Tag: ಆಟೋಚಾಲಕ

  • ಡ್ರೈವರ್‌ನಿಂದಲೇ ಕಿಡ್ನಾಪ್‌ಗೆ ಯತ್ನ – ಆಟೋದಿಂದ ಜಿಗಿದು ಪಾರಾದ ಮಹಿಳೆ

    ಡ್ರೈವರ್‌ನಿಂದಲೇ ಕಿಡ್ನಾಪ್‌ಗೆ ಯತ್ನ – ಆಟೋದಿಂದ ಜಿಗಿದು ಪಾರಾದ ಮಹಿಳೆ

    ಚಂಡೀಗಢ: ಮಹಿಳೆಯೊಬ್ಬರನ್ನು ಆಟೋ ಚಾಲಕ ಅಪಹರಿಸಲು ಯತ್ನಿಸಿದ ಘಟನೆ ಹರಿಯಾಣದಲ್ಲಿ ನಡೆದಿದೆ.

    ಈ ಬಗ್ಗೆ ಟ್ವಿಟ್ಟರ್‌ಲ್ಲಿ ಪೋಸ್ಟ್ ಮಾಡಿದ ಮಹಿಳೆ ತಮಗಾದ ತೊಂದರೆಯನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಮನೆಯಿಂದ ಗುರ್ಗಾಂವ್‌ಗೆ ತಲುಪಲು ಕೇವಲ 7 ನಿಮಿಷವಾಗುತ್ತದೆ. ಅಲ್ಲಿಂದ ಆಟೋದಲ್ಲಿ ಹೋಗುವಾಗ ಚಾಲಕರೊಬ್ಬರು ತಮ್ಮನ್ನು ಅಪಹರಿಸಲು ಪ್ರಯತ್ನಿಸಿದರು. ಇದರಿಂದಾಗಿ ನನಗೆ ಆಟೋದಿಂದ ಜಿಗಿಯಬೇಕಾದ ಸ್ಥಿತಿ ಉಂಟಾಯಿತು ಎಂದು ಟ್ವೀಟ್ ಮಾಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ನಿನ್ನೆ ನನ್ನ ಜೀವನದ ಅತ್ಯಂತ ಭಯಾನಕ ದಿನಗಳಲ್ಲಿ ಒಂದಾಗಿತ್ತು. ನಾನು ಕಿಡ್ನಾಪ್ ಆಗುತ್ತೇನೆ ಎಂದೇ ಭಾವಿಸಿದ್ದೆ. ಅದನ್ನು ನೆನಪಿಸಿಕೊಂಡರೆ ಇನ್ನು ನನಗೆ ಭಯವಾಗುತ್ತದೆ. ಮಧ್ಯಾಹ್ನ ಆಟೋಸ್ಟ್ಯಾಂಡ್ ನಿಂದ ಗುರ್ಗಾಂವ್‌ಗೆ ಹೋಗಲು ಆಟೋವನ್ನು ಹತ್ತಿದ್ದೆ. ಮನೆಯಿಂದ ನಗರಕ್ಕೆ ಕೇವಲ 7 ನಿಮಿಷದ ದಾರಿಯಾಗಿತ್ತು.

    ನಾನು ಆಟೋ ಚಾಲಕನಲ್ಲಿ ಹಣವಿಲ್ಲ, ಪೇಟಿಎಂ ಮಾಡುತ್ತೇನೆ ಎಂದು ಮನವಿ ಮಾಡಿದ್ದೆ. ಅದಕ್ಕೆ ಅವನು ಒಪ್ಪಿಗೆ ಸೂಚಿಸಿದ್ದ. ಅವನನ್ನು ನೋಡಿದರೆ ಉಬರ್ ಆಟೋಚಾಲಕನಂತೆ ಕಾಣುತ್ತಿದ್ದ. ನಾನು ಆಟೋದಲ್ಲಿ ಕುಳಿತಿದ್ದೆ. ಆಟೋ ಪ್ರಾರಂಭಿಸಿದ ಆತ ಆಟೋವನ್ನು ಅಪರಿಚಿತ ರಸ್ತೆಗೆ ತಿರುಗಿಸಿದ. ಅದನ್ನು ಗಮನಿಸಿದ ನಾನು ಎಡಗಡೆ ರೋಡ್‌ನಲ್ಲಿ ಯಾಕೆ ಹೋಗುತ್ತಿದ್ದೀರಿ, ನಾನು ಹೋಗುವ ರಸ್ತೆ ಬಲಕ್ಕೆ ಇದೆ ಎಂದು ಕಿರುಚಿದೆ. ಅದಕ್ಕೆ ಆತ ಏನು ಪ್ರತಿಕ್ರಿಯೆ ನೀಡಲಿಲ್ಲ. ಇದರಿಂದ ನಾನು ಬೇರೆ ದಾರಿ ಕಾಣದೇ 30 ರಿಂದ 40 ಕಿ.ಮೀ ವೇಗದಲ್ಲಿದ್ದ ಆಟೋದಿಂದ ಜಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ- ಗೂಗಲ್ ನಿರ್ಧಾರ

