Tag: ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ

  • ಉರಿಗೌಡ- ನಂಜೇಗೌಡ ಚಿತ್ರ: ಚುಂಚಶ್ರೀ ಭೇಟಿಯಾಗಲಿರುವ ಮುನಿರತ್ನ

    ಉರಿಗೌಡ- ನಂಜೇಗೌಡ ಚಿತ್ರ: ಚುಂಚಶ್ರೀ ಭೇಟಿಯಾಗಲಿರುವ ಮುನಿರತ್ನ

    ರಾಜ್ಯ ರಾಜಕೀಯದಲ್ಲಿ ವಿವಾದಿತ ಪಾತ್ರಗಳಾಗಿ ಚರ್ಚೆಯಲ್ಲಿರುವ ಉರಿಗೌಡ-ನಂಜೇಗೌಡ (Urigowda -Nanjegowda) ಅವರುಗಳನ್ನು ಆಧರಿಸಿದ ಸಿನಿಮಾ ಮಾಡಲು ನಿರ್ಮಾಪಕ, ಹಾಲಿ ಸಚಿವ ಮುನಿರತ್ನ (Munirathna) ಅವರು ಇದೀಗ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿದ್ದರು. ಮೇ 18ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಎಂದು ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನ ಮುನಿರತ್ನ ಭೇಟಿಯಾಗಲಿದ್ದಾರೆ.

    ಚಿತ್ರಕ್ಕೆ `ಉರಿಗೌಡ-ನಂಜೇಗೌಡ (1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯನ್ನಿಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮುನಿರತ್ನ ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ. ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ʻಉರಿಗೌಡ ನಂಜೇಗೌಡʼ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಉರಿಗೌಡ-ನಂಜೇಗೌಡ ಕುರಿತ ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮಾ.20ರಂದು ಮುನಿರತ್ನ ಅವರು ಭೇಟಿಯಾಗುತ್ತಿದ್ದಾರೆ. ಸಿನಿಮಾದ ಬಗ್ಗೆ ಮಹತ್ವದ ಚರ್ಚೆ ಮಾಡಲಿದ್ದಾರೆ. ಶ್ರೀಗಳ ಸಲಹೆ ಪಡೆದು ಮುಂದುವರೆಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!

    ಇನ್ನೂ ಈಗಾಗಲೇ ಅಶೋಕ್ -ಅಶ್ವಥ್ ನಾರಾಯಣ ಅವರು ಉರಿಗೌಡ-ನಂಜೇಗೌಡರ ಇತಿಹಾಸ ಬಗ್ಗೆ ಮಾತಾಡಿದ್ದಾರೆ. ನಾನು ಒಬ್ಬ ನಿರ್ಮಾಪಕನಾಗಿ ಅವರ ಚಿತ್ರ ಮಾಡೋಣ ಎಂದು ನಿರ್ಧರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಶ್ರೀಗಳು ಚರ್ಚೆ ಮಾಡಲು ನನ್ನನ್ನು ಕರೆಸಿದ್ದಾರೆ. ನಾಳೆ (ಮಾ.20) ಬೆಳಿಗ್ಗೆ ಶ್ರೀಗಳ ಭೇಟಿ ಮಾಡ್ತಿದೀನಿ. ಇತಿಹಾಸದ ಬಗ್ಗೆ ಮಾತಾಡೋರು ಅದಕ್ಕೆ ಜಾತಿ ಬಣ್ಣ ಕೊಡಬಾರದು. ಸಿನಿಮಾ ಈಗ ಚರ್ಚೆಯಲ್ಲಿದೆ. ಶ್ರೀಗಳನ್ನು ಭೇಟಿ ಮಾಡೋವರೆಗೂ ಚಿತ್ರದ ಬಗ್ಗೆ ಹೆಚ್ಚಾಗೇನೂ ಮಾತಾಡಲ್ಲ ಎಂದು ನಿರ್ಮಾಪಕ ಮುನಿರತ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

  • ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    – ಯೋಗ ಯಾವುದೇ ದೇಶ-ಧರ್ಮಕ್ಕೆ ಸೀಮಿತವಲ್ಲ 

    ಬೆಂಗಳೂರು: ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಡಿದ ಅವರು, ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ:  ಗಾಳಿ-ಮಳೆಗೆ ಉರುಳುತ್ತಿರುವ ಮರಗಳ ರಕ್ಷಣೆಗೆ ಸರ್ಕಾರದ ಹೊಸ ಪ್ಲ್ಯಾನ್

    ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ.ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜೊತೆಗೆ ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.

    ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ:

    ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಸೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ ಎಂದು ನುಡಿದರು.

    ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್ ವಿಜ್ಞಾನಿ ಲಾವಾಶಿಯರ್ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು.

    ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ:

    ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ‘ಕಟ್ಟಿ ಚಕ್ರಾಸನ’, ‘ತ್ರಿಕೋನಾಸನ’, ‘ಊಧ್ರ್ವ ತಾಡಾಸನ’, ‘ಪಾದ ಹಸ್ತಾಸನ’, ‘ಉಸ್ಟ್ರಾಸನ’, ‘ಶಶಾಂಕಾಸನ’, ‘ಮಂಡೂಕಾಸನ’, ‘ಮಕರಾಸನ’, ‘ಭುಜಂಗಾಸನ’, ‘ಬಾಲ ಕ್ರೀಡಾಸನ’, ‘ಶಲ್ಬಾಸನ’, ‘ಉತ್ಥಾನ ಪಾದಾಸನ’, ‘ಅರ್ಧಪವನ ಮುಕ್ತಾಸನ’, ‘ಪವನ ಮುಕ್ತಾಸನ’ ಜತೆಗೆ, ‘ಕಪಾಲಬಾತಿ’, ‘ಪ್ರಾಣಯಾಮ’, ‘ನಾಡಿ ಶೋಧನ’, ‘ಶೀಥಲಿ ಪ್ರಾಣಯಾಮ’, ‘ಭ್ರಾಮರಿ ಪ್ರಾಣಯಾಮ’ ಮಾಡಿಸಿದರು.

    ಕ್ರೀಡಾ ಮತ್ತು ಯವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.