Tag: ಆದೇಶ

  • ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ರಾಯಚೂರು: ಜಿಲ್ಲೆಯ ಮಾಜಿ ಸೈನಿಕರೊಬ್ಬರಿಗೆ ಭೂಮಿ ನೀಡಬೇಕೆಂದು ಕಲಬುರಗಿ ಉಚ್ಚನ್ಯಾಯಾಲಯ ಆದೇಶ ನೀಡಿದ್ದರೂ, ನಿರ್ಲಕ್ಷ್ಯ ತೋರಿದ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಿದೆ.

    ಮಾಜಿ ಸೈನಿಕ ಪೌಲ್ ಮಿತ್ರ ಅವರಿಗೆ ಭೂಮಿ ನೀಡುವಂತೆ ಕೋರ್ಟ್ ಜಿಲ್ಲಾಧಿಕಾರಿ ಬಗಾದಿ ಗೌತಮ್‍ಗೆ ಆದೇಶ ನೀಡಿತ್ತು. ಆದರೆ ಜಿಲ್ಲೆಯಲ್ಲಿ ಜಮೀನಿನ ಕೊರತೆಯಿದ್ದು, ಪೌಲ್ ಮಿತ್ರ ಅವರಿಗೆ ಭೂಮಿ ನೀಡಲು ಸಾಧ್ಯವಿಲ್ಲ ಅಂತಾ ಬಗಾದಿ ಗೌತಮ್ ಹೇಳಿ, ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ್ದರು.

    1962 ರಲ್ಲೇ ಭಾರತೀಯ ಸೈನ್ಯದಿಂದ ಪೌಲ್ ಮಿತ್ರ (93) ನಿವೃತ್ತಿಯಾಗಿದ್ದರು. ಸುಮಾರು ವರ್ಷಗಳಿಂದ ಭೂಮಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿ ಈಗ ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಆಗಸ್ಟ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಬಗಾದಿ ಗೌತಮ್ ಅವರಿಗೆ ಉಚ್ಚನ್ಯಾಯಾಲಯ ದ್ವಿಸದಸ್ಯ ಪೀಠ ತಾಕೀತು ಮಾಡಿದೆ.

  • ಫ್ರೀ ಸಾಫ್ಟ್ ವೇರ್ ಇದ್ರೂನೂ ಖಾಸಗಿಯೇ ಬೇಕು- ವಿವಿಗಳಿಂದ ಕೋಟಿ ಕೋಟಿ ಲೂಟಿ!

    ಫ್ರೀ ಸಾಫ್ಟ್ ವೇರ್ ಇದ್ರೂನೂ ಖಾಸಗಿಯೇ ಬೇಕು- ವಿವಿಗಳಿಂದ ಕೋಟಿ ಕೋಟಿ ಲೂಟಿ!

    ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ಸರ್ಕಾರ, ಖರ್ಚು ಕಡಿಮೆ ಮಾಡಿ ಅಂತ ಸಿ.ಎಂ ಕುಮಾರಸ್ವಾಮಿಯವರು ಎಷ್ಟೇ ಮನವಿ ಮಾಡಿದ್ರು ಅವರ ಸಚಿವರು ಮಾತ್ರ ಖರ್ಚುಮಾಡ್ತಾನೆ ಇದ್ದಾರೆ.

    2015 ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯನ್ನ ಬಳಸಿಕೊಳ್ಳದೇ ವಿವಿ ಬೇಜವಾಬ್ದಾರಿಯನ್ನು ತೋರಿದೆ. ಸರ್ಕಾರ ಉಚಿತವಾಗಿ ನೀಡಿರೋ ನಿಖ್ ಸಾಫ್ಟ್ ವೇರ್ ಅನ್ನು ಎಲ್ಲಾ ವಿವಿಗಳು ಬಳಸಬೇಕು ಅಂತ ಸರ್ಕಾರಿ ಆದೇಶವಿದ್ರೂ ಅದನ್ನು ಉಲ್ಲಂಘಿಸಿದೆ. ಅದನ್ನು ಬಳಸದೇ ಖಾಸಗಿ ಸಂಸ್ಥೆಗಳ ಮೂಲಕ ಮಹತ್ವದ ಪರೀಕ್ಷಾ ದಾಖಲಾತಿಗೆ ಮಾರ್ಕ್ಸ್ ಕಾರ್ಡ್ ಪ್ರಿಂಟ್‍ಗೆ ಟೆಂಡರ್ ಕರೆದಿದ್ದಾರೆ. ಹಾಗಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ತನ್ನ ವ್ಯಾಪ್ತಿ ಅಡಿಯಲ್ಲಿ ಬರೋ ಎಲ್ಲಾ ವಿಶ್ವವಿದ್ಯಾಲಯಗಳು ಖಾಸಗಿ ಸಾಫ್ಟ್ ವೇರ್ ಖರೀದಿಗೆ ಮೌಖಿಕ ಆದೇಶ ನೀಡಿದ್ದಾರೆ.

