Tag: ಆಟಗಾರ

  • ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

    ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

    ಕಾಬೂಲ್: ಅಘ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಜನ ಭಯಗೊಂಡು ದೇಶ ತೊರೆಯಲು ಸಿಕ್ಕ ಸಿಕ್ಕ ವಿಮಾನ ಹತ್ತಲು ಪ್ರಾರಂಭಿಸಿದ್ದರು. ಈ ವೇಳೆ ಅಮೆರಿಕಾಗೆ ತೆರಳಲುತ್ತಿದ್ದ ವಿಮಾನ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ವಿಮಾನದ ಮೇಲಿಂದ ಮೂವರು ಬಿದ್ದಿದ್ದರು. ಇದೀಗ ಅವರ ಗುರುತು ಪತ್ತೆಯಾಗಿದ್ದು, ಮೂವರಲ್ಲಿ ಓರ್ವ ಅಘ್ಘಾನ್‍ನ ಯುವ ಫುಟ್‍ಬಾಲ್ ಆಟಗಾರ ಎಂದು ವರದಿಯಾಗಿದೆ.

    ಆಗಸ್ಟ್ 16ರಂದು ಅಘ್ಘಾನಿಸ್ತಾನದ ಜನರು ವಿಮಾನ ನಿಲ್ದಾಣಗಳತ್ತ ಆಗಮಿಸಿ ವಿಮಾನಗಳನ್ನೇರಿ ದೇಶ ತೊರೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವಿಮಾನದಿಂದ ಮೂವರು ಕೆಳಗೆ ಬಿದ್ದಿರುವ ಬಗ್ಗೆ ವರದಿಯಾಗಿತ್ತು. ಆ ಮೂವರಲ್ಲಿ ಒಬ್ಬರು ಶಫೀವುಲ್ಲಾ ಮತ್ತೊಬ್ಬರು ಫಿದಾ ಮೊಹಮ್ಮದ್ ಎಂದು ಗುರುತು ಪತ್ತೆಯಾಗಿತ್ತು. ಬಳಿಕ ಇದೀಗ ಇನ್ನೊಬ್ಬರ ಗುರುತು ಕೂಡ ಪತ್ತೆಯಾಗಿದ್ದು ಅವರನ್ನು ಅಘ್ಘಾನಿಸ್ತಾನದ ಯುವ ಫುಟ್‍ಬಾಲ್ ಆಟಗಾರ ಝಾಕಿ ಅನ್ವಾರಿ ಎಂದು ಗುರುತಿಸಲಾಗಿದೆ.

    ಈ ಬಗ್ಗೆ ಅಘ್ಘಾನಿಸ್ತಾನದ ರಾಷ್ಟ್ರೀಯ ಫುಟ್‍ಬಾಲ್ ತಂಡ ಯುವ ಆಟಗಾರರಾದ ಝಾಕಿ ಅನ್ವಾರಿ ಅವರ ಸಾವಿನ ಬಗ್ಗೆ ದೃಢಪಡಿಸಿ ಸಂತಾಪ ಸೂಚಿಸಿದೆ. ಇದನ್ನೂ ಓದಿ: “ಜೋರಾದ ಸದ್ದು ಕೇಳಿಸ್ತು.. ನೋಡಿದ್ರೆ ಮನೆ ಮೇಲೆ ಇಬ್ರು ಬಿದ್ದಿದ್ರು”

    ಅಮೆರಿಕಾದ ಪ್ಲೇನ್ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ಮೇಲಿಂದ ಇಬ್ಬರು ಬೀಳುವ ಭಯಾನಕ ದೃಶ್ಯ ಮೊಬೈಲ್ ಗಳಲ್ಲಿ ಸೆರೆಯಾಗಿತ್ತು. ಅಂದು ವಿಮಾನದಿಂದ ಕೆಳಗೆ ಬಿದ್ದವರ ಗುರುತು ಪತ್ತೆಯಾಗಿದೆ.

    ವಲಿ ಸಾಲೆಕ್ ಎಂಬವರ ಮನೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ಎರಡು ಗಂಟೆ ನಂತ್ರ ವಿಶ್ರಾಂತಿ ಪಡೆಯುತ್ತಿದ್ದೆ. ಆಗ ಮೇಲಿನಿಂದ ಏನೋ ಬಿದ್ದಂತೆ ಆಯ್ತು. ನಾವು ಟೈರ್ ಸ್ಫೋಟಗೊಂಡು ಮನೆಯ ಮೇಲೆ ಬಂದಿದೆಯಾ ಅಂತ ನೋಡಲು ಹೋದೆ. ನನ್ನೊಂದಿಗೆ ಮಗಳು ಮತ್ತು ಪತ್ನಿ ಸಹ ಬಂದರು. ಮೇಲೆ ನೋಡಿದ್ರೆ ಇಬ್ಬರ ಶವಗಳು ಎರಡು ತುಂಡಾಗಿದ್ದವು. ಈ ಭೀಕರ ದೃಶ್ಯ ಕಂಡ ಪತ್ನಿ ಮತ್ತು ಮಗಳು ಮೂರ್ಛೆ ಹೋದರು ಎಂದು ವಲಿ ಹೇಳ್ತಾರೆ.  ಇದನ್ನೂ ಓದಿ: ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಸ್ಥಳೀಯರ ಸಹಾಯದಿಂದ ಎರಡೂ ಶವಗಳನ್ನು ಸಮೀಪದ ಮಸೀದಿ ಬಳಿ ತೆಗೆದುಕೊಂಡು ಹೋಗಲಾಯ್ತು. ಅಲ್ಲಿ ಇಬ್ಬರ ಜೇಬುಗಳನ್ನ ಪರಿಶೀಲಿಸಿದಾಗ ಅವರ ಗುರುತು ಪತ್ತೆಯಾಯ್ತು. ಒಬ್ಬರು ಶಫೀವುಲ್ಲಾ, ಮತ್ತೊಬ್ಬರು ಫಿದಾ ಮೊಹಮ್ಮದ್. ಶಫೀವುಲ್ಲಾ ದಾಖಲೆ ಆತ ವೈದ್ಯ ಅಂತ ಗೊತ್ತಾಯ್ತು. ಇಬ್ಬರ 30 ವರ್ಷದೊಳಗಿನ ಯುವಕರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

