Tag: ಆದಿವಾಸಿ

  • 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್

    15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್

    ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನೂ ವಶಕ್ಕೆ ಪಡೆಯಲಾಗಿದೆ. 8ನೇ ತರಗತಿ ಓದುತ್ತಿದ್ದ ಬಾಲಕಿಯು ಪರಿಚಿತ ಬಾಲಕನೊಂದಿಗೆ ಹೊರಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಇಬ್ಬರ ವಿರುದ್ಧ ಪೋಕ್ಸೋ ಹಾಗೂ ಸಂಬಂಧಪಟ್ಟ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಪ್ರಾಪ್ತನಿಂದಲೇ ಅತ್ಯಾಚಾರ: ಮತ್ತೊಂದು ಘಟನೆಯಲ್ಲಿ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತೆಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿಯನ್ನು ಬರ್ಫಿ ನೀಡುವ ಆಮಿಷವೊಡ್ಡಿ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್

    ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆಯ ಕುಟುಂಬ ಸದಸ್ಯರು ಆರೋಪಿ ಮನೆಗೆ ತೆರಳಿದಾಗ, ಆರೋಪಿಯ ತಂದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆಯ ಸಂಬಂಧ ಆರೋಪಿಯ ತಂದೆಯನ್ನೂ ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ

    STOP RAPE

    ನಗರದ ಹೆಚ್ಚುವರಿ ಎಸ್ಪಿ ರಾಹುಲ್ ಭಾಟಿ, ಆರೋಪಿಗಳ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಕ್ಯಾಂಟ್‌ನ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡಿನಲ್ಲಿ ರೋಡಿಲ್ಲದೇ ಗರ್ಭಿಣಿ ಪರದಾಟ

    ಕಾಫಿನಾಡಿನಲ್ಲಿ ರೋಡಿಲ್ಲದೇ ಗರ್ಭಿಣಿ ಪರದಾಟ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಆದಿವಾಸಿಗಳ ಗೋಳು ಕೇಳುವವರಿಲ್ಲದಂತಾಗಿದೆ. ರಸ್ತೆ ಇಲ್ಲದೇ ಬಾಣಂತಿಯನ್ನು ಬಡಿಗೆಯಲ್ಲಿ ಹೊತ್ತೊಯ್ದ ಮನ ಕಲಕುವ ಘಟನೆ ಕಳಸ ತಾಲೂಕಿನ ಬಿಳಿಗಲ್ ಗ್ರಾಮದಲ್ಲಿ ನಡೆದಿದೆ.

    ರಸ್ತೆ ಇಲ್ಲದೇ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ದಾಟಿ, 2 ಕಿ.ಮೀ ಹೊತ್ತು ಗ್ರಾಮಸ್ಥರು ಸಾಗಿದ್ದಾರೆ. ಕುದುರೆಮುಖ ಕಂಪನಿ ಆರಂಭವಾದಾಗ ಬಿಳಗಲ್ ಗ್ರಾಮವನ್ನ ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಈವರೆಗೂ ಇವರ ಬಗ್ಗೆ ಯಾವ ಅಧಿಕಾರಿಗಳೂ ಗಮನ ಕೊಟ್ಟಿರಲಿಲ್ಲ. ಇದನ್ನೂ ಓದಿ: ಆಸ್ಪತ್ರೆಗಾಗಿ ಟ್ಟಿಟ್ಟರ್ ಅಭಿಯಾನ – ದೇಶದ 35 ಟಾಪ್ ಹ್ಯಾಷ್ ಟ್ಯಾಗ್ ನಡಿ ಟ್ರೆಂಡಿಂಗ್

    ಯಾರಾದ್ರೂ ಕಾಯಿಲೆ ಬಿದ್ದರೆ ಅವರನ್ನೂ ಗ್ರಾಮದಿಂದ ಹೆದ್ದಾರಿವರೆಗೂ ಹೊತ್ತುಕೊಂಡೇ ಬರಬೇಕೆಂದು ಗ್ರಾಮಸ್ಥರು ಕಣ್ಣೀರು ಹಾಕಿದ್ದಾರೆ. ಸದ್ಯ ಗ್ರಾಮದಲ್ಲಿ 35 ಆದಿವಾಸಿ ಕುಟುಂಬಗಳು ವಾಸಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆಟ್ಟ-ಕೆಟ್ಟ ಪದಗಳಿಂದ ಬೈದ್ರೆ ಈ ಊರಿನಲ್ಲಿ ಜನರಿಗೆ ಒಲಿಯುತ್ತೆ ದೇವರು

    ಕೆಟ್ಟ-ಕೆಟ್ಟ ಪದಗಳಿಂದ ಬೈದ್ರೆ ಈ ಊರಿನಲ್ಲಿ ಜನರಿಗೆ ಒಲಿಯುತ್ತೆ ದೇವರು

    ಮಡಿಕೇರಿ: ನಾವು ದೇವರನ್ನು ಏನಂತಾ ಬೇಡ್ತೀವಿ, ಒಳ್ಳೆ ಬುದ್ಧಿ ಕೊಡಪ್ಪಾ ಅಥವಾ ನಾನು ಮಾಡುವ ಕೆಲಸದಲ್ಲಿ ಯಶಸ್ಸುಗಳಿಸುವಂತೆ ಮಾಡಪ್ಪ ಅಂತಾ ಕೇಳ್ಕೋತೀವಿ. ಅವರು ಬೇಡಿಕೊಂಡಿದ್ದು ನಡೆದ್ರೆ, ಕೋಳಿಯನ್ನು ಮೇಲಕ್ಕೆ ಎಸೆಯುವ ಮೂಲಕ ಹರಕೆ ತೀರಿಸುತ್ತಾರೆ. ಆದ್ರೆ ಇಲ್ಲಿ ವಿವಿಧ ವೇಷ ಹಾಕಿಕೊಂಡು ದೇವರನ್ನು ಬೈದ್ರೆ ದೇವ್ರು ಒಲಿಯುತ್ತೆ ಎಂದು ಜನರು ನಂಬಿದ್ದಾರೆ.

