Tag: ಆಡು

  • ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು

    ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು

    ಉಡುಪಿ: ಪೇಜಾವರ ಶ್ರೀ(Pejavara Shree) ವಿಶ್ವ ಪ್ರಸನ್ನ ತೀರ್ಥರನ್ನು ಕಂಡರೆ ಭಕ್ತರು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಉಡುಪಿಯ ನೀಲಾವರ ಗೋಶಾಲೆಯ ಆಡೊಂದು ತನ್ನೆರಡು ಕಾಲನ್ನು ಶ್ರೀಗಳ ಎದೆಗಿಟ್ಟು ಮೇವು ತಿಂದಿದೆ.

    ಪೇಜಾವರ ಶ್ರೀಗಳಿಗೆ ಪ್ರಾಣಿಗಳು ಅಂದ್ರೆ ವಿಶೇಷ ಪ್ರೀತಿ. ಉಡುಪಿಯ ನೀಲಾವರ ಗೋಶಾಲೆಯಲ್ಲಿ ಸಾವಿರಾರು ದೇಶಿಯ ಗೋವುಗಳನ್ನು ಸಾಕಿ ಸಲ ಹುತ್ತಿರುವುದು ಇದಕ್ಕೆ ಸಾಕ್ಷಿ. ನೀಲಾವರ ಗೋಶಾಲೆಯಲ್ಲಿ, ಎರಡು ಆಡುಗಳನ್ನು ಸಾಕಲಾಗುತ್ತಿದೆ. ಮಠದ ಅಧೀನದ ಪೆಣರ್ಂಕಿಲ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಂದರ್ಭದಲ್ಲಿ ಕುಟುಂಬವೊಂದು ಅಜದಾನ ಕೊಟ್ಟಿತ್ತು. ಆ ಎರಡು ಆಡುಗಳನ್ನು ನೀಲಾವರ ಗೋಶಾಲೆಗೆ ತಂದು ಸಾಕಲಾಗುತ್ತಿದೆ.

    ಪೇಜಾವರ ಶ್ರೀಗಳು ನೀಲಾವರ ಗೋಶಾಲೆಗೆ ಬಂದಾಗೆಲ್ಲ ಆ ಆಡುಗಳಿಗೆ(Goat) ಆಹಾರ ತಿನ್ನಿಸುತ್ತಾ ಅವುಗಳನ್ನು ಮುದ್ದು ಮಾಡುತ್ತಾರೆ. ಶ್ರೀಗಳು, ಇತ್ತೀಚೆಗೆ ನೀಲಾವರ ಗೋಶಾಲೆಗೆ ಬಂದಾಗ ಆಡಿಗೆ ಸೊಪ್ಪು ನೀಡಿದಾಗ ಆಡು ಪೇಜಾವರ ಶ್ರೀಗಳ ಎದೆ ಮೇಲೆ ತನ್ನ ಎರಡು ಕಾಲನ್ನಿಟ್ಟು, ಸೊಪ್ಪು ತಿಂದಿದೆ. ಸ್ಥಳದಲ್ಲೇ ಇದ್ದ ಭಕ್ತರೊಬ್ಬರು ತಮ್ಮ ಮೊಬೈಲ್‍ನಿಂದ ಇದನ್ನು ಸೆರೆ ಹಿಡಿದು ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ನೋಡಿದವರು ಶ್ರೀಗಳ ಪ್ರಾಣಿ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ತೆರವು: ಬೊಮ್ಮಾಯಿ‌

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಗೋಶಾಲೆಯ ಎಲ್ಲ ಗೋವುಗಳು ಇಲ್ಲಿನ ದೇವಸ್ಥಾನ ಕಚೇರಿ ಸುತ್ತಮುತ್ತಲಿನ ಪರಿಸರದಲ್ಲಿ ಓಡಾಡಿಕೊಂಡಿರುತ್ತವೆ. ಎರಡು ಆಡುಗಳು ಕೂಡ ನಮ್ಮ ಮೇಲೆ ಬಹಳ ಪ್ರೀತಿ ತೋರುತ್ತವೆ. ಗೋವುಗಳು ಸೇರಿದಂತೆ ಎಲ್ಲಾ ಪ್ರಾಣಿಗಳು ತೋರುವ ಪ್ರೀತಿ ಅದು ನಿಷ್ಕಲ್ಮಶ ಎಂದು ಸ್ವಾಮೀಜಿ ಹೇಳಿದರು. ಇದನ್ನೂ ಓದಿ: BBMP ಜೆಸಿಬಿ ಆಪರೇಷನ್ – ಒಂದೇ ವಾರದಲ್ಲಿ ನಲಪಾಡ್ ನಾಟಕ ಬಯಲು

    Live Tv
    [brid partner=56869869 player=32851 video=960834 autoplay=true]

