Tag: ಆತ್ಮಾಹುತಿ ದಾಳಿ

  • ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ನವದೆಹಲಿ: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ (Waziristan) ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ (Suicide Bomber Attack) ಭಾರತವೇ ಹೊಣೆ ಎಂದು ಆರೋಪಿಸಿದ್ದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.

    ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದು, ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ. ಉಸುದ್-ಅಲ್-ಹರ್ಬ್ ಸಂಘಟನೆ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ. ಆದರೆ ದಾಳಿಯ ಹಿಂದೆ ಭಾರತದ ಪಾತ್ರವಿದೆ ಎಂದು ಪಾಕ್ ಆರೋಪಿಸಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿ – ನಾಳೆ ಕಾವೇರಿ ಬಾಗಿನ ಅರ್ಪಿಸಿ ಸಿಎಂ ಹೊಸ ದಾಖಲೆ

    ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ವಿದೇಶಾಂಗ ಸಚಿವಾಲಯ ( Ministry of External Affairs), ವಜೀರಿಸ್ತಾನ್‌ನಲ್ಲಿ ಜೂನ್ 28ರಂದು ನಡೆದಿರುವ ದಾಳಿಗೆ ಸಂಬಂಧಿಸಿದಂತೆ ಭಾರತವನ್ನು ದೂಷಿಸಲು ಯತ್ನಿಸಿದ ಪಾಕಿಸ್ತಾನದ ಹೇಳಿಕೆಯನ್ನು ಗಮನಿಸಿದ್ದೇವೆ. ಪಾಕ್ ಆರೋಪವು ತಿರಸ್ಕಾರಕ್ಕೆ ಅರ್ಹವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಿ- ರನ್ಯಾ ರಾವ್‌ಗೆ ಮಹಿಳಾ ಕೈದಿಗಳಿಂದಲೇ ಕಿರುಕುಳ!

    ಘಟನೆ ಏನು?
    ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಂಬ್ ಸ್ಫೋಟಗೊಂಡಿದೆ. ಇದರಿಂದ 13 ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ಸ್ಯಾನಿಟರಿ ಪ್ಯಾಡ್ ಸುಟ್ಟ ಕೇಸ್ – ಫರಹತಾಬಾದ್ ಪಿಹೆಚ್‌ಸಿ ವೈದ್ಯಾಧಿಕಾರಿಗೆ ನೋಟಿಸ್

  • ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

    ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

    ಇಸ್ಲಾಮಾಬಾದ್: ಸೋಮವಾರ ಪಾಕಿಸ್ತಾನದ (Pakistan) ಪೇಶಾವರದಲ್ಲಿ (Peshawar) ಮಸೀದಿಯೊಳಗೆ (Mosque) ನಡೆದ ಆತ್ಮಾಹುತಿ ದಾಳಿಗೆ (Suicide Attack) ಇಲ್ಲಿಯವರೆಗೆ 89 ಜನರು ಮೃತಪಟ್ಟಿದ್ದಾರೆ ಹಾಗೂ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಸೋಮವಾರ ಮಧ್ಯಾಹ್ನ ಪೇಶಾವರದ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಆತ್ಮಾಹುತಿ ದಾಳಿ ನಡೆದಿತ್ತು. ಇದರಿಂದ ಮಸೀದಿ ಛಾವಣಿ ಕುಸಿದಿದ್ದು, ಅಲ್ಲಿ ನೆರೆದಿದ್ದ ಜನರ ಮೇಲೆ ಬಿದ್ದಿದೆ. ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಇನ್ನು ಕೂಡಾ ಮುಂದುವರಿದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 89ಕ್ಕೇರಿದೆ.

    ಪ್ರತಿನಿತ್ಯ ಈ ಮಸೀದಿಯಲ್ಲಿ ಸುಮಾರು 300-400 ಜನರು ಪ್ರಾರ್ಥನೆಗಾಗಿ ಸೇರುತ್ತಾರೆ. ಸ್ಫೋಟ ಸಂಭವಿಸಿದ ಸಂದರ್ಭ 300ಕ್ಕೂ ಹೆಚ್ಚು ಜನರು ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಅವಶೇಷಗಳಡಿ ಇನ್ನೂ ಹಲವರು ಸಿಕ್ಕಿ ಬಿದ್ದಿರುವ ಶಂಕೆಯಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

    ದಾಳಿಯನ್ನು ಭಯೋತ್ಪಾದನಾ ಸಂಘಟನೆ ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ (TTP) ನಡೆಸಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ತಳ್ಳಿಹಾಕಿರುವ ಟಿಟಿಪಿ ವಕ್ತಾರ ಮೊಹಮ್ಮದ್ ಖುರಾಸಾನಿ, ಮಸೀದಿ ಅಥವಾ ಯಾವುದೇ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಯನ್ನು ನಡೆಸುವುದು ನಮ್ಮ ನೀತಿಗಳಲ್ಲಿ ಒಳಗೊಂಡಿಲ್ಲ ಎಂದಿದ್ದಾರೆ.

