Tag: ಆದಿಯೋಗಿ

  • ಚಿಕ್ಕಬಳ್ಳಾಪುರ ಈಶಾ ಆದಿಯೋಗಿ ಕೇಂದ್ರಕ್ಕೆ ಸದ್ಗುರು ಭೇಟಿ

    ಚಿಕ್ಕಬಳ್ಳಾಪುರ ಈಶಾ ಆದಿಯೋಗಿ ಕೇಂದ್ರಕ್ಕೆ ಸದ್ಗುರು ಭೇಟಿ

    – ಸದ್ಗುರು ದರ್ಶನ ಮಾಡಿ ಪುನೀತರಾದ ಭಕ್ತರು

    ಚಿಕ್ಕಬಳ್ಳಾಪುರ: ಆವಲಗುರ್ಕಿ‌ ಬಳಿಯ ಆದಿಯೋಗಿ (Adiyogi) ಈಶಾ ಕೇಂದ್ರಕ್ಕೆ ಇಂದು (ಡಿ.22) ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಭೇಟಿ ನೀಡಿದರು.

    ಸದ್ಗುರು ಜಗ್ಗಿವಾಸುದೇವ್ ಆಗಮನದ ಹಿನ್ನಲೆ ಈಶಾ (Isha) ಸನ್ನಿಧಾನಕ್ಕೆ ಸಹಸ್ರಾರು ಮಂದಿ ಭಕ್ತರು ಆಗಮಿಸಿ ಸದ್ಗುರುಗಳ ದರ್ಶನ ಪಡೆದರು. ಭಕ್ತರಿಗೆ ಅಶೀರ್ವಚನ ಹಿತನುಡಿಗಳನ್ನು ಸದ್ಗುರು ಜಗ್ಗೀವಾಸುದೇವ್ ನುಡಿದರು.

    ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸದ್ಗುರು, ಈಶಾ ಸಂಸ್ಥೆ ವತಿಯಿಂದ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನ ಮದ್ಯವ್ಯಸನಿಗಳಾಗುತ್ತಿದ್ದಾರೆ. ಕೃಷಿ ಕಾಯಕ ಮಾಡಿ ಮದ್ಯ ಸೇವನೆ ಮಾಡಿ ಮಲಗಿಕೊಳ್ಳುತ್ತಿದ್ದಾರೆ. ಅವರ ಜೀವನದಲ್ಲಿ ಉತ್ಸಾಹ ಚೈತನ್ಯ ತುಂಬುವ ಸಲುವಾಗಿ ಗ್ರಾಮೀಣ ಭಾಗದವರಿಗೆ ಗ್ರಾಮೋತ್ಸವ ಕ್ರೀಡೆಗಳನ್ನ ಆಯೋಜನೆ ಮಾಡುವ ಮೂಲಕ ಮದ್ಯ ವ್ಯಸನ ಮುಕ್ತರನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ. ಕ್ರೀಡೆಗಳ ಮೂಲಕ ಜಾತಿ ತಾರತಮ್ಯ ದೂರ ಮಾಡುತ್ತಿದ್ದೇವೆ ಎಂದರು.

     

    ದೇಶದಲ್ಲಿ ಮಣ್ಣು ಸತ್ವ ಕಳೆದುಕೊಳ್ಳುತ್ತಿದೆ. ಪರಿಸರದಲ್ಲಿ ಸಮತೋಲನ ಕಾಪಾಡಬೇಕಿದೆ. ಲಾಭವಿಲ್ಲದ ವಿಚಾರಗಳ ಬಗ್ಗೆ ಯಾರೂ ಸಹ ಮಾತನಾಡುತ್ತಿಲ್ಲ. ಹಾಗಾಗಿ ಈಶಾ ಫೌಂಡೇಶನ್‌ನಿಂದಲೇ ರೈತ ಉತ್ಪಾದಕಾ ಕಂಪನಿಗಳ ಆರಂಭ ಮಾಡಲಾಗಿದೆ. ಮುಂದೆ ಮಿರಾಕಲ್ ಹೆಸರಿನ ಅಪ್ಲಿಕೇಶನ್‌ ಅಭಿವೃದ್ಧಿ ಮಾಡಲಾಗುತ್ತದೆ. ಈ ಮೂಲಕ ಪ್ರಪಂಚಾದ್ಯಂತ ಮುನ್ನೂರು ಕೋಟಿ ಜನರಿಗೆ ಏಕಕಾಲದಲ್ಲಿ ಧ್ಯಾನದ ಸಂದೇಶದ ಜೀವನ ನಿರ್ವಹಣೆ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ ಜೀವನ ಉತ್ತಮಪಡಿಸುವ ಕನಸು ಕಂಡಿದ್ದೇವೆ ಅಂತ ಸದ್ಗುರು ತಿಳಿಸಿದರು. ಇದನ್ನೂ ಓದಿ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿಲ್ಲ ಪಶು ವೈದ್ಯರು – ಪ್ರಾಣಿಗಳು ಸತ್ತರೆ ಬಂಡೀಪುರ, ಮೈಸೂರು ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ

    ಇದೇ ವೇಳೆ ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಸದ್ಗುರು, ಬಾಂಗ್ಲಾದೇಶ ಉದ್ಬವವಾಗಲು ಭಾರತದ ಕೊಡುಗೆ ಮರೆಯುವಂತಿಲ್ಲ. ಭಾರತದ ಪಕ್ಕದಲ್ಲೇ ಮಿತ್ರ ದೇಶವಾಗಿ ಇರಲಿ ಅಂತ ಸಹಕಾರ ನೀಡಿದೆ. ಆದರೆ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ ಎಂದರು.