    ಒಂದೇ ಕೆಲಸಕ್ಕೆ ವಿವಿಗಳಿಂದ ಎರಡೆರಡು ಸಾಫ್ಟ್ ವೇರ್ ಅನ್ನ ಖರೀದಿ ಮಾಡುತ್ತಿದ್ದು, ಇದಕ್ಕಾಗಿ ಕೋಟಿ ಕೊಟಿ ರೂ ವೆಚ್ಚವನ್ನು ಖರ್ಚುಮಾಡುವ ಪರಿಸ್ಥಿತಿ ಬಂದಿದೆ. ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ದಾವಣಗೆರೆ, ಕಲಬರುಗಿ ವಿವಿಗಳಿಂದ ಈ ರೀತಿ ಖರೀದಿಗಳು ಸಾಧ್ಯವಾಗುತ್ತಿದೆ.

  • ಗಮನಿಸಿ, ಬೆಂಗ್ಳೂರಲ್ಲಿ ಫ್ಲೆಕ್ಸ್ ಹಾಕಿದ್ರೆ ಜೈಲು ಶಿಕ್ಷೆ! – ಬಿಬಿಎಂಪಿ ಪ್ರಕಟಣೆಯಲ್ಲಿ ಏನಿದೆ?

    ಗಮನಿಸಿ, ಬೆಂಗ್ಳೂರಲ್ಲಿ ಫ್ಲೆಕ್ಸ್ ಹಾಕಿದ್ರೆ ಜೈಲು ಶಿಕ್ಷೆ! – ಬಿಬಿಎಂಪಿ ಪ್ರಕಟಣೆಯಲ್ಲಿ ಏನಿದೆ?

    ಬೆಂಗಳೂರು: ಇನ್ನು ಮುಂದೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಕಿದರೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ನಗರದಲ್ಲಿ ಯಾರಾದರೂ ಫ್ಲೆಕ್ಸ್ ಹಾಗೂ ಬ್ಯಾನರ್ ಹಾಕಿದರೆ ಅವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲು ಮಾಡಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

    ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಿದ್ದು, ಅವುಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಮೌಖಿಕ ಖಡಕ್ ಆದೇಶಕ್ಕೆ ಬಿಬಿಎಂಪಿ ತತ್ತರಿಸಿ ಕೊನೆಗೂ ಎಚ್ಚೆತ್ತುಕೊಂಡಿದೆ.

    ಕೆಲವು ಸಾರ್ವಜನಿಕ ಸಭೆ, ಸಮಾರಂಭಗಳ ವೇಳೆ ಬಾವುಟ, ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಬಳಕೆ ಮಾಡಲಾಗುತ್ತದೆ. ಹೀಗಾಗಿ ವಿವಿಧ ರಾಜಕೀಯ ಪಕ್ಷಗಳಿಗೂ ಆಯುಕ್ತರು, ಅನಧಿಕೃತವಾಗಿ ಬ್ಯಾನರ್ ಹಾಗೂ ಫ್ಲೆಕ್ಸ್ ಬಳಕೆ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ನಡೆದುಕೊಂಡರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಶಿಕ್ಷೆ ಏನು?
    ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976 ಮತ್ತು ಕರ್ನಾಟಕ ಓಪನ್ ಪ್ಲೇಸಸ್ (ಪ್ರಿವೆನ್ಶೆನ್ ಆಫ್ ಡಿಸ್‍ಫಿಗರ್ ಮೆಂಟ್) ಕಾಯ್ದೆ 1981ರ ಅಡಿಯಲ್ಲಿ ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಹೀಗಾಗಿ ತಪ್ಪಿತಸ್ಥರಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಕೆಲವು ಪ್ರಕರಣದಲ್ಲಿ ಜೈಲು ಶಿಕ್ಷಯ ಜೊತೆಗೆ ದಂಡ ವಿಧಿಸಲಾಗುತ್ತದೆ. ಜಾಹಿರಾತುದಾರರು, ಪ್ರಕಟಣೆಗಾರರು, ಮುದ್ರಣಗಾರರು, ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

    ಬುಧವಾರ ಹೈಕೋರ್ಟ್ ನಲ್ಲಿ ಏನಾಯ್ತು?
    ಬುಧವಾರ ಬೆಳಗ್ಗೆ ಕಲಾಪಕ್ಕೂ ಮುನ್ನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು ಬಿಬಿಎಂಪಿ ವಕೀಲರ ಮೂಲಕ ಆಯುಕ್ತರಿಗೆ ಮೌಖಿಕವಾಗಿ ಆದೇಶ ಹೊರಡಿಸಿದ್ದರು. ವಕೀಲರು ಫೋನ್ ನರೆ ಮೂಲಕ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರ ಗಮನಕ್ಕೆ ತಂದಿದ್ದರು.

