂತ್ರ್ಯ ದಿನದ ಎರಡು ದಿನದ ಮುಂಚೆ ಭಾರತದಲ್ಲಿ ನಡೆದ ಮಹತ್ವದ ಘಟನೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 13, 14 ಮತ್ತು 15 ಹೀಗೆ ಮೂರು ದಿನಗಳಲ್ಲಿ ನಡೆಯುವಂತಹ ಸಿನಿಮಾ ಇದಾಗಿದೆ’ ಎಂದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಇದೊಂದು ಪ್ಯಾನ್ ಇಂಡಿಯಾ ಮಾದರಿಯ ಚಿತ್ರವಾಗಿದ್ದರಿಂದ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾ ರಂಗದ ಕಲಾವಿದರು ಈ ಚಿತ್ರದಲ್ಲಿ ಇರಲಿದ್ದಾರೆ. ಸದ್ದಿಲ್ಲದೇ ಶೇ.90ರಷ್ಟು ಭಾಗದ ಚಿತ್ರೀಕರಣ ಕೂಡ ನಡೆದಿದೆಯಂತೆ. “ಈ ಸಿನಿಮಾವನ್ನು ಒಟ್ಟು 12 ಭಾಷೆಗಳಲ್ಲಿ ತಯಾರಿಸುತ್ತಿದ್ದೇವೆ. ಚೈನೀಸ್ ಭಾಷೆಗೂ ಅದನ್ನು ಡಬ್ ಮಾಡುವ ಆಲೋಚನೆ ಹೊಂದಿದ್ದೇವೆ. ಭಾರೀ ಬಜೆಟ್ ನಲ್ಲೇ ಈ ಸಿನಿಮಾ ಶುರುವಾಗಲಿದೆ. ಹಾಗಂತ ಇದು ದಿ ಕಾಶ್ಮೀರ್ ಫೈಲ್ಸ್ ಮಾದರಿಯ ಚಿತ್ರವಲ್ಲ. ಮನರಂಜನೆಯ ಜತೆ ಜತೆಗೆ ಒಂದು ನಿಜ ಸಂಗತಿಯನ್ನು ಈ ಸಿನಿಮಾದ ಮೂಲಕ ಬಯಲು ಮಾಡುತ್ತಿದ್ದೇವೆ’ ಎನ್ನುವುದು ಪ್ರಶಾಂತ್ ಸಂಬರಗಿ ಮಾತು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ‘ಕೇರಾಫ್ ಫುಟ್ ಪಾತ್’ ಚಿತ್ರ ಖ್ಯಾತಿಯ ಕಿಶನ್ ಮತ್ತು ಅವರ ತಂದೆ ಶ್ರೀಕಾಂತ್ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಟೀನೇಟ್ ಸಿನಿಮಾದ ನಂತರ ಬರುತ್ತಿರುವ ಇವರ ಚಿತ್ರ ಇದಾಗಿದೆ. ಸಿನಿಮಾದ ಕಲಾವಿದರ ಮತ್ತು ತಂತ್ರಜ್ಞರ ವಿವರವನ್ನು ಸದ್ಯಕ್ಕೆ ಬಹಿರಂಗ ಪಡಿಸಿಲ್ಲ ಚಿತ್ರತಂಡ. ಬೇರೆ ರೀತಿಯಲ್ಲಿ ಅದನ್ನು ಲಾಂಚ್ ಮಾಡಬೇಕಾಗಿದ್ದರಿಂದ ಇದಷ್ಟೇ ಮಾಹಿತಿಯನ್ನು ಪ್ರಶಾಂತ್ ಸಂಬರಗಿ ನೀಡಿದ್ದಾರೆ.

  • ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ

    ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ

    – ಈ ಬಾರಿ ವಿದ್ಯಾರ್ಥಿಗಳ ಪೆರೇಡ್ ಇಲ್ಲ

    ನವದೆಹಲಿ: ಮಹಾಮಾರಿ ಕೋವಿಡ್-19 ವಿರುದ್ಧ ಮೊದಲ ಸಾಲಿನಲ್ಲಿ ನಿಂತು ಹೋರಾಟ ನಡೆಸಿದ್ದ ಕೊರೊನಾ ವಾರಿಯರ್ಸ್‍ಗೆ ಈ ಬಾರಿಯ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಭಾಗವಹಿಸಲು ಅಹ್ವಾನ ನೀಡಲಾಗಿದ್ದು, ಆ ಮೂಲಕ ವೈದ್ಯರು, ಪೌರಕಾರ್ಮಿಕರು, ಪೊಲೀಸರು, ಇತರ ಅಧಿಕಾರಿಗಳಿಗೆ ವಿಶೇಷ ಗೌರವ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ವಿಶೇಷ ಸೇವೆ ಮಾಡಿದ್ದ ವಾರಿಯರ್ಸ್‍ಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಕೇಂದ್ರ ಸೂಚನೆ ನೀಡಿದೆ. ಅಲ್ಲದೇ ಕೊರೊನಾದಿಂದ ಗುಣಮುಖರಾದವರಿಗೂ ವಿಶೇಷ ಆಹ್ವಾನ ನೀಡುವಂತೆ ತಿಳಿಸಲಾಗಿದೆ.

    ಕೊರೊನಾ ಕಾರಣದಿಂದ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಕೇಂದ್ರ ಸರ್ಕಾರ ಮಾರ್ಗದರ್ಶನಗಳನ್ನು ಬಿಡುಗಡೆ ಮಾಡಿದೆ. ರಾಜ್ಯಗಳ ರಾಜಧಾನಿಗಳಲ್ಲಿ ಬೆಳಗ್ಗೆ 9 ಗಂಟೆಗೆ ಸಮಾರಂಭ ನಡೆಸಲು ಸೂಚಿಸಲಾಗಿದೆ. ವೈರಸ್ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸಮಾರಂಭಕ್ಕೆ ಆಹ್ವಾನ ನೀಡಬಾರದು. ಭಾರೀ ಸಂಖ್ಯೆಯಲ್ಲಿ ಜನರು ಸೇರುವುದನ್ನು ತಡೆಯುವಂತೆ ಸೂಚನೆ ನೀಡಲಾಗಿದೆ. ಉಳಿದಂತೆ ಕಾರ್ಯಕ್ರಮದಲ್ಲಿ ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ.

    ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳು ಇದೇ ನಿಯಮಗಳನ್ನು ಪಾಲನೆ ಮಾಡಲು ಸೂಚಿಸಲಾಗಿದೆ. ಉಳಿದಂತೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ನಿರ್ಧಾರ ಕೈಗೊಳ್ಳಲು ಗವರ್ನರ್ ಗಳಿಗೆ ಅವಕಾಶ ನೀಡಲಾಗಿದೆ. ಈ ಹಿಂದೆಯೇ ಕೊರೊನಾ ಯೋಧರಿಗೆ ಭಾರತ ಮೂರು ಸೇನೆಗಳು ಗೌರವ ಸೂಚಿಸಿ ವಾರಿಯರ್ಸ್ ಮೇಲೆ ಹೂ ಮಳೆ ಸುರಿಸಿತ್ತು. ನೇವಿ ಯುದ್ಧ ನೌಕೆಗಳ ಮೇಲೆ ದೀಪಗಳನ್ನು ಬೆಳಗಿಸಿ ಗೌರವ ಸೂಚಿಸಿತ್ತು.

  • ಸಂಪುಟ ವಿಸ್ತರಣೆ ವಿಳಂಬ – ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

    ಸಂಪುಟ ವಿಸ್ತರಣೆ ವಿಳಂಬ – ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ.

    ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಸುಮಾರು 72ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ. ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆ ಹಾಗೂ ಮನಪರಿವರ್ತನೆಗೊಂಡ ಖೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ.

    ಈ ಬಾರಿ ಗೃಹ ರಕ್ಷಕ ಇಲಾಖೆಯ ಬಿಡುಗಡೆ ಅರ್ಹತೆ ಪಡೆಯಬೇಕಾಗಿರುವ ಖೈದಿಗಳ ಪಟ್ಟಿ ಈಗಾಗಲೇ ಸಿದ್ಧ ಪಡಿಸಲಾಗಿದೆ. ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸಿಎಂ ಬಿಎಸ್‍ವೈ ಸರ್ಕಾರ ಅಧಿಕಾರಕ್ಕೆ ಬಂದು 15 ದಿನಗಳ ಮೇಲಾದರೂ ಕೂಡ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ ಸ್ವಾತಂತ್ರ್ಯೋತ್ಸವ ದಿನದಂದು ಸನ್ನಡತೆಯುಳ್ಳ ಖೈದಿಗಳ ಬಿಡುಗಡೆಗೆ ಬ್ರೇಕ್ ಬಿದ್ದಿದೆ.