Tag: ಆಚಾರ್ಯ ಬಾಲಕೃಷ್ಣ

  • ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

    ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

    ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ತರಾಟೆ ಬೆನ್ನಲ್ಲೇ ಪತಂಜಲಿ (Patanjali) ಸಂಸ್ಥೆ ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ (Apology) ಕೇಳಿದೆ.

    ಯೋಗ ಗುರು ಬಾಬಾ ರಾಮದೇವ್‌ (Yoga Guru Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ಅವರು, ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಮುಂದೆ ಅಂತಹ ದೋಷಗಳು ಪುನರಾವರ್ತನೆಯಾಗುವುದಿಲ್ಲ. ಇದು ನೀಡುತ್ತಿರುವ ಹೃದಯಪೂರ್ವಕ ಬದ್ಧತೆ ಎಂದು ಪ್ರಕಟಿಸಿ ಕ್ಷಮೆ ಕೋರಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

    ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಹಿಂದೆ ಪತ್ರಿಕೆಗಳಲ್ಲಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಆದರೆ ಪತಂಜಲಿ ಸಂಸ್ಥೆ ಸಣ್ಣ ಗಾತ್ರದ ಜಾಹೀರಾತು ನೀಡಿ ಕ್ಷಮೆ ಕೇಳಿತ್ತು. ಇದಕ್ಕೆ ಸಿಟ್ಟಾದ ಕೋರ್ಟ್‌ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೋ ಅದೇ ಗಾತ್ರದಲ್ಲಿ ಕ್ಷಮೆ ಕೇಳುವಂತೆ ಆದೇಶಿಸಿತ್ತು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

    ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು ಮುಂದಿನ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

     

  • ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    – ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರದ ವಿರುದ್ಧವೂ ತರಾಟೆ

    ನವದೆಹಲಿ: ಯಾವ ರೀತಿ ಜಾಹೀರಾತು (Advertisements) ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆಯನ್ನು ಕೇಳಬೇಕೆಂದು ಪತಂಜಲಿ (Patanjali) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಆದೇಶಿಸಿದೆ. ಅದೇ ರೀತಿಯಾಗಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರ ಸರ್ಕಾರವನ್ನು (Union Government) ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

    ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹಟಗಿ, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ನಿನ್ನೆ ಯಾಕೆ ಕ್ಷಮಾಪಣೆ ಪ್ರಕಟವಾಗಿದೆ ಎಂದು ಪ್ರಶ್ನಿಸಿದ ಪೀಠ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೇ ಅದೇ ರೀತಿಯಾಗಿ ಕ್ಷಮೆ ಕೇಳಬೇಕೆಂದು ಆದೇಶಿಸಿತು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಇಂಡಿಯನ್ ಮೆಡಿಕಲ್ ಅಸೋಷಿಯನ್ (IMA) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಸಿದ ಪೀಠ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಇತರ FMCG ಕಂಪನಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಕೇಂದ್ರವನ್ನು ಈ ವೇಳೆ ಪ್ರಶ್ನಿಸಿತು.

    ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು 1945 ರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ 170ನೇ ನಿಯಮದ ಅಡಿಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆಯುಷ್ ಸಚಿವಾಲಯವು 2023 ರಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕಳುಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

    ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ ಎಂದು ನ್ಯಾ. ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

     

    ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂಬುದನ್ನು ವಿವರಿಸಬೇಕು ಎಂದು ಹೇಳಿದ ಪೀಠ, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ಕೋರ್ಟ್‌  ತಿಳಿಸಿತು.

    ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ಹೇಳಿತು. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

    ಪ್ರಕರಣದ ಅರ್ಜಿ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದ ಪೀಠ ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

  • ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ನವದೆಹಲಿ: ಸುಳ್ಳು ಜಾಹೀರಾತು ಸಂಬಂಧ ಪತಂಜಲಿ(Patanjali) ಸಂಸ್ಥೆಯ ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣಗೆ(Acharya Balkrishna) ಸುಪ್ರೀಂಕೋರ್ಟ್ ಮತ್ತೆ ತಪರಾಕಿ ಹಾಕಿದೆ.

