Tag: ಆಡಳಿತ

  • ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ: ಪೋಕ್ಸೋ (POCSO) ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ (Muruga Shree) ತಮ್ಮ ಮಠದ (Muth) ಅಧಿಕಾರವನ್ನು ಮರಳಿ ಪಡೆದಿದ್ದಾರೆ.

    ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

    ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾಶ್ರೀ ಜೈಲಲ್ಲಿದ್ದ ಕಾರಣ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಆಡಳಿತದ ಅಧಿಕಾರ ನೀಡಿತ್ತು. ಇದನ್ನೂ ಓದಿ: ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

    ಹೀಗಾಗಿ ಈವರೆಗೆ ಚಿತ್ರದುರ್ಗ (Chitradurga) ಪಿಡಿಜೆ ಅವರು ಮಠದ ಆಡಳಿತಾಧಿಕಾರಿ ಆಗಿದ್ದರು. ಆದರೆ ನವೆಂಬರ್ 16ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ಜಡ್ಜ್‌ಗೆ ಸೂಚಿಸಿದೆ. ಇದನ್ನೂ ಓದಿ: ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

    ಮುರುಘಾಶ್ರೀಗೆ ಮಠದ ಆಡಳಿತಾಧಿಕಾರವನ್ನು ನ್ಯಾಯಾಧೀಶರು ಮರಳಿ ಹಸ್ತಾಂತರಿಸಿದ್ದಾರೆ. ಈ ಕುರಿತ ಪತ್ರಿಕಾ ಹೇಳಿಕೆಯನ್ನು ಮುರುಘಾ ಮಠ ಇಂದು ಬಿಡುಗಡೆ ಮಾಡಿದೆ. ಅಲ್ಲದೇ ಮುರುಘಾಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರವೇಶಿಸದೇ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಠದ ಆಡಳಿತ ನಡೆಸಲಿದ್ದಾರೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್

  • ಜನಸೇವಕ, ಜನಸ್ಪಂದನದಿಂದ ಜನಸ್ನೇಹಿ ಆಡಳಿತ: ಬೊಮ್ಮಾಯಿ

    ಜನಸೇವಕ, ಜನಸ್ಪಂದನದಿಂದ ಜನಸ್ನೇಹಿ ಆಡಳಿತ: ಬೊಮ್ಮಾಯಿ

    -ಕರ್ನಾಟಕದ ಆಡಳಿತದಲ್ಲಿ ಬದಲಾವಣೆಯ ಪರ್ವ ಪ್ರಾರಂಭ

    ಬೆಂಗಳೂರು: ಜನಸೇವಕ ಹಾಗೂ ಜನಸ್ಪಂದನ ಕಾರ್ಯಕ್ರಮಗಳಿಂದ ಜನಸ್ನೇಹಿ ಆಡಳಿತ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ.

    ಇಂದು ಜನಸೇವಕ- ಮನೆಬಾಗಿಲಿಗೆ ಸರ್ಕಾರದ ಸೇವೆಗಳು, ಜನಸ್ಪಂದನ – ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ, 1902 ಸಹಾಯವಾಣಿ, ಮೊಬೈಲ್ ಆ್ಯಪ್ ಹಾಗೂ ವೆಬ್ ಪೋರ್ಟಲ್‍ಗಳು ಹಾಗೂ ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್‍ಲೈನ್ ಸೇವೆಗಳನ್ನು ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

    ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಆಡಳಿತದಲ್ಲಿ ಬದಲಾವಣೆಯ ಪರ್ವ ಪ್ರಾರಂಭವಾದ ದಿನ. ನಮ್ಮ ಕರ್ತವ್ಯ, ಜವಾಬ್ದಾರಿ, ಉತ್ತರದಾಯಿತ್ವ ಎನ್ನುವ ಬಗ್ಗೆ ಆಳುವವರು ಹಾಗೂ ಆಡಳಿತ ನಡೆಸುವವರಲ್ಲಿ ಸ್ಪಷ್ಟತೆ ಇದ್ದಾಗ ಮಾತ್ರ ಜನಹಿತ, ಜನಸ್ನೇಹಿ ಆಡಳಿತ ಸಾಧ್ಯವಾಗುತ್ತದೆ. ಅಧಿಕಾರಿಶಾಹಿ, ವಿಳಂಬಧೋರಣೆಯ ಮುಖಾಂತರ ತಳಹಂತದಲ್ಲಿ ನಾಗರಿಕರ ಸೇವೆ ಮರೀಚಿಕೆಯಾಗುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಸೇವೆಯನ್ನು ಸರಳವಾಗಿ ತಲುಪಿಸಲು ಸರ್ಕಾರ ಜನರ ಬಾಗಿಲಿಗೆ ಆಡಳಿತವನ್ನು ಒಯ್ಯುವ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಜನರ ಸುತ್ತಲೂ ಆಡಳಿತ ಮತ್ತು ಅಭಿವೃದ್ಧಿ:
    ಜನಸೇವಕ ಕಾರ್ಯಕ್ರಮದ ಮೂಲಕ ಜನ ಹೆಚ್ಚಾಗಿ ಬಳಸುವ ಸರ್ಕಾರದ ಸೇವೆಗಳನ್ನು ಸಕಾಲದಡಿ ಜಾರಿಗೊಳಿಸಲಾಗಿದೆ. ಜನರ ಸುತ್ತಲೂ ಆಡಳಿತ, ಅಭಿವೃದ್ಧಿ ಆಗಬೇಕು. ಇದು ಸರ್ಕಾರದ ಧ್ಯೇಯ. ಆಡಳಿತದಲ್ಲಿ ಸುಧಾರಣೆ, ಜನಪರ, ಬಡವರಪರ ನಮ್ಮ ಆಡಳಿತ ಇರಲಿದೆ. ಆಡಳಿತ ಸುಧಾರಣೆ ಸಮಿತಿಯ ಶಿಫಾರಸ್ಸಿನ ಅನ್ವಯ ಉತ್ತಮ ಆಡಳಿತಕ್ಕಾಗಿ ಹಲವಾರು ಸೇವೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಸೇವೆಗಳಿಂದ ಜನರ ಸಮಯ ಉಳಿಯುತ್ತದೆ. ಭ್ರಷ್ಟಾಚಾರ ನಿಲ್ಲುತ್ತದೆ. ನಾಗರಿಕರು ತಮ್ಮ ಸಮಯವನ್ನು ಕ್ರಿಯಾತ್ಮಕವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ರಾಜ್ಯದ ಜನ ಶ್ರೀಮಂತರಾದರೆ, ಅವರ ಜೀವನ ಮಟ್ಟ, ಆದಾಯ ಸುಧಾರಣೆ, ಆರೋಗ್ಯ ಮಟ್ಟ ಉತ್ತಮ ಶಿಕ್ಷಣ, ಉದ್ಯೋಗ ಸೃಷ್ಟಿ ಎಲ್ಲವೂ ಸುಧಾರಿಸುತ್ತದೆ. ಆಧಿಕಾರ, ಆಡಳಿತ ಎಂದರೆ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಎಂದು ನುಡಿದರು.

    ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾಗಬೇಕು:
    ಇಂದು ರಾಜ್ಯ ತಲಾವಾರು ಆದಾಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕೇವಲ 35% ಜನ ಮಾತ್ರ ರಾಜ್ಯದ ಆದಾಯಕ್ಕೆ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾದರೆ ರಾಜ್ಯದ ಆದಾಯವೂ ಹೆಚ್ಚಾಗುತ್ತದೆ. ಈ ಚಿಂತನೆ ನಮ್ಮ ಸರ್ಕಾರದ್ದು. ಸರ್ಕಾರದಲ್ಲಿ ಜನರ ಪಾಲ್ಗೊಳ್ಳುವಿಕೆ ಇರಬೇಕು. ಫಲಾನುಭವಿಗಳಾಗಿ ತಮ್ಮ ಕಾರ್ಯದಕ್ಷತೆದಿಂದ ಆದಾಯ ಹೆಚ್ಚಿಸಿಕೊಂಡು ಅವರು ಪಾಲುದಾರರಾಗಬೇಕು. ಆಗ ಮಾತ್ರ ಸಮುದಾಯ, ಸಮಾಜ, ಸರ್ಕಾರ, ರಾಜ್ಯ ಅಭಿವೃದ್ಧಿ ಆಗುತ್ತದೆ. ಹೆಚ್ಚು ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಈ ಸೇವೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಈ ಕಾರ್ಯಕ್ರಮ ಇಡೀ ವ್ಯವಸ್ಥೆಯ ಬದಲಾವಣೆಗೆ ಭದ್ರ ಬುನಾದಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆ ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು

    ಸಾರಿಗೆ ಇಲಾಖೆಯ 30 ಸಂಪರ್ಕ ರಹಿತ ಆನ್‍ಲೈನ್ ಸೇವೆ:
    60 ಲಕ್ಷ ಜನರು ಸಾರಿಗೆ ಕಚೇರಿಗೆ ಬರುವುದು ತಪ್ಪಿಸಲು ಸಾರಿಗೆ ಇಲಾಖೆಯ 30 ಸಂಪರ್ಕ ರಹಿತ ಆನ್‍ಲೈನ್ ಸೇವೆಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದ ಪ್ರಮುಖ 10 ಕಾರು, ಸ್ಕೂಟರ್ ಮಾರುವ ಸಂಸ್ಥೆಗಳಿಗೆ ವಾಹನ ನೋಂದಣಿ ಮಾಡಿಕೊಡುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ. ಆಹಾರವಿತರಣೆ, ಬಿಬಿಎಂಪಿ ಯಾವುದೇ ಪ್ರಮಾಣಪತ್ರ. ಮಾಸಾಶನ, ಆಧಾರ ಕಾರ್ಡ್ 56 ಸೇವೆ, ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ತೆ, 1902 ಸಹಾಯವಾಣಿ , ಮೊಬೈಲ್ ಆ್ಯಪ್ ಪ್ರಾರಂಭಿಸಲಾಗಿದೆ. ಸುಮಾರು 4,11,000 ಹೊಸ ಪಡಿತರ ಕಾರ್ಡಿಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದರು.

    ನಿಗದಿತ ಗುರಿ, ಸ್ಪಷ್ಟ ದಿಕ್ಸೂಚಿ, ಸಂಕಲ್ಪ, ಬದ್ಧತೆಯಿಂದ ಆಡಳಿತ ಸುಧಾರಣೆ ಆಗಲಿದೆ. ಜನಸೇವಕರು ಜನರ ಮನೆ ಬಾಗಿಲಿಗೆ ಬಂದಾಗ ನಾಗರಿಕರು ಸೌಜನ್ಯದಿಂದ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

  • ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ಇಂದು ತಾಲಿಬಾನ್ ಸರ್ಕಾರ ರಚನೆಯಾಗುವ ಸಾಧ್ಯತೆಯಿದ್ದು, ಈ ಮೂಲಕ ಅಫ್ಘಾನ್ ವಶಪಡಿಸಿಕೊಂಡ ಎರಡು ವಾರಗಳ ಬಳಿಕ ಆಡಳಿತ ಆರಂಭಿಸುವ ನಿರೀಕ್ಷೆ ಇದೆ.

    ಇಂದು ತಾಲಿಬಾನ್ ಮುಖ್ಯಸ್ಥರಿಂದ ಅಧಿಕೃತ ಘೋಷಣೆ ಸಾಧ್ಯತೆ ಇದ್ದು, ನಿನ್ನೆಯೇ ಘೋಷಣೆಯಾಗಬೇಕಿದ್ದ ಸರ್ಕಾರ ರಚನೆ ಕಡೆಯ ಕ್ಷಣದಲ್ಲಿ ತಾಲಿಬಾನ್ ರದ್ದುಗೊಳಿಸಿತ್ತು. ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಪ್ರಧಾನಿ ಹುದ್ದೆಗೆ ಹೆಸರು ಕೇಳಿಬರುತ್ತಿದ್ದು, ಅಫ್ಘಾನ್ ನಲ್ಲಿ ಇರಾನ್ ಮಾದರಿಯ ಅಧ್ಯಕ್ಷೀಯ ಸರ್ಕಾರದ ರಚನೆ ಚಿಂತನೆ ನಡೆದಿದೆ. ಇದನ್ನೂ ಓದಿ: ಪಂಜ್‍ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!

    ಅಫ್ಘಾನ್ ಅಧ್ಯಕ್ಷರಾಗಲು ತಾಲಿಬಾನ್ ಸರ್ವೋಚ್ಚ ನಾಯಕ ಮುಲ್ಲಾ ಹೆಬತುಲ್ಲಾಹ್ ಅಖುನ್ದಝದ ಸಿದ್ಧರಾಗಿದ್ದು, ಈ ನಿರ್ಧಾರವನ್ನು ಕೈಗೊಳ್ಳಲು ದೋಹಾ ತಾಲಿಬಾನ್ ನಾಯಕರು ನಿರ್ಣಾಯಕ ಪಾತ್ರವಹಿಸಲಿದ್ದಾರೆ. ತಾಲಿಬಾನ್ ಸರ್ಕಾರದಲ್ಲಿ ಶೇ.80ರಷ್ಟು ಪ್ರಾತಿನಿಧ್ಯ ಹೊಂದುವ ನಿರೀಕ್ಷೆ ಇದ್ದು, ಸರ್ಕಾರದಲ್ಲಿ ಮಹಿಳೆಯರ ಪಾತ್ರ ಅನುಮಾನ, ಮಹಿಳೆಯರಿಗೆ ಸರ್ಕಾರದಲ್ಲಿ ಸ್ಥಾನ ಮಾನ ನೀಡದಿರಲು ನಿರ್ಧಾರ ಕೈಗೊಂಡಿದೆ.

    ಈಗಾಗಲೇ ಸಂವಿಧಾನವನ್ನು ರಚನೆ ಮಾಡಿರುವ ತಾಲಿಬಾನ್ ಸರ್ಕಾರ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ವಜದ ಬಗ್ಗೆ ನಿರ್ಧಾರ ಮಾಡಿದೆ. ಈಗಾಗಲೇ ಪೊಲೀಸ್ ಮುಖ್ಯಸ್ಥರು, ರಾಜ್ಯಪಾಲರ ಆಯ್ಕೆ ಮಾಡಿರುವ ತಾಲಿಬಾನ್ ನಾಯಕರು, ಇಂದು ಸರ್ಕಾರದ ಘೋಷಣೆ ಮಾಡುವ ನಿರೀಕ್ಷೆ ಇದ್ದು, ಅಫ್ಘಾನ್ ವಶಪಡಿಸಿಕೊಂಡ ಎರಡು ವಾರಗಳ ಬಳಿಕ ಅಫ್ಘಾನ್ ನಲ್ಲಿ ತಾಲಿಬಾನ್ ಆಡಳಿತ ಆರಂಭಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

  • ಇನ್ನೊಂದು ವಾರದಲ್ಲಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ – ಹೇಗಿರಲಿದೆ ಆಡಳಿತ ವ್ಯವಸ್ಥೆ?

    ಇನ್ನೊಂದು ವಾರದಲ್ಲಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ – ಹೇಗಿರಲಿದೆ ಆಡಳಿತ ವ್ಯವಸ್ಥೆ?

