Tag: ಆದಾರ್ ಪೂನಾವಾಲಾ

  • ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು: ಆದಾರ್ ಪೂನಾವಾಲಾ

    ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು: ಆದಾರ್ ಪೂನಾವಾಲಾ

    ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಕೊವೊವ್ಯಾಕ್ಸ್ ಲಸಿಕೆ ಪ್ರಯೋಗ ಸುಗಮವಾಗಿದ್ದು, ಅಂದುಕೊಂಡಂತೆ ಆದರೆ ಜನವರಿ ಅಥಾವ ಫೆಬ್ರವರಿಯಲ್ಲಿ ಬಳಕೆಗೆ ಮುಕ್ತವಾಗಬಹುದು ಎಂದು ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲಾ ತಿಳಿಸಿದ್ದಾರೆ.

    ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ವ್ಯಾಕ್ಸಿನ್ ಪ್ರಯೋಗ ಹಂತದಲ್ಲಿದ್ದು, ಬಹಳಷ್ಟು ಸ್ವಯಂ ಸೇವಕರಿಗೆ ನೀಡಲಾಗಿದೆ. ಅದನ್ನು ವಿಮರ್ಶೆ ಮಾಡಲಾಗುತ್ತಿದೆ. ಡಿಸೆಂಬರ್ ವೇಳೆಗೆ ವ್ಯಾಕ್ಸಿನ್ ಪರಿಣಾಮಗಳ ಬಗ್ಗೆ ನಡೆಯುತ್ತಿರುವ ಪರಾಮರ್ಶೆ ಅಂತ್ಯವಾಗಲಿದ್ದು, ಬಳಿಕ ಸಾರ್ವಜನಿಕ ಬಳಕೆಗೆ ಮುಕ್ತ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

    3-4 ತಿಂಗಳ ಅವಧಿಯಲ್ಲಿ ವ್ಯಾಕ್ಸಿನ್ ಪ್ರತಿಕ್ರಿಯೆಯನ್ನು ಅಧ್ಯಯನ ಮಾಡಲಾಗುತ್ತಿದೆ. ವ್ಯಾಕ್ಸಿನ್ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನ ನಡೆದಿದ್ದು, ಹಂತ ಹಂತವಾಗಿ ಈ ಬಗ್ಗೆ ವರದಿಗಳು ಬರಲಿದೆ ಎಂದು ಪೂನಾವಾಲಾ ಹೇಳಿದರು.

    ಅಮೇರಿಕದ ಲಸಿಕೆ ತಯಾರಕ ಸಂಸ್ಥೆ ನೊವೊವಾಕ್ಸ್ ಇಂಕ್ ಮಕ್ಕಳಿಗಾಗಿ ಓಗಿಘಿ-ಅoಗಿ2373 ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದೆ. ಇದು ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ, ಪ್ರಯೋಗಗಳನ್ನು ನಡೆಸಲಾಗುತ್ತಿದೆ. 2 ರಿಂದ 17 ವರ್ಷದ ಮಕ್ಕಳ ಮೇಲೆ ಪ್ರಯೋಗ ನಡೆಯುತ್ತಿದ್ದು, ದೇಶದ ಹತ್ತು ಪ್ರದೇಶಗಳಲ್ಲಿ 910 ಸ್ವಯಂ ಸೇವಕರು ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

  • ದೀರ್ಘ ರಜೆ ಬಳಿಕ ಭಾರತಕ್ಕೆ ಹಿಂದಿರುಗಿದ ಆದಾರ್ ಪೂನಾವಾಲಾ

    ದೀರ್ಘ ರಜೆ ಬಳಿಕ ಭಾರತಕ್ಕೆ ಹಿಂದಿರುಗಿದ ಆದಾರ್ ಪೂನಾವಾಲಾ

    ಮುಂಬೈ: ಇಂಗ್ಲೆಂಡ್‍ಗೆ ತೆರಳಿದ್ದ ಸೀರಂ ಸಂಸ್ಥೆಯ ಸಿಇಓ ಆದಾರ್ ಪೂನಾವಾಲಾ ದೀರ್ಘ ರಜೆ ಬಳಿಕ ಭಾರತಕ್ಕೆ ಹಿಂದಿರುಗಿದ್ದಾರೆ.

    ಭಾರತದಲ್ಲಿ ಕೊರೊನಾ ಎರಡನೇ ಅಲೆ ಸ್ಫೋಟಗೊಂಡ ವೇಳೆಯೇ ಆದಾರ್ ಪೂನಾವಾಲಾ ಇಂಗ್ಲೆಂಡ್‍ಗೆ ತೆರಳಿದ್ದರು. ಬೆದರಿಕೆ ಮತ್ತು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪೂನಾವಾಲಾ ಲಂಡನ್ ಸೇರಿದ್ದರು. ಇಂದು ಬೆಳಗ್ಗೆ ಪೂನಾವಾಲಾ ಸಂಸ್ಥೆಯ ಖಾಸಗಿ ಜೆಟ್ ಪುಣೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ಅಲ್ಲಿಂದ ಖಾಸಗಿ ಹೆಲಿಕಾಪ್ಟರ್ ಮೂಲಕ ನೇರವಾಗಿ ಆದಾರ್ ಪೂನಾವಾಲಾ ಸೀರಂ ಸಂಸ್ಥೆಗೆ ತೆರಳಿದ್ದಾರೆ.