    ಗುರ್ಗಾಂವ್‌ನ ಪಾಲಂ ವಿಹಾರ್‌ನ ಪೊಲೀಸ್ ಅಧಿಕಾರಿ ಜಿತೇಂದರ್ ಯಾದವ್ ಅವರು ಆಟೋ ಚಾಲಕನನ್ನು ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೀದಿನಾಯಿಗಳಿಂದ ತನ್ನ ಮೂವರು ಮಕ್ಕಳನ್ನು ರಕ್ಷಿಸಿದ ಗರ್ಭಿಣಿ

  • ದೇವಸ್ಥಾನದ ಬಳಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಕೆನ್ನೆ ಕೊಯ್ದ ಪುಂಡರು

    ದೇವಸ್ಥಾನದ ಬಳಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಕೆನ್ನೆ ಕೊಯ್ದ ಪುಂಡರು

    ಹಾಸನ: ಕೊರೊನಾ ಲಾಕ್‍ಡೌನ್ ನಡುವೆಯೂ ಹಾಸನದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಮನೆ ಬಳಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾರೆ.

    ಹಾಸನದ ಬೇಲೂರು ರಸ್ತೆಯ, ಈಶ್ವರ ದೇವಾಲಯ ಬಳಿ ಆಟೋಚಾಲಕ ನವೀನ್ ಮನೆಯಿದ್ದು, ಅಲ್ಲಿ ಮೂವರು ಯುವಕರು ಸಿಗರೇಟ್ ಸೇದುತ್ತಾ ಕೂಗಾಡುತ್ತಿದ್ದರು. ಇದನ್ನು ನೋಡಿದ ಆಟೋ ಚಾಲಕ ನವೀನ್, ಯಾರು ನೀವು, ಯಾಕೆ ಹೀಗೆ ಕೂಗಾಡುತ್ತಿದ್ದೀರಿ. ದೇವಾಲಯದ ಬಳಿ ಸಿಗರೇಟ್ ಸೇದಬಾರದು ಎಂದು ಬುದ್ಧಿವಾದ ಹೇಳಿದ್ದಾರೆ.

    ಇದರಿಂದ ಕೆರಳಿದ ಯುವಕರು ನೀನ್ಯಾವನೋ ಕೇಳೋಕೆ ಎಂದು ಏಕಾಏಕಿ ಚಾಕು ಬೀಸಿದ್ದಾರೆ. ನವೀನ್ ತಕ್ಷಣ ಹಿಂದೆ ಸರಿದಿದ್ದರಿಂದ ಚಾಕು ಕುತ್ತಿಗೆ ಕೊಯ್ಯುವ ಬದಲು ಕೆನ್ನೆಯನ್ನು ಕೊಯ್ದುಕೊಂಡು ಮುಂದೆ ಸಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ನವೀನ್ ಕೂಗಾಟದಿಂದ ತಕ್ಷಣ ಸ್ಥಳಕ್ಕೆ ಬಂದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯರು ಬರುತ್ತಿದ್ದಂತೆ ಪುಂಡರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಹಾಸನ ಪೆನ್ಷನ್ ಮೊಹಲ್ಲ ಠಾಣೆಗೆ ನವೀನ್ ದೂರು ನೀಡಿದ್ದಾರೆ.

  • ಆಟೋ ಚಾಲಕನ ತಲೆಗೆ ಗನ್ ಇಟ್ಟ ಮಹಿಳೆ!

    ಆಟೋ ಚಾಲಕನ ತಲೆಗೆ ಗನ್ ಇಟ್ಟ ಮಹಿಳೆ!