    ಕಾಬೂಲ್: ಅಮೇರಿಕ ಸೇನೆ ಸಂಪೂರ್ಣ ಖಾಲಿ ಮಾಡಿದ್ದು ಇನ್ನೊಂದು ವಾರದಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಆಡಳಿತ ಆರಂಭವಾಗಲಿದೆ. ಸರ್ಕಾರ ರಚನೆಗೆ ತಾಲಿಬಾನ್ ಸಿದ್ದತೆ ಮಾಡಿಕೊಳ್ಳುತ್ತಿದ್ದು ಈ ಬಗ್ಗೆ ಹಿರಿಯ ನಾಯಕರು ರೂಪುರೇಷೆಗಳನ್ನು ಸಿದ್ದಪಡಿಸುತ್ತಿದ್ದಾರೆ.

    ಅಫ್ಘಾನ್‍ನಲ್ಲಿ ಇರಾನ್ ಮಾದರಿ ಅಧ್ಯಕ್ಷೀಯ ಆಡಳಿತ ಜಾರಿ ಮಾಡುವ ಉದ್ದೇಶವನ್ನು ತಾಲಿಬಾನ್ ನಾಯಕರು ಹೊಂದಿದ್ದು, ದೇಶದ ರಾಜಕೀಯ ಮತ್ತು ಧಾರ್ಮಿಕ ನಿರ್ಧಾರಗಳಿಗೆ ಅಧ್ಯಕ್ಷರೇ ಸಾರ್ವಭೌಮರಾಗಲಿದ್ದಾರೆ ಎನ್ನಲಾಗಿದೆ. ಅಫ್ಘಾನ್ ಹೊಸ ಅಧ್ಯಕ್ಷರು ಕಂದಹಾರ್ ನಿಂದ ಕಾಬೂಲ್ ಆಡಳಿತವನ್ನು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ತಾಲಿಬಾನ್ ಉಗ್ರರ ಹೊಸ ಸರ್ಕಾರದಲ್ಲಿ ನ್ಯಾಯಾಂಗ, ಆಂತರಿಕ ಭದ್ರತೆ, ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಹಣಕಾಸು, ಮಾಹಿತಿ ಪ್ರಸಾರ ಸೇರಿ 26 ಇಲಾಖೆಯ ಕ್ಯಾಬಿನೆಟ್ ಇರಲಿದೆ. ಇದನ್ನು ನಿಭಾಯಿಸಲು ಪ್ರಧಾನಮಂತ್ರಿ ರೂಪದ ಹುದ್ದೆಯನ್ನು ಸೃಷ್ಟಿಸಲು ತಾಲಿಬಾನಿಗಳು ಚಿಂತಿಸಿದ್ದಾರಂತೆ.

    ತಾಲಿಬಾನ್ ಸಂಘಟನೆಯ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡಜಾದ್ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಹಿಬತುಲ್ಲಾ ಅಖುಂಡಜಾದ್ ಆಪ್ತ ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಅಥವಾ ತಾಲಿಬಾನ್ ಮತ್ತೊರ್ವ ಮುಖಂಡ ಮುಲ್ಲಾ ಒಮರ್ ಪುತ್ರ ಮುಲ್ಲಾ ಯಾಕೂಬ್ ಪ್ರಧಾನಿಯಾಗುವ ಸಾಧ್ಯತೆ ಎನ್ನಲಾಗುತ್ತಿದೆ. ಕ್ಯಾಬಿನೆಟ್ ನಲ್ಲಿ ಶೇ.42 ರಷ್ಟಿರುವ ಪಶ್ತೂನ್‍ಗಳು ಸೇರಿ ಇತರೆ ಜಾತಿಗೂ ಅವಕಾಶ ಸಿಗಬಹುದು ಎಂದು ವರದಿಯಾಗಿದೆ.

    ಇತರೆ ದೇಶಗಳೊಂದಿಗೆ ಸ್ನೇಹ ಸೌಹಾರ್ದತೆ ಕಾಪಾಡಿಕೊಳ್ಳಲು ದೃಷ್ಟಿಯಿಂದ ವಿದೇಶಾಂಗ ವ್ಯವಹಾರಗಳಿಗೆ ತಾಲಿಬಾನ್ ವಿಶೇಷ ಆದ್ಯತೆ ನೀಡಬಹುದು. ಈಗಾಗಲೇ ತಾಲಿಬಾನ್ ಮುಖಂಡರ ಜೊತೆಗೆ ಭಾರತ, ಇರಾನ್, ಕತಾರ್, ಪಾಕಿಸ್ತಾನ, ಚೀನಾ ಸೇರಿದಂತೆ ಹಲವು ದೇಶಗಳಿಂದ ಮಾತುಕತೆ ನಡೆಸುತ್ತಿವೆ. ಪಾಕಿಸ್ತಾನದಲ್ಲಿ ಮಾಜಿ ತಾಲಿಬಾನ್ ರಾಜತಾಂತ್ರಿಕ ಮುಹಮ್ಮದ್ ಜಹೀದ್ ಅಹ್ಮದ್ಜಾಯಿ ವಿದೇಶಾಂಗ ಸಚಿವರಾಗುವ ಸಾಧ್ಯತೆ ಇದ್ದು 72 ದೇಶಗಳಲ್ಲಿ ರಾಯಭಾರಿ ಕಚೇರಿ ತೆರೆಯಲು ತಾಲಿಬಾನ್ ಚಿಂತಿಸಿದೆ. ಇದನ್ನೂ ಓದಿ : ದೋಹಾದಲ್ಲಿ ಭಾರತ-ತಾಲಿಬಾನಿಗಳ ಮೊದಲ ಔಪಚಾರಿಕ ಮಾತುಕತೆ

    ಅಬ್ದುಲ್ ಹಕೀಂ ಹಕ್ಕಾನಿ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇದೆ. ಭ್ರಷ್ಟಾಚಾರ, ಅಪರಾಧ ಕೃತ್ಯಗಳು ನಿಭಾಯಿಸಲು ಸ್ಥಳೀಯ ಮಟ್ಟದ ನ್ಯಾಯಲಯ ಸ್ಥಾಪನೆ ಮಾಡಲಿದ್ದು, ಸ್ಥಳೀಯ ಕೋರ್ಟ್‍ಗಳ ಮೂಲಕ ನ್ಯಾಯದಾನ ಮಾಡಲು ತಾಲಿಬಾನ್ ನಿರ್ಧಾರ ಮಾಡಿದೆಯಂತೆ.

    ರಾಷ್ಟ್ರೀಯ ಧ್ವಜ ಮತ್ತು ಸಂವಿಧಾನದ ಬಗ್ಗೆ ಇನ್ನು ತಾಲಿಬಾನಿಗಳು ಒಮ್ಮತಕ್ಕೆ ಬಂದಿಲ್ಲ. ಹಳೆ ಸಂವಿಧಾನ ಅಥವಾ ರಾಷ್ಟ್ರ ಧ್ವಜ ಮುಂದುವರಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು ಹೊಸ ಧ್ವಜ ಮತ್ತು ಸಂವಿಧಾನದ ಬಗ್ಗೆ ನೂತನ ಕ್ಯಾಬಿನೆಟ್‍ನಿಂದಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ. ಇದನ್ನೂ ಓದಿ : ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಅಫ್ಘಾನ್‍ನಲ್ಲಿ ಮಹಿಳೆಯರಿಗೂ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಹಿಳೆಯರ ಹಕ್ಕುಗಳ ಬಗ್ಗೆ ತಾಲಿಬಾನ್ ಚಿಂತನೆ ಮಾಡಿದೆ. ಮಹಿಳೆಯರ ಹಕ್ಕುಗಳ ವಿಚಾರದಿಂದ ಜಾಗತಿಕ ಮಟ್ಟದಲ್ಲಿ ವಿರೋಧ ವ್ಯಕ್ತವಾಗುವ ಹಿನ್ನಲೆಯಲ್ಲಿ ಶಿಕ್ಷಣ ಉದ್ಯೋಗಗಳಲ್ಲಿ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಷರಿಯತ್ ಕಾನೂನು ಅಡಿಯಲ್ಲಿ ಮಹಿಳೆಯರಿಗೆ ಅವಕಾಶಕ್ಕೆ ಚಿಂತನೆ ನಡೆದಿದ್ದು ಈ ಮೂಲಕ ತಾಲಿಬಾನ್ ಬದಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನವೂ ನಡೆಯಲಿದೆ ಎನ್ನಲಾಗುತ್ತಿದೆ.

