Tag: ಆದಿತ್ಯ ರಾವ್

  • ಬಾಂಬ್ ತಯಾರಿಸಲು ಉಗ್ರ ಸಂಘಟನೆಯ ಜೊತೆ ಸಂಪರ್ಕಕ್ಕೆ ಯತ್ನಿಸಿದ್ದ ಆದಿತ್ಯ ರಾವ್

    ಬಾಂಬ್ ತಯಾರಿಸಲು ಉಗ್ರ ಸಂಘಟನೆಯ ಜೊತೆ ಸಂಪರ್ಕಕ್ಕೆ ಯತ್ನಿಸಿದ್ದ ಆದಿತ್ಯ ರಾವ್

    ಬೆಂಗಳೂರು: ಬಾಂಬ್ ಹೇಗೆ ತಯಾರಿಸಬೇಕೆಂದು ತಿಳಿಯಲು ಆದಿತ್ಯ ರಾವ್ ಉಗ್ರ ಸಂಘಟನೆ ಜೊತೆ ಸಂಪರ್ಕಕ್ಕೂ ಯತ್ನಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಬೇಕು ಎಂದು ನಿರ್ಧರಿಸಿದಾಗ ಉಗ್ರ ಸಂಟಘನೆಯನ್ನು ಸಂಪರ್ಕಿಸಲು ಆದಿತ್ಯ ಮುಂದಾಗಿದ್ದನು. ಬಾಂಬ್ ಹೇಗೆ ತಯಾರಿಸುತ್ತಾರೆ? ಯಾವ ವಸ್ತುಗಳು ಬೇಕು ಎನ್ನುವ ಬಗ್ಗೆ ತಿಳಿಯಲು ಉಗ್ರ ಸಂಟಘನೆಯ ಜೊತೆ ಸಂಪರ್ಕಿಸಲು ಯತ್ನಿಸಿದ್ದನು. ಆದರೆ ಕೊನೆಗೆ ಧೈರ್ಯ ಸಾಲದೇ ಸುಮ್ಮನಾಗಿದ್ದನು. ಬಳಿಕ ಯೂಟ್ಯೂಬ್ ನೋಡಿ ಆದಿತ್ಯ ಬಾಂಬ್ ತಯಾರಿಸಿದ್ದಾನೆ ಎನ್ನುವ ವಿಚಾರ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಒಂದು ಎರಡು ಬಾರಿ ತಯಾರಿಕೆಯ ವೇಳೆ ಬಾಂಬ್ ಸಿಡಿದು ಆರೋಪಿ ಕೈಗೆ ಏಟು ಮಾಡಿಕೊಂಡಿದ್ದನು. ಭಯ ಪಡುವ ವ್ಯಕ್ತಿತ್ವ ಹೊಂದಿದ್ದ ಈತನಿಗೆ ಧೈರ್ಯ ಇರಲಿಲ್ಲ ಎನ್ನುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮಾನಸಿಕ ರೋಗಿಯಂತಿದ್ದ, ಯಾರೊಂದಿಗೂ ಮಾತನಾಡುತ್ತಿರಲಿಲ್ಲ: ಆದಿತ್ಯ ಸಹದ್ಯೋಗಿ

    ಇಂದು ಮುಂಜಾನೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜ್ ಅವರ ಕಚೇರಿಗೆ ಆಗಮಿಸಿ ಆದಿತ್ಯ ರಾವ್ ಶರಣಾಗಿದ್ದಾನೆ. ಈ ವೇಳೆ ನಡೆದ ಪ್ರಾಥಮಿಕ ವಿಚಾರಣೆ ಸಮಯದಲ್ಲಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

    ಸಿಸಿಟಿವಿಯಲ್ಲಿ ತನ್ನ ಫೋಟೋ ಪ್ರಕಟವಾಗುತ್ತಿದ್ದ ಭಯಗೊಂಡಿದ್ದ ಆದಿತ್ಯ ರಾವ್ ಉಡುಪಿಯಿಂದ ಆಗಮಿಸಿ ಇಂದು ಶರಣಾಗಿದ್ದಾನೆ.

