ಮಂಡ್ಯ: ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಹಚ್ಚಹಸಿರಿನ ಮಧ್ಯೆ ಹಾಲ್ನೊರೆ ಸೂಸುತ್ತಾ ಜುಳು-ಜುಳು ಹರೀತಿದೆ ಇರ್ಪು ಫಾಲ್ಸ್
ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ. ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.
ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಕೆಜಿಎಫ್ ಚಿತ್ರ ಬಿಡುಗಡೆ ಬಗ್ಗೆ 10 ನೇ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಿದೆ.
ಕೋರ್ಟ್ ಆದೇಶದಲ್ಲಿ, ಹಕ್ಕುಚ್ಯುತಿ ಸಂಬಂಧಪಟ್ಟಂತೆ ವೆಂಕಟೇಶ್ ಹಾಗೂ ಆನಂದ್ ಎಂಬವರು ಚಿತ್ರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಚಲನಚಿತ್ರಕ್ಕೆ ಸಂಬಂದಪಟ್ಟ ಆರ್. ಲಕ್ಷ್ಮೀನಾರಾಯಣ್ ಹಾಗೂ ವಿಜಯ್ ಕಿರಗಂದೂರು ಇದೂವರೆಗೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಹೀಗಾಗಿ ಮುಂದಿನ ವಿಚಾರಣೆವರೆಗೂ ಚಲನಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಲಾಗಿದೆ.
ಅರ್ಜಿದಾರರ ಹೆಸರು:
1. ವೆಂಕಟೇಶ್ ಜಿ.
ವಕೀಲರು ಕೆ. ರಘುನಾಥ್
2. ಆನಂದ್ ಎಸ್
ಮಾಲೀಕರು, ಅಶ್ವಿನಿ ಫಿಲಂಸ್ , ನಂ 29/1, 1ನೇ ಮುಖ್ಯ ರಸ್ತೆ, 1ನೇ ಕ್ರಾಸ್, ಅಜಾದ್ ನಗರ, ಬೆಂಗಳೂರು.
ಪ್ರತಿವಾದಿಗಳು:
1. ಲಕ್ಷ್ಮೀನಾರಾಯಣ ಆರ್ ಅಲಿಯಾಸ್ ಲಕ್ಷ್ಮೀ ನಾರಾಯಣ ಗೌಡ
2. ವಿಜಯ್ ಕಿರಗಂದೂರ್
ಮಾಲೀಕರು, ಹೊಂಬಾಳೆ ಫಿಲಂಸ್, ನಂ 1312, 2ನೇ ಮಹಡಿ, 11ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು.
ನಂ 45/11 3ನೇ ಮಹಡಿ, ಕುಮಾರಕೃಪ, ಉತ್ತರ ಉದ್ಯಾನವನ ರಸ್ತೆ, ಗಾಂಧಿಭವನ, ಬೆಂಗಳೂರು.
ಭುವನೇಶ್ವರ್: ವಿದ್ಯಾರ್ಥಿನಿಯರು ಬೀದಿ ಬದಿಯಲ್ಲಿ ನಿಂತು ಹುಡುಗರ ಜೊತೆಗೆ ಮಾತನಾಡುವಂತಿಲ್ಲ ಎಂದು ಒಡಿಶಾದ ವಿಶ್ವವಿದ್ಯಾಲಯವೊಂದು ಖಡಕ್ ಆದೇಶವನ್ನು ಹೊರಡಿಸಿದೆ.
ಸಂಬಲ್ಪುರ್ ಸಮೀಪದ ಬರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ಯುನಿವರ್ಸಿಟಿ ಆಫ್ ಟೆಕ್ನಾಲಜಿ (ವಿಎಸ್ಎಸ್ಯುಟಿ)ನಲ್ಲಿ ಇಂತಹ ಆದೇಶ ಹೊರಡಿಸಲಾಗಿದೆ. ಯುನಿವರ್ಸಿಟಿಯಲ್ಲಿ ಐದು ವಿದ್ಯಾರ್ಥಿನಿಯರ ವಸತಿ ನಿಲಯಗಳಿದ್ದು, ಅವುಗಳಲ್ಲಿ ರೋಹಿಣಿ ಹಾಲ್ ಆಫ್ ರೆಸಿಡೆನ್ಸ್ನ ನೋಟಿಸ್ ಬೋರ್ಡ್ ನಲ್ಲಿ ಆದೇಶ ಪ್ರತಿಯನ್ನು ಹಾಕಲಾಗಿದೆ.
ಆದೇಶದಲ್ಲಿ ಏನಿದೆ?:
ಉಪಕುಲಪತಿಗಳ ನಿರ್ದೇಶನದಂತೆ ರೋಹಿಣಿ ಹಾಲ್ ಆಫ್ ರೆಸಿಡೆನ್ಸಿ ವಿದ್ಯಾರ್ಥಿನಿಯರು ರಸ್ತೆ ಬದಿಯಲ್ಲಿ ನಿಂತು ಹುಡುಗರ ಜೊತೆಗೆ ಮಾತನಾಡಬಾರದು. ಈ ಸೂಚನೆ ಪಾಲಿಸಲು ವಿಫಲರಾದರೆ ಅಂಥವರ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪತ್ರವೊಂದನ್ನು ನೋಟಿಸ್ ಬೋರ್ಡ್ ನಲ್ಲಿ ಅಂಟಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊಫೆಸರ್ ಪಿ.ಸಿ.ಸ್ವೈನ್, ವಿದ್ಯಾರ್ಥಿನಿಯರ ರಕ್ಷಣೆಯ ಹೊಣೆ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಆದೇಶದ ಪ್ರತಿಯನ್ನು ನೋಟಿನ್ ಬೋರ್ಡ್ ಗೆ ಅಂಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸ್ಯಾಂಕಿ ಟ್ಯಾಂಕಿಗೆ ಹೋಗುವ ಮುನ್ನಾ ಜನರು ಈ ಆದೇಶವನ್ನು ನೋಡಲೇಬೇಕು. ಇನ್ಮುಂದೆ ಸ್ಯಾಂಕಿ ಕೆರೆಯ ದಡದಲ್ಲಿ ವಾಕ್ ಮಾಡುವವರಿಗೆ ಹೊಸ ನಿಯಮ ಜಾರಿಯಾಗಿದೆ.