    ಕೊಡಗು ಜಿಲ್ಲೆ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ದೇವರ ಪುರದಲ್ಲಿ ಪ್ರತಿ ವರ್ಷ ಶ್ರೀ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ‘ಕುಂಡೆ ಹಬ್ಬ’ ಆಚರಿಸಲಾಗುತ್ತೆ. ಈ ಭದ್ರಕಾಳಿ ದೇವರಿಗೆ ವಿವಿಧ ವೇಷ ತೊಟ್ಟು ಕೆಟ್ಟ ಪದಗಳಿಂದ ಬೈದ್ರೆ ದೇವರು ಒಲಿಯುತ್ತದೆ ಅನ್ನೋ ನಂಬಿಕೆ ಇಲ್ಲಿನ ಜನ್ರದ್ದು. ತಿತಿಮತಿ, ಪಾಲಿಬೆಟ್ಟ, ಗೋಣಿಕೊಪ್ಪಲು, ಸಿದ್ದಾಪುರ ಕುಟ್ಟ ಇಲ್ಲಿನ ಸುತ್ತಮುತ್ತಲಿನ ಆದಿವಾಸಿಗಳು ಈ ಹಬ್ಬವನ್ನ ಆಚರಿಸ್ತಾರೆ. ಇದನ್ನೂ ಓದಿ: ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ: ಥಾವರ್ ಚಂದ್ ಗೆಹ್ಲೋಟ್ 

    ಹೀಗೆ ಅಂಗಡಿಗಳಿಗೆ ಹೋಗಿ ಮತ್ತು ಆದಿ ಬೀದಿಯಲ್ಲಿ ಹೋಗೋ ಜನ್ರನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಈ ಹಬ್ಬದ ವಿಶೇಷತೆ. ಹುಡುಗರು, ಹುಡುಗಿ ತರಹ ವಿವಿಧ ವೇಷಭೂಷಣ ತೊಟ್ಟು ಕುಣಿದು ಕುಪ್ಪಳಿಸುತ್ತಾ ದೇವರನ್ನ ಬೈದು ಹರಕೆ ತೀರಿಸುತ್ತಾರೆ ಕೊನೆಯಲ್ಲಿ ಜೀವಂತ ಕೋಳಿಯನ್ನು ಮೇಲಕ್ಕೆ ಎಸೆಯುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.

    ಹುಡುಗರೆಲ್ಲಾ ಹುಡುಗಿಯ ವೇಷತೊಟ್ಟು ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕರನ್ನ ಅಡ್ಡಕಟ್ಟಿ ಭಿಕ್ಷೆ ಬೇಡುವುದು ಇಲ್ಲಿನ ಸಂಪ್ರದಾಯ. ಹುಡುಗಿ, ಹೆಂಗಸರು, ಮುದುಕಿ, ಇನ್ನಿತರ ವೇಷಭೂಷಣಗಳನ್ನು ಧರಿಸುತ್ತಾರೆ. ಡಬ್ಬಗಳು, ಡೋಲು, ಪಾತ್ರೆ ಸೋರೆಕಾಯಿ ಬುರುಡೆ ಸೇರಿದಂತೆ ಇನ್ನಿತರ ವಸ್ತುಗಳಿಂದ ವಿವಿಧ ರೀತಿಯ ಸಂಗೀತ ಬರುವಂತೆ ಮ್ಯೂಸಿಕ್ ಬಾರಿಸುತ್ತಾ ಕೆಟ್ಟಕೆಟ್ಟ ಪದಗಳಿಂದ ಸಿಕ್ಕ-ಸಿಕ್ಕವರನ್ನು ನಿಂದಿಸುತ್ತಾರೆ.

    ಆದಿವಾಸಿಗಳು ತಮ್ಮ ಸಾಕುಪ್ರಾಣಿಗಳಿಗೆ ಹಾಗೂ ತಮಗೆ ಆರೋಗ್ಯದಲ್ಲಿ ವ್ಯತ್ಯಾಸವಾದ್ರೆ, ಈ ಭದ್ರಕಾಳಿ ದೇವರ ಮೊರೆ ಹೋಗಿ ಹರಕೆ ಹೊತ್ತುಕೊಳ್ಳುತ್ತಾರೆ. ಆ ಹರಕೆ ತೀರಿಸಲು ವರ್ಷಕ್ಕೊಂದು ಬಾರಿ ನಡೆಯುವ ಈ ಕುಂಡೆ ಹಬ್ಬದಲ್ಲಿ ಹುಡುಗರು ಹುಡುಗಿ ವೇಷಧರಿಸಿ ಕೆಟ್ಟ ಪದಗಳಿಂದ ಬೈದರೆ ದೇವರು ಒಲಿಯುತ್ತೆ, ಒಳ್ಳೆಯದಾಗುತ್ತದೆ ಎನ್ನುವುದು ಇಲ್ಲಿನ ಜನ್ರ ನಂಬಿಕೆ. ಇದನ್ನೂ ಓದಿ:  ತಮಿಳು ಭಾಷೆಯನ್ನು ಕೇಂದ್ರದ ಅಧಿಕೃತ ಭಾಷೆಯಾಗಿ ಘೋಷಿಸಿ: ಸ್ಟಾಲಿನ್ ಒಟ್ಟಾರೆ ಈ ಆದಿವಾಸಿಗಳ ಆಚರಣೆಯಂತೂ ವಿಭಿನ್ನವಾಗಿದೆ. ಕಾಡಿನೊಳಗೆ ಹಾಗೂ ಕಾಫಿತೋಟಗಳಲ್ಲಿ ವರ್ಷಪೂರ್ತಿ ಕೂಲಿ ಕಾರ್ಮಿಕರಾಗಿ ದುಡಿಯುವ ಈ ಜನ ವರ್ಷಕ್ಕೊಂದು ಬಾರಿ ಬಿಡುವು ಮಾಡಿಕೊಂಡು ಇಂತಹ ಆಚರಣೆ ಮಾಡ್ತಿದ್ದಾರೆ. ಅಲ್ಲದೇ ತಮ್ಮ ಹಿರಿಯರು ನಡೆಸಿಕೊಂಡು ಬಂದ ಪದ್ದತಿ ಆಚಾರ ವಿಚಾರ ರೂಢಿ ಸಂಪ್ರದಾಯವನ್ನ ಮರೆಯದೇ ಈಗಲೂ ಆಚರಿಸುತ್ತಿದ್ದಾರೆ.