    ಖೈಬರ್ ಪಖ್ತುಂಖ್ವಾದ ಹಂಗಾಮಿ ಮುಖ್ಯಮಂತ್ರಿ ಮುಹಮ್ಮದ್ ಅಜಂ ಖಾನ್ ಅವರು ದಾಳಿಯಿಂದ ಸಾವನ್ನಪ್ಪಿದವರಿಗಾಗಿ ಮಂಗಳವಾರ ರಾಜ್ಯದಲ್ಲಿ ಶೋಕಾಚರಣೆಯ ದಿನವನ್ನು ಘೋಷಿಸಿದ್ದಾರೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿಸ್ತಾರ ವಿಮಾನದಲ್ಲಿ ಅರೆಬೆತ್ತಲಾಗಿ ಓಡಾಡಿದ ಮಹಿಳೆ – ಗಲಾಟೆ ಮಾಡಿ ಸಿಬ್ಬಂದಿ ಮೇಲೆ ಹಲ್ಲೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ವಿಶ್ವವಿದ್ಯಾಲಯದ ಬಳಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಚೀನಾದ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

    ಮಂಗಳವಾರ ಕರಾಚಿ ವಿಶ್ವವಿದ್ಯಾಲಯದ ಕನ್ಫ್ಯೂಷಿಯಸ್ ಇನ್ಸ್‌ಟಿಟ್ಯೂಟ್ ಬಳಿ ನಡೆದ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಚೀನಿ ಪ್ರಜೆಗಳನ್ನು ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬರ್ ನಡೆಸಿರುವುದಾಗಿ ತಿಳಿದು ಬಂದಿದೆ.

    ವರದಿಗಳ ಪ್ರಕಾರ ವಿಶ್ವವಿದ್ಯಾನಿಲಯದಲ್ಲಿ ಬೋಧನೆ ಮುಗಿಸಿ ಹಿಂದಿರುಗುತ್ತಿದ್ದ ವ್ಯಾನ್‌ನಲ್ಲಿ ಸ್ಫೋಟ ಸಂಭವಿಸಿದೆ. ವ್ಯಾನ್‌ನಲ್ಲಿ ಮೂವರು ಚೀನಾದ ಹಾಗೂ ಇತರ ಉಪನ್ಯಾಸಕರು ಇದ್ದರು. ಒಟ್ಟು 8 ಜನರಿದ್ದ ವ್ಯಾನ್‌ನಲ್ಲಿ ರಿಮೋಟ್ ಕಂಟ್ರೋಲ್ ಮುಖಾಂತರ ಸ್ಫೋಟವನ್ನು ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತಾಳೆ ಎಣ್ಣೆ ರಫ್ತು ನಿಷೇಧ ವಿಸ್ತರಿಸಲು ಇಂಡೋನೇಷ್ಯಾ ಚಿಂತನೆ

     

    ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಮಜೀದ್ ಬ್ರಿಗೇಡ್ ಸಂಘಟನೆ ಈ ಕೃತ್ಯವನ್ನು ತಾನು ನಡೆಸಿದೆ ಎಂದು ಹೇಳಿದೆ. ಮಹಿಳಾ ಬಾಂಬರ್ ಶಾರಿ ಬಲೋಚ್ ಈ ದಾಳಿ ನಡೆಸಿದ್ದಾಳೆ.