    ಕ್ಷಮೆಯಾಚನೆಯ ನೈಜತೆ ತಿಳಿಯಲು ಇಂದು ಇಬ್ಬರ ಜೊತೆ ಸುಪ್ರೀಂಕೋರ್ಟ್ (Supreme Court) ವೈಯಕ್ತಿಕವಾಗಿ ಸಂವಹನ ನಡೆಸಿತು. ಈ ಹಂತದಲ್ಲಿ ಇಬ್ಬರು ಕ್ಷಮೆಯಾಚಿದರೂ, ಅದನ್ನು ಹಿಮಾ ಕೊಹ್ಲಿ, ಅಮಾನುಲ್ಲಾ ಅವರಿದ್ದ ನ್ಯಾಯಪೀಠ ಸಂಪೂರ್ಣವಾಗಿ ಒಪ್ಪಲಿಲ್ಲ.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನಿಮ್ಮನ್ನು ಕ್ಷಮಿಸಿದ್ದೇವೆ ಎಂದು ನಾವು ಹೇಳುವುದಿಲ್ಲ. ನೀವೇನು ಅಮಾಯಕರಲ್ಲ. ನಿಮ್ಮ ಹಿಂದಿನ ಇತಿಹಾಸದ ಬಗ್ಗೆ ನಾವು ಕುರುಡರಾಗಿರಲು ಸಾಧ್ಯವಿಲ್ಲ. ನಿಮ್ಮ ಕ್ಷಮೆಯಾಚನೆ ಬಗ್ಗೆ ಆಲೋಚಿಸ್ತೇವೆ. ನಿಮ್ಮನ್ನು ಕುಣಿಕೆಯಿಂದ ಬಿಡಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಮುದ್ರಿಸುವ ಮೂಲಕ ಬಹಿರಂಗವಾಗಿ ಕ್ಷಮೆ ಕೇಳಿ ಎಂದು ಎಚ್ಚರಿಕೆಯ ಧಾಟಿಯಲ್ಲಿ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.  ಇದನ್ನೂ ಓದಿ: ಅವಕಾಶ ಕೇಳಿ ಬಂದಿದ್ದ ಶೈಲಜಾ ಜೊತೆ 2ನೇ ಮದುವೆಯಾದರು ದ್ವಾರಕೀಶ್

    ಪತಂಜಲಿ ಮತ್ತದರ ಸಂಸ್ಥೆಗಳು ತಮ್ಮನ್ನು ತಾವು ಸುಧಾರಿಸಿಕೊಳ್ಳುವುದಾಗಿ ನೀಡಿದ ಹೇಳಿಕೆ ದಾಖಲಿಸಿಕೊಂಡ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿತು.

     

  • ಯೋಗ ಗುರು ಬಾಬಾ ರಾಮ್‌ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್

    ನವದೆಹಲಿ: ಯೋಗ ಗುರು ಬಾಬಾ ರಾಮ್‌ದೇವ್ (Yoga Guru Baba Ramdev) ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. ಶೋಕಾಸ್ ನೋಟಿಸ್ ಗೆ ಉತ್ತರ ನೀಡದ ಹಿನ್ನೆಲೆ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

    ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ, ರಾಮ್‌ದೇವ್ ಮತ್ತು ಪತಂಜಲಿ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ, 1954 ರ ಸೆಕ್ಷನ್ 3 ಮತ್ತು 4 ಅನ್ನು ಪ್ರಾಥಮಿಕವಾಗಿ ಉಲ್ಲಂಘಿಸಿದ್ದಾರೆ ಎಂದು ಟೀಕಿಸಿತ್ತು. ತಾತ್ಕಾಲಿಕವಾಗಿ ಪತಂಜಲಿ ಜಾಹೀರಾತು ನಿರ್ಬಂಧಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

    ಆದರೆ ಸುಪ್ರೀಂಕೋರ್ಟ್ (Supreme Court) ನೋಟಿಸ್ ಗೆ ಉತ್ತರಿಸದ ಹಿನ್ನೆಲೆ ಸುಪ್ರೀಂಕೋರ್ಟ್ ಗರಂ ಆಗಿದೆ. ನಮ್ಮ ಆದೇಶಗಳನ್ನು ನಿರ್ಲಕ್ಷ್ಯಿಸಿದ್ದೀರಿ. ಈ ಹಿನ್ನಲೆ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ಸೂಚಿಸಿದರು. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ ರಾಮದೇವ್ ಪ್ರಕರಣಕ್ಕೆ ಹೇಗೆ ಸಂಬಂಧಿಸಿದ್ದಾರೆ ಅವರಿಗೆ ಯಾಕೆ ಸಮನ್ಸ್ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ನೀವೂ ವಿಚಾರಣೆ ಹಾರಾಗುತ್ತಿದ್ದೀರಿ, ಹಾಜರಾಗಬೇಕು ಎಂದಷ್ಟೆ ಹೇಳಿತು.

