Tag: ಆಚಾರ್ಯ ಸಿನಿಮಾ

  • `ಆಚಾರ್ಯ’ ಚಿತ್ರದ ಸೋಲಿನಿಂದ ಮೆಗಾಸ್ಟಾರ್ ಚಿರಂಜೀವಿಗೆ ಸಂಕಷ್ಟ

    `ಆಚಾರ್ಯ’ ಚಿತ್ರದ ಸೋಲಿನಿಂದ ಮೆಗಾಸ್ಟಾರ್ ಚಿರಂಜೀವಿಗೆ ಸಂಕಷ್ಟ

    ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್‌ಚರಣ್ ನಟನೆಯ `ಆಚಾರ್ಯ’ ಸಿನಿಮಾ ಗಲ್ಲಾಪೆಟ್ಟಿಗೆ ಸೌಂಡ್ ಮಾಡೋದ್ರಲ್ಲಿ ಸೋತಿತ್ತು. ಈಗ `ಆಚಾರ್ಯ’ ಚಿತ್ರದಿಂದ ನಿರ್ದೇಶಕ ಕೊರಟಾಲ ಶಿವ ಮತ್ತು ಚಿರಂಜೀವಿ ಸಂಕಷ್ಟವೊಂದನ್ನ ಎದುರಿಸುತ್ತಿದ್ದಾರೆ. `ಆಚಾರ್ಯ’ ಚಿತ್ರದ ನಷ್ಟದಿಂದ 25 ಪ್ರದರ್ಶಕರು ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

    ಚಿರಂಜೀವಿ ಮತ್ತು ರಾಮ್‌ಚರಣ್ ನಟಿಸಿರುವ `ಆಚಾರ್ಯ’ ಸಿನಿಮಾ ಹೀನಾಯ ಸೋಲನ್ನೇ ಕಂಡಿದೆ. ಚಿತ್ರಕಥೆಗೆ ಸಪ್ಪೆ ಪ್ರತಿಕ್ರಿಯೆ ಸಿಕ್ಕಿತು. ಈ ಚಿತ್ರದಿಂದ ಲಾಭಕ್ಕಿಂತ ನಷ್ಟವೇ ಆಗಿರೋದು ಜಾಸ್ತಿ. ಹಾಗಾಗಿ ಈ ಚಿತ್ರದ ಪ್ರದರ್ಶಕರು ನಿನ್ನೆ ರಾತ್ರಿಯಿಂದ ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸದಿದ್ದರೆ ನಟ ಚಿರಂಜೀವಿ ಮನೆ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

    ಕೊನಿಡೆಲಾ ಪ್ರೊಡಕ್ಷನ್ ಮತ್ತು ಮ್ಯಾಟಿನಿ ಎಂಟರ್‌ಟೈನ್‌ಮೆಂಟ್ ಸಾರಥ್ಯದಲ್ಲಿ `ಆಚಾರ್ಯ’ ಚಿತ್ರವನ್ನ 140 ಕೋಟಿಯ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಆದರೆ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಗಳಿಸಿರೋದು 76 ಕೋಟಿ ಮಾತ್ರ. ಈ ಚಿತ್ರದ ಸೋಲಿನಿಂದ 20ಕ್ಕೂ ಹೆಚ್ಚು ಪ್ರದರ್ಶಕರಿಗೆ ತೊಂದರೆಯಾಗಿದೆ. ಹಾಗಾಗಿ ಚಿತ್ರತಂಡದ ವಿರುದ್ಧವಾಗಿ ಪ್ರದರ್ಶಕರು ನಿಂತಿದ್ದಾರೆ. ಇದನ್ನೂ ಓದಿ:ಕನ್ನಡ, ಕನ್ನಡಿಗರನ್ನೇ ಮರೆತು ಬಿಟ್ಟರಾ ‘ಕೆಜಿಎಫ್ 2’ ನಿರ್ದೇಶಕ ಪ್ರಶಾಂತ್ ನೀಲ್ : ಏನಿದು ಹೊಸ ಆರೋಪ?