    ಘಟನೆ ಹೇಗಾಯ್ತು?
    ವಿಶ್ವವಿದ್ಯಾಲಯದ ಬಳಿಯಲ್ಲಿರುವ ರಸ್ತೆ ಬದಿ ನಿಂತಿದ್ದ ಮಹಿಳಾ ಬಾಂಬರ್ ಚೀನಾ ಉಪನ್ಯಾಸಕರನ್ನು ಗುರಿಯಾಗಿಸಿಕೊಂಡಿದ್ದಳು. ಉಪನ್ಯಾಸಕರಿದ್ದ ವ್ಯಾನ್ ಮಹಿಳೆ ಬಳಿ ಬರುತ್ತಿದ್ದಂತೆ ಆಕೆ ತನ್ನ ಕೈಯಲ್ಲಿದ್ದ ರಿಮೋಟ್ ಕಂಟ್ರೋಲ್ ಅನ್ನು ಒತ್ತಿ, ಸ್ಫೋಟವನ್ನು ನಡೆಸಿದ್ದಾಳೆ. ಈ ವೇಳೆ ಭಾರೀ ಸ್ಫೋಟ ಸಂಭವಿಸಿ, ಬಾಂಬರ್ ಸೇರಿದಂತೆ ಮೂವರು ಚೀನಾದ ಉಪನ್ಯಾಸಕರು ಸಾವನ್ನಪ್ಪಿದ್ದಾರೆ.

    ಕಳೆದ ವರ್ಷ ಜುಲೈನಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಇಬ್ಬರು ಚೀನಾ ಪ್ರಜೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಚೀನಾದ ಎಂಜಿನಿಯರ್‌ಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಐಇಡಿ ದಾಳಿ ನಡೆಸಿತ್ತು. ಘಟನೆಯಲ್ಲಿ 9 ಚೀನಾದ ಪ್ರಜೆಗಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ: ಅಮೆರಿಕ

  • ಕನ್ನಡಿಗರು ಸೇರಿ 321 ಮಂದಿಯನ್ನು ಹತ್ಯೆಗೈದಿದ್ದು ನಾವೇ ಎಂದ ಐಸಿಸ್

    ಕನ್ನಡಿಗರು ಸೇರಿ 321 ಮಂದಿಯನ್ನು ಹತ್ಯೆಗೈದಿದ್ದು ನಾವೇ ಎಂದ ಐಸಿಸ್

    – ಆತ್ಮಾಹುತಿ ದಾಳಿ ನಡೆಸಿದ್ದು ಶ್ರೀಮಂತ ಉದ್ಯಮಿಯ ಪುತ್ರರು

    ಕೊಲಂಬೋ: ಶ್ರೀಲಂಕಾದಲ್ಲಿ 321 ಮಂದಿ ಸಾವನ್ನಪ್ಪಿ, 500 ಮಂದಿ ಗಾಯಗೊಂಡಿರುವ ಸರಣಿ ಬಾಂಬ್ ಸ್ಫೋಟವನ್ನು ನಾವೇ ನಡೆಸಿದ್ದೇವೆ ಎಂದು ಐಸಿಸ್ ಉಗ್ರ ಸಂಘಟನೆ ಹೇಳಿಕೊಂಡಿದೆ.

    ಘಟನೆ ನಡೆದ 2 ದಿನಗಳ ನಂತರ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಶ್ರೀಲಂಕಾ ಕ್ರಿಶ್ಚಿಯನ್ ಹಾಗೂ ವಿದೇಶಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ತಿಳಿಸಿದೆ. ತನ್ನ ‘ಅಮಾಕ್’ ನ್ಯೂಸ್ ಮೂಲಕ ಐಸಿಸ್ ಈ ವಿಚಾರವನ್ನು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಆದರೆ ಈ ಬಗ್ಗೆ ಸಂಘಟನೆ ಯಾವುದೇ ಸಾಕ್ಷಿಗಳನ್ನು ನೀಡಿಲ್ಲ. ಒಟ್ಟಿನಲ್ಲಿ ಈಗ ಇರಾಕ್, ಸಿರಿಯಾ ಬಳಿಕ ಶ್ರೀಲಂಕಾದಲ್ಲೂ ಐಸಿಸ್ ತನ್ನ ಜಾಲವನ್ನು ಹಬ್ಬಿಸಿರುವುದು ದೃಢಪಟ್ಟಿದೆ.

    ಇದಕ್ಕೂ ಮೊದಲು ಈಸ್ಟರ್ ಬಾಂಬ್ ದಾಳಿ ನ್ಯೂಜಿಲೆಂಡ್ ನಲ್ಲಿ ನಡೆದ ಮಸೀದಿಗಳ ಮೇಲಿನ ದಾಳಿಗೆ ಪ್ರತಿಯಾಗಿ ನಡೆಸಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ಶಂಕಿಸಿದ್ದರು.