    ಎಲೆಕ್ಟ್ರಿಕಲ್‌ ವಾಹನಗಳಿಂದ ಪರಿಸರಕ್ಕೆ ಅನುಕೂಲವಿಲ್ಲ. ನನ್ನ ಹೇಳಿಕೆ ವಿವಾದವಾದರೂ ಪರವಾಗಿಲ್ಲ. ನಗರ ಪ್ರದೇಶಗಳಿಗೆ ಮಾತ್ರ ಎಲೆಕ್ಟ್ರಿಕಲ್‌ ವಾಹನಗಳು ಸೂಕ್ತ ಎಂದು ಅಭಿಪ್ರಾಯಪಟ್ಟರು.

     

  • ಆದಿಯೋಗಿ ಸನ್ನಿಧಿಯಲ್ಲಿ KGF ನಟಿ ಶ್ರೀನಿಧಿ ಶೆಟ್ಟಿ ಯೋಗ ಪ್ರದರ್ಶನ – ಸೈನಿಕರೂ ಭಾಗಿ

    ಆದಿಯೋಗಿ ಸನ್ನಿಧಿಯಲ್ಲಿ KGF ನಟಿ ಶ್ರೀನಿಧಿ ಶೆಟ್ಟಿ ಯೋಗ ಪ್ರದರ್ಶನ – ಸೈನಿಕರೂ ಭಾಗಿ

    ಚಿಕ್ಕಬಳ್ಳಾಪುರ: ತಾಲ್ಲೂಕಿನ ಆವಲಗುರ್ಕಿ ಬಳಿಯಿರುವ ಈಶ ಫೌಂಡೇಶನ್‌ನ (Isha Foundation) ಆದಿಯೋಗಿ ಬೃಹತ್ ಪ್ರತಿಮೆಯ ಮುಂಭಾಗ ವಿವಿಧ ಆಸನಗಳನ್ನು ಅಭ್ಯಾಸ ಮಾಡುವ ಮೂಲಕ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2024) ಆಚರಿಸಲಾಯಿತು.

    ಕರ್ನಾಟಕ ಗೋವಾ ಎನ್‌ಸಿಸಿ ಬೆಟಾಲಿಯನ್‌ನ ಡೆಪ್ಯುಟಿ ಡೈರೆಕ್ಟರ್ ಜನರಲ್, ಏರ್ ಕಮಾಂಡರ್ ಎಸ್.ಬಿ.ಅರುಣ್ ಕುಮಾರ್ ಉದ್ಘಾಟಿಸಿದರು. ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಉಪಸ್ಥಿತರಿದ್ದು, ವಿವಿಧ ಆಸನಗಳನ್ನೂ ಪ್ರದರ್ಶಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಈ ವೇಳೆ ಮಾತನಾಡಿದ ಏರ್ ಕಮಾಂಡರ್ ಎಸ್.ಬಿ.ಅರುಣ್ ಕುಮಾರ್, ಒತ್ತಡ ಮತ್ತು ರೋಗ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದ್ದು, ಭಾರತ ಮೂಲದ ಯೋಗ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆದಿರುವುದು ಭಾರತೀಯರೆಲ್ಲರೂ ಹೆಮ್ಮೆ ಪಡುವ ಸಂಗತಿ. ಯೋಗ ಕೇವಲ ದೈಹಿಕ ಸದೃಢತೆಗೆ ಮಾತ್ರವಲ್ಲದೇ ಮಾನಸಿಕ ಸದೃಢತೆಗೂ ಪೂರಕವಾಗಿದೆ. ದೇಹವನ್ನು ಹಗುರ ಮಾಡುವುದಲ್ಲದೇ ಮನುಷ್ಯನಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ. ದೇಹ ಮತ್ತು ಮನಸ್ಸಿನ ಸಮತೋಲನೆಗೆ ಯೋಗ ಸಹಕಾರಿ ಎಂದು ಕಿವಿಮಾತು ಹೇಳಿದರು.

    ಯೋಗಪ್ರದರ್ಶನದಲ್ಲಿ ಭಾರತೀಯ ಸೇನೆ, ಭಾರತೀಯ ಸೀಮಾ ಸುರಕ್ಷಾ ಪಡೆ ಮತ್ತು ರಾಷ್ಟ್ರೀಯ ಸೈನಿಕ ಪಡೆಗಳ ಸೈನಿಕರು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು, ಈಶಾ ಸಂಸ್ಥೆಯ ಸ್ವಯಂ ಸೇವಕರು ಪಾಲ್ಗೊಂಡು ಸೂರ್ಯ ನಮಸ್ಕಾರ, ಪ್ರಾಣಾಯಾಮ, ಬಾಲಾಸನ, ನಾಡಿಶುದ್ಧಿ ಸೇರಿದಂತೆ ವಿವಿಧ ಸರಳ ಆಸನಗಳನ್ನು ಪ್ರದರ್ಶಿಸಿದರು. ಇದನ್ನೂ ಓದಿ: ಕರ್ನಾಟಕ ಪೊಲೀಸರು ಹೋಗಿ ಉತ್ತರ ಪ್ರದೇಶದಲ್ಲಿ ತಪ್ಪೇನೂ ಮಾಡಿಲ್ಲ: ಗೃಹ ಸಚಿವ ಪರಮೇಶ್ವರ್

    ಈ ಸಂದರ್ಭದಲ್ಲಿ ಸಾರ್ವಜನಿಕರು ಯೋಗಾಭ್ಯಾಸ ಮಾಡಲು ಅನುಕೂಲವಾಗುವಂತೆ ಯೋಗ ಭವನವನ್ನು ಉದ್ಘಾಟಿಸಲಾಯಿತು. ಈ ಭವನ ಪ್ರತಿ ದಿನ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆ ವರೆಗೆ ಯೋಗಾಭ್ಯಾಸಕ್ಕಾಗಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದರು. ಇದನ್ನೂ ಓದಿ: ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

  • ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್‌ನಿಂದ ಚಿಕ್ಕಬಳ್ಳಾಪುರದಲ್ಲಿ (Chikkaballapura) ಆದಿಯೋಗಿ (Adiyogi) ಪ್ರತಿಮೆ ಸ್ಥಾಪನೆಯಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಬೆಂಗಳೂರಿನ ಸ್ಕೈಬರ್ಡ್ ಅಡ್ವೆಂಚರಸ್ ಸಂಸ್ಥೆ ಇಶಾ ಫೌಂಡೇಶನ್ ಸಮೀಪ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಲು ಸಿದ್ಧತೆ ನಡೆಸಿದೆ.