    ಹೈಕೋರ್ಟ್ ಆದೇಶದಿಂದ ಮಂಜುನಾಥ್ ಪ್ರಸಾದ್ ಎಲ್ಲ ಅಧಿಕಾರಿಗಳಿಗೆ ಫೋನ್ ಕರೆ ಮಾಡಿ, ಬ್ಯಾನರ್ ಹಾಗೂ ಫ್ಲೆಕ್ಸ್ ತುರ್ತು ತೆರವುಗೊಳಿಸಿ, ಅವುಗಳ ಫೋಟೋವನ್ನು ವ್ಯಾಟ್ಸಪ್ ಮೂಲಕ ತಮ್ಮ ಮೊಬೈಲಿಗೆ ಕಳುಹಿಸುವಂತೆ ಆದೇಶಿಸಿದ್ದರು. ಅಷ್ಟೇ ಅಲ್ಲದೆ ಮಧ್ಯಾಹ್ನ ಖುದ್ದು ಕೋರ್ಟ್‍ಗೆ ಹಾಜರಾಗಿದ್ದರು. ನಂತರದ ವಿಚಾರಣೆಯಲ್ಲಿ ತೆರವು ಕಾರ್ಯದ ವರದಿಯನ್ನು ಬಿಬಿಎಂಪಿ ಪರ ವಕೀಲ ಕೋರ್ಟ್ ಗೆ ಒಪ್ಪಿಸಿದರು.

    ಬಿಬಿಎಂಪಿ ಎಲ್ಲ ಸಿಬ್ಬಂದಿ ಬುಧವಾರ ಒಂದು ದಿನದ ಎಲ್ಲಾ ಕೆಲಸಗಳನ್ನು ಪಕ್ಕಕ್ಕೆ ಸರಿಸಿ ಕೇವಲ ಬ್ಯಾನರ್ ಹಾಗೂ ಫ್ಲೆಕ್ಸ್ ತೆರವು ಕಾರ್ಯದಲ್ಲಿ ತೊಡಗಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ 5 ಸಾವಿರಕ್ಕೂ ಹೆಚ್ಚು ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ತೆರವು ಮಾಡಿದ್ದರು. ಕೆಲವು ಪ್ರದೇಶಗಳಲ್ಲಿ ತಡರಾತ್ರಿಯವರೆಗೂ ತೆರವು ಕಾರ್ಯ ನಡೆದಿತ್ತು.

    ತಡರಾತ್ರಿವರೆಗೆ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಅವರ ಜನ್ಮದಿನ ಶುಭಾಶಯದ ಕೋರಿ ಹಾಕಿದ್ದ ಬ್ಯಾನರ್ ಹಾಗೂ ಫ್ಲೆಕ್ಸ್‍ಗಳನ್ನು ಬಿಡಲಾಗಿತ್ತು.

    ಎಲ್ಲ ವಿಭಾಗದ ಜಂಟಿ ಆಯುಕ್ತರು, ಮುಖ್ಯ ಎಂಜನಿಯರ್‍ಗಳು ಸೇರಿದಂತೆ ಸೂಪರಿಂಟೆಂಡಿಂಗ್, ಕಾರ್ಯಪಾಲಕ ಹಾಗೂ ಸಹಾಯಕ ಕಾರ್ಯಪಾಲಕ ಎಂಜನಿಯರ್‍ಗಳು, ಸಹಾಯಕ ಸಿಬ್ಬಂದಿ, ಗ್ಯಾಂಗ್‍ಮನ್‍ಗಳು ಮತ್ತು ಪೌರಕಾರ್ಮಿಕರು ತೆರವು ಕಾರ್ಯದಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆಯಲ್ಲಿ ಒಟ್ಟು 2 ಸಾವಿರ ಸಿಬ್ಬಂದಿ ಹಾಗೂ 500 ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ.

    ಮುಂದಿನ ನಡೆ:
    ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ನಾಶಮಾಡಬಾರದು ಎಂದು ಕೋರ್ಟ್ ಸೂಚಿಸಿದ್ದು, ತೆರವು ಗೊಳಿಸಿರುವ ಫೋಟೋಗಳನ್ನು ಗುರುವಾರ ನೀಡಬೇಕು ಆದೇಶ ನೀಡಿತ್ತು. ಆಗಸ್ಟ್ 8ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಕಾರ್ಯಾಚರಣೆಯ ಸಂಪೂರ್ಣ ವರದಿ ನೀಡಲಾಗುವುದು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

  • ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ನವದೆಹಲಿ: ದೇಶದ ಒಟ್ಟು 23 ವಿಮಾ ಸಂಸ್ಥೆಗಳಲ್ಲಿ ವಾರಸುದಾರರಿಲ್ಲದೆ ಬರೋಬ್ಬರಿ 15, 167 ಕೋಟಿ ರೂ. ಕೊಳೆಯುತ್ತಾ ಬಿದ್ದಿದೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ ಡಿಎ) ವರದಿ ನೀಡಿದೆ.