    ಇತ್ತ ಇಬ್ಬರು ಪಾತಕಿಗಳು ಚರ್ಚ್ ಹಾಗೂ ಹೋಟೆಲ್ ದಾಳಿ ನಡೆಸಿದ ವಿಡಿಯೋ ಲಭ್ಯವಾಗಿದ್ದು, ಕೊಲಂಬೋದ ಶ್ರೀಮಂತ ವ್ಯಾಪಾರಿಯ ಪುತ್ರರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಬ್ಬರು ಆತ್ಮಾಹುತಿ ದಾಳಿಕೋರರು ಕೂಡ ಸಹೋದರರೇ ಆಗಿದ್ದು, ಕೊಲಂಬೋದ ಮಸಾಲೆ ಮಾರಾಟ ಉದ್ಯಮಿಯ ಪುತ್ರರು ಎಂದು ವರದಿಯಾಗಿದೆ.

    ಘಟನೆ ಸಂಬಂಧ ಶ್ರೀಲಂಕಾ ಪೊಲೀಸ್ ತನಿಖೆ ನಡೆಸಿ ವಶಕ್ಕೆ ಪಡೆದಿರುವ 40ಕ್ಕೂ ಹೆಚ್ಚು ಮಂದಿಯನ್ನು ಪ್ರಶ್ನಿಸಲಾಗಿದೆ. ಅಲ್ಲದೇ ಸ್ಥಳೀಯರು ನೀಡಿದ ಮಾಹಿತಿ ಅನ್ವಯ ಸಿರಿಯಾ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಕೊಲಂಬೋದಲ್ಲಿ ನಡೆದ ದಾಳಿಯಲ್ಲಿ ಮೊದಲ 6 ದಾಳಿಗಳಲ್ಲಿ ಮೂರು ಚರ್ಚ್‍ನಲ್ಲಿ ಹಾಗೂ 3 ಹೋಟೆಲ್ ಗಳಲ್ಲಿ ನಡೆಸಲಾಗಿತ್ತು. ಕೇವಲ 20 ನಿಮಿಷಗಳ ಅವಧಿಯಲ್ಲಿ ಈ ದಾಳಿ ನಡೆಸಲಾಗಿತ್ತು. ಆ ಬಳಿಕ ಮತ್ತೆರಡು ಬಾಂಬ್ ಸ್ಫೋಟಗಳು ನಡೆದಿತ್ತು. ಘಟನೆಯಲ್ಲಿ 38 ವಿದೇಶಿಯರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು ಶ್ರೀಲಂಕಾ ಸರ್ಕಾರ ತಿಳಿಸಿದ್ದು, ಇದರಲ್ಲಿ ಭಾರತ ಸೇರಿದಂತೆ ಇಂಗ್ಲೆಂಡ್, ಯುಎಸ್, ಆಸ್ಟ್ರೇಲಿಯಾ, ತುರ್ಕಿಷ್, ಚೀನಾ, ಡ್ಯಾನಿಷ್, ಡಚ್ ಮತ್ತು ಪೋರ್ಚುಗಿಸ್ ಪ್ರಜೆಗಳು ಸೇರಿದ್ದಾರೆ.

  • ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

    ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

    – ನಾಲ್ವರು ಯೋಧರಿಗೆ ಗಾಯ

    ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ತುತ್ತಾದ ಪುಲ್ವಾಮಾದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಇಂದು ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ.

    40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ ಆರೋಪಿಗಳು ಮನೆಯೊಂದರಲ್ಲಿ ಅಡಗಿರುವ ಖಚಿತ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿದೆ. ಕಳೆದ ನಾಲ್ಕು ಗಂಟೆಗಳಿಂದ ಉಗ್ರರು ಮತ್ತು ಸೇನೆ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಬ್ಬರಿಂದ ಮೂವರು ಉಗ್ರರನ್ನು ಸೇನೆ ಸುತ್ತವರಿದಿದೆ. ಇದುವರೆಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.