    ಗುರುಗಾಂವ್: 34 ವರ್ಷದ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಪ್ನಾ ಹಾಗೂ ಆಕೆಯ ಪತಿ ಭುರೇಯನ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಏನಿದು ಪ್ರಕರಣ?:
    ಬುಧವಾರ ಗುರುಗಾಂವ್ ರಸ್ತೆ ಪಕ್ಕದಲ್ಲಿ ವಾಹನ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಮಹಿಳೆ ಹಾಗೂ ಆಟೋ ರಿಕ್ಷಾ ಚಾಲಕನಿಗೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಮಹಿಳೆಯ ಪತಿ ತನಗೆ ಹೊಡೆದಿದ್ದಾನೆ ಅಂತ ಚಾಲಕ ಆರೋಪಿಸಿದ್ದಾರೆ.

    ಭವಾನಿ ಎನ್ಕ್ಲೇವ್ ಎಂಬ ಪ್ರದೇಶದಲ್ಲಿ ಬೆಳಗ್ಗೆ ನಡೆದ ಈ ಘಟನೆಯನ್ನು ಅಲ್ಲೇ ಇದ್ದ ಸ್ಥಳೀಯರು ಗಮನಿಸಿದ್ದಾರೆ. ಅಲ್ಲದೇ ಕೆಲವರು ಇದನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪೊಲೀಸರಿಗೆ ಈ ದೃಶ್ಯವನ್ನು ನೀಡಿದ್ದಾರೆ.

    ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಪ್ನಾ ಹಾಗೂ ಆಕೆಯ ಪತಿ ಭುರೇಯನ್ನು ಬಂಧಿಸಿ, ಸೆಕ್ಟರ್ 9 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಇವರೊಂದಿಗೆ ಹಲ್ಲೆ ನಡೆಸಲು ಇನ್ನೋರ್ವ ವ್ಯಕ್ತಿ ಕೂಡ ಇದ್ದಿದ್ದು, ಆತ ಪೊಲೀಸರು ಬರುತ್ತಿದ್ದಂತೆಯೇ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹಾಗೆಯೇ ತಲೆಮರೆಸಿಕೊಂಡಿರೋ ಆರೋಪಿಯನ್ನು ಕೂಡ ಶೀಘ್ರವೇ ಬಂಧಿಸುವುದಾಗಿ ಎಸಿಪಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

    ಆಟೋ ರಿಕ್ಷಾ ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದ್ದು, ಇವರು ರಸ್ತೆ ಪಕ್ಕದಲ್ಲಿ ತನ್ನ ಆಟೋವನ್ನು ಪಾರ್ಕ್ ಮಾಡಿದ್ದರು. ಈ ವೇಳೆ ಅಲ್ಲಿಗೆ ಬಂದ ಸಪ್ನಾ ವಾಹನ ಅಲ್ಲಿಂದ ತೆಗೆಯುವಂತೆ ಸೂಚಿಸಿದ್ದಾರೆ. ಆದ್ರೆ ಸಪ್ನಾ ಮಾತನ್ನು ಸುನೀಲ್ ಕಡೆಗಣಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಮಹಿಳೆ ಸುನೀಲ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಸುನೀಲ್ ಪಕ್ಕದಲ್ಲೇ ಆಟೋ ನಿಲ್ಲಿಸಿ ಜಗಳವಾಡಿದ್ದಾನೆ. ಹೀಗಾಗಿ ಇಬ್ಬರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಅಂತ ಕುಮಾರ್ ತಿಳಿಸಿದ್ದಾರೆ.

    ಜಗಳ ತಾರಕಕ್ಕೇರಿ ಸಪ್ನಾ ತನ್ನ ಹಣೆಗೆ ಪಿಸ್ತೂಲ್ ಇಟ್ಟು ಗುಂಡಿನ ದಾಳಿ ನಡೆಸಲು ಮುಂದಾದ್ರು. ಈ ವೇಳೆ ಎಚ್ಚೆತ್ತುಕೊಂಡು ಮಹಿಳೆ ಕೈಯಿಂದ ಪಿಸ್ತೂಲನ್ನು ದೂಡಿ ಆಗುವ ಅನಾಹುತದಿಂದ ಪಾರಾದೆ ಅಂತ ಚಾಲಕ ಸುನೀಲ್ ನಡೆದ ಘಟನೆಯನ್ನು ವಿವರಿಸಿದ್ದಾರೆ.