  • ಪಾಕಿಸ್ತಾನ ತಂಡದಲ್ಲಿ ಕೊಹ್ಲಿ- ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಪಾಕಿಸ್ತಾನ ತಂಡದಲ್ಲಿ ಕೊಹ್ಲಿ- ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಲಂಡನ್: ಪಾಕಿಸ್ತಾನ ತಂಡದ ಯುವ ಆಟಗಾರನೋರ್ವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲುವ ರೀತಿ ಕಾಣುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಪಾಕಿಸ್ತಾನ ತಂಡದ ಯುವ ಆಟಗಾರ ಸೌದ್ ಶಕೀಲ್ ಇತ್ತೀಚೆಗೆ ಪಾಕಿಸ್ತಾನ ತಂಡದ ಪರ ಏಕದಿನ ಕ್ರಿಕೆಟ್ ಮೂಲಕ ಪದಾರ್ಪಣೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡುತ್ತಿರುವ ಶಕೀಲ್ ಬ್ಯಾಟಿಂಗ್ ವೇಳೆ ಹೆಲ್ಮೆಟ್ ಧರಿಸಿ ನಿಂತಿರುವ ಕೆಲವು ಭಂಗಿಗಳು ಇದೀಗ ವೈರಲ್ ಆಗುತ್ತಿದ್ದು, ಇದರಲ್ಲಿ ಶಕೀಲ್ ಅವರ ಗಡ್ಡ ಮತ್ತು ಬ್ಯಾಟ್ ಹಿಡಿದು ನಿಂತಿರುವ ಭಂಗಿ ವಿರಾಟ್ ಕೊಹ್ಲಿಯನ್ನು ಹೋಲುತ್ತಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಪರ ಕಣಕ್ಕಿಳಿದ ಶಕೀಲ್, ಮೊದಲ ಏಕದಿನ ಪಂದ್ಯದಲ್ಲಿ 5 ರನ್‍ಗಳಿಸಿ ನಿರಾಸೆ ಮೂಡಿಸಿದ್ದರು. ಬಳಿಕ ಎರಡನೇ ಏಕದಿನ ಪಂದ್ಯದಲ್ಲಿ 56 ರನ್(77 ಎಸೆತ, 4 ಬೌಂಡರಿ) ಸಿಡಿಸಿ ಪಾಕಿಸ್ತಾನದ ಪರ ಮಿಂಚಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ಗೇಲ್ ವಿಶ್ವದಾಖಲೆ ಆಟ – ವಿಂಡೀಸಿಗೆ ಸರಣಿ

    ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಏಕದಿನ ಸರಣಿ ಆಡುತ್ತಿದೆ. ಈ ನಡುವೆ ಭಾರತ ತಂಡ ಕೂಡ ಇಂಗ್ಲೆಂಡ್‍ನಲ್ಲಿದೆ ಹಾಗಾಗಿ ಕೊಹ್ಲಿ ಪಾಕಿಸ್ತಾನ ತಂಡದ ಪರ ಅಡುತ್ತಿದ್ದಾರೆ ಎಂದು ಶಕೀಲ್ ಅವರನ್ನು ಕಂಡು ಹಲವು ರೀತಿಯ ಚರ್ಚೆ, ಹಾಸ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

  • 22ರ ಯುವಕನೊಂದಿಗೆ 52ರ ಹರೆಯದ ನೇಮರ್ ತಾಯಿ ಡೇಟಿಂಗ್

    22ರ ಯುವಕನೊಂದಿಗೆ 52ರ ಹರೆಯದ ನೇಮರ್ ತಾಯಿ ಡೇಟಿಂಗ್

    – ಹುಚ್ಚು ಪ್ರೀತಿಗೆ ನೇಮರ್ ಒಪ್ಪಿಗೆ

    ಬ್ರೆಸಿಲಿಯಾ: ಪ್ರೀತಿ, ಕಾಮಕ್ಕೆ ಕಣ್ಣಿಲ್ಲ. ಇದಕ್ಕೆ ವಯಸ್ಸಿನ ಅಂತರವೂ ತಿಳಿಯುವುದಿಲ್ಲ ಎಂಬ ಮಾತಿದೆ. ಪ್ರೀತಿಯ ಬಲೆಗೆ ಬಿದ್ದು, ತನಗಿಂತ 10 ವರ್ಷದ ಹಿರಿಯರನ್ನ ಮದುವೆಯಾದ ಬಗ್ಗೆ ಕೇಳಿದ್ದೇವೆ, ನೋಡಿದ್ದೇವೆ. ಆದ್ರೆ 30 ವರ್ಷಗಳ ಅಂತರವಿರುವ ಜೋಡಿ ಡೇಟಿಂಗ್ ನಡೆಸಿರುವ ಬಗ್ಗೆ ಕೇಳಿದ್ದೀರಾ? ಇಲ್ವಾಲ್ಲಾ… ಅಂತಹದೊಂದು ವಿಚಿತ್ರ ಸನ್ನಿವೇಶ ಬ್ರೆಜಿಲ್‍ನ ಖ್ಯಾತ ಫುಟ್ಬಾಲ್ ಪ್ಲೇಯರ್ ನೇಮರ್ ಜೀವನದಲ್ಲಿ ನಡೆದಿದೆ.

    ಹೌದು. ಆದರೆ ಡೇಟಿಂಗ್ ನಡೆಸಿದ್ದು 28 ವರ್ಷದ ನೇಮರ್ ಎಂದು ಕೊಂಡ್ರೆ ತಪ್ಪಾಗುತ್ತದೆ. ಇಲ್ಲಿ ಹೇಳ ಹೊರಟಿರುವುದು ನೇಮರ್ ತಾಯಿ ನಾಡಿನ್ ಗೋಂಕಾವ್ಸ್ ಕಥೆ.