    ಸದ್ಯ ನಟ ಚಿರಂಜೀವಿ `ಗಾಡ್‌ಫಾದರ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ `ಆಚಾರ್ಯ’ ಚಿತ್ರದಿಂದ ನಷ್ಟ ಅನುಭವಿಸುತ್ತಿರುವವರಿಗೆ ಚಿತ್ರತಂಡ ಸಾಥ್‌ ನೀಡುತ್ತಾ ಅಂತಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಸಿನಿಮಾಗಳು ಲಾಸ್ ಆದಾಗ ಆ ಚಿತ್ರದ ಹೀರೋಗಳು ವಿತರಕರಿಗೆ ಅಥವಾ ನಿರ್ಮಾಪಕರಿಗೆ ಒಂದಷ್ಟು ಹಣವನ್ನು ವಾಪಸ್ಸು ಮಾಡಿದ ಉದಾಹರಣೆಗಳನ್ನು ತೆಲುಗು ಮತ್ತು ತಮಿಳು ಸಿನಿಮಾ ರಂಗದಲ್ಲಿ ಕೇಳುತ್ತಲೇ ಇರುತ್ತೇವೆ. ಅದರಲ್ಲೂ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದಾಗ ಅಥವಾ ವಿತರಕರು ಕೈ ಸುಟ್ಟುಕೊಂಡಾಗ ಅವರ ನೆರವಿಗೆ ಅನೇಕ ಬಾರಿ ರಜನಿಕಾಂತ್ ಅವರು ನಿಂತದ್ದು ಇದೆ. ಇದೇ ಮೊದಲ ಬಾರಿಗೆ ನಿರ್ದೇಶಕರೊಬ್ಬರು ತಮ್ಮ ಸಿನಿಮಾ ಸೋಲಿನ ಹೊಣೆಹೊತ್ತು ಸಂಭಾವನೆಯನ್ನು ಹಿಂದುರಿಗಿಸಲು ಮುಂದಾಗಿದ್ದಾರಂತೆ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಇತ್ತೀಚೆಗೆ ಬಿಡುಗಡೆಯಾದ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿತು. ಹೇಳಿಕೊಳ್ಳುವಷ್ಟು ಯಶಸ್ಸು ಕಾಣಲಿಲ್ಲ. ಚಿರಂಜೀವಿ ಸಿನಿಮಾಗಳು ಅಂದರೆ, ನೂರಾರು ಕೋಟಿ ರೂಪಾಯಿ ಕೊಟ್ಟು ವಿತರಣಾ ಹಕ್ಕುಗಳನ್ನು ಪಡೆದಿರುತ್ತಾರೆ. ಹಾಗಾಗಿ ವಿತರಕರಿಗೆ ನೂರಾರು ಕೋಟಿ ಲಾಸ್ ಆಗಿದೆ. ಸ್ವತಃ ವಿತರಕರೆ ತಮಗೆ ಹಣ ವಾಪಸ್ಸು ಮಾಡುವಂತೆ ಕೇಳಿದ್ದರು. ಹೀಗಾಗಿ ಸಿನಿಮಾ ಸೋಲಿನ ಹೊಣೆಯನ್ನು ನಿರ್ದೇಶಕ ಕೊರಟಾಲ ಶಿವ ಹೊತ್ತಿದ್ದಾರಂತೆ. ಹಾಗಾಗಿ ಮೂವತ್ತು ಕೋಟಿಗೂ ಅಧಿಕ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಇದನ್ನೂ ಓದಿ: ರೆಡ್ ಕಲರ್ ಡ್ರೆಸ್‌ನಲ್ಲಿ ಸಮಂತಾ ಮಿಂಚಿಂಗ್