  • ಚಿಕ್ಕ ಚಿಕ್ಕ ಕಲ್ಲುಗಳಿಂದ ಪುಟ್ಟ ಕಾಲುವೆ ನಿರ್ಮಿಸಿಕೊಂಡ ಆದಿವಾಸಿ ರೈತರು

    ಚಿಕ್ಕ ಚಿಕ್ಕ ಕಲ್ಲುಗಳಿಂದ ಪುಟ್ಟ ಕಾಲುವೆ ನಿರ್ಮಿಸಿಕೊಂಡ ಆದಿವಾಸಿ ರೈತರು

    – ವಿದ್ಯುತ್, ಮೋಟಾರು ಬೇಡ
    – ಮನವಿಗೆ ಸ್ಪಂದಿಸದ ಸಕಾರ, ರೈತರಿಂದಲೇ ಸಮಸ್ಯೆಗೆ ಪರಿಹಾರ

    ಜೈಪುರ: ಜಗತ್ತಿನ ಸಂಪರ್ಕವಿಲ್ಲದೇ ದಟ್ಟಾರಣ್ಯದಲ್ಲಿ ಬದುಕು ಕಟ್ಟಿಕೊಂಡ ಆದಿವಾಸಿಗಳ ಜೀವನ ಶೈಲಿ ಮಾದರಿ ಆಗಿರುತ್ತೆ. ಆಧುನಿಕ ಜಗತ್ತಿನ ಒತ್ತಡಗಿಳಲ್ಲದ ಅವರ ನೆಮ್ಮದಿಯ ಬದುಕು ನಮ್ಮದಾಗಿರಲಿ ಎಂದು ಎಷ್ಟೋ ಜನ ಬಯಸುತ್ತಾರೆ. ಇದೀಗ ಅಂತವುದೇ ಒಂದು ಆದಿವಾಸಿಗಳ ಉಪಾಯ ಸರ್ಕಾರಕ್ಕೆ ಚಾಟಿ ಬೀಸಿದೆ. ಅರಣ್ಯದಲ್ಲಿ ಚಿಕ್ಕ ಚಿಕ್ಕ ಕಲ್ಲುಗಳನ್ನಿರಿಸಿ ಪುಟ್ಟ ಕಾಲುವೆ ನಿರ್ಮಿಸಿಕೊಂಡಿದ್ದಾರೆ.

    ರಾಜಸ್ಥಾನದ ಉದಯಪುರದಿಂದ 125 ಕಿ ಲೋ ಮೀಟರ್ ದೂರದಲ್ಲಿರುವ ಆದಿವಾಸಿ ಕ್ಷೇತ್ರ ಕೊಟೆಡಾದ ವೀರಾ ಗ್ರಾಮದ  ಸುಮಾರು 20 ರೈತ ಕುಟುಂಬಗಳು ವಾಸವಾಗಿವೆ. ಎಲ್ಲ ಕುಟುಂಬಗಳ ತುಂಡು ಕೃಷಿ ಭೂಮಿಯನ್ನ ಹೊಂದಿದ್ದು, ಅಷ್ಟರಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಆದ್ರೆ ಮಳೆಗಾಲದ ಮಳೆಯಿಂದ ಒಂದು ಬೆಳೆ ಬೆಳೆಯುತ್ತಿದ್ದ ರೈತ ಕುಟುಂಬಗಳಿಗೆ ಎರಡನೇ ಬೆಳೆ ಗಗನ ಕುಸುಮವಾಗಿತ್ತು.

    ಈ ಸಮಸ್ಯೆಗೆ ಪರಿಹಾರ ನೀಡುವಂತೆ ಆದಿವಾಸಿಗಳು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಹಾಗಾಗಿ ತಾವೇ ಕಾಲುವೆ ನಿರ್ಮಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿದ್ದಾರೆ. ಗಗನ ಕುಸುಮವಾಗಿದ್ದ ಎರಡನೇ ಬೆಳೆಯನ್ನ ಬೆಳೆಯುತ್ತಿದ್ದಾರೆ.

    ವಿದ್ಯುತ್ ಕೇಳದ ಪುಟ್ಟ ಕಾಲುವೆ: ಯೆಸ್, ರೈತರು ವಿದ್ಯುತ್ ಕೇಳದ ಪುಟ್ಟ ಕಾಲುವೆ ನಿರ್ಮಿಸಿಕೊಂಡಿದ್ದಾರೆ. ಕೃಷಿ ಜಮೀನಿನ ಮೇಲ್ಭಾಗದಲ್ಲಿ ನದಿ ಹರಿಯುತ್ತಿದೆ. ಹಾಗಾಗಿ ನದಿಯಿಂದಲೇ ಪುಟ್ಟ ಕಾಲುವೆ ನಿರ್ಮಿಸಲು ರೈತ ಕುಟುಂಬಗಳು ಪ್ಲಾನ್ ಮಾಡಿದ್ದವು. ಆದ್ರೆ ಅರಣ್ಯ ಪ್ರದೇಶವಾಗಿದ್ದರಿಂದ ಭೂಮಿ ಸಮತಟ್ಟಾಗಿರಲಿಲ್ಲ. ಆದ್ದರಿಂದ ಅರಣ್ಯದಲ್ಲಿಯ ಕಲ್ಲುಗಳಿಂದಲೇ ಸೇತುವೆ ನಿರ್ಮಿಸಿ, ಮೇಲೆ ಪ್ಲಾಸ್ಟಿಕ್ ಕವರ್ ಹಾಕಿದ್ದಾರೆ. ಈ ಪ್ಲಾಸ್ಟಿಕ್ ಪೇಪರ್ ಮೇಲೆ ನೀರು ಹರಿದು ರೈತರ ಜಮೀನುಗಳಿಗೆ ತಲುಪುತ್ತದೆ.