    ನಾಡಿನ್ ಗೋಂಕಾವ್ಸ್ ಚಿಕ್ಕ ವಯಸ್ಸಿನ ಹುಡುಗನೊಂದಿಗೆ ಡೇಟಿಂಗ್ ನಡೆಸಿದ್ದಾರೆ. 52ರ ಹರೆಯದ ನಾಡಿನ್ ಗೋಂಕಾವ್ಸ್ 22 ವರ್ಷದ ಟಿಯಾಗೋ ರ್ಯಾಮೋಸ್ ಜೊತೆಗೆ ಡೇಟಿಂಗ್‍ನಲ್ಲಿದ್ದು, ಇದಕ್ಕೆ ನೇಮರ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಮತ್ತೊಂದು ಶಾಕಿಂಗ್ ವಿಚಾರವೆಂದ್ರೆ ನೇಮರ್‍ಗಿಂತ ಟಿಯಾಗೋ 6 ವರ್ಷ ಚಿಕ್ಕವನಾಗಿದ್ದಾರೆ.

    ಗೋಂಕಾವ್ಸ್ ಮತ್ತು ಟಿಯಾಗೋ ಸಂಬಂಧದ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಜೋಡಿಯ ನಡುವಿನ ಅಂತರದ ಬಗ್ಗೆ ಅನೇಕರು ಗೇಲಿ ಮಾಡಿದ್ದಾರೆ. ಆದ್ರೆ ನೇಮರ್ ಮಾತ್ರ ಇದಕ್ಕೆಲ್ಲ ಕ್ಯಾರೆ ಎಂದಿಲ್ಲ. ಬದಲಿಗೆ ನೇಮರ್ ತನ್ನ ತಾಯಿ ಮತ್ತು ಹುಡುಗನ ಸಂಬಂಧಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

    ಟಿಯಾಗೋ ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಗೋಂಕಾವ್ಸ್ ಗೆ ಕಿಸ್ ಕೊಡುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ ‘ವಿವರಿಸಲಾಗದ’ ಎಂದು ಬರೆದು, ಲವ್ ಎಮೋಜಿ ಹಾಕಿದ್ದಾರೆ. ಈ ಪೋಸ್ಟ್ ಅನ್ನು ಒಂದು ಲಕ್ಷಕ್ಕೂ ಅಧಿಕ ಜನರು ಲೈಕ್ ಮಾಡಿದ್ದು, ಅನೇಕರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಗೋಂಕಾವ್ಸ್ ಕೂಡ ಇದೇ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ನೇಮರ್ ಕೂಡ ಕಮೆಂಟ್ ಮಾಡಿ, ‘ಖುಷ್ಯಾಗಿರು ಅಮ್ಮ, ಲವ್ ಯೂ’ ಎಂದು ತಿಳಿಸಿದ್ದಾರೆ.

    ಯಾರು ಈ ಟಿಯಾಗೋ?
    ಟಿಯಾಗೋ ಫುಟ್ಬಾಲ್ ಆಟಗಾರ ಅಷ್ಟೇ ಅಲ್ಲದೆ ರೂಪದರ್ಶಿ ಕೂಡ ಹೌದ. ಅವರು 4ಕೆ ಈಸಿ ತಂಡದ ಪರ ಆಡುತ್ತಾರೆ. ನಾರ್ತರ್ನ್ ಫುಟ್ಬಾಲ್ ಅಲಾಯನ್ಸ್ (ಎನ್‍ಎಫ್‍ಎ) ಲೀಗ್‍ನಲ್ಲಿ ಈ ತಂಡವು ಭಾಗವಹಿಸುತ್ತದೆ. ನಾಡಿನ್ ಗೋಂಕಾವ್ಸ್, ವ್ಯಾಗ್ನರ್ ರಿಬೈರೊ ಅವರೊಂದಿಗೆ ಮದ್ವೆ ಆಗಿದ್ದರು. ಆದ್ರೆ 25 ವರ್ಷಗಳ ಬಳಿಕ ಅಂದ್ರೆ 2016ರಲ್ಲಿ ವಿಚ್ಛೇದನ ಪಡೆದಿದ್ದರು.

    https://www.instagram.com/p/B-26GxwF476/

    ವಿಚಿತ್ರವೆಂದ್ರೆ ನಾಡಿನ್ ಗೋಂಕಾವ್ಸ್ ಜೊತೆಗೆ ಡೇಟಿಂಗ್‍ನಲ್ಲಿರುವ ಟಿಯಾಗೋ ನೇಮರ್ ಅವರ ಅಭಿಮಾನಿಯಾಗಿದ್ದಾರೆ. ಈ ವಿಚಾರವನ್ನ ಟಿಯಾಗೋ 2017ರಲ್ಲೇ ನೇಮರ್ ಬಳಿ ಹೇಳಿಕೊಂಡಿದ್ದರಂತೆ.

    ‘ನಾನು ನಿಮ್ಮ ಅಭಿಮಾನಿ. ಒಂದು ದಿನ ನಿಮ್ಮ ಪಕ್ಕದಲ್ಲಿ ನಿಂತೇ ನಿಲ್ಲುತ್ತೇನೆ. ಆ ನಂಬಿಕೆಯಿದೆ,’ ಎಂದು ಟಿಯಾಗೋ ನೇಮರ್ ಅವರಿಗೆ ಹೇಳಿದ್ದರಂತೆ. ಆದ್ರೆ ಟಿಯಾಗೋ ನೇಮರ್ ತಾಯಿಯ ಜೊತೆಗೆ ಡೇಟಿಂಗ್ ನಡೆಸಿ, ಹೀಗೆ ಪಕ್ಕದಲ್ಲಿ ನಿಲ್ಲುತ್ತಾರೆ ಎಂದು ಯಾರೂ ಊಹೆ ಕೂಡ ಮಾಡಿರಲಿಕ್ಕಿಲ್ಲ. ಇದನ್ನು ಸ್ವತಃ ನೇಮರ್ ಕೂಡ ಊಹೆ ಮಾಡಿರಲಿಲ್ಲವೆಂದ ಅನಿಸುತ್ತದೆ.