ಸ್ಯಾಂಕಿ ಟ್ಯಾಂಕ್ ಕೆರೆಯಲ್ಲಿ ಇನ್ಮುಂದೆ ತರ್ಪಣ ಬಿಡುವುದು, ಪೂಜೆ ಮಾಡುವುದು, ಫೋಟೋ ತೆಗೆಯೋದು, ನಾಯಿಗಳನ್ನು ವಾಕ್ಗೆ ಕರೆದುಕೊಂಡು ಹೋಗುವುದು ಎಲ್ಲವೂ ಕೂಡ ನಿಷಿದ್ಧವಾಗಿದೆ. ಈ ಬಗ್ಗೆ ಆದೇಶ ಫಲಕವನ್ನು ಕೂಡ ಕೆರೆಯಂಗಳದಲ್ಲಿ ಹಾಕಲಾಗಿದೆ.
ಬಿಬಿಎಂಪಿಯ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ತರ್ಪಣ ಬಿಡುವುದಕ್ಕೆ ಬೆಂಗಳೂರಿನಲ್ಲಿ ಕೆರೆಗಳೇ ಇಲ್ಲ, ನಾವು ಎಂಎಲ್ಎ ಮನೆಯಲ್ಲಿ ಅಥವಾ ಬಿಬಿಎಂಪಿ ಅಧಿಕಾರಿಗಳ ಮನೆಯ ಟ್ಯಾಂಕ್ನಲ್ಲಿ ಪಿಂಡ ಬಿಡಲು ಆಗುತ್ತಾ ಅಂತಾ ಪುರೋಹಿತರು ಕಿಡಿಕಾರಿದ್ದಾರೆ.
ಇದರ ಜೊತೆಗೆ ಹವ್ಯಾಸಿ ಫೋಟೋಗ್ರಾಫರ್ ಗಳ ಕೂಡ ಫೋಟೋ ನಿಷೇಧಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ ಸೇರಿದಂತೆ ಎಲ್ಲಾ ಕಡೆ ಫೋಟೋಗ್ರಾಫಿಗೆ ನಿಷೇಧ ಹೇರಲಾಗಿದೆ. ಇಲ್ಲೂ ಫೋಟೋಗ್ರಾಫಿ ಬ್ಯಾನ್ ಮಾಡಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಬಿಬಿಎಂಪಿಗೆ ಮತ್ತೆ ಮನವಿ ಸಲ್ಲಿಸಲಿದ್ದೇವೆ ಎಂದು ಸಾರ್ವಜನಿಕರು ಪಬ್ಲಿಕ್ ಟಿವಿಗೆ ತಿಳಿಸಿದರು.
ನವದೆಹಲಿ: ಆಯೋಧ್ಯೆ ರಾಮ ಮಂದಿರ ನಿರ್ಮಾಣದ ದಾರಿ ಸುಗಮವಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮಾಜ್ ಮಾಡಲು ಮಸೀದಿಯೇ ಬೇಕಾಗಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ 1994ರ ಫಾರೂಖಿ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಆದೇಶವನ್ನು ಸ್ವಾಗತಿಸಿದರು.
ಈ ತೀರ್ಪಿನಿಂದ ನಮಗೆ ಜಯ ಸಿಕ್ಕಿಲ್ಲ. ಆದರೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನನ್ನ ಹೋರಾಟಕ್ಕೆ ಶಕ್ತಿ ಬಂದಿದೆ. ಆಸ್ತಿಯ ಹಕ್ಕಿಗಿಂತಲೂ ಪ್ರಾರ್ಥನೆ ಮಾಡುವ ಹಕ್ಕು ದೊಡ್ಡದು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ ಎಂದರು.