    ಪ್ಲಾಸ್ಟಿಕ್ ಪೇಪರ್ ಕೊಳೆಯಲ್ಲ. ಹಾಗಾಗಿ ಅದನ್ನ ಕಲ್ಲುಗಳ ಸೇತುವೆ ಮೇಲೆ ಹಾಕಲಾಯ್ತು. ಮಳೆ ಮತ್ತು ಪ್ರವಾಹ ಹೆಚ್ಚಾದಾಗ ಕಲ್ಲುಗಳು ಬಿದ್ದಿರುತ್ತವೆ. ಈ ಸಮಯದಲ್ಲಿ ಸೇತುವೆ ಕೆಲಸಕ್ಕಾಗಿ ಪಾಳಿಯ ಮೇಲೆ ಕೆಲಸ ಮಾಡುತ್ತೇವೆ. ಹಾಗೆಯೇ ಎಲ್ಲರೂ ಸರದಿಯಂತೆ ನೀರನ್ನ ತೆಗೆದುಕೊಳ್ಳುವಂತೆ ಎಂದು ರೈತರು ಹೇಳುತ್ತಾರೆ.

  • ಆದಿವಾಸಿ ಯುವಕನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ಆರೋಪ

    ಆದಿವಾಸಿ ಯುವಕನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ಆರೋಪ

    ಮಡಿಕೇರಿ: ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ ಆದಿವಾಸಿ ಯುವಕರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿರುವ ಆರೋಪ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ದಿಡ್ಡಳ್ಳಿ ಸಮೀಪದ ಅಣ್ಣಿಗೇರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ದಿಡ್ಡಳ್ಳಿ ನಿವಾಸಿಗಳಾದ ನಾಗೇಶ್ ಹಾಗೂ ಸೋಮು ವಾಪಸ್ ಬರುವಾಗ ಅರಣ್ಯ ರಕ್ಷಕರಾದ ನಾಗೇಶ್ ಮತ್ತು ತಿಮ್ಮ ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ದಿಡ್ಡಳ್ಳಿಯಿಂದ ಅಣ್ಣಿಗೇರಿಗೆ ಎಳೆದೊಯ್ದು ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಕೈ, ಕಾಲು ಭಾಗ ಊತ ಬರುವಂತೆ ಮನಸೋ ಇಚ್ಛೆ ಥಳಿಸಿದ್ದಾರೆ.

    ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಯೇ ಕತ್ತರಿಸಿ ನಮ್ಮ ವಿರುದ್ಧ ಸುಳ್ಳು ಹೇಳಿದ್ದಾರೆ. ಮೂಲ ನೆಲೆಗಳಲ್ಲಿ ಗೆಡ್ಡೆ, ಗೆಣಸು, ಮೇವು ಹಾಗೂ ಉರುವಲಿಗೆ ಒಣ ಮರಗಳನ್ನು ಬಳಸಿಕೊಳ್ಳುವ ಹಕ್ಕು ಆದಿವಾಸಿಗಳಿಗೆ ಇದೆ. ಹೀಗಿದ್ದರೂ ವಿನಾಃ ಕಾರಣ ಹಲ್ಲೆ ಮಾಡಿದ್ದಾರೆ. ಕೂಡಲೇ ಇಬ್ಬರನ್ನೂ ಅಮಾನತು ಮಾಡಬೇಕು. ಇದಕ್ಕೆಲ್ಲ ಕುಮ್ಮಕ್ಕು ನೀಡಿರುವ ಮತ್ತಿಗೋಡಿನ ಆರ್‍ಎಫ್‍ಓ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

  • ಮೂಲ ನಿವಾಸಿಗಳಿಗೆ ಹಕ್ಕುಪತ್ರ ನೀಡಿಲ್ಲ, ಏಸು ಪ್ರತಿಮೆ ನಿರ್ಮಾಣಕ್ಕೆ ಜಾಗ ಯಾವ ನ್ಯಾಯ: ಸತೀಶ್

    ಮೂಲ ನಿವಾಸಿಗಳಿಗೆ ಹಕ್ಕುಪತ್ರ ನೀಡಿಲ್ಲ, ಏಸು ಪ್ರತಿಮೆ ನಿರ್ಮಾಣಕ್ಕೆ ಜಾಗ ಯಾವ ನ್ಯಾಯ: ಸತೀಶ್

    ರಾಮನಗರ: ಅರಣ್ಯದಲ್ಲೇ ವಾಸ ಮಾಡುತ್ತಿದ್ದ ಆದಿವಾಸಿ ಇರುಳಿಗರನ್ನು ಒಕ್ಕಲೆಬ್ಬಿಸಿ ಹಕ್ಕುಪತ್ರಗಳನ್ನು ನೀಡದೇ ಸತಾಯಿಸುತ್ತಿರುವ ಜಿಲ್ಲಾಡಳಿತ ಇದೀಗ ಯೇಸು ಪ್ರತಿಮೆಗೆ ಜಮೀನು ಮಂಜೂರು ಮಾಡಿರುವುದು ಯಾವ ನ್ಯಾಯ ಸ್ವಾಮೀ. ಪ್ರತಿಮೆ ನಿರ್ಮಾಣ ಮಾಡುವ ಬದಲು, ಅಲ್ಲಿನ ಮೂಲ ನಿವಾಸಿಗಳಾದ ವನವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬಹುದಾಗಿತ್ತು ಎಂದು ವನವಾಸಿ ಕಲ್ಯಾಣ ಸಮಿತಿಯ ಮುಖಂಡರು, ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವನವಾಸಿ ಕಲ್ಯಾಣ ಸಮಿತಿಯ ಮುಖಂಡ ಸತೀಶ್, ಮೂಲ ನಿವಾಸಿಗಳು ನಿವೇಶನ ಸೇರಿದಂತೆ ಹಕ್ಕು ಪತ್ರಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೂ ಈ ತನಕ ಅವರ ಕೂಗಿಗೆ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ. ಆದರೆ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದಿಂದಲೇ ಡಿಕೆಶಿ ಭೂಮಿ ಮಂಜೂರು ಮಾಡಿಸಿರುವುದು ಯಾವ ನ್ಯಾಯ. ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ರೀತಿ ನಡೆದುಕೊಂಡಿದ್ದಾರೆ ಎಂದು ಹೇಳಿದರು.