  • ಅಂತಾರಾಷ್ಟ್ರೀಯ ಚೆಸ್ ಪ್ರತಿಭೆಗೆ ಬೇಕಿದೆ ನೆರವು

    ಅಂತಾರಾಷ್ಟ್ರೀಯ ಚೆಸ್ ಪ್ರತಿಭೆಗೆ ಬೇಕಿದೆ ನೆರವು

    ಶಿವಮೊಗ್ಗ: ಚೆಸ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 9 ವರ್ಷದಿಂದ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಚಿನ್ನದ ಪದಕ ಗಳಿಸಿಕೊಟ್ಟ ಅಂಧ ಚೆಸ್ ಆಟಗಾರನಿಗೆ ಸರಕಾರದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಕೀರ್ತಿ ಬೆಳಗಿಸಿದ ಈ ಆಟಗಾರನ ಗುರುತಿಸುವ ಪ್ರಯತ್ನ ಸಹ ನಡೆದಿಲ್ಲ.

    ರಾಜ್ಯದ ಕ್ರೀಡಾ ಸಚಿವರ ತವರು ಶಿವಮೊಗ್ಗ ಜಿಲ್ಲೆಯ ಪ್ರತಿಭೆ, ಅಂತರರಾಷ್ಟ್ರೀಯ ಮಟ್ಟದ ಚೆಸ್ ಆಟಗಾರ ಕಿಶನ್ ಗಂಗೊಳ್ಳಿ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಕೀಡಾಪಟು. ಶಿವಮೊಗ್ಗದ ವಿನೋಬ ನಗರ ನಿವಾಸಿಯಾಗಿರುವ ಕಿಶನ್, ಹುಟ್ಟಿನಿಂದಲೇ ಶೇ.75% ಭಾಗ ದೃಷ್ಟಿ ಸಮಸ್ಯೆ ಹೊಂದಿದ್ದಾರೆ. ಆದರೂ ಛಲ ಬಿಡದೆ ಜೀವನದಲ್ಲಿ ಏನಾದರೂ ಸಾಧಿಸಬೇಕು, ತಾಯ್ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂಬ ಕಾರಣದಿಂದ ಕಿಶನ್ ಚೆಸ್ ಕಲಿತಿದ್ದಾರೆ.

    ಚೆಸ್ ಕಲಿತು ಕೇವಲ ಜಿಲ್ಲೆ ಹಾಗೂ ರಾಜ್ಯಕ್ಕಷ್ಟೇ ಸೀಮಿತವಾಗದೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹತ್ತು ಹಲವು ಪ್ರಶಸ್ತಿ, ಚಿನ್ನದ ಪದಕ ಗಳಿಸಿದ್ದಾರೆ. ಇಷ್ಟೆಲ್ಲಾ ಪ್ರತಿಭೆ ಇದ್ದರೂ ರಾಜ್ಯ ಸರಕಾರದಿಂದ ಸಿಗಬೇಕಾದ ಮನ್ನಣೆ, ಅವಕಾಶ, ಸಹಾಯ ಮಾತ್ರ ಇದುವರೆಗೂ ಕಿಶನ್ ಅವರಿಗೆ ಲಭಿಸಿಲ್ಲ.

    2018 ರಲ್ಲಿ ಜಕಾರ್ತಾದಲ್ಲಿ ನಡೆದ ಮೂರನೇ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದ ಏಕೈಕ ಭಾರತೀಯ ಎಂಬ ಹೆಗ್ಗಳಿಕೆ ಪಡೆದಿರುವ ಕಿಶನ್ ಅವರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಸನ್ಮಾನ ಮಾಡಿದ್ದರು. ಆದರೆ ರಾಜ್ಯ ಸರಕಾರ ಮಾತ್ರ ಈ ಪ್ರತಿಭೆಯನ್ನು ಗುರುತಿಸಿಲ್ಲ. ಭವಿಷ್ಯದಲ್ಲಿ ವಿಶ್ವ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಬೇಕು ಎಂಬ ಕನಸು ಹೊತ್ತಿರುವ ಕಿಶನ್ ಕುಟುಂಬ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.

    ಈ ಕುರಿತು ಮಾತನಾಡಿರುವ ಕಿಶನ್ ಅವರ ತಾಯಿ ತನ್ನ ಮಗನಿಗೆ ಚೆಸ್ ತರಬೇತಿ ಕೊಡಿಸಲು ಬಡ್ಡಿ ಸಾಲ ಮಾಡಿ, ಮನೆಯಲ್ಲಿದ್ದ ಅಲ್ಪ ಸ್ವಲ್ಪ ಚಿನ್ನವನ್ನು ಗಿರವಿಯಿಟ್ಟು ತರಬೇತಿ ಕೊಡಿಸುತ್ತಿದ್ದೇವೆ. ಮುಂದೆ ಉನ್ನತ ತರಬೇತಿ ಪಡೆಯಲು ಹೆಚ್ಚಿನ ಹಣದ ಅವಶ್ಯಕತೆ ಇದೆ. ಸಂಘ ಸಂಸ್ಥೆಗಳು, ಸರಕಾರ ಪ್ರತಿಭೆಯನ್ನು ಗುರುತಿಸಿ ಸಹಾಯ ಮಾಡಬೇಕಿದೆ ಎಂದು ಮನವಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಪತಾಕೆ ಹಾರಿಸಿಸಲು ಸಿದ್ಧವಾಗುತ್ತಿರುವ ಕಿಶನ್ ಅವರನ್ನು ಗುರುತಿಸಿ ಕ್ರೀಡಾ ಸಚಿವ ಈಶ್ವರಪ್ಪ ನೆರವಿಗೆ ಧವಿಸಬೇಕು ಎಂಬುವುದು ನಮ್ಮ ಆಶಯವಾಗಿದೆ.

  • ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

    ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

    ವಡೋದರಾ: ವೆಂಟಿಲೇಟರ್ ನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಜೇಕಬ್ ಮಾರ್ಟಿನ್ ನೆರವಿಗೆ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಧಾವಿಸಿದ್ದಾರೆ.

    ಡಿಸೆಂಬರ್ 28 ರಂದು ನಡೆದ ರಸ್ತೆ ಅಪಘಾತದಿಂದಾಗಿ ಶ್ವಾಸಕೋಶ ಮತ್ತು ಲಿವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಕಬ್ ಮಾರ್ಟಿನ್ ಆರ್ಥಿಕ ಸಮಸ್ಯೆಗೆ ಸಿಲುಕಿದ್ದಾರೆ.