ಸುನ್ನಿ ವಕ್ಫ್ ಬೋರ್ಡ್ ನವರ ಆಸ್ತಿ ಹಕ್ಕಿನ ವಾದಕ್ಕಿಂತಲೂ ರಾಮ ಹುಟ್ಟಿದ್ದ ಸ್ಥಳದಲ್ಲಿ ಪ್ರಾರ್ಥನೆ ಮಾಡುವ ವಾದವೇ ಮೇಲ್ಮಟ್ಟದ್ದು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಹೀಗಾಗಿ ಶುಕ್ರವಾರವೇ(ನಾಳೆ) ರಾಮ ಜನ್ಮಭೂಮಿಯಾದ ಆಯೋಧ್ಯೆಯಲ್ಲಿ ಪೂಜೆ ಮಾಡುವ ಹಕ್ಕಿನ ಸಂಬಂಧ ನಾನು ಸಲ್ಲಿಸಿದ್ದ ಅರ್ಜಿಯನ್ನು ಆರಂಭದಲ್ಲೇ ಪರಿಗಣಿಸುವಂತೆ ಕೋರ್ಟ್ ಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಸುಬ್ರಮಣಿಯನ್ ಸ್ವಾಮಿ ಈ ಹಿಂದೆಯೇ ರಾಮಜನ್ಮಭೂಮಿಯಲ್ಲಿ ಪೂಜೆ ಹಕ್ಕಿನ ಸಂಬಂಧ ಅರ್ಜಿ ಸಲ್ಲಿಸಿದ್ದರು. ಆದರೆ 1994ರ ಫಾರೂಖಿ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡ ಬಳಿಕ ನಿಮ್ಮ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಸುಬ್ರಮಣಿಯನ್ ಸ್ವಾಮಿಗೆ ತಿಳಿಸಿತ್ತು.
ಮುಸ್ಲಿಂ ರಾಷ್ಟ್ರಗಳಲ್ಲಿ ಮಸೀದಿಯನ್ನು ಎಲ್ಲಿ ಬೇಕಾದರೂ ಸ್ಥಳಾಂತರಿಸಬಹುದು. ಉದಾಹರಣೆಗೆ ರಸ್ತೆ ನಿರ್ಮಾಣ ಸೇರಿದಂತೆ ಸಾರ್ಜಜನಿಕ ಅನೂಕೂಲಕ್ಕಾಗಿ ಸ್ಥಳಾಂತರಿಸಲಾಗುತ್ತದೆ. ಆದರೆ, ದೇವಸ್ಥಾನಗಳನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ. ಆಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಬೇಕೆಂಬುದನ್ನು ಬಿಟ್ಟು, ಅಯೋಧ್ಯೆಯ ಸರಯೂ ನದಿ ದಡದಲ್ಲಿ ಮುಸ್ಲಿಮರು ಬಾಬ್ರಿ ಮಸೀದಿ ನಿರ್ಮಿಸಿಕೊಳ್ಳಬಹುದು. ಆದರೆ, ಪ್ರಸ್ತುತ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು. ಯಾಕೆಂದರೆ ಅದು ರಾಮನ ಜನ್ಮ ಭೂಮಿ ಎಂದು ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಪ್ರತಿಕ್ರಿಯಿಸಿದ್ದರು.
ರಾಮ ಜನ್ಮಭೂಮಿ ವಿವಾದದ ಅಂತಿಮ ವಿಚಾರಣೆ ಅಕ್ಟೋಬರ್ 29ರಿಂದ ಆರಂಭವಾಗಲಿದ್ದು, ತ್ವರಿತಗತಿಯಲ್ಲಿ ವಿಚಾರಣೆ ನಡೆಯಲಿದೆ.
ಸುಪ್ರೀಂ ಹೇಳಿದ್ದು ಏನು?
ಮಸೀದಿ ಇಸ್ಲಾಮ್ನ ಅವಿಭಾಜ್ಯ ಅಂಗವಲ್ಲ ಅಂತ 1994ರ ಡಾ. ಇಸ್ಮಾಯಿಲ್ ಫಾರೂಖಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಶೋಕ್ ಭೂಷಣ್ ಏಕ ತೀರ್ಪು ನೀಡಿದ್ದರೆ, ನ್ಯಾ. ನಜೀರ್ ಭಿನ್ನ ತೀರ್ಪು ನೀಡಿದ್ದಾರೆ. 1994ರ ತೀರ್ಪಿನ ಅಂಶಗಳನ್ನು ಪರಿಶೀಲಿಸಲು ಪ್ರಕರಣವನ್ನು ವಿಸ್ತøತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದೇ ವೇಳೆ, ಮಂದಿರ, ಚರ್ಚ್ ಅಥವಾ ಮಸೀದಿಯಾಗಲಿ ಯಾವುದೇ ಧಾರ್ಮಿಕ ಸ್ಥಳಗಳನ್ನು ಸರ್ಕಾರ ವಶಕ್ಕೆ ಪಡೆಯಬಹುದು ಅಂತ ಸುಪ್ರೀಂಕೋರ್ಟ್ ಹೇಳಿದೆ.
ತೀರ್ಪಿನಲ್ಲಿರುವ ಪ್ರಮುಖ ಅಂಶ ಏನು?
* ಮಸೀದಿಯಲ್ಲೇ ನಮಾಜ್ ಮಾಡಬೇಕು ಅಂತ ಏನಿಲ್ಲ
* ಮುಸ್ಲಿಮರು ಎಲ್ಲಿ ಬೇಕಾದ್ರೂ ನಮಾಜ್ ಮಾಡಬಹುದು
* ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವೇನಲ್ಲ
* ಯಾವ ಸನ್ನಿವೇಶದಲ್ಲಿ ಫಾರೂಖಿ ತೀರ್ಪು ಬಂದಿದೆ ಅನ್ನೋದು ಮುಖ್ಯ
* ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ಸರ್ಕಾರ ವಶಪಡಿಸಿಕೊಳ್ಳಬಹುದು
* ಫಾರೂಖಿ ತೀರ್ಪಿನಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಮಾತ್ರ ಅಭಿಪ್ರಾಯ ಕೇಳಲಾಗಿದೆ
* ಭೂಸ್ವಾಧೀನದಿಂದ ರಕ್ಷಣೆ ನೀಡುವ ಸನ್ನಿವೇಶದಲ್ಲಷ್ಟೇ ಫಾರೂಖಿ ತೀರ್ಪು ನೀಡಲಾಗಿದೆ
* 7 ಸದಸ್ಯರ ಸಂವಿಧಾನಿಕ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡುವ ಅಗತ್ಯತೆ ಇಲ್ಲ
ನ್ಯಾ. ನಜೀರ್ ನೀಡಿದ ಭಿನ್ನ ತೀರ್ಪೇನು?