  • ಮಾನಸಿಕ ರೋಗಿಯಂತಿದ್ದ, ಯಾರೊಂದಿಗೂ ಮಾತನಾಡುತ್ತಿರಲಿಲ್ಲ: ಆದಿತ್ಯ ಸಹದ್ಯೋಗಿ

    ಮಾನಸಿಕ ರೋಗಿಯಂತಿದ್ದ, ಯಾರೊಂದಿಗೂ ಮಾತನಾಡುತ್ತಿರಲಿಲ್ಲ: ಆದಿತ್ಯ ಸಹದ್ಯೋಗಿ

    ಮಂಗಳೂರು: ಆದಿತ್ಯ ಮಾನಸಿಕ ರೋಗಿಯಂತೆ ಕಾಣುತ್ತಿದ್ದನು. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಆರೋಪಿ ಜೊತೆ ಕೆಲಸ ಮಾಡಿದ್ದ ಸಹದ್ಯೋಗಿಗಳು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಆದಿತ್ಯ ಸಹದ್ಯೋಗಿ, ಡಿಸೆಂಬರ್ 16ರಂದು ಆದಿತ್ಯ ಕುಡ್ಲ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದ್ದು, ಇಲ್ಲಿ ಆತ ಬಿಲ್ಲಿಂಗ್ ಕೆಲಸ ಮಾಡುತ್ತಿದ್ದನು. ಜನವರಿ 13ರಂದು ಸಂಬಳವಾದ ನಂತರ ಆತ ರೆಸ್ಟೋರೆಂಟ್ ತೊರೆದಿದ್ದ. ಬಳಿಕ ಆತನ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದಿತ್ಯ ಒಂದು ವಿಭಾಗದ ಬಿಲ್ಲಿಂಗ್ ಕೆಲಸ ಮಾತ್ರ ಮಾಡುತ್ತಿದ್ದನು. ಆದಿತ್ಯ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಸೈಲೆಂಟ್ ಆಗಿ ಇರುತ್ತಿದ್ದನು ಎಂದರು.  ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    ಅಲ್ಲದೆ ಆದಿತ್ಯ ಮಾನಸಿಕ ರೋಗಿಯಂತೆ ಕಾಣುತ್ತಿದ್ದನು. ಈ ಬಗ್ಗೆ ಆತನಿಗೆ ಪ್ರಶ್ನಿಸಿದಾಗ, ನನ್ನ ತಂದೆಗೆ ಹುಷಾರಾಗಿಲ್ಲ. ಹಾಗಾಗಿ ನಾನು ಈ ರೀತಿ ಇದ್ದೇನೆ ಎಂದು ಹೇಳುತ್ತಿದ್ದನು. ಆದರೆ ಬಿಲ್ಲಿಂಗ್ ಕೆಲಸ ಮಾತ್ರ ಚೆನ್ನಾಗಿ ಮಾಡುತ್ತಿದ್ದನು. ಆದಿತ್ಯ ಕೆಲಸ ಕೇಳಿ ಬರುವಾಗ ನಮ್ಮ ಮ್ಯಾನೇಜರ್ ಇದ್ದರು, ನಾನು ಇಲ್ಲಿ ಇರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಂಗಳೂರು ಬಾಂಬರ್ ಅರೆಸ್ಟ್

