Tag: ಆತ್ಮನಿರ್ಭರ್

  • ಭಾರತದಲ್ಲೂ ಶುರುವಾಗಲಿದೆ ಕ್ರ್ಯಾಶ್‌ ಟೆಸ್ಟಿಂಗ್‌ – ಆಟೋಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌: ನಿತಿನ್‌ ಗಡ್ಕರಿ

    ಭಾರತದಲ್ಲೂ ಶುರುವಾಗಲಿದೆ ಕ್ರ್ಯಾಶ್‌ ಟೆಸ್ಟಿಂಗ್‌ – ಆಟೋಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌: ನಿತಿನ್‌ ಗಡ್ಕರಿ

    ನವದೆಹಲಿ: ಭಾರತದ ಮಾರುಕಟ್ಟೆಯಲ್ಲಿರುವ ಕಾರುಗಳಿಗೆ ಸ್ಟಾರ್ ರೇಟಿಂಗ್ ನೀಡುವ ಹೊಸ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ಸೂಚಿಸಿದ್ದಾರೆ.

    ಕಾರುಗಳ ಹೊಸ ಮೌಲ್ಯಮಾಪನ ಕಾರ್ಯಕ್ರಮದ ಮೂಲಕ ಕ್ರ‍್ಯಾಶ್ ಟೆಸ್ಟ್‌ಗಳಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ ಭಾರತದಲ್ಲಿನ ಆಟೋ ಮೊಬೈಲ್‌ಗಳಿಗೆ ಸ್ಟಾರ್ ರೇಟಿಂಗ್‌ಗಳನ್ನು ನೀಡುವ ಕಾರ್ಯವಿಧಾನ ಇದಾಗಿದೆ. ಇದನ್ನೂ ಓದಿ: ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾರುಗಳ ಹೊಸ ಮೌಲ್ಯಮಾಪನ ಪದ್ಧತಿ ಭಾರತ್ ಎನ್‌ಸಿಎಪಿ ಗ್ರಾಹಕ ಕೇಂದ್ರಿತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಗ್ರಾಹಕರು ತಮ್ಮ ಸ್ಟಾರ್-ರೇಟಿಂಗ್‌ಗಳ ಆಧಾರದ ಮೇಲೆ ಸುರಕ್ಷಿತ ಕಾರುಗಳನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಇದು ಮೂಲ ಉಪಕರಣ ನಡುವೆ ಆರೋಗ್ಯಕರ ಸ್ಪರ್ಧೆಯನ್ನೂ ಉತ್ತೇಜಿಸುತ್ತದೆ. ಸುರಕ್ಷಿತ ವಾಹನಗಳನ್ನು ತಯಾರಿಸಲು ಭಾರತದಲ್ಲಿ ತಯಾರಕರು ಸಹ ನಿಯಮಗಳನ್ನು ಅನುಸರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ನಾನು ಕಾರುಗಳ ಹೊಸ ಅಸೆಸ್‌ಮೆಂಟ್ ಪ್ರೋಗ್ರಾಂ ಭಾರತ್ ಎನ್‌ಸಿಎಪಿಯನ್ನು ಪರಿಚಯಿಸಲು ಕರಡು ಜಿಎಸ್‌ಆರ್ ಅಧಿಸೂಚನೆಯನ್ನೂ ಅನುಮೋದಿಸಿದ್ದೇನೆ. ಇದರಲ್ಲಿ ಭಾರತದಲ್ಲಿನ ಆಟೋ ಮೊಬೈಲ್‌ಗಳು ಕ್ರ‍್ಯಾಶ್ ಟೆಸ್ಟ್‌ಗಳಲ್ಲಿನ  ಕಾರ್ಯಕ್ಷಮತೆಯ ಆಧಾರದ ಮೇಲೆ ಸ್ಟಾರ್ ರೇಟಿಂಗ್‌ಗಳನ್ನು ನೀಡಲಿವೆ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.

    ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ: ಕ್ರ‍್ಯಾಶ್ ಟೆಸ್ಟ್‌ಗಳ ಆಧಾರದ ಮೇಲೆ ಭಾರತೀಯ ಕಾರುಗಳ ಸ್ಟಾರ್ ರೇಟಿಂಗ್‌ಗಳು ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತವೆ. ಮಾತ್ರವಲ್ಲದೆ ಭಾರತೀಯ ಆಟೋ ಮೊಬೈಲ್‌ಗಳ ರಫ್ತು – ಯೋಗ್ಯತೆ ಹೆಚ್ಚಿಸಲೂ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

    ಆಟೋಮೊಬೈಲ್ ಹಬ್ ಆಗಿಸುವ ಉದ್ದೇಶ: ಭಾರತ್ ಎನ್‌ಸಿಎಪಿಯ ಪರೀಕ್ಷಾ ಪ್ರೋಟೋಕಾಲ್ ಅನ್ನು ಜಾಗತಿಕ ಕ್ರ‍್ಯಾಶ್-ಟೆಸ್ಟ್ ಪ್ರೋಟೋಕಾಲ್‌ಗಳೊಂದಿಗೆ ಜೋಡಿಸಲಾಗುತ್ತದೆ. ಈ ಮೂಲಕ EOMಗಳು ತಮ್ಮ ವಾಹನಗಳನ್ನು ಭಾರತದ ಆಂತರಿಕ ಪರೀಕ್ಷಾ ಸೌಲಭ್ಯಗಳಲ್ಲೇ ಪರೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಲ್ಲದೇ ಭಾರತ್ ಎನ್‌ಸಿಎಪಿ ನಮ್ಮ ಆಟೋಮೊಬೈಲ್ ಉದ್ಯಮವನ್ನು ಆತ್ಮನಿರ್ಭರ್ ಮಾಡುವಲ್ಲಿ ಭಾರತವನ್ನು ವಿಶ್ವದ ಅಗ್ರ ಆಟೋ ಮೊಬೈಲ್ ಹಬ್ ಮಾಡುವ ಉದ್ದೇಶ ಹೊಂದಿದ್ದೇವೆ. ಈ ಉದ್ದೇಶವನ್ನು ಸಾಧಿಸಿ ತೋರಿಸಲು ಆಟೋಮೊಬೈಲ್ ಉದ್ಯಮದಲ್ಲಿ ಕ್ರ‍್ಯಾಶ್ ಕಾರು ಟೆಸ್ಟಿಂಗ್ ಆಧರಿಸಿ ಸ್ಟಾರ್ ರೇಟಿಂಗ್ ನೀಡುವುದು ನಿರ್ಣಾಯಕ ಸಾಧನವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವ್ಯಾಖ್ಯಾನಿಸಿದ್ದಾರೆ.

    ಏನಿದು ಕ್ರ್ಯಾಶ್‌ ಟೆಸ್ಟ್?: ಕ್ರ‍್ಯಾಶ್ ಪರೀಕ್ಷೆಯು ತುರ್ತು ಪರಿಸ್ಥಿತಿಯ ಉದ್ದೇಶಗಳಿಗಾಗಿ ಮಾಡುವ ಪರೀಕ್ಷಾ ವಿಧಾನ. ಅಪಘಾತಗಳಲ್ಲಿ ಪ್ರಯಾಣಿಕರು ಮತ್ತು ಚಾಲಕರಿಗೆ ಅಪಾಯಗಳನ್ನು ಕಡಿಮೆ ಮಾಡುವ ರೀತಿಯಲ್ಲಿ ವಾಹನದ ರಚನೆಯ ಸುರಕ್ಷತೆಯನ್ನು ನಿರ್ಣಯಿಸುವುದು. ದೋಷಗಳನ್ನು ಗುರುತಿಸುವುದು ಹಾಗೂ ರಕ್ಷಣಾ ವ್ಯವಸ್ಥೆಯ ದಕ್ಷತೆಯನ್ನು ಸುಧಾರಿಸುವುದು.

    Live Tv

  • ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ಬೆಂಗಳೂರು: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲವಿದ್ದ ಬಿಪಿನ್ ರಾವತ್ ಅವರು ಸ್ಥಳೀಯವಾಗಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಪ್ರಾರಂಭಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಆರ್‌ಡಿಓ ಹಾಗೂ ಹಲವಾರು ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅವರ ಪ್ರೇರಣೆಯೂ ಇದೆ. ಹೊಸ ಆವಿಷ್ಕಾರ, ಉಪಕರಣಗಳನ್ನು ತಯಾರು ಮಾಡಿ ಸೇನೆಗಳಿಗೆ ಸರಬರಾಜು ಮಾಡುವುದಷ್ಟೇ ಅಲ್ಲ, ಖಾಸಗಿ ವಲಯದಲ್ಲಿಯೂ ಉತ್ಪಾದನೆ ಮಾಡಲು ಜ್ಞಾನವನ್ನು ವರ್ಗಾಯಿಸಿ ಬಹಳ ಪ್ರೋತ್ಸಾಹ ನೀಡಿದ್ದರು ಎಂದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್