    ಭಾರತದ ಕೊರೊನಾ ಲಸಿಕಾಕರಣ ಅಭಿಯಾನದಲ್ಲಿ ಸೀರಂ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಕೊರೊನಾ ಸಂಜೀವಿನಿ ಕೋವಿಶೀಲ್ಡ್ ಲಸಿಕೆಯನ್ನ ಸೀರಂ ಉತ್ಪಾದನೆ ಮಾಡುತ್ತಿದೆ. ಮೇನಲ್ಲಿ ಕೊರೊನಾ ಲಸಿಕೆಗೆ ಬೇಡಿಕೆ ಹೆಚ್ಚಾಗಿದ್ದ ವೇಳೆ ದಿಢೀರ್ ಪೂನಾವಾಲಾ ಲಂಡನ್ ಗೆ ತೆರಳಿದ್ದು, ಹಲವು ಚರ್ಚೆಗಳಿಗೆ ಕಾರಣವಾಗಿತ್ತು.

    ಲಂಡನ್ ತಲುಪಿದ ಬಳಿಕ ಸ್ಪಷ್ಟನೆ ನೀಡಿದ್ದ ಪೂನಾವಾಲಾ, ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ತಮ್ಮ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದಿದ್ದರು. ಈ ಹೇಳಿಕೆ ದೇಶದಲ್ಲಿ ರಾಜಕೀಯ ತಿರುವು ಪಡೆದುಕೊಂಡು ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಬೆದರಿಕೆ ಬರುತ್ತಿದೆ ಇಂತಹ ಸ್ಥಿತಿಯಲ್ಲಿ ಇರಲಾರೆ: ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆಯ ಸಿಇಓ

    ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಇಡೀ ವಿಶ್ವದಲ್ಲಿಯೇ ಲಸಿಕೆಯ ಉತ್ಪಾದನೆ ಸಂಸ್ಥೆಗಳಲ್ಲಿ ಸೀರಂ ಸಹ ಒಂದಾಗಿದೆ. ಆಗಸ್ಟ್ ನಿಂದ ಡಿಸೆಂಬರ್ ವರೆಗೆ ಭಾರತ ಸರ್ಕಾರಕ್ಕೆ ಸೀರಂ ಸಂಸ್ಥೆ 50 ಕೋಟಿ ಕೊರೊನಾ ವ್ಯಾಕ್ಸಿನ್ ನೀಡಬೇಕಿದೆ.

  • ಬೆದರಿಕೆ ಬರುತ್ತಿದೆ ಇಂತಹ ಸ್ಥಿತಿಯಲ್ಲಿ ಇರಲಾರೆ: ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆಯ ಸಿಇಓ

    ಬೆದರಿಕೆ ಬರುತ್ತಿದೆ ಇಂತಹ ಸ್ಥಿತಿಯಲ್ಲಿ ಇರಲಾರೆ: ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆಯ ಸಿಇಓ

    – ಭಾರತ ತೊರೆದು ಲಂಡನ್ ಸೇರಿದ ಆದಾರ್ ಪೂನಾವಾಲಾ
    – ಪವರ್ ಫುಲ್ ಜನರಿಂದಲೇ ಬೆದರಿಕೆ, ಒತ್ತಡ

    ನವದೆಹಲಿ: ಬೆದರಿಕೆ  ಬಂದ ಹಿನ್ನೆಲೆ ಕೋವಿಶೀಲ್ಡ್ ಲಸಿಕೆ ತಯಾರಿಕಾ ಸೀರಂ  ಸಂಸ್ಥೆಯ ಸಿಇಓ ಆದಾರ್ ಪೂನಾವಾಲಾ ಭಾರರ ತೊರೆದು ಲಂಡನ್ ಸೇರಿದ್ದಾರೆ. ಇದು ದೀರ್ಘ ಸಮಯದ ಪ್ರವಾಸ ಆಗಿದ್ದು, ಇಂತಹ ಸ್ಥಿತಿಯಲ್ಲಿ ಇರಲಾರೆ ಎಂದು ಪೂನಾವಾಲಾ ಹೇಳಿಕೊಂಡಿದ್ದಾರೆ.

    ನಾನು ಲಂಡನ್ ನಲ್ಲಿ ಹೆಚ್ಚು ದಿನಗಳನ್ನ ಕಳೆಯಲಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ನಾನು ಭಾರತದಲ್ಲಿ ಇರಲು ಸಾಧ್ಯವಿಲ್ಲ. ಎಲ್ಲ ಜವಾಬ್ದಾರಿಗಳನ್ನು ನನ್ನ ಹೆಗಲ ಮೇಲೆ ಹಾಕಲಾಗುತ್ತಿದೆ. ಇದೆಲ್ಲವನ್ನು ನನ್ನ ಒಬ್ಬನಿಂದ ನಿಭಾಯಿಸಲು ಆಗಲಾರದು. ನನ್ನ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.

    ಕೆಲವು ಸಮಯಗಳಿಂದ ಪ್ರಭಾವಿ ಜನರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪೂನಾವಾಲಾ ಹೇಳಿಕೊಂಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಪೂನಾವಾಲಾಗೆ ಭದ್ರತೆ ಕೋರಿ ಸಿರಂ ನಿರ್ದೇಶಕ, ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಏಪ್ರಿಲ್ 16 ರಂದು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಕೇಂದ್ರ ಸರ್ಕಾರ ಸಹ ಪೂನಾವಾಲಾ ಅವರಿಗೆ ವೈ ದರ್ಜೆ ಭದ್ರತೆ ಒದಗಿಸಿತ್ತು.