    ಬುಧವಾರ ಪ್ರಾಯೋಗಿಕವಾಗಿ ಪ್ಯಾರಾಗ್ಲೈಡಿಂಗ್ ಹಾರಾಟವನ್ನು ಯಶಸ್ವಿಯಾಗಿ ನಡೆಸಿದ್ದು, ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲಿ ಕಾಣುತ್ತಿದ್ದ ಪ್ಯಾರಾಗ್ಲೈಡಿಂಗ್ (Paragliding) ಸಾಹಸ ಕ್ರೀಡೆ ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲಿಯೂ ಹಾರಾಟ ಮಾಡಬಹುದಾಗಿದೆ. ಇದನ್ನೂ ಓದಿ: ಸಿದ್ದು, ಡಿಕೆಶಿಯನ್ನ ಪೊಲೀಸ್‌ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಿ: ಪ್ರತಾಪ್‌ ಸಿಂಹ

    ಪ್ಯಾರಾಗ್ಲೈಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ. ಈಗ ಮೊದಲ ಹಂತದ ಪ್ರಾಯೋಗಿಕ ಹಾರಾಟ ಯಶಸ್ವಿಯಾಗಿದೆ.

    ಚಿಕ್ಕಬಳ್ಳಾಪುರ ಸಮೀಪದ ಅವಲಗುರ್ಕಿ ಗ್ರಾಮದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಸ್ಥಾಪಿಸಲಾಗಿದೆ. 2023 ರ ಜನವರಿ ತಿಂಗಳಲ್ಲಿ ಪ್ರತಿಮೆಯನ್ನು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಇದನ್ನೂ ಓದಿ: ಹಾಸನದಿಂದ ಜೀರೋ ಟ್ರಾಫಿಕ್‌ನಲ್ಲಿ ಬಂದ್ರೂ ಅರ್ಧ ಗಂಟೆ ಚಿಕಿತ್ಸೆಗೆ ವಿಳಂಬ – ನಿಮಾನ್ಸ್‌ನಲ್ಲಿ ಕಂದಮ್ಮ ಸಾವು

  • ಆದಿಯೋಗಿ ಸನ್ನಿಧಾನದಲ್ಲಿ ನಾಗರಪಂಚಮಿ ಸಂಭ್ರಮ

    ಆದಿಯೋಗಿ ಸನ್ನಿಧಾನದಲ್ಲಿ ನಾಗರಪಂಚಮಿ ಸಂಭ್ರಮ

    – ಈಶಾ ಆದಿಯೋಗ ಕೇಂದ್ರದ ನಾಗಮಂಟಪದ ಬಳಿ ನಾಗರಾಧಾನೆ

    ಚಿಕ್ಕಬಳ್ಳಾಪುರ: ಶ್ರಾವಣ ಮಾಸ ಸಾಲು ಸಾಲು ಹಬ್ಬಗಳ ಆಗಮನ, ನಾಡಿನೆಲ್ಲೆಡೆ ನಾಗರಪಂಚಮಿ ಹಬ್ಬ ಸಡಗರ ಸಂಭ್ರಮದಿಂದ ನೇರವೇರಿದೆ. ಎಲ್ಲೆಡೆ ಶ್ರದ್ಧಾ ಭಕ್ತಿಪೂರ್ವಕವಾಗಿ ನಾಗರಪಂಚಮಿ ಹಬ್ಬವನ್ನ ಆಚರಣೆ ಮಾಡಲಾಗಿದ್ದು, ಅದೇ ರೀತಿ ಈಶಾ ಆದಿಯೋಗಿಯ ಸನ್ನಿಧಾನದಲ್ಲೂ ಸಡಗರ ಸಂಭ್ರಮದಿಂದ ನಾಗರಪಂಚಮಿ ಆಚರಣೆ ಮಾಡಲಾಗಿದೆ.

    ಚಿಕ್ಕಬಳ್ಳಾಪುರ ತಾಲ್ಲೂಕಿನ ಈಶಾ ಯೋಗಕೇಂದ್ರದಲ್ಲಿರುವ 112 ಅಡಿ ಎತ್ತರದ ಆದಿಯೋಗಿ ಶಿವನ ಮುಂಭಾಗದ ನಾಗಮಂಟಪದ ಬಳಿ ನಾಗರಪಂಚಮಿಯನ್ನ ಸಡಗರ ಸಂಭ್ರಮದಿಂದ ಅಚರಣೆ ಮಾಡಲಾಯಿತು. ನಾಗರಪಂಚಮಿಯ ಅಂಗವಾಗಿ ನಾಗಮಂಟಪದ‌ ಬಳಿ ನಾಗಮಂಡಲ ರಚನೆ ಮಾಡಿ ನಾಗಾರಾಧಾನೆ ಮಾಡಲಾಯಿತು. ಉಡುಪಿ ಮೂಲದ ನಾಗಪಾತ್ರಿಗಳು ನಾಗಾರಾಧಾನ ನೃತ್ಯ ನಡೆಸಿದರು. ಇನ್ನೂ ನಾಗಾರಾಧನ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಭಕ್ತರನ್ನುದ್ದೇಶಿ ಮಾತನಾಡಿದ, ಸದ್ಗುರು ಜಗ್ಗಿ ವಾಸುದೇವ್ 19 ವರ್ಷಗಳ ನಂತರ ಶ್ರಾವಣ‌ಮಾಸದಲ್ಲಿ ನಾಗರಪಂಚಮಿ ಆಗಮನವಾಗಿದ್ದು ಸಡಗರ ಸಂಭ್ರಮದಿಂದ ನಾಗಾರಾಧನೆ ಮಾಡುವ ಮೂಲಕ ನಾಗನ ಕೃಪೆಗೆ ಭಕ್ತರು ಪಾತ್ರರಾಗುವಂತೆ ಕೋರಿದರು.