    ಯುದ್ಧಭೂಮಿಯಲ್ಲಿ ಹೊಸ ವಿಧಾನಗಳ ಅನುಷ್ಠಾನ:
    ಮೂರು ಪಡೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ದುರ್ಮರಣದಿಂದ ಇಡೀ ದೇಶವೇ ದಿಗ್ಭ್ರಮೆಗೆ ಒಳಗಾಗಿದೆ. ಘಟನೆ ಹೇಗಾಯ್ತು ಎನ್ನುವುದು ಮುಖ್ಯವಾಗಿರುವುದರಿಂದ ವಾಯುಪಡೆ ತನಿಖೆಯನ್ನು ಕೈಗೊಂಡಿದೆ. ರಾವತ್ ಅವರು ಸೈನ್ಯವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರು. ಯುದ್ಧ ಭೂಮಿಯಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡು ಅನುಷ್ಠಾನವನ್ನೂ ಮಾಡಿದರು ಎಂದು ಹೇಳಿದರು.

    ದಿಟ್ಟ ನಿಲುವು:
    ಭಾರತದ ಸುರಕ್ಷತೆಯ ಬಗ್ಗೆ ಹಿಂದೆಂದೂ ತೆಗೆದುಕೊಂಡಿರದ ಹಲವಾರು ದಿಟ್ಟ ನಿಲುವನ್ನು ಪ್ರದರ್ಶಿಸಿದ್ದ ಅವರು ಚೀನಾ, ಭಾರತದ ಗಡಿಯಲ್ಲಿ ನಡೆದ ಚಕಮಕಿಯಲ್ಲಿ ದೇಶವನ್ನು ಬಹಳ ಗಟ್ಟಿಯಾಗಿ ನಿಲ್ಲಿಸಿ, ಚೀನಾವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಅವರ ನಾಯಕತ್ವ ಮುಂದಿನ ದಿನಗಳಲ್ಲಿ ನಮಗೆ ಬಹಳ ಅವಶ್ಯಕವಾಗಿತ್ತು ಎಂದರು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಅವ್ರು ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

    ಜೀವನ ಚರಿತ್ರೆ ಪ್ರೇರಣಾದಾಯಕ:
    ಅವರ ಸೇವೆಯನ್ನು ಗುರುತಿಸಿಯೇ ನಮ್ಮ ಪ್ರಧಾನ ಮಂತ್ರಿಗಳು ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಇಡೀ ಭಾರತ ಒಬ್ಬ ನಾಯಕನನ್ನು ಕಳೆದುಕೊಂಡಿದೆ. ನಮ್ಮೆಲ್ಲರಿಗೂ ಅವರ ಜೀವನ ಚರಿತ್ರೆ ಪ್ರೇರಣಾದಾಯಕವಾಗಿದೆ. ಅವರ ತ್ಯಾಗ ಬಲಿದಾನಗಳ ಬಗ್ಗೆ ಮಕ್ಕಳಿಗೆ ತಿಳಿಸುವಂತಾಗಬೇಕು. ಮುಂದಿನ ಪೀಳಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ನಿಜವಾದ ಶ್ರದ್ದಾಂಜಲಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

    PM MODI

    ಕರ್ನಾಟಕದೊಂದಿಗೆ ಸಂಬಂಧ:
    ಕರ್ನಾಟಕದೊಂದಿಗೆ ಅವರು ಅವಿನಾಭಾವ ಸಂಬಂಧ ಹೊಂದಿದ್ದರು. ಕೊಡಗಿನೊಂದಿಗೆ ವಿಶೇಷ ಸಂಬಂಧ ಅವರಿಗಿತ್ತು. ಜನರಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಗೌರವವಿತ್ತು. ಅವರ ಶೌರ್ಯವನ್ನು ಪದೇ, ಪದೇ ಹೇಳುತ್ತಿದ್ದರು. ಇಲ್ಲಿನ ಜನರು ಹಾಗೂ ಸೈನಿಕರ ಬಗ್ಗೆ ಪ್ರೀತಿಯನ್ನು ಹೊಂದಿದ್ದರು ಎಂದು ಸ್ಮರಿಸಿದರು. ಇದನ್ನೂ ಓದಿ: ಬ್ಯಾಂಕ್‍ಗಳಿಗೆ 4 ದಿನ ರಜೆ- ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