    ವಿದೇಶ ಪ್ರವಾಸದಲ್ಲಿದ್ದ ಚಿರಂಜೀವಿ ಇದೀಗ ವಾಪಸ್ಸಾಗಿದ್ದಾರೆ. ಯಾವ ಏರಿಯಾದಿಂದ ಎಷ್ಟೆಷ್ಟು ಹಣ ಬಂದಿದೆ ಎಂದು ಲೆಕ್ಕಾಚಾರ ಹಾಕಿಸಿ, ಯಾರಿಗೆ ಎಷ್ಟು ಹಣವನ್ನು ಮರಳಿಸಬೇಕು ಎಂದು ಲೆಕ್ಕಹಾಕಿಸಿದ್ದಾರಂತೆ. ಸಿನಿಮಾ ಟೀಮ್‍ನಲ್ಲಿ ಯಾರು ಎಷ್ಟೆಷ್ಟು ಹಣ ಕೊಡಬೇಕು ಎಂದು ಸೂಚಿಸಿದ್ದರಂತೆ. ನಿರ್ದೇಶಕ ಕೊರಟಾಲ ಶಿವ ಅವರು ಚಿರಂಜೀವಿ ಅವರು ಹೇಳಿದ್ದಕ್ಕಿಂತಲೂ ಹೆಚ್ಚಿನ ಹಣ ನೀಡಿದ್ದಾರೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಕೇವಲ ಕೊರಟಾಲ ಶಿವ ಮಾತ್ರವಲ್ಲ ಚಿರಂಜೀವಿ ಕೂಡ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಅಲ್ಲದೇ, ಅವಶ್ಯ ಬಿದ್ದರೆ ಮತ್ತಷ್ಟು ಕೊಡುವುದಾಗಿಯೂ ಅವರು ಹೇಳಿದ್ದಾರೆ. ಏಪ್ರಿಲ್ 29 ರಂದು ಬಿಡುಗಡೆಯಾದ ಆಚಾರ್ಯ ಸಿನಿಮಾದಲ್ಲಿ ಚಿರಂಜೀವಿ ಜೊತೆ ಪುತ್ರ ರಾಮ್ ಚರಣ್ ತೇಜ ಕೂಡ ನಟಿಸಿದ್ದರು. ಆದರೂ, ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಗೆಲ್ಲುವುದಕ್ಕೆ ಆಗಿರಲಿಲ್ಲ.

  • ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಹೈದರಾಬಾದ್: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

    ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ವಿನಂತಿಸುತ್ತೇನೆ. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ಅಪ್‍ಡೇಟ್ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಲೆಟರ್ ಹೆಡ್ ಇರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ ಚಿರಂಜೀವಿ ಈ ಕುರಿತು ಖಚಿತಪಡಿಸಿದ್ದಾರೆ. ಸದ್ಯ ಹೋಮ್ ಐಸೋಲೇಶನ್‍ಗೆ ಒಳಪಟ್ಟಿದ್ದಾರೆ.

    ಇಂದಿನಿಂದ ಆಚಾರ್ಯ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಚಿರಂಜೀವಿ ಹಾಗೂ ಕೊರಟಾಲ ಶಿವ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಕೊರೊನಾ ನಿಯಮದಂತೆ ಚಿತ್ರ ತಂಡದ ಎಲ್ಲ ಸದಸ್ಯರಿಗೆ ಪರೀಕ್ಷೆ ಮಾಡಲಾಗಿದ್ದು, ಈ ವೇಳೆ ಚಿರಂಜೀವಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

    ಕೊರೊನಾ ಲಾಕ್‍ಡೌನ್‍ನಿಮದಾಗಿ ಆಚಾರ್ಯ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಹೈದರಾಬಾದ್‍ನಲ್ಲಿ ಚಿತ್ರಕರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇಂದು ಚಿರಂಜೀವಿಗೆ ಪಾಸಿಟಿವ್ ಬಂದಿದೆ. ಚಿರಂಜೀವಿ ಸೇರಿದಂತೆ ಇತರ ಪ್ರಮುಖ ಪಾತ್ರಗಳ ಶೂಟಿಂಗ್ ಮಾಡಲು ಚಿತ್ರತಂಡ ಯೋಜಿಸಿತ್ತು. ಈ ಚಿತ್ರವನ್ನು ಮ್ಯಾಟನಿ ಎಂಟರ್ ಟೈನ್ಮೆಂಟ್ ಸಹಯೋಗದೊಂದಿಗೆ ಕೊನಿಡೆಲಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.