    ಹೌದು. ನಾಗಮಂಟಪಕ್ಕೆ ಮಂಗಳಾರತಿ ಮಾಡುವ ಮೂಲಕ ನಾಗಾರಾಧನಾ ಕಾರ್ಯಕ್ರಮ ಆರಂಭವಾಯಿತು. ನಾಗಮಂಡಲದ ಸುತ್ತಲೂ ಡಮರುಗ ತಾಳ‌ಮೇಳ ವಾದ್ಯಗಳ ಸದ್ದಿಗೆ ಹೆಣ್ಣು ಗಂಡು ವೇಷ ಧರಿಸಿದ್ದ ಉಡುಪಿ ಮೂಲದ ನಾಗಪಾತ್ರಿಗಳು ನೃತ್ಯ ಮಾಡುತ್ತಾ ನಾಗರಾಧನ ಕಾರ್ಯಕ್ರಮ ನಡೆಸಿಕೊಟ್ಟರು. ಸರಿಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ನಾಗಾರಾಧನ ನೃತ್ಯ ಭಕ್ತರ ಕಣ್ಮನ ಸೆಳೆಯಿತು. ಕರಾವಳಿ ತುಳುನಾಡು ಭಾಗದಲ್ಲಿ ಮಾತ್ರ ಮಾಡಲಾಗುತ್ತಿದ್ದ ಈ‌ ನಾಗಾರಾಧನ ಕಾರ್ಯಕ್ರಮ ಈಶಾ ಆದಿಯೋಗಿ ಕೇಂದ್ರದಲ್ಲೂ ಶ್ರದ್ದಾ ಭಕ್ತಿಯಿಂದ ನೇರವೇರಿತು. ನಾಗರಪಂಚಮಿಯ ಆಚರಣೆ ವೇಳೆ ಬಹುಭಾಷಾ ನಟಿ ತಮನ್ನಾ ಭಾಟಿಯಾ, ನಟಿ ಶ್ರೀನಿಧಿ ಶೆಟ್ಟಿ, ನಟಿ ಮಯೂರಿ ಕುಟುಂಬ ಸಮೇತ ಆಗಮಿಸಿ ದೈವದ ಕೃಪೆಗೆ ಪಾತ್ರರಾದರು.

    ನಾಗರಪಂಚಮಿಯ ಅಚರಣೆಯಲ್ಲಿ ಗಣ್ಯಾತಿಗಣ್ಯರ ಜೊತೆ ಸಹಸ್ರಾರು ಭಕ್ತ ಸಮೂಹ ಸಹ ಭಾಗವಹಿಸಿ ನಾಗರಾಧನೆ ಮಾಡುವ ಮೂಲಕ ನಾಗನ ಕೃಪೆಗೆ ಪಾತ್ರರಾದರು. ಇನ್ನೂ ಇದಕ್ಕೂ ಮುನ್ನ ಸರ್ಪ ದೋಷ ನಿವಾರಣಾ ಆಶ್ಲೇಷ ಬಲಿ ಪೂಜೆ ಸಹ ನೇರವೇರಿದ್ದು ಆ ಪೂಜಾ ಕೈಂಕರ್ಯದಲ್ಲೂ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ಕಿ.ಮೀ ದೂರದ ಬೆಟ್ಟದಿಂದ ಅಪರಿಚಿತ ವ್ಯಕ್ತಿಯ ಮೃತ ದೇಹ ಹೊತ್ತು ತಂದ ಸೈನಿಕರು, ಪಿಎಸ್ಐ

    5 ಕಿ.ಮೀ ದೂರದ ಬೆಟ್ಟದಿಂದ ಅಪರಿಚಿತ ವ್ಯಕ್ತಿಯ ಮೃತ ದೇಹ ಹೊತ್ತು ತಂದ ಸೈನಿಕರು, ಪಿಎಸ್ಐ

    ಚಿಕ್ಕಬಳ್ಳಾಪುರ: ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದ ಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ (Jalari Lakshmi Narasimha Swamy Temple) ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

    ಸುಮಾರು 50 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯಾಗಿದ್ದು ಗುರುತು ಪತ್ತೆಯಾಗಿಲ್ಲ. ಹತ್ತಾರು ಕಿಲೋಮೀಟರ್ ಬೆಟ್ಟದ ಸಾಲಿದ್ದು ಸರಿಸುಮಾರು 5-6 ಕಿಲೋಮೀಟರ್ ದೂರದಲ್ಲಿ ಕುರಚಲು ಕಾಡಿನ ಮಧ್ಯೆ ವ್ಯಕ್ತಿಯ ಮೃತದೇಹ ಸಿಕ್ಕಿದೆ.

    ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವ ಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ (Chikkaballapura SP) ಗಮನಕ್ಕೆ ತಂದಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತದೇಹ ಹೊತ್ತು ಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

    ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪ್ರದೀಪ್ ಪೂಜಾರಿ ಹಾಗೂ ಅವರ ಸಿಬ್ಬಂದಿ ಸೇರಿದಂತೆ-ಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿ ಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    ಚಿಕ್ಕಬಳ್ಳಾಪುರದಲ್ಲಿ (Chikkaballapur) ನಿರ್ಮಾಣವಾದ ಆದಿಯೋಗಿ (Adiyogi) ಶಿವನ ದರ್ಶನಕ್ಕಾಗಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಿನ್ನೆ ಸಂಜೆ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸ್ ಮತ್ತು ಇಶಾ (Isha) ಫೌಂಡೇಶನ್ ಗೂ ಮಾಹಿತಿ ನೀಡದೇ ಸದ್ದಿಲ್ಲದೇ ಬಂದು ಶಿವನ ದರ್ಶನ ಪಡೆದಿದ್ದಾರೆ. ಅನಿರೀಕ್ಷಿತ ಭೇಟಿಯಲ್ಲಿ ರಜನಿಕಾಂತ್ ಕಂಡ ಅವರ ಅಭಿಮಾನಿಗಳು ಪುಳಗೊಂಡಿದ್ದಾರೆ.

    ಮೂರು ದಿನಗಳ ಶೂಟಿಂಗ್ ಗಾಗಿ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದರು. ಮಂಗಳೂರಿನ ಶೂಟಿಂಗ್ ಮುಗಿಸಿಕೊಂಡು ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮದ ಬಳಿ ಇರುವ ಇಶಾಯೋಗಕ್ಕೂ ಭೇಟಿ ನೀಡಿ ಆದಿಯೋಗಿಯ ದರ್ಶನ ಪಡೆದು ವಾಪಸ್ಸಾಗಿದ್ದಾರೆ. ಇದನ್ನೂ ಓದಿ:ಸಿನಿಮಾ ಶಿವರಾತ್ರಿ : ಬೆಂಗಳೂರಿನಲ್ಲಿ ‘ರಾಜಕುಮಾರ’, ಹೈದರಾಬಾದ್ ನಲ್ಲಿ ‘ಕಾಂತಾರ’

    ರಜನಿಕಾಂತ್ ಯಾವಾಗಲೂ ಹೀಗೆ ಅನಿರೀಕ್ಷಿತ ಭೇಟಿ ಕೊಡುತ್ತಲೇ ಇರುತ್ತಾರೆ. ಅಧ್ಯಾತ್ಮಕ ಜೀವಿಯೂ ಆಗಿರುವ ಅವರು ಅನೇಕ ದೇವಸ್ಥಾನಗಳಿಗೆ ಹೀಗೆ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹಿಮಾಲಯಕ್ಕೆ ಅವರು ಆಗಾಗ್ಗೆ ಹೋಗುತ್ತಾರೆ. ಹಾಗೆಯೇ ಸಾಮಾನ್ಯ ಭಕ್ತನಂತೆ ಆಗಮಿಸಿ ಆದಿಯೋಗಿಯ ದರ್ಶನ ಪಡೆದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು: ನಂದಿ ಬೆಟ್ಟದ ಬಳಿಯ ಆವಲಗುರ್ಕಿ ಗ್ರಾಮದಲ್ಲಿ ಇಶಾ ಫೌಂಡೇಷನ್‌ (Isha Foundation) ಸ್ಥಾಪಿಸಿರುವ ಆದಿಯೋಗಿ ಪ್ರತಿಮೆಯನ್ನು(Adiyogi Statue) ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ ವಜಾಗೊಳಿಸಿದೆ.

    ಅರ್ಜಿದಾರರು ತಪ್ಪು ಮಾಹಿತಿ ನೀಡಿ ಪಿಐಎಲ್ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್‌ (High Court) ಅರ್ಜಿಯನ್ನು ವಜಾಗೊಳಿಸಿತು.

    ಬೇರೆಯವರ ಮೇಲೆ ಬೆರಳು ತೋರಿಸುವ ಮುನ್ನ ನೀವು ಸರಿಯಾಗಿರಬೇಕು. ಉದ್ದೇಶ ಮಾತ್ರವಲ್ಲ, ಮಾರ್ಗವೂ ಶುದ್ಧವಿರಬೇಕು ಎಂದು ಮಹಾತ್ಮ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿದ ಸಿಜೆ ಪ್ರಸನ್ನ ಬಿ ವರಾಳೆ ಅರ್ಜಿ ವಜಾಗೊಳಿಸಿ ಉತ್ತಮ ಹಿನ್ನೆಲೆಯುಳ್ಳವರು ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದರು. ಇದನ್ನೂ ಓದಿ: ಭಾರತದಲ್ಲಿ ಟ್ವಿಟ್ಟರ್ ಬ್ಲೂ ಟಿಕ್ ಬೇಕಾದ್ರೆ ಶುಲ್ಕ ಪಾವತಿಸಿ

    ಅರ್ಜಿದಾರರ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗಪಡಿಸಿಲ್ಲ. ಪಿಐಎಲ್‌ ನಿಯಮಗಳನ್ನು ಪಾಲಿಸದೇ ವಾಸ್ತವಾಂಶವನ್ನು ಮುಚ್ಚಿಟ್ಟು ಸಲ್ಲಿಸಲಾಗಿದೆ ಎಂದು ಇಶಾ ಫೌಂಡೇಶನ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು.