    ಐಆರ್ ಡಿಎ ವರದಿಯ ಪ್ರಕಾರ, ವಿಮೆ ಮಾಡಿದ ಬಳಿಕ ಅದನ್ನು ಮರೆತು ಬಿಟ್ಟಿದ್ದರಿಂದ ಮತ್ತು ವಾರಸುದಾರರಿಗೆ ವಿಮೆಯ ಮಾಹಿತಿಯಿಲ್ಲದೇ ಇರುವುದರಿಂದ 15,167 ಕೋಟಿ ರೂಪಾಯಿ ವಾರಸುದಾರರಿಲ್ಲದ ಹಣ ಜಮೆಯಾಗಿದೆ ಎಂದು ತಿಳಿಸಿದೆ.

    2018ರ ಮಾರ್ಚ್ 31ರವರೆಗೂ 15,166 ಕೋಟಿ ರೂ. ಬಾಕಿ ಉಳಿದಿದ್ದು ಈ ಪೈಕಿ ಎಲ್‍ಐಸಿ 10,509 ಕೋಟಿ ರೂ. ಉಳಿದ 22 ಖಾಸಗಿ ಸಂಸ್ಥೆಗಳು 4,657.47 ಕೋಟಿ ರೂ. ಜಮೆ ಆಗಿದೆ ಎಂದು ವರದಿ ನೀಡಿದೆ.

    ಖಾಸಗಿ ವಿಮಾಸಂಸ್ಥೆಗಳಾದ ಐಸಿಐಸಿಐ ಪ್ರೋಡೆನ್ಷಿಯಲ್ ಲೈಫ್ ಇನ್ಸೂರೆನ್ಸ್ ಕಂಪೆನಿ 807.4 ಕೋಟಿ ರೂ. ರಿಲಯಲ್ಸ್ ನಿಪ್ಪಾನ್ ಲೈಫ್ ಇನ್ಸೂರೆನ್ಸ್ ಕಂಪೆನಿ 696.12 ಕೋಟಿ ರೂ., ಎಸ್‍ಬಿಐ ಲೈಫ್ ಇನ್ಸೂರೆನ್ಸ್ ನಿಗಮ 678.59 ಕೋಟಿ ರೂ. ಹಾಗೂ ಹೆಚ್‍ಡಿಎಫ್‍ಸಿ ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂಪೆನಿ 659.3 ಕೋಟಿ ರೂ. ಮೊತ್ತ ಜಮೆಯಾಗಿದೆ ಎಂದು ಐಆರ್ ಡಿಐ ತಿಳಿಸಿದೆ.

    ಈ ಸಂಬಂಧ ಜಮೆಯಾದ ಹಣವನ್ನು ಶೀಘ್ರವೇ ವಿಮಾ ಪಾಲಿಸಿದಾರರನ್ನು ಖುದ್ದು ಪತ್ತೆಹಚ್ಚಿ, ಮರು ಪಾವತಿಸುವಂತೆ ದೇಶದ 23 ವಿಮಾ ಸಂಸ್ಥೆಗಳಿಗೆ ಐಆರ್‍ಡಿಎ ಆದೇಶ ನೀಡಿದೆ.

  • ಪಬ್ಲಿಕ್ ಟಿವಿ ವರದಿ ಫಲಶೃತಿ: ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಗಳ ಅಮಾನತು

    ಪಬ್ಲಿಕ್ ಟಿವಿ ವರದಿ ಫಲಶೃತಿ: ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಗಳ ಅಮಾನತು

    ಬಳ್ಳಾರಿ: ಪಬ್ಲಿಕ್ ಟಿವಿಯಲ್ಲಿ ಲಂಚ ಪ್ರಕರಣ ವರದಿ ಆಗುತ್ತಿದ್ದಂತೆ ಹಗರಿಬೊಮ್ಮನಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಬಳ್ಳಾರಿ ಎಸ್‍ಪಿ ಅರುಣ್ ರಂಗರಾಜನ್ ಆದೇಶ ಹೊರಡಿಸಿದ್ದಾರೆ.

    ಪಿಎಸ್‍ಐ ಪುಲ್ಲಯ್ಯ ರಾಠೋಡ್ ಹಾಗೂ ಎಎಸ್‍ಐ ಪರಮೇಶ್ವರಪ್ಪ ಅಮಾನತು ಆಗಿರುವ ಪೊಲೀಸ್ ಅಧಿಕಾರಿಗಳು. ಪುಲ್ಲಯ್ಯ ರಾಠೋಡ್ ಹಾಗೂ  ಎಎಸ್‍ಐ ಪರಮೇಶ್ವರಪ್ಪ ರೈತರಿಂದ ಲಂಚ ವಸೂಲಿ ಮಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಇಬ್ಬರು ಅಧಿಕಾರಿಗಳು ಟ್ರ್ಯಾಕ್ಟರ್ ಗಳನ್ನು ಹಿಡಿದು, ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸುತ್ತಿದ್ದರು. ಆದರೆ ರೈತರು ಹಾಗೂ ಮಾಲೀಕರಿಂದ 5 ಸಾವಿರ ರೂ., 10 ಸಾವಿರ ರೂ. ಲಂಚ ಪಡೆದು ವಸೂಲಿ ಮಾಡಿ, ಟ್ರ್ಯಾಕ್ಟರ್ ಬಿಟ್ಟು ಕಳುಹಿಸುತ್ತಿದ್ದರು.  ಇದನ್ನು ಓದಿ:  ಹಗರಿಬೊಮ್ಮನಹಳ್ಳಿ ಠಾಣೆ ನಿರ್ವಹಣೆ ನೆಪದಲ್ಲಿ ಲಂಚಕ್ಕೆ ಇಳಿದ ಪೊಲೀಸ್ ಅಧಿಕಾರಿಗಳು!