    ಇದೇ ವೇಳೆ ಮತ್ತೊಬ್ಬ ಸಹದ್ಯೋಗಿ ಮಾತನಾಡಿ, ನಾವು ಆದಿತ್ಯ ಜೊತೆ ಹೆಚ್ಚು ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಆತ ಎಷ್ಟು ಬೇಕೋ ಅಷ್ಟು ಮಾತನಾಡುತ್ತಿದ್ದನು. ನೀವು ಯಾಕೆ ಮಾತನಾಡಲ್ಲ ಎಂದು ನಾವು ಪ್ರಶ್ನಿಸಿದಾಗ, ನಾನು ಅಷ್ಟೇ ಮಾತನಾಡುವುದು ಎಂದು ಹೇಳುತ್ತಿದ್ದನು. ಆದಿತ್ಯ ಚಲನವಲನದ ಬಗ್ಗೆ ನಮಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಆದಿತ್ಯ ಜೊತೆ ಯಾವಾಗಲೂ ಒಂದು ಬ್ಯಾಗ್ ತನ್ನ ಜೊತೆಯಲ್ಲಿಯೇ ಇಟ್ಟುಕೊಳ್ಳುತ್ತಿದ್ದನು. ಹೊರಗೆ ಹೋಗುವಾಗಲೂ ಆ ಬ್ಯಾಗ್ ತನ್ನ ಜೊತೆಯಲ್ಲೇ ತೆಗೆದುಕೊಂಡು ಹೋಗುತ್ತಿದ್ದನು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಮಣಿಪಾಲ ಮೂಲದ ಆದಿತ್ಯ ರಾವ್ ಇಂದು ಬೆಳಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿದ್ದಾನೆ. ಈಗ ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

  • ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಬೆಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಬಂಧಿತ ಆರೋಪಿ ಆದಿತ್ಯ ರಾವ್ ತಪ್ಪೊಪ್ಪಿಕೊಂಡಿದ್ದಾನೆ.

    ಇಂದು ಮುಂಜಾನೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜ್ ಅವರ ಕಚೇರಿಗೆ ಆಗಮಿಸಿ ಆದಿತ್ಯ ರಾವ್ ಶರಣಾಗಿದ್ದಾನೆ. ಈ ವೇಳೆ ನಡೆದ ಪ್ರಾಥಮಿಕ ವಿಚಾರಣೆ ಸಮಯದಲ್ಲಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    ಯೂ ಟ್ಯೂಬ್ ನೋಡಿಕೊಂಡು ಬಾಂಬ್ ತಯಾರಿಸಿದ್ದಾನೆ. ಒಂದು ಎರಡು ಬಾರಿ ತಯಾರಿಕೆಯ ವೇಳೆ ಬಾಂಬ್ ಸಿಡಿದು ಕೈಗೆ ಏಟು ಮಾಡಿಕೊಂಡಿದ್ದ. ಭಯ ಪಡುವ ವ್ಯಕ್ತಿತ್ವ ಹೊಂದಿದ್ದ ಈತನಿಗೆ ಧೈರ್ಯ ಇರಲಿಲ್ಲ ಎನ್ನುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಂಗಳೂರು ಬಾಂಬರ್ ಅರೆಸ್ಟ್

    ಸಿಸಿಟಿವಿಯಲ್ಲಿ ತನ್ನ ಫೋಟೋ ಪ್ರಕಟವಾಗುತ್ತಿದ್ದ ಭಯಗೊಂಡಿದ್ದ ಆದಿತ್ಯ ರಾವ್ ಉಡುಪಿಯಿಂದ ಆಗಮಿಸಿ ಇಂದು ಶರಣಾಗಿದ್ದಾನೆ. ಹಲಸೂರು ಪೊಲೀಸ್ ಠಾಣೆಯ ಕಸ್ಟಡಿಯಲ್ಲಿರುವ ಆದಿತ್ಯ ರಾವ್ ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಇಂದು ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ಮಂಗ್ಳೂರು ಸ್ಫೋಟ ಪ್ರಕರಣ- ಪಬ್ಲಿಕ್ ಟಿವಿಗೆ ಶಂಕಿತ ಉಗ್ರನ ವಿಡಿಯೋಗಳು ಲಭ್ಯ

    ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಪ್ರತಿಕ್ರಿಯಿಸಿ, ಮಂಗಳೂರು ಪೊಲೀಸರ ತನಿಖಾ ತಂಡ ಶೀಘ್ರವೇ ಬೆಂಗಳೂರಿಗೆ ತೆರಳಲಿ ಆರೋಪಿಯನ್ನು ವಿಚಾರಣೆ ನಡೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.

  • ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    – ಉಡುಪಿ ಮಣಿಪಾಲ ಮೂಲದ ಆದಿತ್ಯ ರಾವ್
    – 2018ರಲ್ಲಿ ಬಂಧನ, 2019ರಲ್ಲಿ ಬಿಡುಗಡೆ

    ಬೆಂಗಳೂರು: ಮೆಕ್ಯಾನಿಕಲ್ ಎಂಜಿನಿಯರ್ ಓದಿದ್ದ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಎಂಜಿನಿಯರ್ ಹುದ್ದೆಯ ಕನಸು ಹೊತ್ತಿದ್ದ. ಆದರೆ ಈ ಹುದ್ದೆ ಸಿಗದ್ದಕ್ಕೆ ಸಿಟ್ಟಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದಾನಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಈ ಹಿಂದೆ ನಡೆದ ಪ್ರಕರಣಗಳಿಂದಾಗಿ ಈಗ ಮತ್ತೆ ಈ ಪ್ರಶ್ನೆ ಎದ್ದಿದ್ದು, 2018ರಲ್ಲಿ ಆದಿತ್ಯ ರಾವ್ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಪ್ರಕರಣದಲ್ಲಿ 9 ತಿಂಗಳು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.

    ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಆದಿತ್ಯ ರಾವ್, 2018 ರಲ್ಲಿ ನಾನು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೆ. ಆದರೆ ನನಗೆ ಉದ್ಯೋಗ ಸಿಕ್ಕಿರಲಿಲ್ಲ. ಇದಕ್ಕೆ ಸಿಟ್ಟಾಗಿ ನಾನು ಆಗಸ್ಟ್ ತಿಂಗಳಿನಲ್ಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೆ ಎಂದು ಹೇಳಿ ತಪ್ಪೊಪ್ಪಿಕೊಂಡಿದ್ದ.

    ಆದಿತ್ಯ ರಾವ್ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿ ಶರಣಾಗಿದ್ದು, ಈ ಪ್ರಕರಣದ ಸಂಬಂಧ ಎದ್ದಿದ್ದ ಎಲ್ಲ ಅನುಮಾನಗಳಿಗೆ ವಿಚಾರಣೆಯ ನಂತರ ಉತ್ತರ ಸಿಗಲಿದೆ.

    ಶಂಕೆ ಇತ್ತು:
    ಬಜ್ಪೆ ವಿಮಾನ ನಿಲ್ದಾಣದ ಸಿಸಿಟಿವಿಗಳನ್ನು ಪರಿಶೀಲಿಸಿದ ಮಂಗಳೂರು ಪೊಲೀಸರಿಗೆ ಆದಿತ್ಯ ರಾವ್ ಮೇಲೆ ಶಂಕೆ ವ್ಯಕ್ತವಾಗಿತ್ತು. ಈತನೇ ಕೃತ್ಯ ಎಸಗಿರಬಹುದು ಎನ್ನುವ ಅನುಮಾನದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರಿಗೆ ಈತನ ಭಾವಚಿತ್ರವನ್ನು ಕಳುಹಿಸಿಕೊಟ್ಟಿದ್ದರು. ಶಂಕಿತ ಆರೋಪಿ ತುಳು ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಈತನೇ ಮತ್ತೊಮ್ಮೆ ಈ ಕೃತ್ಯ ಎಸಗಿರಬಹುದು ಎನ್ನುವುದಕ್ಕೆ ಪುಷ್ಠಿ ಸಿಕ್ಕಿತ್ತು.

    ಉಡುಪಿ ಜಿಲ್ಲೆ ಮಣಿಪಾಲದ ಹುಡ್ಕೋ ಕಾಲೋನಿಯಲ್ಲಿ ವಾಸವಾಗಿದ್ದ ಆದಿತ್ಯ ರಾವ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದ. ಉದ್ಯೋಗ ಸಂಬಂಧ ಬೆಂಗಳೂರಿಗೆ ತೆರಳಿದ್ದ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಕೆಲಸದ ಕನಸು ಹೊತ್ತಿದ್ದ. ಕೆಲಸ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಬಿಟ್ಟು ಮಂಗಳೂರಿನಲ್ಲಿ ತಂದೆ ಜೊತೆ ಕೆಲಕಾಲದಿಂದ ವಾಸವಾಗಿದ್ದ. ಈ ವೇಳೆ ಮದುವೆಯ ಸಮಯದಲ್ಲಿ ಊಟ ಬಡಿಸಲು ತೆರಳುತ್ತಿದ್ದ. ಇದರ ಜೊತೆಗೆ ಬಾಣಸಿಗನಾಗಿಯೂ ಕೆಲಸ ಮಾಡುತ್ತಿದ್ದ.

    ಮಾನಸಿಕವಾಗಿ ಕುಗ್ಗಿದ್ದ:
    ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗಬೇಕೆಂದು ಆಸೆ ಪಟ್ಟಿದ್ದ ಈತನಿಗೆ ಉದ್ಯೋಗ ಸಿಕ್ಕಿರಲಿಲ್ಲ. ಉದ್ಯೋಗ ಸಿಗದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ ಕಾರಣ ಆತ ಸಿಟ್ಟಾಗಿದ್ದ. ಈ ಕಾರಣಕ್ಕೆ ನಾನು ಹುಸಿ ಬಾಂಬ್ ಕರೆ ಮಾಡಿದ್ದೆ ಎಂದು ಪೊಲೀಸ್ ವಿಚಾರಣೆಯಲ್ಲಿ ಆದಿತ್ಯ ರಾವ್ ತಿಳಿಸಿದ್ದ. ಇಲ್ಲಿಯವರೆಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದ ಈತ ಈ ಬಾರಿ ಬ್ಯಾಗಿನಲ್ಲಿ ಬಾಂಬ್ ಇಟ್ಟಿದ್ದು ಯಾಕೆ ಎನ್ನುವ ಪ್ರಶ್ನೆಗೆ ಪೊಲೀಸ್ ತನಿಖೆಯ ವೇಳೆ ಉತ್ತರ ಸಿಗಲಿದೆ.

  • ಬೆಂಗಳೂರಿನಲ್ಲಿ ಮಂಗಳೂರು ಬಾಂಬರ್ ಅರೆಸ್ಟ್

    ಬೆಂಗಳೂರಿನಲ್ಲಿ ಮಂಗಳೂರು ಬಾಂಬರ್ ಅರೆಸ್ಟ್

    ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಅರೆಸ್ಟ್ ಆಗಿದ್ದಾನೆ.

    ಮಣಿಪಾಲ ಮೂಲದ ಆದಿತ್ಯ ರಾವ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ  ಶರಣಾಗಿದ್ದ. ಈಗ ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

    ಯಾರು ಈ ಆದಿತ್ಯ ರಾವ್?
    ಉಡುಪಿಯ ಮಣಿಪಾಲ ಮೂಲದ ಎಂಜಿನಿಯರ್ ಆಗಿರುವ ಆದಿತ್ಯ ರಾವ್ ಈ ಹಿಂದೆಯೂ ಹುಸಿಬಾಂಬ್ ಕರೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ. 2012ರಲ್ಲಿ ಖಾಸಗಿ ಬ್ಯಾಂಕಲ್ಲೂ ಕೆಲಸ ಮಾಡಿದ್ದ ಈತ ಬೆಂಗಳೂರಿನಲ್ಲಿ ಈ ಹಿಂದೆ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಹಾಕಿದ್ದ. ಹುಸಿಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ 9 ತಿಂಗಳು ಜೈಲುವಾಸ ಅನುಭವಿಸಿದ್ದ. ಜೈಲುವಾಸ ಬಳಿಕ ಕೆಲಸ ಸಿಗದೇ ಮಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