    ಕಳೆದ 12 ದಿನಗಳಿಂದ ಕನಕಪುರ ತಾಲೂಕಿನ ಮರಳವಾಡಿಯ ಸಮೀಪದಲ್ಲಿ ಹಕ್ಕುಪತ್ರಕ್ಕಾಗಿ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ವನವಾಸಿ ಇರುಳಿಗರು ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಸಕ ಶಿವಕುಮಾರ್ ಅವರಾಗಲೀ, ಸಂಸದ ಡಿ.ಕೆ.ಸುರೇಶ್ ಅವರಾಗಲಿ ಒಂದು ದಿನವೂ ಸ್ಥಳಕ್ಕೆ ಧಾವಿಸಿಲ್ಲ. ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ, ಆದರೆ ಪ್ರಯೋಜನವಾಗಿಲ್ಲ. ಯೇಸು ಪ್ರತಿಮೆ ನಿರ್ಮಾಣಕ್ಕಾಗಿ ಕಪಾಲ ಟ್ರಸ್ಟ್‍ಗೆ 10 ಎಕರೆ ಭೂಮಿ ನೀಡುವ ಜನಪ್ರತಿನಿಧಿಗಳು ಆದಿವಾಸಿಗಳು ಧರಣಿ ನಡೆಸುತ್ತಿದ್ದರು ಸ್ಥಳಕ್ಕೆ ಧಾವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನತೆಗೆ ಹಕ್ಕು ಪತ್ರ ವಿತರಣೆ ಮಾಡಬೇಕಾಗಿದೆ. ಅದರಲ್ಲೂ ಕನಕಪುರ ತಾಲೂಕಿನಲ್ಲೇ 600ಕ್ಕೂ ಹೆಚ್ಚು ಮಂದಿ ಪಲಾನುಭವಿಗಳಿದ್ದಾರೆ. ಜನಪ್ರತಿನಿಧಿಗಳು ಈ ಕುರಿತು ಗಮನ ಹರಿಸಬೇಕು. ಮೂಲ ನಿವಾಸಿಗಳ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

    ಅರಣ್ಯದಲ್ಲೇ ಹುಟ್ಟಿ ಬೆಳೆದ ಅರಣ್ಯವಾಸಿ, ಆದಿವಾಸಿ, ವನವಾಸಿಗಳು ಪ್ರತಿಭಟನೆ ನಡೆಸುತ್ತಿದ್ರು ಜಿಲ್ಲಾಡಳಿತ ಹಕ್ಕುಪತ್ರ ನೀಡುವ ಕೆಲಸ ಮಾಡಿಲ್ಲ. ಮಾಜಿ ಸಚಿವ ಡಿಕೆಶಿ ಆದಿವಾಸಿಗಳ ಕಡೆಗೆ ಗಮನ ಹರಿಸಿಲ್ಲ. ಆದರೆ ಅವರು ಯೇಸು ಪ್ರತಿಮೆ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಿ ಪ್ರತಿಮೆ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ. ಮೊದಲು ಆದಿವಾದಿಗಳಿಗೆ ಹಕ್ಕಪತ್ರ ನೀಡುವಂತೆ ಒತ್ತಾಯಿಸಿದರು.

  • ಹಕ್ಕು ಪತ್ರಗಳಿಗಾಗಿ ಹಗಲು, ರಾತ್ರಿ ಹೋರಾಟ – ಅರಣ್ಯದಲ್ಲೇ 10 ದಿನಗಳಿಂದ ಪ್ರತಿಭಟನೆ

    ಹಕ್ಕು ಪತ್ರಗಳಿಗಾಗಿ ಹಗಲು, ರಾತ್ರಿ ಹೋರಾಟ – ಅರಣ್ಯದಲ್ಲೇ 10 ದಿನಗಳಿಂದ ಪ್ರತಿಭಟನೆ

    ರಾಮನಗರ: 2006ರ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರಗಳಿಗಾಗಿ ಆಗ್ರಹಿಸಿ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಬುಡಗಯ್ಯನ ದೊಡ್ಡಿ ಗ್ರಾಮದ ಇರುಳಿಗ ಸಮುದಾಯದ ಆದಿವಾಸಿಗಳು ಕಳೆದ 10 ದಿನಗಳಿಂದ ಅರಣ್ಯದಲ್ಲೇ ಹಗಲು- ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಕಳೆದ ಡಿಸೆಂಬರ್ 19ರಂದು 93 ಕುಟುಂಬಗಳಿಗೆ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಆದಿವಾಸಿಗಳು ಪ್ರತಿಭಟನೆ ಶುರು ಮಾಡಿದರು. ಅಂದಿನಿಂದ ಇಲ್ಲಿಯ ತನಕ ಅರಣ್ಯದಲ್ಲೇ ಶೆಡ್‍ಗಳನ್ನು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವಾಗ ಹಕ್ಕುಪತ್ರಗಳನ್ನು ವಿತರಣೆ ಮಾಡುತ್ತೀರೋ ಆ ಕ್ಷಣ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

    ಧರಣಿ ನಿರತ ಆದಿವಾಸಿಗಳ ಮನವೊಲಿಕೆಗೆ ಜಿಲ್ಲಾಡಳಿತದಿಂದ ಸಾಕಷ್ಟು ಪ್ರಯತ್ನ ನಡೆಸಿದರು ವಿಫಲವಾಗಿದೆ. ಪ್ರತಿಭಟನೆ ಸ್ಥಳಕ್ಕೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಉಪನಿರ್ದೇಶಕರು, ಸೇರಿದಂತೆ ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ, ಅರಣ್ಯ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಮತ್ತೆ ಸರ್ವೇ ಮಾಡಿ ವರದಿ ಬಂದ ಬಳಿಕ ಜಾಗಗಳನ್ನು ಗುರುತಿಸಿ ಹಕ್ಕು ಪತ್ರಗಳನ್ನು ನೀಡುವ ಭರವಸೆ ನೀಡಿದರೂ ಪ್ರತಿಭಟನಾ ನಿರತರು ಮಾತ್ರ ಹಕ್ಕು ಪತ್ರ ನೀಡುವವರೆಗೂ ಸ್ಥಳದಿಂದ ಹೊರಗೆ ಬರಲ್ಲ ಎಂದು ಅರಣ್ಯದಲ್ಲೇ ಕುಳಿತಿದ್ದಾರೆ.