    ಈಗಾಗಲೇ ಬಿಸಿಸಿಐ 5 ಲಕ್ಷ ರೂ. ನೀಡಿದ್ದರೆ ಬರೋಡಾ ಕ್ರಿಕೆಟ್ ಸಂಸ್ಥೆ 3 ಲಕ್ಷ ರೂ. ನೀಡಿದೆ. ಸೌರವ್ ಗಂಗೂಲಿ ಸೇರಿದಂತೆ ಹಲವು ಕ್ರಿಕೆಟಿಗರು ಮಾರ್ಟಿನ್ ಅವರಿಗೆ ಸಹಾಯ ಮಾಡಿದ್ದಾರೆ. ಈಗ ಕೃನಾಲ್ ಪಾಂಡ್ಯ ಸಹ ಸಹಾಯ ಹಸ್ತ ಚಾಚಿದ್ದಾರೆ.

    ಈ ಸಂಬಂಧ ಖಾಲಿ ಚೆಕ್ ನೀಡಿದ ಕೃನಾಲ್, ಎಷ್ಟು ಹಣ ಬೇಕಾದರೂ ಬರೆದುಕೊಳ್ಳಿ, ಆದರೆ ಯಾವುದೇ ಕಾರಣಕ್ಕೂ 1 ಲಕ್ಷ ರೂ. ಗಿಂತ ಕಡಿಮೆ ಮೊತ್ತವನ್ನು ಈ ಚೆಕ್ ನಲ್ಲಿ ಬರೆಯಬೇಡಿ ಎಂದು ಹೇಳಿದ್ದಾರೆ.

    ಆರಂಭದಲ್ಲಿ ಮಾಜಿ ಆಟಗಾರ ಮತ್ತು ಹಾಲಿ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಆಗಿರುವ ಸಂಜಯ್ ಪಟೇಲ್ ಸಹಾಯಹಸ್ತ ಚಾಚಿದ್ದು ಈಗ ಗಂಗೂಲಿ, ರವಿಶಾಸ್ತ್ರಿ ಸೇರಿದಂತೆ ಹಲವು ಮಂದಿ ಆರ್ಥಿಕ ಸಹಾಯ ಮಾಡಿದ್ದಾರೆ.

    ಮಾರ್ಟಿನ್ ಕುಟುಂಬ ಈಗ ಕಷ್ಟದಲ್ಲಿದ್ದು, ಎಷ್ಟು ಹಣ ಬೇಕೆಂದು ಕೇಳುವ ಪರಿಸ್ಥಿತಿಯಲ್ಲಿ ಅವರಿಲ್ಲ. ಹೀಗಾಗಿ ಅವರ ಕಷ್ಟಕ್ಕೆ ಕ್ರಿಕೆಟ್ ಸದಸ್ಯರು ಸಹಾಯ ಮಾಡುತ್ತಿದ್ದಾರೆ ಎಂದು ಸಂಜಯ್ ಪಟೇಲ್ ತಿಳಿಸಿದರು.

    1972 ಮೇ 11 ರಂದು ಗುಜರಾತಿನ ಬರೋಡಾದಲ್ಲಿ ಜನಿಸಿದ ಬಲಗೈ ಬ್ಯಾಟ್ಸ್ ಮನ್ ಜೇಕಬ್ ಮಾರ್ಟಿನ್ 1999ರಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, 22.57 ಸರಾಸರಿಯಲ್ಲಿ ಒಟ್ಟು 158 ರನ್ ಗಳಿಸಿದ್ದಾರೆ. ಗಂಗೂಲಿ ನಾಯಕತ್ವದಲ್ಲಿ 5 ಪಂದ್ಯ ಸಚಿನ್ ನಾಯಕತ್ವದಲ್ಲಿ ಮಾರ್ಟಿನ್ 5 ಪಂದ್ಯಗಳನ್ನು ಆಡಿದ್ದರು.

    2011ರಲ್ಲಿ ಮಾನವ ಕಳ್ಳ ಸಾಗಾಣೆ ಆರೋಪದಡಿಯಲ್ಲಿ ದೆಹಲಿ ಪೊಲೀಸರು ಜೇಕಬ್ ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಬರೋಡದ ವಿವಿಧ ವಯೋಮಿತಿ ತಂಡಗಳಿಗೆ ತರಬೇತಿ ನೀಡುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಢಾಕಾ: ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರಿಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್ ರೆಹಮಾನ್‍ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ 6 ತಿಂಗಳ ಕಾಲ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    2014 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲ್ಲಿಕ್ ಹಾಗೂ ಪತ್ನಿ ಸಾನಿಯಾ ಮಿರ್ಜಾ ಬಾಂಗ್ಲಾ ದೇಶಕ್ಕೆ ಪಂದ್ಯವೊಂದಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನವನ್ನು ಪ್ರವೇಶಿಸುತ್ತಿರುವಾಗ ಶಬ್ಬೀರ್ ರೆಹಮಾನ್ ಸಾನಿಯಾರವನ್ನು ಚುಡಾಯಿಸಿದ್ದರು. ಇದರಿಂದ ಕೋಪಗೊಂಡ ಶೋಯಬ್ ಮಲ್ಲಿಕ್ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಢಾಕಾ ಮೆಟ್ರೋ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದರ ಬಗ್ಗೆ ಬಾಂಗ್ಲಾ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.