    40 ಯೋಧರು ಹುತಾತ್ಮ:
    ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ. ಇದನ್ನೂ ಓದಿ:  ಛಿದ್ರ ಛಿದ್ರವಾದ ಆ ಬಸ್ಸಿನಲ್ಲಿದ್ದ 40 ವೀರ ಯೋಧರ ರೋಚಕ ಕಥೆ ನಿಮಗೆ ತಿಳಿದಿರಲೇಬೇಕು

    ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದರು. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದರು. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ದಾಳಿ ಬಗ್ಗೆ ಮೊದ್ಲೇ ಸಿಕ್ಕಿತ್ತು ಸುಳಿವು- ಕಣಿವೆ ರಾಜ್ಯದ ಖಾಕಿಗಳಿಗೆ ಬಂದಿತ್ತು ಐಬಿ ಪತ್ರ

    ದಾಳಿ ಬಗ್ಗೆ ಮೊದ್ಲೇ ಸಿಕ್ಕಿತ್ತು ಸುಳಿವು- ಕಣಿವೆ ರಾಜ್ಯದ ಖಾಕಿಗಳಿಗೆ ಬಂದಿತ್ತು ಐಬಿ ಪತ್ರ

    ಪುಲ್ವಾಮಾ(ಜಮ್ಮು-ಕಾಶ್ಮೀರ): ಪುಲ್ವಾಮಾದಲ್ಲಿ ಉಗ್ರ ನಡೆಸಿದ ದಾಳಿಯ ಬಗ್ಗೆ ಮೊದಲೇ ಮುನ್ಸೂಚನೆ ಸಿಕ್ಕಿತ್ತು. ಗುಪ್ತಚರ ಇಲಾಖೆ ನೀಡಿದ್ದ ಆ ಅರ್ಜೆಂಟ್ ಮ್ಯಾಟರ್ ಕಡೆಗಣಿಸಿದ್ದಕ್ಕೆ 40 ಯೋಧರು ಬಲಿ ಆದ್ರಾ ಅನ್ನೋ ಪ್ರಶ್ನೆಯೊಂದು ಇದೀಗ ಎಲ್ಲರ ಮನದಲ್ಲಿ ಕಾಡುತ್ತಿದೆ.

    ಹೌದು. ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆಯೋ 6 ದಿನ ಮೊದಲೇ ತುರ್ತು ಲೆಟರೊಂದು ಹೋಗಿತ್ತು. ಈ ತುರ್ತು ಸಂದೇಶದ ಸಿಗ್ನಲ್ ಜಮ್ಮು ಕಾಶ್ಮೀರದ ಎಲ್ಲಾ ಭದ್ರತಾ ಪಡೆಗಳಿಗೆ ಹೋಗಿತ್ತು. ಇದನ್ನು ಪರಿಗಣಿಸಿ ಮೊದಲೇ ಎಚ್ಚೆತ್ತುಕೊಂಡಿದಿದ್ದರೆ ಈ ಭಯಾನಕ ದಾಳಿಯನ್ನು ತಪ್ಪಿಸಬಹುದಾಗಿತ್ತು. ಸಿಆರ್ ಪಿಎಫ್ ಗೆ ಬರೆದಿದ್ದ ಈ ಗೌಪ್ಯ ಮತ್ತು ತುರ್ತು ಸಂದೇಶ ಇದಿಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಇದನ್ನೂ ಓದಿ: ಕಾರು ಬಾಂಬ್ ಸೇನೆಗೆ ಹೊಸ ತಲೆನೋವಾಗಿದ್ದು ಹೇಗೆ? ಏನಿದು ವಿಬಿಐಇಡಿ?

    ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ನೀಡಿತ್ತಾ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದ್ರೆ, ಹೌದು ಅಂತಿದೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಪತ್ರ. ಐಇಡಿ ಸ್ಫೋಟಕ ಬಳಕೆಯ ಕುರಿತು 6 ದಿನಗಳ ಹಿಂದೆಯೇ ಇಂಟಲಿಜೆನ್ಸ್ ಬ್ಯೂರೋಗೆ ಮಾಹಿತಿ ಇತ್ತು. ಈ ಬಗ್ಗೆ ಕಾಶ್ಮೀರದ ಎಲ್ಲಾ ಭಾಗಗಳಿಗೆ ಅರ್ಜೆಂಟ್ ಮ್ಯಾಟರ್ ಅಂತ ಪತ್ರಗಳನ್ನು ಕೂಡಾ ರವಾನಿಸಲಾಗಿತ್ತು ಎನ್ನಲಾಗ್ತಿದೆ. ಆ ಪತ್ರದ ಪ್ರತಿ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಪಾಕ್ ಗಡಿ ಬಳಿಯೇ ವಾಯುಪಡೆ ಶಕ್ತಿ ಪ್ರದರ್ಶನ – ಎಚ್ಚರಿಕೆ ಸಂದೇಶ ರವಾನಿಸಿದ ಭಾರತ – ವಿಡಿಯೋ ನೋಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

    ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

    ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ.

    ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಸಂಪುಟ ಸಮಿತಿ ಸಭೆ ನಡೆಸುತ್ತಿದ್ದು, ಈ ಮಧ್ಯೆ ಇಂದು ಜಮ್ಮು ಕಾಶ್ಮೀರದ ಪುಲ್ವಾಮಾಗೆ ಗೃಹಸಚಿವ ರಾಜನಾಥ್ ಸಿಂಗ್ ಮತ್ತು ಎನ್‍ಐಎ ತಂಡ ಭೇಟಿ ನೀಡಲಿದೆ.

    ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಬಂದ್‍ಗೆ ಕರೆ ನೀಡಲಾಗಿದೆ. ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ದಾಳಿಯ ಬಗ್ಗೆ ಮುನ್ಸೂಚನೆ ಇತ್ತು. ಆದ್ರೂ ಸರಿಯಾದ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದೇ ದಾಳಿಗೆ ಕಾರಣ ಅಂತಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು

    ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು

    ಸಂತೋಷ್ ದಿಂಡಗೂರು
    ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ರಾಜ್ಯದ ಯೋಧರೊಬ್ಬರು ವೀರಮರಣವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಕಾಲೋನಿಯ ಗುರು.ಎಚ್. (33) ಹುತಾತ್ಮ ಯೋಧ.

    ಗುರು ಅವರು ಸಿಆರ್‌ಪಿಎಫ್‌ ನ 82ನೇ ಬೆಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದು, 2011ರಲ್ಲಿ ಸಿಆರ್‌ಪಿಎಫ್‌ ಗೆ ಸೇರ್ಪಡೆಯಾಗಿದ್ದರು. ಜಾರ್ಖಂಡ್‍ ನಲ್ಲಿ 94ನೇ ಬೆಟಾಲಿಯನ್ ನಲ್ಲಿದ್ದ ಗುರು ಬಳಿಕ ಶ್ರೀನಗರದಲ್ಲಿ ಸೇವೆ ಸಲ್ಲಿಸಲು ನಿಯೋಜನೆಗೊಂಡಿದ್ದರು.

    ಹುತಾತ್ಮ ಯೋಧ ಗುರು ಯಾರು?: ಗುಡಿಗೆರೆ ಕಾಲೋನಿಯ ಹೊನ್ನಯ್ಯ ಹಾಗೂ ಚಿಕ್ಕೋಳಮ್ಮ ದಂಪತಿಯ ಮೂವರು ಮಕ್ಕಳಲ್ಲಿ ಹಿರಿಯ ಪುತ್ರ ಗುರು. ಇವರಿಗೆ ಇಬ್ಬರು ತಮ್ಮಂದಿರಿದ್ದು ಮಧು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದು, ಆನಂದ್ ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಗುರು ಅವರ ಅಪ್ಪ ಅಮ್ಮ ಕೆಎಂ ದೊಡ್ಡಿಯಲ್ಲಿ ಇಸ್ತ್ರಿ ಅಂಗಡಿ ಇಟ್ಟುಕೊಂಡು ದುಡಿಯುತ್ತಿದ್ದರು.