* ಇನ್ನಿತ್ತರ ಇಬ್ಬರು ಸಹೋದ್ಯೋಗಿ ನ್ಯಾಯಮೂರ್ತಿಗಳು ನೀಡಿರೋ ತೀರ್ಪಿಗೆ ಸಹಮತವಿಲ್ಲ
* ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವೇ ಅನ್ನೋದರ ಬಗ್ಗೆ ಚರ್ಚೆಯಾಗಬೇಕು
* ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು
ಏನಿದು ಪ್ರಕರಣ?
ಇಸ್ಮಾಯಿಲ್ ಫಾರೂಖಿ ವರ್ಸಸ್ ಭಾರತ ಸರ್ಕಾರದ ನಡುವಿನ ಪ್ರಕರಣದ ವಿಚಾರಣೆ ವೇಳೆ 1994ರಲ್ಲಿ ಸುಪ್ರೀಂ ಕೋರ್ಟ್, ನಮಾಜ್ ಎಲ್ಲಿ ಬೇಕಾದರೂ ಸಲ್ಲಿಸಬಹುದು. ಮಸೀದಿಯೇ ಆಗಬೇಕೆಂದಿಲ್ಲ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಈ ಕಾರಣಕ್ಕೆ ಮಸೀದಿ ನಿರ್ಮಿಸಿರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಮೇಲ್ಮನವಿ ಸಲ್ಲಿಸಿದ್ದವು. ಅಷ್ಟೇ ಅಲ್ಲದೇ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಖಿ ತೀರ್ಪನ್ನು ಪರಿಶೀಲನೆಗಾಗಿ ದೊಡ್ಡ ಸಂವಿಧಾನಿಕ ಪೀಠಕ್ಕೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.
ನವದೆಹಲಿ: ಮುಸ್ಲಿಂ ಬಾಂಧವರಿಗೆ ಮೆಕ್ಕಾ ಹೇಗೆ ಪವಿತ್ರ ಕ್ಷೇತ್ರವೋ, ಹಾಗೆಯೇ ಹಿಂದೂಗಳಿಗೂ ಸಹ ಅಯೋಧ್ಯೆ ಪವಿತ್ರ ಕ್ಷೇತ್ರವೆಂದು ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವೆ ಉಮಾ ಭಾರತಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ, ತೀರ್ಪು ಯಾವುದೇ ಧರ್ಮಕ್ಕೆ ಸಂಬಂಧಪಟ್ಟ ವಿಷಯವಲ್ಲ. ಆಯೋಧ್ಯೆಯು ಹಿಂದೂಗಳ ಪವಿತ್ರ ಪುಣ್ಯ ಕ್ಷೇತ್ರವಾಗಿದೆ. ಏಕೆಂದರೆ ಅಯೋಧ್ಯೆಯು ಶ್ರೀರಾಮನ ಜನ್ಮಭೂಮಿಯಾಗಿದೆ. ಅದು ಮುಸ್ಲಿಮರ ಪವಿತ್ರ ಪುಣ್ಯಕ್ಷೇತ್ರವಾಗಲು ಸಾಧ್ಯವಿಲ್ಲ. ಮುಸ್ಲಿಮರ ಪವಿತ್ರ ಕ್ಷೇತ್ರ ಮೆಕ್ಕಾ ಆಗಿದೆ ಎಂದು ಹೇಳಿದರು.
This isn't a matter of religious dispute, as Ayodhya is an important religious place for Hindus because it is the Ram Janambhoomi but for Muslims, it isn't a religious place, for them it is Mecca. This matter was created &it finally got transformed into a land dispute: Uma Bharti pic.twitter.com/DK1MGnPajo
ಕೇವಲ ಈ ಒಂದು ಸಣ್ಣ ವಿಚಾರವನ್ನು ಭೂ ವಿವಾದವನ್ನಾಗಿ ಮಾಡಿದ್ದರು. ಆದರೆ ಇಂದು ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಉಂಟಾಗಿದ್ದ ಭೂ ವಿವಾದ ಸಮಸ್ಯೆ ಇತ್ಯರ್ಥವಾಗಿದೆ ಎಂದು ಉಮಾ ಭಾರತಿ ಸಂತೋಷ ವ್ಯಕ್ತಪಡಿಸಿದರು.
ರಾಮ ಜನ್ಮಭೂಮಿ ವಿವಾದದ ಅಂತಿಮ ವಿಚಾರಣೆ ಅಕ್ಟೋಬರ್ 29ರಿಂದ ಆರಂಭವಾಗಲಿದ್ದು, ತ್ವರಿತಗತಿಯಲ್ಲಿ ವಿಚಾರಣೆ ನಡೆಯಲಿದೆ.
ಸುಪ್ರೀಂ ಹೇಳಿದ್ದು ಏನು?