  • ಕಡತ ವಿಲೇವಾರಿ ಮತ್ತಷ್ಟು ಸ್ಟ್ರಿಕ್ಟ್ – ಬೊಮ್ಮಾಯಿ ಹೊಸ ರೂಲ್ಸ್ ಏನು? ಏಕೆ?

    ಕಡತ ವಿಲೇವಾರಿ ಮತ್ತಷ್ಟು ಸ್ಟ್ರಿಕ್ಟ್ – ಬೊಮ್ಮಾಯಿ ಹೊಸ ರೂಲ್ಸ್ ಏನು? ಏಕೆ?

    ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಪದವಿಗೇರಿ ಒಂದು ತಿಂಗಳಾಗಿದೆ. ಒಂದೇ ತಿಂಗಳಲ್ಲಿ ಆಡಳಿತವನ್ನು ಚುರುಕುಗೊಳಿಸಿ ಬಿಗಿ ಮಾಡುವ ಪ್ರಯತ್ನ ಆರಂಭವಾಗಿದೆ. ಹಂತ ಹಂತವಾಗಿ ಆಡಳಿತದಲ್ಲಿ ದಕ್ಷತೆ ತರಲು ಸಿಎಂ ಪ್ಲಾನ್ ಮಾಡಿಕೊಂಡಿದ್ದಾರೆ.

    ಅಧಿಕಾರಿ ವರ್ಗವನ್ನು ಸರಿದಾರಿಗೆ ತರುವುದು, ಸರ್ಕಾರಿ ಆದೇಶಗಳಿಗೆ ಅಧಿಕೃತ ಟಚ್ ಕೊಡುವುದು ಸಿಎಂ ಮೊದಲ ಉದ್ದೇಶವಾಗಿದ್ದು, ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿದ್ದ ಲೂಪ್ ಹೋಲ್ಸ್ ಗಳಿಗೆ ಬ್ರೇಕ್ ಹಾಕಿದ್ದಾರೆ.

    ಅಧಿಕಾರಿಗಳಿಗೆ ಆಯಾಯಾ ಇಲಾಖಾ ಹೊಣೆಗಾರಿಕೆಗಳನ್ನು ಸಿಎಂ ಫಿಕ್ಸ್ ಮಾಡಿದ್ದಾರೆ. ಕಡತಗಳ ವಿಲೇವಾರಿ ವಿಚಾರದಲ್ಲಿ ಸಣ್ಣ ಲೋಪ ಆಗಬಾರದು, ಯಾವುದೇ ಕಾರಣಕ್ಕೂ ಕಡತಗಳು ದುರ್ಬಳಕೆ ಆಗಬಾರದು ಎಂದು ಸೂಚಿಸಿದ್ದಾರೆ. ಪ್ರತೀ ಹಂತದ ಅಧಿಕಾರಿಯೂ ತನ್ನ ವ್ಯಾಪ್ತಿಯಲ್ಲಿ ಕಡತ ಬಗ್ಗೆ ಸಂಪೂರ್ಣ ಜ್ಞಾನವನ್ನು ಹೊಂದಿರಬೇಕೆಂದು ತಾಕೀತು ಮಾಡಿದ್ದಾರೆ.

    ಪ್ರತಿಯೊಂದು ಆಡಳಿತಾತ್ಮಕ ನಿರ್ಧಾರಗಳು ತಮ್ಮ ಕಣ್ತಪ್ಪಿ ಹೋಗಬಾರದು. ನಿರ್ಧಾರಗಳೂ ಆದೇಶ ಪ್ರತಿ ಮೂಲಕವೇ ಅಧಿಕೃತವಾಗಿರಬೇಕೆಂಬ ಕಾರಣಕ್ಕೆ ಸರ್ಕಾರಿ ಆದೇಶ ಕಾಪಿಗಳ ಕುರಿತಂತೆ ಹಿಂದಿನ ಸಂಪ್ರದಾಯಕ್ಕೆ ಸಿಎಂ ತಿಲಾಂಜಲಿ ಇಟ್ಟಿದ್ದಾರೆ. ಇದನ್ನೂ ಓದಿ : ನಾನು ಜೈಲಲ್ಲಿ ಇದ್ದೆ, ಒಂದು ಬೀಡಿಗೆ ಎಷ್ಟು ದುಡ್ಡು ಕೊಡ್ಬೇಕು ಗೊತ್ತು : ಆರಗ ಜ್ಞಾನೇಂದ್ರ 

    ಆದೇಶ ಪ್ರತಿಗಳಲ್ಲಿ ಬರೇ ಸಹಿಯಷ್ಟೇ ಇಲ್ಲದೇ ಮುಖ್ಯಮಂತ್ರಿಗಳ ಮೊಹರನ್ನು ಸಹ ಬಳಸಲಾಗುತ್ತಿದೆ. ಈ ಮೂಲಕ ಸಹಿಯೊಂದಿಗೆ ಸೀಲ್ ಅನ್ನು ಆದೇಶ ಪ್ರತಿಗಳಲ್ಲಿ ಸಿಎಂ ಬಳಕೆಗೆ ತಂದಿದ್ದಾರೆ. ಮಹತ್ವದ ಆದೇಶ ಕಾಪಿಗಳಿಗೆ ತಮ್ಮ ಸೀಲ್ ಅನ್ನು ಸಿಎಂ ಕಡ್ಡಾಯ ಮಾಡಿದ್ದಾರೆ. ಯಾವುದೇ ಲೋಪ, ದುರ್ಬಳಕೆ, ಅಜಾರೂಕತೆ ಆಗದಂತೆ ಸಿಎಂ ನಿಗಾವಹಿಸಿದ್ದು, ಏನೇ ನಿರ್ಧಾರ ಇದ್ದರೂ ಖುದ್ದು ತಾವೇ ಗಮನಿಸಿ, ಪರಿಶೀಲಿಸಿ ಅನುಮತಿ ನೀಡುತ್ತಿದ್ದಾರೆ. ಇದನ್ನೂ ಓದಿ : ಮಿಡ್‍ನೈಟ್ ಪಾರ್ಟಿ ಮಾಡಿ ಜಾಲಿ ರೈಡ್? – ಜೊಮಾಟೊ ಡೆಲಿವರಿ ಬಾಯ್ ಜಸ್ಟ್ ಮಿಸ್

    ಆಡಳಿತದಲ್ಲಿ ಹೊಸ ಸುಧಾರಣೆ ಜಾರಿಗೆ ಮುಂದಾಗಿದ್ದಕ್ಕೆ ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ಸಿಎಂ ಬೊಮ್ಮಾಯಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

  • ಚುನಾಯಿತರಾಗಿ ಅಧಿಕಾರ- ಹೊಸ ದಾಖಲೆ ಬರೆದ ಪ್ರಧಾನಿ ಮೋದಿ

    ಚುನಾಯಿತರಾಗಿ ಅಧಿಕಾರ- ಹೊಸ ದಾಖಲೆ ಬರೆದ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಚುನಾಯಿತವಾದ ಸರ್ಕಾರದ ಮುಖ್ಯಸ್ಥರಾಗಿ ಎರಡು ದಶಕಗಳನ್ನು ಪೂರೈಸಿದ್ದು, ಈ ಮೂಲಕ ವಿಶ್ವದ ಕೆಲವೇ ನಾಯಕರು ಮಾಡಿದ ಸಾಧನೆಯನ್ನು ಮೋದಿ ಮಾಡಿದಂತಾಗಿದೆ.

    ಈ ಕುರಿತು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಚುನಾಯಿತವಾದ ಸರ್ಕಾರದ ಮುಖ್ಯಸ್ಥರಾಗಿ ಹೆಚ್ಚು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ವಿಶ್ವದ ವಿರಳ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಸಹ ಒಬ್ಬರು. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ಭಾರತ ಹಾಗೂ ಜಗತ್ತು ಶಾಂತಿ, ಸುಸ್ಥಿರತೆಯಿಂದ ಸಮೃದ್ಧವಾಗಿ ಬೆಳೆಯಲು ಶ್ರಮಿಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚು ಶಕ್ತಿ ಬರಲಿ ಎಂದು ಬರೆದುಕೊಂಡಿದ್ದಾರೆ.

    ಅಲ್ಲದೆ ವಿಶ್ವದ ಇತರ ನಾಯಕರೊಂದಿಗೆ ಹೋಲಿಸಿದ ಚಿತ್ರವನ್ನು ಸಹ ರವಿಶಂಕರ್ ಪ್ರಸಾದ್ ಹಾಕಿದ್ದಾರೆ. ಅಮೆರಿಕ ಅಧ್ಯಕ್ಷ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್, ಫ್ರಾಂಕ್ಲಿನ್ ರೂಸ್ವೆಲ್ಟ್ ಹಾಗೂ ಇಂಗ್ಲೆಂಡ್ ಪ್ರಧಾನಿ ದಿವಂಗತ ಮಾರ್ಗರೇಟ್ ಥ್ಯಾಚರ್ ಸೇರಿದಂತೆ ವಿಶ್ವದ ಹಲವು ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲಿಸಲಾಗುತ್ತಿದೆ.

    ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಒಟ್ಟು 6,941 ದಿನ ಆಡಳಿತ ನಡೆಸಿದ್ದಾರೆ. 4,607 ದಿನಗಳ ಕಾಲ ಗುಜರಾತ್ ಸಿಎಂ ಆಗಿ, 2,334 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಜವಾಹರ್ ಲಾಲ್ ನೆಹರು 6,130 ದಿನಗಳ ಕಾಲ ಆಡಳಿತ ನಡೆಸಿದ್ದಾರೆ. ಇಂದಿರಾ ಗಾಂಧಿ 5,829 ದಿನ ಕಾರ್ಯನಿರ್ವಹಿಸಿದ್ದಾರೆ. ಮನಮೋಹನ್ ಸಿಂಗ್ 3,656 ದಿನ, ಮೊರಾರ್ಜಿ ದೇಸಾಯಿ 2,511 ಹಾಗೂ ಅಟಲ್ ಬಿಹಾರಿ ವಾಜಪೇಯಿ 2,272 ದಿನಗಳ ಕಾಲ ಆಡಳಿತ ನಡೆಸಿದ್ದಾರೆ. ಈ ಮೂಲಕ ಹೆಚ್ಚು ದಿನ ಸರ್ಕಾರವನ್ನು ಮುನ್ನಡೆಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ.

    ಹಲವು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರು ಸಹ ಈ ಕುರಿತು ಟ್ವೀಟ್ ಮಾಡುತ್ತಿದ್ದು, 20ನೇ ವರ್ಷದ ನಮೋ ಸಂಭ್ರಮವನ್ನು ಆಚರಿಸುತ್ತಿದ್ದಾರೆ. 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗುವುದಕ್ಕೂ ಮುನ್ನ 2001ರಿಂದ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಇದೀಗ ಅವರು ಪ್ರಧಾನಿಯಾಗಿ 7 ವರ್ಷಗಳನ್ನು ಪೂರೈಸಿದ್ದಾರೆ.

    ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರೀಯ ಪತ್ರಿಕೆಯಲ್ಲಿ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರದ ಮುಖ್ಯಸ್ಥರಾಗಿ ಚುನಾವಣೆಯಲ್ಲಿ ಸೋತಿಲ್ಲ ಎಂದು ಹೇಳಿದ್ದಾರೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಟ್ವೀಟ್ ಮಾಡಿ, ಕೃಷಿ ಸುಧಾರಣೆ, ಕೈಗಾರಿಕೆ ಬೆಳವಣಿಗೆ, ಹೆಣ್ಣು ಮಕ್ಕಳ ಶಿಕ್ಷಣದ ಪ್ರೋತ್ಸಾಹಕ್ಕಾಗಿ ಪ್ರಧಾನಿ ಮೋದಿ ನಿರಂತರವಾಗಿ ಶಕ್ತಿಯ ಪ್ರವಹಿಸಿದ್ದಾರೆ. ನರೇಂದ್ರ ಮೋದಿಯವರು ಹಲವು ದಿಕ್ಕುಗಳಲ್ಲಿ ಗುಜರಾತ್‍ನಲ್ಲಿ ಬದಲಾವಣೆ ತಂದರು. ಇದೀಗ ಅವರ ನಾಯಕತ್ವದಲ್ಲಿ ನಮ್ಮ ಭಾರತ, ನವ ಭಾರತವಾಗಿ ಬದಲಾಗುತ್ತಿದೆ ಎಂದು ಬರೆದು ಕೊಂಡಿದ್ದಾರೆ.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸಹ ಮಾತನಾಡಿದ್ದು, ಭಾರತದ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿ ದಣಿವರಿಯದೆ ಕೆಲಸ ಮಾಡಿದ್ದಾರೆ. ವಿರೋಧ ಪಕ್ಷಗಳ ವಾಗ್ದಾಳಿಗಳು ಅವರನ್ನು ತಡೆಯಲಿಲ್ಲ. ತಾಯಿ ಭಾರತ ಮಾತೆಗೆ ಸೇವೆ ಸಲ್ಲಿಸುವಲ್ಲಿ ಅವರ ದೃಢ ನಿರ್ಧಾರವನ್ನು ಟೀಕಿಸಲಾಗುವುದಿಲ್ಲ. 130 ಕೋಟಿ ಜನರೇ ಅವರ ಕುಟುಂಬ. ಭಾರತೀಯರು ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ಸಂಕಲ್ಪ ಎಂದಿನಂತೆ ಪ್ರಬಲವಾಗಿದೆ ಎಂದಿದ್ದಾರೆ.

  • ಪ್ರಧಾನಿಯಾಗಿ ಮತ್ತೊಂದು ದಾಖಲೆ ನಿರ್ಮಿಸಿದ ಮೋದಿ

    ಪ್ರಧಾನಿಯಾಗಿ ಮತ್ತೊಂದು ದಾಖಲೆ ನಿರ್ಮಿಸಿದ ಮೋದಿ

    – ಅಟಲ್ ಬಿಹಾರಿ ವಾಜಪೇಯಿಯನ್ನು ಹಿಂದಿಕ್ಕಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ವೃತ್ತಿಜೀವನದಲ್ಲಿ ಗುರುವಾರ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಅತಿ ಹೆಚ್ಚು ಅವಧಿ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು 2,268 ದಿನಗಳ ಕಾಲ ಪ್ರಧಾನಿಯಾಗಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ(67) ವಾಜಪೇಯಿ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿ ಆಡಳಿತ ನಡೆಸಿದ ಪ್ರಧಾನಿಗಳ ಪೈಕಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

    ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅತಿ ಹೆಚ್ಚು ಅವಧಿ ಪ್ರಧಾನಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ನೆಹರು 16 ವರ್ಷ ಹಾಗೂ 286 ದಿನಗಳ ಕಾಲ ಪ್ರಧಾನಿಯಾಗಿದ್ದರು. ಇವರ ಮಗಳು ಇಂದಿರಾ ಗಾಂಧಿ ಎರಡನೇ ಸ್ಥಾನದಲ್ಲಿದ್ದು, 11 ವರ್ಷ ಹಾಗೂ 59 ದಿನ ಆಡಳಿತ ನಡೆಸಿದ್ದಾರೆ.

    ಇದಾದ ಬಳಿಕ ಈ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು 3ನೇ ಸ್ಥಾನದಲ್ಲಿದ್ದು, ಇವರು 10 ವರ್ಷ ಹಾಗೂ 4 ದಿನಗಳ ಕಾಲ ಪ್ರಧಾನಿಯಾಗಿದ್ದರು.

    ನರೇಂದ್ರ ಮೋದಿಯವರು ಪ್ರಧಾನಿಯಾಗಿ 6 ವರ್ಷ ಪೂರೈಸಿದ್ದು, ಬಿಜೆಪಿ ಭರ್ಜರಿ 303 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಮೋದಿ ಎರಡನೇ ಬಾರಿ ಪ್ರಧಾನಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಎನ್‍ಡಿಎ ಕೂಟ ಒಟ್ಟು 353 ಸ್ಥಾನಗಳಲ್ಲಿ ಜಯಗಳಿಸಿದೆ.

    ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ 3 ದಾಖಲೆಗಳನ್ನು ಮಾಡಿದ್ದಾರೆ. ರಾಮಜನ್ಮ ಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ. ಅಲ್ಲದೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮಾರ್ಚ್ 24ರಂದು 21 ದಿನಗಳ ಲಾಕ್‍ಡೌನ್ ಘೋಷಿಸಿದ್ದರು. ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಜನ ವೀಕ್ಷಿಸಿದ ಭಾಷಣ ಎಂಬ ದಾಖಲೆಯನ್ನು ಇದು ಬರೆದಿತ್ತು.

    ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಟ್ವಿಟ್ಟರ್ ನಲ್ಲಿ 50 ಮಿಲಿಯನ್(5 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಜನ ಫಾಲೋವರ್ಸ್ ಹೊಂದಿರುವ ಭಾರತದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿಯ ಟ್ವಿಟ್ಟರ್ ಖಾತೆಯನ್ನು 60.9 ಮಿಲಿಯನ್(6.10 ಕೋಟಿ) ಜನ ಫಾಲೋ ಮಾಡುತ್ತಿದ್ದಾರೆ. ಅಲ್ಲದೆ ಪ್ರಧಾನಿಗಳ ಅಧೀಕೃತ ಟ್ವಿಟ್ಟರ್ ಖಾತೆ 37.9 ಮಿಲಿಯನ್(3.07 ಕೋಟಿ) ಹಿಂಬಾಲಕರನ್ನು ಹೊಂದಿದೆ.

  • 20 ತಿಂಗ್ಳ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಿದ ನಾಯಕರು ನೀವೇನಾ – ಸಿಎಂಗೆ ಖಾರವಾದ ಪತ್ರ ಬರೆದ ಸ್ಪೀಕರ್

    20 ತಿಂಗ್ಳ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಿದ ನಾಯಕರು ನೀವೇನಾ – ಸಿಎಂಗೆ ಖಾರವಾದ ಪತ್ರ ಬರೆದ ಸ್ಪೀಕರ್

    ಬೆಂಗಳೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸ್ಪೀಕರ್ ರಮೇಶ್ ಕುಮಾರ್ ಅವರು, ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳ ಕಾಲ ಯಶಸ್ವಿ ಆಡಳಿತ ನೀಡಿದ್ದೀರಿ. ಆದರೆ ಈ ಬಾರಿ ಆದರೆ ಈ ಒತ್ತಡವನ್ನ ಸಮರ್ಪಕವಾಗಿ ನಿರ್ವಹಿಸುವಲ್ಲಿ ನೀವು ಎಡವುತ್ತಿದ್ದೀರಾ ಅನ್ನೋದು ನನ್ನ ಭಾವನೆ ಎಂದು ಪತ್ರ ಬರೆದಿದ್ದಾರೆ.

    ಸ್ಪೀಕರ್ ಪತ್ರದಲ್ಲೇನಿದೆ?
    ಕಳೆದ ಒಂದು ವರ್ಷದಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ಜವಾಬ್ದಾರಿಯನ್ನ ಹೊತ್ತು ತಾವು ಸರ್ಕಾರವನ್ನ ನಡೆಸುತ್ತಿದ್ದೀರಿ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನ ಮತ್ತು ಎಲ್ಲವನ್ನ ಸರಿದೂಗಿಸಿಕೊಂಡು ಹೋಗಬೇಕಾದ ಒತ್ತಡದ ಸನ್ನಿವೇಶದಲ್ಲಿ ನೀವು ಸರ್ಕಾರವನ್ನ ಮುನ್ನಡೆಸುತ್ತಿದ್ದೀರಿ ಅನ್ನುವುದು ನನಗೆ ಗೊತ್ತು. ಆದರೆ ಈ ಒತ್ತಡವನ್ನ ಸಮರ್ಪಕವಾಗಿ ನಿರ್ವಹಿಸುವಲ್ಲಿ ನೀವು ಎಡವುತ್ತಿದ್ದೀರಾ ಅನ್ನೋದು ನನ್ನ ಭಾವನೆ. ಈ ಹಿಂದೆಯೂ ತಾವು ಸಮ್ಮಿಶ್ರ ಸರ್ಕಾರವನ್ನ ಯಶಸ್ವಿಯಾಗಿ 20 ತಿಂಗಳುಗಳ ಕಾಲ ನಡೆಸಿದವರು. ಆ ಮೂಲಕ ರಾಜ್ಯದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದವರು ನೀವು. ಆದರೆ ಈ ಬಾರಿಯ ಸರ್ಕಾರದಲ್ಲಿ ನಿಮ್ಮ ಆಡಳಿತ ನೈಪುಣ್ಯತೆಯಾಗಲಿ, ಜನಪ್ರಿಯತೆಯಾಗಲಿ ಯಾವುದು ನನಗೆ ಕಾಣಿಸಲಿಲ್ಲ. ನೀವು ಮುಖ್ಯಮಂತ್ರಿಯಾಗಿ ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕು. ಅದರಲ್ಲೂ ಸಮ್ಮಿಶ್ರ ಸರ್ಕಾರದ ನಾಯಕನಾಗಿ ನೀವು ಇನ್ನು ಹೆಚ್ಚು ಡೆಮಾಕ್ರಟಿಕ್ ಆಗಿ ವರ್ತಿಸಬೇಕು ಅನ್ನೋದು ನನ್ನ ಅಭಿಪ್ರಾಯ. ನಿಮ್ಮ ಆಡಳಿತ ವೈಖರಿ ಹಾಗೂ ಸಾರ್ವಜನಿಕವಾದ ಕೆಲವೊಂದು ನಡೆಗಳು ನಿಮ್ಮ ಬಗ್ಗೆ ಅಪಾರ ಗೌರವ ಇಟ್ಟಿರುವ ನನಗೆ ಅಷ್ಟೊಂದು ಸಮಂಜಸ ಅನ್ನಿಸಲಿಲ್ಲ. ಇದು ನನ್ನ ವೈಯುಕ್ತಿಕ ಅಭಿಪ್ರಾಯವೇ ಹೊರತು ಅನ್ಯತ ಭಾವಿಸಬಾರದು ಅನ್ನೋದು ನನ್ನ ಕಳಕಳಿಯ ಮನವಿ ಎಂದು ತಿಳಿಸಿದ್ದಾರೆ.

    ಇರುವ ವಿಚಾರವನ್ನು ನೇರವಾಗಿ ಹೇಳುವ ರಮೇಶ್ ಕುಮಾರ್ ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸದನಲ್ಲಿ ಸರ್ಕಾರದ ಮಂತ್ರಿಗಳ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರ ಹಾಕಿ ಬಹಿರಂಗವಾಗಿಯೇ ಟೀಕಿಸುತ್ತಿದ್ದರು. ಈಗ ರಾಜ್ಯ ದೋಸ್ತಿಗಳ ನಡುವಿನ ಹಗ್ಗ ಜಗ್ಗಾಟದಿಂದ ರಾಜ್ಯದ ಜನರಿಗೆ ಸಮರ್ಪಕ ಆಡಳಿತ ನೀಡದ್ದಕ್ಕೆ ಬೇಸರಗೊಂಡು ರಮೇಶ್ ಕುಮಾರ್ ಈ ಪತ್ರವನ್ನು ಬರೆದಿದ್ದಾರೆ ಎಂದು ವಿಶ್ಲೇಷಿಸಲಾಗುತ್ತದೆ.

  • ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ಸರ್ಕಾರ ಆದೇಶ

    ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ಸರ್ಕಾರ ಆದೇಶ

    ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಮಹಾಬಲೇಶ್ವರ ದೇವಸ್ಥಾನದ ಆಡಳಿವನ್ನು ಮುಂದಿನ ಸೋಮವಾರದ ಒಳಗಾಗಿ ರಾಮಚಂದ್ರಪುರ ಮಠಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿತ್ತು. ಹೀಗಾಗಿ ರಾಜ್ಯ ಸರ್ಕಾವು ಮಹಾಬಲೇಶ್ವರ ದೇವಸ್ಥಾನದ ಚರ-ಸ್ಥಿರ ಆಸ್ತಿ, ದಾಖಲೆ ಹಾಗೂ ಆಭರಣಗಳು ರಾಮಚಂದ್ರಪುರ ಮಠಕ್ಕೆ ವರ್ಗಾವಣೆಗೆ ಅಧಿಕೃತ ಆದೇಶ ನೀಡಿದೆ.

    ಸುಪ್ರೀಂಕೋರ್ಟ್ ಹೇಳಿದ್ದೇನು?:
    ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಎ.ಎಂ.ಕನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯ ಪೀಠವು, ಕೋರ್ಟ್‍ನ ಈ ಹಿಂದಿನ ಆದೇಶಗಳಲ್ಲಿ ಯಾವುದೇ ಗೊಂದಲಗಳಿಲ್ಲ. ದೇವಸ್ಥಾನದ ಆಡಳಿತ ನಿರ್ವಹಣೆ ರಾಮಚಂದ್ರಾಪುರ ಮಠಕ್ಕೆ ಸೇರಬೇಕು ಎಂದು ಸ್ಪಷ್ಟವಾಗಿಯೇ ನಾವು ಹೇಳಿದ್ದೇವೆ. ಈಗಲೂ ಅದನ್ನೇ ಹೇಳುತ್ತಿದ್ದೇವೆ. ಸೋಮವಾರದೊಳಗೆ ಮಠಕ್ಕೆ ದೇವಸ್ಥಾನದ ಆಡಳಿತ ವಹಿಸಿಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

    ಏನಿದು ಪ್ರಕರಣ?
    2008ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಗೋಕರ್ಣದ ಐತಿಹಾಸಿಕ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ಬ್ರೇಕ್ ಹಾಕಿ, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಎಂದು ಆದೇಶ ಹೊರಡಿಸಿತ್ತು.

    ಹೈಕೋರ್ಟ್ ಆದೇಶ ಪ್ರಶ್ನಿಸಿ ಮಠದ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು. ಕಳೆದ ಸೆಪ್ಟೆಂಬರ್ 7 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಆಗಸ್ಟ್ 10 ರಂದು ರಾಜ್ಯ ಹೈಕೋರ್ಟ್ ಹೊರಡಿಸಿದ್ದ ಅಂತಿಮ ಆದೇಶದ ನಂತರ ತಾನು ಹೊರಡಿಸಿರುವ ಮಧ್ಯಾಂತರ ತೀರ್ಪು ಮುಂದುವರಿಯಲಿದೆ ಎಂದು ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

    ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

    ಕಾರವಾರ: ಮುಜರಾಯಿ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳಲ್ಲಿ ರಾಜ್ಯಸರ್ಕಾರ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಪ್ರಕ್ರಿಯೆ ಚುರುಕು ಗೊಂಡಿದೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಬುಧವಾರ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

    ವಿವಾದ ಏನು?
    ಈ ಹಿಂದೆ ಮುಜರಾಯಿ ಇಲಾಖೆಯ ಕಾಯ್ದೆಯು ಕರ್ನಾಟಕದಲ್ಲಿ ಒಂದೊಂದು ಭಾಗಕ್ಕೆ ಅದರದೇ ಆದ ಕಾಯ್ದೆಯನ್ನು ಮಾಡಲಾಗಿತ್ತು. ಇದರಂತೆ ರಾಜ್ಯದಲ್ಲಿ ಮದ್ರಾಸ್, ಕೊಡಗು, ಮೈಸೂರು, ಹೈದರಾಬಾದ್, ಮುಂಬೈ ಕರ್ನಾಟಕ ದತ್ತಿ ನಿಯಮಗಳು ಜಾರಿಯಲ್ಲಿದ್ದು. ಒಂದೊಂದು ಭಾಗಕ್ಕೆ ಅದರದೇ ಆದ ಹಕ್ಕುಗಳು ಜಾರಿಯಲ್ಲಿದ್ದ ಕಾರಣ ಹಲವು ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿತ್ತು. ಈ ತೊಂದರೆಯನ್ನು ನೀಗಿಸಲು ಏಕರೂಪ ಶಾಸನ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ 1997 ಮತ್ತು ನಿಯಮಗಳು 20002 ಎಂಬ ಏಕರೂಪ ಮುಜರಾಯಿ ಕಾಯ್ದೆಯನ್ನು 2003ರ ಮೇ 1 ರಂದು ಜಾರಿಗೆ ತಂದಿದೆ. ಆದರೇ ಇದನ್ನು ಪ್ರಶ್ನಿಸಿ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳಿ ಧಾರವಾಡ ಕೋರ್ಟ ನಲ್ಲಿ ದಾವೇ ಹೂಡಿ ಈ ಕಾಯ್ದೆ ರದ್ದಾಗುವಂತಾಯ್ತು. ಇನ್ನು ಅಂದಿನ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿಗಳಾದ ರಾಮಜೋಯಿಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕಾಯ್ದೆಯನ್ನು ಜಾರಿಗೊಳಿಸಿತ್ತು.

    ಇನ್ನು ಈ ಬಗ್ಗೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಕಾಯ್ದೆ ರದ್ದಾಗುವಂತೆ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾಮಂಡಳಿಗಳು ಪ್ರಯತ್ನಿಸಿದ್ದವು, ಆದರೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದೆ. ಅಲ್ಲದೇ ಕಾಯ್ದೆಯ ಕಾಲಂ 25, 29 ರ ಅಡಿಯಲ್ಲಿ ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಸಮಿತಿ ರಚನೆಗೆ ಅನುವು ಮಾಡಿಕೊಟ್ಟಿದೆ.

    ಈ ಕಾಯ್ದೆಯನ್ನು ಸದುಪಯೋಗ ಪಡಿಸಿಕೊಂಡ ಅಂದಿನ ಬಿಜೆಪಿ ಸರ್ಕಾರ ಉಡುಪಿಯ ಕೃಷ್ಣ ದೇವಸ್ಥಾನ, ಗೋಕರ್ಣದ ಮಹಾಭಲೇಶ್ವರ ದೇವಸ್ಥಾನ ಮುಜರಾಯಿ ಇಲಾಖೆಯಿಂದ ಕೈ ತಪ್ಪುವಂತೆ ಮಾಡಿತ್ತು. ಪ್ರಸ್ತುತ ಸಿಎಂ ಸಿದ್ಧರಾಮಯ್ಯ ನವರ ಸರ್ಕಾರ ಇದೇ ನಿಟ್ಟಿನಲ್ಲಿ ಮುಂದುವರೆದಿದ್ದು ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಮೂರು ವರ್ಷ ಅಧಿಕಾರಾವಧಿಯ 9 ಜನರ ಸಮಿತಿ ರಚನೆಗೆ ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಮಿತಿ ಹೇಗೆ ರಚನೆಯಾಗುತ್ತೆ..?
    ವ್ಯವಸ್ಥಾಪನಾ ಸಮಿತಿ ರಚನೆಯಲ್ಲಿ ಒಂದು ಎಸ್‍ಸಿ, ಎಸ್‍ಟಿ, ಪ್ರತಿನಿಧಿ, 1 ಮಹಿಳೆ, ದೇವಸ್ಥಾನದ ಅರ್ಚಕ ಸೇರಿದಂತೆ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಈ ಸಮಿತಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಧಾರ್ಮಿಕ ನ್ಯಾಯ ಸಮಿತಿಯ ಸದಸ್ಯರೊಳಗೊಂಡ ನಿರ್ದೇಶಿತ ಸದಸ್ಯರು ನೇರ ಸಂದರ್ಶನದಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಈ ಸಮಿತಿಯು ದೇವಸ್ಥಾನದ ಆಡಳಿತ, ಅಭಿವೃದ್ಧಿ, ಕೆಲಸಗಾರರ ನೇಮಕ ಮುಂತಾದ ಅಧಿಕಾರವನ್ನು ಹೊಂದಿದೆ.

    ಉತ್ತರ ಕನ್ನಡ ಜಿಲ್ಲೆಯಲ್ಲಿ 622 ಮುಜರಾಯಿ ದೇವಸ್ಥಾನಗಳಲ್ಲಿ 10 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ 113 ಸಿ ಮತ್ತು ಬಿ ಹಂತದ ಧಾರ್ಮಿಕ ಪರಿಷತ್ ಗೆ ಒಳಪಟ್ಟ ದೇವಸ್ಥಾನಗಳಿಗೆ 9 ಜನ ಸದಸ್ಯರಿರುವ ಸಮಿತಿಯನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಇದರಲ್ಲಿ 30 ದೇವಸ್ಥಾನಗಳಿಗೆ ಸಮಿತಿ ಸದಸ್ಯತ್ವಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಬಂದಿದ್ದು ಉಳಿದ 83 ದೇವಸ್ಥಾನಗಳಿಗೆ ಯಾರೊಬ್ಬರೂ ಅರ್ಜಿ ಸಲ್ಲಿಸಿಲ್ಲ. ಇನ್ನು ಬಿ ವರ್ಗದ 9 ದೇವಸ್ಥಾನಗಳಲ್ಲಿ 5 ದೇವಸ್ಥಾನಗಳಿಗೆ ಸಮಿತಿ ರಚಿಸಲಾಗಿದ್ದು ಉಳಿದ 4 ದೇವಸ್ಥಾನದ ಆಡಳಿತವರ್ಗ ಕೋರ್ಟ್ ಮೆಟ್ಟಿಲೇರಿದೆ.

    ಪರ, ವಿರೋಧ ಯಾಕೆ..?
    ದೇವಸ್ಥಾನಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯಲು ಈ ಸಮಿತಿ ರಚನೆಯಾಗಿದ್ದರೂ ಈ ಸಮಿತಿಯಲ್ಲಿ ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಿಂದೂಗಳ ಧಾರ್ಮಿಕ ಹಕ್ಕಿಗೆ ತೊಂದರೆಯಾಗುತ್ತಿದ್ದು, ಸಮಿತಿ ರಚನೆಯಿಂದ ದೇವಸ್ಥಾನಕ್ಕೆ ಬರುವ ಹಣ ಕೂಡ ದುರುಪಯೋಗವಾಗಬಹುದು ಎಂಬುದು ಕೆಲವರ ವಾದವಾಗಿದೆ. ಜಿಲ್ಲೆಯ ಹಲವು ದೇವಸ್ಥಾನದಲ್ಲಿ ಈ ಹಿಂದೆ ವಂಶಪಾರಂಪರ್ಯವಾಗಿ ಆಡಳಿತ ಮಾಡುತ್ತಿದ್ದ ಕೆಲವರು ದೇವಸ್ಥಾನದ ಹಕ್ಕಿನ ಜಾಗವನ್ನೇ ಮಾರಿ ತಮ್ಮ ಸ್ವಂತಕ್ಕೆ ಬಳಸಿಕೊಂಡ ನಿದರ್ಶನಗಳಿದ್ದು ಇದನ್ನು ತಪ್ಪಿಸಲು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇಂತಹ ಘಟನೆಗಳು ಜರುಗಿದ್ದರಿಂದಾಗಿ ತಕ್ಷಣದಲ್ಲಿ ಸಮಿತಿ ರಚಿಸಲು ಕ್ರಮ ಕೈಗೊಂಡಿದೆ. ಶೀಘ್ರದಲ್ಲಿ ಸಮಿತಿ ರಚಿಸುತ್ತಿರುವುದರಿಂದ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾ ಮಂಡಲಿ ಬುಧವಾರ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ಮುಂದೆ ಕಾನೂನಿನ ಹೋರಾಟಕ್ಕೆ ಸಜ್ಜಾಗಿದೆ.

    ವ್ಯವಸ್ಥಾಪನಾ ಸಮಿತಿ ರಚನೆಯಿಂದ ದೇವಾಲಯಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುವುದರ ಜೊತೆಗೆ ಹಿಂದು ಧಾರ್ಮಿಕ ಹಕ್ಕಿಗೆ ಚ್ಯುತಿ ಬರುತ್ತದೆ.
    ಈಗಾಗಲೇ ಸುಪ್ರೀಂ ಕೋರ್ಟ ನಲ್ಲಿ ದಾವೆ ಇರುವುದರಿಂದ ಒಂದು ವೇಳೆ ಕೋರ್ಟ್ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಗಳು ಮುಜರಾಯಿ ಕೈ ಸೇರುವುದರಲ್ಲಿ ಅನುಮಾನವಿಲ್ಲ ಎಂಬುದು ಧಾರ್ಮಿಕ ಮುಖಂಡರ ವಾದ. ಆದರೆ ಸರ್ಕಾರ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ನೀಡಲು ಈ ಸಮಿತಿ ಅಗತ್ಯವಿದೆ ಎಂದು ಹೇಳಿದೆ.