    ಅಧಿಕಾರಿಗಳ ಮನವೊಲಿಕೆಗೂ ಬಗ್ಗದ ಆದಿವಾಸಿಗಳು ಅರಣ್ಯದಲ್ಲೇ ಟೆಂಟ್ ಹಾಕಿಕೊಂಡು ವಾಸ ಮಾಡುತ್ತಿದ್ದಾರೆ. ಅರಣ್ಯದಲ್ಲೇ ಒಲೆಯೊಡ್ಡಿ ಅಡುಗೆ ಮಾಡಿ ಊಟ, ತಿಂಡಿ ಮಾಡ್ತಿದ್ದಾರೆ. ಅಲ್ಲದೇ ಎಲೆ, ತಟ್ಟೆ ಇಲ್ಲದಿದ್ದರೆ ಬಂಡೆಯ ಮೇಲೆಯೇ ನೀರು ಸುರಿದು ತೊಳೆದು ಊಟ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಟೆಂಟ್‍ಗಳನ್ನು ಹಾಕಿಕೊಂಡು ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿಯೇ ಹಗಲು – ರಾತ್ರಿ ನೂಕ್ತಿದ್ದಾರೆ. ಇನ್ನೂ ರಾತ್ರಿ ವೇಳೆ ಚಳಿ ಜೋರಾಗಿದ್ದು ಪ್ರತಿಭಟನಾಕಾರರು ಚಳಿಗೂ ಕೂಡ ಬೆದರದೆ ಅರಣ್ಯದಲ್ಲೇ ಠಿಕಾಣಿ ಹೂಡಿದ್ದಾರೆ.

    ಸುಮಾರು 65 ಶೆಡ್ ನಿರ್ಮಾಣ ಮಾಡಿ ಇರುಳಿಗ ಜನಾಂಗ ತಮ್ಮ ಮೂಲ ಸ್ಥಳದಲ್ಲಿಯೇ ವಾಸವಿದ್ದೇವೆ. ಅರಣ್ಯ ಹಕ್ಕು ಕಾಯ್ದೆ 3(1)ಎಂ ಪ್ರಕಾರ ಅರಣ್ಯ ಭೂಮಿಯ ಹಕ್ಕು ಪತ್ರ ನೀಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಪದೇಪದೇ ಜಿಲ್ಲಾಡಳಿತ ಆದಿವಾಸಿಗಳ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ಈ ಬಾರಿ ಹಕ್ಕು ಪತ್ರ ಕೊಟ್ಟರೆ ಮಾತ್ರವೇ ಪ್ರತಿಭಟನೆ ಕೈ ಬಿಡುವುದು ಎಂದು ಕುಳಿತಿದ್ದಾರೆ.

  • ಕುಡಿಯುವ ನೀರಿನಲ್ಲಿ ಹುಳಗಳು- ಅಧಿಕಾರಿಗಳ ವಿರುದ್ಧ ಆದಿವಾಸಿಗಳ ಆಕ್ರೋಶ

    ಕುಡಿಯುವ ನೀರಿನಲ್ಲಿ ಹುಳಗಳು- ಅಧಿಕಾರಿಗಳ ವಿರುದ್ಧ ಆದಿವಾಸಿಗಳ ಆಕ್ರೋಶ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟದಲ್ಲಿ ಕುಡಿಯುವ ನೀರಿನಲ್ಲಿ ಹುಳಗಳು ಪತ್ತೆಯಾಗಿವೆ.

    ಬ್ಯಾಡಗೊಡ್ಡದಲ್ಲಿ 300ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬ ಹಲವು ದಿನಗಳಿಂದಲೇ ಕೊಳಚೆ ನೀರು ಮತ್ತು ಹುಳಗಳು ಇರುವಂತಹ ನೀರನ್ನೇ ಕುಡಿಯುತ್ತಿದೆ. ಸಂಬಂಧಪಟ್ಟಂತಹ ಅಧಿಕಾರಿಗಳು ಇನ್ನೂ ಇತ್ತ ಗಮನಹರಿಸಿಲ್ಲ ಎಂದು ಬ್ಯಾಡಗೊಟ್ಟ ದಿಡ್ಡಳ್ಳಿಯ ಆದಿವಾಸಿಗಳು ಆರೋಪಿಸಿದ್ದಾರೆ.

    ಕುಡಿಯುವ ನೀರಿನ ಟ್ಯಾಂಕ್ ಶುದ್ಧೀಕರಿಸದೆ ಸುಮಾರು 1 ವರ್ಷಗಳೇ ಕಳೆದಿರುವುದರಿಂದ ನೀರಿನಲ್ಲಿ ಹುಳಗಳು ತುಂಬಿಕೊಂಡಿದ್ದು, ಅದೇ ನೀರನ್ನು ಈ ವ್ಯಾಪ್ತಿಯ ಆದಿವಾಸಿಗಳು ಕುಡಿಯುತ್ತಿದ್ದಾರೆ. ಆದರೆ ಇವರಿಗೆ ನೀರಿನ ಸಮಸ್ಯೆ ತುಂಬಾನೇ ಇದೆ ಎಂದು ಸಂಬಂಧಪಟ್ಟಂತ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಏನು ಪ್ರಯೋಜನ ಆಗಿಲ್ಲ. ಇವರು ಈ ಬ್ಯಾಡಗೊಟ್ಟ ಗ್ರಾಮಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ಇವರಿಗೆ ನೀರಿನ ಸವಲತ್ತು ಸಿಕ್ಕಿಲ್ಲ.