ಮಸೀದಿ ಇಸ್ಲಾಮ್ನ ಅವಿಭಾಜ್ಯ ಅಂಗವಲ್ಲ ಅಂತ 1994 ರ ಡಾ. ಇಸ್ಮಾಯಿಲ್ ಫಾರೂಖಿ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಶೋಕ್ ಭೂಷಣ್ ಏಕ ತೀರ್ಪು ನೀಡಿದ್ದರೆ, ನ್ಯಾ. ನಜೀರ್ ಭಿನ್ನ ತೀರ್ಪು ನೀಡಿದ್ದಾರೆ. 1994ರ ತೀರ್ಪಿನ ಅಂಶಗಳನ್ನು ಪರಿಶೀಲಿಸಲು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದೇ ವೇಳೆ, ಮಂದಿರ, ಚರ್ಚ್ ಅಥವಾ ಮಸೀದಿಯಾಗಲಿ ಯಾವುದೇ ಧಾರ್ಮಿಕ ಸ್ಥಳಗಳನ್ನು ಸರ್ಕಾರ ವಶಕ್ಕೆ ಪಡೆಯಬಹುದು ಅಂತ ಸುಪ್ರೀಂಕೋರ್ಟ್ ಹೇಳಿದೆ.
ತೀರ್ಪಿನಲ್ಲಿರುವ ಪ್ರಮುಖ ಅಂಶ ಏನು?
* ಮಸೀದಿಯಲ್ಲೇ ನಮಾಜ್ ಮಾಡಬೇಕು ಅಂತ ಏನಿಲ್ಲ
* ಮುಸ್ಲಿಮರು ಎಲ್ಲಿ ಬೇಕಾದ್ರೂ ನಮಾಜ್ ಮಾಡಬಹುದು
* ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವೇನಲ್ಲ
* ಯಾವ ಸನ್ನಿವೇಶದಲ್ಲಿ ಫಾರೂಖಿ ತೀರ್ಪು ಬಂದಿದೆ ಅನ್ನೋದು ಮುಖ್ಯ
* ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ಸರ್ಕಾರ ವಶಪಡಿಸಿಕೊಳ್ಳಬಹುದು
* ಫಾರೂಖಿ ತೀರ್ಪಿನಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಮಾತ್ರ ಅಭಿಪ್ರಾಯ ಕೇಳಲಾಗಿದೆ
* ಭೂಸ್ವಾಧೀನದಿಂದ ರಕ್ಷಣೆ ನೀಡುವ ಸನ್ನಿವೇಶದಲ್ಲಷ್ಟೇ ಫಾರೂಖಿ ತೀರ್ಪು ನೀಡಲಾಗಿದೆ
* 7 ಸದಸ್ಯರ ಸಂವಿಧಾನಿಕ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡುವ ಅಗತ್ಯತೆ ಇಲ್ಲ
Ayodhya land dispute case will not be referred to a larger bench: Justice Bhushan on behalf of him and CJI Dipak Misra #SupremeCourtpic.twitter.com/bAQQlOxfcE
ನ್ಯಾ. ನಜೀರ್ ನೀಡಿದ ಭಿನ್ನ ತೀರ್ಪೇನು?
* ಇನ್ನಿತ್ತರ ಇಬ್ಬರು ಸಹೋದ್ಯೋಗಿ ನ್ಯಾಯಮೂರ್ತಿಗಳು ನೀಡಿರೋ ತೀರ್ಪಿಗೆ ಸಹಮತವಿಲ್ಲ
* ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವೇ ಅನ್ನೋದರ ಬಗ್ಗೆ ಚರ್ಚೆಯಾಗಬೇಕು
* ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು
ಏನಿದು ಪ್ರಕರಣ?
ಇಸ್ಮಾಯಿಲ್ ಫರೂಕಿ ವರ್ಸಸ್ ಭಾರತ ಸರಕಾರದ ನಡುವಿನ ಪ್ರಕರಣದ ವಿಚಾರಣೆ ವೇಳೆ 1994ರಲ್ಲಿ ಸುಪ್ರೀಂ ಕೋರ್ಟ್, ನಮಾಜ್ ಎಲ್ಲಿ ಬೇಕಾದರೂ ಸಲ್ಲಿಸಬಹುದು. ಮಸೀದಿಯೇ ಆಗಬೇಕೆಂದಿಲ್ಲ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಈ ಕಾರಣಕ್ಕೆ ಮಸೀದಿ ನಿರ್ಮಿಸಿರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಮೇಲ್ಮನವಿ ಸಲ್ಲಿಸಿದ್ದವು. ಅಷ್ಟೇ ಅಲ್ಲದೇ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪನ್ನು ಪರಿಶೀಲನೆಗಾಗಿ ದೊಡ್ಡ ಸಂವಿಧಾನಿಕ ಪೀಠಕ್ಕೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.
ಕೊಪ್ಪಳ: ಜಿಲ್ಲೆಯಾದ್ಯಂತ ಗಣೇಶ ಉತ್ಸವ ಸೇರಿ ಇತರ ಕಾರ್ಯಕ್ರಮಗಳಲ್ಲೂ ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ಸಂಸದ ಸಂಗಣ್ಣ ಕರಡಿ ಆಕ್ರೋಶಕ್ಕೆ ಕಾರಣವಾಗಿದೆ.