    ಮಂಗಳವಾರ ಪಿಎಸ್‍ಐ ಪುಲ್ಲಯ್ಯ ಹಾಗೂ ಎಎಸ್‍ಐ ಪರಮೇಶ್ವರಪ್ಪ ಇಬ್ಬರು ಸೇರಿ ಲಂಚ ವಸೂಲಿ ಮಾಡುತ್ತಿದ್ದಾಗ ಮಾನವ ಹಕ್ಕುಗಳ ಸಂರಕ್ಷಣಾ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಚನ್ನವೀರ ಅವರು ತಮ್ಮ ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ವಿಡಿಯೋಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್ ಅವರಿಗೆ ನೀಡಿ, ಲಂಚ ವಸೂಲಿ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ದೂರು ಸಲ್ಲಿಸಿದ್ದರು. ಪ್ರಕರಣದ ಕುರಿತು ಪಬ್ಲಿಕ್ ಟಿವಿಯಲ್ಲಿ ವರಿದಿಯಾಗುತ್ತಿದ್ದಂತೆ ಬಳ್ಳಾರಿ ಎಸ್‍ಪಿ ಅಮಾನತು ಆದೇಶ ಹೊರಡಿಸಿದ್ದಾರೆ.

  • 6ನೇ ಮೈಲಿ ಸಿನಿಮಾ ನೋಡಿ: ಅಪರ ಪೊಲೀಸ್ ಆಯುಕ್ತರಿಂದ ಸುತ್ತೋಲೆ

    6ನೇ ಮೈಲಿ ಸಿನಿಮಾ ನೋಡಿ: ಅಪರ ಪೊಲೀಸ್ ಆಯುಕ್ತರಿಂದ ಸುತ್ತೋಲೆ

    ಬೆಂಗಳೂರು: ಪೊಲೀಸರು `6ನೇ ಮೈಲಿ’ ಸಿನಿಮಾ ನೋಡಬೇಕು ಎಂದು ಬೆಂಗಳೂರು ನಗರ ಅಪರ ಪೊಲೀಸ್ ಆಯುಕ್ತ ಎಂ.ನಂಜುಂಡಸ್ವಾಮಿ ಸುತ್ತೋಲೆ ಹೊರಡಿಸಿದ್ದಾರೆ.

    ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವಿಶೇಷವಾಗಿ ಪೊಲೀಸರಿಗೆ 6ನೇ ಮೈಲಿ ಸಿನಿಮಾ ಪ್ರದರ್ಶನ ಆಯೋಜಿಸಲಾಗಿದೆ. ಚಿತ್ರವು ಸರಣಿ ಕೊಲೆ ಭೇದಿಸುವ ಕಥೆಯನ್ನು ಹೊಂದಿದೆ. ಅತ್ಯಾಧುನಿಕ ತಂತ್ರಾಜ್ಞಾನ ಬಳಸಿಕೊಂಡು ಪ್ರಕರಣ ಭೇದಿಸುವ ಸಿನಿಮಾ ಇದಾಗಿದ್ದು, ಪ್ರತಿ ವಿಭಾಗದಿಂದ 5 ಪೊಲೀಸ್ ಅಧಿಕಾರಿಗಳನ್ನು ಸಿನಿಮಾ ನೋಡಲು ಕಳುಹಿಸಿಕೊಡುವಂತೆ ಎಂ.ನಂಡುಂಡಸ್ವಾಮಿ ಸೂಚನೆ ನೀಡಿದ್ದಾರೆ.

    ಸದ್ಯ ಪೊಲೀಸರಿಗಾಗಿಯೇ ಚಾಮರಾಜಪೇಟೆಯಲ್ಲಿ ವಿಶೇಷ ಪ್ರದರ್ಶನ ಮಂಗಳವಾರ ಸಂಜೆ 7 ಗಂಟೆಗೆ ಸಿನಿಮಾ ಪ್ರದರ್ಶನ ಆರಂಭವಾಗಿದೆ.

    ಸುತ್ತೋಲೆಯಲ್ಲಿ ಏನಿದೆ?
    6ನೇ ಮೈಲಿ ಸಿನಿಮಾದ ನಿರ್ಮಾಪಕರು ಪೊಲೀಸ್ ಅಧಿಕಾರಿಗಳಿಗೆ ಗೌರವ ಸೂಚಕವಾಗಿ ವಿಶೇಷ ಪ್ರದರ್ಶನವನ್ನು ಬುಧವಾರ ಸಂಜೆ 7 ಗಂಟೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಆಯೋಜಿಸಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಣೆಗೆ ಪ್ರತಿ ವಿಭಾಗದ ಐದು ಜನ ಪೊಲೀಸ್ ಅಧಿಕಾರಿಗಳನ್ನು ಹಾಗೂ ಬಿಡುವು ಇರುವವರನ್ನು ಕಳುಹಿಸಿಕೊಡಬೇಕು ಎಂದು ಎಂ.ನಂಜುಂಡಸ್ವಾಮಿ ಸುತ್ತೋಲೆಯಲ್ಲಿ ತಿಳಿಸಿದ್ದರು.

  • ಮ್ಯಾನ್ ಹೋಲ್ ಶುಚಿಗೊಳಿಸಲು ಗುಂಡಿಗಿಳಿದ ಮೂವರು ಕಾರ್ಮಿಕರ ಸಾವು

    ಮ್ಯಾನ್ ಹೋಲ್ ಶುಚಿಗೊಳಿಸಲು ಗುಂಡಿಗಿಳಿದ ಮೂವರು ಕಾರ್ಮಿಕರ ಸಾವು

    ಬೆಂಗಳೂರು: ಎಸ್ ಟಿ ಪಿ ಪ್ಲಾಂಟ್ ಶುಚಿಗೊಳಿಸಲು ಹೋಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ನಗರದ ಸೋಮಸುಂದರ ಪಾಳ್ಯದ ಸಫಲ್ ಅಪಾರ್ಟ್ ಮೆಂಟ್‍ನಲ್ಲಿ ಘಟನೆ ನಡೆದಿದ್ದು, ಮೃತರು ಮಾದೇವಯ್ಯ, ನಾರಾಯಣಸ್ವಾಮಿ ಹಾಗೂ ಶ್ರೀನಿವಾಸ್ ಎಂದು ತಿಳಿದು ಬಂದಿದೆ.

    ಮ್ಯಾನ್ ಹೋಲ್‍ಗಳನ್ನು ಶುಚಿಗೊಳಿಸಲು ಕಾರ್ಮಿಕರನ್ನು ಬಳಸಬಾರದೆಂದು ಸುಪ್ರೀಂ ಕೋರ್ಟ್ ನಿಷೇಧ ಹೇರಿದ್ದರೂ ಗುತ್ತಿಗೆದಾರರು ಯಂತ್ರವನ್ನು ಬಳಸದೆ ಖಾಸಗಿ ಕೂಲಿ ಕಾರ್ಮಿಕರನ್ನು ಪ್ಲಾಂಟ್ ನಲ್ಲಿ ಇಳಿಸಿದ್ದು, ಈ ವೇಳೆ ವಿಷಯುಕ್ತ ಗಾಳಿ ಸೇವಿಸಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

    ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಮೂರು ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪಾಲಿಕೆ ಸದಸ್ಯ ಗುರುಮೂರ್ತಿ ರೆಡ್ಡಿ ಹಾಗೂ ಶಾಸಕ ಸತೀಶ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಘಟನಾ ಸ್ಥಳದಲ್ಲಿ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ವೇಳೆ ಅಕ್ರೋಶಗೊಂಡ ಮೃತನ ಸಂಬಂಧಿಕರು ಅಪಾರ್ಟ್ ಮೆಂಟ್ ಅಸೋಸಿಯೇಷನ್ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

  • 12 ಗಂಟೆ ಬಳಿಕ ಸಂಸದ ಪ್ರತಾಪ್ ಸಿಂಹ ರಿಲೀಸ್

    12 ಗಂಟೆ ಬಳಿಕ ಸಂಸದ ಪ್ರತಾಪ್ ಸಿಂಹ ರಿಲೀಸ್

    ಮೈಸೂರು: ಭಾನುವಾರ ಕಾರಿನಲ್ಲಿ ಬ್ಯಾರಿಕೇಡ್ ಗೆ ಗುದ್ದಿ ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಉದ್ಧಟತನ ಪ್ರದರ್ಶನ ಮಾಡಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ನ್ಯಾಯಧೀಶರ ಮುಂದೆ ನಿಲ್ಲಿಸುವ ಬದಲು ಇಡೀ ರಾತ್ರಿ ರೌಂಡ್ ಹೊಡೆಸಿ ನಂತರ ಬಿಡುಗಡೆಗೊಳಿಸಿದ್ದಾರೆ.

    ಹುಣಸೂರು, ಹೆಚ್.ಡಿ.ಕೋಟೆ, ಕೆ.ಆರ್.ನಗರ, ಮೈಸೂರು, ನರಸೀಪುರ ಸೇರಿದಂತೆ ಮೊದಲಾದ ಕಡೆ ಸುಮಾರು 8 ಗಂಟೆ ಕಾಲ ರೌಂಡ್ ಹೊಡೆಸಿದ ನಂತರ ರಾತ್ರಿ 11 ಗಂಟೆ ಹೊತ್ತಿಗೆ ಟೀ ನರಸೀಪುರ ಪಟ್ಟಣ ಠಾಣೆಗೆ ಪ್ರತಾಪ್ ಸಿಂಹರನ್ನು ಕರೆತರಲಾಯಿತು. ಅಲ್ಲಿ ಪ್ರತಾಪ್ ಸಿಂಹ ಸ್ಟೇಷನ್ ಬೇಲ್ ಪಡೆದು ರಿಲೀಸ್ ಆಗಿದ್ದಾರೆ.

    ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಿಮಗೆ ನಿಮ್ಮ ಅಹಂ ದೊಡ್ಡದಾಗಿತ್ತು. ಆದರೆ ಅದು ನಿಮ್ಮ ಮನಸ್ಥಿತಿಯಲ್ಲಿರುವ ಲೋಪ. ಅದನ್ನು ಅಡ್ಡ ತಂದು ನಮ್ಮ ಮೇಲೆ ಗಧಾಪ್ರಹಾರ ಮಾಡಬೇಡಿ. 2015ರಲ್ಲಿ ನೀವು ಬ್ಯಾನ್ ಮಾಡಿದ 3 ರಸ್ತೆಯಲ್ಲಿ ಸುಸೂತ್ರವಾಗಿ ಹನುಮ ಜಯಂತಿ ನಡೆದಿತ್ತು. ಆದರೆ ಇದೀಗ ಅವಕಾಶವೇ ಕೊಡುತ್ತಿಲ್ಲ. ನಾನೊಬ್ಬ ಸಂಸದನಾಗಿ ಹುಣಸೂರಿಗೆ ಹೋಗಿ ಕಾನೂನು ಉಲ್ಲಂಘನೆ ಮಾಡುತ್ತೀನಿ ಎಂದು ನಿಮಗೆ ಕನಸು ಬಿದ್ದಿತ್ತಾ ಎಂದು ಸರ್ಕಾರವನ್ನ ಪ್ರಶ್ನೆ ಮಾಡಿದರು.

  • ಹಾಸ್ಟೆಲ್ ವಿದ್ಯಾರ್ಥಿಗಳು ಸೆಲ್ಫೀ ತೆಗೆದು ಗ್ರೂಪ್‍ಗೆ ಹಾಕ್ಬೇಕಂತೆ – ಸಮಾಜಕಲ್ಯಾಣ ಇಲಾಖೆಯ ಆದೇಶಕ್ಕೆ ಪೋಷಕರ ತರಾಟೆ

    ಹಾಸ್ಟೆಲ್ ವಿದ್ಯಾರ್ಥಿಗಳು ಸೆಲ್ಫೀ ತೆಗೆದು ಗ್ರೂಪ್‍ಗೆ ಹಾಕ್ಬೇಕಂತೆ – ಸಮಾಜಕಲ್ಯಾಣ ಇಲಾಖೆಯ ಆದೇಶಕ್ಕೆ ಪೋಷಕರ ತರಾಟೆ

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಆದೇಶ ವಸತಿ ನಿಲಯದ ಬಾಲಕಿಯರಿಗೆ ತಲೆ ನೋವಾಗಿ ಪರಿಣಮಿಸಿದೆ. ಹೆಸರಿಗೆ ಸಮಾಜ ಕಲ್ಯಾಣ ಇಲಾಖೆ. ಆದರೆ ಇಲಾಖೆ ಆದೇಶ ಸಮಾಜವೇ ಪ್ರಶ್ನೆ ಮಾಡುವಂತಿದೆ.

    ಹೌದು. ವಸತಿ ನಿಲಯದ ಬಾಲಕ, ಬಾಲಕಿಯರು ಸೆಲ್ಫೀ ಫೋಟೋ ತೆಗೆದು ಇಲಾಖಾ ಟೆಲಿ ಗ್ರಾಂ ಗ್ರೂಪ್‍ನಲ್ಲಿ ಹಾಕುವಂತೆ ಇಲಾಖೆ ಆದೇಶಿಸಿದೆ. ಇದು ಈಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

    ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟ ವಿತರಣೆ ಮಾಡಲಾಗುತ್ತಿದೆಯೋ, ಇಲ್ಲವೋ ಎಂದು ತಿಳಿಯಲು ಇಲಾಖೆ ಈ ಕ್ರಮ ಕೈಗೊಂಡಿದೆ. ಎಸ್‍ಸಿ-ಎಸ್‍ಟಿ ವಸತಿ ನಿಲಯಗಳಲ್ಲಿ ಬಾಲಕ, ಬಾಲಕಿಯರು ಊಟ ಪಡೆಯಬೇಕಾದರೆ ಫೋಟೋ ತೆಗೆದು ಸಮಾಜ ಕಲ್ಯಾಣ ಇಲಾಖೆಯಿಂದ ರಚನೆಯಾಗಿರೋ ಎಸ್‍ಡಬ್ಲೂಡಿ ಟೆಲಿಗ್ರಾಂ ಗ್ರೂಪ್‍ಗೆ ಅಪ್‍ಲೋಡ್ ಮಾಡಬೇಕಂತೆ.