    ನಂತರ ಮುಕುಲ್ ರೋಹ್ಟಗಿ (Mukul Rohtagi) ಅವರು ಕಾನೂನು ಉಲ್ಲಂಘನೆ ನ್ಯಾಯಾಲಯದ ನಿಂದನೆ ಅಲ್ಲ ಮತ್ತು ತೆರೆದ ನ್ಯಾಯಾಲಯದಲ್ಲಿ ಹಾಜರಾಗುವ ಅವಶ್ಯಕತೆ ಏನಿದೆ ಎಂಬುದನ್ನು ಆದೇಶದಲ್ಲಿ ದಾಖಲಿಸಬೇಕು ಎಂದು ಹೇಳಿದರು. ಆದರೆ ನ್ಯಾಯಾಲಯ ಮಣಿಯದೆ ರಾಮ್‌ದೇವ್ ಖುದ್ದು ಹಾಜರಾಗುವಂತೆ ಆದೇಶ ನೀಡಿತು. ಇದನ್ನೂ ಓದಿ: ಬಿಜೆಪಿ ಅಸಮಾಧಾನಿತರಿಗೆ ಕಾಂಗ್ರೆಸ್ ಗೇಟ್ ಬಂದ್ – ಸಿಎಂ ಹೇಳಿದ ಖಡಕ್‌ ಮಾತು ಏನು?

    ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತು. ಯಾವುದೇ ಪ್ರಾಯೋಗಿಕ ಪುರಾವೆಗಳಿಲ್ಲದಿದ್ದರೂ ಪತಂಜಲಿ ಔಷಧಿಗಳು ಕೆಲವು ಕಾಯಿಲೆಗಳನ್ನು ಗುಣಪಡಿಸುತ್ತವೆ ಎಂದು ಸುಳ್ಳು ಹೇಳಿಕೆ ನೀಡುವ ಮೂಲಕ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.

  • ಕೋವಿಡ್‌ 19ಗೆ ಪತಂಜಲಿಯಿಂದ ಔಷಧಿ – 545 ರೂ.ಗೆ ಕೊರೊನಿಲ್ ಕಿಟ್‌

    ಕೋವಿಡ್‌ 19ಗೆ ಪತಂಜಲಿಯಿಂದ ಔಷಧಿ – 545 ರೂ.ಗೆ ಕೊರೊನಿಲ್ ಕಿಟ್‌

    – 3 ರಿಂದ 7 ದಿನದ ಒಳಗಡೆ ರೋಗಿಗಳು ಗುಣಮುಖ
    – ಪತಂಜಲಿ, ನಿಮ್ಸ್‌ ಜೊತೆಗೂಡಿ ಕ್ಲಿನಿಕಲ್‌ ಟ್ರಯಲ್‌

    ನವದೆಹಲಿ: ಕೋವಿಡ್‌ 19ಗೆ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಕಂಡು ಹಿಡಿದಿದೆ ಎಂದು ಯೋಗಗುರು ಬಾಬಾ ರಾಮ್‌ದೇವ್‌ ಹೇಳಿದ್ದಾರೆ.

    ಕೋವಿಡ್‌ 19ಗೆ ವಿಜ್ಞಾನಿಗಳು ಔಷಧಿ ಕಂಡುಹಿಡಿಯಲು ಶ್ರಮಿಸುತ್ತಿದ್ದರೆ ರಾಮದೇವ್‌ ಪತಂಜಲಿ ಸಂಸ್ಥೆ ಮೊದಲ ಆಯುವೇರ್ದಿಕ್‌ ಔಷಧಿ ಕಂಡುಹಿಡಿದಿದೆ ಎಂದು ರಾಮ್‌ದೇವ್ ತಿಳಿಸಿದ್ದಾರೆ.

    ಹರಿದ್ವಾರದಲ್ಲಿ ಔಷಧಿ ಬಿಡುಗಡೆ ಮಾಡಿ ಮಾತನಾಡಿದದ ಅವರು, ʼಕೊರೊನಿಲ್‌ʼ ಮತ್ತು ʼಸಸ್ವರಿʼ ಹೆಸರಿನ ಎರಡು ಔಷಧಿ ಸೇವಿಸಿದರೆ 7 ದಿನದಲ್ಲಿ ಕೊರೊನಾ ಗುಣವಾಗುತ್ತದೆ. ರೋಗಿಗಳು ಸಂಪೂರ್ಣವಾಗಿ ಗುಣವಾಗುತ್ತಾರೆ ಎಂದು ಶೇ.100 ರಷ್ಟು ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

    ಪತಂಜಲಿ ಸಂಶೋಧನಾ ಕೇಂದ್ರ ಮತ್ತು ಜೈಪುರದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ನಿಮ್ಸ್‌) ಜೊತೆ ಜಂಟಿಯಾಗಿ ಕ್ಲಿನಿಕಲ್‌ ಟ್ರಯಲ್‌ ಮಾಡಿದೆ. 3 ರಿಂದ 7 ದಿನದ ಒಳಗಡೆ ರೋಗಿಗಳು ಶೇ.100ರಷ್ಟು ಗುಣಮುಖರಾಗುತ್ತಾರೆ ಎಂದು ಸಂಸ್ಥೆ ತಿಳಿಸಿದೆ.