  • ವಿಚಿತ್ರ ಮರಿಗೆ ಜನ್ಮ ನೀಡಿದ ಮೇಕೆ – ನೋಡಲು ಮುಗಿಬಿದ್ದ ಜನ

    ವಿಚಿತ್ರ ಮರಿಗೆ ಜನ್ಮ ನೀಡಿದ ಮೇಕೆ – ನೋಡಲು ಮುಗಿಬಿದ್ದ ಜನ

    – ದೇವರ ಆಶೀರ್ವಾದವೆಂದು ನಂಬಿದ ಮಾಲೀಕ

    ಲಕ್ನೋ: ಮೇಕೆಯೊಂದು ವಿಚಿತ್ರ ಮರಿಗೆ ಜನ್ಮ ನಿಡಿದ್ದು, ಇದೀಗ ಈ ಮರಿಯನ್ನು ನೋಡಲು ಸ್ಥಳೀಯರು ಮುಗಿಬಿದ್ದಿದ್ದಾರೆ. ಈ ಘಟನೆ ಉತ್ತರಪ್ರದೇಶದ ಬಿಂಜೋರ್ ಜಿಲ್ಲೆಯಲ್ಲಿ ನಡೆದಿದೆ.

    ಮೇಕೆ ಮರಿ ಹಣೆಯ ಮೇಲೆ ದೊಡ್ಡದಾದ ಕಣ್ಣು ಹೊಂದಿದೆ. ಮೂಗಿಲ್ಲದೆ ತಿರುಚಿದ ಬಾಯಿ ಹಾಗೂ ನಾಲಗೆಯನ್ನು ಸ್ವಲ್ಪ ಹೊರ ಹಾಕಿದಂತೆ ಇದೆ. ಇದೀಗ ಆ ಗ್ರಾಮದ ಜನರ ಆಕರ್ಷಣೀಯ ಪ್ರಾಣಿಯಾಗಿದೆ.

    ಇನ್ನು ಈ ಸಂಬಂಧ ನೂರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾಹತ್ ಗ್ರಾಮದ ನಿವಾಸಿ ಮಾಸಿಯಾ ಅವರು ಆಡುಗಳನ್ನು ಮನೆಯಲ್ಲಿ ಸಾಕುತ್ತಾರೆ. ಒಂದು ಎರಡು ದಿನಗಳ ಹಿಂದೆಯಷ್ಟೇ ಎರಡು ಮರಿಗಳಿಗೆ ಜನ್ಮ ನೀಡಿತ್ತು. ಅದರಲ್ಲಿ ಒಂದು ಸಾಮಾನ್ಯವಾಗಿದ್ದರೆ, ಇನ್ನೊಂದು ವಿಚಿತ್ರವಾಗಿದೆ. ಈ ವಿಚಾರ ಗ್ರಾಮದಲ್ಲಿ ಹಬ್ಬುತ್ತಿದ್ದಂತೆಯೇ ಸುತ್ತಮುತ್ತಲಿನ ಜನ ಮರಿಗಳನ್ನು ನೋಡಲು ದಾಂಗುಡಿ ಇಡುತ್ತಿದ್ದಾರೆ. ಹಣೆಯ ಮೇಲೆ ‘ಮೂರನೆಯ ಕಣ್ಣು’ ಇರುವುದರಿಂದ ಇದು ಶಿವನ ಅವತಾರ ಎಂದು ಕೆಲವರು ಹೇಳುತ್ತಿದ್ದಾರೆ.

    ಇತ್ತ ಮಾಲೀಕ ಮಾಸಿಯಾ ಅವರು ಮಾತ್ರ ಇದು ದೇವರ ಆಶೀರ್ವಾದ ಎಂದು ನಂಬಿದ್ದಾರೆ. ಹೀಗಾಗಿ ಕೆಲವರು ಈ ಮರಿಗೆ ಪೂಜೆ ಕೂಡ ಮಾಡಿದ್ದಾರೆ. ಇನ್ನು ಈ ಮಧ್ಯೆ ಪಶುವೈದ್ಯ ವೈದ್ಯ ಪುಷ್ಕರ್ ರತಿ ಪ್ರತಿಕ್ರಿಯಿಸಿ, ಪ್ರಾಣಿ ಅಸಹಜವಾಗಿದೆ ಮತ್ತು ಅಂತಹ ಪ್ರಾಣಿಗಳು ಹೆಚ್ಚು ಕಾಲ ಬದುಕುವುದಿಲ್ಲ. ಇದು ವಿಲಕ್ಷಣ ಮತ್ತು ದೈವಿಕ ಆಶೀರ್ವಾದ ಎಂದು ಪರಿಗಣಿಸಬಾರದು ಎಂದು ಹೇಳಿದರು.