ಗಣೇಶ ವಿಸರ್ಜನೆ ಅಂದರೆ ಹಬ್ಬ, ಆಡಂಬರ ಮತ್ತು ಡಿಜೆ ಸೌಂಡ್ನೊಂದಿಗೆ ಕುಣಿತ ಸಾಮಾನ್ಯ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕಳೆದ 2 ವರ್ಷದಿಂದ ಡಿಜೆ ನಿಷೇಧಿಸಿದ್ದರಿಂದ ಇಂಥ ಆಡಂಬರಕ್ಕೆ ಬ್ರೇಕ್ ಬಿದ್ದಿದೆ. ಜಿಲ್ಲಾಧಿಕಾರಿಗಳ ಈ ನಡೆಗೆ ಬಿಜೆಪಿಯಿಂದ ಆಯ್ಕೆಯಾಗಿರೋ ಜನಪ್ರತಿನಿಧಿಗಳು ಕೋಪಗೊಂಡಿದ್ದಾರೆ. ಈ ಕಾರಣಕ್ಕೆ ಸಂಸದ ಸಂಗಣ್ಣ ಕರಡಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಪ್ರಗತಿ ಪರಿಶೀಲನೆ ಸಭೆಯಲ್ಲೇ ಡಿಸಿ ವಿರುದ್ಧ ಸಿಡಿಮಿಡಿಗೊಂಡರು.
ಕಳೆದ ಮೂರು ವರ್ಷದ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಬನಾಯೆಂಗೇ ಮಂದಿರ ಎಂಬ ಹಾಡು ನಿಷೇಧಿಸಲಾಗಿತ್ತು. ಎರಡು ವರ್ಷದಿಂದ ಭಾರೀ ಧ್ವನಿಯ ಡಿಜೆ ಬಳಕೆಯನ್ನೇ ನಿಷೇಧಿಸಲಾಗಿದೆ. ಈ ಹಿಂದೆ ಗಂಗಾವತಿ ಶಾಸಕರಾಗಿದ್ದ ಇಕ್ಬಾಲ್ ಅನ್ಸಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಡಿಜೆ ನಿಷೇಧ ಮಾಡಿದ್ದರು. ಶಾಸಕರ ಈ ಕ್ರಮದ ಕುರಿತು ಚುನಾವಣೆಯಲ್ಲೂ ಚರ್ಚೆಯಾಗಿ ಬಿಜೆಪಿಯ ಕೆಲ ಮುಖಂಡರು, ಗಂಗಾವತಿಯಲ್ಲಿ ಗಣೇಶ ಚತುರ್ಥಿ ವೇಳೆ ಡಿಜೆ ಬಳಕೆ ಮಾಡಬೇಕು ಅಂದ್ರೆ ಬಿಜೆಪಿಗೆ ವೋಟ್ ಮಾಡಿ ಅಂತಾ ಪ್ರಚಾರ ಮಾಡಿದ್ದರು. ಆದರೆ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ಸೋಲುಂಡಿದ್ದರೂ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿದೆ. ಅನ್ಸಾರಿ ಈ ಬಾರಿಯೂ ಒತ್ತಡ ಹಾಕಿ ಡಿಜೆ ಬ್ಯಾನ್ ಮಾಡಿರೋದು ಬಿಜೆಪಿಗರ ಸಿಟ್ಟಿಗೆ ಕಾರಣವಾಗಿದೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿಯೇ ಕೊಪ್ಪಳದಲ್ಲಿ ಡಿಜೆಗೆ ನಿಷೇಧ ಹೇರಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹಂಪಿ ಉತ್ಸವ, ಇಟಗಿ ಉತ್ಸವದಲ್ಲಿ ಡಿಜೆಯನ್ನು ಬಳಸುತ್ತಾರೆ. ಆಗ ಆಗದ ತೊಂದರೆ ಗಣೇಶ ಹಬ್ಬದಲ್ಲಿ ತೊಂದರೆಯಾಗುತ್ತಾ ಎಂಬುದು ಗಣೇಶ ಸ್ಥಾಪನಾ ಮಂಡಳಿ ಯುವಕರ ಪ್ರಶ್ನೆಯಾಗಿದೆ.
ಮೈಸೂರು: ಕಾಡು ಪ್ರಾಣಿಗಳ ಕಾಡಿನಿಂದ ಹೊರಬರದಂತೆ ತಡೆಯಲು ಅರಣ್ಯ ಇಲಾಖೆ ಅನುಸರಿಸಿರೋ ಕ್ರಮ ಕಾಡು ಪ್ರಾಣಿಗಳ ಪ್ರಾಣಕ್ಕೆ ಕುತ್ತು ತಂದಿದ್ದು, ಕಬ್ಬಿಣದ ಮೊಳೆಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದರೂ ನಿರ್ಲಕ್ಷ್ಯವನ್ನು ತೋರುತ್ತಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ದೊಡ್ಡ ದೊಡ್ಡ ಚೂಪಾದ ಕಬ್ಬಿಣದ ಮೊಳೆಗಳ ಗೋಡೆಯನ್ನು ಅರಣ್ಯ ಇಲಾಖೆ ನಿರ್ಮಿಸಿದೆ. ಈ ಚೂಪಾದ ಕಬ್ಬಿಣದ ಮೊಳೆಗಳ ಗೋಡೆ ಶುದ್ಧ ಅವೈಜ್ಞಾನಿಕ. ಇದು ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಅರಣ್ಯ ಇಲಾಖೆಗೆ ಛೀಮಾರಿ ಹಾಕಿ ತಕ್ಷಣವೇ ಚೂಪಾದ ಮೊಳೆಗಳ ಗೋಡೆ ತೆರವು ಮಾಡುವಂತೆ ಆದೇಶಿಸಿದೆ. ಆದರೂ, ಅರಣ್ಯ ಇಲಾಖೆ ಮಾತ್ರ ಕಬ್ಬಿಣದ ಮೊಳೆಗಳ ಗೋಡೆ ತೆರವಿಗೆ ಮೀನಾಮೇಷ ಎಣಿಸುತ್ತಿದೆ.