    ಎರಡು ಕ್ಲಿನಿಕಲ್‌ ಟ್ರಯಲ್‌ ಮಾಡಿದ್ದೇವೆ. ದೆಹಲಿ, ಅಹಮದಾಬಾದ್‌ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಪ್ರಯೋಗ ಮಾಡಿದ್ದೇವೆ. 280 ರೋಗಿಗಳಿಗೆ ನೀಡಿದ್ದು, ಔಷಧಿ ಪಡೆದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಕೊರೊನಾ ಕಿಟ್‌ ಬೆಲೆ 545 ರೂ. ಇದ್ದು, 30 ದಿನಗಳ ಕಾಲ ಬಳಸಬಹುದು. ಸದ್ಯಕ್ಕೆ ಈ ಔಷಧಿ ಎಲ್ಲಿಯೂ ಸಿಗುವುದಿಲ್ಲ. ಒಂದು ವಾರದಲ್ಲಿ ಪತಂಜಲಿ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಕೊರೊನಾ ಕಿಟ್‌ ವಿತರಣೆ ಸಂಬಂಧ ಒಂದು ಅಪ್ಲಿಕೇಶನ್‌ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

     

    ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವುದಿಲ್ಲ. ಬದಲಾಗಿ ಕೊರೊನಾವನ್ನು ಗುಣಪಡಿಸುತ್ತದೆ. ಶೇ.69 ರಷ್ಟು ರೋಗಿಗಳು 6 ದಿನದಲ್ಲಿ ಗುಣವಾಗಿದ್ದಾರೆ. ನಾವು ಸಂಶೋಧನೆ ಮಾಡಿಯೇ ಈ ಔಷಧಿ ಬಿಡುಗಡೆ ಮಾಡಿದ್ದೇವೆ. ಪ್ರತಿ ಪ್ರಶ್ನೆಗಳಿಗೆ ನಮ್ಮ ಬಳಿ ಉತ್ತರವಿದೆ ಎಂದು ಬಾಬಾ ರಾಮ್‌ದೇವ್‌ ತಿಳಿಸಿದ್ದಾರೆ.

    ಕೋವಿಡ್‌ 19 ಸ್ಫೋಟಗೊಂಡಾಗಲೇ ನಾವು ವಿಜ್ಞಾನಿಗಳ ತಂಡವನ್ನು ನೇಮಕ ಮಾಡಿದ್ದೆವು. ದೇಹದ ಯಾವ ಕಾಂಪೌಂಡ್ಸ್‌ ವೈರಸ್‌ ವಿರುದ್ಧ ಹೋರಾಡಿ ದೇಹದಲ್ಲಿ ಹರಡುವಿಕೆಯನ್ನು ನಿಲ್ಲಿಸಬಹುದು ಎಂಬುದನ್ನು ನಾವು ಮೊದಲು ಅಧ್ಯಯನ ನಡೆಸಿ ಈ ಔಷಧಿ ಬಿಡುಗಡೆ ಮಾಡಿದ್ದೇವೆ. ನಾವು ನೀಡಿದ ಔಷಧಿ ಸೇವಿಸಿದ ಪಾಸಿಟಿವ್‌ ರೋಗಿಗಳ ಪರೀಕ್ಷಾ ವರದಿ 3-4 ದಿನದಲ್ಲಿ ನೆಗೆಟಿವ್‌ ಬಂದಿದೆ. ಹೀಗಾಗಿ ಆಯುರ್ವೇದ ಮೂಲಕ ಕೋವಿಡ್‌ 19 ಗುಣಪಡಿಸಬಹುದು. ಮುಂದಿನ 4-5 ದಿನದಲ್ಲಿ ಈ ಅಧ್ಯಯನಕ್ಕೆ ಸಂಬಂಧಿಸಿದ ಡೇಟಾವನ್ನು ರಿಲೀಸ್‌ ಮಾಡುತ್ತೇವೆ ಎಂದು ಪತಂಜಲಿ ಸಂಸ್ಥೆಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ.