Tag: ಆಡಿಯೋ

  • ಗಣಿನಾಡು ಬಳ್ಳಾರಿಯಲ್ಲಿ `ಟಗರು’ ನರ್ತನ – ಆಡಿಯೋ ಲಾಂಚ್ ಮಾಡಿ ಕುಣಿದ ದೊಡ್ಮನೆ ಬ್ರದರ್ಸ್

    ಗಣಿನಾಡು ಬಳ್ಳಾರಿಯಲ್ಲಿ `ಟಗರು’ ನರ್ತನ – ಆಡಿಯೋ ಲಾಂಚ್ ಮಾಡಿ ಕುಣಿದ ದೊಡ್ಮನೆ ಬ್ರದರ್ಸ್

    ಬಳ್ಳಾರಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ `ಟಗರು’ ಚಿತ್ರದ ಆಡಿಯೋ ಶನಿವಾರ ಸಂಜೆ ಬಿಡುಗಡೆಯಾಗಿದೆ.

    ಹೊಸಪೇಟೆಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಲಾಯಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಶಿವರಾಜ್ ಕುಮಾರ್, ಶಾಸಕ ಆನಂದ ಸಿಂಗ್ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿದರು.

    ಆಡಿಯೋ ಬಿಡುಗಡೆ ವೇಳೆ ಟಗರು ಚಿತ್ರದ ಟೈಟಲ್ ಸಾಂಗ್ ಗೆ ನಟ ಶಿವರಾಜ್ ಕುಮಾರ್ ಹಾಗೂ ಅಂಜನಿಪುತ್ರ ಚಿತ್ರದ ಹಾಡಿಗೆ ಪವರ ಸ್ಟಾರ್ ಪುನೀತ್ ರಾಜಕುಮಾರ್ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ನಟಿ ಮಾನ್ವಿತಾ ಕೂಡಾ ಚಿತ್ರದ ಹಾಡಿಗೆ ಸ್ಟೆಪ್ ಹಾಕಿದ್ರು. ಇನ್ನು ನಟ- ನಟಿಯರು ಡಾನ್ಸ್ ಮಾಡುತ್ತಿದಂತೆ ಪ್ರೇಕ್ಷಕರು ಹುಚ್ಚೆದು ಕುಣಿದ್ರು. ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸಿದ ಪರಿಣಾಮ ಪೊಲೀಸರು ಜನರನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಬೇಕಾಯಿತು.

    ಸುಮಾರು ಮೂರು ತಾಸುಗಳ ಕಾಲ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ನಟ ಶಿವಣ್ಣ ಹಾಗೂ ಪುನೀತ್ ರಾಜಕುಮಾರ್ ಹೊಸಪೇಟೆಗೂ ರಾಜ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಇಲ್ಲಿ ಯಾವುದೇ ಸಮಾರಂಭ ಮಾಡಿದ್ರೂ ಸಕ್ಸಸ್ ಆಗುತ್ತೆ ಎಂದು ಹರ್ಷ ವ್ಯಕ್ತಪಡಿಸಿದರು.

    ಒಟ್ಟಾರೆ ಟಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಮಾತ್ರ ಪುಲ್ ಪೊಗರಿನಿಂದಲೇ ನಡೆದಿರುವುದು ಚಿತ್ರ ಯಶ್ವಸಿಯಾಗಲಿದೆ ಅನ್ನೋದಕ್ಕೆ ಮುನ್ಸೂಚನೆ ನೀಡಿದಂತೆ ಕಂಡುಬಂದಿತು. ಇನ್ನೂ ಆಡಿಯೋ ಬಿಡುಗಡೆ ವೇಳೆ ನಟ ಯಶ್ ಕೂಡಾ ಚಿತ್ರಕ್ಕೆ ಹಾರೈಸಿದ್ದಾರೆ.

    ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್, ನಟಿ ಮಾನ್ವಿತಾ, ನಟ ಮುರಳಿ, ಖಳನಟ ವಷಿಷ್ಠ ಸೇರಿದಂತೆ ಚಿತ್ರರಂಗದ ತಾರೆಯರು ಭಾಗಿಯಾಗಿದ್ದರು. ಸಮಾರಂಭದ ಅಂಗವಾಗಿ ಪ್ರೇಕ್ಷಕರಿಗೆ 20 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

  • ಪಂಚಮಸಾಲಿಗಳು ಮೂತ್ರವಿಸರ್ಜಿಸಿದ್ರೆ ಜಂಗಮ ಸಮುದಾಯ ಕೊಚ್ಕೊಂಡ್ಹೋಗುತ್ತೆ- ನಾಲಗೆ ಹರಿಬಿಟ್ಟ ಜಯಮೃತ್ಯುಂಜಯ ಸ್ವಾಮೀಜಿ

    ಪಂಚಮಸಾಲಿಗಳು ಮೂತ್ರವಿಸರ್ಜಿಸಿದ್ರೆ ಜಂಗಮ ಸಮುದಾಯ ಕೊಚ್ಕೊಂಡ್ಹೋಗುತ್ತೆ- ನಾಲಗೆ ಹರಿಬಿಟ್ಟ ಜಯಮೃತ್ಯುಂಜಯ ಸ್ವಾಮೀಜಿ

    ದಾವಣಗೆರೆ: ಕೆಲ ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕೂಡಲ ಸಂಗಮ ಮಠದ ಜಯಮೃತ್ಯುಂಜಯ ಸ್ವಾಮೀಜಿ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ.

    ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯಿತ ಸಮಾವೇಶದಲ್ಲಿ ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯಿತರು, ಐದು ತಂದೆಗಳಿಗೆ ಹುಟ್ಟಿದವರು ವೀರಶೈವರು ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಸ್ವಾಮೀಜಿಯ ಮತ್ತೊಂದು ವಿವಾದಾತ್ಮಕ ಹೇಳಿಕೆಯ ಆಡಿಯೋ ವೈರಲ್ ಅಗಿದೆ.

    ಈ ಆಡಿಯೋ ಕ್ಲಿಪ್ ನಲ್ಲಿ ಜಂಗಮರನ್ನು ಹೀಯಾಳಿಸಿ ನಿಂದಿಸಿದ್ದಾರೆ. ಪಂಚಮಸಾಲಿ ಸಮಾಜದ ಮುಖಂಡ ಶರಣಪ್ಪನ ಜೊತೆ ಫೋನ್ ಸಂಭಾಷಣೆ ಮಾಡುತ್ತಾ, ಜಂಗಮ ಜನಾಂಗ 2% ಇದ್ದು ಪಂಚಮಸಾಲಿ ಸಮುದಾಯವರು ಮೂತ್ರ ವಿಸರ್ಜನೆ ಮಾಡಿದರೆ ಅದರಲ್ಲಿ ಹರಿದುಕೊಂಡು ಹೊಗ್ತಾರೆ ಎನ್ನುವ ಆಡಿಯೋ ಜಂಗಮರನ್ನು ಕೆರಳುವಂತೆ ಮಾಡಿದೆ.

    ಅಲ್ಲದೇ ಸ್ವಾಮೀಜಿಯ ಈ ಆಡಿಯೋ ವೈರಲ್ ಆಗಿ ವಾಟ್ಸಪ್ ಫೇಸ್‍ಬುಕ್ ಗಳಲ್ಲಿ ರಾರಾಜಿಸುತ್ತಿದೆ. ಅಲ್ಲದೇ ಜಯಮೃತ್ಯುಂಜಯ ಸ್ವಾಮೀಜಿಯ ಆಡಿಯೋ ಕೇಳಿ ರಾಯಚೂರಿನ ಜಂಗಮ ಸಮಾಜದ ವಿರುಪಾಕ್ಷ ಸ್ವಾಮೀಜಿ ಜಯಮೃತ್ಯುಂಜಯ ಸ್ವಾಮೀಜಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಇದ್ರಲ್ಲಿ ಸ್ವಾಮೀಜಿ ತಮ್ಮನ್ನು ಸಮರ್ಥನೆ ಮಾಡಿಕೊಂಡಿದ್ದು, ಆಡಿಯೋದಲ್ಲಿರುವ ಧ್ವನಿ ನನ್ನದೇ. ಆದರೆ ನನಗೆ ಕೆಟ್ಟ ಹೆಸರು ತರಲು ಯಾರೋ ಆಡಿಯೋ ತಿರುಚಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಆದ್ರೆ ಜಂಗಮ ವಿರುಪಾಕ್ಷ ಸ್ಚಾಮೀಜಿ ಮಾತ್ರ ಬಹಿರಂಗ ಸವಾಲ್ ಹಾಕಿದ್ದಾರೆ. ಜಂಗಮ ಸಮುದಾಯದ ಮುಂದೆ ಬಂದು ನಿಲ್ಲುತ್ತೇವೆ. ಮೂತ್ರ ವಿಸರ್ಜನೆ ಎಲ್ಲಿ ಮಾಡಿಕೊಳ್ಳುತ್ತೀರಿ ನಾವು ನೋಡ್ತಿವಿ ಎಂದು ಉತ್ತರಿಸಿದ್ದಾರೆ. ಅಲ್ಲದೆ ಇಡೀ ಜಂಗಮ ಸಮುದಾಯವರ ಕ್ಷಮೆ ಕೇಳುವಂತೆ ಫೋನ್ ಮಾಡಿ ಜಯಮೃತ್ಯುಂಜಯ ಸ್ವಾಮೀಜಿಗೆ ಕ್ಲಾಸ್ ತೆಗೆತುಕೊಂಡಿದ್ದಾರೆ.

     

     

  • ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಎಲ್ಲರಿಗಿಂತ ಮೊದ್ಲು ನಾನು ಜೈ ಮಹಾರಾಷ್ಟ್ರ ಅಂತೀನಿ: ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ

    ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಎಲ್ಲರಿಗಿಂತ ಮೊದ್ಲು ನಾನು ಜೈ ಮಹಾರಾಷ್ಟ್ರ ಅಂತೀನಿ: ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ

    ಬೆಳಗಾವಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನು ಜೈ ಮಹಾರಾಷ್ಟ್ರ ಅಂತ ಹೇಳುತ್ತೀನಿ ಅಂತ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಆಗಸ್ಟ್ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ನಾನು ಈಗ ಕರ್ನಾಟಕದಲ್ಲಿ ಇದ್ದೇನೆ. ಆದರೆ ಗಡಿ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿದೆ. ಪ್ರಕರಣ ಮುಗಿದು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನೇ ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಅಂತಾ ಹೇಳುವೆ. ಯಾವನಿಗೂ ಈ ರೀತಿ ಹೇಳುವ ಧೈರ್ಯ ಇಲ್ಲ. ಆದರೆ ನನಗೆ ಯಾರ ಭಯವೂ ಇಲ್ಲ. ನಾನು ಯಾರಿಗೂ ಹೆದರುವುದಿಲ್ಲ. ನಾನು ಹೆದರುವುದು ಆ ಭಗವಂತನಿಗೆ ಮತ್ತು ನನ್ನ ತಂದೆ-ತಾಯಿಗೆ ಮಾತ್ರ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

    ನನಗೆ ಜಾತಿ, ಧರ್ಮ, ವ್ಯಕ್ತಿಯ ಬಗ್ಗೆ ಯಾವುದೇ ನಂಬಿಕೆ ಇಲ್ಲ. ಯಾರಿಂದ ಏನೂ ಆಗಬೇಕಿಲ್ಲ. ನನಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಆಗಬೇಕು ಅಷ್ಟೇ ಎಂದಿದ್ದಾರೆ.

  • ಬೆಂಬಲಿಗರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ನಿರಂಜನಾನಂದಪುರಿ ಸ್ವಾಮೀಜಿ- ಆಡಿಯೋ ವೈರಲ್

    ಬೆಂಬಲಿಗರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ನಿರಂಜನಾನಂದಪುರಿ ಸ್ವಾಮೀಜಿ- ಆಡಿಯೋ ವೈರಲ್

    ದಾವಣಗೆರೆ: ಕನಕ ಗುರು ಪೀಠ ಶಾಖಾ ಮಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಆವಾಚ್ಯ ಶಬ್ದಗಳನ್ನು ಬಳಸಿದ ಆಡಿಯೋ ಈಗ ಸಖತ್ ವೈರಲ್ ಆಗಿದೆ.

    ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಕನಕ ಗುರು ಪೀಠ ಶಾಖಾ ಮಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವಾಚ್ಯ ಶಬ್ದ ಬಳಸಿ ಬಾಯಿಗೆ ಬಂದಂತೆ ಮಾತನಾಡಿರುವ ಆಡಿಯೋ ಎಲ್ಲೆಡೆ ಹರಿದಾಡ್ತಿದೆ. ಜೂನ್ 2 ರಂದು ಬೆಳ್ಳೂಡಿ ಮಠದಲ್ಲಿ ಆಯೋಜಿಸಿದ್ದ ಕುರುಬ ಸಮಾಜದ ಮುಖಂಡರ ಸಭೆಯಲ್ಲಿ ಸೊಂಟದ ಕೆಳಗಿನ ಭಾಷೆ ಬಳಸಿ ಒಬ್ಬ ರೌಡಿಯಂತೆ ವರ್ತಿಸಿರುವುದನ್ನ ರೆಕಾರ್ಡ್ ಮಾಡಿ ವಾಟ್ಸಪ್‍ನಲ್ಲಿ ಹರಿಬಿಟ್ಟಿದ್ದಾರೆ.

    ಹರಿಹರ ತಾಲೂಕು ಕುರುಬ ಸಮುದಾಯದ ಕೆಲ ನಾಯಕರು ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಸ್ವಾಮೀಜಿ ಹಿಂದೆ ದುಂಬಾಲು ಬಿದಿದ್ದಾರೆ. ಅಲ್ಲದೆ ಮುಖಂಡರು ಬಹಿರಂಗವಾಗಿ ಕಿತ್ತಾಡುತ್ತಿದ್ದನ್ನ ಕಂಡಿದ್ದ ನಿರಂಜನಾನಂದಪುರಿ ಸ್ವಾಮೀಜಿ, ನಿಮ್ಮಂಥವರಿಂದಲೇ ಸಮಾಜದ ಮರ್ಯಾದೆ ಹಾಳಾಗಿರೋದು. ನಾನು ಮನಸ್ಸು ಮಾಡಿದ್ರೆ ಲಿಂಗಾಯಿತರನ್ನ ಎಂಎಲ್‍ಎ ಮಾಡ್ತಿನಿ ನೋಡ್ತಿರಾ. ನಾಚಿಕೆ ಆಗಲ್ವಾ, ಹೊಟ್ಟೆಗೆ ಅನ್ನ ತಿಂತಿರೋ ಏನ್ ತಿಂತಿರೋ. ಯಾವನ್ ಗೆಲ್ತಿರೋ ಗೆಲ್ರೋ ನೋಡೋಣ ಅಂತ ಫುಲ್ ಗರಂ ಆಗಿರೋದು ಆಡಿಯೋದಲ್ಲಿದೆ.

    ಜೂನ್ 2 ರಂದು ಮಠಕ್ಕೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ರು. ಈಶ್ವರಪ್ಪ ನೇತೃತ್ವದಲ್ಲಿ ಸಭೆ ಮುಗಿದ ಬಳಿಕ ಮಾಧ್ಯಮದವರನ್ನ ಹೊರಗಿಟ್ಟು ಸಭೆ ಮುಂದುವರಿಸಿದ ನಿರಂಜನಾನಂದಪುರಿ ಸ್ವಾಮೀಜಿ ಸಮಾಜದ ಮುಖಂಡರಿಗೆ ಸೊಂಟದ ಕೆಳಗಿನ ಭಾಷೆ ಬಳಸಿ ನಿಂದಿಸಿದ್ದಾರೆ. ಒಬ್ಬ ಖಾವಿಧಾರಿಯಾಗಿ ಹೀಗೆ ಪದ ಬಳಕೆ ಮಾಡಿರೋದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಸ್ವಾಮೀಜಿ ಭಕ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ರಾಜ್ಯದ ಹಲವು ಮಠದ ಪೀಠಾಧ್ಯಕ್ಷರು ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಕೂಡಲ ಸಂಗಮ ಪೀಠದ ಪೀಠಾಧ್ಯಕ್ಷೆ ಮಾತೇ ಮಹಾದೇವಿ ಹೇಳಿಕೆ ನೀಡಿದ್ದು, ಸ್ವಾಮೀಜಿಗಳು ಅತ್ಯಂತ ಸೌಜನ್ಯದಿಂದ ಮಾತನಾಡಬೇಕು. ಸ್ವಾಮೀಜಿಗಳು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಖಾವಿಧಾರಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಹೇಳಿದ ಮಾತೆ, ಈ ರೀತಿ ನಿಂದನೆ ಮಾಡಿ ಸ್ವಾಮೀಜಿ ಭಕ್ತರಿಗೆ ನೋವುಂಟು ಮಾಡಿದ್ದಾರೆ ಎಂದು ಹೇಳಿದರು.