ಈ ಚೂಪಾದ ಕಬ್ಬಿಣದ ಮೊಳೆ ಮೇಲೆ ಅಪ್ಪಿ-ತಪ್ಪಿ ಚಿರತೆ, ಹುಲಿ, ಚಿಂಕೆ ಹೀಗೆ ಯಾವುದಾದರೂ ಕಾಡು ಪ್ರಾಣಿಗಳು ಕಾಲಿಟ್ಟರೆ ಅವುಗಳ ಜೀವ ಹೋಗುವುದು ನಿಶ್ಚಿತ. ಇದನ್ನು ಗಮನಿಸಿಯೇ ಸುಪ್ರೀಂ ಕೋರ್ಟ್ ಗೋಡೆ ತೆರವಿಗೆ ಇಲಾಖೆಗೆ ನಿರ್ದೇಶಿಸಿದೆ. ಆದರೂ ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಬಲಿಗಾಗಿ ಕಾದಿದೆ ಏನೋ ಎಂಬಂತೆ ವರ್ತಿಸುತ್ತಿದೆ.
ನವದೆಹಲಿ: ಆದೇಶ ಪಾಲನೆ ಮಾಡದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಗರಂ ಆಗಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಿ ಕೆಲಸ ಆರಂಭಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ.
ನಗರದ ಬಾಗಲೂರು ಬಳಿ ಕಸ ವಿಲೇವಾರಿ ಮಾಡುತ್ತಿದ್ದ ಬಿಬಿಎಂಪಿ ವಿರುದ್ಧ ನ್ಯಾಯಾಲಯಕ್ಕೆ ಸ್ಥಳೀಯರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಅಧಿಕಾರಿಗಳ ನಡೆಯನ್ನು ಹಸಿರು ನ್ಯಾಯಾಧಿಕರಣ ಪ್ರಶ್ನಿಸಿ ತರಾಟೆಗೆ ತಗೆದುಕೊಂಡಿದೆ.
ಬಾಗಲೂರಿನಲ್ಲಿ ಬಿಬಿಎಂಪಿ ಡಂಪ್ (ವಿಲೇವಾರಿ) ಮಾಡಿದ್ದ ಎಲ್ಲ ಕಸವನ್ನು ಹೊರ ತೆಗೆದು, ಬೇರೆಡೆ ಸ್ಥಳಾಂತರ ಮಾಡುವಂತೆ ಹಿಂದೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಸೂಚಿಸಿತ್ತು. ಆದರೆ ಬಿಬಿಎಂಪಿ ಮಾತ್ರ ಇದುವರೆಗೂ ಏನು ಕ್ರಮ ಕೈಗೊಂಡಿಲ್ಲ ಅಂತಾ ಅರ್ಜಿದಾರ ಶ್ರೀನಿವಾಸ ಪರ ವಕೀಲರು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಪರ ವಕೀಲರು ಈಗಾಗಲೇ ಬಾಗಲೂರಿನಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ಐದು ತಿಂಗಳಿನಿಂದ ಕಸ ತೆಗೆಯುವ ಕೆಲಸ ಮಾಡಲಾಗುತ್ತಿದ್ದು, ಶೀಘ್ರವೇ ಬಯೋ ಮೈನಿಂಗ್ ಮುಗಿಸುತ್ತೇವೆ ಅಂತಾ ವಾದ ಮಂಡಿಸಿದರು.
ಬಿಬಿಎಂಪಿ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾ.ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠವು ಪರಿಗಣಿಸಲಿಲ್ಲ. ‘ನೀವು ಪದೇ ಪದೇ ಇದನ್ನೇ ಹೇಳುತ್ತಿರುವಿರಿ. ನಿಮಗೆ ಕೆಲಸ ಮಾಡಿ ಅಂತಾ ಎಷ್ಟು ಸಲ ಹೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿತು.
ಕಸದ ರಾಶಿಯಿಂದ ಮಿಥೇನ್ ಉತ್ಪತ್ತಿಯಾಗಿ ಬೆಂಕಿ ತಗಲುವ ಸಾಧ್ಯತೆ ಇದೆ. ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣ ಬಯೋ ಮೈನಿಂಗ್ ಆಗಬೇಕು ಎಂದು ಬಿಬಿಎಂಪಿಗೆ ಆದೇಶಿಸಿದ ನ್ಯಾ.ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠವು ಅಕ್ಟೋಬರ್ 8ಕ್ಕೆ ವಿಚಾರಣೆ ಮುಂದೂಡಿತು.
ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ವೇಳೆ ಜಾತಿ ಪ್ರಮಾಣ ಪತ್ರ ನೀಡಿಕ್ಕೆ ಸರಿಯಾದ ದಾಖಲೆ ಇಲ್ಲದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕೆಪಿ ಅಗ್ರಹಾರ ಗಾಯತ್ರಿ ಅವರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿ ಆದೇಶ ನೀಡಿದ್ದಾರೆ.