    ಪೈಪ್ ಲೈನ್ ಮಾಡಿದ್ದಾರೆ ಆದರೆ ಇವರಿಗೆ ಇನ್ನೂ ಮನೆಗಳಿಗೆ ನೀರನ್ನು ಕೊಟ್ಟಿಲ್ಲ. ದೊಡ್ಡ ಟ್ಯಾಂಕ್ ಆದರೆ ಈ ಟ್ಯಾಂಕನ್ನು ಶುದ್ಧೀಕರಿಸದೆ ಇರುವುದರಿಂದ ಟ್ಯಾಂಕಿನಲ್ಲಿ ಹುಳಗಳು ತುಂಬಿಕೊಂಡು ಇದೇ ನೀರನ್ನೇ ಉಪಯೋಗಿಸುವಂತಹ ಪರಿಸ್ಥಿತಿ ಬ್ಯಾಡಗೊಟ್ಟ ಆದಿವಾಸಿ ಜನಾಂಗದವರಿಗೆ ಬಂದಿದೆ.

    ಏನೇ ಆಗಲಿ ಆದಷ್ಟು ಬೇಗನೇ ಮನೆಗಳಿಗೆ ಪೈಪ್ ಹಾಕಿ ನೀರಿನ ವ್ಯವಸ್ಥೆಯನ್ನು ಈ ಆದಿವಾಸಿ ಕುಟುಂಬದವರಿಗೆ ಕೊಡಬೇಕು. ಹಾಗೂ ದೊಡ್ಡ ಟ್ಯಾಂಕ್ ಅನ್ನು ಶುಚಿಗೊಳಿಸಿ ಇವರಿಗೆ ಕುಡಿಯಲು ಒಳ್ಳೆಯ ನೀರನ್ನು ಕೊಡಬೇಕು. ಈ ಆದಿವಾಸಿ ಜನಾಂಗದವರಿಗೆ ಏನಾದರೂ ಕಾಯಿಲೆಗಳು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ. ಆದರೆ ಒಂದು ವರ್ಷ ಕಳೆದರೂ ಈ ಟ್ಯಾಂಕನ್ನು ಶುಚಿಗೊಳಿಸದೇ ಇರುವುದರಿಂದ ಟ್ಯಾಂಕಿನಲ್ಲಿ ಹುಳುಗಳು ತುಂಬಿಕೊಂಡಿದೆ ಎಂದು ಆದಿವಾಸಿಗಳ ಆರೋಪವಾಗಿದೆ.

  • ಕೇಳದೆ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ಬರಬೇಕಿದೆ: ನಟ ಚೇತನ್

    ಕೇಳದೆ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ಬರಬೇಕಿದೆ: ನಟ ಚೇತನ್

    ಮಡಿಕೇರಿ: ಬಸವನಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಆದಿವಾಸಿಗಳಿಗೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಚೇತನ್ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿರುವ ಬಸವನಹಳ್ಳಿಯಲ್ಲಿ ಆದಿವಾಸಿಗಳಿಗೆಂದೇ ನಿರ್ಮಾಣವಾಗುತ್ತಿರುವ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟ ಮಾಡಿದ್ದಕ್ಕೆ ಪ್ರತಿಫಲ ದೊರೆಯುತ್ತಿದೆ. ಇದು ನನಗೆ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.

    ಯಾವುದೇ ಸರ್ಕಾರ ಬಂದ್ರೂ ಕೇಳಿ ಪಡೆದುಕೊಳ್ಳಲು ಬಿಡಬಾರದು. ಕೇಳದೇ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ನಮಗೆ ಬೇಕು ಎಂದು ತಮ್ಮ ಅಭಿಪ್ರಾಯನ್ನು ಹಂಚಿಕೊಂಡರು. ಬಳಿಕ ಆದಿವಾಸಿಗಳ ಜೊತೆ ಕೆಲಕಾಲ ಬಸವನಹಳ್ಳಿಯಲ್ಲಿ ಕಾಲಕಳೆದ್ರು. ಇದನ್ನೂ ಓದಿ: ನಮ್ಮ ಅಧಿಕೃತ ಬಾವುಟ ಹಳದಿ, ಕೆಂಪು: ಸರ್ಕಾರ,ಸಾಹಿತಿಗಳ ವಿರುದ್ಧ ವಾಟಾಳ್ ಕಿಡಿ

    ಆದಿವಾಸಿಗಳಿಗೆ ನ್ಯಾಯ ಸಿಗಬೇಕು ಅಂತ ಭಾರೀ ಹೋರಾಟದ ಬಳಿಕ ರಾಜ್ಯ ಸರ್ಕಾರ ಸರ್ಕಾರ ಸುಮಾರು 528 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಮುಂದಾಗಿದೆ. ಹೀಗಾಗಿ ಆದಿವಾಸಿಗಳಿಗೆ ಮನೆ ನಿರ್ಮಾಣವಾಗುತ್ತಿದೆ. ದಿಡ್ಡಳಿ ಹೋರಾಟ ನಡಸಿ ರಾಜ್ಯ ಸರ್ಕಾರ ಗಮನ ಸೆಳೆದ ಆದಿವಾಸಿಗಳು ಇಡೀ ಸರ್ಕಾರವನ್ನೇ ತಮ್ಮ ಬಳಿ ಬರುವಂತೆ ಉಗ್ರವಾಗಿ ಹೋರಾಟ ಮಾಡಿದ್ರು. ಈ ಹೋರಾಟದಲ್ಲಿ ಅನೇಕ ಹೋರಾಟಗಾರರು ಭಾಗಿಯಾಗಿದ್ದರು. ಆದಿವಾಸಿಗಳಿಗೆ ನ್ಯಾಯ ಸಿಗಬೇಕು. ಅವರಿಗೆ ಪುನರ್ ವಸತಿ ಲಭ್ಯವಾಗಬೇಕು ಎಂದು ಚೇತನ್ ಕೂಡ ಹೋರಾಟ ನಡೆಸಿದ್ದರು.

  • ಜಿಲ್ಲಾಡಳಿತ, ಸರ್ಕಾರಕ್ಕೆ ದಿಡ್ಡಳ್ಳಿ ಆದಿವಾಸಿಗಳಿಂದ ಶಾಕ್!