    ಮೈದಾನದ ಒಳಗೂ ಹಾಗೂ ಹೊರಗಡೆ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಶಬ್ಬೀರ್ ರೆಹಮಾನ್‍ರಿಂದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ತೀವ್ರ ಮುಜುಗರಕ್ಕೀಡಾಗಿತ್ತು. ಹೀಗಾಗಿ ಪ್ರಕರಣಗಳ ತನಿಖೆ ನಡೆಸಲು ಶಿಸ್ತು ಪಾಲನಾ ಸಮಿತಿಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ನೇಮಕ ಮಾಡಿತ್ತು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಶಬ್ಬೀರ್ ರೆಹಮಾನ್‍ಗೆ 6 ತಿಂಗಳ ಕಾಲ ಎಲ್ಲಾ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    ಈ ಮೊದಲು ಸಹ ಶಬ್ಬೀರ್ ಖಾಸಗಿ ಹೋಟೆಲ್‍ಗೆ ಅನುಮತಿ ಇಲ್ಲದೆ ಮಹಿಳೆಯನ್ನು ಕರೆದುಕೊಂಡು ಬಂದು ಕೊಠಡಿಯಲ್ಲಿರಿಸಿಕೊಂಡಿದ್ದಕ್ಕೆ 6 ತಿಂಗಳು ನಿಷೇಧಕ್ಕೆ ಒಳಗಾಗಿದ್ದರು. ಇನ್ನು ಶಿಕ್ಷೆಯ ಪ್ರಮಾಣ ಮುಗಿಯದೇ ಇರುವಾಗಲೇ ಮತ್ತೊಂದು ಶಿಕ್ಷೆಗೆ ಗುರಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡ್ರೆಸ್ಸಿಂಗ್ ರೂಮ್ ಗ್ಲಾಸ್ ಒಡೆದ ಪಾಕಿಸ್ತಾನ ಆಟಗಾರ!

    ಡ್ರೆಸ್ಸಿಂಗ್ ರೂಮ್ ಗ್ಲಾಸ್ ಒಡೆದ ಪಾಕಿಸ್ತಾನ ಆಟಗಾರ!

    ಕರಾಚಿ: ಪಾಕಿಸ್ತಾನ ಬ್ಯಾಟ್ಸ್ ಮನ್ ಫವಾದ್ ಆಲಂ ವಿರುದ್ಧ ಡ್ರೆಸ್ಸಿಂಗ್ ರೂಮ್ ಗಾಜು ಒಡೆದ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ.

    ಪಾಕ್ ಕೋಲ್ನೆ ಕ್ರಿಕೆಟ್ ಕ್ಲಬ್ ವಿರುದ್ಧ ನಡೆದ ಪಂದ್ಯದ ವೇಳೆ 32 ವರ್ಷದ ಆಲಂ ಸೂಕ್ತ ಸಮಯದಲ್ಲಿ ಮೈದಾನಕ್ಕೆ ಬಾರದೆ ತಡಮಾಡಿದ್ದರು. ಈ ವೇಳೆ ಫೀಲ್ಡ್ ಅಂಪೈರ್ ಟೈಮ್ ಔಟ್ ಎಂದು ತೀರ್ಮಾನ ನೀಡಿದ್ದರು. ಈ ವೇಳೆ ಡ್ರೆಸ್ಸಿಂಗ್ ರೂಮ್ ನಲ್ಲಿದ್ದ ಆಲಂ ಕಿಟಕಿ ಗಾಜು ಒಡೆದು ತಮ್ಮ ಕೋಪ ಪ್ರದರ್ಶನ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

    ಡ್ರೆಸಿಂಗ್ ರೂಮ್ ಗ್ಲಾಸ್ ಒಡೆದ ಕುರಿತು ಮೈದಾನದಲ್ಲಿದ್ದ ಕೆಲ ವಿಕ್ಷಕರು ಫೋಟೋ ಸಮೇತ ಟ್ವೀಟ್ ಮಾಡಿ ಆರೋಪ ಮಾಡಿದ್ದರು. ಇದಾದ ಬಳಿಕ ಘಟನೆಯ ಕುರಿತು ವ್ಯಾಪಕ ಚರ್ಚೆ ನಡೆದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಲಂ ಡ್ರೆಸ್ಸಿಂಗ್ ರೂಮ್ ಗಾಜು ಒಡೆಯಲು ತಾನು ಕಾರಣನಲ್ಲ. ಇದನ್ನು ಅಂಪೈರ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ.

    ಕ್ರಿಕೆಟಿಗ ಆಲಂ ಪಾಕ್ ನ ಕ್ಲಿಥೆರೊಗ್ ಕ್ರಿಕೆಟ್ ಕ್ಲಬ್ ಭಾಗವಹಿಸುತ್ತಿದ್ದು, ತಂಡದ ವೃತ್ತಿಪರ ಕ್ರಿಕೆಟ್ ಆಗಿ ಗುರುತಿಸಿ ಕೊಂಡಿದ್ದರು. 2017 ರಲ್ಲಿ ನಡೆದ ಟೂರ್ನಿಯ ವೇಳೆಯೂ ಉತ್ತಮ ಪ್ರದರ್ಶನ ನೀಡಿದ್ದರು.

    ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಪಾಕ್ ಆಯ್ಕೆ ಸಮಿತಿ ಮುಖ್ಯಸ್ಥರು, ರಾಷ್ಟ್ರೀಯ ತಂಡಕ್ಕೆ ಆಲಂ ಗಿಂತಲೂ 25 ವರ್ಷದ ಯುವ ಆಟಗಾರ ಉಸ್ಮಾನ್ ಸಲಾಹದ್ದೀನ್ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಪಂದ್ಯಗಳಿಗೆ ಉತ್ತಮ ಆಯ್ಕೆ ಎಂದು ತಿಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಉಸ್ಮಾನ್ ಟೆಸ್ಟ್ ಕ್ಯಾಪ್ ಧರಿಸಿದ್ದರು. ಆದರೆ ಈ ಪಂದ್ಯದಲ್ಲಿ ಕೇವಲ 4 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು.