ನಗರದ ಕೆಪಿ ಅಗ್ರಹಾರ ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್ ಅವರ ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಎಸ್ಟಿ ಮಹಿಳೆಗೆ ಮೀಸಲಾಗಿದ್ದ ಕೆಪಿ ಅಗ್ರಹಾರ ವಾರ್ಡ್ ನಿಂದ ಎಂ ಗಾಯತ್ರಿ ಅವರು ನಾಯಕ ಜನಾಂಗದ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಈ ವೇಳೆ ದಾಖಲೆ ಪರಿಶೀಲಿಸದೆ ತಹಶೀಲ್ದಾರ್ ರಾಮಲಕ್ಷ್ಮಣ್ ಜಾತಿ ಪ್ರಮಾಣಪತ್ರ ನೀಡಿದ್ದರು.
ಏನಿದು ಪ್ರಕರಣ:
ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್ಗೆ ತಂದೆ-ತಾಯಿ, ಜಾತಿ ಬಗ್ಗೆ ಮಾಹಿತಿ ಇಲ್ಲ. ಇದೇ ಕಾರಣಕ್ಕೆ ನಾಯಕ ಜಾತಿ ಹೆಸರಿನಲ್ಲಿ ಶಾಲೆಯನ್ನು ಬಳಕೆ ಮಾಡಿ ಜಾತಿ ಪ್ರಮಾಣಪತ್ರ ಮಾಡಲಾಗಿದೆ. ನಗರದ ಕೆಪಿ ಆಗ್ರಹಾರದಲ್ಲಿರುವ ಸಿದ್ದಲಿಂಗೇಶ್ವರ ಶಾಲೆಯಲ್ಲಿ ವ್ಯಾಸಂಗ ನಡೆಸಿರುವ ಕುರಿತು ದಾಖಲೆ ಸೃಷ್ಟಿ ಮಾಡಲಾಗಿದ್ದು, ಆದರೆ ಅವರ ಶೈಕ್ಷಣಿಕ ಆರ್ಹತೆ ಬಗ್ಗೆ ಶಾಲೆಯಲ್ಲಿ ಯಾವುದೇ ಪೂರಕ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮಕೈಗೊಂಡಿದ್ದಾರೆ.
ಬಿಬಿಎಂಪಿ ಚುನಾವಣೆ ಸ್ಪರ್ಧೆ ಮಾಡುವ ಉದ್ದೇಶದಿಂದಲೇ 1ನೇ ತರಗತಿಯಿಂದ 5ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವಂತೆ ದಾಖಲೆ ಸೃಷ್ಟಿಸಲಾಗಿದ್ದು, ನಾಯಕ ಜಾತಿ ಪ್ರಮಾಣ ಪತ್ರ ಪಡೆಯಲು ಸಿದ್ದಲಿಂಗೇಶ್ವರ ಶಾಲೆ ಬಳಕೆ ಮಾಡಿದ್ದಾರೆ. 2015 ಜೂನ್ ನಲ್ಲಿ ಗಾಯಿತ್ರಿ ಅವರು ಜಾತಿ ಪ್ರಮಾಣ ಪತ್ರ ಪಡೆದಿದ್ದು, 2015 ಜುಲೈ ನಲ್ಲಿ ಬಿಬಿಎಂಪಿ ಚುನಾವಣೆ ನಡೆದಿತ್ತು. ಅಂದರೆ ಚುನಾವಣೆಯಲ್ಲಿ ಮೀಸಲಾತಿ ಘೋಷಣೆ ಆದ ಮೇಲೆ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ ಎಂಬುದು ಕಾಣಸಿಗುತ್ತದೆ.
ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ಪಡೆಯುವ ವೇಳೆಯೂ 5ನೇ ತರಗತಿ ಪಾಸ್ ಎಂದು ಬರೆಯಲಾಗಿದೆ. ಆದರೆ ದಾಖಲೆಯಲ್ಲಿ ಗಾಯಿತ್ರಿ ಅವರು 5ನೇ ತರಗತಿ ಅನುತ್ತೀರ್ಣ ಎಂದು ನಮೂದಿಸಲಾಗಿದೆ. ಈ ಕುರಿತು ಡಿಡಿಪಿಐ ಹಾಗೂ ಇತರೇ ಅಧಿಕಾರಿಗಳು ವರದಿ ನೀಡಿದ್ದು, ಈ ವರದಿ ಅನ್ವಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಒಂದೊಮ್ಮೆ ಈ ಕುರಿತು ಗಾಯಿತ್ರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ರೂ ಸಹ ವರದಿಯ ಅನ್ವಯ ಅರ್ಜಿ ತಿರಸ್ಕೃತ ಗೊಳ್ಳುವ ಸಾಧ್ಯತೆಯೂ ಇದೇ. ಆರೋಪ ಸಾಬೀತಾದಲ್ಲಿ ಗಾಯಿತ್ರಿ ಅವರು ಈ ಅವಧಿಯಲ್ಲಿ ಪಡೆದಿರುವ ಎಲ್ಲಾ ಸೌಲಭ್ಯಗಳನ್ನ ಹಿಂದಿರುಗಿಸುವ ಅನಿವಾರ್ಯ ಎದುರಾಗಲಿದೆ. ಅಲ್ಲದೇ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದಡಿ 6 ವರ್ಷ ಚುನಾವಣೆಗೆ ಮತ್ತೆ ಸ್ಪರ್ಧೆ ಮಾಡುವಂತಿಲ್ಲ.