    ಇನ್ನೊಂದೆಡೆ ಕುಡುಬ ಮಠವಾದ ರೇವಣಸಿದ್ದೇಶ್ವರ ಮಠದ ಬಸವರಾಜ್ ದೇವ್ರು ಸ್ವಾಮೀಜಿ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂಜನಾನಂದ ಸ್ವಾಮೀಜಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರುವ ಅವರು, ಕನಕ ಗುರು ಪೀಠದ ಸ್ವಾಮೀಜಿಗಳ ಬಗ್ಗೆ ಭಕ್ತರಾಗಿರುವ ಸಿಎಂ ಸಿದ್ಧರಾಮಯ್ಯ ಹಾಗೂ ಎಚ್‍ಎಂ ರೇವಣ್ಣ ತಮ್ಮ ನಿಲುವನ್ನ ತಿಳಿಸಲಿ ಎಂದು ಹೇಳಿದರು.

    ಈ ಬಗ್ಗೆ ದಾವಣಗೆರೆಯಲ್ಲಿ ಕಾಗಿನೆಲೆ ಪೀಠದ ಭಕ್ತ ಮಂಡಳಿ ಸುದ್ದಿಗೋಷ್ಠಿ ನಡೆಸಿದ್ದು, ಯಾರೋ ಕಿಡಿಗೇಡಿಗಳು, ಮಠದ ಏಳಿಗೆಯನ್ನು ಸಹಿಸದ ವ್ಯಕ್ತಿಗಳು ಈ ರೀತಿ ಮಾಡಿದ್ದಾರೆ. ಸ್ವಾಮೀಜಿಯವರು ಸಮಾಜದ ಏಳಿಗೆಗಾಗಿ ಶ್ರಮಿಸಿದವರು. ಸಮಾಜವನ್ನು ತಿದ್ದಲು ಈ ರೀತಿ ಪದ ಬಳಕೆ ಮಾಡಿದ್ದು, ಅದನ್ನು ಬಿಟ್ಟು ಬೇರೆ ಕಾರಣಕ್ಕೆ ಅಲ್ಲ ಎಂದು ಭಕ್ತ ಮಂಡಳಿಯ ಸದಸ್ಯ ಮಹೇಶ್ವರಪ್ಪ ಹೇಳಿದ್ರು. ಅಲ್ಲದೆ ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ರು.

    https://www.youtube.com/watch?v=6KrNjQ-Ih6U

  • ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ

    ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ

    ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಯೋಗೀಶ್ ಅಭಿನಯದ ದುನಿಯಾ 2 ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ ಮಾಡಲಾಯಿತು.

    ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಡಿಯೋ ಬಿಡುಗಡೆ ಮಾಡಿ, ಚಿತ್ರ ಶತದಿನ ಪ್ರದರ್ಶನ ಕಾಣಲಿ ಅಂತಾ ಹೇಳಿದ್ರು.

    10 ವರ್ಷಗಳ ಹಿಂದೆ ದುನಿಯಾ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೆ. ಇದೀಗ ದುನಿಯಾ 2 ಚಿತ್ರದಲ್ಲಿ ನಾಯಕನಾಗಿ ಮತ್ತೆ ಅಭಿನಯಿಸಿದ್ದೇನೆ. ಸಾಗರ ಮಾರಿಕಾಂಬೆ ಜಾತ್ರೆಯಲ್ಲಿ ಆಡಿಯೋ ಬಿಡುಗಡೆ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಈ ಸಿನೆಮಾವನ್ನೂ ಗೆಲ್ಲಿಸಿ ಅಂತಾ ಯೋಗೀಶ್ ಹೇಳಿದ್ರು.

    ಬಳಿಕ ಅಭಿಮಾನಿಗಳ ಆಗ್ರಹದ ಮೇರೆಗೆ ಹುಡುಗರು ಹಾಗೂ ಸಿದ್ಲಿಂಗು ಚಿತ್ರದ ಡೈಲಾಗ್ ಹೇಳಿ ರಂಜಿಸಿದರು. ಚಿತ್ರದ ಸಂಗೀತ ನಿರ್ದೇಶಕ ಭರತ್, ನಿರ್ದೇಶಕ ಹರಿ, ನಿರ್ಮಾಪಕರಾದ ಸಿದ್ದರಾಜು, ಶೃತಿ ವೆಂಕಟೇಶ್ ಇನ್ನಿತರರು ಇದ್ದರು.