    ಜಿಲ್ಲಾಡಳಿತ, ಸರ್ಕಾರಕ್ಕೆ ದಿಡ್ಡಳ್ಳಿ ಆದಿವಾಸಿಗಳಿಂದ ಶಾಕ್!

    – ಪೊಲೀಸ್ರು ಬಂದ್ರೆ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ

    ಮಡಿಕೇರಿ: ಕಳೆದ 5 ತಿಂಗಳಿನಿಂದ ಬಗೆಹರಿಯದೆ ಕಗ್ಗಂಟಾಗಿದ್ದ ದಿಡ್ಡಳ್ಳಿ ವಿವಾದ ಜಿಲ್ಲಾಧಿಕಾರಿಗಳ ಸಂಧಾನ ಸಭೆಯ ಬಳಿಕ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ಭುಗಿಲೆದ್ದಿದೆ. ಇದ್ದಕ್ಕಿದ್ದಂತೆ ರಾತ್ರಿ ಬೆಳಗಾಗೋದ್ರೊಳಗೆ ದಿಡ್ಡಳ್ಳಿಯಲ್ಲಿ ಅರಣ್ಯ ಇಲಾಖೆ ಈ ಹಿಂದೆ ತೆರವುಗೊಳಿಸಿದ್ದ ಸ್ಥಳದಲ್ಲಿ ನೂರಾರು ಗುಡಿಸಲುಗಳು ತಲೆ ಎತ್ತಿದ್ದು, ಜಿಲ್ಲಾಡಳಿತ ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ಶಾಕ್ ನೀಡಿದೆ.

    ಕಳೆದ ಡಿಸೆಂಬರ್ 7ರಂದು ದಿಡ್ಡಳ್ಳಿ ವ್ಯಾಪ್ತಿಯ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ತಲೆ ಎತ್ತಿದ್ದ ನೂರಾರು ಆದಿವಾಸಿ ಜನರ ಗುಡಿಸಲುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೊಲೀಸರ ಸಹಕಾರ ಪಡೆದು ತೆರವು ಮಾಡಿದ್ದರು. ಬಳಿಕ ನಿರಾಶ್ರಿತರಾಗಿ ತೆರವು ಮಾಡಿದ ಸ್ಥಳದ ರಸ್ತೆ ಬದಿಯಲ್ಲೇ ಕಳೆದ 5 ತಿಂಗಳಿಂದ ಬದುಕು ಕಟ್ಟಿಕೊಂಡಿದ್ದ ಆದಿವಾಸಿ ಜನರು ಭೂಮಿ ಮತ್ತು ವಸತಿಗೆ ಆಗ್ರಹಿಸಿ ನಿರಂತರ ಹೋರಾಟ ನಡೆಸಿದ್ದರು.

    ಹೋರಾಟದ ಫಲವಾಗಿ ಜಿಲ್ಲಾಡಳಿತ ಜಿಲ್ಲೆಯ 3-4 ಕಡೆಗಳಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆಂದು ಭೂಮಿ ಗುರುತಿಸಿತ್ತು. ಆದರೆ ದಿಡ್ಡಳ್ಳಿಯಲ್ಲಿಯೇ ನಿವೇಶನ ನೀಡಬೇಕು. ಬೇರೆಡೆ ನೀಡುವುದಾದರೆ 4 ಏಕರೆ ಭೂಮಿಯನ್ನು ಪ್ರತೀ ಕುಟುಂಬಕ್ಕೆ ಕೊಡಬೇಕು ಎಂದು ಜಿಲ್ಲಾಡಳಿತ ಗುರುತಿಸಿದ್ದ ಸ್ಥಳಕ್ಕೆ ತೆರಳಲು ನಿರಾಕರಿಸಿದ್ದರು. ಈ ಹಿನ್ನಲೆ ದಿಡ್ಡಳ್ಳಿ ಆದಿವಾಸಿ ಜನರು ಹಾಗೂ ಜಿಲ್ಲಾಡಳಿತದ ನಡುವೆ ಹಗ್ಗಜಗ್ಗಾಟ ಏರ್ಪಟ್ಟಿತ್ತು.

    ಕೊನೆಗೆ ಜಿಲ್ಲಾಧಿಕಾರಿಗಳು ಏ.28ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಜಿಲ್ಲಾಡಳಿತ ಗುರುತಿಸಿದ್ದ ಸ್ಥಳಗಳಿಗೆ ತೆರಳಲು ಆದಿವಾಸಿ ಜನರು ಒಪ್ಪಿಗೆ ಸೂಚಿಸಿದ್ದರು. ಪರಿಣಾಮ ದಿಡ್ಡಳ್ಳಿ ಹೋರಾಟ ಸುಖಾಂತ್ಯ ಕಂಡಿದೆ ಎಂದೇ ಹೇಳಲಾಗಿತ್ತು. ಆದರೆ ಕಳದೆ ಮೂರು ದಿನಗಳಿಂದ 500 ಕ್ಕೂ ಅದಿಕ ಆದಿವಾಸಿಗಳು ಈ ಹಿಂದೆ ಅರಣ್ಯದೊಳಗೆ ನಿರ್ಮಿಸಿಕೊಂಡಿದ್ದ ಜಾಗದಲ್ಲಿ ಮತ್ತೆ ಗುಡಿಸಲು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ಆದಿವಾಸಿಗಳು ದಿಡ್ಡಳ್ಳಿಯಲ್ಲಿಯೇ ಜಾಗ ನೀಡಬೇಕು ಒಂದು ವೇಳೆ ತೆರವು ಮಾಡಲು ಅರಣ್ಯಧಿಕಾರಿಗಳು ಮತ್ತು ಪೊಲೀಸರು ಬಂದರೆ ನಾವು ಸಾಮೂಹಿಕವಾಗಿ ಆಹ್ಮಹತ್ಯೆ ಮಾಡಿಕೊಳ್ಳುವುದಾಗಿ ಹಾಡಿಯ ನಿವಾಸಿ ಮಾರ ಹೇಳಿದ್ದಾರೆ.