    ಒಂದು ವರ್ಷ ಹಿಂದೆ ಗೃಹ ಪ್ರವೇಶ ಮಾಡಿಕೊಂಡಿದ್ದ ಗುರು ಅವರಿಗೆ 10 ತಿಂಗಳ ಹಿಂದೆ ಮದುವೆಯಾಗಿತ್ತು. ಸ್ವಂತ ಮಾವನ ಮಗಳಾದ, ಹಲಗೂರು ಬಳಿಯ ಸಾಸಲಾಪುರ ಗ್ರಾಮದವರಾದ ಕಲಾವತಿಯನ್ನು ವಿವಾಹವಾಗಿದ್ದರು. 15 ದಿನದ ಹಿಂದೆ ರಜೆಗೆಂದು ಬಂದಿದ್ದ ಗುರು ಅವರು ಫೆಬ್ರವರಿ 10ರಂದು ಗುಡಿಗೆರೆ ಕಾಲೋನಿಯಿಂದ ರಜೆ ಮುಗಿಸಿಕೊಂಡು ಹೊರಟಿದ್ದರು. ಹೀಗೆ ಹೊರಟಿದ್ದ ಗುರು ಗುರುವಾರವಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಕರ್ತವ್ಯಕ್ಕೆ ವಾಪಸ್ ಬರುತ್ತಿದ್ದಂತೆಯೇ ಮಾರಣಹೋಮದಲ್ಲಿ ಸಾವನ್ನಪ್ಪಿದ್ದು ವಿಧಿ ವಿಪರ್ಯಾಸ. ಗುರು ಸಾವಿನ ಸುದ್ದಿ ಕೇಳಿ ಗುಡಿಗೆರೆ ಕಾಲೋನಿಯ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇಲ್ಲೇ ಬಂದ್ಬಿಡು ಅಂದಿದ್ದರಂತೆ ತಾಯಿ!: ಮೊನ್ನೆ ಫೆಬ್ರವರಿ 10ರಂದು ರಜೆ ಮುಗಿಸಿ ವಾಪಸ್ ತೆರಳುವ ಮುನ್ನ ಗುರು ತಾಯಿ ಚಿಕ್ಕೋಳಮ್ಮ, ಏನಕ್ಕೆ ಹೋಗ್ತೀಯಾ..? ಈ ಕೆಲಸ ಬಿಟ್ಟು ಬಿಡು, ಇಲ್ಲೇ ಇರು ಎಂದು ಗುರುವಿಗೆ ಕಿವಿ ಮಾತು ಹೇಳಿದ್ದರಂತೆ. ಆದರೆ ಇದಕ್ಕೆ ಗುರು, ನಾನು ದೇಶ ಸೇವೆ ಮಾಡಬೇಕು. ನನ್ನಂತ ತುಂಬಾ ಜನರು ಯೋಧರಿದ್ದಾರೆ. ನಾವು ಕೋಟ್ಯಂತರ ಜನರ ರಕ್ಷಣೆ ಮಾಡಬೇಕು. ನಾನು ಕೆಲಸ ಬಿಡಲ್ಲ ಎಂದು ಹೇಳಿದ್ದರಂತೆ. ಪುತ್ರನ ಸಾವಿನ ವಿಷಯ ತಿಳಿದು ತಂದೆ ಹೊನ್ನಯ್ಯ ಅಸ್ವಸ್ಥರಾಗಿದ್ದಾರೆ. ಸದ್ಯ ಗುರು ಪತ್ನಿ ಕಲಾವತಿ ತವರು ಮನೆಯಲ್ಲಿದ್ದು, ಸಂಬಂಧಿಕರ ಜೊತೆ ಗುಡಿಗೆರೆ ಕಾಲೋನಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    https://youtu.be/5JqTWRx0JWA

    ಘಟನೆ ವಿವರ: ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದ. ಈ ದಾಳಿಯಲ್ಲಿ ಇದುವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೇನಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ ಕೇಂದ್ರ ಸಚಿವ ಸಂಪುಟದ ತುರ್ತು ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪುಲ್ವಾಮಾಗೆ ಭೇಟಿ ನೀಡಲಿದ್ದಾರೆ.

  • ಕುಪ್ವಾರದಲ್ಲಿ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ- 3 ಯೋಧರು ಹುತಾತ್ಮ

    ಕುಪ್ವಾರದಲ್ಲಿ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ- 3 ಯೋಧರು ಹುತಾತ್ಮ

    – ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

    ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಸೇನಾ ನೆಲೆ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ 3 ಯೋಧರು ಹುತಾತ್ಮರಾಗಿದ್ದಾರೆ.

    ಇಂದು ಮುಂಜಾನೆ 4 ಗಂಟೆಯ ವೇಳೆಗೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಯೋಧರು ಮತ್ತು ಉಗ್ರರ ಮಧ್ಯೆ 4 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಯೋಧರ ಕಾರ್ಯಾಚರಣೆ ಮುಂದುವರೆದಿದೆ.

    ಕಳೆದ ವರ್ಷ ಉರಿ ಸೇನಾ ನೆಲೆಯ ಮೇಲೆ ಪಾಕಿಸ್ತಾನದಿಂದ ನುಸುಳಿ ಬಂದ ಉಗ್ರರು ನಡೆಸಿದ ದಾಳಿಯಲ್ಲಿ  19 ಯೋಧರು ಹುತಾತ್ಮರಾಗಿದ್ದರು.