    ಏನಿದು ಪ್ರಕರಣ?
    ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ಎಸ್‌. ಕ್ಯಾತಪ್ಪ ಮತ್ತಿತರರು ಕಾನೂನು ಉಲ್ಲಂಘಿಸಿ ಇಶಾ ಫೌಂಡೇಷನ್‌ ಆದಿಯೋಗಿ ಪ್ರತಿಮೆ ಸ್ಥಾಪನೆಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

    ಅರ್ಜಿದಾರರ ಪರ ಎಂ.ಶಿವಪ್ರಕಾಶ್‌, ನಂದಿ ಗಿರಿಧಾಮದ ಬೆಟ್ಟ (Nandi Hills) ಸೇರಿದಂತೆ ನರಸಿಂಗ ದೇವರ ಬೆಟ್ಟಗಳ ಸಾಲುಗಳು ಈ ಭಾಗದ ಜಲ ಮೂಲಗಳಾಗಿದೆ. ನರಸಿಂಹ ದೇವರ ವಲಯಕ್ಕೆ ಸೇರಿವೆ. ಈ ಬೆಟ್ಟಗಳ ಸಾಲಿನಲ್ಲಿ ಔಷಧ ಸಸ್ಯಗಳು ದಟ್ಟವಾಗಿವೆ. ಸಾಲು ಬೆಟ್ಟಗಳ ಮಧ್ಯಭಾಗದಲ್ಲಿ ಇಶಾ ಪ್ರತಿಷ್ಠಾನಕ್ಕೆ ಅರಣ್ಯ ಸೇರಿ ನಾನಾ ಕಾಯ್ದೆಗಳನ್ನು ಉಲ್ಲಂಘಿಸಿ ವಾಣಿಜ್ಯ ಉದೇಶಕ್ಕಾಗಿ ಸರಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂದು ವಾದಿಸಿದ್ದರು. ಈ ಹಿಂದಿನ ವಿಚಾರಣೆಯ ವೇಳೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿ ಮಧ್ಯಂತರ ಆದೇಶ ಪ್ರಕಟಿಸಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ನೋಡಲು ಬರೋ ಭಕ್ತರಿಂದ ಹಣ ವಸೂಲಿ – ಗ್ರಾಪಂ ವಿರುದ್ಧ ಆರೋಪ

    112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ನೋಡಲು ಬರೋ ಭಕ್ತರಿಂದ ಹಣ ವಸೂಲಿ – ಗ್ರಾಪಂ ವಿರುದ್ಧ ಆರೋಪ

    ಚಿಕ್ಕಬಳ್ಳಾಪುರ: ಇಶಾ ಫೌಂಡೇಷನ್ (Isha Foundation) ವತಿಯಿಂದ ಚಿಕ್ಕಬಳ್ಳಾಪುರದ ಆವಲಗುರ್ಕಿ ಬಳಿ 112 ಅಡಿ ಎತ್ತರದ ಆದಿಯೋಗಿ (Adiyogi) ಶಿವನ ವಿಗ್ರಹ ನೋಡಲು ಬರುವ ಭಕ್ತರಿಂದ ಅವಲಗುರ್ಕಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಇಶಾ ಫೌಂಡೇಷನ್ ವತಿಯಿಂದ ಚಿಕ್ಕಬಳ್ಳಾಪುರದ ಅವಲಗುರ್ಕಿ ಬಳಿ 112 ಅಡಿ ಎತ್ತರದ ಆದಿಯೋಗಿ ಶಿವನ ವಿಗ್ರಹ ನಿರ್ಮಾಣ ಮಾಡಿದ್ದರಿಂದ ಪ್ರತಿದಿನ ಸಾವಿರಾರು ಶಿವನ ಭಕ್ತರು ಬೈಕ್ ಹಾಗೂ ಕಾರುಗಳಲ್ಲಿ ಆದಿಯೋಗಿ ಶಿವನ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಸ್ಥಳೀಯ ಗ್ರಾಮ ಪಂಚಾಯಿತಿಯೊಂದು, ತನಗೆ ಸಂಬಂಧವೇ ಇಲ್ಲದಿದ್ದರೂ, ರಸ್ತೆಯಲ್ಲಿ ನಿಂತು ಟೋಲ್ ಸುಂಕದ ರೀತಿಯಲ್ಲಿ ವಾಹನಗಳಿಗೆ ಹಣ ವಸೂಲಿ ಮಾಡುವುದರ ಮೂಲಕ ಆದಿಯೋಗಿ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ಆದಿಯೋಗಿ ಶಿವನನ್ನು ನೋಡಲು ಬೈಕ್ ಹಾಗೂ ಕಾರುಗಳಲ್ಲಿ ಪ್ರತಿ ದಿನ ಸಾವಿರಾರು ಜನ ಆಗಮಿಸುತ್ತಿದ್ದು, ಇದನ್ನೇ ತಮ್ಮ ಸೌಭಾಗ್ಯ ಎಂದುಕೊಂಡಿರುವ ಸ್ಥಳೀಯ ಅವಲಗುರ್ಕಿ ಗ್ರಾಪಂ ಕಾರ್ಯಾಲಯದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ವಡ್ರೇಪಾಳ್ಯದ ಕ್ರಾಸ್ ಬಳಿ ಇಶಾ ಪೌಂಡೇಷನ್‌ಗೆ ಹೋಗುವ ವಾಹನಗಳನ್ನು ತಡೆದು, ಬೈಕ್‌ಗೆ 10 ರೂಪಾಯಿ ಹಾಗೂ ಕಾರುಗಳಿಗೆ 30 ರೂಪಾಯಿ ಸುಂಕ ವಸೂಲಿ ಮಾಡುತ್ತಿದ್ದಾರೆ. ಅಸಲಿಗೆ ಪಂಚಾಯಿತಿಯಿಂದ ರಸ್ತೆಯಾಗಲಿ, ನೀರು, ಸ್ವಚ್ಛತೆ, ನೋಡಲು ಬರುವ ಸ್ಥಳ ಸಹ ಯಾವುದು ಸೇರಿಲ್ಲ, ಆದರೆ ಜನ ತಮ್ಮ ವ್ಯಾಪ್ತಿಯ ಏರಿಯಾದಲ್ಲಿ ಸಂಚಾರ ಮಾಡುತ್ತಿದ್ದಾರೆ ಎಂಬ ಅನಧಿಕೃತವಾಗಿ ಸುಂಕ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ

    ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಪಕ್ಕಾ ಖಾಸಗಿ ಜಮೀನಿನಲ್ಲಿ ಅಂದರೆ ಇಶಾ ಪೌಂಡೇಷನ್‌ಗೆ ಸೇರಿದ ಖಾಸಗಿ ಜಾಗದಲ್ಲಿ ಆದಿಯೋಗಿ ಪ್ರತಿಷ್ಠಾಪನೆ ಮಾಡಲಾಗಿದೆ. ರಸ್ತೆಗಳನ್ನು ಸಹ ಇಶಾ ಪೌಂಡೇಷನ್ ಅಭಿವೃದ್ಧಿ ಮಾಡಿದೆ ಎನ್ನಲಾಗಿದೆ. ಸ್ಥಳೀಯ ಪಂಚಾಯಿತಿಯಿಂದ ಇದುವರೆಗೂ ಯಾವುದೇ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಆದರೂ ಅವಲಗುರ್ಕಿ ಗ್ರಾಪಂನವರು ವಾಹನ ಪ್ರವೇಶ ಶುಲ್ಕವನ್ನು ವಸೂಲಿ ಮಾಡುತ್ತಿದ್ದಾರೆ.

    ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಕಚೇರಿಗೆ ಹೋದರೂ ಅಲ್ಲಿಯೂ ಬೀಗ ಹಾಕಲಾಗಿದೆ. ಒಟ್ಟಿನಲ್ಲಿ ವೀಕೆಂಡ್‌ನಲ್ಲಿ ನಂದಿ ಬೆಟ್ಟ ಪ್ರವಾಸ ಮುಗಿಸಿಕೊಂಡು 112 ಅಡಿಗಳ ಆದಿಯೋಗಿ ಶಿವನ ದರ್ಶನಕ್ಕೆ ಆಗಮಿಸುತ್ತಿದ್ದಾರೆ, ಆದರೆ ಇದನ್ನೇ ಸೌಭಾಗ್ಯವೆಂದು ಬಂಡವಾಳ ಮಾಡಿಕೊಳ್ಳಲು ಮುಂದಾಗಿರುವ ಪಂಚಾಯಿತಿಯೊಂದು ಕಾನೂನುಬಾಹಿರ ವಸೂಲಿ ಮಾಡುತ್ತಿದ್ದು, ಇದು ಶಿವನ ಭಕ್ತರು ಹಾಗೂ ಇಶಾ ಫೌಂಡೇಷನ್‌ನ ಅಸಮಾಧಾನ ಆಕ್ರೋಶಕ್ಕೂ ಕಾರಣವಾಗಿದೆ. ಇದನ್ನೂ ಓದಿ: ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ

    ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ

    ಚಿಕ್ಕಬಳ್ಳಾಪುರ: ಮಕರ ಸಂಕ್ರಾತಿಯ ಶುಭದಿನದಂದು ಆವಲಗುರ್ಕಿ ಬಳಿ ಇಶಾ ಫೌಂಡೇಶನ್ (Isha Foundation) ವತಿಯಿಂದ‌ ನಿರ್ಮಾಣಗೊಂಡಿದ್ದ 112 ಅಡಿ ಎತ್ತರದ ಆದಿಯೋಗಿಯ (Adiyogi) ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ (CM Basavaaj Bommai) ಅನಾವರಣಗೊಳಿಸಿದ್ದಾರೆ.

    ಈ ಆದಿಯೋಗಿಯ ಮುಖ ಪ್ರತಿಮೆಯು ಕೊಯಮತ್ತೂರಿನ ಈಶ ಯೋಗ ಕೇಂದ್ರದ ಪ್ರತಿರೂಪವಾಗಿದೆ. ಅನಾವರಣದ ನಂತರ ʼಆದಿಯೋಗಿ ದಿವ್ಯ ದರ್ಶನಂʼ ಹೆಸರಿನಲ್ಲಿ 112 ಅಡಿ ಆದಿಯೋಗಿಯ ಮೇಲೆ 14 ನಿಮಿಷಗಳ ವಿಶಿಷ್ಟ ಬೆಳಕು ಮತ್ತು ಧ್ವನಿ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಜೊತೆಗೆ ಸಚಿವ ಸುಧಾಕರ್‌ ಮತ್ತು ನಾಗೇಶ್‌ ಪಾಲ್ಗೊಂಡಿದ್ದರು.

    ಆದಿಯೋಗಿಯ ಅನಾವರಣಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ಕಳೆದ ವರ್ಷ ಅಕ್ಟೋಬರ್ 09 ರಂದು ನಾಗಪ್ರತಿಷ್ಟೆಯನ್ನು ಸದ್ಗುರು ಜಗ್ಗಿ ವಾಸುದೇವ್‌ ನೆರವೇರಿಸಿದ್ದರು. ಆದಿಯೋಗಿಗೆ ಮಹಾ ಮಂಗಳಾರತಿಯ ನೃತ್ಯ, ಕೇರಳದ ತೆಯ್ಯಂ ಬೆಂಕಿ ನೃತ್ಯ, ಹಾಗೂ  ಜಗ್ಗಿ ವಾಸುದೇವ್  ಅವರ ಪುತ್ರಿಯ ಭರತನಾಟ್ಯ ಎಲ್ಲರ ಮನಸೊರೆಗೊಂಡಿತ್ತು

    ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯವು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಯೋಗದ ಮೂಲವಾದ ಆದಿಯೋಗಿಯ 112-ಅಡಿ ಪ್ರತಿಮಾರೂಪದ ಚಿತ್ರವನ್ನು ‘ಇನ್‌ಕ್ರೆಡಿಬಲ್ ಇಂಡಿಯಾ’ ತಾಣವೆಂದು ಪಟ್ಟಿ ಮಾಡಿದೆ. ಈ ಪ್ರತಿಮೆಯು ಗಿನ್ನೆಸ್ ವಿಶ್ವ ದಾಖಲೆಗಳಿಂದ ವಿಶ್ವದ ‘ಅತಿದೊಡ್ಡ ಬಸ್ಟ್ ಶಿಲ್ಪ’ ಎಂದು ಗುರುತಿಸಲ್ಪಟ್ಟಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಒಂದು ದಿನದ ಸಂಕ್ರಾಂತಿ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ: ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಒಂದು ದಿನದ ಸಂಕ್ರಾಂತಿ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ: ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು: ನಂದಿ ಬೆಟ್ಟದ ಬಳಿ ಇಶಾ ಫೌಂಡೇಷನ್‌ (Isha Foundation) ಸ್ಥಾಪಿಸಿರುವ ಆದಿಯೋಗಿ ಪ್ರತಿಮೆ (Adiyogi Statue) ಅನಾವರಣ ಕಾರ್ಯಕ್ರಮಕ್ಕೆ ಹೈಕೋರ್ಟ್‌ (High Court) ಅನುಮತಿ ನೀಡಿದೆ.

    ಜ.15 ಸಂಕ್ರಾಂತಿಯಂದು ನಿಗದಿಯಾದ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಸಿಎಂ ಆಗಮಿಸುತ್ತಿದ್ದಾರೆ. ಪಿಐಎಲ್ ದಾಖಲಿಸುವ ಮುನ್ನವೇ ಈ ಕಾರ್ಯಕ್ರಮ ನಿಗದಿಯಾಗಿದೆ. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡಬೇಕು ಎಂದು ಇಶಾ ಫೌಂಡೇಶನ್‌ ಮನವಿ ಮಾಡಿತ್ತು.

    ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್‌ ಮರಗಳನ್ನು ಕಡಿಯಬಾರದು, ತೀರಾ ಅಗತ್ಯವಾಗಿರುವ ವ್ಯವಸ್ಥೆ ಮಾತ್ರ ಮಾಡಬೇಕು. ಉಳಿದಂತೆ ಯಥಾಸ್ಥಿತಿ ಮುಂದುವರಿಯಬೇಕು ಎಂದು ಷರತ್ತು ವಿಧಿಸಿ ಒಂದು ದಿನ ಮಟ್ಟಿಗೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದೆ. ಇದನ್ನೂ ಓದಿ: ವಿಶ್ವದ ಅತೀ ಉದ್ದದ ನದಿ ವಿಹಾರ ನೌಕೆ `ಎಂವಿ ಗಂಗಾ ವಿಲಾಸ್’ ಕ್ರೂಸ್‌ಗೆ ಮೋದಿ ಅದ್ಧೂರಿ ಚಾಲನೆ

    ಏನಿದು ಪ್ರಕರಣ?
    ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ಎಸ್‌. ಕ್ಯಾತಪ್ಪ ಮತ್ತಿತರರು ಕಾನೂನು ಉಲ್ಲಂಘಿಸಿ ಇಶಾ ಫೌಂಡೇಷನ್‌ ಆದಿಯೋಗಿ ಪ್ರತಿಮೆ ಸ್ಥಾಪನೆಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

    ಅರ್ಜಿದಾರರ ಪರ ಎಂ.ಶಿವಪ್ರಕಾಶ್‌, ನಂದಿ ಗಿರಿಧಾಮದ ಬೆಟ್ಟ (Nandi Hills) ಸೇರಿದಂತೆ ನರಸಿಂಗ ದೇವರ ಬೆಟ್ಟಗಳ ಸಾಲುಗಳು ಈ ಭಾಗದ ಜಲ ಮೂಲಗಳಾಗಿದೆ. ನರಸಿಂಹ ದೇವರ ವಲಯಕ್ಕೆ ಸೇರಿವೆ. ಈ ಬೆಟ್ಟಗಳ ಸಾಲಿನಲ್ಲಿ ಔಷಧ ಸಸ್ಯಗಳು ದಟ್ಟವಾಗಿವೆ. ಸಾಲು ಬೆಟ್ಟಗಳ ಮಧ್ಯಭಾಗದಲ್ಲಿ ಇಶಾ ಪ್ರತಿಷ್ಠಾನಕ್ಕೆ ಅರಣ್ಯ ಸೇರಿ ನಾನಾ ಕಾಯ್ದೆಗಳನ್ನು ಉಲ್ಲಂಘಿಸಿ ವಾಣಿಜ್ಯ ಉದೇಶಕ್ಕಾಗಿ ಸರಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂದು ವಾದಿಸಿದ್ದರು.

    ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರ್ಲೆ ಮತ್ತು ನ್ಯಾಯಮೂರ್ತಿ ಆಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿ ಮಧ್ಯಂತರ ಆದೇಶ ಪ್ರಕಟಿಸಿತ್ತು.

    ಪ್ರತಿವಾದಿಗಳಾದ ಕೇಂದ್ರ ಪರಿಸರ ಇಲಾಖೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂಗರ್ಭ ಇಲಾಖೆಯ ನಿರ್ದೇಶಕರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ನೋಟಿಸ್‌ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k