  • ಕಾಮನ್‍ವೆಲ್ತ್ ಗೇಮ್ಸ್ : ಜನರ ಮುಂದೆ ಬಾಸ್ಕೆಟ್ ಬಾಲ್ ಆಟಗಾರನಿಂದ ಗೆಳತಿಗೆ ಪ್ರಪೋಸ್- ವಿಡಿಯೋ

    ಕಾಮನ್‍ವೆಲ್ತ್ ಗೇಮ್ಸ್ : ಜನರ ಮುಂದೆ ಬಾಸ್ಕೆಟ್ ಬಾಲ್ ಆಟಗಾರನಿಂದ ಗೆಳತಿಗೆ ಪ್ರಪೋಸ್- ವಿಡಿಯೋ

    ಗೋಲ್ಡ್ ಕೋಸ್ಟ್: ಇಂಗ್ಲೆಂಡ್ ಬಾಸ್ಕೆಟ್ ಬಾಲ್ ಆಟಗಾರ ಜಾಮೆಲ್ ಆಂಡರ್ಸನ್ ಭಾನುವಾರ ನಡೆದ ಕಾಮನ್‍ವೆಲ್ತ್ ಗೇಮ್ಸ್ ವೇಳೆ ಬಾಸ್ಕೆಟ್ ಬಾಲ್ ಕೋರ್ಟ್‍ನಲ್ಲೇ ತನ್ನ ಗೆಳತಿಗೆ ಪ್ರಪೋಸ್ ಮಾಡಿದ್ದಾರೆ.

    ಭಾನುವಾರ ನಡೆದ ಪಂದ್ಯದಲ್ಲಿ ಕ್ಯಾಮೇರೋನ್ ವಿರುದ್ಧ ಇಂಗ್ಲೇಡ್ 81-54 ಅಂತರದಲ್ಲಿ ಜಯಗಳಿಸಿತ್ತು. ತಮ್ಮ ಜಯವನ್ನು ಸಂಭ್ರಮಿಸುತ್ತಿರುವಾಗಲೇ ಆಂಡರ್ಸನ್ ತನ್ನ ಟೀಂ ಜೊತೆ ಸೇರಿಕೊಂಡು ತನ್ನ ಪ್ರೇಯಸಿ ಜಾರ್ಜಿಯಾ ಜೋನ್ಸ್ ಗೆ ಸರ್ಪ್ರೈಸ್ ನೀಡಿ ಪ್ರಪೋಸ್ ಮಾಡಿದ್ದಾರೆ.

    ಆಂಡರ್ಸನ್ ಸ್ಪೇನ್‍ನ ಪಾಲಿಡೆಪೋರ್ಟಿವೊ ಲಾ ರೊಡಾಗಾಗಿ ಬಾಸ್ಕೆಟ್ ಬಾಲ್ ಆಡುತ್ತಿದ್ದು, ಜೋನ್ಸ್ ಬ್ರಿಟಿಷ್‍ನ ಮ್ಯಾಂಚೆಸ್ಟರ್ ಮಿಸ್ಟಿಕ್ಸ್ ಮಹಿಳಾ ಬಾಸ್ಕೆಟ್ ಬಾಲ್ ಲೀಗ್ ಗಾಗಿ ಆಟವಾಡುತ್ತಾರೆ.

    ಆಂಡರ್ಸನ್ ಜಾರ್ಜಿಯಾ ಅವರನ್ನು ಪ್ರಪೋಸ್ ಮಾಡುವ ವಿಡಿಯೋವನ್ನು ಇಂಗ್ಲೆಂಡ್ ತಂಡ ಬಿಡುಗಡೆ ಮಾಡಿದೆ. ಆ ವಿಡಿಯೋದಲ್ಲಿ ಇಂಗ್ಲೆಂಡ್ ತಂಡ ವೃತ್ತಾಕಾರದಲ್ಲಿ ನಿಂತುಕೊಂಡು ತಮ್ಮ ಜಯವನ್ನು ಸಂಭ್ರಮಿಸುತ್ತಿದ್ದರು. ತಕ್ಷಣ ಅವರೆಲ್ಲ ಹಿಂದೆ ಬಂದು ನಿಂತುಕೊಂಡಾಗ ಆಂಡರ್ಸನ್ ಮೊಣಕಾಲೂರಿ ಜಾರ್ಜಿಯಾರಿಗೆ ಪ್ರಮೋಸ್ ಮಾಡಿದ್ದಾರೆ.

    ನನ್ನ ತಂಡದ ಸದಸ್ಯರು ಇದರಲ್ಲಿ ಭಾಗಿಯಾಗಿ ಇಷ್ಟು ಅದ್ಭುತ ರೀತಿಯಲ್ಲಿ ಪ್ಲಾನ್ ಮಾಡಿದ್ದರು. ಹಾಗಾಗಿ ಎಲ್ಲವೂ ಸರಿಯಾಗಿ ನೆರವೇರಿತ್ತು. ಈ ವಿಚಾರ ನನ್ನ ಮನಸ್ಸಿನಲ್ಲಿತ್ತು ಹಾಗಾಗಿ ನನಗೆ ಬಾಸ್ಕೆಟ್ ಬಾಲ್ ಆಡಲು ಸುಲಭವಾಯಿತು ಎಂದು ಆಂಡರ್ಸನ್ ತಿಳಿಸಿದ್ದಾರೆ.

    ನನಗೆ ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ನನ್ನ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ನನ್ನನ್ನು ಅಲ್ಲಿ ನಿಲ್ಲಿಸಿದ್ದರು. ನಂತರ ಅಲ್ಲಿ ನಡೆದಿದ್ದನು ನೋಡಿ ನನಗೇ ಶಾಕ್ ಆಗಿದೆ ಎಂದು ಜಾರ್ಜಿಯಾ ಹೇಳಿದ್ದಾರೆ. ಈ ಒಂದು ಅವಕಾಶಕ್ಕಾಗಿ ನಾವು ತುಂಬ ಪರಿಶ್ರಮಪಟ್ಟಿದ್ದೇವೆ. ಬಾಸ್ಕೆಟ್ ಬಾಲ್ ನಮ್ಮ ಸಂಬಂಧದ ಒಂದು ಭಾಗವಾಗಿದೆ. ಹಾಗಾಗಿ ನಾನು ಈ ರೀತಿ ಮಾಡಿದೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

    ಕೋರ್ಟ್ ನಲ್ಲಿ ಜಾರ್ಜಿಯಾರನ್ನು ಪ್ರಪೋಸ್ ಮಾಡುವ ಮೊದಲು ಆಂಡರ್ಸನ್, ಜಾರ್ಜಿಯಾ ಅವರ ತಂದೆ ಜೇಫ್ ಹತ್ತಿರ ಆರ್ಶೀವಾದ ಪಡೆದಿದ್ದಾರೆ. ಜೇಫ್ ಇಂಗ್ಲೆಂಡ್ ಅಂತರಾಷ್ಟ್ರೀಯಾ ಹಾಗೂ ಮ್ಯಾಂಚೆಸ್ಟರ್ ಮಿಸ್ಟಿಕ್ಸ್ ನ ಮಾಜಿ ಕೋಚ್ ಆಗಿದ್ದಾರೆ.