    ಎಸ್‍ಡಬ್ಲ್ಯೂಡಿ ಟೆಲಿಗ್ರಾಂ ಗ್ರೂಪ್ ಗೆ ರಾಜ್ಯದ ಎಲ್ಲಾ ಬಾಲಕ, ಬಾಲಕಿಯರ ಫೋಟೋಗಳು ಅಪ್‍ಲೋಡ್ ಆಗುತ್ತವೆ. ಆದರೆ ಪ್ರತಿದಿನ ತೆಗೆದ ಫೋಟೋಗಳು ಎಲ್ಲಿ ಸೇವ್ ಆಗುತ್ತವೆ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬಾಲಕಿಯರ ಫೋಟೋಗಳು ಅಪ್‍ಲೋಡ್ ಮಾಡಿದರೆ ದುರ್ಬಳಕೆಯಾಗುವ ಅವಕಾಶ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಪೋಷಕರಲ್ಲಿ ಅತಂಕ ಮೂಡಿದೆ.

    ಹೀಗಾಗಿ ಕೂಡಲೇ ಆದೇಶವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ವಕೀಲರು, ವಿದ್ಯಾರ್ಥಿ ಪೋಷಕರ ಸಂಘ ಎಚ್ಚರಿಕೆ ನೀಡಿದೆ.

  • ಆರೋಪಿತರಿಗೆ ಸಹಕಾರ ಆರೋಪ- ಪಿಎಸ್‍ಐ, ಇಬ್ಬರು ಪೊಲೀಸ್ ಪೇದೆಗಳು ಅಮಾನತು

    ಆರೋಪಿತರಿಗೆ ಸಹಕಾರ ಆರೋಪ- ಪಿಎಸ್‍ಐ, ಇಬ್ಬರು ಪೊಲೀಸ್ ಪೇದೆಗಳು ಅಮಾನತು

    ಚಿಕ್ಕಬಳ್ಳಾಪುರ: ಕರ್ತವ್ಯ ಲೋಪ ಹಾಗೂ ಆರೋಪಿಗಳಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆಯ ಪಿಎಸ್‍ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಎಸ್‍ಪಿ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಗುಡಿಬಂಡೆ ಪೊಲೀಸ್ ಠಾಣೆಯ ಪಿಎಸ್‍ಐ ಪಾಪಣ್ಣ ಹಾಗೂ ಪೇದೆಗಳಾದ ಸುನಿಲ್ ಹಾಗೂ ಮುನಿರಾಜು ಅಮಾನತದವರು. ಅಕ್ರಮ ಕಾರ್ಯಾಚರಣೆ ಹಿನ್ನಲೆಯಲ್ಲಿ ಜಪ್ತಿ ಮಾಡಿದ್ದ ವಿನಾಯಕ ಸ್ಟೋನ್ ಕ್ರಷರ್ ಗೆ ಸೂಕ್ತ ಭದ್ರತೆ ನೀಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದು, ಅಲ್ಲಿನ ಎಂ ಸ್ಯಾಂಡ್‍ನ ಕ್ರಷರ್ ಮಾಲೀಕ ಭೈರೇಗೌಡ ಅಕ್ರಮವಾಗಿ ಸಾಗಾಟ ಮಾಡಿದ್ದರು. ನಂತರ ಎಸ್‍ಪಿ ಸೂಚನೆ ಮೇರೆಗೆ ಭೈರೇಗೌಡ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಲಾಗಿತ್ತು.

    ಆದರೆ ನ್ಯಾಯಾಂಗ ಬಂಧನ ಆದೇಶದ ತರುವಾಯ ಆರೋಪಿಯನ್ನ ಜೈಲಿನ ಅಧಿಕಾರಿಗಳ ಸುಪರ್ದಿಗೆ ನೀಡುವ ಬದಲು ಗುಡಿಬಂಡೆ ಪಿಎಸ್‍ಐ ಪಾಪಣ್ಣ ಹಾಗೂ ಪೇದೆಗಳು ಆತನನ್ನ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬಗ್ಗೆ ಜೈಲ್ ಸೂಪರಿಂಟೆಂಡೆಂಟ್ ರಿಂದ ವರದಿ ಪಡೆದ ಎಸ್‍ಪಿ ಕಾರ್ತಿಕ್ ರೆಡ್ಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.