    https://www.youtube.com/watch?v=odhDkFN-hZg

  • ನವಜೀವನಕ್ಕೆ ಕಾಲಿಟ್ಟ ಭಾರತ ಹಾಕಿ ತಂಡದ ಉಪನಾಯಕ ಎಸ್.ವಿ ಸುನೀಲ್

    ನವಜೀವನಕ್ಕೆ ಕಾಲಿಟ್ಟ ಭಾರತ ಹಾಕಿ ತಂಡದ ಉಪನಾಯಕ ಎಸ್.ವಿ ಸುನೀಲ್

    ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

    ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನಿಶಾ ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

    ವಿಶ್ವಕರ್ಮ ಸಮುದಾಯದ ಪದ್ಧತಿಯಂತೆ ಮದುವೆ ಕಾರ್ಯಕ್ರಮ ನಡೆದಿದ್ದು, ಸೀಮಿತ ಸಂಖ್ಯೆಯಲ್ಲಿ ಬಂಧು-ಮಿತ್ರರು, ಸ್ನೇಹಿತರು ಹಾಗೂ ಹಾಕಿ ತಂಡದ ಐವರು ಮಿತ್ರರು ಪಾಲ್ಗೊಂಡಿದ್ದರು. ಸೋಮವಾರ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ ಹಾಕಿ ತಂಡದ ಆಟಗಾರರು, ಮಾಜಿ ಆಟಗಾರರಾದ ಅರ್ಜುನ್ ಹಾಲಪ್ಪ, ಧನರಾಜ್ ಪಿಳೈ, ಎ.ಬಿ.ಸುಬ್ಬಯ್ಯ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿದ್ದಾರೆ.

    ಸುಮಾರು ಎರಡೂವರೆ ಸಾವಿರ ಮಂದಿಗೆ ಆರತಕ್ಷತೆಗೆ ಆಮಂತ್ರಣ ನೀಡಲಾಗಿದ್ದು, ಎಲ್ಲಾ ಸಿದ್ಧತೆ ಮಾಡಲಾಗಿದೆ. ಮಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಸ್ನೇಹಿತರು ಸುನೀಲ್ ಅವರಿಗೆ ಅಚ್ಚರಿ ನೀಡಿ ಸ್ಟೇಜ್ ನಲ್ಲಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.

  • ಡೋಪಿಂಗ್ ಸುಳಿಯಲ್ಲಿ ಭಾರತೀಯ ಕ್ರಿಕೆಟ್ ಆಟಗಾರ

    ಡೋಪಿಂಗ್ ಸುಳಿಯಲ್ಲಿ ಭಾರತೀಯ ಕ್ರಿಕೆಟ್ ಆಟಗಾರ

    ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಮಾನ್ಯತೆ ಪಡೆದ ಕ್ರಿಕೆಟಿಗನೊಬ್ಬ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ.

    ವಿಶ್ವ ಉದ್ದೀಪನಾ ಮದ್ದು ನಿಗ್ರಹ ದಳ(ವಾಡಾ) 2016ರಲ್ಲಿ ಬಿಸಿಸಿಐನಿಂದ ಮಾನ್ಯತೆ ಪಡೆದ 138 ಮಂದಿ ಆಟಗಾರರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಿತ್ತು. ಈ ಪರೀಕ್ಷೆಯಲ್ಲಿ ಓರ್ವ ಆಟಗಾರ ನಿಷೇಧಿತ ಮದ್ದು ಸೇವಿಸಿರುವುದುದ ದೃಢಪಟ್ಟಿದೆ.

    ನಿಷೇಧಿತ ಮದ್ದು ಸೇವಿಸಿದ ಆಟಗಾರನ ಹೆಸರು ಬಹಿರಂಗವಾಗಿಲ್ಲ. ಆಟಗಾರ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿಲ್ಲ. ಬದಲಾಗಿ ಬಿಸಿಸಿಐ ಆಯೋಜಿಸುವ ರಣಜಿ ಟ್ರೋಫಿ, ದುಲೀಪ್ ಟ್ರೋಫಿ, ಐಪಿಎಲ್ ಅಥವಾ ಇರಾನಿ ಟ್ರೋಫಿ ಆಡಿರುವ ದೇಶೀಯ ಆಟಗಾರ ಎನ್ನುವ ಮಾಹಿತಿ ಲಭ್ಯವಾಗಿದೆ.

    ಈ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಬಿಸಿಸಿಐ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಾಡಾದಿಂದ ಇದೂವರೆಗೂ ನಮಗೆ ಯಾವುದೇ ವರದಿ ಬಂದಿಲ್ಲ. ಅಷ್ಟೇ ಅಲ್ಲದೇ ಈಗಲೇ ಆ ಕ್ರಿಕೆಟ್ ಆಟಗಾರನ ಹೆಸರನ್ನು ಬಹಿರಂಗಪಡಿಸುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.

    ಆಟಗಾರನ ಮೂತ್ರದ ಮಾದರಿಯ ಪರೀಕ್ಷೆಯಲ್ಲಿ ನಿಷೇಧಿತ ಮದ್ದು ಸೇವಿಸಿರುವುದು ದೃಢಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    2013ರ ಐಪಿಎಲ್ ಆವೃತ್ತಿ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರದೀಪ್ ಸಾಂಗ್ವಾನ್ ಡೋಪಿಂಗ್ ಸುಳಿಯಲ್ಲಿ ಸಿಲುಕಿದ್ದರು. ಇದಾದ ಬಳಿಕ ಭಾರತದ ಕ್ರಿಕೆಟ್ ವಲಯದಲ್ಲಿ ಬೆಳಕಿಗೆ ಬರುತ್ತಿರುವ ಎರಡನೇ ಪ್ರಕರಣ ಇದಾಗಿದೆ.